Tag: Social Security Scheme

  • ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ – ಕೃಷ್ಣಬೈರೇಗೌಡ

    ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ – ಕೃಷ್ಣಬೈರೇಗೌಡ

    ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ (Disabled Monthly Pension) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್, ವಿಕಲಚೇತನರ ಪಿಂಚಣಿ ಹೆಚ್ಚಳ ಮಾಡುವಂತೆ ಒತ್ತಾಯ ಮಾಡಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲ ಎಂದು ನುಡಿದರು. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ

    ಸಾಮಾಜಿಕ ಭದ್ರತೆ ಯೋಜನೆ (Social Security Scheme) ಅಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ. ಹಣ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

    ಮುಂದುವರಿದು, ಕೇಂದ್ರ ಸರ್ಕಾರ 14 ವರ್ಷಗಳಿಂದ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇಂದ್ರ ಸರ್ಕಾರ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡ್ತಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹಣ ಕೊಡ್ತಿದೆ. ಕೇಂದ್ರ ಸರ್ಕಾರ 200-300 ರೂ ಮಾತ್ರ ಪ್ರತಿಯೊಬ್ಬರಿಗೆ ಕೊಡ್ತಿದೆ. ಆದ್ರೆ ನಮ್ಮ ಸರ್ಕಾರ 800 ರೂ, 2,000 ರೂ. ಕೊಡ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದ್ರೆ ನಾವು ಮಾಡುವ ಬಗ್ಗೆ ಪರಿಶೀಲನೆ ಮಾಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: Nepal Plane Crash; ಟೇಕಾಫ್‌ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು

  • ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ

    ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ

    ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದ ಎಲ್ಲ ಹೆಣ್ಣುಮಕ್ಕಳಿಗೆ ಮನೆ, ನಿವೇಶನ ಹಾಗೂ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

    ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ’ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.  ಇದನ್ನೂ ಓದಿ; ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

    acid attack protest

    ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವುಂಡಿರುತ್ತಾರೆ. ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3,000 ದಿಂದ 10 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ಅಧಿಕಾರ ವಿಕೇಂದ್ರೀಕರಣ: ರಾಜ್ಯ ಆಳುವುದು ಅಂದರೆ ಜನರ ಸಮಸ್ಯೆಗಳನ್ನು ಅರಿತು ಹೃದಯದಿಂದ ಪರಿಹಾರ ಕೊಡುವುದು. ಅನುಷ್ಠಾನ ಮಾಡುವುದು ಆಡಳಿತ. ಈ ಚಿಂತನೆಯಿಂದ ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಇದರಿಂದ ಜನರ ಅಲೆದಾಟ ತಪ್ಪುತ್ತದೆ. 50 ಲಕ್ಷಕ್ಕಿಂತ ಹೆಚ್ಚು ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ವ್ಯವಸ್ಥೆ ಸರಿ ಇಲ್ಲದ್ದರಿಂದ ಇದನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

    acid-attack

    ಸಾಮಾಜಿಕ ಭದ್ರತಾ ಯೋಜನೆಗಳಡಿಯ ಪಿಂಚಣಿಗಳು ನೇರವಾಗಿ ಮನೆ ಬಾಗಿಲಿಗೆ ಮುಟ್ಟಬೇಕು. ಸಮಾಜದಲ್ಲಿ ಆಶ್ರಯ, ಸಹಾಯವಿಲ್ಲದವರಿಗೆ ಪಿಂಚಣಿ ನೀಡಬೇಕು. ಅದಕ್ಕಾಗಿ ವ್ಯವಸ್ಥೆ ಸರಿಪಡಿಸಲು ಕಂದಾಯ ಇಲಾಖೆಯನ್ನು ಚುರುಕುಗೊಳಿಸಲಾಗಿದೆ. ವ್ಯವಸ್ಥೆಯನ್ನು ಸರಿಪಡಿಸಿ ಈ ಕೆಲಸವನ್ನು ಮಾಡಲಾಗುತ್ತಿದೆ. ಇದು ಜನಪರವಾದ ಆಡಳಿತ. ಮನೆ ಬಾಗಿಲಿಗೇ ಸರ್ಕಾರ ಬರುವುದು ಅಧಿಕಾರದ ವಿಕೇಂದ್ರೀಕರಣ. ವಿಧಾನಸಭೆಯಲ್ಲಿ ಅಧಿಕಾರ ಹೆಪ್ಪುಗಟ್ಟಬಾರದು. ಅಧಿಕಾರ ನೇರವಾಗಿ ಜೇನುತುಪ್ಪದಂತೆ ಹರಿಯುವಂತಿರಬೇಕು. ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ನೇರವಾಗಿ ಜನರಿಗೆ ತಲುಪುವಂಥದ್ದು ಎಂದು ಶ್ಲಾಘಿಸಿದ್ದಾರೆ.

    ACID ATTACK 2s
    ಸಾಂದರ್ಭಿಕ ಚಿತ್ರ

    ಜನರೊಂದಿಗೆ ಸಂಪರ್ಕವಿದ್ದರೆ ಜನಪರ ಆಡಳಿತ: ಆಡಳಿತ ಮತ್ತು ರಾಜಕಾರಣ ಜನಪರವಾಗಿರಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಅಧಿಕಾರಕ್ಕೆ ಬಂದಾಗ ತಮ್ಮ ಸ್ವಂತ ಅಧಿಕಾರದ ಬಗ್ಗೆ ಚಿಂತೆ ಮಾಡುವವರು ದೇಶವನ್ನು ಹಾನಿ ಮಾಡಿದ್ದಾರೆ. ಅಧಿಕಾರ ಸಿಕ್ಕಾಗ ಜನಪರ ಕೆಲಸ ಮಾಡಿ ನೊಂದವರಿಗೆ ಸಹಾಯ ಮಾಡಿದವರನ್ನು ಜನ ಸದಾ ಕಾಲ ನೆನಪಿಟ್ಟುಕೊಳ್ಳುತ್ತಾರೆ. ಸಮಸ್ಯೆಗಳೊಂದಿಗೆ ಬದುಕುವುದಕ್ಕೂ, ಚರ್ಚೆ ಮಾಡುವುದಕ್ಕೂ ಅಂತರವಿದೆ. ಆಡಳಿತ ಜನರ ಬಳಿಗೆ ಸಮಸ್ಯೆಯ ಬಳಿಗೆ ಹೋದಾಗ ನೈಜ ಪರಿಹಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಅಧಿಕಾರ ಸ್ವೀಕರಿಸಿದ ದಿನ ನನ್ನ ಮೊದಲನೇ ನಿರ್ಣಯ ರೈತರ ಮಕ್ಕಳಿಗೆ ವಿದ್ಯಾ ನಿಧಿ ಯೋಜನೆ ಘೋಷಣೆ ಮಾಡಿದ್ದು. ಹೆಣ್ಣುಮಕ್ಕಳಿಗೂ ಇದನ್ನು ವಿಸ್ತರಿಸಲಾಗಿದೆ. ಸಂಧ್ಯಾ ಸುರಕ್ಷಾ, ಅಂಗವಿಕಲರ, ವಿಧವಾ ವೇತನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೊಬ್ಬರನ್ನು ಬೇಡದಂತೆ ಜೀವನ ನಡೆಸಲು ಈ ಬದಲಾವಣೆ ತರಲಾಗಿದೆ ಎಂದಿದ್ದಾರೆ.