Tag: soil

  • 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು

    3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು

    ನವದೆಹಲಿ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ಇನ್ನೊಂದು ತಿಂಗಳಷ್ಟೇ ಬಾಕಿಯಿದೆ. ಈ ಐತಿಹಾಸಿಕ ದಿನಕ್ಕಾಗಿ ಕೇವಲ ಭಾರತವಷ್ಟೇ ಅಲ್ಲ ವಿದೇಶಗಳೂ ಕಾತುರದಿಂದ ಕಾಯುತ್ತಿದೆ. ಇದೀಗ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್ (Thailand) ವಿಶೇಷ ಮಣ್ಣನ್ನು (Soil) ಕಳುಹಿಸುತ್ತಿದೆ.

    ಹೌದು, ಅಯೋಧ್ಯೆಯಿಂದ 3,500 ಕಿ.ಮೀ ದೂರದಲ್ಲಿರುವ ಥೈಲ್ಯಾಂಡ್‌ನ ಅಯುತಾಯ (Ayutthaya) ನಗರದಿಂದ ವಿಶೇಷ ಮಣ್ಣನ್ನು ತರಲಾಗುತ್ತಿದೆ. 2024ರ ಜನವರಿಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ರಾಮ ಮಂದಿರಕ್ಕೆ ಥೈಲ್ಯಾಂಡ್ ಮಣ್ಣನ್ನು ಕಳುಹಿಸುತ್ತಿದೆ.

    ಭಾರತ-ಥೈಲ್ಯಾಂಡ್ ಸಂಬಂಧ:
    ಥೈಲ್ಯಾಂಡ್‌ನ ಸಿಯಾಮ್ ಸಾಮ್ರಾಜ್ಯದಲ್ಲಿರುವ ಅಯುತಾಯಾವನ್ನು 13ನೇ ಶತಮಾನದಲ್ಲಿ ಸ್ಥಾಪಿಸಲಾಗಿದೆ ಎಂದು ನಂಬಲಾಗಿದೆ. ಸಿಯಾಮ್ ಸಾಮ್ರಾಜ್ಯದ ರಾಜಧಾನಿ ಮತ್ತು ಆರ್ಥಿಕ ಕೇಂದ್ರವೂ ಆಗಿತ್ತು. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್‌ನಿಂದ ಈ ರೀತಿ ಕಳುಹಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ರಾಮ ಮಂದಿರಕ್ಕಾಗಿ ಥೈಲ್ಯಾಂಡ್‌ನಿಂದ ವಿಶೇಷ ನೀರನ್ನು ಕಳುಹಿಸಲಾಗಿತ್ತು. ಈ ಕ್ರಿಯೆಯು ಥೈಲ್ಯಾಂಡ್ ಮತ್ತು ಭಾರತದ ನಡುವಿನ ಅನನ್ಯ ಸಾಂಸ್ಕೃತಿಕ ಸಂಬಂಧಗಳಿಂದ ಹುಟ್ಟಿಕೊಂಡಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಆಳವಾಗಲಿದೆ. ವಿಶ್ವ ಹಿಂದೂ ಪರಿಷತ್ (VHP) ಕೈಗೊಂಡ ಉಪಕ್ರಮ ಮತ್ತು ವಿಎಚ್‌ಪಿಯ ಥೈಲ್ಯಾಂಡ್ ಅಧ್ಯಾಯದ ಅಧ್ಯಕ್ಷ ಸುಶೀಲ್‌ಕುಮಾರ್ ಸರಾಫ್ ಅವರ ಸಹಾಯದಿಂದ ಇದು ಸಾಧ್ಯವಾಗಿದೆ.

    ಭಾರತ ಮತ್ತು ಥೈಲ್ಯಾಂಡ್ ಬಲವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಬಂಧಗಳನ್ನು ಹೊಂದಿವೆ. ಥೈಲ್ಯಾಂಡ್‌ನ ಹಲವಾರು ರಾಜರು ರಾಮನ ವಂಶಸ್ಥರ ಭಾಗವಾಗಿದ್ದಾರೆ. ಇಲ್ಲಿರುವ ಪ್ರತಿಯೊಬ್ಬ ರಾಜನಿಗೂ ಅವರ ಹೆಸರಿನಲ್ಲಿ ರಾಮನ ಬಿರುದು ಇದೆ, ಇದು ಇಲ್ಲಿನ ಹಳೆಯ ಸಂಪ್ರದಾಯವಾಗಿದೆ ಎಂದು ವಿಶ್ವ ಹಿಂದೂ ಫೌಂಡೇಶನ್ (WHF) ಸ್ಥಾಪಕ ಮತ್ತು ಜಾಗತಿಕ ಅಧ್ಯಕ್ಷರಾದ ಸ್ವಾಮಿ ವಿಜ್ಞಾನಾನಂದ ತಿಳಿಸಿದ್ದಾರೆ.

    ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್ ಶ್ರೀಮಂತ ಹಿಂದೂ ಸಾಂಸ್ಕೃತಿಕ ಪರಂಪರೆಗೆ ನೆಲೆಯಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ಸಾಕ್ಷಿಯಾಗುವ 51 ದೇಶಗಳನ್ನು ನಾವು ಗುರುತಿಸಿದ್ದೇವೆ. ಸಮಾರಂಭವನ್ನು ಬ್ಯಾಂಕಾಕ್‌ನಲ್ಲಿ ನೇರಪ್ರಸಾರ ಮಾಡಲಾಗುವುದು ಮತ್ತು ಪ್ರಪಂಚದಾದ್ಯಂತದ ಹಿಂದೂಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕೀರ್ತನೆ, ಭಜನೆ, ಪೂಜೆ ಮತ್ತು ಪಾರಾಯಣದಲ್ಲಿ ತೊಡಗುತ್ತಾರೆ ಎಂದು ಸ್ವಾಮಿ ವಿಜ್ಞಾನಾನಂದ ಹೇಳಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

    ಅಯೋಧ್ಯೆಯಿಂದ ಪ್ರಸಾದವನ್ನು ಆರ್ಡರ್ ಮಾಡಿದ್ದೇವೆ. ಇಲ್ಲಿ ಅಯೋಧ್ಯೆ ದೇಗುಲದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಅಯೋಧ್ಯೆಯಿಂದ ರಾಮ ಲಲ್ಲಾ ಜನ್ಮಸ್ಥಳದ ಚಿತ್ರವನ್ನು ಸಹ ತಂದಿದ್ದೇವೆ. ಚಿತ್ರದ ಪ್ರತಿಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಅವರು ಹೇಳಿದರು.

    ಅಯುತಾಯ

    ರಾಮ – ಅಯುತಾಯಕ್ಕೆ ಸಂಪರ್ಕ ಏನು?
    ಅಯುತಾಯ ಥಾಯ್ಲೆಂಡ್‌ನ ಪ್ರಸಿದ್ಧ ನಗರ. ಅಲ್ಲಿನ ರಾಜರು ‘ರಾಮತಿಬೋಧಿ’ (ಲಾರ್ಡ್ ರಾಮ) ಎಂಬ ಬಿರುದನ್ನು ಹೊಂದಿದ್ದರು. ರಾಮಾಯಣದಲ್ಲಿ ಅಯೋಧ್ಯೆಯನ್ನು ಭಗವಾನ್ ರಾಮನ ರಾಜಧಾನಿ ಎಂದು ಉಲ್ಲೇಖಿಸಿರುವ ಸಂದರ್ಭಕ್ಕೆ ಅಯುತಾಯವನ್ನು ಜೋಡಿಸಲಾಗಿದೆ. ಕ್ರಿ.ಶ. 1351 ರಿಂದ ಸಯಾಮಿ ಆಡಳಿತಗಾರರ ರಾಜಧಾನಿಯಾಗಿದ್ದ ಅಯುತಾಯವನ್ನು 1767 ರಲ್ಲಿ ಬರ್ಮಾ ಪಡೆಗಳು ಲೂಟಿ ಮಾಡಿ ಸಂಪೂರ್ಣವಾಗಿ ನಾಶಪಡಿಸಿದವು. ರಾಮಕೀನ್ ಎಂದು ಕರೆಯಲ್ಪಡುವ ಥಾಯ್ ಧಾರ್ಮಿಕ ಪಠ್ಯ ಥಾಯ್ ರಾಮಾಯಣಕ್ಕೆ ಸಮಾನವಾದ ಸ್ಥಾನಮಾನವನ್ನು ಹೊಂದಿದೆ. ‘300 ರಾಮಾಯಣ’ ಪುಸ್ತಕ ಬರೆದ ರಾಮಾನುಜನ್ ಅವರು ರಾಮಕೀನಿತ್ ಹಾಗೂ ವಾಲ್ಮೀಕಿಯವರ ರಾಮಾಯಣವನ್ನು ಹೋಲಿಸಿದ್ದಾರೆ. ಇದನ್ನು 18ನೇ ಶತಮಾನದಲ್ಲಿ ಕಿಂಗ್ ರಾಮ 1 ಹೊಸದಾಗಿ ರಚಿಸಿದ್ದಾನೆ ಎಂದು ನಂಬಲಾಗಿದೆ. ಈ ಪುಸ್ತಕದಲ್ಲಿ ಮುಖ್ಯ ಖಳನಾಯಕ ತೋತ್ಸಕನ್ ಹಿಂದೂ ಗ್ರಂಥದ ಲಂಕಾ ರಾಜ ರಾವಣ ಎನ್ನಲಾಗಿದೆ. ರಾಮನ ಆದರ್ಶವನ್ನು ಈ ಪುಸ್ತಕದ ನಾಯಕನಲ್ಲಿ ಚಿತ್ರಿಸಲಾಗಿದೆ.

    ಭಾರತ ಮತ್ತು ಥೈಲ್ಯಾಂಡ್ ನಡುವಿನ ಆಳವಾದ ಸಾಂಸ್ಕೃತಿಕ ಹೋಲಿಕೆಗಳು ಇಷ್ಟಕ್ಕೇ ಸೀಮಿತವಾಗಿಲ್ಲ. ಕಾರ್ತಿಕ ಪೂರ್ಣಿಮಾ ಮತ್ತು ದೀಪಾವಳಿಯನ್ನು ಭಾರತದಲ್ಲಿ ಆಚರಿಸಲಾಗುತ್ತದೆ. ಅದೇ ರೀತಿ ಥೈಲ್ಯಾಂಡ್‌ನಲ್ಲಿ ‘ಲಾಯ್ ಕ್ರಾಥೋಂಗ್’ ಹಬ್ಬವನ್ನು ದೀಪಗಳ ಹಬ್ಬವಾಗಿ ಆಚರಿಸಲಾಗುತ್ತದೆ. ಇದು ಭಾರತದ ದೀಪಾವಳಿಗೆ ಹೋಲುತ್ತದೆ. ಇದು ಥೈಲ್ಯಾಂಡ್‌ನ ಪ್ರಮುಖ ಹಬ್ಬವಾಗಿದೆ. ಈ ಸಮಯದಲ್ಲಿ ಜನರು ಶಿವ, ಪಾರ್ವತಿ, ಗಣೇಶ ಮತ್ತು ಇಂದ್ರನ ವಿಗ್ರಹಗಳನ್ನು ಪೂಜಿಸುತ್ತಾರೆ. ಇದನ್ನೂ ಓದಿ: ಮೇ ಕಳೆದ ಬಳಿಕ ಸರ್ಕಾರ ಪತನ ಖಚಿತ: ಹೆಚ್‍ಡಿಕೆ ಸ್ಫೋಟಕ ಭವಿಷ್ಯ

  • ಪರಿಸರ ಉಳಿಸಲು ಸರ್ಕಾರದಿಂದ ಇಕಾಲಾಜಿಕಲ್ ಬಜೆಟ್ ಮಂಡನೆ: ಬೊಮ್ಮಾಯಿ

    ಪರಿಸರ ಉಳಿಸಲು ಸರ್ಕಾರದಿಂದ ಇಕಾಲಾಜಿಕಲ್ ಬಜೆಟ್ ಮಂಡನೆ: ಬೊಮ್ಮಾಯಿ

    ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಪರಿಸರ ಉಳಿಸಲು ಸರ್ಕಾರದಿಂದ ಇಕಾಲಾಜಿಕಲ್ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಉಳಿಸಲು 100 ಕೋಟಿ ಮೊತ್ತದ ಇಕಾಲಾಜಿಕಲ್ ಬಜೆಟ್ ಮಂಡನೆ ಮಾಡುತ್ತೇವೆ. ಇದರ ಜೊತೆಗೆ ಎಲ್ಲೆಲ್ಲಿ ಅರಣ್ಯ ನಾಶ ಆಗಿದೆಯೋ, ಬಂಜರು ಭೂಮಿ ಇದೆಯೋ ಅದನ್ನು ಪುನಶ್ಚೇತನ ಮಾಡುತ್ತೇವೆ. ರಾಜ್ಯದಲ್ಲಿ ಅರಣ್ಯವು 24% ಇದೆ. ಇದನ್ನು ಮುಂದಿನ 5 ವರ್ಷಗಳಲ್ಲಿ 30%ಕ್ಕೆ ಏರಿಸುವ ಯೋಜನೆ ಹಾಕಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

