Tag: Social

  • ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಅಧಿಕೃತ ಸಲ್ಲಿಕೆ

    ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಅಧಿಕೃತ ಸಲ್ಲಿಕೆ

    ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಸಲ್ಲಿಕೆಯಾಗಿದೆ.

    ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು 158.47 ಕೋಟಿ ರೂ. ವೆಚ್ಚದಲ್ಲಿ ಹೆಚ್‌. ಕಾಂತರಾಜ (Kantharaju) ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಸಮೀಕ್ಷೆ (Socio-Economic Survey) ನಡೆಸಿತ್ತು. ಈ ಆಯೋಗದ ಅವಧಿ ಮುಕ್ತಾಯದ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

    ಕೆ. ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅಧ್ಯಕ್ಷತೆಯ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (CM Siddaramaiah) ಸಲ್ಲಿಸಿದೆ.  ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

     

    ಜಾತಿ ಗಣತಿ ಉದ್ದೇಶ ಏನು?
    1931ರ ಜನಗಣತಿಯ ನಂತರ ಯಾವುದೇ ಜನಗಣತಿ ದಾಖಲೆಗಳಿಂದ ಜಾತಿ / ಸಮುದಾಯವಾರು ಜನಸಂಖ್ಯೆಯ ಅಂಕಿ-ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಜನಗಣತಿ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಕಾರ್ಯಕ್ರಮಗಳ ಮುಖಾಂತರ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ತತ್ವದ ಆಧಾರದ ಮೇಲೆ ಒದಗಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿತ್ತು.

    ಸಮುದಾಯಗಳ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ನಡೆಸುವುದು, ಜನಸಂಖ್ಯೆಯ ಪ್ರಮಾಣವನ್ನು ತಿಳಿಯುವುದು ಅಗತ್ಯವಾಗಿದೆ ಎಂಬ ಉದ್ದೇಶಕ್ಕಾಗಿ ಆಗಿನ ಸಿದ್ದರಾಮಯ್ಯ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳು ಹಾಗೂ ಇತರ ಜಾತಿಗಳನ್ನೊಳಗೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವಿವಿಧ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ‌ನೀಡಲಾಗಿತ್ತು. ರಾಜ್ಯದ ಎಲ್ಲ ವರ್ಗಗಳ / ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಣೆಗೆ ಸೂಚಿಸಲಾಗಿತ್ತು.

  • ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿ – ರುಚಿ ಹೇಗಿತ್ತು ಗೊತ್ತಾ?

    ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿ – ರುಚಿ ಹೇಗಿತ್ತು ಗೊತ್ತಾ?

    ಸಾಮಾನ್ಯವಾಗಿ ಬಿರಿಯಾನಿ ಎಂದರೆ ಎಲ್ಲರಿಗೂ ಬಹಳ ಇಷ್ಟವಾಗುತ್ತದೆ. ಆದರೆ ಯಾರಾದರೂ ಚಾಕೋಲೇಟ್ ಬಿರಿಯಾನಿ ಬಗ್ಗೆ ಕೇಳಿದ್ದೀರಾ? ಹೌದು ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿಯನ್ನು ಮಾರಾಟ ಮಾಡಲಾಗುತ್ತಿದೆ. ಸದ್ಯ ಚಾಕೋಲೇಟ್ ಬಿರಿಯಾನಿಯನ್ನು ತಯಾರಿಸಿರುವ ವೀಡಿಯೋವನ್ನು ಪಾಕಿಸ್ತಾನ ಯೂಟ್ಯೂಬ್ ಚಾನೆಲ್‍ವೊಂದು ಶೇರ್ ಮಾಡಿಕೊಂಡಿದೆ. ಇದೀಗ ಈ ಡಿಫರೆಂಟ್ ಫುಡ್‍ನ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿ ಮಾರಾಟ ಮಾಡುವ ಅಂಗಡಿಗೆ ಭೇಟಿ ನೀಡುತ್ತಾರೆ. ನಂತರ ಒಂದು ಪ್ಲೇಟ್‍ನಲ್ಲಿ ಬಿರಿಯಾನಿಯನ್ನು ಆರ್ಡರ್ ಮಾಡುತ್ತಾರೆ. ಬಳಿಕ ಸಪ್ಲೇಯರ್ ಒಂದು ಪ್ಲೇಟ್‍ನಲ್ಲಿ ಬಿರಿಯಾನಿ ಇಟ್ಟು ಅದರ ಮೇಲೆ ಒಂದು ಗ್ಲಾಸ್ ಚಾಕೋಲೇಟ್ ಸಾಸ್‍ನನ್ನು ಸುರಿಯುತ್ತಾರೆ.

