Tag: soldiers

  • ಮೂರು ವಿಶ್ವದಾಖಲೆಗಳನ್ನು ಯೋಧರಿಗೆ ಸಮರ್ಪಿಸಿದ ತನುಶ್ರೀ ಪಿತ್ರೋಡಿ!

    ಮೂರು ವಿಶ್ವದಾಖಲೆಗಳನ್ನು ಯೋಧರಿಗೆ ಸಮರ್ಪಿಸಿದ ತನುಶ್ರೀ ಪಿತ್ರೋಡಿ!

    ಉಡುಪಿ: ಉಗ್ರರ ಪುಲ್ವಾಮಾ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಭಾರತದಾದ್ಯಂತ ಜನ ವಿಜಯೋತ್ಸವ ಆಚರಿಸುತ್ತಿರುವ ಬೆನ್ನಲ್ಲೇ ಉಡುಪಿಯ ತನುಶ್ರೀ ಪಿತ್ರೋಡಿ ತನ್ನ ಮೂರು ವಿಶ್ವದಾಖಲೆಗಳನ್ನು ಯೋಧರಿಗೆ ಸಮರ್ಪಿಸಿ ದೇಶಭಕ್ತಿ ಮೆರೆದಿದ್ದಾಳೆ.

    ಒಂದು ನಿಮಿಷದಲ್ಲಿ ಅತಿ ಹೆಚ್ಚು ನಿರಾಲಂಬ ಪೂರ್ಣ ಚಕ್ರಾಸನ ಮತ್ತು ಧನುರಾಸನ ಮಾಡಿದ್ದಕ್ಕೆ ತನುಶ್ರೀ ಪಿತ್ರೋಡಿ ಹೆಸರು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಹಾಗೂ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಸ್ತಕಕ್ಕೆ ಸೇರ್ಪಡೆಯಾಗಿತ್ತು. ಇದೀಗ ಆ ಮೂರೂ ದಾಖಲೆಗಳನ್ನು ಭಾರತದ ವೀರ ಯೋಧರಿಗೆ ಈ ಪುಟ್ಟ ಬಾಲಕಿ ಸಮರ್ಪಣೆ ಮಾಡಿದ್ದಾಳೆ. ದೇಶದಲ್ಲಿ ಯೋಧರು ಮಾಡುವ ಕೆಲಸಕ್ಕಿಂತ ಮಿಗಿಲಾದ ಕೆಲಸ ಇನ್ಯಾವುದೂ ಇಲ್ಲ ಅಂತ ತನುಶ್ರೀ ಹೇಳಿದ್ದಾಳೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ತನುಶ್ರೀ, 13 ದಿನದ ಹಿಂದೆ ಉಗ್ರಗಾಮಿಗಳು ನಮ್ಮ ಸೈನಿಕರನ್ನು ಕೊಂದಿದ್ದರು. ಅದನ್ನು ಟಿವಿಯಲ್ಲಿ ನೋಡಿ ಕಣ್ಣೀರು ಬಂತು. ನಾನು ಒಂದು ವರ್ಷದ ಹಿಂದೆ ಮಾಡಿದ ದಾಖಲೆ ಮತ್ತು ವಾರದ ಹಿಂದೆ ಮಾಡಿರುವ ಮತ್ತೆರಡು ದಾಖಲೆಗಳನ್ನು ಯೋಧರಿಗೆ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾಳೆ.

    ಪಾಕಿಸ್ತಾನದ ಉಗ್ರರು ಭಾರತದಲ್ಲಿ ದಾಳಿ ಮಾಡಿ 40 ಸೈನಿಕರನ್ನು ಹತ್ಯೆ ಮಾಡಿದ ಫೋಟೋಗಳನ್ನು ನೋಡಿ ಬಹಳ ಬೇಸರವಾಗಿದೆ. ಈಗ ನಮ್ಮ ದೇಶದ ಸೈನಿಕರು ಪಾಕಿಸ್ತಾನದವರನ್ನು ದಾಳಿ ಮಾಡಿ ಕೊಂದಿದ್ದಾರೆ. ನನ್ನ ಎಲ್ಲಾ ಪ್ರಶಸ್ತಿಯ ಗೌರವ ನಮ್ಮ ದೇಶದ ಸೈನಿಕರಿಗೆ ಸಲ್ಲಬೇಕು. ಇದು ನನ್ನ ಆಸೆಯೂ ಹೌದು, ನಮ್ಮ ತಂದೆ ತಾಯಿಯ ಆಸೆಯೂ ಹೌದು. ನಾವು ಮನೆಯಲ್ಲಿ ಆರಾಮವಾಗಿ ಇರುತ್ತೇವೆ. ಸೈನಿಕರು ಮನೆ ಬಿಟ್ಟು- ಸಂಬಂಧದವರನ್ನು ಬಿಟ್ಟು ದೇಶ ರಕ್ಷಣೆ ಮಾಡುತ್ತಾರೆ. ಪ್ರಶಸ್ತಿಯನ್ನು ಸೈನಿಕರಿಗೆ ಅರ್ಪಣೆಮಾಡಿದ್ದು ಶಾಲೆಯ ಶಿಕ್ಷಕರಿಗೂ ಖುಷಿಯಾಗಿದೆ ಎಂದು ತನುಶ್ರೀ ಸಂತೋಷಪಟ್ಟಳು.

