Tag: social work

  • ಹೆತ್ತ ಮಗು ತನ್ನ ಬಳಿಯಿಲ್ಲದಿದ್ದರೂ ಅನಾಥ ಮಕ್ಕಳಿಗೆ ಸಹಾಯ – ಅತುಲ್ ಸಮಾಜಮುಖಿ ಕಾರ್ಯಕ್ಕೆ ಮನಸೋತ ಸ್ನೇಹಿತರು

    ಹೆತ್ತ ಮಗು ತನ್ನ ಬಳಿಯಿಲ್ಲದಿದ್ದರೂ ಅನಾಥ ಮಕ್ಕಳಿಗೆ ಸಹಾಯ – ಅತುಲ್ ಸಮಾಜಮುಖಿ ಕಾರ್ಯಕ್ಕೆ ಮನಸೋತ ಸ್ನೇಹಿತರು

    – ಮಕ್ಕಳಿಗೆ ಫ್ರೀ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೀಚಿಂಗ್
    – ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

    ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಕೇಸ್ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅತುಲ್ ಸಾವಿಗೆ ಇಡೀ ದೇಶವೇ ಮರುಗುತ್ತಿದ್ದು, ಆತನನ್ನು ಈ ವ್ಯವಸ್ಥೆಯೇ ಬಲಿ ಪಡೆದಿದೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಇದರ ನಡುವೆ ಅತುಲ್ ಕೇವಲ ಒಬ್ಬ ಎಂಜಿನಿಯರ್ ಆಗಿರಲಿಲ್ಲ, ಬದಲಾಗಿ ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದರು.

    ‘ನ್ಯಾಯ ಬಾಕಿಯಿದೆ’ ಎಂಬ ಪದ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬೆಂಗಳೂರಿನ (Bengaluru) ಟೆಕ್ಕಿ ಅತುಲ್ ಆತ್ಮಹತ್ಯೆ ಇದಕ್ಕೆ ಕಾರಣ. ರಾಷ್ಟ್ರಮಟ್ಟದಲ್ಲಿ ಹಲ್‌ಚಲ್ ಎಬ್ಬಿಸಿದ, ಅತುಲ್ ಒಳಗೊಬ್ಬ ನಿಜವಾದ ಸಮಾಜಮುಖಿ ವ್ಯಕ್ತಿತ್ವವಿತ್ತು. ಜೀವನದಲ್ಲಿ ಅದೆಷ್ಟೋ ನೋವುಗಳನ್ನು ಅನುಭವಿಸುತ್ತಿದ್ದರೂ, ಸಮಾಜಕ್ಕಾಗಿ (Social Work) ಏನಾದರೂ ಮಾಡಬೇಕು, ಬಡವರ ಹಾಗೂ ಅನಾಥರಿಗೆ ಕೈಲಾದ ಸಹಾಯ ಮಾಡಬೇಕು ಎಂಬ ಹಂಬಲವಿತ್ತು. ಇದೇ ಕಾರಣದಿಂದ ‘ಸೇವ್ ಇಂಡಿಯನ್ ಫ್ಯಾಮಿಲಿ’ ಫೌಂಡೇಶನ್ ಸೇರಿದಂತೆ ಕೆಲ ಎನ್‌ಜಿಒಗಳಲ್ಲಿ ಸದಸ್ಯರಾಗಿದ್ದರು. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಹಾಗೂ ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚಿದ್ದ ಅತುಲ್ ಸ್ನೇಹಿತರು ಅತುಲ್‌ನನ್ನು ಗುಣಗಾನ ಮಾಡುತ್ತಿದ್ದಾರೆ. ಇದನ್ನೂ ಓದಿ: 16 ವರ್ಷದಿಂದ ಗದಗ ಮೃಗಾಲಯದಲ್ಲಿ ಘರ್ಜಿಸುತ್ತಿದ್ದ ಹುಲಿ ಸಾವು