    ನಂತರ ವ್ಯಕ್ತಿ ಬಿರಿಯಾನಿಯನ್ನು ಚಾಕೋಲೇಟ್ ಜೊತೆಗೆ ಬೆರೆಸಿ ಆನಂದದಿಂದ ಸವಿದು, ಕ್ಯಾ ಬಾತ್ ಹೈ, ವಾವ್, ಬಹಳ ರುಚಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಲ್ಲಿಯವರೆಗೂ 22,000 ವೀವ್ಸ್ ಹಾಗೂ ಹಲವಾರು ಕಾಮೆಂಟ್‌ಗಳು ಹರಿದು ಬರುತ್ತಿದೆ. ಇದನ್ನೂ ಓದಿ: ಮಳೆಗಾಲದ ಸ್ಪೆಷಲ್ ಹಲಸಿನ ಹಣ್ಣಿನ ಹಲ್ವ

    https://youtu.be/lT7K9GhZEeA

  • ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್

    ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್

    ಮುಂಬೈ: ಮಹಾರಾಷ್ಟ್ರಾದ್ಯಂತ ಕೋವಿಡ್-19 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಕೆಲವು ಮಂಗಗಳು ಮನುಷ್ಯರು ನಡೆಸುತ್ತಿದ್ದ ಐಷಾರಾಮಿ ಜೀವನವನ್ನು ನಡೆಸುತ್ತಿದೆ. ಹೌದು ಮಹಾಬಲೇಶ್ವರದಲ್ಲಿರುವ ರೆಸಾರ್ಟ್ ನಲ್ಲಿರುವ ಸ್ವಿಮ್ಮಿಂಗ್ ಪೂಲ್‍ನಲ್ಲಿ ಕೋತಿಗಳು ಸ್ವಿಮ್ಮಿಂಗ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಕೋತಿಗಳು ರೆಸಾರ್ಟ್ ನಲ್ಲಿ ಯಾರು ಇಲ್ಲದೇ ಇರುವುದನ್ನು ಕಂಡು ಈಜುಕೊಳಕ್ಕೆ ಜಿಗಿಯುವ ಮೂಲಕ ಬಿಸಿಲಿನ ಶಾಖದಿಂದ ತಂಪು ಮಾಡಿಕೊಂಡಿದೆ.

    ವೀಡಿಯೋದಲ್ಲಿ ಕೋತಿಗಳು ಸ್ವಿಮ್ಮಿಂಗ್ ಪೂಲ್ ಬಳಿ ನೆರಳಿಗಾಗಿ ಹಾಕಿರುವ ದೊಡ್ಡದೊಂದು ಛತ್ರಿ ಮೇಲೆ ಏರಿ ಅದರ ಮೇಲಿಂದ ಈಜುಕೊಳಕ್ಕೆ ಜಿಗಿಯುತ್ತದೆ. ಮತ್ತೆ ಮೇಲೆ ಎದ್ದು ಬಂದು ಮತ್ತೆ ಸ್ವಿಮ್ಮಿಂಗ್ ಪೂಲ್ ಒಳಗೆ ಜಿಗಿದು ಆನಂದಿಸುತ್ತಿರುವುದನ್ನು ಕಾಣಬಹುದಾಗಿದೆ.

    ಈ ವೀಡಿಯೋವನ್ನು ಎನ್‍ಬಿಇಎ ಸ್ಟಾರ್ ರೆಕ್ಸ್ ಚಾಪ್ಮನ್ ಎಂಬ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, 27 ಲಕ್ಷಕ್ಕಿಂತ ಹೆಚ್ಚು ವ್ಯೂವ್ ಆಗಿದೆ. 1 ಲಕ್ಷಕ್ಕೂ ಅಧಿಕ ಲೈಕ್ಸ್ ಮತ್ತು 21,000 ರಿಟ್ವೀಟ್‍ಗಳು ಆಗಿದೆ.

  • ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕಬೇಕು: ಚನ್ನಣ್ಣನವರ್

    ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕಬೇಕು: ಚನ್ನಣ್ಣನವರ್

    – ಒಳ್ಳೆಯ ಸಂಸ್ಕಾರ ನಮ್ಮ ಬದುಕನ್ನೇ ಬದಲಿಸುತ್ತೆ
    – ಕಾಯಕಯೋಗಿಗಳಾಗಿ ಕೆಲಸ ಮಾಡಬೇಕು

    ಕೊಪ್ಪಳ: ಇತಿಹಾಸ ಪುಟಗಳಲ್ಲಿ ಕೊಪ್ಪಳವು ಅಂದು ಜೈನರ ಕಾಶಿಯಾಗಿತ್ತು. ಇಂದು ಗವಿಸಿದ್ದೇಶ್ವರನ ಮಹಿಮೆ ಸಂಸ್ಕಾರದಿಂದ ದಕ್ಷಿಣದ ಕಾಶಿ ಎಂದೆನಿಸುತ್ತಿದೆ. ನಿಜಕ್ಕೂ ಅಭಿನವ ಶ್ರೀಗಳು ವೃಕ್ಷೋತ್ಸವ ನೆಡುವ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಂದಿನ ಯುವ ಸಮೂಹ ಇದೆಲ್ಲವನ್ನೂ ಅರ್ಥ ಮಾಡಿಕೊಂಡು ಜೀವನದಲ್ಲಿ ಸರಿ ದಾರಿಯಲ್ಲಿ ನಡೆಯಬೇಕು ಎಂದು ಐಪಿಎಸ್ ಅಧಿಕಾರಿ, ಬೆಂಗಳೂರು ಜಿಲ್ಲೆಯ ಎಸ್‍ಪಿ ರವಿ ಚನ್ನಣ್ಣನವರ್ ಅವರು ಹೇಳಿದರು.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ. ಇದರ ಉದ್ದೇಶ ಜನರನ್ನು ಬದುಕಿನಡೆ ನಡೆಯುವಂತೆ ಮಾಡಿದೆ ಎಂದರು.

    ಒಬ್ಬರು ಇನ್ನೊಬ್ಬರ ಮೂಲಕ ಕಲಿತು ಬದುಕನ್ನು ಸುಂದರ ಮಾಡಿಕೊಳ್ಳಬೇಕು. ನಾವು ಕಾಯಕಯೋಗಿಗಳಾಗಿ ಕೆಲಸ ಮಾಡಬೇಕು. ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕನ್ನು ಮುನ್ನಡೆಸಬೇಕು ಎಂದರು. ಇಂದು ಸಮಾಜ ಸರಿಯಿಲ್ಲ. ಆದರೆ ಅದನ್ನು ಸರಿ ಮಾಡದೇ ಬಿಡಬಾರದು. ಎಲ್ಲರೂ ತಿಳಿದು ಮುನ್ನಡೆಯಬೇಕು. ಇಲ್ಲಿನ ಪರಂಪರೆ ನೋಡಿದರೆ ಎಲ್ಲವೂ ಜೀವಂತವಾಗಿದೆ ಎಂದೆನಿಸುತ್ತದೆ. ಶ್ರೀಗಳ ಸಂಕಲ್ಪದೊಂದಿಗೆ ಜಾತ್ರೆ ನಡೆದಿದೆ ಎಂದು ಜಾತ್ರೆಯ ಬಗ್ಗೆ ಮಾತನಾಡಿದರು.

    ಇಲ್ಲಿನ ಭಕ್ತ ಸಮೂಹ ಯುವಕರು ಸಮಾಜದಲ್ಲಿ ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಆದರೆ ಇಲ್ಲಿನ ಯುವಕರಲ್ಲಿ ಕೀಳರಿಮೆಯ ಭಾವನೆ ತುಂಬಾ ಇದೆ. ತಾನು ಏನು ಮಾಡಿದೆ ಎನ್ನುವುದಕ್ಕಿಂತ ಇನ್ನೊಬ್ಬರ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ. ನಮ್ಮಲ್ಲಿ ಸಂಕಲ್ಪದ ಕೊರತೆ ಕಾಡುತ್ತಿದೆ. ಏನಾದರೂ ಮಾಡು, ಖಾಲಿ ಕೂಡಬೇಡ. ಮಾಡುವ ಕೆಲಸ ಶ್ರದ್ಧೆಯಿಂದ ಮಾಡು. ಕೀಳರಿಮೆ ದೂರವಿಡಬೇಕು ಎಂದರು.

    ಪಾಲಕರು ಮಕ್ಕಳಿಗೆ ಸ್ನೇಹಿತರಂತೆ ಕಾಣಬಾರದು. ಅದು ನಿಜಕ್ಕೂ ಕೆಟ್ಟ ಸಂಸ್ಕೃತಿ. ಇದರಿಂದ ಮಕ್ಕಳ ಜೀವನ ಹಾಳಾಗುತ್ತದೆ. ಅವರು ತಪ್ಪು ಮಾಡಿದ ತಕ್ಷಣ ಅದನ್ನು ಅವರಿಗೆ ಮನವರಿಕೆ ಮಾಡಿ ಕೊಡಬೇಕು. ಒಳ್ಳೆಯ ಸಂಸ್ಕಾರ ನಮ್ಮ ಬದುಕನ್ನೇ ಬದಲಿಸಲಿದೆ. ನಾವು ವಯಕ್ತಿಕ ಸಬಲರಾದರೆ ದೇಶವೇ ಅಭಿವೃದ್ಧಿಯಾಗಲಿದೆ ಎಂದು ರವಿ ಚನ್ನಣ್ಣನವರ್ ತಿಳಿಸಿದರು.

  • ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

    ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

    ಮಡಿಕೇರಿ: ಜಾತಿ ವಿಷಬೀಜ ಸಮಾಜದಲ್ಲಿ ಸೇರಿಕೊಂಡ ಬಳಿಕ ನಾವು ನಿರ್ಮಾಣ ಮಾಡಿದ್ದನ್ನು ನಮ್ಮದು ಎಂದು ಹೇಳಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದೇವೆ. ನಮ್ಮ ಹಿಂದೂಗಳು ಒಗ್ಗಟ್ಟಾಗಿ ನಿಲ್ಲದೇ ಇದ್ದರೆ ಏನಾಗುತ್ತದೆ ಎಂಬುವುದನ್ನು ಇತಿಹಾಸ ನೋಡಿದರೆ ನಮಗೆ ಅರಿವಾಗುತ್ತದೆ. ಆದ್ದರಿಂದ ಜಾತಿ ಪ್ರಶ್ನೆ ಇಲ್ಲದೆ ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

    ಮಡಿಕೇರಿಯಲ್ಲಿ ಪರಿವರ್ತನಾ ಟ್ರಸ್ಟ್, ಹಿಂದೂ ಜಾಗರಣ ವೇದಿಕೆ ಆಯೋಜನೆ ಮಾಡಿದ್ದ ಸಾಮಾಜಿಕ ಸಮರಸತಾ ಸಮಾವೇಶ, ಹಿಂದೂ ಐಕ್ಯ ಸಮ್ಮೇಳನದಲ್ಲಿ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದರು. ಹಿಂದೂ ಸಂಘಟನೆ ಹಾಗೂ ಪ್ರಸಕ್ತ ಸಮಾಜದಲ್ಲಿ ಯುವಕರಿಗೆ ಸಲಹೆ ನೀಡಿದ ಅನಂತ್ ಕುಮಾರ್ ಹೆಗ್ಡೆ ಅವರು, ಇತಿಹಾಸ ಬರೆಯಲು ಮುಂದಾಗಬೇಕು. ಪೌರುಷ ಇದ್ದರೆ ಇತಿಹಾಸ ಬರೆಯಿರಿ. ದೇವರಿಗೆ ದುರ್ಬಲರೇ ಬೇಕಾಗಿದ್ದು, ಅದ್ದಕ್ಕೆ ಕುರಿ-ಕೋಳಿ ಬಲಿ ಕೊಡಲಾಗುತ್ತದೆ. ಆನೆ ಹುಲಿಯನ್ನು ದೇವರಿಗೆ ಬಲಿಕೊಡ್ತಾರಾ? ಆದ್ದರಿಂದ ದುರ್ಬಲರಾಗದೇ ಶೌರ್ಯ ವ್ಯಕ್ತಿಗಳಾಗಿ ಬೆಳೆಯಿರಿ. ಹಿಂದೂ ಸಮಾಜ ಒಟ್ಟಾಗಿ ನಿಲ್ಲದೇ ಇದ್ದರೆ ಮುಂದೆ ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ನಮ್ಮನ್ನು 70 ವರ್ಷಗಳಿಂದ ಆಳ್ವಿಕೆ ನಡೆಸಿದ ಜನರು ಇದನ್ನು ಹೇಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಟೀಕೆ ಮಾಡಿದರು. ಕಣ್ಣೆದುರೆ ಇರುವ ಸತ್ಯವನ್ನು ಸುಳ್ಳು ಸುಳ್ಳು ಎಂದು ಹೇಳುವ ಮೂಲಕ ನಡೆದಿದ್ದಾರೆ. ತಾಜ್‍ಮಹಲ್ ಹಿಂದೂ ರಾಜ ನಿರ್ಮಾಣ ಮಾಡಿದ್ದರು ಅದನ್ನು ಶಹಜಹಾನ್ ನಿರ್ಮಾಣ ಮಾಡಿದ್ದ ಎಂದು ಹೇಳುತ್ತಾರೆ. ಆದರೆ ಶಹಜಹಾನ್ ತನ್ನ ಆತ್ಮ ಚರಿತ್ರೆಯಲ್ಲಿ ಇದನ್ನ ಹಿಂದೂ ರಾಜ ರಾಜಾ ಜಯಸಿಂಹನಿಂದ ಕೊಂಡು ಕೊಂಡ ಕಟ್ಟಡ ಎಂದು ಬರೆದುಕೊಂಡಿದ್ದಾನೆ. ಇದನ್ನು ತಿಳಿಯಲು ಇತಿಹಾಸವನ್ನು ಓದಬೇಕಾಗುತ್ತದೆ. ದೆಹಲಿಯ ಕುತುಬ್ ಮಿನಾರ್ ನನ್ನು ಮುಸ್ಲಿಂ ರಾಜ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಭಾರತ ಪ್ರಾಚ್ಯ ವಸ್ತು ಇಲಾಖೆ ಅದು ಜೈನರ 24 ನಕ್ಷತ್ರಗಳ ದೇವಾಲಯವಾಗಿತ್ತು, ಇದನ್ನು ಮುಸ್ಲಿಂ ದಾಳಿ ಕೋರರು ನಾಶ ಮಾಡಿದ್ದರು ಎಂದು ಬೋರ್ಡ್ ಹಾಕಿದೆ. ಈ ಬೋರ್ಡ್ ಮೋದಿ ಸರ್ಕಾರ ಬಂದ ಮೇಲೆ ಹಾಕಿದ್ದಲ್ಲ. ಹೀಗೆ ನಮ್ಮ ಸಮಾಜದ ಗುರುತನ್ನು ಅಳಿಸಿ ಹಾಕುವ ಪ್ರಯತ್ನಗಳು ನಡೆದುಕೊಂಡು ಬಂದಿದೆ ಎಂದು ಕಿಡಿಕಾರಿದರು.

    ಮತ್ತೊಮ್ಮೆ ಈ ಸಮಾಜವನ್ನು ಒಗ್ಗಟ್ಟಾಗಿ ಮಾಡಿ ಎದ್ದು ನಿಲ್ಲುವಂತೆ ಮಾಡಲು ಪ್ರಯತ್ನ ಮಾಡಿದರ ಫಲವೇ ಇಂದಿನ ಕಾರ್ಯಕ್ರಮಗಳು. ಆದ್ದರಿಂದ ನೀವು ಇತಿಹಾಸವನ್ನು ಬರೆಯಲು ಆರಂಭಿಸಿ ಎಂದರು. ಶಿವ ಅಂದರೆ ಲಿಂಗ, ಜಡೆ ತಲೆ ಮೇಲೆ ಗಂಗೆ ಇರುವವನು ಎಂಬುವುದಲ್ಲ, ಸೃಷ್ಟಿಯ ಧನಾತ್ಮಕ ಶಕ್ತಿಗೆ ಶಿವ ಎಂದು ಕರೆಯುತ್ತಾರೆ. ಆದರೆ ಶಿವನಿಗೆ ಯಾವುದೇ ಆಕಾರ ಇಲ್ಲ, ಆಕಾರಗಳಿಲ್ಲದ್ದೇ ಶಿವ ಎಂದು ತಿಳಿಸಿದರು. ಅಲ್ಲದೇ ಶಬರಿಮಲೆಗೆ ಪ್ರವೇಶಿಸಿದ ಮಹಿಳೆಯರು ಕೊಡಗಿನಲ್ಲಿದ್ದ ವಿಚಾರ ಪ್ರಸ್ತಾಪಿಸಿ, ಕೊಡಗಿನಲ್ಲಿ ನಡೆಯುವ ಸಮಾಜಘಾತುಕ ಚಟುವಟಿಕೆ ಗಮನಿಸಿ. ಎಷ್ಟು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎನ್ನುವುದು ಇದರಿಂದಲೇ ಗೊತ್ತಾಗುತ್ತದೆ. ಇದರಿಂದ ಶಬರಿಮಲೆಯ 95 ಕೋಟಿ ರೂ. ಕಾಣಿಕೆ ಕಡಿಮೆ ಆಗಿದೆ. ಅಲ್ಲದೇ ಶೇ.36 ರಷ್ಟು ಪ್ರವಾಸಿಗರು ಈ ಬಾರಿ ಕಡಿಮೆ ಆಗಿದ್ದಾರೆ. ಆದ್ದರಿಂದ ಮನೆಮುರುಕರು ಕೊಡಗು ಪ್ರವೇಶಿಸಿದರೆ ಮಣ್ಣಲ್ಲಿ ಮಣ್ಣಾಗಿಸಿ. ಕಮ್ಯುನಿಸ್ಟರು ಸಮಾಜಕ್ಕೆ ಹಿಡಿದ ದೊಡ್ಡ ಗೆದ್ದಲು, ನಮಗೆ ಗೊತ್ತೇ ಇಲ್ಲದೇ ಸಮಾನತೆ, ಕ್ರಾಂತಿ, ಸ್ವಾತಂತ್ರ್ಯ ಹೆಸರಿನಲ್ಲಿ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

    ಕೊಡಗಿನಲ್ಲಿ ಕೊಚ್ಚಿ ಹೋಗಿರುವ ಮನೆ, ಮಸೀದಿ ನಿರ್ಮಾಣ ಮಾಡಲು ಸರ್ಕಾರ ಬರುತ್ತದೆ. ಆದರೆ ದೇವಾಲಯ ನಿರ್ಮಾಣ ಮಾಡಲು ಯಾರು ಬರುವುದಿಲ್ಲ. ಇದಕ್ಕಾಗಿಯೇ ನಾವು ಇಲ್ಲಿಗೆ ಬಂದಿದ್ದೇವೆ. ಸಮಾಜದೊಂದಿಗೆ ಸೇರಿ ನಿರ್ಮಾಣ ಮಾಡೋಣ. ಧರ್ಮದ ಕೆಲಸ ಮಾಡೋಣ ಎಂದು ಕರೆ ನೀಡಿದರು.

    https://www.youtube.com/watch?v=Qixi3UPIbZQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

    ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

    ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ ಬಿಗ್ ಗಿಫ್ಟ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.

    ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಮೀಸಲಾತಿ ಜಾರಿಯಾದಲ್ಲಿ 8 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಸಾಮಾನ್ಯ ವರ್ಗದ ಕುಟುಂಬದ ಸದಸ್ಯರಿಗೆ ಉದ್ಯೋಗ ಸಿಗಲಿದೆ.

    ಆರ್ಥಿಕವಾಗಿ ಹಿಂದುಳಿದಿದ್ದರೂ ಪ್ರಸ್ತುತ ಉದ್ಯೋಗದಿಂದ ವಂಚಿತರಾಗಿರುವ ಸಾಮಾನ್ಯ ವರ್ಗದವರಿಗೂ ಉದ್ಯೋಗ ನೀಡಲು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಮೀಸಲಾತಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಕೇಂದ್ರ ಸರ್ಕಾರದ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv