Tag: Somashekhar

  • ಜನತಾ ಕರ್ಫ್ಯೂ ಫೇಲ್ ಅಂದ್ರು ಸುಧಾಕರ್ – 100 ಪರ್ಸೆಂಟ್ ಸಕ್ಸಸ್ ಅಂದ್ರು ಸೋಮಶೇಖರ್

    ಜನತಾ ಕರ್ಫ್ಯೂ ಫೇಲ್ ಅಂದ್ರು ಸುಧಾಕರ್ – 100 ಪರ್ಸೆಂಟ್ ಸಕ್ಸಸ್ ಅಂದ್ರು ಸೋಮಶೇಖರ್

    – ಸಚಿವರಲ್ಲಿ ಗೊಂದಲವೋ, ಗೊಂದಲ

    ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರೋ 2 ವಾರಗಳ ಜನತಾ ಲಾಕ್‍ಡೌನ್ ಜಾರಿಯಾಗಿ ಒಂದು ವಾರ ಕಳೀತಿದೆ. ಆದಾಗ್ಯೂ ಕೊರೊನಾ ಕಂಟ್ರೋಲ್‍ಗೇ ಬಂದಿಲ್ಲ. ಬದಲಿಗೆ ಜನತಾ ಕರ್ಫ್ಯೂಗೆ ಮುನ್ನ ಇದ್ದ ಕೇಸ್‍ಗಳಿಗಿಂತಲೂ ಜನತಾ ಕರ್ಫ್ಯೂ ಘೋಷಿಸಿದ ಮೇಲೇ ಹೆಚ್ಚಾಗಿರೋದು ಎಂಥಹವರಿಗೂ ಸ್ಪಷ್ಟವಾಗಿ ಗೋಚರಿಸ್ತಿದೆ.

    ಈ ಮಧ್ಯೆ ಜನತಾ ಲಾಕ್‍ಡೌನ್ ಬಗ್ಗೆ ಸಚಿವರಲ್ಲೇ ಗೊಂದಲ ಇದೆ. ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಜನತಾ ಲಾಕ್‍ಡೌನ್ ವಿಫಲವಾಗಿದೆ ಅಂತ ಹೇಳಿದ್ದಾರೆ. ಆದರೆ ಸಹಕಾರ ಸಚಿವ ಎಸ್‍ಟಿ ಸೋಮಶೇಖರ್ ಮಾತ್ರ, ಜನತಾ ಲಾಕ್‍ಡೌನ್ 100ಕ್ಕೆ 100ರಷ್ಟು ಯಶಸ್ವಿ ಆಗಿದೆ ಅಂದಿದ್ದಾರೆ. ರಾಜ್ಯದಲ್ಲಿ ಲಾಕ್‍ಡೌನ್ ಬಗ್ಗೆ ಸರ್ಕಾರ ಮೀನಾಮೇಷ ಮಾಡ್ತಿರೋ ಹೊತ್ತಲ್ಲೇ ಕಿಲ್ಲರ್ ಕೊರೊನಾ ಕಂಟ್ರೋಲ್‍ಗೆ ಲಾಕ್‍ಡೌನ್ ಅಸ್ತ್ರವೇ ಪರಿಣಾಮಕಾರಿ ಅಂತ ಲಾಕ್‍ಡೌನ್ ಒತ್ತಡ ಹೆಚ್ಚಾಗ್ತಿದೆ. ಆರೋಗ್ಯ ಸಚಿವ ಸುಧಾಕರ್ ಅವರು ಸಂಪೂರ್ಣ ಲಾಕ್‍ಡೌನ್ ಸುಳಿವು ನೀಡಿದ್ದಾರೆ.

    ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು, ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ ಆಗಿದೆ. ಮುಂಬೈನಲ್ಲೂ ಲಾಕ್‍ಡೌನ್‍ನಿಂದಲೇ ಕೇಸ್ ಕಡಿಮೆ ಆಗಿದೆ. ಹಾಗಾಗಿ, ಸಂಪೂರ್ಣ ಲಾಕ್‍ಡೌನ್ ಬಗ್ಗೆ ಯೋಚನೆ ಮಾಡಲಿ ಅಂದಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಕೂಡ, ಜನತಾ ಲಾಕ್‍ಡೌನ್‍ನಿಂದ ಸೋಂಕು ನಿಯಂತ್ರಣ ಆಗ್ತಿಲ್ಲ. ಸಂಪೂರ್ಣ ಲಾಕ್‍ಡೌನ್ ಮಾಡಿ ಅಂತ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ಸಚಿವೆ ಶಶಿಕಲಾ ಜೊಲ್ಲೆ ಕೂಡ 10 ರಿಂದ 15 ದಿನ ಸಂಪೂರ್ಣ ಲಾಕ್ ಡೌನ್ ಮಾಡಿದರೆ ಒಳ್ಳೆಯದು ಅಂದಿದ್ದಾರೆ. ಇದೆಲ್ಲದರ ಮಧ್ಯೆ, ಬೆಂಗಳೂರಿನಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್‍ಡೌನ್ ಅನಿವಾರ್ಯ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಹ ಲಾಕ್‍ಡೌನ್ ಹೇರುವಂತೆ ಸರ್ಕಾರಕ್ಕೆ ತಿಳಿಸಿದ್ದಾರೆ.

  • ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ, ಸರ್ಕಾರದ ಗೌರವಕ್ಕೆ ನಾನು ಆಭಾರಿ: ಡಾ.ಮಂಜುನಾಥ್

    ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ, ಸರ್ಕಾರದ ಗೌರವಕ್ಕೆ ನಾನು ಆಭಾರಿ: ಡಾ.ಮಂಜುನಾಥ್

    – ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂಗೆ ಆಹ್ವಾನ

    ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಡಾಕ್ಟರ್ ಮಂಜುನಾಥ್ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊರೊನಾ ವಾರಿಯರ್ಸ್‍ಗೆ ಗೌರವ- ಡಾ.ಮಂಜುನಾಥ್‍ರಿಂದ ಮೈಸೂರು ದಸರಾ ಉದ್ಘಾಟನೆ

    ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡ ಇಂದು ಸಿಎಂ ಯಡಿಯೂರಪ್ಪಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ಮತ್ತು ರೇಷ್ಮೆ ಶಾಲು ಹೊದಿಸಿ ಉದ್ಘಾಟನೆಗೆ ಆಹ್ವಾನಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ಡಾ.ಮಂಜುನಾಥ್, ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸುವ ಸಲುವಾಗಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ವೈಧ್ಯರಿಗೆ ಆಹ್ವಾನ ನೀಡಿದ್ದಾರೆ. ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ. ಜೊತೆಗೆ ಕೊರೊನಾ ನಡುವೆ ದಸರಾ ನಡೆಯುತ್ತಿದೆ. ಹೀಗಾಗಿ ಸರ್ಕಾರದ ಜೊತೆಗೆ ಸಾರ್ವಜನಿಕರು ಎಚ್ಚರಿ ವಹಿಸಬೇಕು ಎಂದರು.

    ಕೊರೊನಾಕ್ಕೆ ಇನ್ನೂ ವ್ಯಾಕ್ಸಿನ್ ಇಲ್ಲ. ವ್ಯಾಕ್ಸಿನ್ ಅಂದರೆ ಅದು ಕೇವಲ ಮಾಸ್ಕ್ ಮಾತ್ರ. ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಪಾಡಬೇಕು. ಬಹುಮುಖ್ಯವಾಗಿ ಮಾತನಾಡುವಾಗ ಮಾಸ್ಕ್ ಹಾಕಿಕೊಂಡು ಮಾತನಾಡಿ. ರೋಗದಿಂದ ದೂರ ಇರೋದು ನಿಮ್ಮ ಎಚ್ಚರಿಕೆಯ ಕೆಲಸವಾಗಿದೆ ಎಂದು ಡಾಕ್ಟರ್ ಮಂಜುನಾಥ್ ಸಾರ್ವಜನಿಕರ ಬಳಿ ಮನವಿ ಮಾಡಿಕೊಂಡರು.

    ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂಗೆ ಆಹ್ವಾನ
    ಇದೇ ಅಕ್ಟೋಬರ್ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಮೈಸೂರು ನಗರದ ಮೇಯರ್ ತಸ್ನಿಂ, ಅಧಿಕಾರಿಗಳೊಂದಿಗೆ ಡಿಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಉಪ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ನಾಡಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಸ್ವಾಗತ ಕೋರಿದರು.

    ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ ಡಿಸಿಎಂ, ಕೋವಿಡ್ ಸಂಕಷ್ಟ ಕಾಲದಲ್ಲಿ ನಡೆಯುತ್ತಿರುವ ಈ ವರ್ಷದ ನಾಡಹಬ್ಬವು ಯಾವುದೇ ವಿಘ್ನವಿಲ್ಲದೆ ನಡೆಯಲಿ. ಆ ತಾಯಿ ಚಾಮುಂಡೇಶ್ವರಿ ಕರುಣೆ ಎಲ್ಲರ ಮೇಲೆ ಇರಲಿ ಎಂದು ಶುಭ ಹಾರೈಸಿದರು.

    ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಾಡಹಬ್ಬಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜೊತೆಗೆ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

  • ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿದೆ, ಸಿಎಂ ಕೊಟ್ಟ ಮಾತಿಗೆ ನಡೆದುಕೊಳ್ಳೋ ವ್ಯಕ್ತಿ: ಸೋಮಶೇಖರ್

    ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿದೆ, ಸಿಎಂ ಕೊಟ್ಟ ಮಾತಿಗೆ ನಡೆದುಕೊಳ್ಳೋ ವ್ಯಕ್ತಿ: ಸೋಮಶೇಖರ್

    ಶಿವಮೊಗ್ಗ: ಬಿಜೆಪಿಯಲ್ಲಿ ಯಾವುದೇ ರೀತಿಯ ಬಂಡಾಯವೂ ಇಲ್ಲ, ಭಿನ್ನಮತವೂ ಇಲ್ಲ. ಗುಂಪುಗಾರಿಕೆಯೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

    ಶಿವಮೊಗ್ಗಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, 9 ವಿಧಾನಪರಿಷತ್ ಹಾಗೂ 4 ರಾಜ್ಯಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಹಜವಾಗಿಯೇ ವಿವಿಧ ಸಮಾಜದವರು ತಮಗೆ ಟಿಕೆಟ್ ಕೊಡಿ ಎಂದು ಒತ್ತಡ ಮತ್ತು ಮನವಿ ಮಾಡುತ್ತಿದ್ದಾರೆಯೇ ವಿನಃ ಇದೇನೂ ಹೊಸದಲ್ಲ ಎಂದಿದ್ದಾರೆ.

    ಟಿವಿಯಲ್ಲಿ ಬರುತ್ತಿರುವ ಸಭೆಯ ದೃಶ್ಯಗಳು ತುಂಬಾ ಹಳೆಯದಾಗಿದೆ. ಹಾಗಾಗಿ ಯಾವ ಗುಂಪುಗಾರಿಕೆಯೂ ಬಿಜೆಪಿಯಲ್ಲಿ ಇಲ್ಲ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನಮಗೆ ಮಾತು ಕೊಟ್ಟಂತೆ ಸಚಿವ ಸ್ಥಾನ ನೀಡಿದ್ದಾರೆ. ನಾವು ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತಿದ್ದೇವೆ ಮತ್ತು ನಮ್ಮ ಜೊತೆನಲ್ಲಿ ಬಿಜೆಪಿ ಸೇರಿದ ಇನ್ನುಳಿದ ಮೂವರು ಅರ್ಹ ಶಾಸಕರಿಗೂ ಕೂಡ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

  • ಜೋರಾಗಿದೆ ಉಪಕದನ ಕಲಿಗಳ ಟೆಂಪಲ್ ರನ್

    ಜೋರಾಗಿದೆ ಉಪಕದನ ಕಲಿಗಳ ಟೆಂಪಲ್ ರನ್

    ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೆ ಇನ್ನೂ ಒಂದು ದಿನ ಬಾಕಿ ಇದ್ದು, ಕ್ಷೇತ್ರಗಳಲ್ಲಿ ತರಾವರಿ ಲೆಕ್ಕಾಚಾರ ಶುರುವಾಗಿವೆ. ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಎಂಬ ಚರ್ಚೆಗಳು ಜೋರಿದ್ದು, ಈ ನಡುವೆ ಹುಣಸೂರು ಉಪ ಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಟೆಂಪಲ್ ರನ್ ನಡೆಸಿದ್ದಾರೆ.

    ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಮಹಾರಾಷ್ಟ್ರದ ಶಿರಡಿಗೆ ತೆರಳಿ ಸಾಯಿಬಾಬಾರಿಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಗೆಲುವಿಗಾಗಿ ಸಾಯಿಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿರಡಿಯ ಸಾಯಿಬಾಬಾನ ದರ್ಶನ ಪಡೆದ ಬಳಿಕ ಮಂತ್ರಾಲಯಕ್ಕೆ ತೆರಳಲಿರುವ ವಿಶ್ವನಾಥ್, ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಪೂಜೆ ಮುಗಿಸಿ ನಾಳೆ ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ್ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಗೆಲುವಿಗಾಗಿ ಶ್ರೀ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ಕೂಡ ಹುಣಸೂರು ಕ್ಷೇತ್ರ ವ್ಯಾಪ್ತಿಯಲ್ಲಿನ ದೇವಸ್ಥಾನಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಯಾವ ದೇವರು ಯಾರಿಗೆ ಗೆಲುವಿನ ವರ ಕೊಡುತ್ತಾರೆ ಎಂಬುದು ಸೋಮವಾರ ಸ್ಪಷ್ಟವಾಗಲಿದೆ.

  • ಗ್ರಾಮಸ್ಥರು, ದಾನಿಗಳನ್ನು ಒಗ್ಗೂಡಿಸಿ ಶಾಲೆ ನಿರ್ಮಿಸಿದ್ರು ರಾಯಚೂರಿನ ಸೋಮಶೇಖರ್

    ಗ್ರಾಮಸ್ಥರು, ದಾನಿಗಳನ್ನು ಒಗ್ಗೂಡಿಸಿ ಶಾಲೆ ನಿರ್ಮಿಸಿದ್ರು ರಾಯಚೂರಿನ ಸೋಮಶೇಖರ್

    ರಾಯಚೂರು: ಮನಸ್ಸಿದ್ದರೆ ಮಾರ್ಗ ಅಂಥ ಸಾಧನೆ ಮಾಡಿರೋ ಹಲವರ ಬಗ್ಗೆ ನಾವು ತೋರಿಸಿದ್ದೇವೆ. ಈ ಪಟ್ಟಿಗೆ ಲಿಂಗಸುಗೂರಿನ ಬೇಡರಕಾಲರಕುಂಟಿ ಗ್ರಾಮದ ಮೇಷ್ಟ್ರು ಹಾಗೂ ಊರಿನ ಜನ ಸೇರಿದ್ದಾರೆ.

    ಹೌದು. ರಾಯಚೂರಿನ ಲಿಂಗಸುಗೂರು ತಾಲೂಕಿನ ಬೇಡರಕಾಲರಕುಂಟಿ ಗ್ರಾಮದ ಆಂಜನೇಯ ದೇವಾಲಯದ ಬಳಿ 2 ಕೋಣೆಯಲ್ಲಿ ನಡೆಯುತ್ತಿದ್ದ ಶಾಲೆಯು ಮುಖ್ಯೋಪಧ್ಯಾಯ ಸೋಮಶೇಖರ್ ಅವರಿಂದಾಗಿ ಈಗ ಭವ್ಯವಾಗಿ ತಲೆ ಎತ್ತಿದೆ.

    ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಜಾಗ ಕೊಟ್ಟಿದ್ದರು. ಆದರೆ, ಆ ಪ್ರದೇಶ ತಗ್ಗು-ಗುಂಡಿಯಿಂದ ತುಂಬಿದ್ದ ಕಾರಣ ಸರ್ಕಾರ ಅನುದಾನ ಕೊಡಲು ಮೀನಾಮೇಷ ಎಣಿಸಿತ್ತು. ಆದರೆ, ಗ್ರಾಮಸ್ಥರನ್ನೆಲ್ಲಾ ಒಗ್ಗೂಡಿಸಿದ ಹೆಡ್ ಮಾಸ್ಟರ್ ಸೋಮಶೇಖರ್ ಅವರು ಸಮತಟ್ಟು ಮಾಡಿ, ಸುಂದರ ಶಾಲೆ-ಉದ್ಯಾನವನ ನಿರ್ಮಿಸಿದ್ದಾರೆ. ಈಗ 1 ರಿಂದ 5ನೇ ತರಗತಿವರೆಗೆ 93 ವಿದ್ಯಾರ್ಥಿಗಳು, ನಾಲ್ವರು ಶಿಕ್ಷಕರಿದ್ದಾರೆ ಅಂತ ಗ್ರಾಮದ ಮುಖಂಡ ಸಿದ್ದಯ್ಯ ಸ್ವಾಮಿ ತಿಳಿಸಿದ್ದಾರೆ.