    ಇನ್ನೂ ಅತುಲ್ ತನ್ನ ಮಗು ತನ್ನ ಜೊತೆಯಲ್ಲಿ ಇಲ್ಲದಿದ್ದರೂ ಅನೇಕ ಅನಾಥಶ್ರಮಗಳ ಜೊತೆ ಸಂಪರ್ಕ ಹೊಂದಿದ್ದರು. ಅನೇಕ ಅನಾಥ ಮಕ್ಕಳಿಗೆ ಸಹಾಯ ಮಾಡಿದ್ದಾರೆ. ಜೊತೆಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ವಿವರಿಸಿದ್ದಾರೆ. ಎಐ ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ನಲ್ಲಿ ಎಕ್ಸ್‌ಪರ್ಟ್ ಆಗಿದ್ದ ಅತುಲ್, ಅನೇಕ ವಿದ್ಯಾರ್ಥಿಗಳಿಗೆ ಫ್ರೀಯಾಗಿ ಟೀಚಿಂಗ್ ಮಾಡುತ್ತಿದ್ದರು. ಇದೆಲ್ಲವನ್ನೂ ನೆನದು ಅತುಲ್ ಸ್ನೇಹಿತರು ಭಾವುಕರಾದರು. ಒಟ್ಟಿನಲ್ಲಿ ಅತುಲ್‌ನ ಈ ವ್ಯಕ್ತಿತ್ವಕ್ಕೆ ಮಾರುಹೋದ ಅನೇಕ ಜನ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಇದನ್ನೂ ಓದಿ: ಮಹಿಳೆಯರ ಗ್ರಾಮೀಣ ಕ್ರೀಡೋತ್ಸವಕ್ಕೆ ಸಾಕ್ಷಿಯಾದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ

  • ಬ್ಲಡ್ ಬ್ಯಾಂಕ್ ತೆರೆಯಲಿದ್ದಾರೆ ರಿಯಲ್ ಹೀರೋ

    ಬ್ಲಡ್ ಬ್ಯಾಂಕ್ ತೆರೆಯಲಿದ್ದಾರೆ ರಿಯಲ್ ಹೀರೋ

    ಮುಂಬೈ: ಕೊರೊನಾ ಕಾಲ್‍ಡೌನ್ ಸಮಯದಲ್ಲಿ ಸಮಾಜಮುಖಿ ಕಾರ್ಯಗಳಿಂದ ಸುದ್ದಿಯಾಗಿದ್ದ ಸೋನು ಸೂದ್ ಇದೀಗ ಮತ್ತೊಂದು ವಿಚಾರವಾಗಿ ಸುದ್ದಿಯಾಗಿದ್ದಾರೆ.

    ಸೋನು ಸೂದ್ ಬೃಹತ್ ಬ್ಲಡ್ ಬ್ಯಾಂಕ್ ತೆರೆಯುತ್ತಿದ್ದಾರೆ. ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಸಿದ್ದಾರೆ.

