Tag: Social distance

  • ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?

    ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?

    – ಕೋವಿಡ್ 19 ಹಿನ್ನೆಲೆಯಲ್ಲಿ ಸುತ್ತೋಲೆ ಪ್ರಕಟ
    – ಎಸ್‍ಎಸ್‍ಎಲ್‍ಸಿ ಬೋರ್ಡ್‍ನಿಂದ ಸುತ್ತೋಲೆ

    ಬೆಂಗಳೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷ ಹತ್ತಿರ ಬರುತ್ತಿದ್ದು ಕೋವಿಡ್ 19 ಸೋಂಕು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಲೆಯ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ.

    ಸರ್ಕಾರಿ, ಖಾಸಗಿ ಅನುದಾನಿತ ಶಾಲೆಗಳಿಗೆ ಅನ್ವಯ ಆಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಶಾಲೆಗಳು ಯಾವಾಗದಿಂದ ಆರಂಭವಾಗಲಿದೆ ಎನ್ನುವುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಶಾಲೆಗಳು ಆರಂಭಗೊಳ್ಳುವ ಸಾಧ್ಯತೆಯಿದೆ.

    ಸುತ್ತೋಲೆಯಲ್ಲಿ ಏನಿದೆ?
    1. ಶಾಲಾ ತರಗತಿ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
    2. ಒಂದು ಡೆಸ್ಕ್ ನಲ್ಲಿ 3 ವಿದ್ಯಾರ್ಥಿಗಳು ಕೂರಲು ವ್ಯವಸ್ಥೆ ಮಾಡುವುದು.
    3. ಕೊಠಡಿಗಳು ಕೊರತೆಯಾದರೆ ಗ್ರಂಥಾಲಯ, ಕ್ರೀಡಾ ಕೊಠಡಿ, ಗಣಕ ಯಂತ್ರ ಕೊಠಡಿ ಬಳಸಿಕೊಳ್ಳುವುದು.

    4. ಜನ ವಸತಿ ಪ್ರದೇಶದಲ್ಲಿ ಲಭ್ಯವಿರುವ ಸಮುದಾಯ ಭವನ, ಅಂಗನವಾಡಿ, ಸರ್ಕಾರಿ ಕಟ್ಟಡಗಳನ್ನು ಬಳಸಿಕೊಳ್ಳುವುದು.
    5. ಶಾಲೆಯನ್ನ ಎರಡು ಪಾಳಿ ಅವಧಿಯಲ್ಲಿ ನಡೆಸುವುದು. ಮೊದಲ ಪಾಳಿ ಬೆಳಗ್ಗೆ – 7.50 ರಿಂದ 12.20ರವರೆಗೆ, ಎರಡನೇ ಪಾಳಿ – 12.10 ರಿಂದ 5 ಗಂಟೆಯವರೆಗೆ. ರಡು ಪಾಳಿಗಳಿಗೆ ಅಗತ್ಯವಾಗಿ ವೇಳಾಪಟ್ಟಿ ರೂಪಿಸಿಕೊಳ್ಳುವುದು.

    6. ಖಾಸಗಿ ಶಾಲೆಗಳು ಮಕ್ಕಳನ್ನು ವಾಹನಗಳಲ್ಲಿ ಕರೆ ತರುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
    7. ಸಾಮೂಹಿಕ ಪ್ರಾರ್ಥನೆ ಮಾಡುವಾಗಿ ಕಡ್ಡಾಯವಾಗಿ ಮಕ್ಕಳು ಮಾಸ್ಕ್ ಧರಿಸುವುದು.
    8. ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡುವುದು. ಆಗಾಗ ವಿದ್ಯಾರ್ಥಿಗಳು ಕೈ ತೊಳೆಯುವಂತೆ ಅಗತ್ಯ ಕ್ರಮವಹಿಸುವುದು.

    9. ಊಟದ ಸಮಯ, ಆಟದ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
    10. ಶಾಲೆಗಳಲ್ಲಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆ ಅಡಿ ಬೆಳಗಿನ ಪಾಳಿಯಲ್ಲಿ ಬರೋ ವಿದ್ಯಾರ್ಥಿಗಳಿಗೆ ನೀಡಬೇಕು. ಮಧ್ಯಾಹ್ನದ ಪಾಳಿಯಲ್ಲಿ ಬರೋ ವಿದ್ಯಾರ್ಥಿಗಳಿಗೆ ಒಂದು ತಿಂಗಳಿಗೆ ಆಗುವಷ್ಟು ಹಾಲಿನ ಪುಡಿ ಕೊಡುವ ವ್ಯವಸ್ಥೆ ಮಾಡುವುದು.

