Tag: Soliga Girl

  • PUBLiC TV Impact – ಸೋಲಿಗ ಬಾಲಕಿಗೆ ಆಧಾರ್ ಕಾರ್ಡ್ ನೋಂದಣಿ

    PUBLiC TV Impact – ಸೋಲಿಗ ಬಾಲಕಿಗೆ ಆಧಾರ್ ಕಾರ್ಡ್ ನೋಂದಣಿ

    ಚಾಮರಾಜನಗರ: ಸೋಲಿಗ ಬಾಲಕಿ ಚೈತ್ರಗೆ 12 ವರ್ಷವಾದರೂ ಕೂಡ ಇಲ್ಲಿಯವರೆಗೂ ಕೂಡ ಆಧಾರ್ ಕಾರ್ಡ್ (Aadhar Card) ಇಲ್ಲದೇ ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿರಲಿಲ್ಲ. ಈ ಬಗ್ಗೆ ಪಬ್ಲಿಕ್ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಪ್ರಸಾರದ ಬಳಿಕ ಕೆಲವೇ ಘಂಟೆಗಳಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಬಾಲಕಿ ಚೈತ್ರಗೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಟ್ಟಿದ್ದಾರೆ.

    ಚೈತ್ರ ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanur) ತಾಲೂಕಿನ ಕೌಳೇಹಳ್ಳ ನಿವಾಸಿಯಾಗಿದ್ದು, ದಿನನಿತ್ಯ ಲೊಕ್ಕನಹಳ್ಳಿಗೆ ಕರ್ನಾಟಕ ಪಬ್ಲಿಕ್ ಶಾಲೆಯ ವ್ಯಾಸಂಗಕ್ಕಾಗಿ ಹೋಗುತ್ತಿದ್ದಳು. ದಿನಾ 30 ರೂ. ಬಸ್ ಚಾರ್ಜ್ ಕೊಟ್ಟು ಓಡಾಡುವ ಪರಿಸ್ಥಿತಿ ಇತ್ತು. ಅಲ್ಲದೇ ಸರ್ಕಾರದ ಬಹುತೇಕ ಎಲ್ಲಾ ಸೌಲಭ್ಯದಿಂದ ವಂಚಿತಳಾಗಿದ್ದಳು. ಇದನ್ನೂ ಓದಿ: ಮತ್ತೆ ಉದ್ಯೋಗಕ್ಕೆ ಮರಳಿದ ರಿಷಿ ಸುನಕ್ – 70 ಗಂಟೆ ಕೆಲ್ಸ ಮಾಡಿ ಎಂದು ನೆಟ್ಟಿಗರ ಅಪಹಾಸ್ಯ

    ಈ ಬಗ್ಗೆ ಪಬ್ಲಿಕ್ ಟಿವಿ ವಿಸ್ತೃತ ವರದಿಗೆ ಜಿಲ್ಲಾಡಳಿತ ಸ್ಪಂದಿಸಿದ್ದು, ಬಾಲಕಿ ಚೈತ್ರಗೆ ತೊಡಕಾಗಿದ್ದ ಆಧಾರ್ ಕಾರ್ಡ್ ನೋಂದಣಿಯನ್ನು ಮಾಡಿಸಲಾಗಿದೆ. ಅಲ್ಲದೇ ಶೀಘ್ರದಲ್ಲೇ ಬಾಲಕಿ ಮನೆಗೆ ಆಧಾರ್ ಕಾರ್ಡ್ ತಲುಪುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಈ ಹಿನ್ನಲೆ ಪಬ್ಲಿಕ್ ಟಿವಿಗೆ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

  • ಬರ್ತ್ ಸರ್ಟಿಫಿಕೇಟ್ ಇಲ್ಲದೇ ಸಿಗದ ಆಧಾರ್ ಕಾರ್ಡ್ – ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಸೋಲಿಗ ಬಾಲಕಿ ಶಾಲೆಗೆ ಓಡಾಟ

    ಬರ್ತ್ ಸರ್ಟಿಫಿಕೇಟ್ ಇಲ್ಲದೇ ಸಿಗದ ಆಧಾರ್ ಕಾರ್ಡ್ – ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಸೋಲಿಗ ಬಾಲಕಿ ಶಾಲೆಗೆ ಓಡಾಟ

    ಚಾಮರಾಜನಗರ: ಬರ್ತ್‌ ಸರ್ಟಿಫಿಕೇಟ್‌ ಇಲ್ಲದೇ ಆಧಾರ್‌ ಕಾರ್ಡ್‌ ಸಿಗದ ಕಾರಣ, ಶಕ್ತಿ ಯೋಜನೆಯಡಿ ಬಸ್‌ನಲ್ಲಿ ಉಚಿತ ಪ್ರಯಾಣದಿಂದ ಸೋಲಿಗ ಬಾಲಕಿಯೊಬ್ಬಳು ವಂಚಿತಳಾಗಿದ್ದಾಳೆ. ಆಕೆ ನಿತ್ಯ 30 ರೂ. ಬಸ್‌ ಚಾರ್ಜ್‌ ಕೊಟ್ಟು ಓಡಾಡುವಂತಹ ದುಸ್ಥಿತಿ ಎದುರಾಗಿದೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌಳೇಹಳ್ಳ ಡ್ಯಾಂ ನಿವಾಸಿ ಎಸ್.ಚೈತ್ರಾ ಎಂಬಾಕೆಯ ದುಸ್ಥಿತಿಯಾಗಿದೆ. ಬಾಲಕಿ ಚೈತ್ರಾ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಿತ್ಯವೂ ಕೂಡ ಶಾಲೆಗೆ ಕೌಳೇಹಳ್ಳದಿಂದ ಲೊಕ್ಕನಹಳ್ಳಿಗೆ ಸಂಚರಿಸಬೇಕಿದೆ. ಇದಕ್ಕಾಗಿ ನಿತ್ಯ 30 ರೂ. ಖರ್ಚು ಮಾಡುವ ಪರಿಸ್ಥಿತಿ ಇದೆ. ಪುಟ್ಟ ಹೆಣ್ಣು ಮಗುವಿನಿಂದ ಹಿಡಿದು ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಕ್ತಿ ಯೋಜನೆಯಡಿ ಕೆ‌ಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇದೆ. ಆದರೆ, ಈ ಸೋಲಿಗ ಬಾಲಕಿಗೆ ಮಾತ್ರ ಉಚಿತ ಪ್ರಯಾಣದ ಭಾಗ್ಯವಿಲ್ಲ. ಪ್ರತಿ ದಿನ 30 ರೂಪಾಯಿ ಬಸ್ ಚಾರ್ಜ್ ತೆತ್ತು ಶಾಲೆಗೆ ಹೋಗಿ ಬರುವ ಪರಿಸ್ಥಿತಿ ಇದೆ. ಮೊದಲೇ ಬಡ ವಿದ್ಯಾರ್ಥಿ, ಉಚಿತ ಸೌಲಭ್ಯದಿಂದ ವಂಚಿತವಾಗಿದ್ದೇನೆ ಅಂತಾ ಅಳಲು ತೋಡಿಕೊಳ್ಳುತ್ತಿದ್ದಾರೆ.

    ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆ, ಬಸ್ ಪ್ರಯಾಣ ಎಲ್ಲದಕ್ಕೂ ಆಧಾರ್ ಕಾರ್ಡ್ ಬೇಕೇಬೇಕು. ಆದರೆ, ಆಧಾರ್ ಕಾರ್ಡ್ ಇಲ್ಲದೆ ಎಲ್ಲ ಸೌಲಭ್ಯಗಳಿಂದ ವಂಚಿತಳಾಗಿದ್ದಾಳೆ. ಮನೆಯಲ್ಲೇ ಜನಿಸಿದ್ದರಿಂದ ಬರ್ತ್ ಸರ್ಟಿಫಿಕೇಟ್ ಸಿಕ್ಕಿಲ್ಲ. ಬರ್ತ್ ಸರ್ಟಿಫಿಕೇಟ್ ಇಲ್ಲದೆ ಆಧಾರ್ ಕಾರ್ಡ್ ಕೊಡ್ತಿಲ್ಲ. ತಂದೆ ಇಲ್ಲ, ತಾಯಿ ಮಹದೇವಮ್ಮ ಕೂಲಿ ಕೆಲಸ ಮಾಡ್ತಿದ್ದಾಳೆ. ನಿತ್ಯ ಕೂಲಿ ಮಾಡಿ ಮಗಳಿಗೆ ಬಸ್ ಚಾರ್ಜ್ ಕೊಟ್ಟು ಕಳಿಸಬೇಕಾಗಿದೆ. ಕೂಡಲೇ ಆಧಾರ್ ಕಾರ್ಡ್ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.