    ದೇಶದ ಅತಿದೊಡ್ಡ ಬ್ಲಡ್ ಬ್ಯಾಂಕ್ ಎಂದು ಗುರುತಿಸಲ್ಟಟ್ಟಿರುವ ‘ಸೋನು ಫಾರ್ ಯು’ ಅಪರೂಪದ ರಕ್ತ ಗುಂಪುಗಳನ್ನು ಹೊಂದಿರುವ ರೋಗಿಗಳಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಮಾತನಾಡಿದ ಸೋನುಸೂದ್, ‘ಸೋನು ಫಾರ್ ಯು’ ನನ್ನ ಮತ್ತು ನನ್ನ ಸ್ನೇಹಿತ ಜಾನ್ಸನ್ ಅವರ ನೇತೃತ್ವದಲ್ಲಿ ಮೂಡಿ ಬರಲಿರುವ ಯೋಜನೆ. ಪ್ರತಿ ಬಾರಿಯೂ ಯಾರಿಗಾದರೂ ತುರ್ತಾಗಿ ರಕ್ತ ಬೇಕಾಗುತ್ತದೆ ಮತ್ತು ನಾವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತೇವೆ. ಆಗ ಅನೇಕರು ಪ್ರತಿಕ್ರಿಯೆ ನೀಡುತ್ತಾರೆ. ಆದ್ದರಿಂದ ಈ ಉದ್ದೇಶವನ್ನು ಪೂರೈಸುವ ಆ್ಯಪ್ ಏಕೆ ರಚಿಸಬಾರದು ಎಂದು ಯೋಚಿಸಿದೆವು. ಭಾರತದಲ್ಲಿ 12,000 ರೋಗಿಗಳು ರಕ್ತದಾನದ ಕೊರತೆಯಿಂದ ಸಾಯುತ್ತಾರೆ. ಈ ಆ್ಯಪ್ ಮೂಲಕ 20 ನಿಮಿಷಗಳಲ್ಲಿ ಒಬ್ಬರ ಜೀವವನ್ನು ಉಳಿಸಬಹುದು. ಹೀಗಾಗಿ ನಾವು ಯೋಜನೆಗೆ ಮುಂದಾಗಿದ್ದೇವೆ ಎಂದಿದ್ದಾರೆ.

    ರಕ್ತದ ಅಗ್ಯವಿರುವವರಿಗೆ ಸರಿಯಾದ ಸಮಯಕ್ಕೆ ನೆರವಾಗುವುದು ಈ ಆ್ಯಪ್‍ನ ಉದ್ದೇಶವಾಗಿದೆ. ಅಲ್ಲದೇ ರಕ್ತ ಬೇಕಾಗಿರುವವರು ನೇರವಾಗಿ ರಕ್ತದಾನಿಗಳನ್ನು ಸಂಪರ್ಕಕಿಸಬಹುದಾಗಿದೆ. ರಕ್ತದಾನಿಯೊಬ್ಬರು ತುರ್ತು ಅವಶ್ಯಕತೆ ಇರುವ ಸಂದರ್ಭಗಳಲ್ಲಿ ಸಮೀಪದ ದಾನಿಗಳು ತಕ್ಷಣ ಆಸ್ಪತ್ರೆಗೆ ಹೋಗಿ ರಕ್ತದಾನ ಮಾಡಬಹುದಾಗಿದೆ.

  • ಸ್ವರ್ಗ ಕೊಟ್ರೂ ನನಗೆ ಬೇಡ: ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದ ಡಾ. ರವೀಂದ್ರನಾಥ ಶಾನುಭಾಗ್

    ಸ್ವರ್ಗ ಕೊಟ್ರೂ ನನಗೆ ಬೇಡ: ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದ ಡಾ. ರವೀಂದ್ರನಾಥ ಶಾನುಭಾಗ್

    ಉಡುಪಿ: ನಾನು ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಉಡುಪಿಯ ಸಮಾಜಸೇವಕ ಡಾ. ರವೀಂದ್ರನಾಥ ಶಾನುಭಾಗ್ ಹೇಳಿದ್ದಾರೆ.

    ಕಳೆದ ರಾತ್ರಿ ನನಗೆ ಅಧಿಕೃತವಾಗಿರಲಿಲ್ಲ. ಇಂದು ಅಧಿಕೃತವಾಗಿದೆ. ನನಗೆ ನನ್ನ ಸಮಾಜಸೇವೆ ತೃಪ್ತಿ ಆಗಿಲ್ಲ. ನೊಂದ ಜೀವಗಳ ಕಣ್ಣೀರು ಕಣ್ಣಮುಂದೆ ಸುರಿಯುತ್ತಿರುವಾಗ ನಾನು ಯಾವ ಪುರುಷಾರ್ಥಕ್ಕೆ ಪ್ರಶಸ್ತಿ ಸ್ವೀಕರಿಸಲಿ? ಎಂದು ಸರ್ಕಾರಕ್ಕೆ ಡಾ. ಶಾನುಭಾಗ್ ಪ್ರಶ್ನೆ ಮಾಡಿದ್ದಾರೆ.