  • ಅಂಗಡಿ ಮುಂದೆ ಬ್ಯಾಗ್, ಚಪ್ಪಲಿ ಇಟ್ಟು ಸಾಮಾಜಿಕ ಅಂತರ ಕಾಯ್ದುಕೊಂಡ ಮದ್ಯಪ್ರಿಯರು

    ಅಂಗಡಿ ಮುಂದೆ ಬ್ಯಾಗ್, ಚಪ್ಪಲಿ ಇಟ್ಟು ಸಾಮಾಜಿಕ ಅಂತರ ಕಾಯ್ದುಕೊಂಡ ಮದ್ಯಪ್ರಿಯರು

    ಹುಬ್ಬಳ್ಳಿ: ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 2ನೇ ದಿನವೂ ಮದ್ಯ ಖರೀದಿಗೆ ಮದ್ಯಪ್ರಿಯರು ಬೆಳ್ಳಂಬೆಳಗ್ಗೆ ಕ್ಯೂ ನಿಂತಿದ್ದಾರೆ. ವಿಶೇಷ ಅಂದರೆ ಮದ್ಯದಂಗಡಿಗಳ ಮುಂದೆ ಬ್ಯಾಗ್, ಚಪ್ಪಲಿ ಹಾಗೂ ವಾಟರ್ ಬಾಟಲಿ ಇಟ್ಟು ಸಾಮಾಜಿಕ ಅಂತರ ಕಾಯ್ದುಕೊಂಡು ಕ್ಯೂ ನಿಂತಿದ್ದಾರೆ.

    ಹುಬ್ಬಳ್ಳಿಯ ಗೋಕುಲ್ ರಸ್ತೆಯ ಹಲವು ಬಾರ್‌ಗಳ ಮುಂದೆ ಮದ್ಯ ಪ್ರಿಯರು ಬೆಳಗ್ಗೆಯಿಂದಲೇ ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಖರೀದಿಗೆ ಮತ್ತೆ ತಯಾರಾಗಿದ್ದಾರೆ. ಜಿಲ್ಲೆಯಲ್ಲಿ ಸೋಮವಾರದಿಂದ ಮದ್ಯ ಮಾರಾಟ ಆರಂಭವಾಗಿದ್ದು, ದಾಖಲೆಯ ಮದ್ಯ ಮಾರಾಟವಾಗಿದೆ.

    ಜಿಲ್ಲೆಯ 68 ಎಂಆರ್‌ಪಿ ಹಾಗೂ 24 ಎಂಎಸ್‍ಐಎಲ್ ಮದ್ಯದ ಅಂಗಡಿಗಳಲ್ಲಿ ಒಟ್ಟು 7,58,122 ಲೀಟರ್ 8,596 ಕೇಸ್ ಬಾಕ್ಸ್ ಮದ್ಯ ಮಾರಾಟವಾಗಿರುವುದು ಮದ್ಯ ಮಾರಾಟದಲ್ಲಿಯೇ ದಾಖಲೆಯನ್ನು ಸೃಷ್ಟಿಸಿದೆ. ಇನ್ನೂ 24,700 ಲೀಟರ್ ಬಿಯರ್ ಒಟ್ಟು 3,167 ಕೇಸ್ ಬಾಕ್ಸ್ ಗಳ ಮಾರಾಟವಾಗಿದೆ. ಒಂದೇ ದಿನದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮದ್ಯ ಖರೀದಿಯಾಗಿದ್ದರೂ ಎರಡನೇ ದಿನವೂ ಜನಜಂಗುಳಿಯಿಂದ ಕೂಡಿದೆ.

    ಮಂಡ್ಯದಲ್ಲೂ ಬೆಳಗ್ಗೆಯೇ ಬಾರ್‌ಗಳ ಮುಂದೆ ಜನರು ಕಾದು ಕುಳಿತಿದ್ದಾರೆ. ಮಂಡ್ಯದ ನೂರಡಿ ರಸ್ತೆಯಲ್ಲಿರುವ ಬಾರ್‌ಗಳ ಮುಂದೆ ತರಕಾರಿ ಚೀಲ, ಡಬ್ಬಗಳನ್ನ ಇಟ್ಟು ಜನರು ಕುಳಿತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾಡಲಾಗಿರುವ ಬಾಕ್ಸ್ ಗಳಲ್ಲಿ ತರಕಾರಿ ಚೀಲ ಇಟ್ಟು ಪಕ್ಕದಲ್ಲಿ ಜನರು ನಿಂತಿದ್ದಾರೆ. ಸೋಮವಾರ ಮದ್ಯ ಸಿಗಲಿಲ್ಲ, ಹೀಗಾಗಿ ಇಂದು ಬೆಳಗ್ಗೆಯೇ ಬಂದಿರೋದಾಗಿ ಮದ್ಯ ಪ್ರಿಯರು ಹೇಳುತ್ತಿದ್ದಾರೆ.

  • ಮದ್ಯದಂಗಡಿ ತೆರೆದಿದ್ದಕ್ಕೆ ವಿಡಿಯೋ ಕಾಲ್ ಮಾಡಿ ಸಂತಸ ಹಂಚಿಕೊಂಡ ಯುವಕ

    ಮದ್ಯದಂಗಡಿ ತೆರೆದಿದ್ದಕ್ಕೆ ವಿಡಿಯೋ ಕಾಲ್ ಮಾಡಿ ಸಂತಸ ಹಂಚಿಕೊಂಡ ಯುವಕ

    ಕೋಲಾರ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಮದ್ಯದಂಗಡಿಗಳು ಪುನರಾರಂಭಗೊಂಡಿದ್ದು, ಮದ್ಯಪ್ರಿಯರು ಬೆಳಗಿನಿಂದ ಕಾದು ಮದ್ಯ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಬೆಳಗಿನಿಂದ ಸಾಲುಗಟ್ಟಿ ನಿಂತಿದ್ದ ಮದ್ಯ ವ್ಯಸನಿಗಳು ಅಂಗಡಿ ತೆರೆಯುವುದನ್ನು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಜಿಲ್ಲೆಯಲ್ಲಿ 74 ಮದ್ಯದಂಗಡಿಗಳಿದ್ದು, ಬಹುತೇಕ ಎಲ್ಲ ಮದ್ಯದಂಗಡಿಗಳ ಮುಂದೆ ಬೆಳಗ್ಗೆ ಆರು ಗಂಟೆಯಿಂದಲೇ ಎಣ್ಣೆ ಪ್ರಿಯರು ಸಾಲುಗಟ್ಟಿ ನಿಂತಿದ್ದರು. ಕೆಲವರು ಮದ್ಯದಂಗಡಿ ಮುಂದೆ ಗಂಧದಕಡ್ಡಿ ಹಚ್ಚಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.

    ಇನ್ನೂ ವಿಶೇಷ ಎಂಬಂತೆ ಕೆಲವರು ವಿಡಿಯೋ ಕಾಲ್ ಮಾಡಿ ಮದ್ಯದಂಗಡಿ ತೆರೆದಿರುವ ಬಗ್ಗೆ ಸ್ನೇಹಿತರಿಗೆ ತೋರಿಸಿ ಸಂತಸ ಹಂಚಿಕೊಂಡರು. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಮದ್ಯದಂಗಡಿಗಳು ತೆರೆಯಬೇಕು, ಒಬ್ಬರಿಗೆ 750 ಎಂ.ಎಲ್. ಗಿಂತ ಹೆಚ್ಚು ಮದ್ಯ ಮಾರಾಟಮಾಡಬಾರದು, ಮಾಸ್ಕ್ ಧರಿಸದಿದ್ದವರಿಗೆ ಮದ್ಯ ಇಲ್ಲ ಎಂಬ ನಿಯಮ ಪಾಲಿಸಲಾಗುತ್ತಿದೆ. ಅಲ್ಲದೆ ಸಿಸಿ ಟಿವಿ ಅಳವಡಿಕೆ ಕಡ್ಡಾಯ, ಸಾಮಾಜಿಕ ಅಂತರ ಪಾಲಿಸಬೇಕು ಎಂಬ ಷರತ್ತುಗಳನ್ನು ಜಿಲ್ಲಾಡಳಿತ ವಿಧಿಸಿದೆ.

  • ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ – ಪೊಲೀಸರಿಂದ ಮದ್ಯದಂಗಡಿ ಕ್ಲೋಸ್

    ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ – ಪೊಲೀಸರಿಂದ ಮದ್ಯದಂಗಡಿ ಕ್ಲೋಸ್

    ಮೈಸೂರು: ಜಿಲ್ಲೆಯಲ್ಲಿ ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ ಆಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ.

    ಮೈಸೂರಿನ ದೇವರಾಜ ಠಾಣಾ ವ್ಯಾಪ್ತಿಯಲ್ಲಿರುವ ಟ್ರೂ ಸ್ಪಿರೀಟ್ಸ್ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಾಲ್ಕೈದು ಬಾರಿ ಮಾಲೀಕನಿಗೆ ವಾರ್ನ್ ಮಾಡಿದ್ದರು. ಇನ್ಸ್‌ಪೆಕ್ಟರ್ ಮಾತಿಗೂ ಲೆಕ್ಕಿಸದೆ ಮಾಲೀಕ ಮದ್ಯ ಮಾರಾಟ ಮಾಡುತ್ತಿದ್ದನು. ಹೀಗಾಗಿ ಪೊಲೀಸರು ಮದ್ಯದಂಗಡಿಯನ್ನು ಮುಚ್ಚಿಸಿದ್ದಾರೆ.

    ಮದ್ಯದಂಗಡಿಯಲ್ಲಿ ಸಿಬ್ಬಂದಿಯಿಲ್ಲದೆ ಕೇವಲ ಇಬ್ಬರಿಂದ ಮಾತ್ರ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಮುಗಿಬಿದ್ದಿದ್ದರು. ಆಗ ಪೊಲೀಸರು ಸಿಬ್ಬಂದಿಯನ್ನ ಕರೆಸಿಕೊಳ್ಳುವಂತೆ ಮಾಲೀಕನಿಗೆ ಹೇಳಿದ್ದರು. ಮಾಲೀಕ ಟೀಗೆ ಹೋಗಿದ್ದಾರೆ ಬರುತ್ತಾರೆ ಎಂದು ಸುಳ್ಳು ನೆಪ ಹೇಳಿದ್ದನು. ಈ ವೇಳೆ ಪೊಲೀಸರು ಖಡಕ್ ವಾರ್ನ್ ಮಾಡಿ ಮದ್ಯದಂಗಡಿಯನ್ನು ಮುಚ್ಚಿಸಿದ್ದಾರೆ.

    ಇವತ್ತಿಗೆ ವ್ಯಾಪಾರ ಸಾಕು, ಲೆಕ್ಕ ಹಾಕಿಕೊಂಡು ಮನೆಗೆ ಹೋಗಿ ಎಂದು ವಾರ್ನ್ ಮಾಡಿ ಕಳುಹಿಸಿದ್ದಾರೆ. ಅಲ್ಲದೇ ಮಳಿಗೆ ಮಾಲೀಕನಿಗೆ ಠಾಣೆಗೆ ಬಂದು ಅನುಮತಿ ಪಡೆಯುವಂತೆ ಎಚ್ಚರಿಸಿ ಹೋಗಿದ್ದಾರೆ. ಪದೇ ಪದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.

  • ಬೆಳಗಾವಿಯ 10 ಪ್ರದೇಶಗಳಲ್ಲಿ ಸಿಗಲ್ಲ ಮದ್ಯ

    ಬೆಳಗಾವಿಯ 10 ಪ್ರದೇಶಗಳಲ್ಲಿ ಸಿಗಲ್ಲ ಮದ್ಯ

    ಬೆಳಗಾವಿ: ಜಿಲ್ಲೆಯ 10 ಪ್ರದೇಶಗಳನ್ನು ಕಂಪ್ಲೀಟ್ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಇಂದು ಕೂಡ ಮದ್ಯ ಸಿಗಲ್ಲ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಬೆಳಗಾವಿ ನಗರದ ಕ್ಯಾಂಪ್ ಪ್ರದೇಶ, ಅಮನ್ ನಗರ, ಆಜಾದ್ ಗಲ್ಲಿ, ಸಂಗಮೇಶ್ವರ ನಗರ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಬೆಳಗುಂದಿ, ಪೀರನವಾಡಿ, ಯಳ್ಳೂರು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಎಣ್ಣೆ ಸಿಗಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳ ಎಣ್ಣೆ ಪ್ರಿಯರು ನಿರಾಶರಾಗಿದ್ದಾರೆ.

    ಬೆಳಗಾವಿ ಜಿಲ್ಲೆಯ ಈ 10 ಕಂಟೈನ್ಮೆಂಟ್ ಝೋನ್ ಬಿಟ್ಟು ಉಳಿದ ಕಡೆ ಎಣ್ಣೆ ಸಿಗುತ್ತಿದೆ. ಒಂದು ವೇಳೆ ಈ 10 ಕಂಟೈನ್‍ಮೆಂಟ್ ಝೋನ್ ನಲ್ಲಿ ಎಣ್ಣೆ ಮಾರಾಟ ಮಾಡಿದರೆ ಅಂಗಡಿಯ ಪರವಾನಗಿ ರದ್ದು ಮಾಡಲಾಗುತ್ತದೆ. ಆರೆಂಜ್ ಝೋನ್ ಬೆಳಗಾವಿಯಲ್ಲಿ ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ. ಮಾತ್ರವಲ್ಲದೆ ಸೀಲ್‍ಡೌನ್ ಪ್ರದೇಶಗಳಲ್ಲಿ ಯಾವುದೇ ರೀತಿಯ ಆರ್ಥಿಕ ಚಟುವಟಿಕೆಗಳು ಇರಲ್ಲ.

    ಬೆಳಗಾವಿ ತಾಲೂಕು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಮೂರು ತಾಲೂಕು ಹೊರತುಪಡಿಸಿ ಉಳಿದೆಡೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದೆ.

    ಮಾಸ್ಕ್ ಧರಿಸದಿದ್ದರೆ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ವಿಧಿಸಲಾಗುತ್ತಿದೆ. ಕಾಂಪ್ಲೆಕ್ಸ್ ಗಳಲ್ಲಿರುವ ಮಳಿಗೆಗಳು, ಮಾಲ್‍ಗಳನ್ನು ತೆರೆಯಲು ಅವಕಾಶವಿಲ್ಲ. ಕೈಗಾರಿಕೋದ್ಯಮಗಳಲ್ಲಿ ಶೇ.50ರಷ್ಟು ಕಾರ್ಮಿಕರಿಗೆ ಕೆಲಸಕ್ಕೆ ಅವಕಾಶ ನೀಡಲಾಗಿದೆ. ಕಾರ್ಮಿಕರಿಗೆ ಯಾವುದೇ ರೀತಿಯ ಪಾಸ್‍ಗಳಿಗೆ ಅಗತ್ಯವಿಲ್ಲ. ಕಾರ್ಖಾನೆಯವರು ಸೆಲ್ಫ್ ಡಿಕ್ಲೆರೇಷನ್ ಕೊಟ್ಟು ಕಾರ್ಖಾನೆ ತೆರೆಯಲು ಅವಕಾಶ ನೀಡಲಾಗಿದೆ.

    ಎಲ್ಲಾ ರೀತಿಯ ಸರ್ಕಾರಿ ಕಚೇರಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಸಾರ್ವಜನಿಕ ಕೆಲಸಕ್ಕೆ ಹಾಗೂ ಮದುವೆ ಸಮಾರಂಭದಲ್ಲಿ 50 ಜನರಿಗೆ ಮಾತ್ರ ಅವಕಾಶ ನಿಡಲಾಗಿದೆ.

  • ಆರಂಭದಲ್ಲೇ ಖಡಕ್ ಸೂಚನೆ ಕೊಟ್ಟು ಕ್ಯಾಬಿನೆಟ್ ಸಭೆ ಆರಂಭಿಸಿದ ಸಿಎಂ

    ಆರಂಭದಲ್ಲೇ ಖಡಕ್ ಸೂಚನೆ ಕೊಟ್ಟು ಕ್ಯಾಬಿನೆಟ್ ಸಭೆ ಆರಂಭಿಸಿದ ಸಿಎಂ

    ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಆರಂಭದಲ್ಲೇ ಎಲ್ಲ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಎಲ್ಲೇ ಹೋದರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಗಾಗಲೇ ನಾಲ್ವರು ಸಚಿವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಆಹಾರ ವಿತರಣೆ, ದಿನಸಿ ವಿತರಣೆ ಎನ್ನುವ ನೆಪದಲ್ಲಿ ಗುಂಪು ಸೇರಿಸಬಾರದು. ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ಕೂಡಾ ಎಚ್ಚರದಿಂದಿರಿ ಎಂದು ಸೂಚಿಸಿದ್ದಾರೆ.

    ಒಂದೊಮ್ಮೆ ಸಚಿವರಿಗೆ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕಷ್ಟ ಆಗಲಿದೆ. ಇಲ್ಲಿ ತನಕ ಮಾಡಿದ್ದ ಪ್ರಯತ್ನ ಎಲ್ಲವೂ ವ್ಯರ್ಥವಾಗಲಿದೆ. ನೀವು ಜನರಿಗೆ ಮಾದರಿ ಆಗಬೇಕು ಎಂದು ಸಿಎಂ ಕಿವಿಮಾತನ್ನು ಎಲ್ಲ ಸಚಿವರಿಗೆ ಹೇಳಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ವಾಹಿನಿಯ ಕ್ಯಾಮೆರಾಮನ್‍ಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನ ಸಂಪರ್ಕಕ್ಕೆ ಬಂದಿದ್ದರಿಂದ ಡಿಸಿಎಂ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಸುಧಾಕರ್ ಹಾಗೂ ಸಿ.ಟಿ.ರವಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಇಂದಿನ ಕ್ಯಾಬಿನೆಟ್ ಸಭೆಗೆ ಗೈರಾಗಿದ್ದರು.

    ಕೊರೊನಾ ಸೋಂಕಿತ ಕ್ಯಾಮೆರಾಮನ್ 24ರಂದೇ ಆಸ್ಪತ್ರೆಗೆ ದಾಖಲಾಗಿದ್ದು, ಆ ದಿನದಿಂದಲೇ ಸಚಿವರ ಕ್ವಾರಂಟೈನ್ ಆಗಬೇಕಿತ್ತು. ಹೋಮ್ ಕ್ವಾರಂಟೈನ್ ಆಗುವ ಅವಧಿ 14 ದಿನ ಅಂತ ಮಾರ್ಗಸೂಚಿಯಲ್ಲಿದೆ. ಬುಧವಾರ ಸುಧಾಕರ್ ಮಂಡ್ಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಕ್ವಾರಂಟೈನ್‍ನಲ್ಲಿ ಇರಬೇಕಾದವರು ಎಲ್ಲಂದರಲ್ಲಿ ಓಡಾಡಬಹುದೇ? ಜನರಿಗೊಂದು ನ್ಯಾಯ? ಸಚಿವರಿಗೊಂದು ನ್ಯಾಯವೇ ಎಂಬ ಪ್ರಶ್ನೆ ಎದ್ದಿತ್ತು.

    ಡಿಕೆಶಿ ಪ್ರಶ್ನೆ: ಕ್ಯಾಮೆರಾಮನ್ ಜೊತೆ ಸಿಎಂ, ಡಿಸಿಎಂ, ಸಚಿವರು ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ. ಆದರೆ ಅವರು ಯಾಕೆ ಕ್ವಾರಂಟೈನ್ ಆಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವಿಟ್ಟರ್‍ನಲ್ಲಿ ಪ್ರಶ್ನೆ ಕೇಳಿದ್ದರು. ಈ ಟ್ವೀಟ್ ಬೆನ್ನಲ್ಲೇ ಸುಧಾಕರ್ ಟ್ವೀಟ್ ಮಾಡಿ ನಾನು ಹೋಮ್ ಕ್ವಾರಂಟೈನ್‍ನಲ್ಲಿದ್ದೇನೆ ಎಂದು ತಿಳಿಸಿದ್ದರು.

    ಸೆಲ್ಫ್ ಕ್ವಾರಂಟೈನ್: ಕ್ಯಾಮೆರಾಮನ್ ಸಂಪರ್ಕಕ್ಕೆ ಬಂದ ಬೊಮ್ಮಾಯಿ, ಅಶ್ವಥ್ ನಾರಾಯಣ, ಸಿಟಿ ರವಿ, ಸುಧಾಕರ್ ಅವರ ಪರೀಕ್ಷೆ ನಡೆದಿದ್ದು, ನೆಗೆಟಿವ್ ಬಂದಿದೆ. ಸೋಮಣ್ಣ ಅವರ ಪರೀಕ್ಷಾ ವರದಿ ಬರಬೇಕಿದೆ.

    ಪತ್ರಕರ್ತರು ಕ್ವಾರಂಟೈನ್: ಕ್ಯಾಮೆರಾಮನ್ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಪತ್ರಕರ್ತರು ಈಗಾಗಲೇ ಕ್ವಾರಂಟೈನ್ ನಲ್ಲಿದ್ದಾರೆ. ಏ.20 ರಿಂದ 22ರವರೆಗೆ ಸೋಂಕಿತ ಕ್ಯಾಮೆರಾಮನ್ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ, ವಿಧಾನಸೌಧಕ್ಕೆ ಭೇಟಿ ನೀಡಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ, ಸಿಟಿ ರವಿ, ಸೋಮಣ್ಣ, ಸುಧಾಕರ್ ಅವರ ಸಂದರ್ಶನವನ್ನು ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕಾರಿನಲ್ಲೇ ಕುಳಿತುಕೊಂಡು ಮಾತನಾಡಿದ್ದಾರೆ.

    ನೆಗೆಟಿವ್ ಬಂದಿದೆ: ಡಿಕೆ ಶಿವಕುಮಾರ್ ಟ್ವೀಟ್ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿಟಿ ರವಿ ಟ್ವೀಟ್ ಮಾಡಿ, ಪಾಸಿಟಿವ್ ಬಂದ ಕ್ಯಾಮೆರಾಮೆನ್ ಜೊತೆ ಸಭೆಯಲ್ಲಿ ಹತ್ತಿರದಿಂದ ಯಾವುದೇ ಸಂಪರ್ಕ ಆಗದೇ ಇದ್ದರೂ ನಾನು ಏ.28ರಂದು ಪರೀಕ್ಷೆ ಎದುರಿಸಿದ್ದು, ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.

  • ‘ಇದೇ ಕೊನೆಯ ಎಚ್ಚರಿಕೆ ನಿನಗೆ’ – ರೇಣುಕಾಚಾರ್ಯಗೆ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡ ಸಿಎಂ

    ‘ಇದೇ ಕೊನೆಯ ಎಚ್ಚರಿಕೆ ನಿನಗೆ’ – ರೇಣುಕಾಚಾರ್ಯಗೆ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡ ಸಿಎಂ

    ಬೆಂಗಳೂರು: ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆಶಾ ಕಾರ್ಯಕರ್ತೆಯರ ಸಭೆ ನಡೆಸಿದ್ದ ಶಾಸಕ ರೇಣುಕಾಚಾರ್ಯ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡು ಎಚ್ಚರಿಕೆ ನೀಡಿದ್ದಾರೆ.

