Tag: Sonu Sood Foundation

  • ‘ಭಾರತದ ಶ್ರೀಮಂತ ಮಹಿಳೆ’ಯಿಂದ ಸೋನು ಫೌಂಡೇಶನ್‍ಗೆ 15,000ರೂ. ದೇಣಿಗೆ

    ‘ಭಾರತದ ಶ್ರೀಮಂತ ಮಹಿಳೆ’ಯಿಂದ ಸೋನು ಫೌಂಡೇಶನ್‍ಗೆ 15,000ರೂ. ದೇಣಿಗೆ

    ಮುಂಬೈ: ಕೊರೊನಾ ಸಂಕಷ್ಟದ ಸಮಯದಲ್ಲಿ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಬಾಲಿವುಡ್ ನಟ ಸೋನು ಸೂದ್ ಫೌಂಡೇಶನ್‍ಗೆ ಅಂಧ ಮಹಿಳೆ ದೇಣಿಗೆ ನೀಡಿದ್ದಾರೆ.

    ಬುಡ ನಾಗಲಕ್ಷ್ಮೀ ಎಂಬ ಅಂಧ ಮಹಿಳೆ ತಮ್ಮ 5 ತಿಂಗಳ ಪಿಂಚಣಿ ಹಣದಲ್ಲಿ 15 ಸಾವಿರ ರೂ. ಹಣವನ್ನು ಸೋನು ಫೌಂಡೇಶನ್‍ಗೆ ನೀಡಿದ್ದಾರೆ. ಜೊತೆಗೆ ಭಾರತದ ಶ್ರೀಮಂತ ಮಹಿಳೆ ಎಂದು ಸೋನು ಸೂದ್ ಕರೆದಿದ್ದಾರೆ.

    ಆಂಧ್ರದಲ್ಲಿ ಸೋನು ಸೂದ್ ಫೌಂಡೇಶನ್ ವತಿಯಿಂದ ಆಮ್ಲಜನಕ ಘಟಕ ಸ್ಥಾಪಿಸಲಾಗುತ್ತಿದ್ದು, ಜುಲೈ 23ರಂದು ಇದನ್ನು ಉದ್ಘಾಟಿಸಲು ಬುಡ ನಾಗಲಕ್ಷ್ಮಿಯವರನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸೋನು ಸೂದ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಬುಡ ನಾಗಲಕ್ಷ್ಮಿ ಎಂಬ ಅಂಧ ಮಹಿಳೆ ತಮ್ಮ 5 ತಿಂಗಳ ಪಿಂಚಣಿ ಹಣದಲ್ಲಿ 15,000ರೂ ದೇಣಿಗೆ ನೀಡಿದ್ದು, ಜುಲೈ 23ರಂದು ಆಂಧ್ರ ಪ್ರದೇಶದಲ್ಲಿ ಆಮ್ಲಜನಕ ಘಟಕವನ್ನು ಉದ್ಘಾಟನೆ ಮಾಡಲಿದ್ದಾರೆ ಎಂಬುದು ಹೆಮ್ಮೆಯ ವಿಚಾರ. ಈ ಕಾರ್ಯಕ್ರಮದಲ್ಲಿ ಐಟಿ ಗೌತಮ್ ರೆಡ್ಡಿ, ಚಂದ್ರಾಧರ್ ಬಾಬು, ಜಿಲ್ಲಾಧಿಕಾರಿ ಪಾಲ್ಗೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:‘ಆರ್‌ಆರ್‌ಆರ್’ ಸೆಟ್‍ನಲ್ಲಿ ಆಲಿಯಾ ವರ್ಕೌಟ್

  • ಭರವಸೆ ಇರಲಿ, ಬೆಂಗಳೂರಿಗರೇ ನಿಮ್ಮೊಂದಿಗೆ ನಾವಿದ್ದೇವೆ: ಸೋನು ಸೂದ್

    ಭರವಸೆ ಇರಲಿ, ಬೆಂಗಳೂರಿಗರೇ ನಿಮ್ಮೊಂದಿಗೆ ನಾವಿದ್ದೇವೆ: ಸೋನು ಸೂದ್

    ಬೆಂಗಳೂರು: ನಟ ಸೋನು ಸೂದ್ ದೇಶಾದ್ಯಂತ ತಮ್ಮ ಸಹಾಯ ಹಸ್ತ ಚಾಚಿದ್ದಾರೆ. ಈಗ ವಿಶೇಷವಾಗಿ ಬೆಂಗಳೂರು ಜನತೆಯ ಸಹಾಯಕ್ಕೆ ಸೋನು ಸೂದ್ ನಿಂತಿದ್ದಾರೆ. ಬೆಂಗಳೂರಿನ ಸಾಕಷ್ಟು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಇದೆ. ಅನೇಕರಿಗೆ ಬೆಡ್‍ಗಳು ಕೂಡ ಸಿಗುತ್ತಿಲ್ಲ. ಹೀಗಾಗಿ ಮನೆ ಬಾಗಿಲಿಗೆ ವೈದ್ಯಕೀಯ ಆಮ್ಲಜನಕ ಸಿಲಿಂಡರ್‍ಗಳನ್ನು ಪೂರೈಕೆ ಮಾಡಲು ಸೋನು ಸೂದ್ ನಿರ್ಧರಿಸಿದ್ದಾರೆ.

    ಸೋನು ಸೂದ್ ಫೌಂಡೇಷನ್, ಹೋಥೂರ್ ಫೌಂಡೆಷನ್ ಹಾಗೂ ಸ್ವಾಗ್ ಬೈಕ್ಸ್ ಒಟ್ಟಾಗಿ ಸೇರಿ ಈ ಕಾರ್ಯಕ್ಕೆ ಮುಂದಾಗಿದೆ. ಕೊರೊನಾ ರೋಗಿ ಮನೆಯಲ್ಲೇ ಇದ್ದು, ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡುತ್ತಿದ್ದರೆ ಅವರು ಈ ಫೌಂಡೆಷನ್ ಸಂಪರ್ಕ ಮಾಡಬಹುದು. ಈ ಮೂಲಕ ಮನೆ ಬಾಗಿಲಿಗೆ ಸಿಲಿಂಡರ್ ಪಡೆದುಕೊಳ್ಳಬಹುದು. ಯಾರಿಗೆ ತೊಂದರೆ ಇದೆಯೋ ಅವರು 706999961 ಸಂಖ್ಯೆಗೆ ವಾಟ್ಸ್ಯಾಪ್ ಮಾಡಬೇಕು. ಬೆಂಗಳೂರಿನ ಯಾವ ಲೊಕೇಷನ್ ಎನ್ನುವ ಬಗ್ಗೆ ಮಾಹಿತಿ ನೀಡಬೇಕು. ಅವರು, ನಂತರ ನಿಮ್ಮ ಸಂಪರ್ಕಕ್ಕೆ ಬರುತ್ತಾರೆ. ಭರವಸೆಯಿಂದ ಜೀವಂತವಾಗಿರಿ ಬೆಂಗಳೂರಿಗರೆ. ನಾವು ನಿಮ್ಮೊಂದಿಗಿದ್ದೇವೆ ಎಂದು ಸೋನು ಸೂದ್ ಟ್ವೀಟ್ ಮಾಡಿ ಸಹಾಯವನ್ನು ಮಾಡುವುದಾಗಿ ತಿಳಿಸಿದ್ದಾರೆ.

    ಆಕ್ಸಿಜನ್, ಬೆಡ್ ವ್ಯವಸ್ಥೆ ಆಗುತ್ತಿಲ್ಲ. ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಆಕ್ಸಿಜನ್ ಪೂರೈಕೆ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಕಾರ್ಯದಲ್ಲಿ ಸೋನು ಸೂದ್ ಮುಂಚೂಣಿಯಲ್ಲಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಲು ಸೋನು ಸೂದ್ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್ ಪ್ಲಾಂಟ್‍ಗಳನ್ನು ಫ್ರಾನ್ಸ್ ನಿಂದ ಆಮದು ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದ್ದಾರೆ.