    ಕರಾವಳಿಯ ಮೂರು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತ ನೂರಾರು ಮಕ್ಕಳ ನೊಂದಣಿ ಕೂಡಾ ಆಗಿಲ್ಲ. ಉಡುಪಿ ಜಿಲ್ಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಡೇ ಕೇರ್ ಸೆಂಟರ್ ಕೂಡಾ ನಿರ್ಮಾಣವಾಗಿಲ್ಲ. ಎಂಡೋಸಲ್ಫಾನ್ ಪೀಡಿತರು ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವಾಗ ಹಾಗೂ ಹಿರಿಯ ನಾಗರೀಕರು ಪ್ರತಿನಿತ್ಯ ಕಣ್ಣೀರಿಡುತ್ತಿರುವಾಗ ನಾನು ಈ ಪ್ರಶಸ್ತಿ ಸ್ವೀಕರಿಸಿದರೆ ಅವರ ಮುಖದಲ್ಲಿ ನಗು ಕಾಣಲು ಹೇಗೆ ಸಾಧ್ಯ ಎಂದು ಉತ್ತರಿಸಲಾಗದ ಪ್ರಶ್ನೆ ಹಾಕಿದ್ದಾರೆ.

    ಜನ ಹಗ್ಗ ತೆಗೆದುಕೊಳ್ಳುವಾಗ ನಾನು ಪ್ರಶಸ್ತಿ ತೆಗೆದುಕೊಳ್ಳಲೇ?: ನಾನು ಎಷ್ಟು ಸಮಾಜಸೇವೆ ಮಾಡಿದ್ದೇನೆ ಎಂಬುದು ಮುಖ್ಯವಲ್ಲ. ಹಿರಿಯ ನಾಗರೀಕರು ಸಾವಿರಾರು ಸಂಖ್ಯೆಯಲ್ಲಿ ನನ್ನ ಬಳಿ ಬರುತ್ತಾ ಇದ್ದಾರೆ. ಕೈಹಿಡಿದು ಕಣ್ಣೀರಿಡುತ್ತಿದ್ದಾರೆ. ಯಾರಿಗಾಗಿ, ಏತಕ್ಕಾಗಿ ಈ ಪ್ರಶಸ್ತಿ ಸ್ವೀಕಾರ ಮಾಡಲಿ? ಅಸಂಖ್ಯ ಅರ್ಜಿಗಳು ಬರುತ್ತಿದೆ. ಈ ನಡುವೆ ಪ್ರಶಸ್ತಿ ನನಗೆ ಬೇಕಾ? ಸರ್ಕಾರ ಹಿರಿಯ ನಾಗರೀಕರ ಕಾನೂನನ್ನು ಪಾಲಿಸದೆ ಗಾಳಿಗೆ ತೂರಿದೆ. ಎಂಟು ಜನ ಹಿರಿಯ ನಾಗರೀಕರು ನ್ಯಾಯ ಸಿಗುವ ಮೊದಲೇ ಸತ್ತು ಹೋಗಿದ್ದಾರೆ. ಪ್ರಶಸ್ತಿ ಸ್ವೀಕರಿಸಿ ನಾನು ಅವರ ಆತ್ಮಕ್ಕೆ ಅವಮಾನ ಮಾಡಬೇಕಾ ಎಂದು ಪ್ರಶ್ನೆ ಮಾಡಿದರು.

    ಐಎಎಸ್ ಅಧಿಕಾರಿಗಳ ಉದ್ಧಟತನ: ರಾಜ್ಯದಲ್ಲಿ ಜಗದೀಶ್, ಡಾ. ವಿಶಾಲ್ ನಂತಹ ಉದ್ಧಟತನದ ಐಎಎಸ್ ಅಧಿಕಾರಿಗಳ ನಡುವೆ ನನಗೆ ಯಾವ ಪ್ರಶಸ್ತಿಯೂ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವೆ ಉಮಾಶ್ರೀ ನನ್ನ ಒಂದು ಪತ್ರಕ್ಕೂ ಉತ್ತರಿಸುವುದು ಬೇಡ. ನೊಂದ ಸಂತ್ರಸ್ಥರಿಗಾದರೂ ಉತ್ತರಿಸುವ ಕನಿಷ್ಟ ಸೌಜನ್ಯವನ್ನೂ ಇಟ್ಟುಕೊಂಡಿಲ್ಲವಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರತಿನಿತ್ಯ ಹೆಣ್ಣುಮಕ್ಕಳ ಮಾನವಕಳ್ಳಸಾಗಣೆ ನಡೆಯುತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರಗಳ ಸರಮಾಲೆ ಬರೆದು ವರ್ಷ ಕಳೆಯಿತು. ಉತ್ತರವೂ ಇಲ್ಲ, ಸಮಸ್ಯೆಯೂ ಪರಿಹಾರವಾಗಿಲ್ಲ. ಎಂಡೋಸಲ್ಫಾನ್ ವಿಚಾರದಲ್ಲಿ ಉಡುಪಿಯ ಡಿಸಿಯಾಗಿದ್ದ ಆರ್ ವಿಶಾಲ್ ನಿಮಗೆಲ್ಲ ಈ ಉಸಾಬರಿ ಯಾಕೆ ಎಂದು ಪ್ರಶ್ನೆ ಮಾಡಿದರು.

    ಟೈಂ ವೇಸ್ಟ್ ಮಾಡಬೇಡಿ: ಯಾರೂ ನನ್ನ ಮನವೊಲಿಸಬೇಡಿ. ಸಂತ್ರಸ್ಥರ ಕಣ್ಣೀರು ಒರೆಸಲು ಸಾಧ್ಯವಾದ್ರೆ ಅದನ್ನು ಮಾಡಿ. ಮಾನವ ಕಳ್ಳಸಾಗಣೆ ನಿಲ್ಲಿಸಿ, ಎಂಡೋಸಲ್ಫಾನ್ ಸಂತ್ರಸ್ಥರ ಕಣ್ಣೀರು ಒರೆಸಿ, ಹಿರಿಯ ನಾಗರೀಕರನ್ನು ಸಾಯುವ ತನಕ ಬದುಕಲು ಬಿಡಿ. ಅಧಿಕಾರಿಗಳಿಗೆ, ಮಂತ್ರಿಗಳಿಗೆ ಕಾನೂನು ಪಾಲಿಸಲೂ ಗೊತ್ತಿಲ್ಲ. ಮಾನವೀಯತೆ ಅಂತೂ ಇಲ್ಲವೇ ಇಲ್ಲ. ನನ್ನದು ಉದ್ಧಟತನವೂ ಅಲ್ಲ, ಪ್ರಶಸ್ತಿಗೆ ಮಾಡುತ್ತಿರುವ ಅಗೌರವವೂ ಅಲ್ಲ. ಸಂತ್ರಸ್ಥರ ಕಣ್ಣೀರೊರೆಸುವ ಕೆಲಸದಲ್ಲೇ ನಾನು ಪ್ರಶಸ್ತಿಯ ಖುಷಿಯನ್ನು ಪಡೆಯುತ್ತೇನೆ ಎಂದು ಡಾ. ರವೀಂದ್ರನಾಥ ಶಾನುಭಾಗ್ ಸ್ಪಷ್ಟಪಡಿಸಿದರು.

    ಸ್ವರ್ಗ ಕೊಟ್ಟರೂ ಬೇಡ: ಪ್ರಶಸ್ತಿ ಜೊತೆ ಒಂದು ಲಕ್ಷ, ಒಂದು ಕೋಟಿ, ಬಂಗಾರದ ಪದಕ ಬೇಡ. ನನಗೆ ಸ್ವರ್ಗ ಕೊಟ್ಟರೂ ಬೇಡ. ನನಗೆ ಒಂದು ನ್ಯಾಯ ಕೊಡಿ. ನನ್ನ ಸಮಾಜ ಸೇವೆ ಪೂರ್ತಿಯಾಗಿಲ್ಲ. ಪೂರ್ತಿಯಾಗಲು ಜನಪ್ರತಿನಿಧಿಗಳು ಬಿಡುವುದಿಲ್ಲ. ಓಟು ಬೇಡಿದವರ ಬಳಿ ಜನ ನ್ಯಾಯ ಬೇಡುತ್ತಿದ್ದಾರೆ. ಇಂತಹ ಪರಿಸ್ಥಿತಿ ದೇಶದಲ್ಲಿ, ರಾಜ್ಯದಲ್ಲಿ ಇದೆ ಅನ್ನೋದು ನಾಚಿಕೆಗೇಡಿನ ವಿಚಾರ ಎಂದು ಖೇದ ವ್ಯಕ್ತಪಡಿಸಿದ್ರು.

    ಪ್ರಚಾರದ ಅಗತ್ಯವಿಲ್ಲ: ನನಗೆ ಪ್ರಶಸ್ತಿ ತಿರಸ್ಕಾರ ಮಾಡುವ ಮೂಲಕ ಭಾರೀ ಪ್ರಚಾರ ಸಿಗುತ್ತದೆ ಎಂಬ ಉದ್ದೇಶವಂತೂ ಇಲ್ಲವೇ ಇಲ್ಲ. ಹೆಸರು ಮಾಡಬೇಕೆಂದು ಹೀಗೆ ಮಾಡುತ್ತಿಲ್ಲ. ಈ ಮೂಲಕವಾದರೂ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಜ್ಞಾನೋದಯ ಆದ್ರೆ ಆಗಲಿ. ಜಾಗೃತಿ ಮೂಡಿದ್ರೆ ಮೂಡಲಿ. ಸಾಗರದಲ್ಲಿ ಒಂದೂವರೆ ಸಾವಿರ ಎಕ್ರೆ ಕಾಡನ್ನು ಕೃಷಿ ವಿಶ್ವವಿದ್ಯಾನಿಲಯಕ್ಕೆ ನಾಶ ಮಾಡುತ್ತಿದ್ದಾರೆ. ಇಂತದ್ದೆಲ್ಲ ಘಟನೆ ಕಣ್ಣಮುಂದೆ ನಡೆಯುತ್ತಿರುವಾಗ ನಾನು ಪ್ರಶಸ್ತಿ ಸ್ವೀಕರಿಸುವುದರಲ್ಲಿ ಏನು ಅರ್ಥವಿದೆ ಎಂದು ತನ್ನ ನಿಲುವನ್ನು ವ್ಯಕ್ತಪಡಿಸಿದರು.

    https://www.youtube.com/watch?v=mUP-1N8wHHE

  • ಭ್ರಷ್ಟರ ವಿರುದ್ಧ ಬಾಲ್ಯದಿಂದಲೂ ಹೋರಾಟ- ಶೋಷಿತರ ಪಾಲಿಗೆ ಆಶಾಕಿರಣ ನಮ್ಮ ಪಬ್ಲಿಕ್ ಹೀರೋ

    ಭ್ರಷ್ಟರ ವಿರುದ್ಧ ಬಾಲ್ಯದಿಂದಲೂ ಹೋರಾಟ- ಶೋಷಿತರ ಪಾಲಿಗೆ ಆಶಾಕಿರಣ ನಮ್ಮ ಪಬ್ಲಿಕ್ ಹೀರೋ

    ಗದಗ: ರಾಜಕಾರಣಿಯೊಬ್ಬರ ನಡತೆ ವಿರುದ್ಧ ಬಾಲ್ಯದಿಂದಲೇ ಸೆಟೆದು ನಿಂತ ನಮ್ಮ ಈ ಪಬ್ಲಿಕ್ ಹೀರೋ ಇವತ್ತು ಬಡವರ, ಶೋಷಿತರ, ವಯೋವೃದ್ಧರ ಸಹಾಯಕ್ಕೆ ನಿಂತಿದ್ದಾರೆ.

    ಗದಗ ಜಿಲ್ಲೆ ಮುಂಡರಗಿ ಪಟ್ಟಣದ ನಿವಾಸಿ ಯಲ್ಲನಗೌಡ ನಿಂಗನಗೌಡ ಗೌಡರ್ ನಮ್ಮ ಪಬ್ಲಿಕ್ ಹೀರೋ. ಸಮಾಜ ಸೇವಕ, ಹೋರಾಟಗಾರ, ಪರಿಸರ ಪ್ರೇಮಿ, ಕೃಷಿಕ, ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಬಡಕುಟುಂಬದ ಯಲ್ಲನಗೌಡ ಎಸ್‍ಎಸ್‍ಎಲ್‍ಸಿ ಮುಗಿಸಿದಾಗ ಕೆಲಸ ಕೊಡಿಸುವಂತೆ ಕಾಲಿಗೆ ಬಿದ್ದಿದ್ದ ತಂದೆಯನ್ನ ರಾಜಕಾರಣಿಯೊಬ್ರು ಒದ್ದು ಹೋಗಿದ್ರಂತೆ. ಅಂದಿನಿಂದಲೇ ಸ್ವಾಭಿಮಾನ ಬೆಳೆಸಿಕೊಂಡು, ಭ್ರಷ್ಟರ ವಿರುದ್ಧ ಸಿಡಿದೆದ್ದು ದೀನರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ.

    ಇವರ ಜನೋಪಕಾರಿ ಕಾರ್ಯದಿಂದಾಗಿ 1990ರಲ್ಲಿ ಮುಂಡರಗಿ ನಗರಸಭೆ ಸದಸ್ಯ, ಅಧ್ಯಕ್ಷರಾಗಿ ಜನಮೆಚ್ಚುವಂತಹ ಕಾರ್ಯ ಮಾಡಿದ್ದಾರೆ. ಸರ್ಕಾರದಿಂದ ಅನುದಾನ ಸಿಗದಿದ್ದಾಗ ಹವ್ಯಾಸಿ ಕಲಾವೃಂದದ ಸಂಘ ಸ್ಥಾಪಿಸಿ ನಾಟಕವಾಡಿ ಹಣ ಸಂಗ್ರಹ್ರಿಸಿ ತಮ್ಮ ವ್ಯಾಪ್ತಿಯ ಶಿರೊಳ, ರಾಮೇನಹಳ್ಳಿ, ಬ್ಯಾಲಡಗಿಯಲ್ಲಿ ಎರಡು ಉರ್ದು ಹಾಗೂ ಎಂಟು ಪ್ರಾಥಮಿಕ ಶಾಲಾ ಕೊಠಡಿಗಳನ್ನ ನಿರ್ಮಿಸಿದ್ದಾರೆ.

    ಜಾತಿ, ಪಕ್ಷ ಭೇದ ಮರೆತು ಪೊಸ್ಕೊ, ಕಪ್ಪತ್ತಗುಡ್ಡ ಸಂರಕ್ಷಣೆ, ತಾಲೂಕು ಅಭಿವೃದ್ಧಿ, ಏತನೀರಾವರಿ, ಸಾಲ ಸೌಲಭ್ಯ, ಮರಳುನಿಂದ ನದಿಗಳ ರಕ್ಷಣೆ ಹೀಗೆ ಅನೇಕ ಹೋರಾಟದಲ್ಲಿ ಮುಂದಾಳತ್ವ ವಹಿಸಿದ್ದಾರೆ.

    https://www.youtube.com/watch?v=z5HNG4II_Rs