    ಪಂಚಭೂತಗಳಲ್ಲಿ ಶ್ರೇಷ್ಠವಾದುದ್ದು ಮಣ್ಣು. ಮಣ್ಣಿನಲ್ಲಿ ಎಲ್ಲ ಪಂಚಭೂತಗಳೂ ಅಡಕವಾಗಿವೆ. ಆದರೆ ನಾವು ಯಾವ್ಯಾವುದೋ ಸಮಾವೇಶ ಮಾಡುತ್ತೇವೆ. ಅದರ ಜೊತೆಗೆ ನಮ್ಮ ಅಸ್ತಿತ್ವ, ಭವಿಷ್ಯಕ್ಕೆ ಕಾರಣವಾಗಿರುವ ಮಣ್ಣು ಉಳಿಸಿ ಸಮಾವೇಶ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ 2008ರಲ್ಲಿ ಯಡಿಯೂರಪ್ಪ ಭೂಚೇತನ ಕಾರ್ಯಕ್ರಮ ತಂದರು. ಭೂಚೇತನ ಮಣ್ಣಿನಲ್ಲಿರುವ ಸತ್ವ, ಸಾರ ಉಳಿಸುವ ಯೋಜನೆ ಇದಾಗಿದೆ. ಮಣ್ಣಿನಲ್ಲಿ ನೈಸರ್ಗಿಕ ಸತ್ವ, ಸಾರ ಕಮ್ಮಿ ಇದ್ದರೆ ಅದನ್ನು ಸರಿದೂಗಿಸುವ ಕಾರ್ಯಕ್ರಮವಾಗಿದೆ. ಮಣ್ಣು ಉಳಿಸಿ ಪರಿಕಲ್ಪನೆಯನ್ನು ದೂರದೃಷ್ಟಿಯಿಂದ ಅಂದೇ ಮಾಜಿ ಸಿಎಂ ಯಡಿಯೂರಪ್ಪ ಪರಿಚಯಿಸಿದರು ಎಂದರು. ಇದನ್ನೂ ಓದಿ: ಸದ್ಗುರು ಕಾಲು ಮುಟ್ಟಿ ನಮಸ್ಕರಿಸಿದ BSY – ಭಾಷಣದ ವೇಳೆ ಕೆಮ್ಮಿದಾಗ ನೀರು ತಂದುಕೊಟ್ಟ ಜಗ್ಗಿ ವಾಸುದೇವ್

    ಇದೇ ವೇಳೆ ಸದ್ಗುರು ಅವರ ಮಣ್ಣು ಉಳಿಸಿ ಅಭಿಯಾನಕ್ಕೆ ಸರ್ಕಾರ ಕೈಜೋಡಿಸುವ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿ ಹಾಕಿದರು. ಈ ಬಗ್ಗೆ ಮಾತನಾಡಿದ ಅವರು, ಮಣ್ಣು ಉಳಿಸಿ ಅಭಿಯಾನ ಐತಿಹಾಸಿಕ ಮಹತ್ವದ್ದಾಗಿದ್ದು, ಜಗತ್ತಿನ ಇತಿಹಾಸದ ಪುಟಗಳಲ್ಲಿ ಈ ಅಭಿಯಾನ ದಾಖಲೆ ಆಗಲಿದೆ. ಈ ಅಭಿಯಾನ ಯಶಸ್ವಿ ಆಗಿದೆ, ಮುಂದೆಯೂ ಯಶಸ್ವಿಯಾಗಲಿದೆ. ಹುಟ್ಟುವ ಮಗುವಿಗೂ ಈ ಅಭಿಯಾನ ಅವಶ್ಯಕತೆ ಇದೆ. ಸದ್ಗುರು ಅವರ ಮಣ್ಣು ಉಳಿಸಿ ಅಭಿಯಾನಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದರು. ಇದನ್ನೂ ಓದಿ: 52ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ – ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದೇಕೆ?

    Live Tv 

  • ಮಣ್ಣಿನಲ್ಲಿ ಹಂಪಿ ಕಲಾಕೃತಿ ರಚಿಸಿದ ವಿದ್ಯಾರ್ಥಿ

    ಮಣ್ಣಿನಲ್ಲಿ ಹಂಪಿ ಕಲಾಕೃತಿ ರಚಿಸಿದ ವಿದ್ಯಾರ್ಥಿ

    ಧಾರವಾಡ: ವಿಶ್ವವಿಖ್ಯಾತ ಹಂಪಿಯ ರಥದ ಮಾದರಿಯನ್ನು ವಿದ್ಯಾರ್ಥಿಯೋರ್ವ ಮಣ್ಣಿನಲ್ಲಿ ಕಲಾಕೃತಿಯನ್ನಾಗಿ ಸೃಷ್ಟಿಸಿದ್ದಾನೆ.

    Dharawada

    ಧಾರವಾಡ ಕೆಲಗೇರಿ ನಿವಾಸಿಯಾದ ವಿನಾಯಕ ಹಿರೇಮಠ ಈ ಕಲಾ ನೈಪುಣ್ಯತೆ ಮೆರೆದಿದ್ದು, ಇವನ ಈ ಕಾಲಕೃತಿ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೆಂಡ್ ಆಗಿದೆ. ಈ ಹಿನ್ನೆಲೆ ಈತನ ಕಲಾ ಪ್ರತಿಭೆಯನ್ನು ಶ್ಲಾಘಿಸಿ ಡಿಡಿ ಕಟ್ಟೆ ಎಂಬ ಸಾಹಿತ್ಯ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಇದನ್ನೂ ಓದಿ:  ಡ್ರೋನ್ ಮುಖಾಂತರ ಶಸ್ತ್ರಾಸ್ತ್ರಗಳನ್ನು ಪಡೆದ 4 ಖಲಿಸ್ತಾನಿ ಭಯೋತ್ಪಾದಕರ ಬಂಧನ

    Dharawada

    ಧಾರವಾಡದ ಕೆಲಗೇರಿಯಲ್ಲಿನ ಡಿಡಿ ಕಟ್ಟೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಿರಿಯ ಸಾಹಿತಿಗಳಾದ ಡಾ. ಹ.ವೆಂ. ಕಾಖಂಡಿಕಿ, ಹರ್ಷ ಡಂಬಳ ಹಾಗೂ ರಾಧಿಕಾ ಕಾಖಂಡಿಕಿ ಅವರು ವಿನಾಯಕರನ್ನು ಬಳಗದ ವತಿಯಿಂದ ಸನ್ಮಾನಿಸಿ ಆಶೀರ್ವಾದಿಸಿದರು. ಇದನ್ನೂ ಓದಿ: ಮಡಿಲಲ್ಲಿ ತಂಗಿಯನ್ನುಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಬಾಲಕಿಗೆ ಬೋರ್ಡಿಂಗ್ ಸ್ಕೂಲ್‍ನಲ್ಲಿ ಫ್ರೀ ಸೀಟ್

