Tag: Social distance

  • ಸಾಮಾಜಿಕ ಅಂತರ ಇಲ್ಲದೇ ಬರ್ತ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿವಿಎಸ್, ಬೊಮ್ಮಾಯಿ

    ಸಾಮಾಜಿಕ ಅಂತರ ಇಲ್ಲದೇ ಬರ್ತ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿವಿಎಸ್, ಬೊಮ್ಮಾಯಿ

    ಬೆಂಗಳೂರು: ಕೊರೊನಾ ಸೋಂಕು ಕಮ್ಮಿಯಾಗುತ್ತಿರುವ ಬೆನ್ನಲ್ಲೇ ಜನ ಇರಲಿ ಜವಾಬ್ದಾರಿಯುತ ಜನಪ್ರತಿನಿಧಿಗಳು ನಿಯಮಗಳ ಪಾಲನೆ ಗಾಳಿಗೆ ತೂರುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ಹೆಬ್ಬಾಳದಲ್ಲಿ ಸ್ವಪಕ್ಷದ ಮುಖಂಡ ಎಂಸಿಎ ಸಂಸ್ಥೆಯ ಅಧ್ಯಕ್ಷ ಸಿ.ಮುನಿಕೃಷ್ಣ ಅವರ ಬರ್ತಡೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಮಾಜಿಕ ಅಂತರ ಪಾಲನೆ ಮಾಡದೇ ಭಾಗವಹಿಸಿರುವುದು ಟೀಕೆಗೆ ಗುರಿಯಾಗಿದೆ. ಇದನ್ನು ಓದಿ: ರಾಜೀನಾಮೆಗೆ ಸಿದ್ಧ, ಅವಮಾನ ಮಾಡಿ ಕೆಳಗೆ ಇಳಿಸುತ್ತೇವೆ ಎಂದರೆ ನಾನು ಬಗ್ಗಲ್ಲ

    ಸಿ. ಮುನಿಕೃಷ್ಣ ಅವರು ತಮ್ಮ ಜನ್ಮದಿನದ ಅಂಗವಾಗಿ ಹೆಬ್ಬಾಳದ ಚೋಳನಾಯಕನ ಹಳ್ಳಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಗೃಹ, ಕಾನೂನು ಮತ್ತು ಸಂಸದ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಪೌರ ಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಡಿ ವಿ ಸದಾನಂದಗೌಡ, ಸಿ ಮುನಿಕೃಷ್ಣ ಉಪಸ್ಥಿತರಿದ್ದರು. ಇದನ್ನು ಓದಿ:ಯಡಿಯೂರಪ್ಪ, ಬಿಜೆಪಿ ಪಕ್ಷಕ್ಕೆ ನಮ್ಮ ನಿಷ್ಠೆ – ಸುಧಾಕರ್

    ಆದರೆ ಯಾರೊಬ್ಬರೂ ಸಾಮಾಜಿಕ ಅಂತರ ಪಾಲಿಸದೇ ಅಕ್ಕಪಕ್ಕ ಅಂಟಿಕೊಂಡೇ ಇದ್ದರು. ಇದೇನಾ ಜನಪ್ರತಿನಿಧಿಗಳ ನಡವಳಿಕೆ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ.

  • ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

    ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

    ಕೋವಿಡ್-19 ಸಾಂಕ್ರಮಿಕ ರೋಗ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಅಗತ್ಯ. ಆದ್ರೆ ವ್ಯಕ್ತಿಯೋರ್ವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಜುಗಾಡ(ಡಬ್ಬ)ವನ್ನು ಧರಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ವ್ಯಕ್ತಿಯು ತನ್ನನ್ನು ಸಂಪೂರ್ಣವಾಗಿ ನಾಲ್ಕು ಕಡೆಗಳಿಂದ ಬಾಕ್ಸ್ ಮಾದರಿ ಪ್ಲಾಸ್ಟಿಕ್ ಪರದೆಯಲ್ಲಿ ಕವರ್ ಮಾಡಿಕೊಂಡಿದ್ದಾನೆ. ಅಲ್ಲದೆ ಪ್ಲಾಸ್ಟಿಕ್ ಬಾಕ್ಸ್ ಒಳಗೆ ಆರಾಮವಾಗಿ ಕುಳಿತುಕೊಂಡು ತನ್ನ ಮೊಬೈಲ್‍ನನ್ನು ಸ್ಕ್ರೋಲ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

    ಈ ವೀಡಿಯೋವನ್ನು ಉದ್ಯಮಿ ಹರ್ಷ್ ಗೋಯೆಂಕಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಕೊರೊನಾ ಇನೋವೇಶನ್’ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈವರೆಗೂ 19 ಸಾವಿರಕ್ಕೂ ಹೆಚ್ಚು ವ್ಯೂವ್ಸ್ ಬಂದಿದ್ದು, ಅನೇಕ ಮಂದಿ ಕಮೆಂಟ್ ಮಾಡಿದ್ದಾರೆ.

  • ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ- ಟ್ರಾಫಿಕ್ ಜಾಮ್, ಸಾಮಾಜಿಕ ಅಂತರ ಮಾಯ

    ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ- ಟ್ರಾಫಿಕ್ ಜಾಮ್, ಸಾಮಾಜಿಕ ಅಂತರ ಮಾಯ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರ್ಯಾಯ ಮಾರ್ಕೆಟ್ ಗಳನ್ನು ಜಿಲ್ಲಾಡಳಿತ ತೆರೆದಿದೆ. ಆದರೂ ಜನ ಸಾಮಾಜಿ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

    ಈ ಹಿಂದೆ ನಡೆಯುತ್ತಿದ್ದ ಮಾರುಕಟ್ಟೆಗಳ ಸ್ಥಳ ಬದಲಿಸಿ ಬೇರೆಡೆ ವಿಶಾಲ ಪ್ರದೇಶದಲ್ಲಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಮಡಿಕೇರಿ ನಗರದ ಸರ್ಕಾರಿ ಬಸ್ ನಿಲ್ದಾಣ ಮತ್ತು ಎಪಿಎಂಸಿ ಆವರಣದಲ್ಲಿ ಅಂಗಡಿಗಳನ್ನು ತೆರೆಯಲಾಗಿದೆ. ನೂಕು ನುಗ್ಗಲು ಸಂಭವಿಸದಂತೆ ಪ್ರತ್ಯೇಕ ಎರಡು ಕಡೆಗಳಲ್ಲಿ ಅಂಗಡಿಗಳನ್ನು ತೆರೆಯಲಾಗಿದೆ.

    ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ಗಂಟೆಯ ವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಸಾಮಾಜಿಕ ಅಂತರ ಕಾಪಾಡಲು ಅಂಗಡಿಗಳ ಮುಂದೆ ಮಾರ್ಕ್ ಗಳನ್ನು ಸಹ ಹಾಕಲಾಗಿದೆ. ಮೂರಡಿ ಅಂತರಕ್ಕೆ ಒಂದು ಅಂಗಡಿ ತೆರೆಯಲು ಅವಕಾಶ ಮಾಡಿದ್ದರೂ ಜನಗಳು ಮಾತ್ರ ಅಂತರ ಕಾಯ್ದುಕೊಳ್ಳದೆ ತರಕಾರಿಗಳ ವ್ಯಾಪಾರ ಮಾಡುತ್ತಿದ್ದಾರೆ.

    ನಗರಸಭೆ ಸಿಬ್ಬಂದಿ ಜನರಿಗೆ ಎಚ್ಚರಿಸುತ್ತಿದ್ದರೂ ಅರಿತುಕೊಳ್ಳದೆ ಅಗತ್ಯ ವಸ್ತುಗಳಿಗೆ ಮುಗಿಬೀಳುತ್ತಿದ್ದಾರೆ. ಅಷ್ಟೆ ಅಲ್ಲದೇ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದರೂ ಜನ ಮಾತ್ರ ಯಾವುದೇ ರಸ್ತೆಗೆ ಇಳಿದು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯವಸ್ತುಗಳನ್ನು ಖರೀದಿಸುತ್ತಿದ್ದಾರೆ.

  • ಕೈ ಮುಗಿಯುತ್ತೇನೆ ಮಾಸ್ಕ್ ಹಾಕಿಕೊಳ್ಳಿ, ಜೀವದ ಜೊತೆ ಹೋರಾಡಬೇಕಿದೆ- ರೇಣುಕಾಚಾರ್ಯ ಮನವಿ

    ಕೈ ಮುಗಿಯುತ್ತೇನೆ ಮಾಸ್ಕ್ ಹಾಕಿಕೊಳ್ಳಿ, ಜೀವದ ಜೊತೆ ಹೋರಾಡಬೇಕಿದೆ- ರೇಣುಕಾಚಾರ್ಯ ಮನವಿ

    – ಬೆಳ್ಳಂ ಬೆಳಗ್ಗೆ ರೇಣುಕಾಚಾರ್ಯ ಎಪಿಎಂಸಿಗೆ ಭೇಟಿ, ಮಾಸ್ಕ್ ಹಾಕಿಕೊಳ್ಳದವರಿಗೆ ಫುಲ್ ಕ್ಲಾಸ್

    ದಾವಣಗೆರೆ: ಶಾಸಕ ರೇಣುಕಾಚಾರ್ಯ ಹೊನ್ನಾಳಿಯ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಮಾಸ್ಕ್ ಹಾಕಿಕೊಳ್ಳದವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೆ ಮಾಸ್ಕ್ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಿದ್ದಾರೆ.