    ತನುಶ್ರೀ ಪಿತ್ರೋಡಿ ಪೋಷಕರು ಮಾತನಾಡಿ, ದೇಶಾಭಿಮಾನ ಮಕ್ಕಳಲ್ಲಿ ತುಂಬುವುದು ಎಲ್ಲಾ ತಂದೆ ತಾಯಿಗಳ ಕರ್ತವ್ಯ. ದೇಶಕ್ಕೆ, ಸೈನಿಕರಿಗೆ ನಮ್ಮಿಂದ ಏನೂ ಕೊಡಲು ಸಾಧ್ಯವಿಲ್ಲ. ಬಿಸಿಲು ಮಳೆ ಚಳಿಯನ್ನು ಲೆಕ್ಕಿಸದೇ ದೇಶವನ್ನು ಹಗಲಿರುಳು ಅವರು ಕಾಯುತ್ತಾರೆ. ಈ ಪ್ರಶಸ್ತಿಯನ್ನು ಯೋಧರಿಗೆ ಅರ್ಪಿಸುವುದರಿಂದ ಅವರ ಮನಸ್ಸಿಗೆ ಖುಷಿಯಾದರೆ, ಅವರ ಮುಖದಲ್ಲಿ ಒಂದು ನಗು ಮೂಡಿದರೆ ಅಷ್ಟೇ ಸಾಕು. ಮಗಳು ವಿಶ್ವದಾಖಲೆ ಯೋಧರಿಗೆ ಅರ್ಪಿಸಿದ್ದು ಬಹಳ ಖುಷಿಯಾಗಿದೆ. ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಸಂಹಾರ ಮಾಡಿದ್ದು ಮನಸ್ಸಿಗೆ ನೆಮ್ಮದಿ ತಂದಿದೆ. 40 ಯೋಧರ ಆತ್ಮಕ್ಕೆ ಶಾಂತಿ ಸಿಕ್ಕರೆ ಅಷ್ಟೇ ಸಾಕು. ಭಾರತೀಯ ಸೇನೆಗೆ ನಮ್ಮದೊಂದು ಸೆಲ್ಯೂಟ್ ಎಂದು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಡೀ ಕುಟುಂಬ ಶ್ರದ್ಧಾಂಜಲಿ ಸಲ್ಲಿಸಿ, ವಾಯುಸೇನೆಯ ದಾಳಿಗೆ ಅಭಿನಂದನೆ ಸಲ್ಲಿಸಿದೆ.

    https://www.youtube.com/watch?v=zduxBSmQEHo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ವಾರ್ನಿಂಗ್

    ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ವಾರ್ನಿಂಗ್

    ವಾಷಿಂಗ್ಟನ್: ಭಾರತೀಯ ಸೇನೆ ಉಗ್ರರ ಮೂರು ಕ್ಯಾಂಪ್ ಗಳ ಮೇಲೆ ಬಾಂಬ್ ದಾಳಿ ಮಾಡಿ ಅಡಗುತಾಣಗಳನ್ನು ನೆಲಸಮ ಮಾಡಿದ ಬೆನ್ನಲ್ಲೇ ಪಾಕಿಸ್ತಾನ ಪ್ರತಿಕಾರ ತೀರಿಸುವುದಾಗಿ ಹೇಳಿತ್ತು. ಹೀಗಾಗಿ ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ.

    ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಮೆರಿಕ ಆಗ್ರಹಿಸಿದೆ. ಏನಾದ್ರೂ ಆಗಲಿ ಉಗ್ರರನ್ನು ಶಮನ ಮಾಡಬೇಕು. ಆದ್ರೆ ಇದರ ಬದಲು ಮಿಲಿಟರಿ ಕಾರ್ಯಾಚರಣೆ ನಡೆಸಿದ್ರೆ ಹುಷಾರ್ ಎಂದು ದೊಡ್ಡಣ್ಣ ಅಮೆರಿಕಾ ಪಾಕ್ ಗೆ ಎಚ್ಚರಿಕೆ ನೀಡಿದೆ.

    ಪಾಕ್ ಉಗ್ರರ ವಿರುದ್ಧ ಇಂದು ಚೀನಾದಲ್ಲಿ ವಿದೇಶಾಂಗ ಸಚಿವರ ಮಹತ್ವದ ಸಭೆ ನಡೆಯಲಿದೆ. ಭಾರತ, ಚೀನಾ, ರಷ್ಯಾ ವಿದೇಶಾಂಗ ಸಚಿವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಪುಲ್ವಾಮಾ ದಾಳಿ ಬಗ್ಗೆ ಪ್ರಸ್ತಾಪಿಸಲಿದ್ದಾರೆ.

    ಫೆ. 14ರಂದು ಪಾಕ್ ಉಗ್ರನ ಆತ್ಮಾಹುತಿ ದಾಳಿಯಿಂದಾಗಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಈ ಬೆನ್ನಲ್ಲೇ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕು ಎಂದು ಇಡೀ ದೇಶವೇ ಒಕ್ಕೊರಲಿನಿಂದ ಆಗ್ರಹಿಸಿತ್ತು. ಈ ಘಟನೆ ನಡೆದ 13ನೇ ದಿನಕ್ಕೆ ಭಾರತೀಯ ಯೋಧರು ಗಡಿ ನಿಯಂತ್ರಣ ರೇಖೆ ದಾಟಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ಭಯೋತ್ಪಾದಕರನ್ನು ಮಟ್ಟ ಹಾಕಿದ್ದಾರೆ. ಈ ದಾಳಿಯಲ್ಲಿ 250-300 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಉಗ್ರರನ್ನು ಚೆಂಡಾಡಿದ ಭಾರತಕ್ಕೆ ಪಾಕ್ ಚಾಲೆಂಜ್

    ಆದ್ರೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಭಾರತ ಎಂಥ ದಾಳಿನೂ ಮಾಡಿಲ್ಲ. ಖಾಲಿ ಪ್ರದೇಶದಲ್ಲಿ ಕೇವಲ ಬಾಂಬ್‍ಗಳನ್ನು ಹಾಕಿ ಹೋಗಿವೆ ಅಷ್ಟೆ ಅಂತ ಪಾಕ್ ಮೇಜರ್ ಹೇಳಿದ್ದರು. ಅಲ್ಲಿನ ನಿವಾಸಿಗಳು ಮಾತ್ರ ಭಾರತ ನಡೆಸಿದ ವೈಮಾನಿಕ ದಾಳಿ ಭೂಕಂಪದಂತಿತ್ತು ಅಂತ ಹೇಳಿದ್ದಾರೆ. ಈ ಬಗ್ಗೆ ಜಮ್ಮು ಕಾಶ್ಮೀರದ ಜನ ಸಂತಸ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಗಡಿಗೆ ಹೊಂದಿಕೊಂಡಂತಿರುವ ಪೂಂಚ್‍ನ ಜನ ಪ್ರತಿಕ್ರಿಯಿಸಿ, ರಾತ್ರಿ ಎಲ್ಲಾ ವಿಮಾನಗಳ ಸಂಚಾರದ ಸದ್ದು ಕೇಳಿ ಭಯಭೀತರಾಗಿದ್ದೆವು. ಏನಾಗ್ತಿದ್ಯಪ್ಪ ಅಂತ ಆತಂಕದಲ್ಲಿದ್ದೆವು. ಆದ್ರೆ, ಬೆಳಗ್ಗೆ ಎದ್ದು ಟಿವಿ ನೋಡಿದಾಗ ಪಾಕಿಸ್ತಾನದ ಉಗ್ರರ ಕ್ಯಾಂಪ್‍ಗಳ ಮೇಲೆ ಸೇನೆ ಏರ್‍ಸ್ಟ್ರೈಕ್ ನಡೆಸಿದೆ ಅಂತ ಗೊತ್ತಾಯ್ತು. ಇದು ನಮ್ಮ ಹಕ್ಕು. ಅವರು ಪದೇ ಪದೇ ದಾಳಿ ಮಾಡುತ್ತಿದ್ದರೆ ನಾವೇನು ಸುಮ್ಮನೆ ಕೂರೋಕೆ ಆಗಲ್ಲ. ಪಾಕಿಸ್ತಾನದವರಿಗೆ ಸರಿಯಾಗಿಯೇ ಪಾಠ ಕಲಿಸಿದ್ದಾರೆ. ನಮ್ಮ ಸೇನೆಯವರು ಮಾಡಿದ್ದು ಸರಿ ಅಂದ್ರು. ಇದನ್ನೂ ಓದಿ: ಪಾಕ್‍ನ 3 ಉಗ್ರರ ಕೇಂದ್ರಗಳು ಉಡೀಸ್- ಭಾರತದ ಬಾಂಬ್ ದಾಳಿಯ ಪ್ಲಾನ್ ಹೀಗಿತ್ತು

    https://www.youtube.com/watch?v=SuxIDEkNIes

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೈನಿಕರಿಗೆ ಹ್ಯಾಟ್ಸ್ ಆಫ್, ಅವರು ಇಷ್ಟು ಮಾಡಿದ್ರೆ ನಮ್ಮವರು ಅಷ್ಟು ಮಾಡಿದ್ದಾರೆ: ದರ್ಶನ್

    ಸೈನಿಕರಿಗೆ ಹ್ಯಾಟ್ಸ್ ಆಫ್, ಅವರು ಇಷ್ಟು ಮಾಡಿದ್ರೆ ನಮ್ಮವರು ಅಷ್ಟು ಮಾಡಿದ್ದಾರೆ: ದರ್ಶನ್

    ಬೆಂಗಳೂರು: ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರುವ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದರ್ಶನ್, “ಸರ್ಜಿಕಲ್ ಸ್ಟ್ರೈಕ್ ಒಂದು ಅಮೆಜಿಂಗ್ ಕೆಲಸ. ನಾನು ಸೈನಿಕರಿಗೆ ಹ್ಯಾಟ್ಸ್ ಆಫ್ ಹೇಳುತ್ತೇನೆ. ಅವರು ಇಷ್ಟು ಮಾಡಿದರು ನಮ್ಮವರು ಅಷ್ಟು ಮಾಡಿದ್ದಾರೆ. ಇನ್ನುಂದೆ ಉಗ್ರಗಾಮಿಗಳು ಮುಂದೆ ಏನು ಮಾಡಬೇಕಾದರೂ ಒಂದು ಸಾರಿ ಯೋಚನೆ ಮಾಡಬೇಕು. ಟಿಟ್ ಫಾರ್ ಟ್ಯಾಟ್ (ದಾಳಿಗೆ ಪ್ರತಿದಾಳಿ), ಎಲ್ಲೇ ಆಗಲಿ ಯಾವುದೇ ಫೀಲ್ಡ್ ಇರಲಿ ಅವರು ಇಷ್ಟು ಮಾಡಿದರೆ, ನಾವು ಅಷ್ಟು ಮಾಡೋದು ಸರಿ” ಎಂದು ಅನಿಸಿಕೆ ಹಂಚಿಕೊಂಡಿದ್ದಾರೆ.

    ಭಾರತೀಯ ಯೋಧರನ್ನು ಬಲಿಪಡೆದಿದ್ದ ಪಾಕಿಸ್ತಾನದ ವಿರುದ್ಧ ಭಾರತ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ. ಸಿನಿಮಾ ಸ್ಟಾರ್ಸ್ ಸೇರಿದಂತೆ ದೇಶಾದ್ಯಂತ ಭಾರತೀಯ ವಾಯುಸೇನೆಯ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಹೌದು. ಸ್ಯಾಂಡಲ್‍ವುಡ್ ನಟರು ಮಾತ್ರವಲ್ಲದೇ ಬಾಲಿವುಡ್ ನಟರು ಕೂಡ ಸೇನೆಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ ಧ್ರವಾ ಸರ್ಜಾ ಅವರು, “ಭಾರತೀಯರ ಮೈಯಾಗ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ.. ಮಕ್ಳಾ ಬ್ಲಾಸ್ಟ್ ಆಗೋಯ್ತಿರಾ. ಭೋಲೋ ಭಾರತ್ ಮಾತಾ ಕಿ ಜೈ.. ಜೈ ಆಂಜನೇಯ” ಎಂದು ಟ್ವೀಟ್ ಮಾಡಿ ಪಾಕಿಸ್ತಾನದವರಿಗೆ ಭಾರತೀಯರ ಪೊಗರಿನ ಬಗ್ಗೆ ತಿಳಿಸಿಕೊಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತೀಯರನ್ನು ಕಂಡ್ರೆ ನಡುಗಬೇಕು, ಕಣ್ಣೆತ್ತಿಯೂ ನೋಡ್ಬಾರ್ದು- ಯೋಧ ಗುರು ತಂದೆ

    ಭಾರತೀಯರನ್ನು ಕಂಡ್ರೆ ನಡುಗಬೇಕು, ಕಣ್ಣೆತ್ತಿಯೂ ನೋಡ್ಬಾರ್ದು- ಯೋಧ ಗುರು ತಂದೆ

    ಮಂಡ್ಯ: ನಮ್ಮ ಭಾರತೀಯ ಮಗನನ್ನು ಬಲಿ ತೆಗೆದುಕೊಂಡವರು ಭೂಮಿಯ ಮೇಲೆ ಉಳಿಯಬಾರದು. ನಮ್ಮ ಭಾರತದ ಮೇಲೆ ಮತ್ತೆ ಯಾವತ್ತೂ ಉಗ್ರರು ದಾಳಿ ಮಾಡಲು ಮುಂದಾಗಬಾರದು ಎಂದು ಹುತಾತ್ಮ ಗುರು ಅವರ ತಂದೆ ಹೊನ್ನಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೊದಲು ದಾಳಿ ನಡೆಸಿದ ಭಾರತೀಯ ಸೈನ್ಯಕ್ಕೆ ಧನ್ಯವಾದ ಅರ್ಪಿಸಿದರು. ಬಳಿಕ ನಿಜವಾದ ಗಂಡಸರೇ ಆದರೆ ಭಾರತ ದೇಶಕ್ಕೆ ಬರಲಿ. ಹೇಡಿಗಳ ರೀತಿ ಬಚ್ಚಿಟ್ಟುಕೊಂಡಿದ್ದಾರೆ. ಅವರ ಮೇಲೆ ಇನ್ನೂ ದಾಳಿ ನಡೆಸಬೇಕು, ನಮ್ಮನ್ನ ಕಣ್ಣೆತ್ತಿ ಕೂಡ ನೋಡಬಾರದು. ಆ ರೀತಿ ಮಾಡಬೇಕು. ನಮ್ಮ ದೇಶದ ಜನರನ್ನ ಕಂಡರೆ ನಡುಗುವಂತೆ ಮಾಡಬೇಕು ಎಂದು ಹೇಳಿದ್ದಾರೆ.

    ನಮಗೆ ಆಗಿರುವ ಅನ್ಯಾಯ ಮತ್ತೆ ಯಾರಿಗೂ ಆಗಬಾರದು. ಭೂಮಿಯ ಮೇಲೆ ಉಗ್ರರನ್ನು ಬೇರು ಸಮೇತ ಕಿತ್ತು ಹಾಕಬೇಕು. ಉಗ್ರರು ಎಷ್ಟು ಜನರಿದ್ದರೆ ಅವರನ್ನು ಹುಡುಕಿ ಹುಡುಕಿ ಕೊಲ್ಲಬೇಕು. ಇನ್ನು ಉಳಿದವರು ಮುಂದೆ ಭಾರತದ ಮೇಲೆ ಕೈ ಎತ್ತಬಾರದು. ಭಾರತದ ಜನರನ್ನು ಕಂಡರೆ ಭಯ ಪಡಬೇಕು ಎಂದು ಅವರು ತಿಳಿಸಿದ್ದಾರೆ.

    ಭಾರತದವರು ಏನು ಮಾಡುತ್ತಾರೆ ಎನ್ನುವ ಭಯದಲ್ಲಿಯೇ ಉಗ್ರರು ಇರಬೇಕು. ನಮ್ಮವರನ್ನು ಅವರು ಮೋಸದಿಂದ ಕೊಲೆ ಮಾಡಿದ್ದಾರೆ. ಈಗ ಬಿಟ್ಟರೆ ಮತ್ತೆ ಅವರು ಸಿಗುವುದಿಲ್ಲ. ನಮ್ಮವರು ಉಗ್ರರನ್ನು ಮೋಸದಿಂದ ಕೊಲೆ ಮಾಡುತ್ತಿಲ್ಲ. ರಿಯಲ್ ಆಗಿ ಕೊಲೆ ಮಾಡುತ್ತಿದ್ದೀವಿ ಎಂದರು.

    https://www.youtube.com/watch?v=G0QMmWYgOEU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಟಾಕಿ ಸಿಡಿಸಿ, ಸಿಹಿ ಹಂಚಿ ರಾಜ್ಯದ ಜನತೆಯಿಂದ ಸಂಭ್ರಮವೋ ಸಂಭ್ರಮ

    ಪಟಾಕಿ ಸಿಡಿಸಿ, ಸಿಹಿ ಹಂಚಿ ರಾಜ್ಯದ ಜನತೆಯಿಂದ ಸಂಭ್ರಮವೋ ಸಂಭ್ರಮ

    ಬೆಂಗಳೂರು: ಪುಲ್ವಾಮ ಆತ್ಮಾಹುತಿ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ ಇಂದು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ಮೇಲೆ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿ 200ಕ್ಕೂ ಹೆಚ್ಚು ಉಗ್ರರನ್ನು ಉಡೀಸ್ ಮಾಡಿದೆ. ಈ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ವಿದ್ಯಾರ್ಥಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