  • ಟಿ.ಬೇಗೂರು ಕೆರೆಯಲ್ಲಿ ಮಣ್ಣು ಲೂಟಿಕೋರರ ದಂಧೆ – ಅಧಿಕಾರಿಗಳ ಅಸಡ್ಡೆ

    ಟಿ.ಬೇಗೂರು ಕೆರೆಯಲ್ಲಿ ಮಣ್ಣು ಲೂಟಿಕೋರರ ದಂಧೆ – ಅಧಿಕಾರಿಗಳ ಅಸಡ್ಡೆ

    ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಟಿ. ಬೇಗೂರು ಕೆರೆಯಲ್ಲಿ ಮನಸೊ ಇಚ್ಛೆ ಮಣ್ಣು ತೆಗೆದು ಮಣ್ಣು ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

    ಜೆಸಿಬಿ ಯಂತ್ರದ ಮೂಲಕ ನೂರಾರು ಲೋಡ್ ಮಣ್ಣು ತೆಗೆದು ಕಿಡಿಗೇಡಿಗಳು ಸಾಗಿಸುತ್ತಿದ್ದರು. ಟಿ. ಬೇಗೂರಿನ ರೆವಿನ್ಯೂ ಅಧಿಕಾರಿಗಳು ಹಾಗೂ ಪಂಚಾಯತಿ ಅಧಿಕಾರಿಗಳ ಗಮನಕ್ಕೆ ಇದ್ದರೂ ತಟಸ್ಥ ನೀತಿ ಸಾಕಷ್ಟು ಅನುಮಾನಗಳ ಆರೋಪ ಕೇಳಿ ಬಂದಿದೆ. ಇನ್ನೂ ನಂಬರ್ ಪ್ಲೇಟ್ ಇಲ್ಲದ ಜೆಸಿಬಿ ಬಳಸಿ ಕೆರೆಯ ಮಣ್ಣು ಲೂಟಿ ಮಾಡುತ್ತಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದ್ದು, ಕಳೆದ ಒಂದು ವಾರದಿಂದ ಟಿ. ಬೇಗೂರು ಕೆರೆಯಲ್ಲಿ ಯಾರ ಭಯವು ಇಲ್ಲದೆ ಸುಮಾರು 6 ಲಾರಿಗಳನ್ನು ಬಳಸಿ ಮಣ್ಣು ಲೂಟಿ ಮಾಡಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ.

    ಇವೆಲ್ಲವೂ ರೆವಿನ್ಯೂ ಅಧಿಕಾರಿಗಳ ಗಮನಕ್ಕೆ ಬಂದರೂ ಜಾಣ ಕುರುಡರಂತೆ ವರ್ತನೆ ಮಾಡುತ್ತಿದ್ದು, ಮಣ್ಣು ಲೂಟಿ ಕೋರರ ಜೊತೆ ಶಾಮೀಲಾಗಿರುವ ಸಂಶಯ ವ್ಯಕ್ತವಾಗಿದೆ. ಇನ್ನಾದರೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ ಮಣ್ಣು ಲೂಟಿಕೋರರ ದಂಧೆಗೆ ಬ್ರೇಕ್ ಹಾಕಿ ಕೆರೆ ಅಭಿವೃದ್ಧಿ ಹಾಗೂ ರಕ್ಷಣೆಗೆ ಮುಂದಾಗಬೇಕಿದೆ. ಇದನ್ನೂ ಓದಿ: ಕಲುಷಿತ ಆಹಾರ ಸೇವನೆ 60 ವಿದ್ಯಾರ್ಥಿಗಳು ಅಸ್ವಸ್ಥ – ಪ್ರಾಣಾಪಾಯದಿಂದ ಪಾರು

     

  • ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

    ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

    -ಮಣ್ಣು ಅಳಿದರೆ ಮಾನವ ಅಳಿದಂತೆ

    -ಡಿಸೆಂಬರ್ 5 ಅಂತರಾಷ್ಟ್ರೀಯ ಮಣ್ಣು ದಿನ

    ಬೆಂಗಳೂರು: ಮಣ್ಣಿನಿಂದ ಜೀವ, ಮಣ್ಣಿನಿಂದ ಕಾಯ, ಮಣ್ಣು ಅಳಿದರೆ ಮಾನವ ಅಳಿದಂತೆ. ಮಣ್ಣು ಒಮ್ಮೆ ನಾಶವಾದರೆ, ಪುನಃ ಪಡೆಯಲಾಗದ ಅಮೂಲ್ಯ ಸಂಪತ್ತಾಗಿರುವುದರಿಂದ ಇದನ್ನು ಉಳಿಸಲೇಬೇಕಾದ ಮಹತ್ತರ ಜವಾಬ್ದಾರಿ ಹಾಗೂ ಕರ್ತವ್ಯ ಪ್ರತಿಯೊಬ್ಬರದ್ದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

    ಮಣ್ಣು ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಧ್ಯೇಯವಾಕ್ಯದೊಂದಿಗೆ ಈ ದಿನ ಆಚರಣೆಗೊಳ್ಳುತ್ತದೆ. ವಿಶ್ವ ಮಣ್ಣು ದಿನ-5 ಡಿಸೆಂಬರ್ 2021ರ ಧ್ಯೇಯ ‘ಮಣ್ಣಿನ ಸವುಳಾಗುವಿಕೆಯನ್ನು ತಡೆಗಟ್ಟಿ, ಮಣ್ಣಿನ ಉತ್ಪಾದಕತೆ ಹೆಚ್ಚಿಸಿ’ ಎಂದು ಘೋಷಿಸಿದೆ. ಮಣ್ಣು ಪ್ರಕೃತಿಯ ಒಂದು ಅಮೂಲ್ಯ ಕೊಡುಗೆ. ಮನುಷ್ಯ , ಪ್ರಾಣಿ, ಜೀವಿಗಳು, ಸಸ್ಯಗಳಿಗೆ ಆಧಾರವೇ ಮಣ್ಣು. ಮಣ್ಣಿನಿಂದ ಜೀವ, ಮಣ್ಣಿನಿಂದ ಕಾಯ, ಮಣ್ಣು ಅಳಿದರೆ ಮಾನವ ಅಳಿದಂತೆ ಎಂದು ತಿಳಿಸಿದ ಪುರಂದರದಾಸರ ಮಾರ್ಮಿಕ ನಿಲುವು ನಿತ್ಯ ಸತ್ಯವಾಗಿದೆ. ಇದನ್ನೂ ಓದಿ: ಇಂಡೋನೇಷ್ಯಾ: ಜ್ವಾಲಾಮುಖಿ ಸ್ಫೋಟದಿಂದ 13 ಮಂದಿ ಸಾವು

    ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು. ಈಗಾಗಲೇ ಶೇ.33 ರಷ್ಟು ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಡಿರುವುದು ಕಂಡುಬಂದಿರುವುದರಿಂದ ಉತ್ಪಾದಕತೆಯಲ್ಲಿ ಶೇ.17 ರಷ್ಟು ಕಡಿಮೆಯಾಗಿದೆ. ಮಣ್ಣು ಒಮ್ಮೆ ನಾಶವಾದರೆ, ಪುನಃ ಪಡೆಯಲಾಗದ ಅಮೂಲ್ಯ ಸಂಪತ್ತು. ಸಸ್ಯ ಸೇರಿದಂತೆ ಸಕಲ ಜೀವಿಗಳಿಗೆ ಜೀವವಾಗಿದೆ. ಮಣ್ಣಿನ ಫಲವತ್ತತೆ ಪೋಷಕಾಂಶಗಳು ಮಾತ್ರವಲ್ಲ, ಅನುಕೂಲಕರ ಜೀವಿಗಳು, ನೀರು ಹಾಗೂ ಗಾಳಿಯ ಸಂಬಂದಗಳನ್ನು ಒಳಗೊಂಡಿದೆ. ಸಜೀವ ಮಣ್ಣು ಸಕಲ ಜೀವಿಗಳಿಗೆ ಆಹಾರ, ಮೇವು, ವಸತಿ, ಇಂಧನ ಇತ್ಯಾದಿ ಒದಗಿಸುತ್ತಿದೆ. ಮಳೆ ನೀರನ್ನು ಸಂಗ್ರಹಿಸಿ ಶುದ್ಧ ಮಾಡುತ್ತದೆ. ಸಾವಯವ ವಸ್ತುವನ್ನು ಪೋಷಕಾಂಶಗಳಾಗಿ ಬದಲಿಸುತ್ತದೆ. ಪ್ರವಾಹಗಳನ್ನು ಹಾಗೂ ಹವಾಮಾನ ಏರುಪೇರನ್ನು ತಡೆಯುತ್ತದೆ. ಭೂಮಿ ಮೇಲಿನ ಜೀವ ಜಂತುಗಳಿಗೆ ಆಶ್ರಯ ನೀಡುತ್ತದೆ. ಆದ್ದರಿಂದ ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ

    ಅಂತರಾಷ್ಟ್ರೀಯ ಮಟ್ಟದಲ್ಲಿ ಮಣ್ಣಿನ ದಿನವನ್ನು ಆಚರಿಸುವಂತೆ ಅಂತಾರಾಷ್ಟ್ರೀಯ ಮಣ್ಣು ವಿಜ್ಞಾನ ಸಂಸ್ಥೆ 2002ರಲ್ಲೇ ಶಿಫಾರಸು ಮಾಡಿದ್ದು, ನಂತರ 5 ಡಿಸೆಂಬರ್ 2014 ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರಾಷ್ಟ್ರೀಯ ಮಣ್ಣು ದಿನವನ್ನು ಆಚರಿಸಲಾಯಿತು. ಮಣ್ಣಿನ ಸವಕಳಿ, ರಾಸಾಯನಿಕ ಗೊಬ್ಬರದ ಅಸಮತೋಲನ ಬಳಕೆಯಿಂದ ಮಣ್ಣಿನ ಭೌತಿಕ, ರಾಸಾಯನಿಕ ಮತ್ತು ಜೈವಿಕ ಲಕ್ಷಣಗಳು ನಾಶವಾಗುತ್ತಿದೆ. ಮಣ್ಣಿನಲ್ಲಿ ಸವುಳು, ಜವುಳು, ಆಮ್ಲ ಮತ್ತು ಕ್ಷಾರಮಯ ವಾಗಿ ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ. ಕರಗುವ ಲವಣಗಳನ್ನು ಭೂಮಿಯಲ್ಲಿ ಉಳಿಸಿಕೊಂಡಾಗ ಮಣ್ಣಿನ ಸವುಳು ಸಂಭವಿಸುತ್ತದೆ. ಇದು ನೈಸರ್ಗಿಕವಾಗಿ ಅಥವಾ ಅನುಚಿತ ಮಾನವ ಚಟುವಟಿಕೆಗಳಿಂದ, ವಿಶೇಷವಾಗಿ ಕೃಷಿ ಪದ್ಧತಿಗಳಿಂದ ಸಂಭವಿಸುತ್ತದೆ. ಇದಲ್ಲದೆ, ಕಡಿಮೆ ಉಪ್ಪು ಕರಗುವಿಕೆಯಿಂದಾಗಿ ಕೆಲವು ಭೂಮಿಗಳು ಆರಂಭದಲ್ಲಿ ಚೌಳಾಗುತ್ತದೆ ಆದ್ದರಿಂದ ಕೃಷಿಕರು ಮಣ್ಣು ಸವುಳಾಗುವುದನ್ನು ತಪ್ಪಿಸುವುದನ್ನು ಗಮನದಲ್ಲಿಟ್ಟುಕೊಂಡೇ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಬೇಕು. ಮಣ್ಣು ಸವಕಳಿ ತಪ್ಪಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡರು.

  • ಮಣ್ಣು ತೆಗೆಯುವಾಗ ಗುಡ್ಡ ಕುಸಿತ – ಇಬ್ಬರು ಸಾವು

    ಮಣ್ಣು ತೆಗೆಯುವಾಗ ಗುಡ್ಡ ಕುಸಿತ – ಇಬ್ಬರು ಸಾವು

    ಚಿಕ್ಕೋಡಿ: ಬೆಳಗಾವಿ ಜೆಲ್ಲೆಯ ಹುಕ್ಕೇರಿ ತಾಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಬದಿಯಲ್ಲಿ ಮಣ್ಣು ಶೇಖರಣೆ ಮಾಡುವ ಸಮಯದಲ್ಲಿ ಗುಡ್ಡದ ಮಣ್ಣು ಕುಸಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

     

    ಯಲ್ಲಪ್ಪಾ ಹರಿಜನ (22) ಹಾಗೂ ಹಾಲಪ್ಪಾ ಗುರವ (24) ಮೃತ ಯುವಕರಾಗಿದ್ದಾರೆ. ಬಿರನೋಳಿ ಗ್ರಾಮದ ಇವರು ಗುಡ್ಡದ ಬದಿಯಲ್ಲಿ ಮಣ್ಣು ಶೇಖರಣೆ ಮಾಡುವ ವೇಳೆ ಗುಡ್ಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ.

    ಮೊದಲು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆಗೋಸ್ಕರ ಕೆಂಪು ಮಣ್ಣು ತೆಗೆದಿದ್ದು ಮಣ್ಣಿನ ದಣ್ಣೆಗಳು ಉಳಿದಕೊಂಡಿದ್ದವು. ಇದನ್ನು ತಮ್ಮ ಸ್ವಂತ ಕೆಲಸಕ್ಕೆ ಮಣ್ಣು ತೆಗೆಯುವಾಗ ಗುಡ್ಡ ಕತ್ತರಿಸಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಯಮಕನಮರಡಿ ಪಿಎಸ್‍ಐ ರಮೇಶ ಪಾಟೀಲ ಸ್ಥಳಕ್ಕೆ ಧಾವಿಸಿದ್ದು, ಓರ್ವ ಯುವಕನ ಶವ ಹೊರ ತೆಗೆದು ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

  • ಕೋಲಾರದ ಮಣ್ಣಿಗೆ ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ- ರಾತ್ರೋ ರಾತ್ರಿ ಕಳ್ಳತನ

    ಕೋಲಾರದ ಮಣ್ಣಿಗೆ ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ- ರಾತ್ರೋ ರಾತ್ರಿ ಕಳ್ಳತನ

    ಕೋಲಾರ: ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಕೋಲಾರ ಜಿಲ್ಲೆಯ ಕೆಂಪು ಹಾಗೂ ಜೇಡಿ ಮಣ್ಣನ್ನ ಅಕ್ರಮವಾಗಿ ಸಾಗಾಟ ಮಾಡುವ ಜಾಲ ಎಗ್ಗಿಲ್ಲದೆ ನಡೆಯುತ್ತಿದೆ.

    ಮಾಲೂರು ತಾಲೂಕಿನಾದ್ಯಂತ ಎಗ್ಗಿಲ್ಲದೆ ಅಕ್ರಮವಾಗಿ ಮಣ್ಣು ಸಾಗಾಟ ನಡೆಯುತ್ತಿಯುತ್ತಿದ್ದು, ಅಧಿಕಾರಿಗಳು ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಜಿಲ್ಲೆಯ ಮಾಲೂರು ತಾಲೂಕಿನ ಮೈಲಾಂಡಹಳ್ಳಿ ಕೆರೆಯಲ್ಲಿ ಬೆಳಗ್ಗೆಯಿಂದಲೇ ಟಿಪ್ಪರ್ ಲಾರಿಗಳಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡಲಾಗುತ್ತಿದೆ.

    ಮಣ್ಣು ಮಾಫಿಯಾದಲ್ಲಿ ತೊಡಗಿರುವ ಕೆಲವರು, ಕೆಲ ಅಧಿಕಾರಿಗಳ ಕುಮ್ಮಕ್ಕಿನಿಂದ ರಾತ್ರೋ ರಾತ್ರಿ ಮಣ್ಣು ಸಾಗಾಟ ಮಾಡುತ್ತಿದ್ದಾರೆ. ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಟಿಪ್ಪರ್ ಲಾರಿಗಳ ಮೂಲಕ ಮಣ್ಣು ಸಾಗಿಸುತ್ತಿದ್ದಾರೆ. ದಂಧೆಕೋರರು ಹಗಲಲ್ಲಿ ಮಣ್ಣು ತುಂಬಿ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡು ಹಾಗೂ ಆಂದ್ರಪ್ರದೇಶಗಳಿಗೆ ಕಳುಹಿಸಿಕೊಡುತ್ತಾರೆ.

    ಇದು ತಾಲೂಕಿನ ಅಧಿಕಾರಿಗಳಿಗೆ ಗೊತ್ತಿದೆ. ಆದರೂ ಜಾಣಕುರುಡತನ ಪ್ರದರ್ಶಿಸಿ ಅಕ್ರಮ ಮಣ್ಣು ಮಾಫಿಯಾ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

  • 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

    800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

    – ಕೌಸಲ್ಯೆ ಹುಟ್ಟಿದ ಸ್ಥಳವೆಂದು ನಂಬಲಾಗಿರುವಲ್ಲಿಂದ ಮಣ್ಣು

    ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ.

    ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಇದನ್ನೂ ಓದಿ: ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮ ಮಂದಿರ ಭೂಮಿ ಪೂಜೆಗೆ ವಿರೋಧ- ಉದ್ಧವ್ ಠಾಕ್ರೆ ಹೇಳಿಕೆಗೆ ವಿಎಚ್‍ಪಿ ಕಿಡಿ

    ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು ಹಾಗೂ ಧರ್ಮದಲ್ಲಿ ನಾನೊಬ್ಬ ಮುಸ್ಲಿಂ. ಆದರೆ ನನ್ನ ದೇವರು ರಾಮ. ನಾನು ರಾಮನ ಪರಮಭಕ್ತನಾಗಿದ್ದೇನೆ. ನಮ್ಮ ಪೂರ್ವಜರ ಬಗ್ಗೆ ತಿಳಿದುಕೊಂಡರೆ ಅವರು ಹಿಂದೂಗಳಾಗಿರಬಹುದು. ಅಲ್ಲದೆ ಅವರ ಹೆಸರು ರಾಮ್‍ಲಾಲ್ ಅಥವಾ ಶ್ಯಾಮ್‍ಲಾಲ್ ಆಗಿರಬಹುದು. ನಾವು ಚರ್ಚ್ ಅಥವಾ ಮಸೀದಿಗೇ ಹೋಗಲಿ ಆದರೆ ನಾವೆಲ್ಲರೂ ಹಿಂದೂ ಮೂಲವನ್ನು ಹೊಂದಿದ್ದೇವೆ ಎಂದು ತಿಳಿಸಿದರು.

    ನಮ್ಮ ಮುಖ್ಯ ಪೂರ್ವಜ ಭಗವಾನ್ ರಾಮನಾಗಿದ್ದಾನೆ. ಅಲ್ಲಮ ಇಕ್ಬಾಲ್(ಪಾಕಿಸ್ತಾನಿ ರಾಷ್ಟ್ರೀಯ ಕವಿ) ಅವರು ಅವರದ್ದೇ ಆದ ರೀತಿಯಲ್ಲಿ ವಿವರಣೆ ನೀಡಲು ಪ್ರಯತ್ನಿಸಿದ್ದರು. ರಾಮನನ್ನು ಭಾರತದ ಅಧಿಪತಿ ಅಥವಾ ದೊರೆ ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದರು. ಇದೇ ಪೂಜ್ಯ ಭಾವದಿಂದ ಇಂದು ನಾನು ಕೌಸಲ್ಯೆ ಹುಟ್ಟಿದ ಸ್ಥಳ ಎಂದು ನಂಬಲಾಗಿರುವ ಚಂದ್ಖುರಿಯಿಂದ ಅಯೋಧ್ಯೆಗೆ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗೆ ಮಣ್ಣು ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಖಾನ್ ಹೇಳಿದರು. ಇದನ್ನೂ ಓದಿ: ರಾಮಮಂದಿರ ಶಿಲಾನ್ಯಾಸಕ್ಕೆ ಭರ್ಜರಿ ಸಿದ್ಧತೆ – ಸಿಎಂ ಯೋಗಿ ಆದಿತ್ಯನಾಥ್ ಪರಿಶೀಲನೆ

    ಇದೇ ಸಂದರ್ಭದಲ್ಲಿ ಮಾಧ್ಯಮದವರು ನಿಮ್ಮ ಈ ಕಾರ್ಯವನ್ನು ಟೀಕಿಸುವವರಿಗೆ ಏನು ಹೇಳುತ್ತೀರಿ ಎಂದು ಕೇಳಿದಾಗ, ಪಾಕಿಸ್ತಾನದ ಕೆಲವರು ಹಿಂದೂ ಮುಸ್ಲಿಂ ಹೆಸರುಗಳೊಂದಿಗೆ ನಕಲಿ ಐಡಿಗಳನ್ನು ರಚಿಸಿಕೊಂಡು ಭಾರತದಲ್ಲಿ ಎಲ್ಲಾ ಸಮುದಾಯದವರೂ ಪರಸ್ಪರ ನಿಂದಿಸಿಕೊಳ್ಳುತ್ತಿದ್ದಾರೆ ಎಂದು ತೋರ್ಪಡಿಸಲು ಈ ರೀತಿ ಮಾಡುತ್ತಾರೆ ಎಂದು ಹೇಳಿದರು.

    ಇದೂವರೆಗೂ ನಾನು 15,000 ಕಿ.ಮೀ ನಡದುಕೊಂಡೇ ಹಲವು ದೇವಾಲಯಗಳಿಗೆ ತೆರಳಿದ್ದೇನೆ. ಹಾಗೂ ಕೆಲವೆಡೆ ದೇವಾಲಯಗಳಲ್ಲಿ ಉಳಿದುಕೊಂಡಿದ್ದೂ ಇದೆ. ಆದರೆ ಯಾರೊಬ್ಬರೂ ನನ್ನ ವಿರುದ್ಧ ಮಾತನಾಡಿಲ್ಲ ಎಂದು ಇದೇ ವೇಳೆ ಖಾನ್ ವಿವರಿಸಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಭಟ್ಟರಹಳ್ಳಿ ಕೆರೆಗೆ ವಾಪಸ್ ಬಂತು ಮಣ್ಣು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಭಟ್ಟರಹಳ್ಳಿ ಕೆರೆಗೆ ವಾಪಸ್ ಬಂತು ಮಣ್ಣು

    ಬೆಂಗಳೂರು: ನೆಲಮಂಗಲ ಭಟ್ಟರಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಮಾಡುತ್ತಿದ್ದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿದ ಬೆನ್ನಲ್ಲೇ ಕೆರೆಯ ಸುತ್ತಲಿನ ಮಣ್ಣನ್ನು ಅಕ್ರಮವಾಗಿ ಲೂಟಿ ಮಾಡಿದ್ದ ಕಂಟ್ರಾಕ್ಟರ್ ಗೆ ತಹಶೀಲ್ದಾರ್ ಬಿಸಿ ಮುಟ್ಟಿಸಿದ್ದಾರೆ.

    ಭಟ್ಟರಹಳ್ಳಿ ಕೆರೆಯ ಪ್ರದೇಶದ ಸುತ್ತಲಿನ ಮಣ್ಣಿಗೆ ಕಂಟ್ರಾಕ್ಟರ್ ಒಬ್ಬರು ಕನ್ನ ಹಾಕಿದ್ದರು. ಈ ಬಗ್ಗೆ ಕಳೆದ ವಾರ ಪಬ್ಲಿಕ್ ಟಿವಿ ಕೆರೆಯ ಮಣ್ಣಿಗೆ ಕನ್ನ ಶೀರ್ಷಿಕೆ ಅಡಿ ಸುದ್ದಿ ಪ್ರಸಾರ ಮಾಡಿತ್ತು. ಅಲ್ಲದೆ ಈ ಬಗ್ಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಎಚ್ಚೆತ್ತುಕೊಂಡಿರುವ ಸ್ಥಳೀಯ ಆಡಳಿತ ಅಕ್ರಮವಾಗಿ ಕೆರೆಯ ಮಣ್ಣನ್ನ ತೆಗೆದಿದ್ದ ಕಂಟ್ರಾಕ್ಟರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಖುದ್ದು ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸ್ ಅವರು ಕೆರೆಯನ್ನು ಪರಿಶೀಲಿಸಿ ಮಣ್ಣು ತೆಗೆದಿದ್ದ ಕಂಟ್ರಾಕ್ಟರ್‍ನಿಂದಲೇ 20 ಅಡಿಯಷ್ಟು ಮಣ್ಣನ್ನು ತರಿಸಿದ್ದಾರೆ. ಒಟ್ಟಾರೆ ಕೆರೆಯ ಅಂದ ಹಾಗೂ ಕೆರೆಯ ಮಣ್ಣನ್ನು ತೆಗೆದು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದ ಕಂಟ್ರಾಕ್ಟರ್ ವಿರುದ್ಧ ತಹಶೀಲ್ದಾರ್ ಕ್ರಮ ತೆಗೆದುಕೊಂಡಿದ್ದಾರೆ.

  • ಕಾವೇರಿ ಒಡಲಿಗೆ ಕಲ್ಲು ಬೀಳುತ್ತಿದ್ದರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು

    ಕಾವೇರಿ ಒಡಲಿಗೆ ಕಲ್ಲು ಬೀಳುತ್ತಿದ್ದರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು

    ಕೊಡಗು: ಕಾವೇರಿ ನದಿಗೆ ಸಾವಿರಾರು ಲೋಡ್ ಕಲ್ಲು, ಮಣ್ಣು ಸುರಿದು ಸಮತಟ್ಟು ಮಾಡುತ್ತಿದ್ದರೂ ಪಂಚಾಯ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತ್ತಿದ್ದಾರೆ.

