Tag: Society

  • ಸಮಾಜ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು: ಬಿ.ಸಿ ನಾಗೇಶ್ ತಿರುಗೇಟು

    ಸಮಾಜ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು: ಬಿ.ಸಿ ನಾಗೇಶ್ ತಿರುಗೇಟು

    – ಸಿದ್ದರಾಮಯ್ಯಗೆ ಹಿಜಬ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ

    ಮೈಸೂರು: ಸಮಾಜ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

    ರಾಜ್ಯ ಸರ್ಕಾರ ಹಿಜಬ್ ವಿಚಾರದಲ್ಲಿ ಸ್ಪಷ್ಟವಾದ ಆದೇಶ ಜಾರಿ ಮಾಡಿದೆ. ಈ ಬಗ್ಗೆ ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯ ಆದೇಶ ಕಟ್ಟುನಿಟ್ಟಾಗಿ ಪಾಲನೆ ಮಾಡಲೇಬೇಕು. ಪೊಲೀಸ್ ಇಲಾಖೆಯಲ್ಲಿನ ಮುಸ್ಲಿಂರು ಪೊಲೀಸ್ ಕ್ಯಾಪ್ ಹಾಕಲ್ಲ. ಟೋಪಿ ಹಾಕ್ತಿನಿ ಅಂದರೆ ನಡೆಯುತ್ತಾ? ಇದು ಅದೇ ರೀತಿ. ಸರಕಾರದ ಆದೇಶದಂತೆ ಸಮವಸ್ತ್ರ ಧರಿಸಬೇಕು ಎಂದರು. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

    ಸಮಾಜ, ಧರ್ಮ ಒಡೆಯುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪ್ರೊಫೆಸರ್‌ಗಳು. ಅವರಿಂದ ನಮಗೆ ಪಾಠ ಬೇಡ. ರಾಹುಲ್ ಗಾಂಧಿ ಈ ವಿಚಾರದಲ್ಲಿ ಟ್ವೀಟ್ ಮಾಡುವಾಗ ಸಿನಿಮಾ ತಾರೆಯರು ಸಲಹೆ ಪಡೆಯದೆ ಅವರ ತಾಯಿಯ ಸಲಹೆ ಪಡೆದು ಟ್ವೀಟ್ ಮಾಡಲಿ ಎಂದರು. ರಾಹುಲ್ ಗಾಂಧಿಗೆ ತಾಯಿ ಶಾರದೆ, ಏಸು ಒಳ್ಳೆಯ ಬುದ್ಧಿ ಕೊಡಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

    ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಶಾದಿ ಭಾಗ್ಯ, ಒಂದೇ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಸಮಾಜ ಒಡೆದದ್ದು ಯಾರು ಎಂಬುದು ಜನರಿಗೆ ಗೊತ್ತಿದೆ. ಶಾಲೆಯಲ್ಲಿ ಶಾರದಾ ಪೂಜೆ, ಗಣಪತಿ ಪೂಜೆ ಇವೆಲ್ಲಾ ಬಿಜೆಪಿ ಸರ್ಕಾರ ಬಂದ ಮೇಲೆ ಬಂದಿಲ್ಲ. ಇದು ಈ ನೆಲದ ಸಂಸ್ಕೃತಿ, ಈ ಬಗ್ಗೆ ಪ್ರಶ್ನೆ ಮಾಡಬೇಡಿ ಎಂದಿದ್ದಾರೆ.

  • ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

    ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

    ಮುಂಬೈ: ಡ್ರಗ್ಸ್ ಕೇಸ್‍ನಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್( Bollywood) ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್(aryan khan) ಇನ್ನೆಂದೂ ಕೆಟ್ಟ ಹಾದಿ ತುಳಿಯಲ್ಲ, ಬಡವರಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾನೆ ಎಂದು ತಿಳಿದುಬಂದಿದೆ.

    ಇನ್ನು ನಾನು ಕೆಟ್ಟ ಹಾದಿ ತುಳಿಯಲ್ಲ, ಮುಂದಿನ ದಿನಗಳಲ್ಲಿ ಬಡವರು, ತುಳಿತಕ್ಕೊಳಗಾದವರ ಏಳಿಗೆಗಾಗಿ ಕೆಲಸ ಮಾಡುತ್ತೇನೆ. ಅಲ್ಲದೆ ಮುಂದೊಂದು ದಿನ ಎಲ್ಲರೂ ಹೆಮ್ಮೆ ಪಡುವಂತೆ ಬೆಳೆಯುತ್ತೇನೆ ಎಂದು (ಎಸ್‍ಸಿಬಿ ಅಧಿಕಾರಿಗಳ) ಮುಂಬೈ ವಲಯದ ನಿರ್ದೇಶಕ ಅಮೀರ್ ವಾಂಖೆಂಡೆ ಮುಂದೆ ಆರ್ಯನ್ ಖಾನ್ ಹೇಳಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಜೈಲೂಟ ತಿನ್ನಲು ಆರ್ಯನ್ ಪರದಾಟ – ಕ್ಯಾಂಟೀನ್ ಊಟಕ್ಕೆ ಮನಿ ಆರ್ಡರ್ ಕಳುಹಿಸಿದ ಶಾರೂಖ್

    ಅ.2 ರಂದು ಮಧ್ಯರಾತ್ರಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ರೇವ್‍ಪಾರ್ಟಿ ಮಾಡುತ್ತಿದ್ದ ವೇಳೆ ಎನ್‍ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿರುವ 23 ವರ್ಷದದ ಆರ್ಯನ್ ಖಾನ್, ಆಥೂರ್ ರಸ್ತೆ ಜೈಲಿನಲ್ಲಿದ್ದಾನೆ. ನಿನ್ನೆ ಆತನ ಜೊತೆ ಎನ್‍ಸಿಬಿ ಮತ್ತು ಸಾಮಾಜಿಕ ಕಾರ್ಯಕರ್ತರು ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಮುಂದೊಂದು ದಿನ ಕೆಟ್ಟ ಕಾರಣಕ್ಕೆ ಸುದ್ದಿಯಾಗುವ ಕೃತ್ಯದಲ್ಲಿ ನಾನು ಭಾಗಿಯಾಗಲ್ಲ. ಬಡವರಿಗೆ ಸಹಾಯ ಮಾಡುತ್ತೆನೆ, ಸಾಮಾಜಿಕ ಬಲವರ್ಧನೆಗೆ ಕೆಲಸ ಮಾಡುತ್ತೇನೆ ಎಂದು ಆರ್ಯನ್‍ಖಾನ್ ಹೇಳಿದ್ದಾನೆ. ಆರ್ಯನ್ ಖಾನ್ ಜಾಮೀನು ಅರ್ಜಿ ತೀರ್ಪು ಅ.20 ರಂದು ಹೊರಬೀಳಲಿದೆ. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!

  • ಅಗ್ನಿಅವಘಡಕ್ಕೆ ಸುಟ್ಟು ಭಸ್ಮವಾಯ್ತು 20 ಬೈಕ್

    ಅಗ್ನಿಅವಘಡಕ್ಕೆ ಸುಟ್ಟು ಭಸ್ಮವಾಯ್ತು 20 ಬೈಕ್

    ಮುಂಬೈ: ಸೊಸೈಟಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಲ್ಲಿ ನಿಲ್ಲಿಸಿದ್ದ ಸುಮಾರು 20 ಮೋಟಾರ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಮುಂಬೈನ ನೆಹರು ನಗರದ ಕುರ್ಲಾ ವಸತಿ ಸೊಸೈಟಿಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮದ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಕಾಣಿಕೊಳ್ಳಲು ಕಾರಣವೇನು ಎಂದು ಪರಿಶೀಲನೆ ಮಾಡುತ್ತಿದ್ದಾರೆ.

    ಬೆಂಕಿಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೆಂಕಿಯ ಬೃಹತ್ ಜ್ವಾಲೆ ಕಟ್ಟಡದ ಎಂಟನೇ ಮಹಡಿಯಷ್ಟು ಎತ್ತರಕ್ಕೆ ಹಾರಿತ್ತು. ಯಾರೂ ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆ. ಸಿಗರೇಟ್ ಸೇದು ಇಟ್ಟಿದ್ದಾರೆ ಹೀಗಾಗಿ ಬೆಂಕಿ ಹೊತ್ತಿ ಉರಿದಿದೆ ಎಂದು ಸ್ಥಳೀಯ ನಿವಾಸಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಕುರಿತಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್, ರಬ್ಬರ್ ಮಿಶ್ರಣದ ರೇಷನ್

    ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್, ರಬ್ಬರ್ ಮಿಶ್ರಣದ ರೇಷನ್

    ಮಂಡ್ಯ: ಬಡವರ ಹಸಿವು ನೀಗಿಸಲು ಸರ್ಕಾರ ಉಚಿತ ಪಡಿತರ ವಿತರಣೆ ಮಾಡುತ್ತಿದೆ. ಸಾಮಾನ್ಯವಾಗಿ ಸೊಸೈಟಿಗಳು ಕಳಪೆ ಹಾಗೂ ಹುಳು ಬಂದ ಅಕ್ಕಿ ನೀಡುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಪ್ಲಾಸ್ಟಿಕ್ ಮತ್ತು ರಬ್ಬರ್ ಉಚಿತ ಅಕ್ಕಿ ಜೊತೆ ಮಿಶ್ರಣವಾಗಿರುವ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

    ಮಂಡ್ಯದ ಮದ್ದೂರು ತಾಲೂಕಿನ ಗುರುದೇವರಹಳ್ಳಿಯಲ್ಲಿ ಬಹುತೇಕ ಜನ ಕೂಲಿಕಾರ್ಮಿಕರು ಇದ್ದಾರೆ. ಒಂದೊತ್ತಿನ ಊಟಕ್ಕೆ ಸರ್ಕಾರ ನೀಡುವ ಉಚಿತ ಪಡಿತರವನ್ನೇ ನಂಬಿಕೊಂಡಿದ್ದಾರೆ. ಆದರೆ ಅವರ ಜೀವಕ್ಕೆ ಆಪತ್ತು ಎದುರು ಮಾಡಿದೆ. ಚಿಕ್ಕರಸಿನಕೆರೆ ಸೊಸೈಟಿಯಿಂದ ತಂದ ಪಡಿತರ ಅಕ್ಕಿಯಲ್ಲಿ ಹಳದಿ ಬಣ್ಣದ ಕಾಳುಗಳು ಮಿಕ್ಸ್ ಆಗಿದ್ದು, ಅಕ್ಕಿ ಬೇಯಿಸಿದಾಗ ಇದು ಪ್ಲಾಸ್ಟಿಕ್ ಮತ್ತು ರಬ್ಬರ್ ಮಿಶ್ರಣದ ಅಕ್ಕಿ ಎಂದು ತಿಳಿದುಬಂದಿದೆ.

    ಪ್ರತಿ ತಿಂಗಳಂತೆ ಈ ತಿಂಗಳು ಕೂಡ ಚಿಕ್ಕರಸಿನಕೆರೆ ಸೊಸೈಟಿಯಿಂದ ರೇಷನ್ ತಂದಿದ್ದರು. ಮನೆಗೆ ಬಂದು ಚೀಲ ಬಿಚ್ಚಿ ನೋಡಿದಾಗ ಅಕ್ಕಿಯ ಜೊತೆ ಹಳದಿ ಬಣ್ಣದ ಕಾಳುಗಳು ಮಿಕ್ಸ್ ಆಗಿರೋದು ಕಂಡು ಬಂದಿದೆ. ಇದನ್ನು ಬೇಯಿಸಿದಾಗ ಜನರಿಗೆ ಇದು ಪ್ಲಾಸ್ಟಿಕ್ ಮತ್ತು ರಬ್ಬರ್ ಮಿಶ್ರಣದ ಅಕ್ಕಿ ಎಂದು ತಿಳಿದಿದೆ.

    ಈ ಹಳದಿ ಕಾಳುಗಳನ್ನು ನೀರಿನಲ್ಲಿ ನೆನೆಸಿದರೆ ಕೆಲವೇ ನಿಮಿಷದಲ್ಲಿ ಬಣ್ಣ ಬಿಟ್ಟುಕೊಳ್ಳುತ್ತಿದೆ. ಈ ಅಕ್ಕಿಯಲ್ಲಿ ಅನ್ನ ಮಾಡಿಕೊಂಡು ತಿಂದರೆ ಆರೋಗ್ಯ ಏನಾಗಬೇಕು? ಪ್ರಾಣಕ್ಕೆ ಹೆಚ್ಚು ಕಡಿಮೆಯಾದರೆ ಯಾರು ಹೊಣೆ ಎಂದು ಗ್ರಾಮದ ಮಹಿಳೆ ಸುನಿತಾ ಪ್ರಶ್ನಿಸಿದ್ದಾರೆ.

    ಬಡವರು ಹಸಿವಿನಿಂದ ಬಳಲಬಾರದು. ಹೊಟ್ಟೆ ತುಂಬಾ ಊಟ ಮಾಡಬೇಕು ಎಂಬ ಕಾರಣದಿಂದ ಸರ್ಕಾರ ಉಚಿತ ಅಕ್ಕಿ ನೀಡುತ್ತಿದೆ. ಆದರೆ ಅಕ್ಕಿಯಲ್ಲಿ ವಿಷವಾಗಿ ಬದಲಾಗುವ ಪ್ಲಾಸ್ಟಿಕ್ ಹಾಗೂ ರಬ್ಬರ್ ಅಂಶಗಳು ಸೇರಿರುವುದು ಜನರನ್ನು ಆತಂಕಕ್ಕೆ ದೂಡಿದೆ.

  • ಕ್ಯೂನಲ್ಲಿ ಬ್ಯಾಗಿಟ್ಟು ಮರದಡಿ ಮಾತುಕತೆಗೆ  ಕುಳಿತ ಜನರು

    ಕ್ಯೂನಲ್ಲಿ ಬ್ಯಾಗಿಟ್ಟು ಮರದಡಿ ಮಾತುಕತೆಗೆ ಕುಳಿತ ಜನರು

    – ಇದೇನಾ ಸಾಮಾಜಿಕ ಅಂತರ?

    ಚಿಕ್ಕಮಗಳೂರು: ಸರ್ಕಾರ ಉಚಿತವಾಗಿ ನೀಡುತ್ತಿರುವ ಪಡಿತರಕ್ಕಾಗಿ ಬಂದ ಜನ ತಾವು ತಂದ ಬ್ಯಾಗ್ ಗಳನ್ನು ಸಾಲಾಗಿ ಜೋಡಿಸಿಟ್ಟು ಮರದ ಅಡಿ ಸಾಮಾಜಿಕ ಅಂತರವನ್ನ ಗಾಳಿಗೆ ತೂರಿ ಮಾತುಕತೆಯಲ್ಲಿ ತೊಡಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದ ಸೊಸೈಟಿ ಮುಂಭಾಗ ನಡೆದಿದೆ.

    ಕಳೆದೊಂದು ತಿಂಗಳಿಂದ ಇಡೀ ದೇಶವೇ ಕೊರೊನಾ ವೈರಸ್ ಹಾವಳಿಗೆ ಕಂಗಾಲಾಗಿದೆ. ಜನರ ಆರೋಗ್ಯದ ದೃಷ್ಠಿಯಿಂದ 21 ದಿನಗಳ ಕಾಲ ದೇಶವನ್ನು ಲಾಕ್‍ಡೌನ್ ಮಾಡಿದ್ದ ಪ್ರಧಾನಿ ಮೋದಿ ಇಂದು ಮತ್ತೆ ಮೇ 3ರವರೆಗೆ ಇಡೀ ದೇಶ ಲಾಕ್ ಡೌನ್‍ನಲ್ಲಿರುವಂತೆ ಆದೇಶಿಸಿದ್ದಾರೆ. ಜೊತೆಗೆ ಮನೆಯಲ್ಲೇ ಇರುವಂತೆ ಮನವಿ ಮಾಡಿಕೊಂಡು, ತುರ್ತು ಸಂದರ್ಭ ಮಾಸ್ಕ್ ಹಾಕಿಕೊಂಡು ಹೊರಬರುವಂತೆ ಮನವಿ ಮಾಡಿದ್ದಾರೆ. ಅಷ್ಟೆ ಅಲ್ಲದೇ ಬಡವರು, ರೈತರಿಗೆ ಮಾತ್ರ ಕೆಲ ವಿನಾಯಿತಿ ಎಂದು ಘೋಷಿಸಿದ್ದಾರೆ.

    ಆದರೆ ಗ್ರಾಮೀಣ ಭಾಗದ ಜನ ಮಾತ್ರ ಸರ್ಕಾರದ ಆದೇಶ, ಪ್ರಧಾನಿಯ ಮನವಿ ಮತ್ತು ಕೊರೊನಾ ಭಯ ಯಾವುದೂ ಇಲ್ಲದಂತೆ ಎಂದಿನಂತೆ ಇದ್ದಾರೆ. ಇಂದು ಸೊಸೈಟಿ ಮುಂಭಾಗದ ದೃಶ್ಯವೇ ಇದಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಅಂತರದ ಅರಿವೇ ಇಲ್ಲದೆ, ಪಡಿತರಕ್ಕಾಗಿ ತಾವು ತಂದ ಬ್ಯಾಗ್‍ಗಳನ್ನ ಸರದಿ ಸಾಲಲ್ಲಿ ಜೋಡಿಸಿಟ್ಟು ಗಂಡಸರೆಲ್ಲಾ ಒಂದೆಡೆ ಸೇರಿದರೆ ಹೆಂಗಸರೆಲ್ಲಾ ಮತ್ತೊಂದೆಡೆ ಕೂತು ತಮ್ಮ ಸರದಿ ಬರುವವರೆಗೆ ಮಾತುಕತೆಯಲ್ಲಿ ತೊಡಗಿದ್ದರು.

  • ಸಮಾಜ ನಿರ್ಮಾಣಕ್ಕೆ ಶಿಕ್ಷಣ ಪೂರಕ: ಅಶ್ವತ್ಥ ನಾರಾಯಣ

    ಸಮಾಜ ನಿರ್ಮಾಣಕ್ಕೆ ಶಿಕ್ಷಣ ಪೂರಕ: ಅಶ್ವತ್ಥ ನಾರಾಯಣ

    ಬೆಂಗಳೂರು: ಶಿಕ್ಷಣ, ಸಾಮಾಜಿಕ ಸ್ಥಾನ ಮಾನಕ್ಕೆ ಸೀಮಿತವಾಗದೆ ಸಮಾಜ ನಿರ್ಮಾಣಕ್ಕೆ ಪೂರಕವಾಗಿರಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

    ನಗರದಲ್ಲಿ ಮಿಥಿಕ್ ಸೊಸೈಟಿ ಹಾಗೂ ಸಮರ್ಥ ಭಾರತ ವತಿಯಿಂದ ವಿವೇಕಾನಂದ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಬಿ ಗುಡ್ ಡು ಗುಡ್’ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

    ಹಿಂದೆ ಗುರುಕುಲ ಪದ್ಧತಿ ಇದ್ದಾಗ ಪರಿಸರ, ಆಚಾರ ವಿಚಾರಗಳ ಮೂಲಕ ಶಿಕ್ಷಣ ಪಡೆದು ಸಾಕಷ್ಟು ಜ್ಞಾನ, ತಿಳುವಳಿಕೆಯನ್ನು ಹೊಂದಿದ್ದರು. ಈಗ ಶಿಕ್ಷಣ ಸಂಸ್ಥೆಗಳ ಮುಖಾಂತರ ಶಿಕ್ಷಣ ಪಡೆಯುವ ವ್ಯವಸ್ಥೆ ಇದೆ. ಸಾಕಷ್ಟು ಸೌಲಭ್ಯವಿದ್ದರೂ ಒಳ್ಳೆ ಕೆಲಸಗಳ ಜೊತೆಗೆ ಕೆಟ್ಟ ಕೆಲಸವನ್ನು ಹೆಚ್ಚು ಮಾಡುತ್ತಿದ್ದೇವೆ. ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳದೇ ಇರುವುದೇ ಸಮಸ್ಯೆಗಳು ಉದ್ಭವಿಸಲು ಕಾರಣವಾಗಿದೆ ಎಂದರು.

    ಎಷ್ಟೇ ಮೂಲ ಸೌಕರ್ಯಗಳನ್ನು ನೀಡಿದರೂ ಅದು ಕೇವಲ ಭೌತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗುತ್ತದೆ. ವೈಯಕ್ತಿಕ ಜ್ಞಾನ ಬೆಳೆಯಬೇಕಾದರೆ ಯುವಕರು ವಿವೇಕಾನಂದರ ಸ್ಫೂರ್ತಿದಾಯಕ ಬದುಕನ್ನು ಅಳವಡಿಸಿಕೊಳ್ಳಬೇಕು. ವಿದೇಶದವರು ಭಾರತದ ಸಂಸ್ಕೃತಿ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ. ಆದರೆ ಭಾರತದಲ್ಲಿ ಸಂಶೋಧನೆ ಮಾಡುವವರ ಸಂಖ್ಯೆ ತೀರಾ ಕಡಿಮೆ ಇದೆ. ನಾವು ಶಿಕ್ಷಣವನ್ನು ಪದವಿಗೋಸ್ಕರ ಪಡೆಯುತ್ತಿದ್ದೇವೆ. ಶಿಕ್ಷಣ ಕೇವಲ ಸಾಮಾಜಿಕ ಸ್ಥಾನಮಾನಕ್ಕೆ ಸೀಮಿತವಾಗದೆ ಸಮಾಜ ನಿರ್ಮಾಣಕ್ಕೆ ಪೂರಕವಾಗಿರಬೇಕು ಎಂದು ತಿಳಿಸಿದರು.

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವಿದ್ಯಾಶಂಕರ ಮಾತನಾಡಿ ಭಾರತವನ್ನು ತಿಳಿದುಕೊಳ್ಳಬೇಕಾದರೆ ವಿವೇಕಾನಂದರನ್ನು ಓದಬೇಕು ಎಂದು ರವೀಂದ್ರನಾಥ್ ಠಾಗೋರ್ ಬಣ್ಣಿಸಿದ್ದರು. ಅದರಂತೆ ವಿವೇಕಾನಂದರು ದೇಶದ ಬಗ್ಗೆ ದೂರದೃಷ್ಟಿ ಹೊಂದಿದ್ದರು. ತನ್ನ ಭವಿಷ್ಯವನ್ನು ತನ್ನ ಸಾಮಥ್ರ್ಯದ ಮೂಲಕ ತಾನೆ ಕಟ್ಟಿಕೊಳ್ಳಬೇಕು ಆಗ ಮಾತ್ರ ವ್ಯಕ್ತಿಯು ತನ್ನ ಗುರಿ ತಲುಪಲು ಸಾಧ್ಯ ಎಂಬುದು ವಿವೇಕಾನಂದರ ನಂಬಿಕೆಯಾಗಿತ್ತು. ವಿವೇಕಾನಂದರು ಮಹಿಳೆಯರ ಮೇಲೆ ವಿಶೇಷ ಗೌರವ ಹೊಂದಿದ್ದರು. ಸ್ತ್ರೀಯರನ್ನು ಬಲ ಪಡಿಸಿದರೆ ರಾಷ್ಟ್ರವೂ ಬಲಿಷ್ಠವಾಗುತ್ತದೆ ಎಂಬ ಅವರ ಕನಸಿನಂತೆ ಈಗ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ ಎಂದರು.

    ಪ್ರಬಂಧ ಸ್ಪರ್ಧೆಯಲ್ಲಿ ಬೆಳಗಾವಿಯ ಕಿತ್ತೂರಿನ ವಿಜಯಾ ಪಾಟೀಲ್ ಪ್ರಥಮ ಸ್ಥಾನ, ಬೆಂಗಳೂರಿನ ಪೂಜಾ ಡಿ.ಎಸ್ ದ್ವಿತೀಯ, ತುಮಕೂರಿನ ಭಾಗ್ಯಲಕ್ಷ್ಮೀ ಬಿ.ಆರ್ ತೃತೀಯ ಸ್ಥಾನ ಪಡೆದಿದ್ದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಬಹುಮಾನ ವಿತರಿಸಿದರು. ಮಿಥಿಕ್ ಸೊಸೈಟಿಯ ಕಾರ್ಯದರ್ಶಿ ವಿ.ನಾಗರಾಜ್, ಸಮರ್ಥ ಭಾರತದ ಮಾರ್ಗದರ್ಶಿ ನಾ.ತಿಪ್ಪೇಸ್ವಾಮಿ, ಪ್ರೊ.ನರಹರಿ ಸೇರಿದಂತೆ ಮತ್ತಿತರರು ಹಾಜರಿದ್ದರು.

  • ಸೊಸೈಟಿ ಚುನಾವಣೆಯಲ್ಲಿ ಅನರ್ಹಗೊಳಿಸಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

    ಸೊಸೈಟಿ ಚುನಾವಣೆಯಲ್ಲಿ ಅನರ್ಹಗೊಳಿಸಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

    ಕೊಪ್ಪಳ: ರೈತರಿಗೆ ಆರ್ಥಿಕ ಸಹಕಾರಿಯಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶೇರುದಾರರ ಪೈಕಿ ಶೇ.90ರಷ್ಟು ಸದಸ್ಯರನ್ನ ಅನರ್ಹಗೊಳಿಸಿ, ಅರ್ಹತೆ ಪಟ್ಟಿ ಸಿದ್ದಪಡಿಸಿ ಚುನಾವಣೆ ನಡೆಸಲು ಸಂಘ ಮುಂದಾಗಿದೆ. ಈ ಹಿನ್ನೆಲೆ ಇಡೀ ಗ್ರಾಮಸ್ಥರು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ.

    ಗುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಈ ಸಂಘದಲ್ಲಿ ಗುಂಡೂರು, ಗುಂಡೂರು ಕ್ಯಾಂಪ್, ಕಾಮಗುಂಡಮ್ಮ ಕ್ಯಾಂಪ್, ತಿಮ್ಮರೇಶ ಕ್ಯಾಂಪ್ ಹಾಗೂ ಲಕ್ಷ್ಮೀ ಕ್ಯಾಂಪ್‍ನ ಸುಮಾರು 1,289 ರೈತ ಸದಸ್ಯರು ಶೇರು ಹೊಂದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಶೇ 10ರಷ್ಟು ಜನರಿಗೆ ಮಾತ್ರ ಅರ್ಹರು ಎನ್ನುವ ಪಟ್ಟಿಯನ್ನು ಸಂಘ ಬಹಿರಂಗ ಪಡಿಸಿದೆ. ಈ ಹಿನ್ನೆಲೆ ಕ್ಯಾಂಪ್ ಮತ್ತು ಗ್ರಾಮಗಳ ಎಲ್ಲಾ ರೈತ ಶೇರುದಾರರು ಹೋರಾಟ ನಡೆಸಿ, ಸಂಘದಲ್ಲಿ ರಾಜಕೀಯ ನುಸುಳಿ, ಕುತಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ.

    ಸೊಸೈಟಿಯ ಚುನಾವಣೆ ಪ್ರಾರಂಭವಾಗುತ್ತದೆ ಎನ್ನುವ ಮುನ್ಸೂಚನೆ ಅರಿತಿದ್ದ ಗ್ರಾಮಸ್ಥರಿಗೆ ಅಸಲಿ ವಿಷಯ ತಿಳಿದಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ನಿಗದಿತ ವೇಳೆ ಪ್ರಾರಂಭವಾಗುತ್ತಿದ್ದಂತೆ ಅರ್ಹತೆ, ಅರ್ನಹತೆ ಬಗ್ಗೆ ಸಂಘದ ನೋಟಿಸ್ ಬೋರ್ಡಿನಲ್ಲಿ ಬಹಿರಂಗಗೊಂಡಿದ್ದರಿಂದ ಸೊಸೈಟಿ ಮುಂದೆ ನೂರಾರು ರೈತರು ಜಮಾಗೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

    ಚುನಾವಣೆಯಲ್ಲಿ ಸ್ಪರ್ಧಿಸುವ ಮತ್ತು ಮತದಾನದ ಹಕ್ಕು ಕಳೆದುಕೊಂಡ ನೂರಾರು ರೈತರು ರಸ್ತೆ ಮಧ್ಯದಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ನಡೆಸಿದರು. ರೈತರಿಗೆ ಸಹಾಯ, ಸಹಕಾರಕ್ಕೆ ಅನುಕೂಲವಾಗಬೇಕಾಗಿದ್ದ ಸೊಸೈಟಿಯಲ್ಲಿ ರಾಜಕೀಯ ನುಸುಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಇಡೀ ಚುನಾವಣೆ ಪ್ರಕ್ರಿಯೆ ಬಹಿಷ್ಕರಿಸಲು ತೀರ್ಮಾನಿಸಿದರು. ಜೊತೆಗೆ ಸೊಸೈಟಿ ಕೇವಲ ವ್ಯವಸ್ಥಿತ ಗುಂಪಿನ ಕಪಿಮುಷ್ಠಿಯೊಳಗೆ ಸೇರುವ ಹುನ್ನಾರವಿದು ಎಂದು ಆತಂಕ ವ್ಯಕ್ತಪಡಿಸಿದರು. ಚುನಾವಣೆ ಪ್ರಕ್ರಿಯೆಯನ್ನು ರದ್ದು ಪಡಿಸಬೇಕು, ಸೊಸೈಟಿಯವರ ಕುತಂತ್ರದಿಂದ ಸಿದ್ಧಪಡಿಸಿದ ಅವೈಜ್ಞಾನಿಕ ಪ್ರಕಟಣೆಯನ್ನು ಸಂಪೂರ್ಣ ರದ್ದುಗೊಳಿಸಿ ಹೊಸ ಪಟ್ಟಿ ತಯಾರು ಮಾಡಿ. ಎಲ್ಲ ರೈತರಿಗೆ ತಮ್ಮ ಹಕ್ಕು ಚಲಾಯಿಸುವಂತೆ ಅವಕಾಶ ಕೊಡಿ ಎಂದು ಒತ್ತಾಯಿಸಿ ಸಹಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳ ಬಳಿ ಗ್ರಾಮಸ್ಥರ ನಿಯೋಗ ತೆರಳಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

    ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೂ ಮುನ್ನ ಸಾಲಗಾರರು ಮತ್ತು ಸಾಲಗಾರರಲ್ಲದವರ ಪಟ್ಟಿ ಮಾಡಲಾಗಿದೆ. ಒಟ್ಟು 1,289 ಶೇರುದಾರ ಮತದಾರರು ಇದ್ದಾರೆ. ಅದರಲ್ಲಿ 864 ಜನ ಸಾಲಗಾರರಲ್ಲದ ಕ್ಷೇತ್ರದ ಮತದಾರರು. 485 ಜನರು ಸಾಲಗಾರರ ಕ್ಷೇತ್ರದ ಮತದಾರರು. ಒಟ್ಟು 1,289 ಮತದಾರರು ಈ ಸೊಸೈಟಿಯ ವ್ಯವಹಾರಕ್ಕೆ ಒಳಪಟ್ಟವರಾಗಿದ್ದಾರೆ. ಆದರೆ ಸೊಸೈಟಿ ಆಡಳಿತ ಮಂಡಳಿ ಕೇವಲ 111 ಜನರನ್ನು ಮಾತ್ರ ಚುನಾವಣೆಗೆ ಅರ್ಹರು ಎಂದು ಅಂತಿಮ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಸಾಲಗಾರರ ಕ್ಷೇತ್ರದ 85 ಮತದಾರರು ಮತ್ತು ಸಾಲಗಾರರಲ್ಲದ 26 ಮಂದಿಯನ್ನು ಸೇರಿಸಿ ಒಟ್ಟು 111 ಜನರನ್ನು ಮಾತ್ರ ಚುನಾವಣೆ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಸಹಕಾರಿ ಕಾಯ್ದೆ ಅಡಿಯಲ್ಲಿ ಅರ್ಹರನ್ನಾಗಿ ಮಾಡಿದ್ದಾರೆ. ಈ ಗೊಂದಲದ ಹಿನ್ನೆಲೆ ಚುನಾವಣೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

    ಇದರಿಂದಾಗ 1,178 ರೈತರು ಎಲ್ಲಾ ಅರ್ಹತೆ ಹಕ್ಕು ಕಳೆದುಕೊಂಡಿದ್ದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊಸೈಟಿಯ ಈ ನಡೆಯನ್ನು ಖಂಡಿಸಿ ಗ್ರಾಮಸ್ಥರೆಲ್ಲರೂ ಚುನಾವಣೆ ಬಹಿಷ್ಕರಿಸಲು ಸಿದ್ಧರಾಗಿದ್ದಾರೆ. ಸೊಸೈಟಿಯ ಆಡಳಿತ ಮಂಡಳಿ ತಮಗೆ ಬೇಕಾದವರಿಗೆ ಮಾತ್ರ ಅರ್ಹತೆ ನೀಡಿ ಸರ್ಕಾರದ ನೀತಿ ನಿಯಮಾವಳಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಐದು ವರ್ಷದಲ್ಲಿ ನಮಗೆ ಸಾಮಾನ್ಯ ಸಭೆ ಕುರಿತಾಗಿ ಒಂದು ದಿನವೂ ಸರಿಯಾದ ಮಾಹಿತಿ ನೀಡದೆ ನಮ್ಮನ್ನು ದಾರಿ ತಪ್ಪಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

  • ಅಮಾನವೀಯ ದುರಂತಗಳಿಗೆ ಅಂತ್ಯ ಹಾಡುವ ಸಮಯ ಇದು : ಪಶುವೈದ್ಯೆ ಪ್ರಕರಣಕ್ಕೆ ಕೊಹ್ಲಿ ಕಿಡಿ

    ಅಮಾನವೀಯ ದುರಂತಗಳಿಗೆ ಅಂತ್ಯ ಹಾಡುವ ಸಮಯ ಇದು : ಪಶುವೈದ್ಯೆ ಪ್ರಕರಣಕ್ಕೆ ಕೊಹ್ಲಿ ಕಿಡಿ

    ನವದೆಹಲಿ: ತೆಲಂಗಾಣದಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರ ಮಾಡಿ ನಂತರ ಸುಟ್ಟು ಹಾಕಿದ ಅಮಾನವೀಯ ಘಟನೆ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಟ್ವೀಟ್ ಮಾಡಿದ್ದು, ಸಮಾಜವಾಗಿ ನಾವು ಈ ರೀತಿಯ ದುರಂತಗಳಿಗೆ ಅಂತ್ಯವಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದಾರೆ.

    ನವೆಂಬರ್ 27 ರಂದು 26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಬೈಕ್ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ, ಮೂವರು ಕ್ಲೀನರ್ ಗಳು ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದರು.

    ಪ್ರಿಯಾಂಕ ಅವರ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿದ್ದು, ಭಾರತದದ್ಯಾಂತ ಸೆಲೆಬ್ರಿಟಿಗಳು ಸೇರಿದಂತೆ ಸಾರ್ವಜನಿಕರು ಈ ವಿಚಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈಗ ಈ ವಿಚಾರವನ್ನು ಖಂಡಿಸಿ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ ಅವರು, ಹೈದರಾಬಾದ್‍ನಲ್ಲಿ ನಡೆದದ್ದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ. ಸಮಾಜವಾಗಿ ನಾವು ಅಧಿಕಾರ ವಹಿಸಿಕೊಂಡು ಈ ಅಮಾನವೀಯ ದುರಂತಗಳಿಗೆ ಅಂತ್ಯ ಹಾಡುವ ಸಮಯ ಇದು ಎಂದು ಟ್ವೀಟ್ ಮಾಡಿದ್ದಾರೆ.

    ಹೈದರಾಬಾದ್‍ನಲ್ಲಿ ಪ್ರಿಯಾಂಕಾರೆಡ್ಡಿ ಆಗಿರಲಿ, ತಮಿಳುನಾಡಿನಲ್ಲಿ ರೋಜಾ ಆಗಿರಲಿ ಅಥವಾ ರಾಂಚಿಯಲ್ಲಿ ಕಾನೂನು ವಿದ್ಯಾರ್ಥಿ ಸಾಮೂಹಿಕ ಅತ್ಯಾಚಾರವಾಗಿರಲಿಲ್ಲ. ಈ ರೀತಿಯ ಕೃತ್ಯಗಳಿಂದ ನಾವು ಸಮಾಜವಾಗಿ ಮಾನವಿಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ತೋರುತ್ತದೆ. ನಿರ್ಭಯಾ ಪ್ರಕರಣ ನಡೆದು 7 ವರ್ಷಗಳು ಕಳೆದಿದೆ. ಆದರೆ ನಮ್ಮ ನೈತಿಕತೆ ಬದಲಾಗಿಲ್ಲ. ಇದನ್ನು ನಿಲ್ಲಿಸಲು ನಮಗೆ ಕಠಿಣ ಕಾನೂನುಗಳು ಬೇಕಾಗುತ್ತವೆ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ನಟಿ ಅನುಷ್ಕಾ ಶೆಟ್ಟಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿದ್ದು, ಅಮಾಯಕಿ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿ ಕೊಲ್ಲಲಾಗಿದೆ. ಇದು ಇಡೀ ಮನುಕುಲವನ್ನೇ ಕದಲಿಸುವ ವಿಚಾರ. ಪೈಶಾಚಿಕ ಕೃತ್ಯವೆಸಗಿ ಪ್ರಿಯಾಂಕಾಳನ್ನು ಕೊಂದ ಪಾಪಿಗಳನ್ನು ಪ್ರಾಣಿಗಳಿಗೆ ಹೋಲಿಸಿದರೆ ಅವು ಕೂಡ ನಾಚಿಕೆ ಪಟ್ಟುಕೊಳ್ಳುತ್ತವೆ ಎಂದಿದ್ದಾರೆ. ಅಲ್ಲದೆ ಈ ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ ಎಂದು ಪ್ರಶ್ನಿಸಿದ್ದಾರೆ. ಶಿಕ್ಷೆ ಆಗೋವರೆಗೂ ಹೋರಾಟ ನಡೆಸೋಣ ಎಂದು ಪಶುವೈದ್ಯೆಯ ದಾರುಣ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

    ರಶ್ಮಿಕಾ ಮಂದಣ್ಣ ಕೂಡ ತಮ್ಮ ಟ್ವಿಟ್ಟರಿನಲ್ಲಿ, ಸುರಕ್ಷತೆ ಎಲ್ಲಿದೆ? ಕೆಟ್ಟ ವಿಷಯಗಳು ಹಾಗೂ ಹಿಂಸಾಚಾರವನ್ನು ನಿರ್ಲಕ್ಷ್ಯಿಸುವುದರಿಂದ ಪರಿಹಾರ ಸಿಗುವುದಿಲ್ಲ. ನಿಮಗೆ ಅಸುರಕ್ಷತೆ ಎನಿಸಿದಾಗ ದಯವಿಟ್ಟು ಸಹಾಯಕ್ಕಾಗಿ ತಲುಪಿ. ಹಾಗೆಯೇ ನಿಮ್ಮ ಸಹಾಯದ ಅಗತ್ಯ ಇರುವವರ ಜೊತೆ ಇರಿ ಎಂದು ತೆಲಂಗಾಣ ರಾಜ್ಯದ ಪ್ರತಿ ಜಿಲ್ಲೆಯ ಪೊಲೀಸ್ ಠಾಣೆ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

    https://www.instagram.com/p/B5cZd–HF3p/?utm_source=ig_embed

    ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಲಾರಿ ಡ್ರೈವರ್ ಆರೀಫ್ ಮತ್ತು ಇನ್ನುಳಿದ ಮೂವರು ಕ್ಲೀನರ್ ಗಳಾದ ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂಟ ಚೆನ್ನಾಕೇಶಾವುಲು ಅನ್ನು ಪೊಲೀಸ್ ಅರೆಸ್ಟ್ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶಿಸಿದೆ.

  • ಸರ್ಕಾರಿ ಉಗ್ರಾಣದಲ್ಲಿ ರಸಗೊಬ್ಬರ ದಾಸ್ತಾನು: ಇದು ಕೈ ನಾಯಕನ ದರ್ಬಾರ್

    ಸರ್ಕಾರಿ ಉಗ್ರಾಣದಲ್ಲಿ ರಸಗೊಬ್ಬರ ದಾಸ್ತಾನು: ಇದು ಕೈ ನಾಯಕನ ದರ್ಬಾರ್

    ರಾಯಚೂರು: ಭಾರತ ಸರ್ಕಾರ ನಿರ್ಮಿಸಿದ ಉಗ್ರಾಣವನ್ನು ರೈತ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಂಗ್ರೆಸ್ಸಿನ ಮುಖಂಡರೊಬ್ಬರು ರಸಗೊಬ್ಬರಗಳ ದಾಸ್ತಾನು ಕೊಠಡಿಯಾಗಿ ಬದಲಾಯಿಸಿಕೊಂಡು ಅಂದಾ ದರ್ಬಾರ್ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಹೌದು, ಬರಗಾಲ ಹಾಗೂ ಸಾಲದ ಹೊರೆಯಿಂದ ರಾಜ್ಯದ ರೈತರು ಒಂದೆಡೆ ಕಂಗೆಟ್ಟು ಕುಳಿತಿದ್ದರೆ, ಜಿಲ್ಲೆಯ ರೈತರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣ ಸರ್ವಾಧಿಕಾರಿ ಧೋರಣೆಯಿಂದ ಅಂದಾ ದರ್ಬಾರ್ ನಡೆಸುತ್ತಿದ್ದಾರೆ. ಇಡೀ ಸಂಘವನ್ನು ತನ್ನ ಸ್ವಂತ ಆಸ್ತಿಯಂತೆ ಬಳಸಿಕೊಂಡಿದ್ದಲ್ಲದೇ, ಕಚೇರಿ ಹಾಗೂ ಉಗ್ರಾಣವನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

    ಭಾರತ ಸರ್ಕಾರ ಎಣ್ಣೆ ಕಾಳು ಉತ್ಪಾದನೆ ಯೋಜನೆ ಅಡಿಯಲ್ಲಿ ನಿರ್ಮಿಸಿದ ಉಗ್ರಾಣವು, ರೈತರ ಅನುಕೂಲಕ್ಕೆ ಬರುವ ಬದಲು ಅಧ್ಯಕ್ಷ ನಾರಾಯಣನ ಸ್ವಂತ ಆಸ್ತಿಯಾಗಿ ಮಾರ್ಪಟ್ಟಿದೆ. ನಾರಾಯಣ ರಸಗೊಬ್ಬರ ವ್ಯಾಪಾರಿಯಾಗಿದ್ದು ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತನ್ನ ರಸಗೊಬ್ಬರದ ದಾಸ್ತಾನನ್ನು ಉಗ್ರಾಣದಲ್ಲೇ ಸಂಗ್ರಹಿಸಿಟ್ಟಿದ್ದಾರೆ. ಈ ಬಗ್ಗೆ ಉಳಿದ ಸದಸ್ಯರು ಪ್ರಶ್ನಿಸಿದರೆ, ಅವರಿಗೆ ಧಮ್ಕಿ ಹಾಕುತ್ತಿದ್ದಾರೆ.

    ಕಚೇರಿಯನ್ನ ನೋಡಿದರೆ, ಎಂದೂ ಬಳಸದೇ ಇರುವ ಕುರ್ಚಿ, ಟೇಬಲ್‍ಗಳು ಸಂಪೂರ್ಣ ಧೂಳು ಹಿಡಿದಿವೆ. ರೈತರಿಂದ ಎಣ್ಣೆ ಕಾಳುಗಳನ್ನ ಖರೀದಿಸಿ ಒಕ್ಕೂಟಕ್ಕೆ ನೀಡಬೇಕಾದ ಅಧ್ಯಕ್ಷ, ಕಳೆದ ಮೂರು ವರ್ಷದಿಂದ ಕನಿಷ್ಠ ಒಂದು ಸದಸ್ಯರ ಹಾಗೂ ನಿರ್ದೇಶಕರ ಸಭೆಯನ್ನು ಸಹ ಕರೆದಿಲ್ಲ. ಕೇವಲ ರಸಗೊಬ್ಬರ ಮಾರಾಟಕ್ಕೆ ಮಾತ್ರ ಉಗ್ರಾಣ ಹಾಗೂ ಕಚೇರಿಯ ಬಾಗಿಲನ್ನು ತೆರೆಯುತ್ತಿದ್ದಾರೆ. ಯಾಕೆ ಹೀಗೆ ಎಂದು ಯಾರಾದರೂ ಪ್ರಶ್ನಿಸಿದರೆ, ಉಗ್ರಾಣವನ್ನು ಒಂದು ತಿಂಗಳ ಮಟ್ಟಿಗೆ ಬಾಡಿಗೆ ಕೊಟ್ಟಿದ್ದೇನೆ. ಅದರಲ್ಲಿ ತಪ್ಪೇನು ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

    ಉಗ್ರಾಣದ ಪಕ್ಕದಲ್ಲೇ ಅಂಗನವಾಡಿ ಶಾಲೆಯಿದ್ದು ರಸಗೊಬ್ಬರದ ವಾಸನೆಗೆ ಮಕ್ಕಳು ತತ್ತರಿಸಿ ಹೋಗಿದ್ದಾರೆ. ವಾಸನೆಯಿಂದಾಗಿ ಪೋಷಕರು ಮಕ್ಕಳನ್ನೂ ಸಹ ಅಂಗನವಾಡಿ ಶಾಲೆಗೆ ಕಳುಹಿಸುವುದನ್ನೇ ಬಿಟ್ಟಿದ್ದಾರೆ ಎಂದು ಸ್ಥಳೀಯರಾದ ನಲ್ಲಾರೆಡ್ಡಿ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಅಧ್ಯಕ್ಷನ ಅಂದಾ ದರ್ಬಾರ್ ಕುರಿತು ಪ್ರತಿಕ್ರಿಯಿಸಿರುವ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ತಿಪ್ಪಣ್ಣನವರು, ಈ ಕೂಡಲೇ ಪರಿಶೀಲನೆ ನಡೆಸಿ, ವರದಿ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

    ಹೇಳುವವರು ಕೇಳುವವರು ಯಾರೂ ಇಲ್ಲಾ ಅಂದರೆ, ಪ್ರಭಾವಿಗಳು ಹೇಗೆಲ್ಲಾ ತಮ್ಮ ದರ್ಪ ಮೆರೆಯುತ್ತಾರೆ ಅನ್ನುವುದಕ್ಕೆ ಸಹಕಾರ ಸಂಘದ ಉಗ್ರಾಣದ ಸ್ಥಿತಿಯೇ ಉದಾಹರಣೆ. ಈಗಲಾದರೂ ಸಂಬಂಧಪಟ್ಟವರು ಈ ಕೂಡಲೇ ಎಚ್ಚೆತ್ತು, ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv