Tag: Social Gap

  • ಮಾಸ್ಕ್ ಧರಿಸದ ಇನ್ಸ್‌ಪೆಕ್ಟರ್‌ಗೆ  ದಂಡ ವಿಧಿಸಿದ ಎಸ್‍ಪಿ

    ಮಾಸ್ಕ್ ಧರಿಸದ ಇನ್ಸ್‌ಪೆಕ್ಟರ್‌ಗೆ ದಂಡ ವಿಧಿಸಿದ ಎಸ್‍ಪಿ

    ಹೈದರಾಬಾದ್: ಮಾಹಾಮಾರಿ ಕೊರೊನಾ ವೈರಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಮಧ್ಯೆ ಮಾಸ್ಕ್ ಧರಿಸದ ಸರ್ಕಲ್ ಇನ್ಸ್‌ಪೆಕ್ಟರ್‌ಗೆ  ದಂಡ ವಿಧಿಸಿದ ಘಟನೆಯೊಂದು ಹೈದರಾಬಾದ್‍ನಲ್ಲಿ ನಡೆದಿದೆ.

    ಸಾರ್ಕರದ ನಿಯಮಗಳು ಎಲ್ಲರಿಗೂ ಒಂದೇ ಎಂಬುದನ್ನು ಪೊಲೀಸ್ ವರಿಷ್ಠಾಧಿಕಾರಿ ನಿರೂಪಿಸುವ ಮೂಲಕವಾಗಿ ಇತರರಿಗೆ ಮಾದರಿಯಾಗಿದ್ದಾರೆ. ಗುಂಟೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಅಮ್ಮಿರೆಡ್ಡಿ ಮಾಸ್ಕ್ ಧರಿಸದವರ ವಿರುದ್ಧ ಭಾನುವಾರ ವಿಶೇಷ ಕಾರ್ಯಾಚರಣೆ ಮಾಡುತ್ತಿದ್ದರು. ಈ ವೇಳೆ ತಳ್ಳೂರು ವೃತ್ತ ನಿರೀಕ್ಷಕ ಮಲ್ಲಿಕಾರ್ಜುನ್ ರಾವ್ ಮಾಸ್ಕ್ ಧರಿಸದೆಯೇ ತಮ್ಮ ಮುಂದೆ ಹಾದು ಹೋಗಿದ್ದನ್ನು ಅಮ್ಮಿರೆಡ್ಡಿಯವರು ಗಮನಿಸಿದ್ದಾರೆ.

    ನಂತರ ಮಲ್ಲಿಕಾರ್ಜುನ್ ರಾವ್ ಅವರಿಗೆ ಮಾಸ್ಕ್ ಧರಿಸದೆ ಇರಲು ಕಾರಣವೇನು ಎಂದು ಕೇಳಿದ್ದಾರೆ. ಕೆಲಸಕ್ಕೆ ಬರುವ ಅವಸರದಲ್ಲಿ ಮರೆತೆ ಅಂತೆ ಮಲ್ಲಿಕಾರ್ಜುನ್ ಹೇಳಿದ್ದಾರೆ. ಈ ವೇಳೆ ಅವರಿಗೆ ದಂಡವನ್ನು ವಿಧಿಸಿ ಹಾಗೂ ತಾವೇ ಮಾಸ್ಕ್ ಅನ್ನು ಮಲ್ಲಿಕಾರ್ಜುನ್ ಅವರಿಗೆ ಹಾಕಿದ್ದಾರೆ. ಅಲ್ಲದೆ ಎಲ್ಲರಿಗೂ ಒಂದೇ ನಿಯಮ, ಕಾನೂನು ಎಂದು ಹೇಳಿದ್ದಾರೆ.

    ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಎಸ್‍ಪಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ರಂಜಾನ್‍ಗೆ ಸಚಿವರಿಂದ ಕೋಳಿ ಗಿಫ್ಟ್- ಸಾಮಾಜಿಕ ಅಂತರವಿಲ್ಲದೆ ಮುಗಿಬಿದ್ದ ಜನ

    ರಂಜಾನ್‍ಗೆ ಸಚಿವರಿಂದ ಕೋಳಿ ಗಿಫ್ಟ್- ಸಾಮಾಜಿಕ ಅಂತರವಿಲ್ಲದೆ ಮುಗಿಬಿದ್ದ ಜನ

    ಬೆಂಗಳೂರು: ರಂಜಾನ್ ಹಬ್ಬಕ್ಕೆಂದು ಸಚಿವರು ಕೋಳಿ ಮತ್ತು ಆಹಾರ ಕಿಟ್ ವಿತರಣೆ ಮಾಡುತ್ತಿದ್ದು, ಸಾಮಾಜಿಕ ಅಂತರವಿಲ್ಲದೇ ಜನರು ಮುಗಿಬಿದ್ದಿದ್ದಾರೆ.

    ಕೆ.ಆರ್ ಪುರದ ಬಿಜೆಪಿ ಶಾಸಕ ಮತ್ತು ನಗರಾಭಿವೃದ್ಧಿ ಸಚಿವರ ಬಿ.ಎ. ಬಸವರಾಜ್ ಅವರು ತಮ್ಮ ಕ್ಷೇತ್ರದ ಜನರಿಗೆ ರಂಜಾನ್ ಹಬ್ಬದ ಪ್ರಯುಕ್ತ ಕೋಳಿ ಮತ್ತು ಆಹಾರ ಕಿಟ್ ವಿರತೆಣೆ ಮಾಡುತ್ತಿದ್ದಾರೆ. ಈ ವೇಳೆ ಕೋಳಿ ಪಡೆಯಲು ಮುಗುಬಿದ್ದಿರುವ ಜನ ಕೊರೊನಾ ಭಯವನ್ನು ಮರೆತು ವರ್ತಿಸುತ್ತಿದ್ದಾರೆ.

    ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್ ಪಾಲಿಕೆ ಸದಸ್ಯ ಜಯಪ್ರಕಾಶ್ (ಜೆಪಿ) ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಂಚಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಚಾಲನೆ ನೀಡಿದ್ದಾರೆ. ನಂತರ ಜನರನ್ನು ದನ ಕರುಗಳಂತೆ ಕ್ಯೂನಲ್ಲಿ ಕೂಡಿಹಾಕಿ ಕಿಟ್‍ಗಳ ವಿತರಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಸಚಿವರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರವಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದೆ.

  • ಉಚಿತವಾಗಿ ಹಣ ಹಂಚಿಕೆ- ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ

    ಉಚಿತವಾಗಿ ಹಣ ಹಂಚಿಕೆ- ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ

    ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಅಗ್ರಹಾರದಲ್ಲಿ ನಿವೃತ್ತ ಕೆಇಬಿ ಅಧಿಕಾರಿ ಜಾಫರ್ ಖಾನ್ ಹಾಗೂ ಅವರ ಮಗ ಮೌಲಾ ಇಂದು ಜನರಿಗೆ ಉಚಿತವಾಗಿ ಹಣ ಹಂಚಿದ್ದಾರೆ.

    ತಮ್ಮ ಏರಿಯಾದಲ್ಲಿನ ಬಡವರಿಗೆ ತಲಾ 100-200 ರೂಪಾಯಿ ವಿತರಿಸಿದ್ದಾರೆ. ದುಡ್ಡು ಕೊಡುತ್ತಿದ್ದಾರೆ ಎಂದು ತಿಳಿದ ಜನ ತಂಡೋಪತಂಡವಾಗಿ ಜಮಾಯಿಸಿ ಹಣ ಪಡೆದುಕೊಂಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಅಂತ ಹಣ ಪಡೆದುಕೊಳ್ಳೋಕೆ ಮುಗಿಬಿದ್ದಿದ್ದಾರೆ.

    ರಂಜಾನ್ ಹಬ್ಬದ ಅಂಗವಾಗಿ ಪ್ರತಿ ವರ್ಷ ಇದೇ ರೀತಿ ಜಾಫರ್ ಖಾನ್ ಹಣ ಹಂಚಿಕೆ ಮಾಡುತ್ತಿದ್ದರಂತೆ. ಈ ಬಾರಿ ಕೊರೊನಾ ಎಫೆಕ್ಟ್ ಹಿನ್ನೆಲೆ ಮೊದಲೇ ಹಣ ಹಂಚಿಕೆ ಮಾಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಇಲ್ಲದೆ ಜನ ಮುಗಿಬಿದ್ದಿರುವ ಮಾಹಿತಿ ಅರಿತ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಜನರನ್ನು ಚದುರಿಸಿದ್ದಾರೆ. ತದನಂತರ ಸರದಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡವರಿಗೆ ಹಣ ಹಂಚಿಕೆ ಮಾಡಿಸಿದ್ದಾರೆ. ಸರಿ ಸುಮಾರು 40000 ಹಣ ಹಂಚಿಕೆ ಮಾಡಿರುವುದಾಗಿ ಜಾಫರ್ ಖಾನ್ ಹೇಳಿದ್ದಾರೆ.

  • ಉಚಿತ ದಿನಸಿಗಾಗಿ ಕ್ಯೂ- ಸಾಮಾಜಿಕ ಅಂತರಕ್ಕೆ ಹಾಕಿದ್ದ ಬಾಕ್ಸ್ ನಲ್ಲಿ ಇಬ್ಬರು

    ಉಚಿತ ದಿನಸಿಗಾಗಿ ಕ್ಯೂ- ಸಾಮಾಜಿಕ ಅಂತರಕ್ಕೆ ಹಾಕಿದ್ದ ಬಾಕ್ಸ್ ನಲ್ಲಿ ಇಬ್ಬರು

    -ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ

    ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ.

    ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು ಬಂದವು.

    ಸ್ಥಳದಲ್ಲಿ ನೂರಾರು ಜನರು ಸೇರಿರುವ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರನ್ನು ಕಳುಹಿಸುವಲ್ಲಿ ಸುಸ್ತಾದರು.