Tag: Somashekar

  • ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

    ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

    ಬೆಂಗಳೂರು: ಬಿಜೆಪಿಯ (BJP)  ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌ (ST Somashekar)  ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ (Shivaram Hebbar) ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

    ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.

    ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್‌ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ ಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಇಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಂಡಿದೆ.  ಇದನ್ನೂ ಓದಿ: ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ರೆಡ್ಡಿ ಶಿಫ್ಟ್‌

     
    ಉಚ್ಚಾಟನೆಗೆ ಕಾರಣ ಏನು?
    ಪದೇ ಪದೇ ಡಿಕೆಶಿ ನಿವಾಸದ ಕದ ತಟ್ಟುತ್ತಿದ್ದ ಇಬ್ಬರು ಶಾಸಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಾರ್ವಜನಿಕ ಸಭೆಗಳಲ್ಲಿ ಹೊಗಳುತ್ತಿದ್ದರು. ಗ್ಯಾರಂಟಿ, ಸರ್ಕಾರದ ಯೋಜನೆಗಳಿಗೆ ಶಹಬ್ಬಾಸ್‌ಗಿರಿ ನೀಡುತ್ತಿದ್ದರು.

    ಕಾಂಗ್ರೆಸ್ ಸರ್ಕಾರದ ವಿರುದ್ಧದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸದೇ ಡೋಂಟ್ ಕೇರ್ ಎನ್ನುತ್ತಿದ್ದರು. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ, ಸಂಘಟನಾ ಸಭೆಗಳಿಂದ ದೂರ ಉಳಿದಿದ್ದರು. ಬಿಜೆಪಿಯೊಳಗಿನ ಭಿನ್ನಮತದ ಬಗ್ಗೆ ಬಹಿರಂಗ ವ್ಯಂಗ್ಯ, ಒಂದು ಗುಂಪಿನ ಬಗ್ಗೆ ನಿರಂತರ ವಾಗ್ದಾಳಿ ನಡೆಸುತ್ತಿದ್ದರು.

  • ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    – ಮದುವೆಗೆ ಸಾಲ ಕೊಡುವುದಾಗಿ ಕರೆಸಿಕೊಂಡು ಕೃತ್ಯ

    ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ (BJP) ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ (Ashoknagar) ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು. ಇದನ್ನೂ ಓದಿ: ಚೀನಿ ವೈರಸ್‌ ಪತ್ತೆಯಾದ 8 ತಿಂಗಳ ಮಗು ಇಂದು ಡಿಸ್ಚಾರ್ಜ್‌

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಹೊರಗಡೆ ಹೇಳಿದರೆ ಪ್ರಾಣ ತೆಗೆಯೋದಾಗಿ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ. ಇದನ್ನೂ ಓದಿ: Tumakuru| ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ – ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

    ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾಳೆ. ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಪರಾಜಯಗೊಂಡಿದ್ದ ಸೋಮಶೇಖರ್ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ಚುನಾವಣಾ ದಿನಾಂಕ ಪ್ರಕಟ

  • ರಾಜಕಾರಣ ಬೇರೆ ವೈಯುಕ್ತಿಕ ಸಂಬಂಧ ಬೇರೆ ಮತ್ತೊಮ್ಮೆ ಸಾಬೀತು

    ರಾಜಕಾರಣ ಬೇರೆ ವೈಯುಕ್ತಿಕ ಸಂಬಂಧ ಬೇರೆ ಮತ್ತೊಮ್ಮೆ ಸಾಬೀತು

    ಬೆಂಗಳೂರು: ರಾಜಕೀಯ ಜಿದ್ದಿಗೆ ಬಿದ್ದು ಬೈದಾಡಿಕೊಂಡವರು. ಪರಸ್ಪರ ಚುನಾವಣೆಯಲ್ಲಿ ವಿರುದ್ಧ ಸ್ಪರ್ಧಿಸಿದವರು. ಒಬ್ಬರನೊಬ್ಬರು ಟೀಕಿಸಿಕೊಂಡು ದೂರಾದವರು. ಎಲ್ಲರೂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆಗೆ ಬಂದು ರಾಜಕಾರಣ ಬೇರೆ ವೈಯುಕ್ತಿಕ ಸಂಬಂಧ ಬೇರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.

    ಹೃದಯ ಸಂಬಂಧಿ ಕಾಯಿಲೆಯಿಂದ ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯರನ್ನು ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ವಿಶ್ವನಾಥ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

    ಸಿದ್ದರಾಮಯ್ಯರನ್ನ ಚುನಾವಣೆಯಲ್ಲಿ ಸೋಲಿಸಿದ್ದ ಜಿ.ಟಿ.ದೇವೇಗೌಡ ಮುನಿಸು ಮರೆತು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರೆ ಸಿದ್ದರಾಮಯ್ಯರ ಮೇಲೆ ಮುನಿಸಿಕೊಂಡು ಪಕ್ಷ ತೊರೆದಿದ್ದ ಹೆಚ್ ವಿಶ್ವನಾಥ್ ಸಹಾ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

    ಸಮ್ಮಿಶ್ರ ಅರ್ಕಾರ ಪತನಕ್ಕೆ ಕಾರಣರಾದ ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್ ಹಾಗೂ ಮುನಿರತ್ನ ಸಹಾ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದರು. ಇದನ್ನೂ ಓದಿ: ಸಿಎಂ ಬಂದ್ರು ಚೇರ್ ಕೊಡ್ರಪ್ಪ: ಸಿದ್ದರಾಮಯ್ಯ

    ರಾಜಕೀಯ ಅಖಾಡದಲ್ಲಿ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ್ದ ಎಲ್ಲರು ಬೇಸರ ಮರೆತು ಒಗ್ಗೂಡಿದ್ದು ರಾಜಕಾರಣದಲ್ಲಿ ಯಾರು ಶಾಶ್ವತ ಶತ್ರುಗಳಲ್ಲ ಎನ್ನುವ ಮಾತು ಮತ್ತೊಮ್ಮೆ ನಿಜವಾಗಿದೆ. ಗುರುವಾರ ಸಿಎಂ ಯಡಿಯೂರಪ್ಪ ಮತ್ತು ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದ್ದರು.

  • ಬೆಳ್ಳಂಬೆಳಗ್ಗೆ ಶಾಸಕರಿಂದ ಅಧಿಕಾರಿಗಳಿಗೆ ಕ್ಲಾಸ್

    ಬೆಳ್ಳಂಬೆಳಗ್ಗೆ ಶಾಸಕರಿಂದ ಅಧಿಕಾರಿಗಳಿಗೆ ಕ್ಲಾಸ್

    ಬಳ್ಳಾರಿ: ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಬಳ್ಳಾರಿಯ ಗಣೇಶ್ ಕಾಲೋನಿಯಲ್ಲಿ ಒಳಚರಂಡಿ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿದ್ದರು. ಹೀಗಾಗಿ ಸೋಮಶೇಖರ್ ಅವರು ಮಹಾನಗರ ಪಾಲಿಕೆ ಆಯುಕ್ತೆ ತುಷಾರಾಮಣಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಜನರ ಸಮಸ್ಯೆ ಪರಿಹಾರ ಮಾಡದೇ ಇರುವ ಹಿನ್ನೆಲೆಯಲ್ಲಿ ಸೋಮಶೇಖರ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಜಲಾವೃತ ಆದ ಮನೆಯ ಕಟ್ಟೆಯ ಮೇಲೆ ಕುಳಿತು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

    ನಗರದಲ್ಲಿ ಪದೇ ಪದೇ ಯುಜಿಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಲಾಗುತ್ತಿದೆ. ಸೋಮಶೇಖರ್ ಕ್ಲಾಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಹನಗಳನ್ನು ತರಿಸಿ ಕ್ಲೀನ್ ಮಾಡಲು ಮುಂದಾಗಿದ್ದಾರೆ.