    ಶಾಲೆ ಆವರಣದಲ್ಲಿ ಹಾಳಾಗಿದ್ದ ಬಾವಿಯನ್ನ ದುರಸ್ತಿ ಮಾಡಿ, 250 ಗಿಡ ನೆಟ್ಟು ಅದಕ್ಕೆ ನೀರುಣಿಸ್ತಿದ್ದಾರೆ. ಬಿಸಿಯೂಟಕ್ಕೆ ಇಲ್ಲಿನ ತರಕಾರಿಗಳನ್ನೇ ಬಳಸಲಾಗುತ್ತದೆ. ತಾಜ್ಯದಿಂದ ಸಾವಯವ ಗೊಬ್ಬರ ತಯಾರಿಸಿ ಬಳಸುತ್ತಿದ್ದಾರೆ. ಔಡಲ ಬೀಜಗಳನ್ನ ಮಾರಾಟ ಮಾಡಿ ಶಾಲಾ ಖರ್ಚಿಗೆ ಬಳಸ್ತಿದ್ದಾರೆ. ಜೊತೆಗೆ, ಗ್ರಾಮಸ್ಥರು ಹಾಗೂ ಇತರೆ ದಾನಿಗಳಿಂದ ಶಾಲೆಗೆ ಕಾಂಪೌಂಡ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಊಟಕ್ಕಾಗಿ ಬೆಂಚ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯ ಸೋಮಶೇಖರ್ ಹೇಳುತ್ತಾರೆ.

    ಇಷ್ಟೇ ಅಲ್ಲ, ಮಕ್ಕಳಿಗೆ ಹೆಚ್ಚುವರಿ ತರಗತಿಗಳನ್ನ ತೆಗೆದುಕೊಂಡು ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿ ಇತರೆ ಪರೀಕ್ಷೆಗಳಿಗಾಗಿ ಕೋಚಿಂಗ್ ನೀಡ್ತಿದ್ದಾರೆ.

    https://www.youtube.com/watch?v=n0dbOUTqjto

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿಎಂ ಆರೋಪ ಸಾಬೀತಾದ್ರೆ, ನನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡ್ತೀನಿ: ಜಿಮ್ ಸೋಮ

    ಸಿಎಂ ಆರೋಪ ಸಾಬೀತಾದ್ರೆ, ನನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡ್ತೀನಿ: ಜಿಮ್ ಸೋಮ

    ಹಾಸನ: ಸಿಎಂ ಕುಮಾರಸ್ವಾಮಿಯವರ ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈಹಿಡಿದಿದ್ದೇನೆ ಎನ್ನುವ ಆರೋಪ ಸಾಬೀತಾದರೆ ನನ್ನ ಎಲ್ಲ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಜಿಮ್ ಸೋಮ ಅಲಿಯಾಸ್ ನಾರ್ವೆ ಸೋಮಶೇಖರ್ ಹೇಳಿದ್ದಾರೆ.

    ಅರಸೀಕೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿಯವರ ಬಳಿಯೇ ಎಲ್ಲಾ ಇಲಾಖೆಗಳಿವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಿ. ನಾನು ಅಕ್ರಮವಾಗಿ ಹಣ ಸಂಪಾದಿಸಿದ್ದರ ಬಗ್ಗೆ ಸಾಬೀತುಪಡಿಸಲಿ. ಸಾಬೀತಾದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಸುಖಾಸುಮ್ಮನೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನಕ್ಕೆ ನಾನು ಕೈ ಹಾಕುವುದು ಇಲ್ಲ, ಮುಂದೆಯೂ ಮಾಡಲ್ಲ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

    ಈಗಾಗಲೇ ಸಿಎಂ ಅವರಿಗೆ 48 ಗಂಟೆಗಳ ಕಾಲಾವಕಾಶವನ್ನು ನೀಡಿದ್ದೇನೆ. ಅವರು ಮಾಡಿರುವ ಆರೋಪ ಸಾಬೀತುಪಡಿಸದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಆರೋಪ ಸಾಬೀತಾದಲ್ಲಿ ನನ್ನ ಎಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುತ್ತೇನೆ. ನನ್ನ ಈ ಮಾತಿಗೆ ನಾನು ಬದ್ಧನಾಗಿದ್ದೇನೆ. ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

    ಅರಸೀಕೆರೆಯಲ್ಲಿ ನಡೆದ ಬಿಎಸ್‍ವೈ ಆಪ್ತ ಸಂತೋಷ್ ನಿಶ್ಚಿತಾರ್ಥದಲ್ಲಿ ಸಿ.ಪಿ ಯೋಗೇಶ್ವರ್, ಜಿಮ್ ಸೋಮ ಹಾಗೂ ಉದಯ್ ಗೌಡ ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಈ ಕಾರಣಕ್ಕೆ ಖೇಣಿ ಕಾಂಗ್ರೆಸ್ ಗೆ ಬರೋದು ಬೇಡ- ಶಾಸಕ ಸೋಮಶೇಖರ್

    ಈ ಕಾರಣಕ್ಕೆ ಖೇಣಿ ಕಾಂಗ್ರೆಸ್ ಗೆ ಬರೋದು ಬೇಡ- ಶಾಸಕ ಸೋಮಶೇಖರ್

    ಬೆಂಗಳೂರು: ನೈಸ್ ಸಂಸ್ಥೆಯ ಮಾಲೀಕ, ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿಯವರ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಯಶವಂತಪುರ ಕ್ಷೇತ್ರದ ಶಾಸಕ ಸೋಮಶೇಖರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಶಾಸಕನಾಗಿರುವ ಜೊತೆಗೆ ಸದನ ಸಮಿತಿಯ ಸದಸ್ಯ ಕೂಡ ಆಗಿದ್ದೇನೆ. ಅನೇಕ ಹಗರಣಗಳನ್ನು ಮತ್ತು ಅವ್ಯವಹಾರಗಳನ್ನು ಗಮನಕ್ಕೆ ಸದನ ಸಮಿತಿಯಲ್ಲಿ ಗಮನಕ್ಕೆ ತಂದಿದ್ದೇವೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಅಶೋಕ್ ಖೇಣಿಯವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದಕ್ಕೆ ನನ್ನ ವೈಯಕ್ತಿಕ ವಿರೋಧವಿದೆ. ಅಲ್ಲದೇ ಕೆಲ ಜಿಲ್ಲೆಗಳ ಶಾಸಕರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರೈತರ ಆತ್ಮಹತ್ಯೆಗೆ ಕುಡಿತ, ಜೂಜು ಕಾರಣ ಎಂದಿದ್ದ ಖೇಣಿ ಕಾಂಗ್ರೆಸ್ ಸೇರ್ಪಡೆ

    ಯಾವ ಕಾರಣಕ್ಕೂ ಖೇಣಿಯವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದು ಒಳ್ಳೆಯದಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನಮ್ಮ ವಿರೋಧವನ್ನು ಲೆಕ್ಕಿಸದೇ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷಕರು ಪಕ್ಷಕ್ಕೆ ಸೇರ್ಪಡೆ ಮಾಡಿದ್ರೆ, ಮುಂದೆ ಏನ್ ಮಾಡ್ಬೇಕು ಅಂತಾ ತೀರ್ಮಾನ ಮಾಡ್ತೇವೆ ಅಂತ ಅವರು ಹೇಳಿದ್ರು.

    ಸದನ ಸಮಿತಿಯಲ್ಲಿ ಮಂಡನೆಯಾದ ವಿಚಾರದ ಬಗ್ಗೆ ಇಡೀ ರಾಜ್ಯದ ಜನತೆಗೆ ತಿಳಿದಿದೆ. ಹೀಗಾಗಿ ಗೆಲುವಿಗಾಗಿ ಓರ್ವ ಅಭ್ಯರ್ಥಿ ಬೇಕೆಂಬ ಒಂದೇ ಕಾರಣಕ್ಕಾಗಿ ಖೇಣಿಯವರನ್ನು ಪಕ್ಷಕ್ಕೆ ತೆಗೆದುಕೊಂಡು ಬರಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದನ ಸಮಿತಿಯಲ್ಲಿ ನಿರ್ಧರವಾದ ವಿಚಾರದ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ಕಾರಣಕ್ಕಾಗಿ ಖೇನಿಯವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಸರಿಯಲ್ಲ. ಯಾಕಂದ್ರೆ ಪಕ್ಷಕ್ಕೆ ಕಳಂಕರಹಿತ ಇರುವವರನ್ನು ಸೇರ್ಪಡೆ ಮಾಡಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಅಂದ್ರು.

  • ಎಲೆಕ್ಷನ್ ಬಂದಾಗ ನಾವು ನೆನಪಾದ್ವಾ – ವಾಟ್ಸಪ್ ಗ್ರೂಪಲ್ಲಿ ಮೈಸೂರು ಶಾಸಕನಿಗೆ ಫುಲ್ ಕ್ಲಾಸ್

    ಎಲೆಕ್ಷನ್ ಬಂದಾಗ ನಾವು ನೆನಪಾದ್ವಾ – ವಾಟ್ಸಪ್ ಗ್ರೂಪಲ್ಲಿ ಮೈಸೂರು ಶಾಸಕನಿಗೆ ಫುಲ್ ಕ್ಲಾಸ್

    ಮೈಸೂರು: ಕ್ಷೇತ್ರದ ಮತದಾರರ ಸಮಸ್ಯೆ ಆಲಿಸಲು ಗ್ರೂಪ್ ಮಾಡಿ ಕಾಂಗ್ರೆಸ್ ಶಾಸಕರೊಬ್ಬರು ಪೇಚಿಗೆ ಸಿಲುಕಿದ್ದಾರೆ. ವಾಟ್ಸಪ್ ಗ್ರೂಪ್ ನಲ್ಲಿ ಶಾಸಕರಿಗೆ ಮತದಾರರು ಹಿಗ್ಗಾಮುಗ್ಗಾ ತರಾಟೆ ತೆಗೆದು ಕೊಂಡಿದ್ದಾರೆ.

    ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಯಾಕಾದರೂ ತಾನೂ ವಾಟ್ಸಪ್ ಗ್ರೂಪ್ ರಚನೆ ಮಾಡಿದ್ದಿನೋ ಅನ್ನೋ ಪರಿಸ್ಥಿತಿಗೆ ಸಿಲುಕಿದ್ದಾರೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಶಾಸಕ ಎಂ.ಕೆ. ಸೋಮಶೇಖರ್ `MLA ಕೆಆರ್ ಕ್ಷೇತ್ರ ಪಬ್ಲಿಕ್ 7′ ಎಂಬ ಹೆಸರಿಸಲ್ಲಿ ಗ್ರೂಪ್ ರಚನೆ ಮಾಡಿದ್ದಾರೆ.

     

    ಕ್ಷೇತ್ರದ ಮತದಾರರನ್ನು ಒಳಗೊಂಡಂತೆ ವಾಟ್ಸಪ್ ಗ್ರೂಪ್ ರಚಿಸಲಾಗಿದೆ. ಗ್ರೂಪ್ ರಚನೆಯಾಗ್ತಿದಂತೆ ಶಾಸಕರಿಗೆ ಬೈಗುಳದ ಸುರಿಮಳೆ ಸುರಿಯುತ್ತಿದೆ. ಬಾಯಿಗೆ ಬಂದ ಯಾವ ಬೈಗುಳಗಳನ್ನು ಜನರು ಬಿಡದೆ ಶಾಸಕರಿಗೆ ಬೈಯುತ್ತಿದ್ದಾರೆ. ಎಲೆಕ್ಷೆನ್ ಹತ್ರಾ ಬಂತಾ ಈಗ. ಈ ಈಡಿಯಟ್ ಗ್ರೂಪ್.! ರಚನೆ ಮಾಡಿದ್ದೀರಾ…? ಎಂದು ಬಾಯಿಗೆ ಬಂದಂತೆ ಪ್ರಶ್ನೆ ಮಾಡಿ ಶಾಸಕರಿಗೆ ಬೈಯುತ್ತಿದ್ದಾರೆ.

    ಗ್ರೂಪ್ ನ ಒಬ್ಬ ಸದಸ್ಯ ಕೀಟಲೆ ಮಾಡೋ ಸಲುವಾಗಿ ಗ್ರೂಪ್ ಡಿಪಿಗೆ ಪ್ರಧಾನಿ ಮೋದಿ ಭಾವಚಿತ್ರ ಹಾಕಿದ್ದಾರೆ. ಮತದಾರರ ಈ ಬೈಗುಳಕ್ಕೆ ಶಾಸಕರದು ಮೌನವೇ ಉತ್ತರವಾಗಿದೆ.

  • ಮೈಸೂರು: ಶಾಸಕರನ್ನ ಮೈದಾನದಿಂದ ಹೊರಗೆ ತಳ್ಳಿದ ಪಟಾಕಿ ಮಾರಾಟಗಾರರು

    ಮೈಸೂರು: ಶಾಸಕರನ್ನ ಮೈದಾನದಿಂದ ಹೊರಗೆ ತಳ್ಳಿದ ಪಟಾಕಿ ಮಾರಾಟಗಾರರು

    ಮೈಸೂರು: ಪರಿಸರ ಉಳಿಸಿ ಪಟಾಕಿ ತ್ಯಜಿಸಿ ಅಭಿಯಾನವನ್ನು ಹಮ್ಮಿಕೊಂಡಿದ್ದ ಶಾಸಕ ಎಂಕೆ ಸೋಮಶೇಖರ್ ಅವರನ್ನು ಪಟಾಕಿ ಮಾರಾಟಗಾರರು ಮೈದಾನದಿಂದ ಹೊರಗೆ ತಳ್ಳಿದ ಘಟನೆ ಮೈಸೂರಿನಲ್ಲಿ ನಡೆದಿದೆ.

    ಇಂದು ನಗರದ ಪಟಾಕಿ ಮಾರುತ್ತಿರುವ ಜೆಕೆ ಮೈದಾನದಲ್ಲಿ ಶಾಸಕ ಸೋಮಶೇಖರ್ ಅವರು ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನ ಹಮ್ಮಿಕೊಂಡಿದ್ದರು. ಈ ವೇಳೆ ಪಟಾಕಿ ಮಾರಾಟಗಾರರಿಂದ ತೀವ್ರ ಆಕ್ಷೇಪ ಎದುರಾಗಿ ಶಾಸಕರನ್ನು ಮೈದಾನದಿಂದ ಹೊರಕಳುಹಿಸಿ ಗದ್ದಲ ನಡೆಸಿದ್ದಾರೆ.

    ಶಾಸಕ ಸೋಮಶೇಖರ್ ಹಾಗೂ ಅವರ ಬೆಂಬಲಿಗರ ಜೊತೆ ಪಟಾಕಿ ಮಾರಾಟಗಾರರು ವಾದ ಪ್ರತಿವಾದಕ್ಕೆ ಇಳಿದಿದ್ದರು. ಈ ವೇಳೆ ಗದ್ದಲ ಹೆಚ್ಚಾಗಿದ್ದರಿಂದ ಪೊಲೀಸರು ಶಾಸಕರ ಆಪ್ತ ಗುಣಶೇಖರ್ ಹಾಗೂ ಮೂವರು ಪಟಾಕಿ ಮಾರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.

    ಶಾಸಕರನ್ನು ಪಟಾಕಿ ಮಾರಾಟಗಾರರು ತಳ್ಳಿಕೊಂಡು ಹೊರಬಂದ ಕಾರಣ ಮೈದಾನದ ಹೊರಗೆ ಶಾಸಕರು ಧರಣಿ ಕುಳಿತಿದ್ದರು. ನಂತರ ಪಟಾಕಿಯನ್ನು ನೀರಿಗೆ ಹಾಕಿ ಪಟಾಕಿ ಬೇಡ ಎಂಬ ಆಂದೋಲನ ನಡೆಸಿದರು.

    ಇದೇ ವೇಳೆಯಲ್ಲಿ ಪಟಾಕಿ ಮಾರಾಟಗಾರರು ಮಾತನಾಡಿ, ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿದ್ದರು. ಆದರೆ ಈಗ ಪಟಾಕಿ ಮಾರಾಟ ಮಾಡುವುದು ಬೇಡ ಅಂದರೆ ಹೇಗೆ? ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿ ತಮ್ಮ ಪರವಾಗಿ ಘೋಷಣೆ ಕೂಗಿಕೊಂಡರು.

    https://youtu.be/CBgDzEJyJnc