    ಹೊನ್ನಾಳಿಯ ಎಪಿಎಂಸಿಗೆ ಭೇಟಿ ನೀಡಿದ ಅವರು, ದಯವಿಟ್ಟು ಮಾಸಕ್ ಹಾಕಿಕೊಳ್ಳಿ, ಮೊನ್ನೆ ಸಾರ್ವಜನಿಕರೊಬ್ಬರು ಬೆಡ್ ಸಿಗುತ್ತಿಲ್ಲ ಎಂದು ಕರೆ ಮಾಡಿದ್ದರು. ಅವರಿಗೆ ಫುಲ್ ಸೀರಿಯಸ್ ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾವು ಎಷ್ಟು ಮನವಿ ಮಾಡಿದರೂ ಬೆಡ್ ಸಿಗುತ್ತಿಲ್ಲ. ಪರಿಸ್ಥಿತಿ ಗೊತ್ತಿದ್ದು, ಮಾಸ್ಕ್ ಹಾಕುವುದಿಲ್ಲ ಎಂದರೆ ಮಾರ್ಕೆಟ್ ಕ್ಲೋಸ್ ಮಾಡಿಸುತ್ತೇನೆ ಎಂದು ತರಕಾರಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ತರಕಾರಿ ಮಾರುಕಟ್ಟೆಯಲ್ಲಿ ಹಲವು ಜನ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಮರೆತಿದ್ದರು. ಹೀಗಾಗಿ ವ್ಯಪಾರಿಗಳು ಹಾಗೂ ಸಾರ್ವಜನಿಕರಿಗೆ ತಿಳುವಳಿಕೆ ಹೇಳಿದ್ದಾರೆ. ಜನರಿಗೆ ಜಾಗೃತಿ ಮೂಡಿಸಿ, ವರ್ತಕರಿಗೆ ಸುರಕ್ಷಿತವಾಗಿ ವ್ಯಾಪಾರ ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಮಾಸ್ಕ್, ಸಾಮಾಜಿಕ ಅಂತರ ಕಾಪಾಡದಿದ್ದರೆ ಮಾರುಕಟ್ಟೆ ಬಂದ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲಿಸಬೇಕು. ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಿಳಿಸಿದ್ದಾರೆ.

  • ಸಂಜೆವರೆಗೆ ಎಪಿಎಂಸಿ ತೆರೆಯಲು ಸರ್ಕಾರದ ಮಟ್ಟದಲ್ಲಿ ಚರ್ಚೆ: ಶೆಟ್ಟರ್

    ಸಂಜೆವರೆಗೆ ಎಪಿಎಂಸಿ ತೆರೆಯಲು ಸರ್ಕಾರದ ಮಟ್ಟದಲ್ಲಿ ಚರ್ಚೆ: ಶೆಟ್ಟರ್

    ಹುಬ್ಬಳ್ಳಿ: ನಗರದ ಎಪಿಎಂಸಿ ಸೇರಿದಂತೆ ಇತರೆ ಮಾರುಕಟ್ಟೆ ಪ್ರದೇಶಗಳಲ್ಲಿ ಜನದಟ್ಟಣೆ ನಿಯಂತ್ರಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರಕ್ಕೆ ಒತ್ತು ನೀಡಿ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿ ಕೊಡಲಾಗಿದೆ. ಜನದಟ್ಟಣೆ ಹೆಚ್ಚುತ್ತಿರುವುದರಿಂದ ಎಪಿಎಂಸಿಗಳನ್ನು ಸಂಜೆವರೆಗೆ ತೆರೆಯುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

    ನಗರದ ಎಪಿಎಂಸಿ, ಗಿರಣಿಚಾಳ ಹಾಗೂ ಸಿದ್ಧಾರೂಢ ಮಠದ ಮಾರುಕಟ್ಟೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಖರೀದಿಗೆ ಬರುವುದರಿಂದ ಜನದಟ್ಟಣೆ ಹೆಚ್ಚಾಗುತ್ತಿದೆ. ಅಧಿಕಾರಿಗಳು ಬೆಳಗಿನಿಂದಲೇ ಸ್ಥಳದಲ್ಲಿ ಇದ್ದು ಜನದಟ್ಟಣೆಯನ್ನು ನಿಯಂತ್ರಿಸುತ್ತಿದ್ದಾರೆ. ಬೆಳಗಿನ ವ್ಯಾಪರ ವಹಿವಾಟಿನ ಸಮಯವನ್ನು ಹೆಚ್ಚಿಸುವಂತೆ ಹಾಗೂ ಎಪಿಎಂಸಿ ಮಾರುಕಟ್ಟೆಗಳನ್ನು ಸಂಜೆಯವರೆಗೆ ತೆರೆಯಲು ಅವಕಾಶ ನೀಡುವಂತೆ ರಾಜ್ಯದಾದ್ಯಂತ ಬೇಡಿಕೆಗಳು ಬರುತ್ತಿವೆ. ಈ ಕುರಿತು ಸರ್ಕಾರದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಹುಬ್ಬಳ್ಳಿಯ ಎಪಿಎಂಸಿ ಏಷ್ಯಾದ ಅತಿ ದೊಡ್ಡ ಎಪಿಎಂಸಿ ಮಾರುಕಟ್ಟೆಯಾಗಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ತರಕಾರಿ ವ್ಯಾಪಾರ ನೆಡೆಯುತ್ತದೆ. ಕಳೆದ ಬಾರಿಯ ಲಾಕ್‍ಡೌನ್ ಸಂದರ್ಭದಲ್ಲಿ ಇಕ್ಕಟ್ಟಿನ ಪ್ರದೇಶದಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿತ್ತು. ಇದರಿಂದ ಜನದಟ್ಟಣೆ ಉಂಟಾಗಿ ಬಹಳ ತೊಂದರೆಯಾಗಿತ್ತು. ಇದನ್ನು ಸರಿಪಡಿಸುವಂತೆ ಎಪಿಎಂಸಿ ಸದಸ್ಯರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಅದರಂತೆ ವಿಶಾಲ ಪ್ರದೇಶದಲ್ಲಿ ಮಾರುಕಟ್ಟೆ ಸ್ಥಾಪಿಸಿ ನಿಯಂತ್ರಣ ಮಾಡುತ್ತಿದ್ದಾರೆ ಎಂದು ವಿವರಿಸಿದರು.

    ಉಪಚುನಾವಣೆಯಲ್ಲಿ ಬಿಜೆಪಿಗೆ ಜಯ
    ರಾಜ್ಯದಲ್ಲಿ ನಡೆದ ಬೆಳಗಾವಿ ಲೋಕಸಭಾ ಹಾಗೂ ಎರಡು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಪಶ್ಚಿಮ ಬಂಗಾಳದಲ್ಲಿ ಉತ್ತಮ ಫಲಿತಾಂಶ ಬಿಜೆಪಿಗೆ ಲಭಿಸಲಿದೆ. ಪಾಂಡಿಚೇರಿ ಹಾಗೂ ಅಸ್ಸಾಂ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ. ಉಳಿದ ರಾಜ್ಯಗಳಲ್ಲೂ ಉತ್ತಮ ಪಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾತನಾಡಿ, ಎಪಿಎಂಸಿ ಸದಸ್ಯರು ಹಾಗೂ ಅಧಿಕಾರಿಗಳಿಗೆ ಮಾರುಕಟ್ಟೆ ಶುಲ್ಕ ಸಂಗ್ರಹದಿಂದ ಬರುವ ಹಣದಲ್ಲಿ ವ್ಯಾಪಾರಿಗಳಿಗೆ, ರೈತರಿಗೆ ಹಾಗೂ ಮಾರಾಟಗಾರರಿಗೆ ಮಾಸ್ಕ್ ವಿತರಿಸುವಂತೆ ಸೂಚನೆ ನೀಡಿದರು. ಸಿದ್ಧಾರೂಢ ಮಠ ರಥ ಬೀದಿಯಲ್ಲಿನ ಮಾರುಕಟ್ಟೆ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮಠದ ಆವರಣದಲ್ಲಿ ಮಾರುಕಟ್ಟೆ ನೆಡೆಸುವಂತೆ ಮನವಿ ಮಾಡಿದರು.

    ಪೋಲಿಸ್ ಆಯಕ್ತ ಲಾಭುರಾಮ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಉಪ ಪೊಲೀಸ್ ಆಯುಕ್ತ ರಾಮರಾಜನ್, ಎಪಿಎಂಸಿ ಅಧ್ಯಕ್ಷ ಸಹದೇವಪ್ಪ ಸುಡಕೇನವರ, ಉಪಾಧ್ಯಕ್ಷ ಬಸವರಾಜ ನಾಯ್ಕರ್, ವರ್ತಕರ ಪ್ರತಿನಿಧಿ ಚನ್ನು ಹೊಸಮನಿ, ಇತರೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಬೆಂಗಳೂರಿನಿಂದ ಹಳ್ಳಿವರೆಗೆ ಮಾಸ್ಕ್ ಕಡ್ಡಾಯ- ಕಾರ್ಯಕ್ರಮಗಳಿಗೆ ಎಷ್ಟು ಜನ ಭಾಗವಹಿಸಬಹುದು?

    ಬೆಂಗಳೂರಿನಿಂದ ಹಳ್ಳಿವರೆಗೆ ಮಾಸ್ಕ್ ಕಡ್ಡಾಯ- ಕಾರ್ಯಕ್ರಮಗಳಿಗೆ ಎಷ್ಟು ಜನ ಭಾಗವಹಿಸಬಹುದು?

    – ಪೊಲೀಸರಿಗೂ ಮಾಸ್ಕ್ ದಂಡ ಹಾಕುವ ಅವಕಾಶ
    – ಗ್ರಾಮಗಳಲ್ಲಿ ಪಿಡಿಒಗಳಿಗೆ ಪವರ್

    ಬೆಂಗಳೂರು: ಸತತ ಎರಡನೇ ದಿನ ಕೊರೊನಾ ಪ್ರಕರಣಗಳು 2 ಸಾವಿರಕ್ಕಿಂತ ಹೆಚ್ಚು ದಾಖಲಾಗುತ್ತಿದ್ದಂತೆ ಸರ್ಕಾರ ಕಠಿಣ ಕ್ರಮ ಜಾರಿ ಮಾಡಿದೆ. ಇದೀಗ ಮಾಸ್ಕ್, ಸಾಮಾಜಿಕ ಅಂತರ ಪಾಲನೆಗೆ ಒತ್ತು ನೀಡಲಾಗಿದ್ದು, ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತಿದೆ.

    ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ದಂಡ ವಿಧಿಸಲಾಗಿದ್ದು, ಪಾಲಿಕೆ ವ್ಯಾಪ್ತಿ ಹೊರತುಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸುವಂತೆ ಸರ್ಕಾರ ಸೂಚಿಸಿದೆ. ಅಲ್ಲದೆ ಪೊಲೀಸರಿಗೂ ಮಾಸ್ಕ್ ಗೆ ದಂಡ ಹಾಕುವ ಪವರ್ ನೀಡಲಾಗಿದ್ದು, ಕಾನ್‍ಸ್ಟೇಬಲ್ ದಂಡ ವಿಧಿಸುವಂತಿಲ್ಲ, ಹೆಡ್ ಕಾನ್‍ಸ್ಟೇಬಲ್ ದಂಡ ವಿಧಿಸಬಹುದಾಗಿದೆ.

    ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೂ ದಂಡ ವಿಧಿಸಲಾಗುತ್ತಿದ್ದು, 250 ರೂ. ದಂಡ ನಿಗದಿಪಡಿಸಲಾಗಿದೆ. ಮದುವೆ ಹಾಲ್, ಸಭೆ, ಸಮಾರಂಭಗಳಲ್ಲಿ ಸೀಮಿತ ಜನರನ್ನು ಹೊರತುಪಡಿಸಿ ಹೆಚ್ಚು ಜನ ಇದ್ದರೆ, ಮಾಸ್ಕ್ ಧರಿಸದೇ ಇದ್ದರೆ ಅಂತಹ ಪಾರ್ಟಿ ಹಾಲ್‍ಗಳಿಗೆ 5 ಸಾವಿರ ರೂ., ಏಸಿ ಹಾಲ್ ಗೆ 10 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ. ಸ್ಟಾರ್ ಹೋಟೆಲ್‍ಗಳಲ್ಲಿ ಹೆಚ್ಚು ಜನ ಸೇರಿಸಿ ಕಾರ್ಯಕ್ರಮ ನಡೆಸಿದರೆ 10 ಸಾವಿರ ದಂಡ ವಿಧಿಸುವ ಕುರಿತು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

    ಎಷ್ಟು ಜನ ಸೇರಬಹುದು?
    ವಿವಾಹ ಸೇರಿದಂತೆ ಇತರೆ ಸಭೆ ಸಮಾರಂಭಗಳಿಗೆ ಒಳಾಂಗಣ ಸಭಾಂಗಣದಲ್ಲಿ 200 ಜನ, ಹೊರಾಂಗಣದಲ್ಲಿ 500 ಜನ ಸೇರಲು ಅನುಮತಿ ನೀಡಲಾಗಿದೆ. ಹುಟ್ಟುಹಬ್ಬದ ಸಮಾರಂಭಗಳಿಗೆ ಹೊರಾಂಗಣದಲ್ಲಿ 100 ಹಾಗೂ ಒಳಾಂಗಣ ಸಭಾಂಗಣದಲ್ಲಿ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕೂ ಹೆಚ್ಚು ಜನ ಸೇರಿದರೆ ಮುಲಾಜಿಲ್ಲದೆ ದಂಡ ವಿಧಿಸಬಹುದು.

    ಯಾರ್ಯಾರು ದಂಡ ವಿಧಿಸಬಹುದು?
    ಗ್ರಾಮೀಣ ಭಾಗಗಳಲ್ಲಿ ಪಂಚಾಯಿತಿಗಳಿಗೆ ದಂಡ ವಿಧಿಸುವ ಅಧಿಕಾರ ನೀಡಲಾಗಿದ್ದು, ಪಿಡಿಓ, ಗ್ರಾಮ ಪಂಚಾಯಿತಿ ಸೆಕ್ರೆಟರಿಗಳು ಸಹ ದಂಡ ವಿಧಿಸಬಹುದಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಷಲ್‍ಗಳು, ಹೆಡ್ ಕಾನ್‍ಸ್ಟೇಬಲ್ ಮೇಲ್ಪಟ್ಟ ಪೊಲೀಸರು, ಹೆಲ್ತ್ ಇನ್‍ಸ್ಪೆಕ್ಟರ್ ಗಳಿಗೆ ದಂಡ ವಿಧಿಸುವ ಅಧಿಕಾರವನ್ನು ನೀಡಲಾಗಿದೆ.

  • ಸಿದ್ದರಾಮಯ್ಯ, ಐವಾನ್ ಡಿಸೋಜಾ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ರೂ ಕ್ವಾರಂಟೈನ್ ಆಗದ ಡಿಕೆಶಿ

    ಸಿದ್ದರಾಮಯ್ಯ, ಐವಾನ್ ಡಿಸೋಜಾ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ರೂ ಕ್ವಾರಂಟೈನ್ ಆಗದ ಡಿಕೆಶಿ

    – ಸಾಮಾಜಿಕ ಅಂತರ ಪಾಲಿಸದೆ ಬೇಕಾಬಿಟ್ಟಿ ತಿರುಗಾಟ
    – ಕಲಬುರಗಿ ಪ್ರವಾಸದಲ್ಲಿ ಸಾಮಾಜಿಕ ಅಂತರ ಮರೆತ ಕಾಂಗ್ರೆಸ್ ಕಾರ್ಯಕರ್ತರು

    ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ವಾರಂಟೈನ್ ನಿಯಮ ಪಾಲಿಸದರೆ ಬೇಕಾಬಿಟ್ಟಿಯಾಗಿ ತಿರುಗಾಡಿದ್ದು, ಕಲಬುರಗಿ ಪ್ರವಾಸದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಡಿಕೆಶಿಗಾಗಿ ಮುಗಿಬಿದ್ದಿದ್ದಾರೆ.

    ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿದ್ದಾರೆ. ಕೊರೊನಾ ತಾಂಡವಾಡುತ್ತಿರುವುದನ್ನೂ ಲೆಕ್ಕಿಸದೆ ಒಬ್ಬರ ಮೇಲೊಬ್ಬರು ಬಿದ್ದು, ಶಾಲು, ಹೂವಿನ ಹಾರ ಹಾಕಲು ಮುಗಿಬಿದ್ದಿದ್ದಾರೆ. ನೂಕುನುಗ್ಗಲಿನಲ್ಲೇ ಡಿಕೆಶಿಗೆ ಸನ್ಮಾನ ಮಾಡಿದ್ದಾರೆ. ಆದರೆ ಡಿಕೆಶಿ ಕೊರೊನಾ ಸೋಂಕಿತರಾದ ಸಿದ್ದರಾಮಯ್ಯ ಹಾಗೂ ಐವಾನ್ ಡಿಸೋಜಾ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ.

    ಡಿ.ಕೆ.ಶಿವಕುಮಾರ್ ಕೊರೊನಾ ಸೋಂಕಿತ ಮಾಜಿ ಎಂಎಲ್‍ಸಿ ಐವಾನ್ ಡಿಸೋಜಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಈ ಹಿಂದೆ ಮಂಗಳೂರಿನಲ್ಲಿ ಇಬ್ಬರೂ ಒಟ್ಟಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಐವಾನ್ ಡಿಸೋಜಾ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತು. ಇಷ್ಟಾದರೂ ಕ್ವಾರಂಟೈನ್‍ಗೆ ಒಳಗಾಗದೆ ಡಿ.ಕೆ.ಶಿವಕುಮಾರ್ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಜಿಲ್ಲೆಗಳ ಪ್ರವಾಸದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೂ ಕೊರೊನಾ ಸೋಂಕು ತಗುಲಿದ್ದು, ಇವರೊಂದಿಗೂ ಡಿಕೆಶಿ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇಬ್ಬರು ಕೊರೊನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರೂ, ಡೋಂಟ್ ಕೇರ್ ಎಂದು ಡಿಕೆಶಿ ಜಿಲ್ಲೆಗಳ ಪ್ರವಾಸ ಮಾಡುತ್ತಿದ್ದಾರೆ. ಜನ ಗುಂಪಾಗಿ ಸೇರಿದರೆ ಕೊರೊನಾ ವ್ಯಾಪಿಸಲಿದೆ ಎಂಬುದನ್ನೂ ಲೆಕ್ಕಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಾರ್ಯಕರ್ತರು ಸಹ ಯಾವುದೇ ಭಯವಿಲ್ಲದೆ ಭಾಗವಹಿಸುತ್ತಿದ್ದಾರೆ.

    ಕೊರೊನಾ ಲೆಕ್ಕಿಸದ ಕಲಬುರಗಿ ಕಾಂಗ್ರೆಸ್ ಕಾರ್ಯಕರ್ತರು ಮುಗಿಬಿದ್ದು ಡಿಕೆಶಿಯವರಿಗೆ ಸನ್ಮಾನ ಮಾಡಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಡಿ.ಕೆ.ಶಿವಕುಮಾರ್ ಬಂದಿಳಿಯುತ್ತಿದ್ದಂತೆ ಮಂಗಳಮುಖಿಯರು ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ವೇಳೆ ಮಂಗಳಮುಖಿಯರು ಸಹ ನೂಕುನುಗ್ಗಲು ಮಾಡಿಕೊಂಡಿದ್ದಾರೆ. ಸಾಮಾಜಿಕ ಅಂತರ ಪಾಲಿಸಿಲ್ಲ.

  • ರಾಯಚೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೊರೊನಾ ಭೀತಿಯಿಲ್ವಾ?

    ರಾಯಚೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೊರೊನಾ ಭೀತಿಯಿಲ್ವಾ?

    – ನಿತ್ಯವೂ ಗುಂಪು ಗುಂಪಾಗೇ ವ್ಯವಹರಿಸುವ ಜನ

    ರಾಯಚೂರು: ನಗರದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದರೂ ಜನ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಪ್ರತೀದಿನ ಜನಜಂಗುಳಿ ಸೇರುತ್ತಿದೆ. ಸಾಮಾಜಿಕ ಅಂತರ ಕಾಪಾಡಿ, ಜನರನ್ನ ನಿಯಂತ್ರಿಸಲು ಇಲ್ಲಿನ ಅಧಿಕಾರಿಗಳು ಸಹ ವಿಫಲರಾಗಿದ್ದಾರೆ.

    ಇಂದು ಸೋಮವಾರವಾಗಿದ್ದರಿಂದ ನೂರಾರು ಜನರು ಉಪನೋಂದಣಿ ಕಚೇರಿಯಲ್ಲಿ ಜಮಾವಣೆಯಾಗಿದ್ದರು. ಕಚೇರಿಯೊಳಗೆ ಸಾಮಾಜಿಕ ಅಂತರವಿಲ್ಲದೆ ಸೇರಿದ ಜನ ಕೊರೊನಾ ಭೀತಿಯನ್ನೇ ಮರೆತಿದ್ದಾರೆ. ಸಿಬ್ಬಂದಿಗಳ ಮುಂದೆಯೂ ವಿವಿಧ ಕೆಲಸಗಳಿಗಾಗಿ ಜನ ಮುಗಿಬೀಳುತ್ತಿದ್ದಾರೆ.

    ಕಚೇರಿ ಒಳಗೆ ಬರುವವರಿಗೆ ಸ್ಯಾನಿಟೈಸರ್ ವ್ಯವಸ್ಥೆಯೂ ಇಲ್ಲಾ. ಹೀಗಿದ್ದರೂ ಜನ ಮಾತ್ರ ಯಾವ ಪರಿವೇ ಇಲ್ಲದೆ ಕಚೇರಿಯಲ್ಲಿ ಓಡಾಡುತ್ತಿದ್ದಾರೆ. ಮಾಸ್ಕ್ ಇಲ್ಲದೆ ಕಚೇರಿಯಲ್ಲಿ ವ್ಯವಹರಿಸುತ್ತಿರುವ ಜನರನ್ನ ನಿಯಂತ್ರಿಸಲು ಆಗದೆ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಉಪನೋಂದಣಿ ಕಚೇರಿಯ ಸಿಬ್ಬಂದಿ ಜನ ಹೆಚ್ಚಾದಾಗಲೆಲ್ಲಾ ಕೊನೆಗೆ ಜನರನ್ನೆಲ್ಲಾ ಹೊರಗೆ ಕಳುಹಿಸುತ್ತಿದ್ದಾರೆ.

    ರಾಯಚೂರು ನಗರವೊಂದರಲ್ಲೇ ಕೊರೊನಾ ಸೋಂಕಿತರ ಸಂಖ್ಯೆ 800 ಗಡಿ ದಾಟಿದೆ. ಹೀಗಿದ್ದರೂ ಯಾವ ಮುನ್ನೆಚ್ಚರಿಕೆಗಳಿಲ್ಲದೆ ಜನ ಸರ್ಕಾರಿ ಕಚೇರಿಗಳಲ್ಲಿ ಗುಂಪು ಗುಂಪಾಗಿ ವ್ಯವಹರಿಸುತ್ತಿದ್ದಾರೆ.

  • ಸಾರ್ವಜನಿಕರಿಗೆ ಬುದ್ಧಿ ಹೇಳಬೇಕಾದ ಶಾಸಕರಿಂದ್ಲೇ ಎಡವಟ್ಟು

    ಸಾರ್ವಜನಿಕರಿಗೆ ಬುದ್ಧಿ ಹೇಳಬೇಕಾದ ಶಾಸಕರಿಂದ್ಲೇ ಎಡವಟ್ಟು

    ಶಿವಮೊಗ್ಗ: ಜಿಲ್ಲೆಯ ಗ್ರಾಮಾಂತರ ಶಾಸಕ ಅಶೊಕ್ ನಾಯ್ಕ್ ಸಾಮಾಜಿಕ ಅಂತರ ಮರೆತಿದ್ದಲ್ಲದೇ ಮಾಸ್ಕ್ ಧರಿಸಿದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸರಕಾರ ಸೂಚನೆ ನೀಡುತ್ತಲೇ ಇದೆ. ಆದರೆ ಶಿವಮೊಗ್ಗ ಗ್ರಾಮಾಂತರ ಶಾಸಕರು ಮಾತ್ರ ಇದಕ್ಕೂ ನಮಗೂ ಸಂಬಂಧ ಇಲ್ಲವೇನೋ ಎಂಬಂತಿದ್ದಾರೆ.

    ಶಿವಮೊಗ್ಗ ತಾಲೊಕಿನ ಹಾರನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊನಗನಹಳ್ಳಿ ಗ್ರಾಮದಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ 25 ಲಕ್ಷ ಮೊತ್ತದ ಸಿಸಿ ರಸ್ತೆಗೆ ಚಾಲನೆ ನೀಡಿದರು. ಈ ವೇಳೆ ನೂರಾರು ಮಂದಿ ಸ್ಥಳೀಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಶಾಸಕರ ಬೆಂಬಲಿಗರು ಭಾಗವಹಿಸಿದ್ದರು.

    ಸಾರ್ವಜನಿಕರಿಗೆ ಬುದ್ಧಿ ಹೇಳಬೇಕಾದ ಶಾಸಕರೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.

  • ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಬಸ್, ಆಟೋ, ಕ್ಯಾಬ್ ವಶಕ್ಕೆ: 9 ಪ್ರಕರಣ ದಾಖಲು

    ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಬಸ್, ಆಟೋ, ಕ್ಯಾಬ್ ವಶಕ್ಕೆ: 9 ಪ್ರಕರಣ ದಾಖಲು

    ಧಾರವಾಡ: ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿ, ಪ್ರಕರಣ ದಾಖಲಿಸಿದ್ದಾರೆ.

    ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 3 ಬೇಂದ್ರೆ ನಗರಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರ ನಿರ್ದೇಶನದ ಮೇರೆಗೆ ಆರ್‍ಟಿಓ ಅಧಿಕಾರಿಗಳಾದ ಅಪ್ಪಯ್ಯ ನಾಲತ್ವಾಡಮಠ ಹಾಗೂ ಸಿ.ಡಿ.ನಾಯಕ್ ಅವರ ನೇತೃತ್ವದಲ್ಲಿ ಅವಳಿ ನಗರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.