Tag: sonal

  • Tharun Sonal Wedding:  ದರ್ಶನ್ ಅನುಪಸ್ಥಿತಿ ಬೇಸರವಾಗ್ತಿದೆ- ತರುಣ್ ಸುಧೀರ್

    Tharun Sonal Wedding: ದರ್ಶನ್ ಅನುಪಸ್ಥಿತಿ ಬೇಸರವಾಗ್ತಿದೆ- ತರುಣ್ ಸುಧೀರ್

    ನಿರ್ದೇಶಕ ತರುಣ್ ಸುಧೀರ್ (Tarun Sudhir) ಮತ್ತು ಸೋನಲ್‍ (Sonal) ಮದುವೆ (Marriage) ಆಗೋಕೆ ಕಾರಣವೇ ನಟ ದರ್ಶನ್. ಅಂದುಕೊಂಡಂತೆ ಆಗಿದ್ದರೆ ದರ್ಶನ್ ಮುಂದೆ ನಿಂತು ಈ ಜೋಡಿಯ ಮದುವೆ ಮಾಡಬೇಕಿತ್ತು. ಇವರ ಮದುವೆ ನಿಶ್ಚಿಯ ಮಾಡಿ ಕೊಲೆ ಕೇಸ್‍ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡರು ದರ್ಶನ್. ಈ ಮದುವೆಗೆ ದರ್ಶನ್ (Darshan) ಬರ್ತಾರೆ ಅನ್ನೋ ಮಾತು ಸುಳ್ಳಾಯಿತು ಹಾಗಾಗಿ ಅವರ ಅನುಪಸ್ಥಿತಿ ಬೇಸರ ತರಿಸಿದೆ ಎಂದಿದ್ದಾರೆ ತರುಣ್ ಸುಧೀರ್.

    ಮದುವೆಯ ಈ ಸಂಭ್ರಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್, `ಹೊಸ ಜೀವನ ಹೊಸ ಹುರುಪಿದೆ. ಇಷ್ಟು ದಿನ ಕಾದಿದ್ದಕ್ಕೂ ಬೇಸ್ಟ್ ಕೊಟ್ಟಿದಾರೆ ದೇವ್ರು. ತುಂಬಾ ಜನ ಬಂದು ವಿಶ್ ಮಾಡಿದ್ರು ಎಲ್ಲರೂ ತಮ್ಮನ ಥರ ಕುಟುಂಬದ ಥರ ಬಂದು ಹಾರೈಸಿದ್ರು ಎಂದಿದ್ದಾರೆ.

    ದರ್ಶನ್ ಅನುಪಸ್ಥಿತಿ ಬಗ್ಗೆಯೂ ಮಾತನಾಡಿದ ತರುಣ್, `ಲಗ್ನ ಪತ್ರಿಕೆ ಬರೆಸುವ ಮುಂಚೆ ಡೇಟ್ ಕನ್ಪರ್ಮ್ ಆಗಿತ್ತು. ಡೇಟ್ ಚೇಂಜ್ ಮಾಡ್ಬೇಡ ಮದ್ವೆ ಮಾಡ್ಕೊ ಅಂದ್ರು ದರ್ಶನ್. ಆಗಸ್ಟ್ 11 ಡೇಟ್ ಕೊಟ್ಟಿದ್ವಿ. ಅವರು ಹೇಳಿದಂತೆ ಮದುವೆ ಆಗ್ತಿದ್ದೇವೆ. ದರ್ಶನ್ ಅವ್ರ ಅನುಪಸ್ಥಿತಿ ಬೇಸರ ಅನ್ನಿಸ್ತಿದೆ’ ಎಂದು ದರ್ಶನ್ ಬಗ್ಗೆ ಮಾತಾಡ್ತಾ ಭಾವುಕರಾದ ತರುಣ್ ಸುಧೀರ್.

    ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮದುವೆ ಇಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿನ ಪೂರ್ಣಿಮಾ ಪಾಲೇಸ್‍ ನಲ್ಲಿ ನಡೆಯಿತು. ಚಿತ್ರರಂಗದ ಅನೇಕ ಗಣ್ಯರ ಮತ್ತು ಕುಟುಂಬದ ಸಮ್ಮುಖದಲ್ಲಿ ಈ ಜೋಡಿ ಹೊಸ ಜೀವನಕ್ಕೆ ಕಾಲಿಟಿತು. ತಾಳಿ ಕಟ್ಟೋ ವೇಳೆ ನಟಿ ಸೋನಲ್ ಭಾವುಕರಾಗಿದ್ದರು.

     

    ತರುಣ್ -ಸೋನಲ್ ಮದುವೆಗೆ ಅದ್ದೂರಿ ಧಾರೆ ಮಂಟಪ ಸೆಟ್ ಹಾಕಲಾಗಿದೆ. ದಕ್ಷಿಣ ಭಾರತ ಶೈಲಿಯಲ್ಲಿ ಕಲ್ಯಾಣ ಮಂಟಪದ ಅಲಂಕಾರ ಮಾಡಲಾಗಿದೆ.  ಪ್ರವೇಶ ದ್ವಾರದಲ್ಲಿ ಮಹಾದ್ವಾರದ ಮಾದರಿ ಅಲಂಕಾರ ಮಾಡಲಾಗಿತ್ತು.  ವಿಷ್ಣುವಿನ ದಶಾವತಾರಗಳ ಮಧ್ಯೆ ಕಮಲ ಮಂಟಪದ ಸಿದ್ದತೆ ಮಾಡಿದ್ದು ವಿಶೇಷವಾಗಿತ್ತು.

  • ಸ್ಯಾಂಡಲ್‌ವುಡ್ ಸ್ಟಾರ್ಸ್‌ಗೆ ಮದುವೆ ಆಮಂತ್ರಣ ನೀಡಿದ ‘ಕಾಟೇರ’ ಡೈರೆಕ್ಟರ್

    ಸ್ಯಾಂಡಲ್‌ವುಡ್ ಸ್ಟಾರ್ಸ್‌ಗೆ ಮದುವೆ ಆಮಂತ್ರಣ ನೀಡಿದ ‘ಕಾಟೇರ’ ಡೈರೆಕ್ಟರ್

    ಕಾಟೇರ, ರಾಬರ್ಟ್ ಸಿನಿಮಾ ನಿರ್ದೇಶಕ ತರುಣ್ ಸುಧೀರ್ (Tharun Sudhir) ಅವರು ನಟಿ ಸೋನಲ್ (Actress Sonal) ಜೊತೆ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಸಂಭ್ರಮಕ್ಕೆ ಸಾಕ್ಷಿಯಾಗಲು ಸ್ಯಾಂಡಲ್‌ವುಡ್ ತಾರೆಯರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಡುವುದರಲ್ಲಿ ನಿರತರಾಗಿದ್ದಾರೆ. ಇದನ್ನೂ ಓದಿ:ಧನುಷ್ ನಟನೆಯ ಬಾಲಿವುಡ್ ಸಿನಿಮಾದಲ್ಲಿ ಕೃತಿ ಸನೋನ್ ನಾಯಕಿ

    ಸೋನಲ್ ಜೊತೆ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿರುವ ಡೈರೆಕ್ಟರ್ ತರುಣ್ ಸುಧೀರ್ ಈಗ ಸಿನಿಮಾ ಸೆಲೆಬ್ರಿಟಿಗಳ ಮನೆಗೆ ಹೋಗಿ ಮದುವೆ ಪತ್ರಿಕೆ ನೀಡಿದ್ದಾರೆ. ವಸಂತನಗರದಲ್ಲಿರುವ ಶ್ರೀಮುರಳಿ ಮನೆಗೆ ಭೇಟಿ ನೀಡಿ ಮದುವೆಯ ಕರೆಯೋಲೆ ಕೊಟ್ಟು ಬಂದಿದ್ದಾರೆ ತರುಣ್.

    ಜೆಪಿ ನಗರದಲ್ಲಿರುವ ಆಪ್ತರಾದ ಸುದೀಪ್ (Sudeep) ಮನೆಗೆ ಭೇಟಿ ಕೊಟ್ಟು ಮದುವೆಗೆ ಕರೆದಿದ್ದಾರೆ. ಬಳಿಕ ಸುದೀಪ್ ಜೊತೆ ಕೆಲ ಸಮಯ ಕಳೆದಿದ್ದಾರೆ.

    ಯಶ್ (Yash) ಮತ್ತು ರಾಧಿಕಾ ಪಂಡಿತ್ (Radhika Pandit) ನಿವಾಸಕ್ಕೆ ಭೇಟಿ ನೀಡಿ ಮದುವೆ ಪತ್ರಿಕೆ ನೀಡಿದ ಬಳಿಕ ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ದಂಪತಿಗೂ ಮದುವೆಗೆ ಬರಲು ಪ್ರೀತಿಯಿಂದ ಕರೆಯೋಲೆ ಕೊಟ್ಟಿದ್ದಾರೆ.

    ದರ್ಶನ್ ಸಹೋದರ ದಿನಕರ್ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅದಷ್ಟೇ ಅಲ್ಲ, ರಿಯಲ್ ಸ್ಟಾರ್ ಉಪೇಂದ್ರ, ರಮೇಶ್ ಅರವಿಂದ್ ದಂಪತಿ, ಹಂಸಲೇಖ, ಸುಮಲತಾ, ಜಗ್ಗೇಶ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್, ಲವ್ಲಿ ಸ್ಟಾರ್ ಪ್ರೇಮ್ ಕುಟುಂಬಕ್ಕೆ ಮದುವೆ ಪತ್ರಿಕೆ ನೀಡಿದ್ದಾರೆ. ಈ ವೇಳೆ, ಎಲ್ಲಾ ಸ್ಟಾರ್ಸ್‌ಗೆ ಪರಿಸರ ಸ್ನೇಹಿ ಆಹ್ವಾನ ಪತ್ರಿಕೆ ನೀಡಿದ್ದು, ಎಲ್ಲರ ಗಮನ ಸೆಳೆದಿದೆ.

    ಇದಷ್ಟೇ ಅಲ್ಲ, ರಾಜಕೀಯ ರಂಗದಲ್ಲಿ ಗುರುತಿಸಿಕೊಂಡಿರುವ ಆರ್. ಅಶೋಕ್, ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ, ಡಿ.ಕೆ ಶಿವಕುಮಾರ್ ಅವರಿಗೂ ತರುಣ್ ಸುಧೀರ್ ವಿವಾಹದ ಪತ್ರಿಕೆ ನೀಡಿದ್ದಾರೆ.

    ಇನ್ನೂ ತರುಣ್ ಸುಧೀರ್ ಮತ್ತು ಸೋನಲ್ ಜೋಡಿ ಇದೇ ಆಗಸ್ಟ್ 10, 11ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಗಸ್ಟ್ 10ರಂದು ಸಂಜೆ 6:30 ನಂತರ ಆರತಕ್ಷತೆ ಕಾರ್ಯಕ್ರಮ, ಆ.11ರಂದು ಬೆಳಗ್ಗೆ 10:50 ರಿಂದ 11:35ರ ಶುಭ ಮುಹೂರ್ತದಲ್ಲಿ ಮದುವೆ ನಡೆಯಲಿದೆ. ಹಿಂದೂ ಸಂಪ್ರದಾಯದಂತೆ ಮದುವೆ ಜರುಗಲಿದೆ.

  • ಸೋನಲ್-ತರುಣ್ ಮದುವೆ ಸಂಭ್ರಮ: ಬ್ಯಾಚುಲರೇಟ್ ಪಾರ್ಟಿಯ ಗುಂಗಲಿ ನಟಿ

    ಸೋನಲ್-ತರುಣ್ ಮದುವೆ ಸಂಭ್ರಮ: ಬ್ಯಾಚುಲರೇಟ್ ಪಾರ್ಟಿಯ ಗುಂಗಲಿ ನಟಿ

    ಕಾಟೇರ ಚಿತ್ರ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮದುವೆ ಕಾರ್ಯಕ್ರಮಗಳು ಶುರುವಾಗಿವೆ. ಮದುವೆಗೂ ಮುನ್ನ ಫ್ಯಾಮಿಲಿ ಜೊತೆ ಸೋನಲ್ ಪಾರ್ಟಿ ಮಾಡಿದ್ದಾರೆ. ಕುಟುಂಬದ ಜೊತೆ ಬ್ಯಾಚುಲರೇಟ್ ಪಾರ್ಟಿಯಲ್ಲಿ ಸೋನಲ್ ಕುಣಿದು ಕುಪ್ಪಳಿಸಿದ್ದಾರೆ.  ಮಗಳಿಗಾಗಿ ಸರ್ಪ್ರೈಸ್ ಪಾರ್ಟಿ ಕೊಟ್ಟ ಸಂಭ್ರಮಕ್ಕೆ ಕಾರಣರಾಗಿದ್ದಾರೆ ಸೋನಲ್ ತಾಯಿ ಮತ್ತು ತಂಗಿ.

    ಗಸ್ಟ್ 10 ಮತ್ತು 11ನೇ ತಾರೀಖು ಬೆಂಗಳೂರಿನಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ  ಕಾಟೇರ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ (Tarun Sudhir) ಮತ್ತು ನಟಿ ಸೋನಲ್‍ (Sonal). 10ನೇ ತಾರೀಖು ಆರತಕ್ಷತೆ ಕಾರ್ಯಕ್ರಮವಿದ್ದರೆ 11ನೇ ತಾರೀಖು ಈ ಜೋಡಿ ಸಪ್ತಪದಿ ತುಳಿಯಲಿದೆ. ಮದುವೆ (Marriage) ಕುರಿತಾಗಿ ಮಾಧ್ಯಮಗಳ ಜೊತೆ ಅನೇಕ ವಿಷಯಗಳನ್ನು ಹಂಚಿಕೊಂಡಿದೆ ಈ ಜೋಡಿ.

    ಲವ್‍ ಸ್ಟೋರಿಗೆ ದರ್ಶನ್ ಕಾರಣ

    ಈ ಜೋಡಿಯ ಲವ್ ಸ್ಟೋರಿಗೆ ದರ್ಶನ್ ಕಾರಣವಂತೆ. ಈ ಕುರಿತಂತೆ ಮಾತನಾಡಿದ್ದಾರೆ ತರುಣ್. ‘ರಾಬರ್ಟ್‌ ಸೆಟ್ ನಲ್ಲಿ ದರ್ಶನ್ ಸರ್ ತಮಾಷೆಯಾಗಿ ರೇಗಿಸ್ತಿದ್ರು. ಸೋನಾಲ್ ಮದುವೆ ಮಾಡಿಕೊಳ್ತಿಯಾ ಅಂತ ರೇಗಿಸ್ತಿದ್ರು.  ಸೋನಾಲ್ ಯಾವ ಸೆಟ್ ಗೆ ಹೋದ್ರೂ ಮದ್ವೆ ಬಗ್ಗೆ ಕೇಳ್ತಿದ್ರಂತೆ. ಸೋನಾಲ್ ಫೋನ್ ಮಾಡಿ ಅವತ್ತು ರೂಮರ್ಸ್ ಬಗ್ಗೆ ಹೇಳಿದ್ರು. 2023 ಜನವರಿಯಲ್ಲಿ ಮತ್ತಷ್ಟು ಕ್ಲೋಸ್ ಆಗ್ತಾ ಹೋದ್ವಿ. ಅವ್ರ ಪ್ರೂಚರ್, ಫ್ಯಾಮಿಲಿ ಬಗ್ಗೆ ನೋಡ್ತಾ ಬಂದ್ವಿ. ಕಾಟೇರ ರಿಲೀಸ್ ಆಗೋವರೆಗೂ ಮದುವೆಗೆ ಟೈಂ ಕೇಳಿದ್ದೆ. ಕಾಟೇರ ಸಿನಿಮಾ ರೆಸ್ಪಾನ್ಸ್ ಮೇಲೆ ನನ್ ಮದ್ವೆಗೆ ಡಿಸೈಡ್ ಮಾಡಿದ್ದು. ದರ್ಶನ್ ಸರ್ ಕೂಡಾ ಸೋನಲ್ ಮನೇಲಿ ಮಾತಾಡಿದ್ರು. ಫೈನಲಿ ಈಗ ಫ್ಯಾಮಿಲಿಯಲ್ಲಿ ಮಾತುಕತೆ ಮಾಡಿ ಮದುವೆಗೆ ನಿರ್ಧಾರ ಮಾಡಿದ್ವಿ’ ಅಂತಾರೆ.

    ತಮಾಷೆನೇ ನಿಜಾ ಆಯ್ತು..

    ಲವ್ ಮತ್ತು ಮದುವೆ ಕುರಿತಂತೆ ಮಾತಾಡಿದ ಸೋನಲ್ ಮಂಥೆರೋ ‘ನಾವು ಟಚ್ ಅಲ್ಲಿ ಇರ್ತಿರಲಿಲ್ಲ. ರಾಬರ್ಟ್ ಸಿನಿಮಾ ಟೈಮ್ ನಲ್ಲಿ  ದರ್ಶನ್ ಸರ್ ತಮಾಷೆ ಮಾಡ್ತಿದ್ರು. ರೀಸೆಂಟ್ ಆಗಿ ಎಲ್ರು ಹೇಳೋದನ್ನ ಒಮ್ಮೆ ಥಿಂಕ್ ಮಾಡೋಣ ಅಂತ ಟ್ರೈ ಮಾಡಿದ್ವಿ. ನಾವು ನಮ್ಮ ಲವ್ ನ ಸೀಕ್ರೆಟ್ ಆಗಿ ಇಡೋದು ನನ್ನ ಡಿಸಿಷನ್ ಆಗಿತ್ತು. ಮದ್ವೆ ಆದ್ಮೇಲೂ ಸಿನಿಮಾ ನಿಲ್ಲಸಲ್ಲ ಮಾಡ್ತೀನಿ. ದರ್ಶನ್ ಸರ್ ನ ತರುಣ್ ಮೀಟ್ ಆಗಿದ್ದಾರೆ. ನನಗೆ ಅಲ್ಲಿ‌ಹೋಗೋಕೆ ಅವ್ರನ್ನ ಆತರ ನೋಡೋಕೆ ಇಷ್ಟ ಇಲ್ಲ. ಅವ್ರು ಅಷ್ಟರಲ್ಲಿ ಬರ್ತಾರೆ ಅನ್ನಿಸುತ್ತೆ ನೋಡೋಣ’ ಅಂತಾರೆ.

     

    ದರ್ಶನ್ ಸರ್ ನ ಮಿಸ್ ಮಾಡ್ಕೋತೀವಿ ಅಂತಾರೆ ತರುಣ್ ಮತ್ತು ಸೋನಲ್.  ದರ್ಶನ್ ಸರ್ ಎಲ್ಲಿದ್ರೂ ಅವ್ರ ವಿಶಸ್ ಇರುತ್ತೆ.  ದರ್ಶನ್ ಸರ್ ಆಶೀರ್ವಾದ ಯಾವಾಗ್ಲೂ ಇರುತ್ತೆ. ನಮ್ ತಂದೆಯಷ್ಟೇ ದರ್ಶನ್ ಸರ್ ನ ಗೌರವಿಸ್ತೀನಿ. ಬಾಬಿಗೆ (ವಿಜಯಲಕ್ಷ್ಮಿ) ಇನ್ವಿಟೇಷನ್ ಕೊಟ್ಟಿದ್ದೀನಿ. ಅವ್ರು ಬರ್ತೀನಿ ಅಂದಿದಾರೆ. ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಆಗ್ತೀವಿ. ಬೆಂಗಳೂರಿನಲ್ಲಿ ಮದುವೆ ನಂತರ ಮಂಗಳೂರಿನಲ್ಲೂ ಒಂದು ಫಂಕ್ಷನ್ ಮಾಡ್ತಾರಂತೆ ತರುಣ್ ಮತ್ತು ಸೋನಲ್.

  • ತರುಣ್ –ಸೋನಲ್ ಮದುವೆ:  ಲವ್‍ ಸ್ಟೋರಿಗೆ ದರ್ಶನ್ ಕಾರಣ

    ತರುಣ್ –ಸೋನಲ್ ಮದುವೆ: ಲವ್‍ ಸ್ಟೋರಿಗೆ ದರ್ಶನ್ ಕಾರಣ

    ಗಸ್ಟ್ 10 ಮತ್ತು 11ನೇ ತಾರೀಖು ಬೆಂಗಳೂರಿನಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ  ಕಾಟೇರ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ (Tarun Sudhir) ಮತ್ತು ನಟಿ ಸೋನಲ್‍ (Sonal). 10ನೇ ತಾರೀಖು ಆರತಕ್ಷತೆ ಕಾರ್ಯಕ್ರಮವಿದ್ದರೆ 11ನೇ ತಾರೀಖು ಈ ಜೋಡಿ ಸಪ್ತಪದಿ ತುಳಿಯಲಿದೆ. ಮದುವೆ (Marriage) ಕುರಿತಾಗಿ ಮಾಧ್ಯಮಗಳ ಜೊತೆ ಅನೇಕ ವಿಷಯಗಳನ್ನು ಹಂಚಿಕೊಂಡಿದೆ ಈ ಜೋಡಿ.

    ಲವ್‍ ಸ್ಟೋರಿಗೆ ದರ್ಶನ್ ಕಾರಣ

    ಈ ಜೋಡಿಯ ಲವ್ ಸ್ಟೋರಿಗೆ ದರ್ಶನ್ ಕಾರಣವಂತೆ. ಈ ಕುರಿತಂತೆ ಮಾತನಾಡಿದ್ದಾರೆ ತರುಣ್. ‘ರಾಬರ್ಟ್‌ ಸೆಟ್ ನಲ್ಲಿ ದರ್ಶನ್ ಸರ್ ತಮಾಷೆಯಾಗಿ ರೇಗಿಸ್ತಿದ್ರು. ಸೋನಾಲ್ ಮದುವೆ ಮಾಡಿಕೊಳ್ತಿಯಾ ಅಂತ ರೇಗಿಸ್ತಿದ್ರು.  ಸೋನಾಲ್ ಯಾವ ಸೆಟ್ ಗೆ ಹೋದ್ರೂ ಮದ್ವೆ ಬಗ್ಗೆ ಕೇಳ್ತಿದ್ರಂತೆ. ಸೋನಾಲ್ ಫೋನ್ ಮಾಡಿ ಅವತ್ತು ರೂಮರ್ಸ್ ಬಗ್ಗೆ ಹೇಳಿದ್ರು. 2023 ಜನವರಿಯಲ್ಲಿ ಮತ್ತಷ್ಟು ಕ್ಲೋಸ್ ಆಗ್ತಾ ಹೋದ್ವಿ. ಅವ್ರ ಪ್ರೂಚರ್, ಫ್ಯಾಮಿಲಿ ಬಗ್ಗೆ ನೋಡ್ತಾ ಬಂದ್ವಿ. ಕಾಟೇರ ರಿಲೀಸ್ ಆಗೋವರೆಗೂ ಮದುವೆಗೆ ಟೈಂ ಕೇಳಿದ್ದೆ. ಕಾಟೇರ ಸಿನಿಮಾ ರೆಸ್ಪಾನ್ಸ್ ಮೇಲೆ ನನ್ ಮದ್ವೆಗೆ ಡಿಸೈಡ್ ಮಾಡಿದ್ದು. ದರ್ಶನ್ ಸರ್ ಕೂಡಾ ಸೋನಲ್ ಮನೇಲಿ ಮಾತಾಡಿದ್ರು. ಫೈನಲಿ ಈಗ ಫ್ಯಾಮಿಲಿಯಲ್ಲಿ ಮಾತುಕತೆ ಮಾಡಿ ಮದುವೆಗೆ ನಿರ್ಧಾರ ಮಾಡಿದ್ವಿ’ ಅಂತಾರೆ.

    ತಮಾಷೆನೇ ನಿಜಾ ಆಯ್ತು..

    ಲವ್ ಮತ್ತು ಮದುವೆ ಕುರಿತಂತೆ ಮಾತಾಡಿದ ಸೋನಲ್ ಮಂಥೆರೋ ‘ನಾವು ಟಚ್ ಅಲ್ಲಿ ಇರ್ತಿರಲಿಲ್ಲ. ರಾಬರ್ಟ್ ಸಿನಿಮಾ ಟೈಮ್ ನಲ್ಲಿ  ದರ್ಶನ್ ಸರ್ ತಮಾಷೆ ಮಾಡ್ತಿದ್ರು. ರೀಸೆಂಟ್ ಆಗಿ ಎಲ್ರು ಹೇಳೋದನ್ನ ಒಮ್ಮೆ ಥಿಂಕ್ ಮಾಡೋಣ ಅಂತ ಟ್ರೈ ಮಾಡಿದ್ವಿ. ನಾವು ನಮ್ಮ ಲವ್ ನ ಸೀಕ್ರೆಟ್ ಆಗಿ ಇಡೋದು ನನ್ನ ಡಿಸಿಷನ್ ಆಗಿತ್ತು. ಮದ್ವೆ ಆದ್ಮೇಲೂ ಸಿನಿಮಾ ನಿಲ್ಲಸಲ್ಲ ಮಾಡ್ತೀನಿ. ದರ್ಶನ್ ಸರ್ ನ ತರುಣ್ ಮೀಟ್ ಆಗಿದ್ದಾರೆ. ನನಗೆ ಅಲ್ಲಿ‌ಹೋಗೋಕೆ ಅವ್ರನ್ನ ಆತರ ನೋಡೋಕೆ ಇಷ್ಟ ಇಲ್ಲ. ಅವ್ರು ಅಷ್ಟರಲ್ಲಿ ಬರ್ತಾರೆ ಅನ್ನಿಸುತ್ತೆ ನೋಡೋಣ’ ಅಂತಾರೆ.

     

    ದರ್ಶನ್ ಸರ್ ನ ಮಿಸ್ ಮಾಡ್ಕೋತೀವಿ ಅಂತಾರೆ ತರುಣ್ ಮತ್ತು ಸೋನಲ್.  ದರ್ಶನ್ ಸರ್ ಎಲ್ಲಿದ್ರೂ ಅವ್ರ ವಿಶಸ್ ಇರುತ್ತೆ.  ದರ್ಶನ್ ಸರ್ ಆಶೀರ್ವಾದ ಯಾವಾಗ್ಲೂ ಇರುತ್ತೆ. ನಮ್ ತಂದೆಯಷ್ಟೇ ದರ್ಶನ್ ಸರ್ ನ ಗೌರವಿಸ್ತೀನಿ. ಬಾಬಿಗೆ (ವಿಜಯಲಕ್ಷ್ಮಿ) ಇನ್ವಿಟೇಷನ್ ಕೊಟ್ಟಿದ್ದೀನಿ. ಅವ್ರು ಬರ್ತೀನಿ ಅಂದಿದಾರೆ. ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಆಗ್ತೀವಿ. ಬೆಂಗಳೂರಿನಲ್ಲಿ ಮದುವೆ ನಂತರ ಮಂಗಳೂರಿನಲ್ಲೂ ಒಂದು ಫಂಕ್ಷನ್ ಮಾಡ್ತಾರಂತೆ ತರುಣ್ ಮತ್ತು ಸೋನಲ್.

  • ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್

    ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್

    ನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಲ್ (Actress Sonal) ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಇದನ್ನೂ ಓದಿ:ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾ ರಿಜೆಕ್ಟ್ ಮಾಡಿದ ಶ್ರೀಲೀಲಾ

    ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲಾನ್ ಮಾಡಿ ಪ್ರೇಕ್ಷಕರನ್ನ ಖುಷಿಪಡಿಸೋ ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲಬ್ರೆಟಿಗಳು ಇನ್ವಿಟೇಷನ್ ಜೊತೆ ಒಂದು ಗಿಡಕೊಟ್ಟು ತಮ್ಮ ಮದುವೆಗೆ ಕರೆಯೋದು ಕಾಮನ್. ಆದರೆ ತರುಣ್ ಮತ್ತು ಸೋನಲ್ ತಮ್ಮ ವಿವಾಹ ಪತ್ರಿಕೆಯನ್ನ ಕಂಪ್ಲೀಟ್ ಆಗಿ ಪರಿಸರ ಸ್ನೇಹಿಯಾಗಿ ಮಾಡಿದ್ದಾರೆ.

    ತರುಣ್ ನೀಡುತ್ತಿರುವ ಈ ಇನ್ವಿಟೇಷನ್‌ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತ್ರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದರೆ ಸೋನಲ್ ಮತ್ತು ತರುಣ್ ಮದುವೆಯ ಪತ್ರಿಕೆಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ರೆ ಅದು ಮಣ್ಣಿನಲ್ಲಿ ಬೆರೆತು ಗಿಡ ಬೆಳೆಯುತ್ತದೆ.

     

    View this post on Instagram

     

    A post shared by PUBLiC TV (@publictv)

    ಅದಷ್ಟೇ ಅಲ್ಲ, ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬರೆದು ಖಾಲಿ ಆದರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಅಂತ ತರುಣ್ ಈ ರೀತಿ ಪ್ಲ್ಯಾನ್ ಮಾಡಿದ್ದಾರೆ.

    ಇನ್ನು ಆಗಸ್ಟ್ 10, 11ರಂದು ನಡೆಯಲಿರುವ ತರುಣ್ ಮತ್ತು ಸೋನಲ್ ಮದುವೆಗೆ ಈಗಾಗಲೇ ಸಖಲ ಸಿದ್ಧತೆಗಳು ನಡೆದಿದೆ. ಸ್ಯಾಂಡಲ್‌ವುಡ್‌ನ ಸ್ಟಾರ್ ನಿರ್ದೇಶಕ ಹಾಗೂ ನಾಯಕಿಯ ಮದುವೆಗೆ ಇಡೀ ಚಿತ್ರರಂಗ ಸಾಕ್ಷಿ ಆಗಲಿದೆ. ಸದ್ಯ ಮದುವೆ ಇನ್ವಿಟೇಷನ್‌ನಲ್ಲಿ ಸ್ಪೆಷಲ್ ಅನ್ನಿಸ್ತಿರೋ ಈ ಜೋಡಿ ಮದುವೆಯಲ್ಲಿ ಏನೆಲ್ಲಾ ಸರ್ಪ್ರೈಸ್ ಪ್ಲ್ಯಾನ್ ಮಾಡಿದೆ ಅಂತ ಕಾದು ನೋಡಬೇಕಿದೆ.

  • ‘ಕಾಟೇರ’ ಡೈರೆಕ್ಟರ್ ತರುಣ್ ಜೊತೆ ಸೋನಲ್ ಮದುವೆ ಡೇಟ್ ಫಿಕ್ಸ್

    ‘ಕಾಟೇರ’ ಡೈರೆಕ್ಟರ್ ತರುಣ್ ಜೊತೆ ಸೋನಲ್ ಮದುವೆ ಡೇಟ್ ಫಿಕ್ಸ್

    ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರವನ್ನ ತಮ್ಮದೇ ಸ್ಟೈಲಿನಲ್ಲಿ ಕ್ರಿಯೆಟಿವ್ ಆಗಿ ಅಭಿಮಾನಿಗಳು ಮತ್ತು ಸ್ನೇಹಿತರ ಮುಂದೆ ಪ್ರಸೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಹೊಸ ಚಿತ್ರಕ್ಕೆ ನಾಯಕಿಯಾದ ಪಾಕಿಸ್ತಾನಿ ನಟಿ

    ಡೈರೆಕ್ಟರ್ ತರುಣ್ ಸುಧೀರ್ ಮತ್ತು ಸೋನಲ್ (Actress Sonal) ಇಬ್ಬರು ದಾಂಪತ್ಯ (Wedding) ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ವಿಚಾರವನ್ನ ಬ್ಯೂಟಿಫುಲ್ ಆಗಿರೋ ವಿಡಿಯೋ ಮೂಲಕ ತಿಳಿಸಿದ್ದಾರೆ. ತರುಣ್ ಮತ್ತು ಸೋನಲ್ ಇಬ್ಬರು ಸಿನಿಮಾ ಇಂಡಸ್ಟ್ರಿಯವರೇ ಆಗಿರೋದ್ರಿಂದ ತಮ್ಮ ಪ್ರಿ ವೆಡ್ಡಿಂಗ್ ವಿಡಿಯೋವನ್ನ ಥಿಯೇಟರ್‌ನಲ್ಲಿಯೇ ಶೂಟ್ ಮಾಡಿದ್ದಾರೆ.

    ನವರಂಗ್ ಥಿಯೇಟರ್‌ನಲ್ಲಿ ಈ ವಿಡಿಯೋ ಶೂಟ್ ಮಾಡಿದ್ದು, ಸಿನಿಮಾ ಸೀನ್ ರೀತಿಯೇ ತರುಣ್ ಮತ್ತು ಸೋನಲ್ ವಿಡಿಯೋ ಮೂಡಿ ಬಂದಿದೆ. ಸಿನಿಮಾಟೋಗ್ರಾಫರ್ ಎ.ಜೆ ಶೆಟ್ಟಿ ಈ ವಿಡಿಯೋ ಶೂಟ್ ಮಾಡಿದ್ದಾರೆ. ಆಗಸ್ಟ್ 10, 11ರಂದು ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಫ್ಯಾಲೆಸ್‌ನಲ್ಲಿ ವಿವಾಹ ಜರುಗಲಿದೆ.

    ಸಾಮಾನ್ಯವಾಗಿ ಪ್ರಿ ವೆಡ್ಡಿಂಗ್ ಅಂದರೆ ಜನರು ಸಿನಿಮಾ ಶೈಲಿಯಲ್ಲಿ ಇರಬೇಕು ಅಂತ ಸಿನಿಮ್ಯಾಟಿಕ್ ಆಗಿ ಶೂಟ್ ಮಾಡ್ತಾರೆ. ಆದರೆ ತರುಣ್ ಮತ್ತು ಸೋನಲ್ ಇಬ್ಬರೂ ಸಿನಿಮಾದವರೇ ಆಗಿರೋದ್ರಿಂದ ಬೇರೆಯದ್ದೇ ಸ್ಟೈಲಿನಲ್ಲಿ ಇರಲಿ ಅಂತ ಥಿಯೇಟರ್‌ನಲ್ಲಿ ಶೂಟ್ ಮಾಡಿದ್ದಾರೆ. ಅದಷ್ಟೇ ಅಲ್ಲದೆ, ಸಿನಿಮಾ ಅಂದರೆ ಸಿಂಗಲ್ ಸ್ಕ್ರಿನ್ ಥಿಯೇಟರ್ ಅದರಲ್ಲೂ ನಿರ್ದೇಶಕ ತರುಣ್ ಚಿಕ್ಕ ವಯಸ್ಸಿನಿಂದಲೂ ನವರಂಗ್ ಥಿಯೇಟರ್‌ನಲ್ಲಿ ಸಿನಿಮಾಗಳನ್ನ ನೋಡಿಕೊಂಡು ಬಂದವರು. ಈಗ ತಮ್ಮ ನಿರ್ದೇಶನದ ಸಿನಿಮಾಗಳು ನವರಂಗ್ ಥಿಯೇಟರ್‌ನಲ್ಲಿ ಶತದಿನೋತ್ಸವ ಪೂರೈಸಿವೆ. ಹಾಗಾಗಿ ನವರಂಗ್ ಥಿಯೇಟರ್‌ನಲ್ಲೇ ತಮ್ಮ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿದ್ದಾರೆ.

    ಇನ್ನು ಪ್ರಿ ವೆಡ್ಡಿಂಗ್ ಶೂಟ್‌ನಲ್ಲಿ ತರುಣ್ ಮತ್ತು ಸೋನಲ್ ಬ್ಲ್ಯಾಕ್ ಬಣ್ಣದ ಔಟ್ ಫಿಟ್‌ನಲ್ಲಿ ಕಾಣಿಸಿಕೊಂಡಿದ್ದು, ತರುಣ್‌ಗೆ ಡಿಸೈನರ್ ಚೇತನ್ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ. ಸೋನಲ್‌ಗೆ ರಶ್ಮಿ ಎಂಬುವವರು ಡಿಸೈನ್ ಮಾಡಿದ್ದಾರೆ. ಸದ್ಯ ತರುಣ್ ಮದುವೆ ಸಂಭ್ರಮ ಜೋರಾಗಿದ್ದು, ಇಷ್ಟು ದಿನ ಹೀರೋಯಿನ್ ಮತ್ತು ಡೈರೆಕ್ಟರ್ ಆಗಿದ್ದ ಸೋನಲ್ ಮತ್ತು ತರುಣ್ ಇನ್ನು ಕೆಲವೇ ದಿನಗಳಲ್ಲಿ ಸತಿ ಪತಿಗಳಾಗಿ ಜೀವನ ಶುರು ಮಾಡಲಿದ್ದಾರೆ.

  • ಸೋನಲ್‌ ಜೊತೆ ತರುಣ್‌ ರೊಮ್ಯಾಂಟಿಕ್‌ ಫೋಟೋಶೂಟ್‌- ಮದುವೆ ಬಗ್ಗೆ ಕೊಟ್ರು ಗುಡ್‌ ನ್ಯೂಸ್

    ಸೋನಲ್‌ ಜೊತೆ ತರುಣ್‌ ರೊಮ್ಯಾಂಟಿಕ್‌ ಫೋಟೋಶೂಟ್‌- ಮದುವೆ ಬಗ್ಗೆ ಕೊಟ್ರು ಗುಡ್‌ ನ್ಯೂಸ್

    ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ (Tharun Sudhir)  ಮತ್ತು ಸೋನಲ್ (Sonal) ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ವಿಶೇಷ ಫೋಟೋಶೂಟ್ ಮೂಲಕ ಮದುವೆ ಬಗ್ಗೆ ಈ ಜೋಡಿ ಸೋಷಿಯಲ್‌ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ:‘ರಾಜಾ ರಾಣಿ’ ಶೋಗೆ ಬಂದ್ಮೇಲೆ ನನ್ನ ಅಸ್ತಿತ್ವ ಕಾಣಿಸುತ್ತಿದೆ: ಅದಿತಿ ಪ್ರಭುದೇವ

    ಕಪ್ಪು ಬಣ್ಣ ಮತ್ತು ಲೈಟ್ ಬಣ್ಣದ ಉಡುಗೆಯಲ್ಲಿ ಚೆಂದದ ಫೋಟೋಶೂಟ್ ಮಾಡಿಸಿ ಮದುವೆ ಬಗ್ಗೆ ಇಬ್ಬರೂ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಮೂಲಕ ವದಂತಿಗಳಿಗೆ ತರುಣ್ ಮತ್ತು ಸೋನಲ್ ತೆರೆ ಎಳೆದಿದ್ದಾರೆ.

    ಇದೇ ಆಗಸ್ಟ್ 10ರಂದು ಸೋನಲ್ ಮತ್ತು ತರುಣ್ ಸುಧೀರ್ ಆರತಕ್ಷತೆ, ಆ.11ರಂದು ಮದುವೆ ನಿಶ್ಚಯವಾಗಿದೆ. ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಕನ್ವೆಷನ್ ಹಾಲ್‌ನಲ್ಲಿ ಈ ಜೋಡಿಯ ಮದುವೆ ಸಂಭ್ರಮ ಜರುಗಲಿದೆ.

    ಅಂದಹಾಗೆ, ‘ರಾಬರ್ಟ್’ (Robert) ಸಿನಿಮಾ ಸೆಟ್‌ನಲ್ಲಿ ಸೋನಲ್ ಜೊತೆಗಿನ ಪರಿಚಯವೇ ಇಂದು ಮದುವೆಗೆ ಮುನ್ನುಡಿ ಬರೆದಿದೆ. ಇಬ್ಬರ ಮದುವೆಗೆ ಮುನ್ನುಡಿ ಬರೆದಿದ್ದೇ ದರ್ಶನ್. ಈಗ ಬದುಕಿನ ಹೊಸ ಹೆಜ್ಜೆ ಇಡೋದಕ್ಕೆ ಈ ಜೋಡಿ ರೆಡಿಯಾಗಿದ್ದಾರೆ. ಗುಡ್ ನ್ಯೂಸ್ ಕೊಟ್ಟಿರುವ ಈ ಕಪಲ್‌ಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.

  • ಜೀವನದ ರಿಯಲ್ ಹೀರೋಯಿನ್ ಬಗ್ಗೆ ಗುಡ್ ನ್ಯೂಸ್ ಕೊಡಲು ಸಜ್ಜಾದ ‘ಕಾಟೇರ’ ಡೈರೆಕ್ಟರ್

    ಜೀವನದ ರಿಯಲ್ ಹೀರೋಯಿನ್ ಬಗ್ಗೆ ಗುಡ್ ನ್ಯೂಸ್ ಕೊಡಲು ಸಜ್ಜಾದ ‘ಕಾಟೇರ’ ಡೈರೆಕ್ಟರ್

    ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮತ್ತು ನಟಿ ಸೋನಲ್ (Sonal) ಮದುವೆ ವಿಚಾರ ಕೆಲದಿನಗಳಿಂದ ಚರ್ಚೆಗೆ ಗ್ರಾಸವಾಗಿದೆ. ಆದರೆ ಮದುವೆ ಯಾವಾಗ? ಯಾರ ಜೊತೆ ಎಂಬುದು ತರುಣ್ ನೇರವಾಗಿ ಮಾತನಾಡಿರಲಿಲ್ಲ. ಈಗ ಜೀವನದ ರಿಯಲ್ ಹೀರೋಯಿನ್ ಬಗ್ಗೆ ‘ಕಾಟೇರ’ ನಿರ್ದೇಶಕ ತರುಣ್ ಘೋಷಣೆ ಮಾಡೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಅದೆಷ್ಟೋ ಜನರಿಗೆ ವಿನೋದ್ ಬದುಕಿನ ದಾರಿ ಹೇಳಿ ಕೊಟ್ಟಿದ್ದಾರೆ: ನಟಿ ಲಕ್ಷ್ಮಿ ಸಿದ್ದಯ್ಯ

    ದರ್ಶನ್‌ರನ್ನು ತರುಣ್ ಜೈಲಿನಲ್ಲಿ ಭೇಟಿಯಾದ ಬೆನ್ನಲ್ಲೇ ಮದುವೆ (Wedding) ಬಗ್ಗೆ ಗುಡ್ ನ್ಯೂಸ್ ಕೊಡಲು ಸಜ್ಜಾಗಿದ್ದಾರೆ. ಮದುವೆ ಹಾಗೂ ತನ್ನ ಬದುಕಿನ ಹೀರೋಯಿನ್ ಕುರಿತು ನಾಳೆ (ಜು.22) ಬೆಳಗ್ಗೆ 11:08ಕ್ಕೆ ಮಾಹಿತಿ ನೀಡುವುದಾಗಿ ನಿರ್ದೇಶಕ ತರುಣ್ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

     

    View this post on Instagram

     

    A post shared by Tharun Kishore Sudhir (@tharunsudhir)

    ಈವರೆಗೂ ವದಂತಿ ಬಿಟ್ಟರೇ ತರುಣ್ ಆಗಲಿ, ಸೋನಲ್ ಆಗಲಿ ಪ್ರೀತಿ ಅಥವಾ ಮದುವೆ ಕುರಿತು ಮಾತಾಡಿರಲಿಲ್ಲ. ಜು.22ರಂದು ವಿಶೇಷ ವಿಡಿಯೋವೊಂದನ್ನ ಪೋಸ್ಟ್ ಮಾಡಿ ಸೋನಲ್ ಜೊತೆಗಿನ ಮದುವೆ ವದಂತಿಗೆ ತೆರೆ ಎಳೆಯಲಿದ್ದಾರೆ ‘ರಾಬರ್ಟ್’ ನಿರ್ದೇಶಕ ತರುಣ್. ಸೋನಲ್ ಮತ್ತು ತರುಣ್ ಒಂದೇ ರೀತಿಯ ಪೋಸ್ಟ್ ಶೇರ್ ಮಾಡಿರೋದು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದೆ.

    ಅಂದಹಾಗೆ, ‘ರಾಬರ್ಟ್’ ಸಿನಿಮಾ ಸೆಟ್‌ನಲ್ಲಿ ಸೋನಲ್ ಜೊತೆಗಿನ ಪರಿಚಯವೇ ಇಂದು ಮದುವೆಗೆ ಮುನ್ನಡಿ ಬರೆದಿದೆ. ಇಬ್ಬರ ಮದುವೆಗೆ ಮುನ್ನುಡಿ ಬರೆದಿದ್ದೇ ದರ್ಶನ್. ಇದೀಗ ಇದೇ ಆಗಸ್ಟ್ 10, 11ರಂದು ಹೊಸ ಬಾಳಿಗೆ ಸೋನಲ್ ಮತ್ತು ತರುಣ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಕುರಿತು ನಾಳೆ ಅಧಿಕೃತ ಘೋಷಣೆ ಆಗಲಿದೆ.

  • ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌

    ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌

    ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಅವರು ಸೋನಲ್ ಮಂಥೆರೋ (Sonal Monterio) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆ (Wedding) ಡೇಟ್ ಕೂಡ ಫಿಕ್ಸ್ ಆಗಿದೆ. ಇದೇ ಆಗಸ್ಟ್‌ನಲ್ಲಿ ಈ ಜೋಡಿ ಹೊಸ ಬಾಳಿಗೆ ಕಾಲಿಡಲಿದ್ದಾರೆ. ಇದನ್ನೂ ಓದಿ:ನನ್ನ ಸಲುವಾಗಿ ಮದ್ವೆ ಡೇಟ್‌ ಬದಲಾವಣೆ ಮಾಡೋದು ಬೇಡ ಅಂದಿದ್ದಾರೆ ದರ್ಶನ್‌: ತರುಣ್‌ ಸುಧೀರ್

    ಇದೇ ಆಗಸ್ಟ್ 10, 11ರಂದು ತರುಣ್ ಮತ್ತು ಸೋನಲ್ ಮದುವೆ ಜರುಗಲಿದೆ. ದರ್ಶನ್ (Darshan) ಅವರೇ ತರುಣ್ ಮತ್ತು ಸೋನಲ್ ಮದುವೆಗೆ ಮುನ್ನುಡಿ ಬರೆದಿದ್ರಂತೆ. ಹಾಗಾಗಿ ಮದುವೆ ಡೇಟ್ ಮುಂದಕ್ಕೆ ಹಾಕಲು ತರುಣ್ ತೀರ್ಮಾನಿಸಿದ್ದರು. ಆದರೆ ಹಿರಿಯರ ಸಲಹೆ ಮತ್ತು ದರ್ಶನ್ ಒತ್ತಾಯ ಮೇರೆಗೆ ಮದುವೆಗೆ ಮುಂದಾಗಿದ್ದಾರೆ.

    ತರುಣ್ ಮದುವೆ ವಿಚಾರ ಮೊದಲೇ ದರ್ಶನ್‌ಗೆ ತಿಳಿದಿತ್ತು. ಜೈಲಿನಲ್ಲಿರುವ ಹಿನ್ನಲೆ, ತನ್ನ ಕಾರಣಕ್ಕೆ ತರುಣ್ ಮದುವೆ ಡೇಟ್ ಮುಂದೂಡಬಾರದು ಎಂದು ಪತ್ನಿ ವಿಜಯಲಕ್ಷ್ಮಿ ಕಡೆಯಿಂದ ದರ್ಶನ್ ಹೇಳಿ ಕಳುಹಿಸಿದ್ದರು. ಇದೀಗ ಜೈಲಿಗೆ ಭೇಟಿ ಕೊಟ್ಟ ವೇಳೆ ಕೂಡ ಇದನ್ನೇ ದರ್ಶನ್, ತರುಣ್‌ಗೆ ಹೇಳಿ ಕಳುಹಿಸಿದ್ದಾರೆ. ಇದೀಗ ದರ್ಶನ್ ಇಚ್ಛೆಯಂತೆ ಆಗಸ್ಟ್‌ 10,11ರಂದು ತರುಣ್ ಮದುವೆ ಜರುಗಲಿದೆ.

    ಅಂದಹಾಗೆ, ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ.

  • ಸೋನಲ್ ಜೊತೆಗಿನ ಮದುವೆ ಸುದ್ದಿ ನಿಜ ಎಂದ ‘ಕಾಟೇರ’ ಡೈರೆಕ್ಟರ್

    ಸೋನಲ್ ಜೊತೆಗಿನ ಮದುವೆ ಸುದ್ದಿ ನಿಜ ಎಂದ ‘ಕಾಟೇರ’ ಡೈರೆಕ್ಟರ್

    ರಾಬರ್ಟ್, ಕಾಟೇರ (Kaatera) ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ತರುಣ್ ಸುಧೀರ್ (Tharun Sudhir) ಮದುವೆ ವಿಚಾರ ಕೆಲದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸೋನಲ್ (Sonal) ಜೊತೆಗಿನ ಮದುವೆ ಬಗ್ಗೆ ಇದೀಗ ತರುಣ್ ಪ್ರತಿಕ್ರಿಯೆ ನೀಡಿದ್ದಾರೆ.

    ನಟಿ ಸೋನಲ್ ‌ಜೊತೆಗಿನ ಮದುವೆ ವಿಚಾರ ನಿಜ ಎಂದು ತರುಣ್ ಸುಧೀರ್ ಒಪ್ಪಿಕೊಂಡಿದ್ದಾರೆ. ಅತೀ ಶೀಘ್ರದಲ್ಲಿ ಸಿಹಿ ಸುದ್ದಿ ಹಂಚಿಕೊಳ್ತೀವಿ ಎಂದಿದ್ದಾರೆ. ಮದುವೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇವೆ. ‘ರಾಬರ್ಟ್’ ಸಿನಿಮಾ ಸೆಟ್‌ನಲ್ಲಿ ಪರಿಚಯ ಆಗಿದ್ದು, ದರ್ಶನ್ ಸರ್ ತಮಾಷೆ ಮಾಡುತ್ತಿದ್ದರು ಎಂದು ತರುಣ್ ಮಾತನಾಡಿದ್ದಾರೆ. ಇದನ್ನೂ ಓದಿ:ಮಾಲಿಕನಾದ ಶಿವಣ್ಣ- ‘ಉತ್ತರಕಾಂಡ’ ಚಿತ್ರದ ಫಸ್ಟ್‌ ಲುಕ್‌ ಔಟ್‌

    ಇತ್ತೀಚೆಗೆ ತರುಣ್ ತಾಯಿ ಮಾಲತಿ ಕೂಡ ಮದುವೆ ಬಗ್ಗೆ ಮಾತನಾಡಿ, ಮಗನ ಮದುವೆ ದಿನಾಂಕ ಫಿಕ್ಸ್ ಆಗಿಲ್ಲ. ಆಷಾಢ ಮಾಸ ಅಲ್ವಾ? ಕನ್ಫರ್ಮ್ ಆದ್ಮೇಲೆ ಹೇಳ್ತೀವಿ ಎಂದಿದ್ದಾರೆ. ಮದುವೆ ಛತ್ರಗಳು ಅಷ್ಟು ಬೇಗ ಸಿಕ್ತಿಲ್ಲ. ಮಗನ ಕೈಲಿ ಸದ್ಯ ಜಾಸ್ತಿ ಪ್ರಾಜೆಕ್ಟ್ ಇದೆ. ಅದೆಲ್ಲಾ ನೋಡ್ಕೊಂಡು ಮದುವೆ ಮಾಡಿಕೊಳ್ತಾರೆ ಎಂದು ತಿಳಿಸಿದ್ದರು.

    ನಾನೇ ಸರಿಯಾಗಿ ಇನ್ನೂ ಆ ಹುಡ್ಗಿನಾ ನೋಡಿಲ್ಲ. ಮನೆಯವರೆಲ್ಲಾ ಕೂತು ಮಾತಾಡಬೇಕು. ಛತ್ರ ಬುಕ್ ಆದ್ಮೇಲೆ ನಾವೇ ಮಾತಾಡ್ತೀವಿ ಎಂದು ತರುಣ್ ಮತ್ತು ಸೋನಲ್ ಮದುವೆ ಸುದ್ದಿಯನ್ನು ಅಧಿಕೃತವಾಗಿ ತಿಳಿಸಿದ್ದರು ಮಾಲತಿ ಸುಧೀರ್.

    ಅಂದಹಾಗೆ, ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಇದರ ನಡುವೆ ತರುಣ್ ಶೋವೊಂದರ ಜಡ್ಜ್ ಆಗಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ.