Tag: snow

  • ಹಿಮದ ಮಧ್ಯೆ ಬಾರ್ಡರ್‌ನಲ್ಲಿ ಕಬಡ್ಡಿ ಆಡಿದ ಯೋಧರು – ವೀಡಿಯೋ ವೈರಲ್

    ಹಿಮದ ಮಧ್ಯೆ ಬಾರ್ಡರ್‌ನಲ್ಲಿ ಕಬಡ್ಡಿ ಆಡಿದ ಯೋಧರು – ವೀಡಿಯೋ ವೈರಲ್

    ಶಿಮ್ಲಾ: ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    52 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ದೇಶ ಕಾಯುವ ಯೋಧರು ದಪ್ಪ ಉಣ್ಣೆಯ ಬಟ್ಟೆಯನ್ನು ಧರಿಸಿ ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿ ಕಬಡ್ಡಿ ಆಡುತ್ತಾ ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಚೀನಾದಲ್ಲಿ 2 ವರ್ಷಗಳ ಬಳಿಕ ಒಂದೇ ದಿನ 3 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್

    ಈ ವೀಡಿಯೋವನ್ನು ಐಟಿಬಿಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕ್ಯಾಪ್ಷನ್‍ನಲ್ಲಿ ಬಹಳ ಹುಮ್ಮಸ್ಸಿನಿಂದ ಹಿಮದ ಮಧ್ಯೆ ಆಟ ಆಡುತ್ತಿದ್ದಾರೆ (ಫುಲ್ ಆಫ್ ಜೋಶ್, ಪ್ಲೇಯಿಂಗ್ ಇನ್ ಸ್ನೋ) ಎಂದು ಬರೆದುಕೊಂಡಿದೆ. ಒಟ್ಟಾರೆ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 30,000ಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಲಾಕ್‍ಡೌನ್- 90 ಲಕ್ಷ ಮಂದಿ ನಿವಾಸಿಗಳು ಮನೆಯಲ್ಲಿ ಲಾಕ್

    ಈ ಮುನ್ನ ಐಟಿಬಿಪಿ ತನ್ನ ಸಿಬ್ಬಂದಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ತಿರುಗುತ್ತಿರುವ ಮತ್ತು ಹಗ್ಗಗಳ ಸಹಾಯದಿಂದ ಒಬ್ಬರ ಹಿಂದೆ ಮತ್ತೊಬ್ಬರು ಹಿಂಬಾಲಿಸುತ್ತಿರುವ ಮತ್ತೊಂದು ವೀಡಿಯೊವನ್ನು ಅಪ್‍ಲೋಡ್ ಮಾಡಿತ್ತು. ವಿಡಿಯೋದಲ್ಲಿ ಐಟಿಬಿಪಿ ಸಿಬ್ಬಂದಿ ಹೆಗಲ ಮೇಲೆ ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ಕೈಯಲ್ಲಿ ಕೋಲು ಹಿಡಿದು ಮುಂದೆ ಸಾಗುತ್ತಿರುವುದು ಕಾಣಬಹುದಾಗಿದೆ.

  • ದಟ್ಟ ಮಂಜಿನಿಂದ ಆವರಿಸಿರೋ ಹಿಮವದ್ ಗೋಪಾಲಸ್ವಾಮಿ ಬೆಟ್ಟ

    ದಟ್ಟ ಮಂಜಿನಿಂದ ಆವರಿಸಿರೋ ಹಿಮವದ್ ಗೋಪಾಲಸ್ವಾಮಿ ಬೆಟ್ಟ

    ಚಾಮರಾಜನಗರ: ವರ್ಷದ 365 ದಿನಗಳಲ್ಲೂ ದಟ್ಟ ಮಂಜಿನಿಂದ ಕೂಡಿದ ರಾಜ್ಯದ ಏಕೈಕ ಪ್ರವಾಸಿ ತಾಣ ಅಂದರೆ ಹಿಮವದ್ ಗೋಪಾಲಸ್ವಾಮಿ ಬೆಟ್ಟ. ಸದ್ಯ ಗೋಪಾಲಸ್ವಾಮಿ ಬೆಟ್ಟ ಸಂಪೂರ್ಣವಾಗಿ ದಟ್ಟ ಮಂಜಿನಿಂದ ಆವರಿಸಿದ್ದು, ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಇದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಬರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಸಮುದ್ರ ಮಟ್ಟದಿಂದ 4,769 ಅಡಿ ಎತ್ತರದಲ್ಲಿದೆ. ಜೋಳರ ಕಾಲದ ಇತಿಹಾಸವಿರುವ ಗೋಪಾಲ ಸ್ವಾಮಿ ದೇವಾಲಯವನ್ನು 1315ರಲ್ಲಿ ನಿರ್ಮಿಸಲಾಗಿದೆ. ಋತುಮಾನಗಳ ಬೆರಗಿಗೆ ಬೆರಗಾಗುವ ಈ ಪ್ರಕೃತಿ ಸೊಬಗಿನ ಈ ಪುಣ್ಯ ಕ್ಷೇತ್ರದ ವಾತಾವರಣ ಕ್ಷಣಕ್ಷಣಕ್ಕೂ ಬದಲಾಗುತ್ತದೆ.

    ವಿಶಾಲ ಹುಲ್ಲುಗಾವಲು, ಸುಂದರ ಶೋಲಾ ಅರಣ್ಯ, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಆಕಾಶವನ್ನೇ ಹೊದ್ದು ನಿಂತಿರುವ ಹಾಗೆ ಕಾಣುತ್ತದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಜಿಎಸ್ ಬೆಟ್ಟದ ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟ ಪ್ರೇಮಿಗಳ ಅಚ್ಚು ಮೆಚ್ಚಿನ ತಾಣ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾಕಷ್ಟು ಪ್ರವಾಸಿಗರು ಬರುತ್ತಾರೆ.

    ವೀಕೆಂಡ್‍ನಲ್ಲಂತೂ ಪ್ರವಾಸಿಗರಿಂದ ಗೋಪಾಲಸ್ವಾಮಿ ಬೆಟ್ಟ ಫುಲ್ ರಶ್ ಆಗಿರುತ್ತದೆ. ಪ್ರವಾಸಿಗರು ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೊಬಗನ್ನ ವರ್ಣಿಸುತ್ತಾರೆ. ತಂಪಾದ ವಾತಾವರಣದಿಂದ ಕೂಡಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡಿಕೊಳ್ಳುತ್ತದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಬೆಟ್ಟದ ಮೇಲೆ ಪ್ರವಾಸಿಗರಿಗೆ ಮೂಲಭೂತ ಇನ್ನಷ್ಟು ಮೂಲಸೌಕರ್ಯ ಒದಗಿಸಬೇಕು ಎಂದು ಪ್ರವಾಸಿಗರು ಕೇಳಿಕೊಂಡಿದ್ದಾರೆ.

  • ಕಾಶ್ಮೀರ ಕಣಿವೆಯಾದ ಯಾದಗಿರಿ – ಊಟಿಯಾದ ಕೊಪ್ಪಳ

    ಕಾಶ್ಮೀರ ಕಣಿವೆಯಾದ ಯಾದಗಿರಿ – ಊಟಿಯಾದ ಕೊಪ್ಪಳ

    ಯಾದಗಿರಿ/ಕೊಪ್ಪಳ: ಬಿಸಿಲನಾಡು ಎಂದೆ ಪ್ರಸಿದ್ಧಿ ಪಡೆದಿರುವ ಯಾದಗಿರಿ ಈಗ ಕಾಶ್ಮೀರ ಕಣಿವೆಯಂತಾಗಿದೆ.

    ಸುಮಾರು ವರ್ಷಗಳ ನಂತರ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಂಜು ಆವರಿಸಿದ್ದು, ಮೋಡ ಕವಿದ ವಾತಾವರಣ ನಿರ್ಮಾಣಗೊಂಡಿದೆ. ಇನ್ನೂ ರಸ್ತೆಗಳಲ್ಲಿ ಅಪಾರ ಪ್ರಮಾಣದ ಮಂಜು ಆವರಿಸಿದ್ದು, ಇದರಿಂದ ವಾಹನ ರಸ್ತೆಗಿಳಿಸಲು ನಗರದ ನಿವಾಸಿಗಳು ಹರಸಾಹಸ ಪಡುವಂತಾಗಿದೆ.

    ಬೆಳಗಿನ ಜಾವದಿಂದ ಸತತವಾಗಿ ಮಂಜು ಬೀಳುತ್ತಿರುವ ಹಿನ್ನೆಲೆಯಲ್ಲಿ ಚಳಿಯ ಹೊಡೆತಕ್ಕೆ ಮತ್ತೆ ಯಾದಗಿರಿ ಜನತೆ ಗಢ ಗಢ ನಡುಗುವಂತಾಗಿದೆ. ಸುಮಾರು ಬೆಳಗ್ಗೆ 8 ಗಂಟೆ ಆದರೂ ಮನೆಯಿಂದ ಹೊರ ಬಾರದಂತಾಗಿದೆ. ಮನೆಯಿಂದ ಹೊರ ಬಂದರೆ ಎಲ್ಲಿ ನೋಡಿದರೂ ಮಂಜು ಆವರಿಸಿದ್ದು, ಏನು ಕಾಣದ ಸ್ಥಿತಿಯಲ್ಲಿ ಜನರು ಇದ್ದಾರೆ. ಇತ್ತ ರಸ್ತೆಗಿಳಿದ ವಾಹನಗಳು ದಾರಿ ಕಾಣದೆ ನಿಧಾನವಾಗಿ ಬೆಳಗ್ಗೆಯಾದರೂ ವಾಹನಗಳ ಹೆಡ್ ಲೈಟ್ ಆನ್ ಮಾಡಿಕೊಂಡು ಸವಾರರು ಚಲಾಯಿಸುತ್ತಿದ್ದಾರೆ.

    ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ 8 ಗಂಟೆ ಆದರೆ ಸಾಕು ಮುಂಜಾನೆಯ ಸೂರ್ಯ ಉರಿಯುವುದಕ್ಕೆ ಸ್ಟಾರ್ಟ್ ಮಾಡುತ್ತಾನೆ. ಆದರೆ ಇಂದು ಕೊೂಪ್ಪಳ ಜಿಲ್ಲಾದ್ಯಾಂತ ಮುಂಜಾನೆಯಿಂದ ಚುಮು ಚುಮು ಚಳಿ ಜೊತೆ ಮುಂಜು ಮುಸುಕಿಕೊಂಡಿದೆ. ಬೆಳಗ್ಗೆ ಎಂಟು ಗಂಟೆ ಆದರೂ ಮಾಯವಾಗದ ಮಂಜು ಊಟಿಯಂತೆ ಕಾಣುತ್ತಿದೆ.

    ಇನ್ನೂ ತೀವ್ರ ಮಂಜಿನಿಂದ ರಸ್ತೆಯು ಸಹ ಕಾಣದಂತೆ ಆಗಿದೆ. ವಾಹನ ಸವಾರರು ತಮ್ಮ ಗಾಡಿಗಳಿಗೆ ಲೈಟ್ ಹಾಕಿಕೊಂಡು ಒಡಾಡುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಮಂಜಿನ ದೃಶ್ಯಗಳು ಮನ ಮೋಹಕವಾಗಿದ್ದು, ನೋಡಿದವರೆಲ್ಲಾ ನಮ್ಮುರೂ ಇವತ್ತು ಊಟಿ ತರಾ ಕಾಣುತ್ತಿದೆ ಎಂದು ಖುಷಿ ಪಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಲೆನಾಡನ್ನೇ ನಾಚಿಸುತ್ತಿದೆ ಕೋಟೆನಾಡಿನ ಜೋಗಿಮಟ್ಟಿ ಗಿರಿಧಾಮ

    ಮಲೆನಾಡನ್ನೇ ನಾಚಿಸುತ್ತಿದೆ ಕೋಟೆನಾಡಿನ ಜೋಗಿಮಟ್ಟಿ ಗಿರಿಧಾಮ

    ಚಿತ್ರದುರ್ಗ: ಕೋಟೆನಾಡು ಅಂದಾಕ್ಷಣ ಕೋಟೆ ಕೊತ್ತಲುಗಳು ಮಾತ್ರ ಕಣ್ಮುಂದೆ ಬರುತ್ತವೆ. ಆದರೆ ಮಲೆನಾಡನ್ನೇ ನಾಚಿಸುವ ನಿಸರ್ಗಧಾಮವೊಂದು ಕೋಟೆನಾಡು ಚಿತ್ರದುರ್ಗದಲ್ಲಿದೆ.

    ಐತಿಹಾಸಿಕ ಹಿನ್ನೆಲೆಯ ಪ್ರವಾಸಿ ತಾಣವೆನಿಸಿರೋ ಕೋಟೆನಾಡು ಚಿತ್ರದುರ್ಗ ಕೇವಲ ಬಂಡೆಗಳಿಂದ ಕೂಡಿರುವ ಬಯಲು ಸೀಮೆಯೆಂದು ಭಾವಿಸಿದ್ದಾರೆ. ಆದರೆ ಚಿತ್ರದುರ್ಗ ನಗರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ಜೋಗಿಮಟ್ಟಿ ಗಿರಿಧಾಮ ಅವರ ಭಾವನೆಯನ್ನ ಅಲ್ಲೆಗೆಳೆಯುವಂತಿದೆ. ಸುಮಾರು 10ಸಾವಿರ ಹೆಕ್ಟೇರ್ ಪ್ರದೇಶದಷ್ಟು ವಿಶಾಲವಾಗಿರುವ ಈ ಕಾಯ್ದಿಟ್ಟ ಅರಣ್ಯ ಏಷ್ಯಾದಲ್ಲೇ ಅತಿಹೆಚ್ಚು ಗಾಳಿ ಬೀಸುವ ಪ್ರದೇಶಗಳ ಪೈಕಿ ಒಂದಾಗಿದೆ. ಇಂತಹ ಅಪರೂಪದ ಗಿರಿಧಾಮ ಮಳೆಗಾಲ ಹಾಗೂ ಚಳಿಗಾಲದಲ್ಲಂತೂ ಮಂಜಿನ ಮಡಿಕೇರಿ, ಸೊಬಗಿನ ಮಲೆನಾಡನ್ನೇ ನಾಚಿಸುವಂತೆ ರೂಪುಗೊಳ್ಳುತ್ತದೆ.

    ಕಳೆದ ಒಂದು ವಾರದಿಂದ ಜಿನುಗುತ್ತಿರುವ ಮಳೆಯ ಎಫೆಕ್ಟ್ ನಿಂದಾಗಿ ಜೋಗಿಮಟ್ಟಿ ಮತ್ತಷ್ಟು ಹಚ್ಚಹಸಿರಾಗಿ ಕಂಗೊಳಿಸುತ್ತಿದೆ. ಮೋಡದ ಅಲೆಗಳು ಜೋಗಿಮಟ್ಟಿಯ ಗಿರಿಧಾಮಗಳಿಗೆ ಮುತ್ತಿಟ್ಟು ನಲಿಯುತ್ತಿವೆ. ಜೋಗಿಮಟ್ಟಿ ಮೇಲ್ಭಾಗದಲ್ಲಿರುವ ವೀವ್ ಪಾಯಿಂಟ್ ಹಾಗೂ ಅತಿಥಿಗೃಹದ ಬಳಿಯ ಪ್ರಾಕೃತಿಕ ಸೊಬಗಂತೂ ಮೈಮರೆಸುತ್ತದೆ. ಹೀಗಾಗಿ ಕಳೆದ ವಾರದಿಂದ ಜೋಗಿಮಟ್ಟಿಗೆ ತೆರಳಿ ಸೌಂದರ್ಯದ ಸವಿ ಸವಿಯುವವರ ಸಂಖ್ಯೆ ಹೆಚ್ಚಾಗಿದೆ.

    ಜೋಗಿಮಟ್ಟಿಯ ನಿಸರ್ಗದಲ್ಲಿ ಪರಿಸರ ಪ್ರಿಯರು ಸೆಲ್ಫಿ ತೆಗೆದುಕೊಳ್ಳುವುದು, ಗ್ರೂಪ್ ಫೋಟೋ ಕ್ಲಿಕ್ಕಿಸಿಕೊಳ್ಳುವ ದೃಶ್ಯಗಳು ಸಾಮಾನ್ಯ ಆಗಿವೆ. ಕೊರೆಯುವ ಚಳಿ, ಬಿರುಗಾಳಿ ಮತ್ತು ಕೈಗೆ ಸಿಗುವ ಮೋಡಗಳ ನಡುವೆ ತೇಲುವ ಜನ ಸಖತ್ ಏಂಜಾಯ್ ಮಾಡುತ್ತಿದ್ದಾರೆ.

    ಈ ಕಾಯ್ದಿಟ್ಟ ಅರಣ್ಯ ಪ್ರದೇಶ ಇತ್ತೀಚೆಗೆ ವನ್ಯಜೀವಗಳ ಧಾಮವಾಗಿಯೂ ಘೋಷಿಸಲ್ಪಟ್ಟಿದೆ. ಯಾಕಂದರೆ ಇಲ್ಲಿ ಕರಡಿ, ಜಿಂಕೆ, ಚಿರತೆಯಂಥ ಪ್ರಾಣಿಗಳಿವೆ. ನವಿಲು ಮತ್ತಿತರೆ ಪಕ್ಷಿಗಳಂತೂ ಲೆಕ್ಕವಿಲ್ಲದಷ್ಟಿವೆ. ಹೀಗಾಗಿ ನಿತ್ಯ ನೂರಾರು ಜನ ಈ ನಿಸರ್ಗ ಸೌಂದರ್ಯ ಸವಿಯಲು ಜೋಗಿಮಟ್ಟಿಗೆ ಭೇಟಿ ನೀಡುತ್ತಾರೆ. ಆದ್ದರಿಂದ ಅರಣ್ಯ ಇಲಾಖೆ ಈ ಜೋಗಿಮಟ್ಟಿಗೆ ಇನ್ನಷ್ಟು ಮೂಲ ಸೌಕರ್ಯಗಳನ್ನು ಕಲ್ಪಿಸಿ ಅರಣ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಅನ್ನೋದು ವಕೀಲ ವಿರುಪಾಕ್ಷಿಯವರು ಅಭಿಪ್ರಾಯ ವ್ಯ್ತಪಡಿಸಿದ್ದಾರೆ.

    ಕೋಟೆನಾಡು ಚಿತ್ರದುರ್ಗದ ಜೋಗಿಮಟ್ಟಿ ಮಲೆನಾಡನ್ನೇ ನಾಚಿಸುವಂತೆ ಹಸಿರು ಸೀರೆಯನ್ನು ತೊಟ್ಟು ಎಲ್ಲರನ್ನೂ ಕೈಬೀಸಿ ಕರೆಯುತ್ತಿದ್ದು, ಬರದನಾಡಿನ ಬಯಲು ಸೀಮೆಯಲ್ಲಿರುವ ಈ ಜೋಗಿಮಟ್ಟಿ ಹಸಿರುಸಿರಿಯಾಗಿ ಕಂಗೊಳಿಸುತ್ತಿರೋದು ದುರ್ಗದ ಜನರನ್ನು ಬೆರಗುಗೊಳಿಸಿದೆ.

  • ತಾಯಿಯ ಶವವನ್ನು ಹೊತ್ತು ಹಿಮದ ಮೇಲೆಯೇ 30 ಕಿ.ಮೀ ನಡೆದ ಭಾರತೀಯ ಯೋಧ!

    ನವದೆಹಲಿ: ಭಾರತೀಯ ಸೇನಾ ಯೋಧರೊಬ್ಬರು ದಟ್ಟವಾದ ಹಿಮದ ರಾಶಿಯನ್ನು ಲೆಕ್ಕಿಸದೆ 10 ಗಂಟೆಯಲ್ಲಿ ಸುಮಾರು 30 ಕಿ. ಮೀವರೆಗೂ ತಾಯಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತು ಸ್ವಗ್ರಾಮಕ್ಕೆ ತಂದಂತಹ ಮನಕಲಕುವ ಘಟನೆ ನಡೆದಿದೆ.

    ಏನಿದು ಘಟನೆ?: ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕರ್ನಾ ತಹಸಿಲ್ ಪ್ರಾಂತ್ಯದ ಮೊಹಮದ್ ಅಬ್ಬಾಸ್ ಎಂಬ ಯೋಧ ಪಂಜಾಬಿನ ಪಠಣ್‍ಕೋಟ್‍ನಲ್ಲಿ ಸೇವಾ ನಿರತರಾಗಿದ್ದರು. ಜಮ್ಮು ಕಾಶ್ಮೀರದಲ್ಲಿ ಚಳಿ ಹೆಚ್ಚಿರುವ ಕಾರಣ ಕೆಲ ದಿನಗಳ ಹಿಂದೆಯಷ್ಟೇ ಅವರ ತಾಯಿಯನ್ನು ಪಠಾಣಕೋಟ್‍ಗೆ ಕರೆಸಿದ್ದರು. ಆದ್ರೆ ವಾರದ ಹಿಂದೆ ಅಬ್ಬಾಸ್ ಅವರ ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಮರುದಿನ ಸೇನೆಯು ತಾಯಿಯ ಮೃತದೇಹವನ್ನು ಶ್ರೀನಗರಕ್ಕೆ ರವಾನಿಸಿದೆ. ಬಳಿಕ ಅಲ್ಲಿಂದ ಗಡಿಯಲ್ಲಿರುವ ಯೋಧನ ಸ್ವಗ್ರಾಮ ಕರ್ನಾ ತಲುಪಲು ದಟ್ಟವಾದ ಹಿಮದಿಂದಾಗಿ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಯೋಧ ಮತ್ತೆ ಸ್ಥಳೀಯ ಆಡಳಿತದ ಸಹಾಯವನ್ನು ಬಯಸಿದ್ದರು. ಆದ್ರೆ ಪರಿಸ್ಥಿತಿ ಕ್ಲಿಷ್ಟವಾಗಿದ್ದರಿಂದ ಸೇನೆಗೆ ಸಹಾಯ ಮಾಡಲು ಸಾಧ್ಯವಾಗಿಲ್ಲ. ಕುಪ್ವಾರಾದವರೆಗೆ ಹೇಗಾದ್ರೂ ಮಾಡಿ ಅಬ್ಬಾಸ್ ತಾಯಿಯ ದೇಹವನ್ನು ತಂದಿದ್ದರು. ಆದ್ರೆ ಅಲ್ಲಿಂದ ಅವರ ಸ್ವಗ್ರಾಮಕ್ಕೆ 30 ಕಿ.ಮಿ. ದೂರವಿದೆ. ಈ ಗ್ರಾಮವು ಎತ್ತರದಲ್ಲಿರುವುದರಿಂದ ಅಲ್ಲಿಗೆ ವಾಹನ ಸಂಚರಿಸುತ್ತಿಲ್ಲ. ಹೀಗಾಗಿ ಈ ಕೆಟ್ಟ ಪರಿಸ್ಥಿಯಲ್ಲೂ ತನ್ನ ಹಠ ಬಿಡೆದೆ ಕೊರೆಯುವ ಚಳಿಯಲ್ಲಿಯೂ ತಾಯಿ ದೇಹವನ್ನು ಹೆಗಲ ಮೇಲೆ ಹೊತ್ತು 10 ಗಂಟೆಯಲ್ಲಿ ಸುಮಾರು 30 ಕಿ.ಮಿ. ದೂರ ಸಾಗಿದ್ದಾರೆ.

    ಈ ಸಂದರ್ಭದಲ್ಲಿ ಕೆಲ ಸಂಬಂಧಿಕರು ಹಾಗೂ ಸ್ಥಳೀಯರು ಅಬ್ಬಾಸ್ ಸಹಾಯಕ್ಕೆ ಧಾವಿಸಿದ್ದಾರೆ. `ಸೇನೆಯವರು ಹೆಲಿಕಾಪ್ಟರ್ ಮೂಲಕ ಮೃತದೇಹವನ್ನು ತಲುಪಿಸಬಹುದಿತ್ತು. ಸೇನಾಧಿಕಾರಿಗಳು ಮಾನವೀಯತೆ ಮರೆತಿದ್ದಾರೆ’ ಅಂತಾ ಅಬ್ಬಾಸ್ ಸಂಬಂಧಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ ಇವರ ಈ ಆರೋಪವನ್ನು ಸೇನೆ ತಳ್ಳಿಹಾಕಿದೆ.

    ಒಟ್ಟಿನಲ್ಲಿ ಕಠಿಣ ಪರಿಸ್ಥಿತಿಯಲ್ಲಿಯೂ ತನ್ನ ತಾಯಿಯ ಅಂತ್ಯಸಂಸ್ಕಾರ ವನ್ನು ಗುರುವಾರ ಸಂಜೆ ಸ್ವಗ್ರಾಮದಲ್ಲೇ ಅಬ್ಬಾಸ್ ನೆರವೇರಿಸಿದ್ದಾರೆ.