    ಕೊಡಗಿನಲ್ಲಿ ಕಳೆದ ಎರಡು ವರ್ಷಗಳಿಂದ ಕಾವೇರಿ ನದಿ ಉಕ್ಕಿ ಹರಿದು ಸಾವಿರಾರು ಜನರು ಮನೆಮಠ ಕಳೆದುಕೊಂಡಿದ್ದಾರೆ. ನದಿಪಾತ್ರದ ಜಾಗ ದಿನದಿಂದ ದಿನಕ್ಕೆ ಕಿರಿದಾಗುತ್ತಿರುವುದು ಕಾವೇರಿ ನದಿ ಉಕ್ಕಿ ಹರಿಯೋದಕ್ಕೆ ಕಾರಣ ಎನ್ನೋದು ಸಾಬೀತಾಗಿದೆ. ಇಷ್ಟೆಲ್ಲಾ ಆದರೂ ಜನರು ಮಾತ್ರ ಬುದ್ಧಿ ಕಲಿತಿಲ್ಲ. ಕೆಲ ಮಂದಿ ಕಾವೇರಿ ನದಿಗೆ ಸಾವಿರಾರು ಲೋಡ್ ಕಲ್ಲು, ಮಣ್ಣು ಸುರಿದು ಸಮತಟ್ಟು ಮಾಡುತ್ತಿದ್ದಾರೆ. ಆದರೆ ಇತ್ತ ಗಮನ ಕೊಡದೇ ಸ್ಥಳೀಯ ಪಂಚಾಯ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.

    ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಸುತ್ತಮುತ್ತಲು ಹರಿಯುತ್ತಿರುವ ಕಾವೇರಿ ನದಿಯ ಒಡಲು ಇದೀಗ ಬರಿದಾಗುತ್ತಿದೆ. ನದಿಯ ಒಂದಡಿ ಜಾಗವನ್ನು ಬಿಡದಂತೆ ಮನೆಗಳನ್ನು ನಿರ್ಮಿಸಿರುವುದು ಅದಕ್ಕೆ ಕಾರಣವಾಗಿದೆ. ಹಲವರು ನದಿ ಪಾತ್ರದ ಜಾಗಗಳನ್ನು ಒತ್ತುವರಿ ಮಾಡಿ ಲೇಔಟ್‍ಗಳನ್ನು ಮಾಡಿದ್ದಾರೆ. ಇದೆಲ್ಲದರ ಪರಿಣಾಮವಾಗಿ ಕೊಡಗಿನಲ್ಲಿ ಎರಡು ದಿನ ಮಳೆ ಸುರಿದರೆ ಸಾಕು ಪ್ರವಾಹ ಸೃಷ್ಟಿಯಾಗಿ ಬಿಡುತ್ತದೆ.

    ಈ ಬಗ್ಗೆ ಗೊತ್ತಿದ್ದರೂ ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಕಣಿವೆಯಲ್ಲಿ ಕಾವೇರಿ ನದಿಗೆ ಸಾವಿರಾರು ಲೋಡ್ ಕಲ್ಲು ಮಣ್ಣನ್ನು ತುಂಬಲಾಗಿದೆ. ಇದರ ಜೊತೆಗೆ ಬರೋಬ್ಬರಿ 20 ಅಡಿ ಆಳದಷ್ಟು ನದಿಯ ಪಕ್ಕದಲ್ಲಿ ಇರುವ ಗುಂಡಿಗಳನ್ನು ಮುಚ್ಚಿ ಸಮತಟ್ಟು ಮಾಡಲಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಹೆಬ್ಬಾಲೆ ಕ್ಷೇತ್ರದ ಶ್ರೀನಿವಾಸ್ ಅವರು ತಮ್ಮ ಜಮೀನಿನಲ್ಲಿದ್ದ ದೊಡ್ಡ ಗುಡ್ಡವೊಂದನ್ನು ಅಗೆಸಿ, ಅಲ್ಲಿನ ಭಾರೀ ಗಾತ್ರದ ಕಲ್ಲು, ಮಣ್ಣನ್ನು ಕಾವೇರಿ ನದಿಗೆ ತುಂಬಿಸಿದ್ದಾರೆ. ಯಾಕೆ ಹೀಗೆ ಕಲ್ಲು, ಮಣ್ಣು ತುಂಬುತ್ತಿದ್ದೀರಾ ಎಂದು ಪ್ರಶ್ನಿಸಿದರೆ ಕಣಿವೆ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ನದಿ ಹರಿಯುತ್ತಿದ್ದು, ಅದರ ರಕ್ಷಣೆಗೆ ಹಾಕುವಂತೆ ಜನರು ಆಗ್ರಹಿಸಿದ್ದಕ್ಕೆ ತುಂಬಿಸಿದ್ದೇನೆ ಎಂದಿದ್ದಾರೆ.

    ನದಿಯಿಂದ ಬರೋಬ್ಬರಿ 900 ಅಡಿ ಜಾಗ ಬಫರ್ ಜೋನ್ ಆಗಿದ್ದು, ಅಲ್ಲಿ ಯಾವುದೇ ಕಾಮಗಾರಿ ಮಾಡುವಂತಿಲ್ಲ. ಅದಕ್ಕಿಂತ ಮುಖ್ಯವಾಗಿ ಈ ಕಣಿವೆ ಜಾಗದಲ್ಲಿಯೇ ಹಾರಂಗಿಯಿಂದ ಹರಿದು ಬರುವ ಸಾವಿರಾರು ಕ್ಯೂಸೆಕ್ ನೀರು ಕೂಡ ಕಾವೇರಿ ನದಿ ಸೇರುತ್ತದೆ. ಆದರೆ ಹೀಗೆ ನದಿಗೆ ಸಾವಿರಾರು ಲೋಡ್ ಮಣ್ಣು ತುಂಬಿದರೆ ಕಾವೇರಿ ನೀರು ಮತ್ತು ಹಾರಂಗಿ ನೀರು ಎಲ್ಲಿ ಹರಿದು ಹೋಗಬೇಕು? ನದಿಯ ಜಾಗ ದೊಡ್ಡ ಗಾತ್ರದಲ್ಲಿ ಇರುವಾಗಲೇ ಕಾವೇರಿ ನೀರು ಉಕ್ಕಿ ಹರಿದು ಕಣಿವೆ, ಕೂಡುಮಂಗಳೂರು, ಕುಶಾಲನಗರದ ಹಲವು ಬಡಾವಣೆ ಸೇರಿದಂತೆ ಮೂರ್ನಾಡುವರೆಗೆ ಹಲವು ಗ್ರಾಮಗಳು ಮುಳುಗಿದ್ದವು. ಇಷ್ಟೆಲ್ಲಾ ಸಮಸ್ಯೆ ಎದುರಾಗಿರುವಾಗಲೂ ಕಾವೇರಿಗೆ ಇಷ್ಟೊಂದು ಮಣ್ಣು ತುಂಬುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ವಿಪರ್ಯಾಸ.