    ಗಂಗಾವತಿಯ ಶ್ರೀ ರಾಘವೇಂದ್ರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆ ಮುಖಾಂತರ ವಿಜಯದ ಘೊಷಣೆ ಕೂಗುತ್ತ ಸಾಗಿದ್ದಾರೆ. ಶ್ರೀ ಕೃಷ್ಣ ದೇವರಾಯ ವೃತ್ತದಲ್ಲಿ ಪಟಾಕಿ ಸಿಡಿಸಿ ಉಗ್ರರ ದಾಳಿಗೆ ಪ್ರತಿಕಾರ ತಿರೀಸಿಕೊಂಡಿದಕ್ಕೆ ಹರ್ಷೊದ್ಘಾರ ವ್ಯಕ್ತಪಡಿಸಿದ್ದಾರೆ. ಇನ್ನೂ ಸಾರ್ವಜನಿಕರಿಗೆ ಸಿಹಿ ಹಂಚಿ ಸಂತಸವನ್ನು ಹಂಚಿಕೊಂಡರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪಾಕಿಸ್ತಾನವನ್ನು ಬಗ್ಗು ಬಡೆದಿದ್ದಾರೆ. ಕೂಡಲೇ ಮೋದಿ ಯುದ್ಧ ಘೋಷಿಸಿ ಪಾಕಿಸ್ತಾನ ಉಗ್ರರ ತಾಣಗಳನ್ನು ಉಡೀಸ್ ಮಾಡಿ ತಕ್ಕ ಉತ್ತರ ನೀಡ ಬೇಕು ಎಂದಿದ್ದಾರೆ. ಎರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವಿಧ್ಯಾರ್ಥಿಗಳು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇತ್ತ ಬೆಳಗಾವಿ ಕಪಿಲೇಶ್ವರ ದೇವಸ್ಥಾನದ ಆಡಳಿತ ವತಿಯಿಂದ ಉಗ್ರರ ಮೇಲೆ ಭಾರತೀಯ ಸೈನ್ಯ ವೈಮಾನಿಕ ದಾಳಿ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಸ್ಥಳೀಯ ಜನರು, ಆಟೋ ಚಾಲಕರು ದೇವಸ್ಥಾನದ ಮುಂಭಾಗದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಇನ್ನೂ ಮೈಸೂರು ಪ್ರಜ್ಞಾವಂತ ನಾಗರೀಕ ವೇದಿಕೆಯವರು ಅವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

    ಮೈಸೂರಿನ ಅಗ್ರಹಾರ ವೃತ್ತದಲ್ಲಿ ತ್ರಿವಣ ಧ್ವಜ ಹಿಡಿದು ಯೋಧರ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲದೇ ಮೋದಿ ಭಾವಚಿತ್ರ ಹಿಡಿದು ಪ್ರಜ್ಞಾವಂತ ಕಾರ್ಯಕರ್ತರು ಸಂಭ್ರಮಿಸಿದ್ದು, ಕಾಶ್ಮೀರ ನಮ್ಮದು ನಮ್ಮದು ಎಂದು ಘೋಷಣೆ ಕೂಗಿದ್ದಾರೆ. ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಭಾರತೀಯ ಸೇನೆಗೆ ಶಕ್ತಿ ತುಂಬುವಂತೆ ದೇವರಲ್ಲಿ ಪ್ರಾರ್ಥಿನೆ ಮಾಡಿಕೊಂಡಿದ್ದು, ಉಗ್ರರ ಮೇಲಿನ ದಾಳಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

    ಹಿಂದೂ ಪರ ಸಂಘಟನೆಗಳು ಕೋಲಾರ ನಗರದ ಹೊಸ ಬಸ್ ಸ್ಟಾಂಡ್ ಸರ್ಕಲ್ ನಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ತ್ರಿವಣ ಧ್ವಜ ಹಿಡಿದು ದೇಶದ ಯೋಧರ ಪರ ಘೋಷಣೆ ಕೂಗಿದ್ದು, ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಎಂದು ಘೋಷಣೆ ಕೂಗಿದ್ದಾರೆ.

    ಇನ್ನೂ ಉತ್ತರ ಕನ್ನಡದ ಶಿರಸಿಯಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಪಟಾಕಿ ಸಿಡಿಸಿ, ತಮಟೆ ಬಾರಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಉಗ್ರವಾದದ ವಿರುದ್ಧ ಭಾರತದ ದಿಟ್ಟ ಪ್ರತಿಕಾರಕ್ಕೆ ಶಿರಸಿ ನಗರದ ಪ್ರಮುಖ ಬೀದಿಗಳಲ್ಲಿ ವಿಜಯ ಮೆರವಣಿಗೆ ಮಾಡಿದ್ದಾರೆ.

    https://www.youtube.com/watch?v=zmcs1r70Pls

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತೀಯ ಸೈನ್ಯಕ್ಕೆ ಸೆಲ್ಯೂಟ್ ಹೊಡೆದು ಕಣ್ಣೀರಿಟ್ಟ ಕಲಾವತಿ

    ಭಾರತೀಯ ಸೈನ್ಯಕ್ಕೆ ಸೆಲ್ಯೂಟ್ ಹೊಡೆದು ಕಣ್ಣೀರಿಟ್ಟ ಕಲಾವತಿ

    ಮಂಡ್ಯ: ಭಾರತೀಯ ವಾಯುಸೇನೆಯು ನಮ್ಮ ಯೋಧರನ್ನು ಮೋಸದಲ್ಲಿ ಕೊಂದ ಉಗ್ರರ ಕೇಂದ್ರಗಳನ್ನು ಧ್ವಂಸ ಮಾಡಿದ ಭಾರತೀಯ ಸೈನ್ಯಕ್ಕೆ ಹುತಾತ್ಮ ಗುರು ಪತ್ನಿ ಕಲಾವತಿ ಅವರು ಸೆಲ್ಯೂಟ್ ಹೊಡೆದಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗುರು ಪತ್ನಿ ಕಲಾವತಿ, ಮೊದಲಿಗೆ ನಾನು ಭಾರತೀಯ ಸೈನ್ಯಕ್ಕೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಸೆಲ್ಯೂಟ್ ಮಾಡಿದ್ದಾರೆ. ಉಗ್ರರು ಎಲ್ಲೆಲ್ಲಿ ಅಡಗಿದ್ದಾರೆ ತಿಳಿದುಕೊಂಡು ಅವರನ್ನು ಬಿಡಬಾರದು. ನಮ್ಮ ಸರ್ಕಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: 21 ನಿಮಿಷದಲ್ಲಿ 3 ಉಗ್ರರ ತರಬೇತಿ ಶಿಬಿರಗಳು ಮಟಾಷ್

    ನಮ್ಮ ಸೈನಿಕರಿಗೆ ಇಷ್ಟನ್ನು ಧೈರ್ಯ, ಶಕ್ತಿ ಕೊಡಲಿ. ಜೊತೆಗೆ ಅವರಿಗೆ ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ. ಸೈನಿಕರೆಲ್ಲರೂ ಚೆನ್ನಾಗಿರಲಿ. ನಮ್ಮ ಸೈನಿಕರ ಬಗ್ಗೆ ನಾನು ತುಂಬಾ ಹೆಮ್ಮೆ ಪಡುತ್ತೇನೆ. ಅವರಿಗೆ ಗೌರವ ಕೊಡುತ್ತೇನೆ. ನಾನು ಇಂದು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಪತಿಯನ್ನು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ.

    ಇಂದು ಹುತಾತ್ಮ ಗುರು ಅವರು ಹನ್ನೊಂದು ದಿನದ ತಿಥಿ ಕಾರ್ಯ ನಡೆಯಲಿದ್ದು, ಈಗಾಗಲೇ ಊಟ, ಶಾಮಿಯಾನ, ಸಮಾಧಿಯ ಅಲಂಕಾರದ ಕಾರ್ಯವೂ ನಡೆಯುತ್ತಿದೆ. ಯೋಧ ಗುರು ಅವರ ತಿಥಿ ಕಾರ್ಯದ ಸಂಪೂರ್ಣ ಜವಬ್ದಾರಿಯನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ವಹಿಸಿಕೊಂಡಿದ್ದಾರೆ.

    https://www.youtube.com/watch?v=6FFjguZBwiI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `How is The Josh Sir’- ಭಾರತೀಯ ವೀರಯೋಧರಿಗೆ ಬಿಗ್ ಸೆಲ್ಯೂಟ್

    `How is The Josh Sir’- ಭಾರತೀಯ ವೀರಯೋಧರಿಗೆ ಬಿಗ್ ಸೆಲ್ಯೂಟ್

    ಬೆಂಗಳೂರು: ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನೋರ್ವನ ಆತ್ಮಾಹುತಿ ದಾಳಿಯಿಂದಾಗಿ 40 ಮಂದಿ ಯೋಧರು ಹುತಾತ್ಮರಾದ ಬೆನ್ನಲ್ಲೇ ಇದೀಗ ಭಾರತೀಯ ಸೇನೆ ಪ್ರತಿಕಾರ ತೀರಿಸಿದ್ದು, ಇಡೀ ದೇಶವೇ ವೀರ ಯೋಧರಿಗೆ ಬಿಗ್ ಸೆಲ್ಯೂಟ್ ಹೊಡೆಯುತ್ತಿದೆ.

    ಹೌದು. ಪುಲ್ವಾಮಾ ದಾಳಿಗೆ ಭಾರತೀಯ ಸೇನೆ ಪ್ರತೀಕಾರ ನೀಡಿದೆ ಎಂಬ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಎಲ್ಲರ ವಾಟ್ಸಪ್ ಹಾಗೂ ಫೇಸ್ ಬುಕ್ ನಲ್ಲಿ `How is The Josh Sir’ ಎಂದು ಬರೆದುಕೊಂಡು ಭಾರತೀಯ ಯೋಧರಿಗೆ ಬಿಗ್ ಸೆಲ್ಯೂಟ್ ಹೊಡೆಯುತ್ತಿದ್ದಾರೆ. ಈ ಮೂಲಕ ನಮ್ಮ ಸೈನಿಕರಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

    ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 200-300 ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗುತ್ತಿದೆ. ಮೊದಲಿಗೆ ಮುಂಜಾನೆ 3.45ರ ಸುಮಾರಿಗೆ ಬಾಲ್‍ಕೋಟ್ ಮೇಲೆ ದಾಳಿ ಮಾಡಿದೆ. ಬಳಿಕ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಲಾಗಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.

    ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ ಶಿಬಿರದ ಮೇಲೆ 100 ಕೆಜಿಯ 10 ಬಾಂಬ್ ಸಿಡಿಸಲಾಗಿದ್ದು, ಉಗ್ರರ ತಾಣದ 500 ಮೀ. ವ್ಯಾಪ್ತಿ ಧ್ವಂಸಗೊಂಡಿದೆ ಎನ್ನಲಾಗುತ್ತಿದ್ದು, ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದ್ರೆ ಪುಲ್ವಾಮಾ ದಾಳಿಯ 12 ನೇ ದಿನಕ್ಕೆ ಭಾರತೀಯ ಪ್ರತಿಕಾರ ತೀರಿಸಿರುವುದು ಸ್ಪಷ್ಟವಾಗಿದ್ದು, ಈ ಬಗ್ಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು `ಇದು ಮೋದಿ ಭಾರತ’ ಎಂದು ಹೇಳುವ ಮೂಲಕ ದಾಳಿ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

    ಬಾಂಬ್ ದಾಳಿಯ ವೇಳೆ ಮಿರಾಜ್ ಗೆ ಸುಖೋಯ್ ಯುದ್ಧ ವಿಮಾನ ಕೂಡ ಬೆಂಗಾವಲಾಗಿತ್ತು. ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿರಾಜ್-2000, ಏಕಕಾಲಕ್ಕೆ 1000 ಕೆ.ಜಿ ಲೇಸರ್ ಗೈಡೆಡೆ ಬಾಂಬ್ ಹಾಕಬಹುದಾದ ಸಾಮಥ್ರ್ಯ ಹೊಂದಿದೆ. ಹೀಗಾಗಿ ಈ ವಿಮಾನಕ್ಕೆ ಭಾರತೀಯ ವಾಯು ಸೇನೆ ` ವಜ್ರ’ ಎಂದು ಹೆಸರಿಟ್ಟಿದೆ. ಸದ್ಯ ದೇಶದ ವಾಯುನೆಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಯೋಧರು ಹುತಾತ್ಮ:
    ಫೆ.14 ರ ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು.

    ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದರು ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದರು. ಆತ್ಮಾಹುತಿ ದಾಳಿಕೋರ ಬಸ್ಸಿಗೆ ಕಾರನ್ನು ಡಿಕ್ಕಿ ಹೊಡೆದ ಬಳಿಕ ಉಳಿದ ಬಸ್ಸುಗಳು ನಿಂತ ಕೂಡಲೇ ಉಗ್ರರು ಗುಂಡಿನ ದಾಳಿ ಮಾಡಿದ್ದರು. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿತ್ತು. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿತ್ತು. ವಿಪರೀತ ಮಂಜು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿತ್ತು.

    ಉರಿ ದಾಳಿ:
    ಜಮ್ಮು ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ 2016ರ ಸೆಪ್ಟೆಂಬರ್ 18ರಂದು ನಾಲ್ವರು ಉಗ್ರರು ದಾಳಿ ನಡೆಸಿ 18 ಮಂದಿ ಯೋಧರನ್ನು ಹತ್ಯೆ ಮಾಡಿದ್ದರು. ಭಾರತೀಯ ಸೇನೆ ಸಮವಸ್ತ್ರ ಧರಿಸಿ ಅಕ್ರಮವಾಗಿ ಒಳ ನುಗ್ಗಿದ್ದ ಈ ಪಾಪಿಗಳು ಯೋಧರು ಮಲಗಿದ್ದಾಗ ದಾಳಿ ನಡೆಸಿ ಕೃತ್ಯ ಎಸಗಿದ್ದರು. ಇಲ್ಲಿಯವರೆಗೆ ದೇಶದ ಇತಿಹಾಸಲ್ಲಿ ಅತಿ ದೊಡ್ಡ ದಾಳಿ ಎಂಬ ಕುಖ್ಯಾತಿ ಗಳಿಸಿತ್ತು. ಈಗ ಇದಕ್ಕಿಂತಲೂ ಅತಿ ದೊಡ್ಡ ದಾಳಿ ನಡೆದಿದ್ದು ಉಗ್ರರ ಪಾಪಿ ಕೃತ್ಯಕ್ಕೆ ಅಮಾಯಕ 39 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

    ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

    ಕಾರವಾರ: ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸೈನಿಕರಿಗೆ ವಿಶೇಷವಾದ ಪ್ರಾಧಾನ್ಯತೆ ನೀಡುವ ಮೂಲಕ ಗೌರವ ಸೂಚಿಸುತ್ತಿದೆ.

    ಹೌದು. ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದಲ್ಲಿ ದೇವರ ದರ್ಶನಕ್ಕೆ ಬರುವ ನಿವೃತ್ತ ಮತ್ತು ಸೇವೆಯಲ್ಲಿರುವ ಭಾರತೀಯ ಸೈನಿಕರಿಗೆ ವಿಶೇಷ ಪ್ರಾಶಸ್ತ್ಯವನ್ನು ದೇವಾಲಯದ ಆಡಳಿತ ಮಂಡಳಿ ಕಲ್ಪಿಸಿದೆ.

    ಪ್ರವೇಶ ದ್ವಾರದಲ್ಲಿ ನಾಮಫಲಕವನ್ನು ಅಳವಡಿಸಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಅಥವಾ ನಿವೃತ್ತ ಹೊಂದಿದ ವೀರಯೋಧರು ದೇವಾಲಯದ ಕಾರ್ಯಾಲಯವನ್ನು ಸಂಪರ್ಕಿಸಿದರೆ, ಶ್ರೀ ದೇವರ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದೆ.

    ರಾಮಚಂದ್ರಾಪುರ ಮಠ ದೇವಾಲಯದ ಆಡಳಿತವನ್ನು ವಹಿಸಿಕೊಂಡಾಗಿನಿಂದ ಭಕ್ತರಿಗೆ ವಿವಿಧ ಅನುಕೂಲತೆಗಳನ್ನು ಕಲ್ಪಿಸಿದೆ. ಈಗ ನಮ್ಮ ಹೆಮ್ಮೆಯ ಸೈನಿಕರಿಗೂ ಶೀಘ್ರವೇ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದು, ಈ ಮೂಲಕ ಗೌರವ ಸೂಚಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಅಮೇರಿಕ ಡಿಜೆ ಮಾರ್ಷ್ ಮೆಲ್ಲೋ

    ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಅಮೇರಿಕ ಡಿಜೆ ಮಾರ್ಷ್ ಮೆಲ್ಲೋ

    ಪುಣೆ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಅಮೇರಿಕದ ಸಂಗೀತ ನಿರ್ಮಾಪಕ ಹಾಗೂ ಖ್ಯಾತ ಡಿಜೆ ಮಾರ್ಷ್ ಮೆಲ್ಲೋ ಅವರು ತಮ್ಮ ಸಂಗೀತ ಕಾರ್ಯಕ್ರಮದಲ್ಲಿ ಮೌನಾಚರಣೆ ಮಾಡುವ ಮೂಲಕ ನಮನವನ್ನು ಸಲ್ಲಿಸಿದ್ದಾರೆ.

    ಭಾನುವಾರದಂದು ಪುಣೆಯಲ್ಲಿ ನಡೆದ ವಿಎಚ್1 ಸೂಪರ್‍ಸೋನಿಕ್ 2019ರ ಸಂಗೀತ ಕಾರ್ಯಕ್ರಮಕ್ಕೆ ಮಾರ್ಷ್ ಮೆಲ್ಲೋ ಆಗಮಿಸಿದ್ದರು. ಈ ವೇಳೆ ತಮ್ಮ ಡಿಜೆ ಕಾರ್ಯಕ್ರಮವನ್ನು ಆರಂಭಿಸುವ ಮುನ್ನ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು 2 ನಿಮಿಷ ಮೌನಾಚರಣೆ ಮಾಡಿ ವೀರರಿಗೆ ನಮನ ಸಲ್ಲಿಸಿದ್ದಾರೆ.

    ಅಷ್ಟೇ ಅಲ್ಲದೇ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನನ್ನ ನಮನ ಎಂದು ಬರೆದು ಮಾರ್ಷ್ ಮೆಲ್ಲೋ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

    ಈ ಸಂಗೀತ ಕಾರ್ಯಕ್ರಮದಲ್ಲಿ ಸಾಕಷ್ಟು ಸ್ವದೇಶಿ ಕಲಾವಿದರು ತಮ್ಮ ಸಂಗೀತ ಕಾರ್ಯಕ್ರಮ ನೀಡಿದರು. ಆದರೇ ಯಾರು ಕೂಡ ಪುಲ್ವಾಮ ದಾಳಿಯನ್ನು ನೆನೆಪಿಸಿಕೊಳ್ಳಲಿಲ್ಲ. ವಿದೇಶಿ ಕಲಾವಿದರಾದರೂ ಮಾರ್ಷ್ ಮೆಲ್ಲೋ ಅವರು ಭಾರತದ ವೀರ ಯೋಧರಿಗೆ ನಮನ ಸಲ್ಲಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮರಾದ ಯೋಧರಿಗೆ ಮೆರವಣಿಗೆ ಮೂಲಕ ನಮನ ಸಲ್ಲಿಸಿದ ನವಜೋಡಿ!

    ಹುತಾತ್ಮರಾದ ಯೋಧರಿಗೆ ಮೆರವಣಿಗೆ ಮೂಲಕ ನಮನ ಸಲ್ಲಿಸಿದ ನವಜೋಡಿ!

    ಗಾಂಧಿನಗರ: ಗುಜರಾತಿನ ನವಜೋಡಿಯೊಂದು ತಮ್ಮ ಮದುವೆ ಮೆರವಣಿಗೆ ವೇಳೆ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ್ದಾರೆ.

    ಮದುವೆಯಾಗಿ ಕೇವಲ ಒಂದು ಗಂಟೆ ಸಮಯವಾಗಿದೆ ಅಷ್ಟೇ, ಆದ್ರೆ ತಮ್ಮ ಮದುವೆ ಸಂಭ್ರಮವನ್ನು ಆಚರಿಸುವ ಬದಲಾಗಿ ತಮ್ಮ ಮದುವೆ ಮೆರವಣಿಗೆ ವೇಳೆ ಹುತಾತ್ಮ ಯೋಧರ ಭಾವಚಿತ್ರವನ್ನು ಹಿಡಿದು ಗೌರವ ಸಲ್ಲಿಸಿದ್ದಾರೆ. ನವಜೋಡಿಗಳ ಈ ನಿರ್ಧಾರಕ್ಕೆ ಅವರ ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಕೂಡ ಸಾಥ್ ಕೊಟ್ಟು ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪುತ್ರಿ ಮದುವೆ ಊಟ ರದ್ದು ಮಾಡಿ 11 ಲಕ್ಷ ರೂ. ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ ಉದ್ಯಮಿ

    ಮೆರವಣಿಗೆಯ ಉದ್ದಕ್ಕೂ ಯೋಧರಿಗೆ ಜೈಕಾರ ಹಾಕುತ್ತ ಉಗ್ರರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ಹೊರಹಾಕಿದ್ದಾರೆ. ಹಾಗೆಯೇ ರಾಷ್ಟ್ರ ಧ್ವಜವನ್ನು ಹಿಡಿದು ಭಾರತದಲ್ಲಿ ಕೇವಲ 1427 ಹುಲಿಗಳಿಲ್ಲ, ಗಡಿಯಲ್ಲಿ 13 ಲಕ್ಷ ಹುಲಿಗಳು ದೇಶ ಕಾಯುತ್ತಿದ್ದಾರೆ ಎಂದು ಸಂದೇಶ ಸಾರಿದ್ದಾರೆ.

    ಕುದುರೆ ರಥದಲ್ಲಿ ನವಜೋಡಿಗಳು ಸಾಗುತ್ತಿದ್ದರೆ, ಅವರ ಮುಂದೆ ನೂರಾರು ಮಂದಿ ಭಾರತದ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅದರಲ್ಲೂ ಪುಟ್ಟ ಪುಟ್ಟ ಮಕ್ಕಳು ಧ್ವಜವನ್ನು ಹಿಡಿದು ಯೋಧರಿಗೆ ಜೈಕಾರ ಹಾಕಿದರೆ ಇನ್ನು ಕೆಲವರು ಸೈನಿಕರ ವೇಷಭೂಷಣ ಧರಿಸಿ ಮೆರೆವಣಿಗೆಯಲ್ಲಿ ಸಾಗುತ್ತಿದ್ದ ದೃಶ್ಯ ಎಲ್ಲರ ಗಮನ ಸೆಳೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv