Tag: Somashekhar

  • ಕನ್ನಡದಲ್ಲಿ ಮತ್ತೊಂದು ‘ಮುಂಗಾರು ಮಳೆ’ ಆಗಮನ: ನಾಳೆ ಟ್ರೈಲರ್ ರಿಲೀಸ್

    ಕನ್ನಡದಲ್ಲಿ ಮತ್ತೊಂದು ‘ಮುಂಗಾರು ಮಳೆ’ ಆಗಮನ: ನಾಳೆ ಟ್ರೈಲರ್ ರಿಲೀಸ್

    ಗಾಗಲೇ ಕನ್ನಡ ಚಿತ್ರೋದ್ಯಮದ ಹಲವು ಮುಂಗಾರುಗಳನ್ನು ಕಂಡಿದೆ. ಮುಂಗಾರು ಮಳೆಯಂತೂ ನೆನಪಿಡುವಂತೆ ಸುರಿದಿದೆ. ಇದೀಗ ಮತ್ತೊಂದು ಮುಂಗಾರು ಮಳೆಯ (Munagaru Male) ಕಥೆಯನ್ನು ಹೇಳಲು ಹೊರಟಿದ್ದಾರೆ ಹಿರಿಯ ಪತ್ರಕರ್ತ ಮಾ.ಸೋಮಶೇಖರ್ (Somashekhar). ಹಲವು ಕಥೆಗಳ ಗುಚ್ಛವನ್ನು ಹುಡುಕಿ ತೆಗೆದಿದ್ದು, ಒಂದೊಂದೇ ಕಥೆಗಳನ್ನು ಶಾರ್ಟ್ ಸಿನಿಮಾಗಳ ಮೂಲಕ ಹೇಳುತ್ತಾ ಹೋಗುತ್ತಿದ್ದಾರೆ.

    ಪ್ರೀತಿ, ಪ್ರೇಮ, ವಿರಹ ಹೀಗೆ ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಂಡು ಹಲವು ಕಂತುಗಳಲ್ಲಿ ಈ ಕಥೆಗಳನ್ನು ಹೇಳುತ್ತಾ ಹೋಗುತ್ತಾರಂತೆ. ಅದರ ಮೊದಲ ಭಾಗವಾಗಿ ಮುಂಗಾರು ಮಳೆ ಕಥೆಯನ್ನು ಹೇಳುತ್ತಿದ್ದಾರೆ. ಈ ಎಲ್ಲ ಗುಚ್ಛಕ್ಕೆ ಅವರು ‘ಖಾಸಗಿ ಕಥೆಗಳು’ (Khasagi Kathegalu) ಎಂದು ಹೆಸರನ್ನು ಇಟ್ಟಿದ್ದಾರೆ. ಭಾಗ 2ರಲ್ಲಿ ಮತ್ತೊಂದು ಕಥೆಯನ್ನು ಹೇಳುತ್ತಾರಂತೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಖಾಸಗಿ ಕಥೆಗಳು ಶಾರ್ಟ್ ಮೂವೀಯಲ್ಲಿ ಹಲವು ಬಗೆಯ ಕಥೆಗಳನ್ನು ಹೇಳುತ್ತಿದ್ದೇನೆ. ಪ್ರತಿ ಕಥೆಗೂ ಕಲಾವಿದರು ಬದಲಾಗುತ್ತಾರೆ. ಪ್ರೀತಿ, ಪ್ರೇಮ, ವಿರಹವೇ ಇಲ್ಲಿ ಪ್ರಧಾನವಾಗಿರಲಿದೆ. ಯಾರೂ ಹೇಳಿಕೊಳ್ಳಲಾಗದ ಕಥೆಗಳನ್ನು ಹುಡುಕಿದ್ದೇನೆ. ಕಥೆಯ ಮಧ್ಯ ಮಧ್ಯೆ ಕವಿತೆಗಳು ಬಂದು ಹೋಗುತ್ತವೆ. ಇದೇ ಈ ಸೀರಿಸ್‍್ ನ ಬ್ಯೂಟಿ ಎನ್ನುತ್ತಾರೆ ನಿರ್ದೇಶಕ ಸೋಮಶೇಖರ್.

    ಮುಂಗಾರು ಮಳೆ ಕಥೆಯಲ್ಲಿ ಹೇಮಲತಾ (Hemalatha) ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ಅವರ ಫಸ್ಟ್ ಲುಕ್ ಅನ್ನು ನಿರ್ದೇಶಕರು ಬಿಡುಗಡೆ ಮಾಡಿದ್ದರು. ನಾಳೆ ಸಂಜೆ 5 ಗಂಟೆಗೆ ಮುಂಗಾರು ಮಳೆಯ ಟ್ರೈಲರ್ (Trailer) ರಿಲೀಸ್ ಆಗುತ್ತಿದೆ. ಎಸ್.ಜೆ ದೊಡ್ಮನೆ ಈ ಶಾರ್ಟ್ ಮೂವೀಗೆ ಹಣ ಹೂಡಿದ್ದು, ಚೇತನ್ ಚಾರ್ಲಿ ಕ್ರಿಯೇಟಿವ್ ಹೆಡ್ ಆಗಲಿ ಕೆಲಸ ಮಾಡಿದ್ದಾರೆ. ಪ್ರಸನ್ನ ಕುಮಾರ್ ಅವರ ಸಂಗೀತ, ಲೋಕೇಶ್ ನಾಯ್ಡು ಅವರ ಕ್ಯಾಮೆರಾ, ನಿತಿನ್ ರಾಜ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಲನಚಿತ್ರ ನಿರ್ಮಾಣ ನಿರ್ವಾಹಕರ ಸಂಘಕ್ಕೆ ಸೋಮಶೇಖರ್ ನೂತನ ಸಾರಥಿ

    ಚಲನಚಿತ್ರ ನಿರ್ಮಾಣ ನಿರ್ವಾಹಕರ ಸಂಘಕ್ಕೆ ಸೋಮಶೇಖರ್ ನೂತನ ಸಾರಥಿ

    ರ್ನಾಟಕ ಚಲನಚಿತ್ರ (Film) ನಿರ್ಮಾಣ ನಿರ್ವಾಹಕ ಸಂಘದ 2022 ಹಾಗೂ 2023ರ ಸಾಲಿನ ಚುನಾವಣೆ ಕಳೆದ ತಿಂಗಳ 12ರಂದು‌ ನಡೆದಿತ್ತು. ಇದೀಗ ವಿಜೇತರಾದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಸೋಮಶೇಖರ್ ಎಸ್ (Somashekhar) ಆಯ್ಕೆಯಾಗಿದ್ದಾರೆ.

    ಉಳಿದಂತೆ ಉಪಾಧ್ಯಕ್ಷರಾಗಿ ಚಲುವರಾಜು.ಎಸ್ ಮತ್ತು  ರಮೇಶ್ ಬಿ.ಜಿ,  ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಮೂರ್ತಿ ಬಿ.ಜಿ, ಸಹಕಾರ್ಯದರ್ಶಿ ಆಗಿ ನರಸಿಂಹ ಹೆಚ್, ನರೇಶ್ ಕುಮಾರ್ ಆರ್ ಹಾಗೂ ಶಶಿಧರ್ ಜಿ, ಖಂಜಾಚಿಯಾಗಿ ಸುನಿಲ್ ಕುಮಾರ್ ಬಿ.ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯಶ್‌ ಜೊತೆ ದಿಲ್‌ ರಾಜು ಹೊಸ ಸಿನಿಮಾ- ಅಪ್‌ಡೇಟ್‌ ಹಂಚಿಕೊಂಡ ನಿರ್ಮಾಪಕ

    ಚುನಾವಣೆಯಲ್ಲಿ ಗೆಲುವು ಪಡೆದ ಎಲ್ಲಾ ಪದಾಧಿಕಾರಿಗಳು ಇತ್ತೀಚೆಗಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ (B.M. Harish) ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ. ಪ್ರಕಾಶ್ ಮಧುಗಿರಿ, ಸುಧೀಂದ್ರ, ರವಿಶಂಕರ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

  • ನಟ ಸೋಮಶೇಖರ್ ಪ್ರಚಾರಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾನೆ : ನಟಿ ನಯನಾ

    ನಟ ಸೋಮಶೇಖರ್ ಪ್ರಚಾರಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾನೆ : ನಟಿ ನಯನಾ

    ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ತಮಗೆ ಜೀವ ಬೆದರಿಕೆ ಹಾಗೂ ನಿಂದನೆ ಮಾಡಿದ್ದಾರೆ ಎಂದು ನಟಿ ಸೋಮಶೇಖರ್ ನಿನ್ನೆಯಷ್ಟೇ ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಯನಾ, ಪ್ರಚಾರಕ್ಕಾಗಿ ಸೋಮಶೇಖರ್ ಹೀಗೆಲ್ಲ ಮಾಡುತ್ತಿದ್ದಾನೆ. ಅಥವಾ ಅವನ ಹಿಂದೆ ಯಾರೂ ನಿಂತು ಈ ರೀತಿ ಮಾಡಿಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಮೂರು ಆಡಿಯೋಗಳು ವೈರಲ್ ಆಗಿದ್ದು, ನಯನಾ ಸಭ್ಯವಲ್ಲದ ಪದಗಳನ್ನು ಆಡಿದ್ದಾರೆ. ‘ನಾನು ಎಂಥವಳು ಅಂತ ನಿನಗೆ ಗೊತ್ತಿಲ್ಲ. ಬೆಂಗಳೂರಿಗೆ ಬಂದ ಮೇಲೆ ನನ್ನನ್ನು ನೀನು ಕಾಣದೇ ಇದ್ದರೆ, ನಾನು ಏನು ಅಂತ ತೋರಿಸ್ತೇನೆ. ನಾನು ಏನು ಮಾಡಬಹುದು ಅಂತ ಅಂದಾಜು ನಿನಗಿರಲ್ಲ’ ಎಂದು ಧಮಕಿ ಕೂಡ ಹಾಕಿದ್ದಾರೆ. ಅಲ್ಲದೇ, ಮಾತಿನ ಮಧ್ಯ ಒಂದೊಂದು ಅಸಭ್ಯ ಪದಗಳನ್ನೂ ಬಳಸುತ್ತಾರೆ. ಈ ಆಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ.

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ಸೋಮಶೇಖರ್ ಗೆ ಅವಾಚ್ಯ ಪದಗಳಿಂದ ಬೈದ ನಟಿ ನಯನಾರ ಆಡಿಯೋ ವೈರಲ್

    ನಟ ಸೋಮಶೇಖರ್ ಗೆ ಅವಾಚ್ಯ ಪದಗಳಿಂದ ಬೈದ ನಟಿ ನಯನಾರ ಆಡಿಯೋ ವೈರಲ್

    ಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ನಟಿ ನಯನಾ ತಮ್ಮದೇ ತಂಡದ ಸದಸ್ಯನೊಬ್ಬನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾದ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಯನಾ ಆಡಿದ ಮಾತುಗಳಿಂದ ನೊಂದುಕೊಂಡಿರುವ ನಟ ಸೋಮಶೇಖರ್, ಬೆಂಗಳೂರಿನ ಆರ್.ಆರ್ ನಗರದ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸೋಮಶೇಖರ್ ಅವರೇ ನೀಡಿರುವ ಆಡಿಯೋದಲ್ಲಿ ನಯನಾ ಆಡಬಾರದ ಪದಗಳನ್ನು ಆಡಿದ್ದಾರೆ. ಆ ಆಡಿಯೋ ವಾಟ್ಸಪ್ ಅಮೂಲಕ ಸಾಕಷ್ಟು ಜನರಿಗೆ ಹಂಚಿಕೆಯಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಮೂರು ಆಡಿಯೋಗಳು ವೈರಲ್ ಆಗಿದ್ದು, ನಯನಾ ಸಭ್ಯವಲ್ಲದ ಪದಗಳನ್ನು ಆಡಿದ್ದಾರೆ. ‘ನಾನು ಎಂಥವಳು ಅಂತ ನಿನಗೆ ಗೊತ್ತಿಲ್ಲ. ಬೆಂಗಳೂರಿಗೆ ಬಂದ ಮೇಲೆ ನನ್ನನ್ನು ನೀನು ಕಾಣದೇ ಇದ್ದರೆ, ನಾನು ಏನು ಅಂತ ತೋರಿಸ್ತೇನೆ. ನಾನು ಏನು ಮಾಡಬಹುದು ಅಂತ ಅಂದಾಜು ನಿನಗಿರಲ್ಲ’ ಎಂದು ಧಮಕಿ ಕೂಡ ಹಾಕಿದ್ದಾರೆ. ಅಲ್ಲದೇ, ಮಾತಿನ ಮಧ್ಯ ಒಂದೊಂದು ಅಸಭ್ಯ ಪದಗಳನ್ನೂ ಬಳಸುತ್ತಾರೆ. ಈ ಆಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ. ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿಗೆ IFFI ವ್ಯಕ್ತಿತ್ವ ಪ್ರಶಸ್ತಿ ಗೌರವ

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ.

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    ನ್ನಡದ ಜನಪ್ರಿಯ ಶೋ ಕಾಮಿಡಿ ಕಿಲಾಡಿಗಳ (Comedy Khiladigalu) ಮೂಲಕ ಫೇಮಸ್ ಆಗಿರುವ ಹಾಗೂ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ಹಾಸ್ಯ ಪಾತ್ರ ಮಾಡಿರುವ ನಯನಾ ವಿರುದ್ಧ ಬೆಂಗಳೂರಿನ ಆರ್.ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಸ್ಯ ಕಲಾವಿದೆ ನಯನಾ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಸೋಮಶೇಖರ್ ಎನ್ನುವವರು ದೂರು ನೀಡಿದ್ದಾರೆ.

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕನ್ನಡತಿ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ APMC ಕಾಯ್ದೆ ವಾಪಸ್ ಇಲ್ಲ: ಸೋಮಶೇಖರ್

    ರಾಜ್ಯದಲ್ಲಿ APMC ಕಾಯ್ದೆ ವಾಪಸ್ ಇಲ್ಲ: ಸೋಮಶೇಖರ್

    ಬೆಳಗಾವಿ: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ವಾಪಸ್ ಇಲ್ಲ ಎಂದು ಸಹಕಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

    ಎಪಿಎಂಸಿ ಕಾಯ್ದೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕಾಯ್ದೆಯಿಂದ ರೈತರಿಗೆ ಯಾವುದೇ ಅನಾನುಕೂಲ ಇಲ್ಲ. ರೈತರು ಎಲ್ಲಿ ಬೇಕಾದ್ರು ತಮ್ಮ ಉತ್ಪನ್ನಗಳನ್ನ ಮಾರಾಟ ಮಾಡಲು ಈ ಕಾಯ್ದೆಯಲ್ಲಿ ಅವಕಾಶ ಇರುತ್ತೆ. ಇದರಿಂದ ರೈತನಿಗೆ ಅನುಕೂಲ ಆಗುತ್ತೆ. ಈ ಮೊದಲು ಎಪಿಎಂಸಿ ಬಿಟ್ಟು ಹೊರಗೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ ಇತ್ತು. ಈಗ ಹೊಸ ಕಾಯ್ದೆಯಲ್ಲಿ ಅದನ್ನ ತೆಗೆಯಲಾಗಿದೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ರೈತ ತಾನು ಬೆಳೆದ ಬೆಳೆ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಇದರಿಂದ ರೈತರಿಗೆ ಯಾವುದೇ ಧಕ್ಕೆ ಆಗೊಲ್ಲ. ಹೀಗಾಗಿ ಎಪಿಎಂಸಿ ಕಾಯ್ದೆ ವಾಪಸ್ ಪಡೆಯೊಲ್ಲ. ಎಪಿಎಂಸಿಗಳನ್ನ ಯಾವುದೇ ಕಾರಣಕ್ಕೂ ಮುಚ್ಚೋದಿಲ್ಲ. ಎಪಿಎಂಸಿ ಲಾಭದಲ್ಲಿ ನಡೆಯುತ್ತಿದೆ. ಲಾಭದಿಂದ ನಡೆಯೋ ಸಂಸ್ಥೆಯನ್ನ ಯಾಕೆ ಮುಚ್ಚೋಣ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು

    ಕಾಂಗ್ರೆಸ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋ ವಿಚಾರವಾಗಿ ಮಾತನಾಡಿದ ಅವರು, 7-8 ವರ್ಷಗಳಿಂದ ನಾವು ಅಧಿವೇಶನ ನೋಡುತ್ತಿದ್ದೇನೆ. ವಿರೋಧ ಪಕ್ಷದವರು ಇರೋದು ವಿರೋಧ ಮಾಡೋಕೆ. ವಿರೋಧ ಮಾಡೋದು ಬಿಟ್ಟು ಸಾರ್ವಜನಿಕ ಕುಂದು ಕೊರತೆ ಸರ್ಕಾರದ ಗಮನಕ್ಕೆ ತಂದು ಅದಕ್ಕೆ ಪರಿಹಾರ ಕೊಡಿಸೋ ಕೆಲಸ ವಿಪಕ್ಷ ಮಾಡಲಿ. ಇತ್ತೀಚೆಗೆ ಅಧಿವೇಶನದಲ್ಲಿ ಸಾರ್ವಜನಿಕ ವಿಷಯಗಳು ಚರ್ಚೆ ಆಗ್ತಿಲ್ಲ. ಈ ಬಗ್ಗೆ ನಾವು ಅರ್ಥ ಮಾಡಿಕೊಂಡು ಚರ್ಚೆ ಮಾಡಬೇಕು. ಬೆಳಗಾವಿ ಅಧಿವೇಶನ ಈ ಭಾಗದ ಸಮಸ್ಯೆ ಪರಿಹಾರಕ್ಕೆ ಮಾಡ್ತಿರೋದು. ಹೀಗಾಗಿ ವಿಪಕ್ಷಗಳು ವಿರೋಧ ಮಾಡೋದು ಬಿಟ್ಟು ಸಾರ್ವಜನಿಕ ವಿಷಯಗಳ ಬಗ್ಗೆ ಚರ್ಚೆ ಮಾಡಲಿ ಎಂದು ತಿರುಗೇಟು ನೀಡಿದರು.

    BJP - CONGRESS

    40% ಸರ್ಕಾರ ಎಂಬ ಕಾಂಗ್ರೆಸ್ ಆರೋಪ ಬಗ್ಗೆ ಮಾತನಾಡಿದ ಅವರು, 40% ಸರ್ಕಾರ ಅಂತ ಯಾರು ಸಾಬೀತು ಮಾಡಿದ್ದಾರೆ. ಯಾರ ಕಾಲದಲ್ಲಿ ಎಷ್ಟು ಇತ್ತು ಅಂತ ಎಲ್ಲರಿಗೂ ಗೊತ್ತಿದೆ. ಸುಮ್ಮನೆ ಆರೋಪ ಮಾಡಿದ್ರೆ ಆಗುತ್ತಾ ಸಾಬೀತು ಮಾಡಬೇಕು. ಸುಮ್ಮನೆ ಪ್ರಧಾನಿಗೆ ಪತ್ರ ಬರೆದರೆ ಆಗೊಲ್ಲ. ವಿಪಕ್ಷಗಳು ಏನೇ ಆರೋಪ ಮಾಡಲಿ, ದಾಖಲಾತಿ ಬಿಡುಗಡೆ ಮಾಡಲಿ. ನಾವು ಎಲ್ಲದ್ದಕ್ಕೂ ಸಿದ್ಧರಾಗಿದ್ದೇವೆ. ಕಾಂಗ್ರೆಸ್ ಏನು ಆರೋಪ ಮಾಡಿದ್ರು ಅದಕ್ಕೆ ಉತ್ತರ ಕೊಡೋದು ಸರ್ಕಾರ 100% ಸಿದ್ಧವಾಗಿದೆ. ಸುಮ್ಮನೆ ಆರೋಪ ಮಾಡಿದ್ರೆ ಒಪ್ಪಲು ಸಾಧ್ಯವಿಲ್ಲ. ಚರ್ಚೆ ಮಾಡಲಿ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪರೀಕ್ಷೆ ಬರೆದು ಬರುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಚಾಕು ಇರಿತ

  • 116 ಕೋಟಿ ಒಡೆಯ ಸೋಮಶೇಖರ್ ಕಾಂಗ್ರೆಸ್‍ನಿಂದ ಸ್ಪರ್ಧೆ

    116 ಕೋಟಿ ಒಡೆಯ ಸೋಮಶೇಖರ್ ಕಾಂಗ್ರೆಸ್‍ನಿಂದ ಸ್ಪರ್ಧೆ

    ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 116 ಕೋಟಿ ರೂಪಾಯಿ ಆಸ್ತಿ ಒಡೆಯ ಬಿ.ಸೋಮಶೇಖರ್ ಕಣಕ್ಕಿಳಿದಿದ್ದಾರೆ.

    ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸೋಮಶೇಖರ್ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಇವರು ನೆಲೆಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿದ್ದಾರೆ. ಇವರಿಗೆ ಪತ್ನಿ ಮಂಜುಳಾ ಹಾಗೂ ಮೂವರು ಮಕ್ಕಳು ಇದ್ದಾರೆ.

    ಸೋಮಶೇಖರ್ ಅವರ ಹೆಸರಲ್ಲಿ 35 ಕೋಟಿ ರೂ. ಚರಾಸ್ತಿ ಹಾಗೂ 80 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಐದು ಬ್ಯಾಂಕುಗಳಲ್ಲಿ 6.32 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. 28.52 ಕೋಟಿ ಹಣವನ್ನು ಉದ್ಯಮದಲ್ಲಿ ತೊಡಗಿಸಿದ್ದಾರೆ. ಇದರಲ್ಲಿ ಬಹುತೇಕ ಹಣವನ್ನು ಜಮೀನು ಮುಂಗಡ ನೀಡಿದ್ದಾರೆ. 30 ಲಕ್ಷ ಮೌಲ್ಯದ ರೇಂಜ್ ರೋವರ್ ಕಾರು, ಪತ್ನಿಗೆ ಇನ್ನೊವಾ ಕಾರು ಇದೆ. ಇದನ್ನೂ ಓದಿ: ಅಕಾಲಿಕ ಮಳೆ – ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ ಕರೆದ ಸಿಎಂ

    ಸೋಮಶೇಖರ್ ಅವರ ಪತ್ನಿ ಮಂಜುಳಾ ಅವರ ಬಳಿಯೂ 1.4 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್, 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಇವೆ. 22.4 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಪ್ರಸ್ತುತ ಸೋಮಶೇಖರ್ ಅವರ ಬಳಿ 116 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಇವರ ಪತ್ನಿಯೂ ಕೂಡ 23 ಕೋಟಿ ರೂ. ಆಸ್ತಿಯ ಒಡತಿ ಎಂದು ಘೋಷಿಸಿಕೊಂಡಿದ್ದಾರೆ.

    ಅದು ಅಲ್ಲದೇ ಮಂಜುಳಾ ಅವರು 91 ಲಕ್ಷ ಹಾಗೂ ಸೋಮಶೇಖರ್ 71 ಲಕ್ಷ ರೂ. ಸಾಲ ಮಾಡಿದ್ದಾರೆಂದು ಇಂದು ಸಲ್ಲಿಸಿರುವ ನಾಮಪತ್ರದ ಆಸ್ತಿ ವಿವರಣೆಯಲ್ಲಿ ಘೋಷಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆ

  • ನಟಿ ಕಾವ್ಯಾ ಗೌಡ ಬ್ಯಾಚುಲರ್ ಪಾರ್ಟಿ

    ನಟಿ ಕಾವ್ಯಾ ಗೌಡ ಬ್ಯಾಚುಲರ್ ಪಾರ್ಟಿ

    ಬೆಂಗಳೂರು: ಕಿರುತೆರೆ ನಟಿ ಕಾವ್ಯಾ ಗೌಡ ಅವರು ಡಿಸೆಂಬರ್ 2ಕ್ಕೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಇದೀಗ ಬ್ಯಾಚುಲರ್ ಪಾರ್ಟಿಯಲ್ಲಿ ಎಂಜಾಯ್ ಮಾಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮಿಸ್ಟರ್ ಎಸ್ ನೀವು ನನ್ನ ಉತ್ತಮ ಸ್ನೇಹಿತ ಮತ್ತು ನನ್ನ ಪ್ರೇಮಿಯಾಗಿದ್ದೀರಿ. ನಾನು ನಿನ್ನನ್ನು ಪ್ರೀತಿಸುತ್ತೇನೆ ಮಾ… ಎಂದು ಬರೆದುಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಬ್ಯಾಚುಲರ್ ಪಾರ್ಟಿಯ ಕಲರ್ ಕಲರ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

    ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕಾವ್ಯಾ ಮಾತನಾಡಿ ಮದುವೆಯ ಕುರಿತು ಕೆಲವು ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಡೆಸ್ಟಿನಿಯನ್ನು ನಾನು ನಂಬುತ್ತೇನೆ, ನಾನು ಏನು ಅಂದುಕೊಳ್ಳುವೆನೋ ಅದೇ ರೀತಿ ಆಗುತ್ತೆ. ಹಾಗೆಯೇ ಬ್ಯಾಚುಲರ್ ಪಾರ್ಟಿ ನಡೆದಿದ್ದು, ನನ್ನ ಹುಡುಗ, ಅಕ್ಕ ಆಯೋಜಿಸಿದ್ದರು ಎಂದಿದ್ದಾರೆ. ಇದನ್ನೂ ಓದಿ:   ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ರಶ್ಮಿಕಾ ಉತ್ತರ ಏನು ಗೊತ್ತಾ?

    ನವೆಂಬರ್ 29ರಂದು ಬೆಂಗಳೂರಿನ ಜೆ ಡಬ್ಲ್ಯು ಮ್ಯಾರಿಯೇಟ್‍ನಲ್ಲಿ ಸಂಗೀತ್ ಮೆಹೆಂದಿ ನಡೆಯಲಿದೆ. ಡಿಸೆಂಬರ್ 1ರಂದು ಆರತಕ್ಷತೆ, ಡಿಸೆಂಬರ್ 2ರಂದು ತಾಜ್ ವೆಸ್ಟೆಂಡ್‍ನಲ್ಲಿ ಮದುವೆ ನಡೆಯಲಿದೆ. ಸೋಮಶೇಖರ್‍ರಂತಹ ಹುಡುಗನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೇನೆ. ನಿಜಕ್ಕೂ ಅವರ ಗುಣ, ಸ್ವಭಾವ ನನಗೆ ತುಂಬ ಇಷ್ಟ. ನಾನು ಸಾಯಿಬಾಬಾ ಅವರನ್ನು ತುಂಬ ನಂಬುತ್ತೇನೆ. ನನ್ನ ಜೊತೆಗೆ ಎಲ್ಲರಿಗೂ ಒಳ್ಳೆಯದನ್ನು ಮಾಡು ಅಂತ ಕೇಳಿಕೊಳ್ಳುತ್ತೇನೆ, ಅಂತೆಯೇ ಒಳ್ಳೆಯದಾಗುತ್ತಿದೆ ಎಂದು ಭಾವಿಸುವೆ ಎಂದಿದ್ದಾರೆ. ಇದನ್ನೂ ಓದಿ:  ಪ್ರಿಯತಮನನ್ನು ಪರಿಚಯಿಸಿದ ನಟಿ ಕಾವ್ಯ ಗೌಡ

    ಕಳೆದ ಮೇ ತಿಂಗಳಿನಲ್ಲಿಯೇ ಮದುವೆ ನಡೆಯಬೇಕಿತ್ತು, ಕೊರೊನಾ ಎರಡನೇ ಅಲೆ ಇರೋದಕ್ಕೆ ಮದುವೆ ಮುಂದೂಡಲಾಗಿತ್ತು. ಕೊರೊನಾ ವೈರಸ್ ನಿಯಮಗಳನ್ನು ಪಾಲಿಸಿ ನಾವು ಮದುವೆಯಾಗುತ್ತಿದ್ದೇವೆ. ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರು, ತಂತ್ರಜ್ಞರು, ಸ್ನೇಹಿತರನ್ನು ಆಹ್ವಾನಿಸಿದ್ದೇವೆ. ನಮ್ಮ ಎರಡು ಕುಟುಂಬದ ಸದಸ್ಯರು, ಆತ್ಮೀಯರು ಈ ಮದುವೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮದುವೆಯ ಕುರಿತಾಗಿ ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ.

  • ದಸರಾ ಸಾಂಸ್ಕೃತಿಕ  ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್

    ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್

    ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಟಾಂಗಾದಲ್ಲಿ ನಗರ ಪ್ರದಕ್ಷಿಣೆ ಹಾಕುವ ಮೂಲಕ ‘ಟಾಂಗಾ ಸವಾರಿ’ ಮಾಡಲು ಪ್ರವಾಸಿಗರಿಗೆ ಪರೋಕ್ಷವಾಗಿ ಪ್ರೇರೇಪಿಸಿದರು.

    ಒಂದು ಕಾಲದಲ್ಲಿ ಸಾರಿಗೆ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದ ಟಾಂಗಾ ಸವಾರಿ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಅದರಲ್ಲೂ ದಸರಾ ಸಂದರ್ಭದಲ್ಲಿ ಟಾಂಗಾದಲ್ಲಿ ಮೈಸೂರು ಸುತ್ತುವ ಪ್ರವೃತ್ತಿ ಕಡಿಮೆಯಾಗುತ್ತಿರುವ ದಿನಗಳಲ್ಲಿ ಸೋಮಶೇಖರ್ ಅವರ ಟಾಂಗಾ ಸವಾರಿ ಮೈಸೂರಿನ ಜನತೆಯನ್ನು ಆಕರ್ಷಿಸಿತು. ಇದನ್ನೂ ಓದಿ: ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯತ್ನಿಸುತ್ತಿವೆ: ದೇವೇಗೌಡ

    ನಗರದ ಗವರ್ನಮೆಂಟ್ ಹೌಸ್ ನಿಂದ ಅರಮನೆ ವೇದಿಕೆಯಲ್ಲಿ ನಡೆಯುತ್ತಿದ್ದ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್ ಅವರನ್ನು ನಗರದ ದೀಪಾಲಂಕಾರ, ದಸರಾ ನೋಡಲು ಆಗಮಿಸಿದ ಪ್ರವಾಸಿಗರನ್ನು ಕಂಡು ಸಂತಸಪಟ್ಟರು.

    ಸೋಮಶೇಖರ್ ಅವರ ಟಾಂಗಾ ಸವಾರಿ ವೇಳೆ ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ಅಧ್ಯಕ್ಷ ಅಪ್ಪಣ್ಣ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಹಲವರು ಜೊತೆಯಲ್ಲಿದ್ದರು. ಇದನ್ನೂ ಓದಿ: 550 ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ – ವೀಡಿಯೋ ವೈರಲ್

  • ಸಮಾಜದ ಬದಲಾವಣೆಗಾಗಿ ಗುಣಮಟ್ಟದ ಶಿಕ್ಷಣ ಅಗತ್ಯ: ಡಿಸಿಎಂ

    ಸಮಾಜದ ಬದಲಾವಣೆಗಾಗಿ ಗುಣಮಟ್ಟದ ಶಿಕ್ಷಣ ಅಗತ್ಯ: ಡಿಸಿಎಂ

    ಬೆಂಗಳೂರು: ಸಮಾಜದಲ್ಲಿ ಏನಾದರೂ ಪರಿಣಾಮಕಾರಿಯಾಗಿ ಬದಲಾವಣೆ ತರಬೇಕೆಂದರೆ ಅದು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ. ಇದನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸಾಧ್ಯವಾಗಿಸಬಹುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣರವರು ತಿಳಿಸಿದರು.

    ಭಾನುವಾರ ಸರಗೂರು ತಾಲ್ಲೂಕಿನ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಅತ್ಯಾಧುನಿಕ ಕೋವಿಡ್ ಕೇರ್ ಸೇಂಟರ್ ಅನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಶಿಕ್ಷಣ ಕಲಿತ ನಂತರ ಸಮಾಜಕ್ಕೆ ಏನು ಕೊಡಗೆ ನೀಡಬೇಕು ಎಂಬ ಅರಿವಿರಬೇಕು. ಎಲ್ಲವನ್ನು ಕಲಿತು ಸ್ವಾರ್ಥದಿಂದ ಬದುಕಬಾರದು. ಏನೇ ಸಮಸ್ಯೆಗಳು ಕಂಡು ಬಂದರೂ ಶಿಕ್ಷಣದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

    ಹೆಚ್.ಡಿ.ಕೋಟೆಯು ಹಿಂದುಳಿದ ಭಾಗವಾಗಿದ್ದು, ಇಲ್ಲಿ ಇಂತಹ ಸಂಸ್ಥೆಯು ಕೋವಿಡ್ ಕಾಲದಂತಹ ಸಂಕಷ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವುದು ದೇಶಕ್ಕೆ ಹಾಗೂ ವಿಶ್ವಕ್ಕೆ ಮಾದರಿಯಾಗಿ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

    ಉಸ್ತುವಾರಿ ಸಚಿವ ಸೋಮಶೇಖರ್ ಬಗ್ಗೆ ಮೆಚ್ಚುಗೆ:
    ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕೋವಿಡ್ ಕಾಲದಲ್ಲಿ ಸ್ವತಃ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಸವಾರ್ಂಗೀಣವಾಗಿ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

    ಈ ಭಾಗದ ಜನರ ಸಮಸ್ಯೆಗಳನ್ನು ಹಾಗೂ ಕಷ್ಟಗಳಿಗೆ ಈ ಸಂಸ್ಥೆಯು ಉತ್ತಮವಾಗಿ ಸ್ಪಂದಿಸುತ್ತಿದ್ದು, ಇಲ್ಲಿನ ಜನರ ಸೇವೆಗಾಗಿ ಈ ಸಂಸ್ಥೆಯು ಹಾಗೂ ಸಂಸ್ಥೆಯ ಸಂಸ್ಥಾಪಕ ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದು ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

    ಇಲ್ಲಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ತಮ್ಮ ತಂದೆಯಂತೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೇ ಸ್ವತಃ ಪ್ರವಾಸ ಕೈಗೊಂಡು ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಅವರು ಸಹ ಕೋವಿಡ್ ಕಾಲದಲ್ಲಿ 150 ಬೆಡ್ ವ್ಯವಸ್ಥೆಯುಳ್ಳ ಆಸ್ಪತ್ರೆಯನ್ನು ತೆರೆದು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಪ್ರಶಂಸಿದರು.

    ಹೆಚ್.ಡಿ.ಕೋಟೆ ತಾಲೂಕಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.78ರಷ್ಟು ಲಸಿಕೆ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಶೀಘ್ರವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.

    ಸಭೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್, ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆ ಸಂಸ್ಥೆಯ ಸ್ಥಾಪಕ ಡಾ.ಆರ್.ಬಾಲಸುಬ್ರಮಣ್ಯಂ ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ: ಸೌದಿಯಲ್ಲಿ ಸಿಲುಕಿದ್ದ ದಾವಣಗೆರೆಯ ಮಹಿಳೆ ಸ್ವದೇಶಕ್ಕೆ ವಾಪಸ್