    ರೇಣುಕಾಚಾರ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆಶಾ ಕಾರ್ಯಕರ್ತೆಯರ ಸಭೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ನೋಡಿದ ಸಿಎಂ ಬಿಎಸ್‍ವೈ ಇಂದು ರೇಣುಕಾಚಾರ್ಯರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಏನು ಮಾಡುತ್ತಿದ್ದೀಯ ನೀನು? ಇಡೀ ದೇಶದಲ್ಲೇ ಸಾಮಾಜಿಕ ಅಂತರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನೀನು ಮಾತ್ರ ಅದನ್ನು ಕಾಪಾಡಿಕೊಳ್ಳದೆ ಸಭೆ ಮಾಡಿದ್ದೀಯ. ಶಾಸಕನಾಗಿ ಜವಾಬ್ದಾರಿ ಬೇಡವೇ? ಇದೇ ಕೊನೆಯ ಎಚ್ಚರಿಕೆ ನಿನಗೆ, ಇನ್ನೊಮ್ಮೆ ಈ ತಪ್ಪು ಮರುಕಳಿಸಿದರೆ ಸಹಿಸುವುದಿಲ್ಲ ಅಂತ ಸಿಎಂ ರೇಣುಕಾಚಾರ್ಯರಿಗೆ ಕರೆಯಲ್ಲಿಯೇ ಎಚ್ಚರಿಕೆ ನೀಡಿದ್ದಾರೆ.

  • ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು

    ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು

    ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

    ಕೊರೊನಾ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು.

    ಶಾಸಕ ಶಿವರಾಜ್ ಪಾಟೀಲ್ ಹಾಗೂ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ನಿಂತು ಫೋಟೋ ತೆಗೆಸಿಕೊಂಡರು. ಸುಮಾರು ಹೊತ್ತು ಒಟ್ಟಾಗಿ ಕುಳಿತು ಮಾತನಾಡಿದರು. ಸಾಮಾಜಿಕ ಅಂತರ ಕಾಪಾಡುವಂತೆ ಪೊಲೀಸರು ಮೈಕ್ ನಲ್ಲಿ ಅನೌನ್ಸ್ ಮಾಡಿದರೂ ತಿಳಿದುಕೊಳ್ಳದ ರಾಜಕಾರಣಿಗಳು ಗುಂಪುಗುಂಪಾಗಿ ಓಡಾಡಿ ಬಳಿಕ ಅಲ್ಲಿಂದ ತೆರಳಿದರು.

  • ಉಚಿತ ತರಕಾರಿಗಾಗಿ ಮುಗಿಬಿದ್ದ ಜನ – ಸ್ಥಳದಲ್ಲಿಯೇ ಇದ್ದರೂ ಕ್ಯಾರೇ ಎನ್ನದ ತಹಶೀಲ್ದಾರ್

    ಉಚಿತ ತರಕಾರಿಗಾಗಿ ಮುಗಿಬಿದ್ದ ಜನ – ಸ್ಥಳದಲ್ಲಿಯೇ ಇದ್ದರೂ ಕ್ಯಾರೇ ಎನ್ನದ ತಹಶೀಲ್ದಾರ್

    ಯಾದಗಿರಿ: ಜಿಲ್ಲೆಯಲ್ಲಿ ಇಷ್ಟು ದಿನ ಜನಸಾಮಾನ್ಯರು ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದರು. ಆದರೆ ಈಗ ಅಧಿಕಾರಿಗಳು ಸಹ ಲಾಕ್‍ಡೌನ್‍ಗೆ ಕ್ಯಾರೇ ಮಾಡುತ್ತಿಲ್ಲ ಎನ್ನುವಂತಾಗಿದೆ.

    ಹೌದು. ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರ್ ನಿಂಗಣ್ಣ ಬಿರಾದಾರ ಅವರು ಜನ ಗುಂಪು ಗುಂಪಾಗಿ ಒಬ್ಬರಿಗೊಬ್ಬರು ಅಂಟಿಕೊಂಡು ನಿಂತಿದ್ದರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳದಿರುವುದು ಅವರ ಬೇಜವಬ್ದಾರಿಯನ್ನು ತೋರಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಇಂದು ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಶಾಸಕರ ಕಚೇರಿಯಲ್ಲಿ ಬಡ ಜನರಿಗೆ ಉಚಿತ ತರಕಾರಿ ಹಂಚುವ ಕಾರ್ಯಕ್ರಮವಿತ್ತು. ನಿಗಧಿ ವೇಳೆಗಿಂತ ಮುಂಚೆಯೇ ಜನರು ತರಕಾರಿಗಾಗಿ ಮುಗಿಬಿದ್ದಿದ್ದರು. ಆಗಿನ್ನು ಶಾಸಕ ಶರಣಬಸಪ್ಪ ದರ್ಶನಾಪುರ ಸ್ಥಳಕ್ಕೆ ಬಂದಿರಲಿಲ್ಲ, ಇದೇ ಸಮಯದಲ್ಲಿ ಸ್ಥಳದಲ್ಲಿದ್ದ ತಹಶೀಲ್ದಾರ್‍ರು ಜನರು ಸಾಮಾಜಿಕ ಅಂತರ ಕಾಪಾಡದ ದೃಶ್ಯ ಕಣ್ಣಿಗೆ ಬಿದ್ದರೂ ಈ ಬಗ್ಗೆ ಜನರಿಗೆ ಏನು ಹೇಳಲಿಲ್ಲ. ಆದರೆ ಸ್ಥಳಕ್ಕೆ ಬಂದ ಶಾಸಕರು ಜನರಿಗೆ ಬುದ್ಧಿ ಹೇಳಿ ಸಾಮಾಜಿಕ ಅಂತರ ಕಾಪಾಡುವಂತೆ ಮನವೊಲಿಸಿದರು.

    ತಹಶೀಲ್ದಾರ್‍ರ ವಿರುದ್ಧ ಅನೇಕ ಆರೋಪಗಳನ್ನು ಜಿಲ್ಲೆಯಲ್ಲಿ ಕೇಳಿಬರುತ್ತಿವೆ. ಕೆಲ ಪಡಿತರ ಅಂಗಡಿಗಳ ಅಕ್ರಮದ ಬಗ್ಗೆ, ಲಾಕ್‍ಡೌನ್ ಮಧ್ಯೆಯೂ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಬಗ್ಗೆ ಗೊತ್ತಿದ್ದರೂ ಕ್ರಮ ಕೈಗೊಳ್ಳದ ಸುರಪುರ ತಹಶೀಲ್ದಾರ್ ಸುಮ್ಮನ್ನಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

  • ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ ಕೊರೊನಾ ಕಡಿಮೆ ಆಗುತ್ತೆ: ಶ್ರೀರಾಮುಲು

    ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ ಕೊರೊನಾ ಕಡಿಮೆ ಆಗುತ್ತೆ: ಶ್ರೀರಾಮುಲು

    -ಚೀನಾದಲ್ಲೂ ಸಾಕಷ್ಟು ಮಂದಿ ಇದನ್ನೇ ಅನುಸರಿಸಿ ಗುಣವಾಗಿದ್ದಾರೆ

    ಬಳ್ಳಾರಿ: ಈ ಹಿಂದೆ ಸೂರ್ಯನ ಕಿರಣ ಎಲ್ಲಿ ಹೆಚ್ಚು ಇರುತ್ತೋ ಅಲ್ಲಿ ಹೆಚ್ಚು ಜನ ಕೊರೊನಾ ಸೋಂಕಿನಿಂದ ಗುಣಮುಖರಾಗ್ತಾರೆ ಎಂದಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ ಕೊರೊನಾ ಕಡಿಮೆ ಆಗುತ್ತ ಎಂದು ಟಿಪ್ಸ್ ಕೊಟ್ಟಿದ್ದಾರೆ.

    ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆ ಮಾಡನಾಡಿದ ಸಚಿವರು, ಕೊರೊನಾ ಸೋಂಕಿನಿಂದ ಗುಣಮುಖರಾಗಲು ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ. ತಣ್ಣೀರಿನ ಬದಲು ಬಿಸಿ ನೀರನ್ನು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಕೊರೊನಾ ಕಡಿಮೆ ಆಗುತ್ತದೆ. ಚೀನಾದಲ್ಲೂ ಇದೇ ರೀತಿ ಜನರು ಮಾಡಿ ಗುಣಮುಖರಾಗಿದ್ದಾರೆ. ನಾನು ವೈದ್ಯನಲ್ಲ ಆದರೆ ಯಾವುದೋ ಆರ್ಟಿಕಲ್‍ನಲ್ಲಿ ಈ ಬಗ್ಗೆ ಓದಿದ್ದೆ ಎಂದು ಸಲಹೆ ನೀಡಿದ್ದಾರೆ.

    ಈ ಹಿಂದೆ ಹಾವೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಎಲ್ಲೆಲ್ಲಿ ಸೂರ್ಯನ ಕಿರಣ ಹೆಚ್ಚು ಬೀಳುತ್ತಿವೆಯೋ ಅಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರು ಹೆಚ್ಚು ಗುಣಮುಖರಾಗುತ್ತಿದ್ದಾರೆ ಎಂದು ಹೇಳಿದ್ದರು.

    ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಚಿವರು:
    ಇಂದು ಬಳ್ಳಾರಿಯ ರೂಪನಗುಡಿ ರಸ್ತೆಯಲ್ಲಿ ಆಹಾರದ ಕಿಟ್ ವಿತರಣೆ ವೇಳೆಯಲ್ಲಿ ಸಾಮಾಜಿಕ ಅಂತರವನ್ನು ಆರೋಗ್ಯ ಸಚಿವರೇ ಮರೆತಿದ್ದರು. ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಅವರು ದಾನಿಗಳು ನೀಡಿದ್ದ ಆಹಾರದ ಕಿಟ್ ವಿತರಣೆಗೆ ಬಂದಿದ್ದ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಕಿಟ್ ಹಂಚಿದ್ದಾರೆ. ಇತ್ತ ಸಚಿವರ ಹಿಂಬಾಲಕರಿಂದಲೂ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಮಾಡಲಾಗಿದೆ.