Tag: sonu srinivas gowda

  • ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ ಹಲವು ರೀಲ್ಸ್‌ ಸ್ಟಾರ್‌ಗಳಿಂದ ಕ್ಷಮೆಯಾಚನೆ

    ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ ಹಲವು ರೀಲ್ಸ್‌ ಸ್ಟಾರ್‌ಗಳಿಂದ ಕ್ಷಮೆಯಾಚನೆ

    ಬೆಂಗಳೂರು: ಮಾನ್ಯತೆ ಪಡೆಯದ ಬೆಟ್ಟಿಂಗ್ ಆಪ್ ಬಗ್ಗೆ ಪ್ರಮೋಷನ್‌ (Betting App Promote) ಮಾಡಿದ ಆರೋಪದ ಮೇಲೆ ವಿಚಾರಣೆ ಎದುರಿಸಿದ್ದ ರೀಲ್ಸ್‌ ಸ್ಟಾರ್‌ ಸೋನು ಶ್ರೀನಿವಾಸ್‌ ಗೌಡ (Sonu Srinivas Gowda) ಸೇರಿದಂತೆ ಹಲವರು ಈಗ ಕ್ಷಮೆ ಕೋರಿದ್ದಾರೆ.

    Reels Stars Betting App Promotion

    ಕೆಟ್ಟ ಮೇಲೆ ಬುದ್ದಿ ಬಂತು ಅನ್ನೋ ಹಾಗೇ ನಮ್ಮ ರೀಲ್ಸ್ ಸ್ಟಾರ್‌ಗಳಿಗೆ ಬಿಸಿಮುಟ್ಟುತ್ತಿದ್ದಂತೆ ಜ್ಞಾನೋದಯವಾಗಿದೆ. ತಾವು ಮಾಡಿದ ತಪ್ಪಿನ ಬಗ್ಗೆ ಅರಿವಾಗಿ ಯಾವ ಯಾವ ಅಕೌಂಟ್‌ಗಳಲ್ಲಿ ಬೆಟ್ಟಿಂಗ್ ಬಗ್ಗೆ ಪುಂಕಾನು ಪಂಕವಾಗಿ ಪುಂಗಿ ಊದುತ್ತಾ ಜನರನ್ನ ದಾರಿ ತಪ್ಪಿಸುವ ಪ್ರಯತ್ನ ಪಟ್ಟಿದ್ರೋ ಅದೇ ಅಕೌಂಟ್‌ಗಳಲ್ಲಿ ಇನ್ಮುಂದೆ ನಾನು ಯಾವುದೇ ಕಾರಣಕ್ಕೂ ಬೆಟ್ಟಿಂಗ್ ಪ್ರಮೋಷನ್ ಮಾಡಲ್ಲ. ನಾವು ಬೆಟ್ಟಿಂಗ್ ಪ್ರಮೋಷನ್ ಮಾಡುವುದರಿಂದ ಜನರ ಲಕ್ಷಾಂತರ ರೂಪಾಯಿ ಹಾಕಿ ಬೀದಿಗೆ ಬರ್ತಾರೆ. ಹಾಗಾಗಿ ಐಪಿಎಲ್ ಬೆಟ್ಟಿಂಗ್ ಬಗ್ಗೆ ಯಾರೇಲ್ಲ ಪ್ರಮೋಷನ್ ಮಾಡ್ತಾ ಇದ್ದಿರಾ ಅವರೇಲ್ಲರು ಕೂಡ ದಯವಿಟ್ಟು ಸ್ಟಾಪ್ ಮಾಡಿ ಅಂತಲೂ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿರುವ ಸೋನು ಶ್ರೀನಿವಾಸ್‌ಗೌಡ, ದೀಪಕ್‌ ಗೌಡ, ಬೆಟ್ಟಿಂಗ್ ಬಗ್ಗೆ ಪ್ರಮೋಷನ್ ನಾನು ಸ್ಟಾಪ್ ಮಾಡ್ತಿನಿ. ನೀವು ಕೂಡ ಸ್ಟಾಪ್ ಮಾಡಿ ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್‌ಗಳ ವಿಚಾರಣೆ

    ಇತ್ತೀಚೆಗಷ್ಟೇ 100ಕ್ಕೂ ಅಧಿಕ ರೀಲ್ಸ್ ಸ್ಟಾರ್‌ಗಳು ಬೆಂಗಳೂರು ಸೈಬರ್ ಕ್ರೈಂ ಪೊಲೀಸರ ತನಿಖೆ ಎದುರಿಸಿದ್ದರು. ಐಪಿಎಲ್ ಬೆಟ್ಟಿಂಗ್ ಆಪ್‌ಗಳ ಬಗ್ಗೆ ಪ್ರಮೋಷನ್ ಮಾಡಿದ್ದ ಕಾರಣ ಸುಮಾರು 50ಕ್ಕೂ ಹೆಚ್ಚು ಸ್ಟಾರ್‌ಗಳಿಗೆ ಸೈಬರ್ ಕ್ರೈಂ ಪೊಲೀಸರು ನೋಟಿಸ್ ಕೊಟ್ಟು ವಿಚಾರಣೆ ಎದುರಿಸಿದ್ದರು. ದುಡ್ಡಿನ ಆಸೆಗೆ ಬಿದ್ದು ಬೆಟ್ಟಿಂಗ್ ಆಪ್‌ಗಳ ಬಗ್ಗೆ ಪ್ರಮೋಟ್ ಮಾಡಿದರೆ ಕೇಸ್ ಹಾಕಿ ಜೈಲಿಗೆ ಕಳಿಸುವ ಎಚ್ಚರಿಕೆಯನ್ನೂ ಪೊಲೀಸರು ನೀಡಿದ್ದರು. ಹಾಗಾಗಿ ಬೆಟ್ಟಿಂಗ್ ಆಪ್‌ಗಳ ಬಗ್ಗೆ ಪ್ರಮೋಟ್ ಮಾಡಿದ್ದ ವಿಡಿಯೋಗಳನ್ನ ಡಿಲೀಟ್ ಮಾಡಿ ಅವರದ್ದೇ ಅಕೌಂಟ್‌ಗಳಲ್ಲಿ ಅಪಾಲಜಿ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಮೆಟ್ರೋ ಯಡವಟ್ಟಿಗೆ ಮತ್ತೊಂದು ಬಲಿ – ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

  • ಗೃಹಪ್ರವೇಶದ ಸಂಭ್ರಮದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಸೋನು ಗೌಡ

    ಗೃಹಪ್ರವೇಶದ ಸಂಭ್ರಮದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಸೋನು ಗೌಡ

    ‘ಬಿಗ್ ಬಾಸ್ ಕನ್ನಡ ಒಟಿಟಿ 1’ರ (Bigg Boss) ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ಕನಸಿನ ಮನೆಗೆ ಇಂದು (ನ.13) ಕಾಲಿಟ್ಟಿದ್ದಾರೆ. ನಟಿ ಗೃಹಪ್ರವೇಶದ (House Warming) ಸಂಭ್ರಮದಲ್ಲಿದ್ದಾರೆ. ಕಂಡ ಕನಸನ್ನು ನನಸು ಮಾಡಿಕೊಂಡಿದಕ್ಕೆ ಸೋನುಗೆ ಫ್ಯಾನ್ಸ್ ಶುಭಕೋರಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ಹೊಸ ಹೊಸ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಸೋನು ಗ್ರ್ಯಾಂಡ್ ಆಗಿ ಹೊಸ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗ್ರಾಮವೊಂದರಲ್ಲಿ ಹೊಸ ಮನೆ ಕಟ್ಟಿಸಿದ್ದಾರೆ. ನಟಿಯ ಹೊಸ ಮನೆಯ ಶುಭಾರಂಭಕ್ಕೆ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನ ಬಾಲನಟಿ ನಿಶಿತಾ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಕೇಸ್‌; ನಟನ ಕುರಿತು ಹಾಡು ಬರೆದಿದ್ದ ರಾಯಚೂರಿನ ಯುವಕ ಬಂಧನ

    ಇತ್ತೀಚೆಗೆ ಸೋನು ಅವರ ಯೂಟ್ಯೂಬ್‌ನಲ್ಲಿ ಮದುವೆ ಬಗ್ಗೆ ಮಾತನಾಡಿದರು. ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನಿಸುತ್ತಿದೆ ಎಂದಿದ್ದರು. ಆದರೆ ಹುಡುಗ ಯಾರು ಅಂತ ಅವರು ರಿವೀಲ್ ಮಾಡಿರಲಿಲ್ಲ.

    ಕುಟುಂಬಸ್ಥರು ನಿಶ್ಚಿಯಿಸಿದ ಅರೇಂಜ್ ಮ್ಯಾರೇಜ್ ಇದಾಗಿದೆ. ಹುಡುಗನ ಕಡೆಯವರು ನಮ್ಮ ಕುಟುಂಬಸ್ಥರನ್ನು ಅಪ್ರೋಚ್ ಮಾಡಿದರು. ಒಳ್ಳೆಯ ಹುಡುಗ, ಒಳ್ಳೆಯ ಸಂಬಂಧ ಇದಾಗಿದ್ದು, ನನ್ನ ತಾಯಿ ಸಮ್ಮತಿ ಸೂಚಿಸಿದರು. ಹಾಗಾಗಿ ನಾನು ಕೂಡ ಈ ಮದುವೆಗೆ ಒಪ್ಪಿಕೊಂಡೆ. ಒಳ್ಳೆಯ ಸಂಬಂಧ ಅಂದರೆ ನಾನ್ಯಾಕೆ ಒಪ್ಪಿಕೊಳ್ಳಬಾರದು ಎನಿಸಿತು. ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದರೆ ಅದು ಸರಿಯಾದ ನಿರ್ಣಯ ಆಗಿರುತ್ತದೆ ಎಂಬ ನಂಬಿಕೆಯಿದೆ ಎಂದು ಸೋನು ಮದುವೆ ಕುರಿತು ಮಾತನಾಡಿದರು.

    ಇನ್ನೂ ಸೋನು ಮದುವೆಯಾಗುತ್ತಿರುವ ವರ ಮೂಲತಃ ಬೆಂಗಳೂರಿನವರು. ಇದೀಗ ಅವರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ನಮ್ಮೀಬ್ಬರ ಎಂಗೇಜ್‌ಮೆಂಟ್ ನಡೆಯಲಿದೆ. ಮುಂದಿನ ವರ್ಷ ನಮ್ಮ ಮದುವೆ ಎಂದು ತಿಳಿಸಿದರು. ಆದರೆ ವರನ ಹೆಸರನ್ನು ಅವರು ರಿವೀಲ್ ಮಾಡಿಲ್ಲ. ಸದ್ಯದಲ್ಲೇ ಅಧಿಕೃತವಾಗಿ ತಿಳಿಸೋದಾಗಿ ಮಾತನಾಡಿದರು.

  • ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

    ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

    ‘ಬಿಗ್ ಬಾಸ್ ಕನ್ನಡ ಒಟಿಟಿ 1’ರ (Bigg Boss Kannada OTT 1) ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆಯಾಗುತ್ತಿರುವ ಹುಡುಗನ ಕುರಿತು ‘ಪಬ್ಲಿಕ್ ಟಿವಿ’ ಡಿಜಿಟಲ್‌ಗೆ ಸೋನು ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಮದುವೆಯಾಗುತ್ತಿರುವ ವಿಚಾರ ನಿಜ, ಮುಂದಿನ ವರ್ಷ ಮದುವೆ (Wedding) ಪ್ಲ್ಯಾನ್‌ ಮಾಡಿದ್ದೇವೆ ಎಂದು ಸೋನು ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ನಲ್ಲಿ ಸೊಂಟ ಬಳುಕಿಸಿದ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ

    ಇತ್ತೀಚೆಗೆ ಸೋನು ಅವರ ಯೂಟ್ಯೂಬ್‌ನಲ್ಲಿ ಮದುವೆ ಬಗ್ಗೆ ಮಾತನಾಡಿದರು. ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನಿಸುತ್ತಿದೆ ಎಂದಿದ್ದರು. ಆದರೆ ಹುಡುಗ ಯಾರು ಅಂತ ಅವರು ರಿವೀಲ್ ಮಾಡಿರಲಿಲ್ಲ. ಇದೀಗ ಖುದ್ದು ಅವರೇ ತಿಳಿಸಿದ್ದಾರೆ.

    ಕುಟುಂಬಸ್ಥರು ನಿಶ್ಚಿಯಿಸಿದ ಅರೇಂಜ್ ಮ್ಯಾರೇಜ್ ಇದಾಗಿದೆ. ಹುಡುಗನ ಕಡೆಯವರು ನಮ್ಮ ಕುಟುಂಬಸ್ಥರನ್ನು ಅಪ್ರೋಚ್ ಮಾಡಿದರು. ಒಳ್ಳೆಯ ಹುಡುಗ, ಒಳ್ಳೆಯ ಸಂಬಂಧ ಇದಾಗಿದ್ದು, ನನ್ನ ತಾಯಿ ಸಮ್ಮತಿ ಸೂಚಿಸಿದರು. ಹಾಗಾಗಿ ನಾನು ಕೂಡ ಈ ಮದುವೆಗೆ ಒಪ್ಪಿಕೊಂಡೆ. ಒಳ್ಳೆಯ ಸಂಬಂಧ ಅಂದರೆ ನಾನ್ಯಾಕೆ ಒಪ್ಪಿಕೊಳ್ಳಬಾರದು ಎನಿಸಿತು. ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದರೆ ಅದು ಸರಿಯಾದ ನಿರ್ಣಯ ಆಗಿರುತ್ತದೆ ಎಂಬ ನಂಬಿಕೆಯಿದೆ ಎಂದು ಸೋನು ಮದುವೆ ಕುರಿತು ಮಾತನಾಡಿದ್ದಾರೆ.

    ಇನ್ನೂ ಸೋನು ಮದುವೆಯಾಗುತ್ತಿರುವ ವರ ಮೂಲತಃ ಬೆಂಗಳೂರಿನವರು. ಇದೀಗ ಅವರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ನಮ್ಮೀಬ್ಬರ ಎಂಗೇಜ್‌ಮೆಂಟ್ ನಡೆಯಲಿದೆ. ಮುಂದಿನ ವರ್ಷ ನಮ್ಮ ಮದುವೆ ಎಂದು ಹೇಳಿದ್ದಾರೆ. ಆದರೆ ವರನ ಹೆಸರನ್ನು ಅವರು ರಿವೀಲ್ ಮಾಡಿಲ್ಲ. ಸದ್ಯದಲ್ಲೇ ಅಧಿಕೃತವಾಗಿ ತಿಳಿಸೋದಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ-‘ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

    ಇನ್ನೂ ಮದುವೆಯ ಬಗ್ಗೆ ಗುಡ್ ನ್ಯೂಸ್ ಕೊಟ್ಟಿರೋದರ ನಡುವೆ ಮನೆಯ ಗೃಹಪ್ರವೇಶದ ತಯಾರಿಯ ಬ್ಯುಸಿಯಲ್ಲಿದ್ದಾರೆ. ಇದೇ ನವೆಂಬರ್ 13ರಂದು ಮಂಡ್ಯದಲ್ಲಿ ಸೋನು ಅವರ ಹೊಸ ಮನೆಯ ಗೃಹಪ್ರವೇಶದ ಕಾರ್ಯಕ್ರಮ ಜರುಗಲಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.

  • ಶಾರ್ಟ್ ಡ್ರೆಸ್‌ನಲ್ಲಿ ಕುಣಿದ ರೀಲ್ಸ್ ರಾಣಿ ಸೋನು

    ಶಾರ್ಟ್ ಡ್ರೆಸ್‌ನಲ್ಲಿ ಕುಣಿದ ರೀಲ್ಸ್ ರಾಣಿ ಸೋನು

    ‘ಬಿಗ್ ಬಾಸ್’ (Bigg Boss) ಖ್ಯಾತಿಯ ಸೋನು ಗೌಡ (Sonu Srinivas Gowda) ಹೊಸ ರೀಲ್ಸ್‌ವೊಂದನ್ನು ಹಂಚಿಕೊಂಡಿದ್ದಾರೆ. ಚೆಂದದ ಹಾಡೋದಕ್ಕೆ ಭರ್ಜರಿಯಾಗಿ ಸ್ಟೆಪ್‌ ಹಾಕಿದ್ದಾರೆ. ಚಡ್ಡಿ ಧರಿಸಿ ಕುಣಿದ ಸೋನುರನ್ನು ನೋಡಿ ಪಡ್ಡೆಹುಡುಗರು ದಂಗಾಗಿದ್ದಾರೆ. ಇದನ್ನೂ ಓದಿ:‘ಈಗ 2’ ಬರುವ ಬಗ್ಗೆ ನಾನಿ ಕೊಟ್ರು ಇಂಟರೆಸ್ಟಿಂಗ್ ಅಪ್‌ಡೇಟ್

    ಸೋಶಿಯಲ್ ಮೀಡಿಯಾದಲ್ಲಿ ಬಗೆ ಬಗೆಯ ರೀಲ್ಸ್ ಮಾಡುವ ಮೂಲಕ ಫೇಮಸ್ ಆಗಿರುವ ಸೋನು ಇತ್ತೀಚೆಗೆ ಗೋವಾ ವೆಕೇಷನ್‌ಗೆ ಹೋಗಿದ್ದರು. ಈ ವೇಳೆ, ಶೂಟ್ ಮಾಡಿದ್ದ ರೀಲ್ಸ್ ಅನ್ನು ಈಗ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.


    ‘ನೆನೆಪಿರಲಿ’ ಸಿನಿಮಾದ ‘ಹಾಡಿಗೆ ಹೃದಯ ಬಯಸುವ ಸುಖದ ಚಿತ್ರಕ್ಕೆ’ ಎಂದು ನಟಿ ಕುಣಿದು ಕುಪ್ಪಳಿಸಿದ್ದಾರೆ. ಶಾರ್ಟ್ ಶರ್ಟ್ ಮತ್ತು ಶಾರ್ಟ್ ಆಗಿರೋ ಜೀನ್ಸ್ ಅನ್ನು ಧರಿಸಿದ್ದಾರೆ. ಸುನಾಮಿ ಬಂದ್ರೂ ಕೂಡ ನೀವು ಡ್ಯಾನ್ಸ್ ಮಾಡೋದು ಮಾತ್ರ ಬಿಡಲ್ಲ ಅಲ್ವಾ? ಎಂದು ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಹಾಕಿದ್ದಾರೆ.

    ಇನ್ನೂ ಮಾರ್ಚ್ 22ರಂದು ಅಕ್ರಮವಾಗಿ ಮಗುವೊಂದನ್ನು ದತ್ತು ಪಡೆದ ವಿಚಾರವಾಗಿ 11 ದಿನಗಳ ಕಾಲ ನಟಿ ಸೋನು ಬಂಧನದಲ್ಲಿದ್ದರು. ಆ ನಂತರ ಬಿಡುಗಡೆಯಾದರು.

    ಅಂದಹಾಗೆ, `ಕ್ಯಾಡ್ಬರೀಸ್’ ಸಿನಿಮಾದಲ್ಲಿ ಸೋನು ಶ್ರೀನಿವಾಸ್ ಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಐಟಂ ಹಾಡಿಗೆ ನಟಿ ಹೆಜ್ಜೆ ಹಾಕಿದ್ದಾರೆ. ಧರ್ಮ ಕೀರ್ತಿರಾಜ್, ಅದ್ವಿತಿ ಶೆಟ್ಟಿ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ರಿಲೀಸ್‌ಗೆ ಸೋನು ಎದುರು ನೋಡ್ತಿದ್ದಾರೆ.

  • ಗೋವಾದಲ್ಲಿ ಕೊಡೆ ಹಿಡಿದು ನಿಂತ ‘ಬಿಗ್ ಬಾಸ್’ ಖ್ಯಾತಿಯ ಸೋನು

    ಗೋವಾದಲ್ಲಿ ಕೊಡೆ ಹಿಡಿದು ನಿಂತ ‘ಬಿಗ್ ಬಾಸ್’ ಖ್ಯಾತಿಯ ಸೋನು

    ‘ಬಿಗ್ ಬಾಸ್’ ಬೆಡಗಿ ಸೋನು ಗೌಡ (Sonu Srinivas Gowda) ಗೋವಾಗೆ (Goa) ತೆರಳಿದ್ದಾರೆ. ಮಳೆಯಲ್ಲಿ ಕೊಡೆ ಹಿಡಿದು ಸಖತ್ ಹಾಟ್ ಆಗಿ ಸೋನು ಗೌಡ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ಸದಾ ಒಂದಲ್ಲಾ ಒಂದು ಸುದ್ದಿಯ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವ ನಟಿ ಸೋನು ಈಗ ಗೋವಾ ವೆಕೇಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ತುಂಡು ಬಟ್ಟೆ ಧರಿಸಿ ನಟಿ ಸಖತ್ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ.

     

    ಕಪ್ಪು ಕಲರ್ ಟೀ ಶರ್ಟ್‌ಗೆ ನೀಲಿ ಬಣ್ಣದ ಚಿಕ್ಕದಾದ ಜಿನ್ಸ್ ಚಡ್ಡಿಯನ್ನು ಸೋನು ಧರಿಸಿದ್ದಾರೆ. ನಟಿಯ ಲುಕ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಬರುತ್ತಿವೆ. ಚಡ್ಡಿ ಸಣ್ಣದಾಯ್ತು ಎಂದು ನಟಿಯ ಕಾಲೆಳೆದಿದ್ದಾರೆ.

    ಇನ್ನೂ ಮಾರ್ಚ್ 22ರಂದು ಅಕ್ರಮವಾಗಿ ಮಗುವೊಂದನ್ನು ದತ್ತು ಪಡೆದ ವಿಚಾರವಾಗಿ 11 ದಿನಗಳ ಕಾಲ ನಟಿ ಸೋನು ಬಂಧನದಲ್ಲಿದ್ದರು. ಆ ನಂತರ ಬಿಡುಗಡೆಯಾದರು. ಇದನ್ನೂ ಓದಿ:ಆ.8ರಿಂದ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಶುರು

    ಅಂದಹಾಗೆ, ‘ಕ್ಯಾಡ್ಬರೀಸ್’ ಸಿನಿಮಾದಲ್ಲಿ ಸೋನು ಶ್ರೀನಿವಾಸ್ ಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಐಟಂ ಹಾಡಿಗೆ ನಟಿ ಹೆಜ್ಜೆ ಹಾಕಿದ್ದಾರೆ. ಧರ್ಮ ಕೀರ್ತಿರಾಜ್, ಅದ್ವಿತಿ ಶೆಟ್ಟಿ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ರಿಲೀಸ್‌ಗೆ ಸೋನು ಎದುರು ನೋಡ್ತಿದ್ದಾರೆ.

  • ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಾಮೆಂಟ್ ಕಿರುಕುಳ- ನೋವು ಹಂಚಿಕೊಂಡ ಸೋನು

    ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಾಮೆಂಟ್ ಕಿರುಕುಳ- ನೋವು ಹಂಚಿಕೊಂಡ ಸೋನು

    ‘ಬಿಗ್ ಬಾಸ್’ (Bigg Boss) ಖ್ಯಾತಿಯ ಸೋನು ಶ್ರೀನಿವಾಸ್ ಗೌಡಗೆ (Sonu Srinivas Gowda) ದರ್ಶನ್ ಅಭಿಮಾನಿಗಳಿಂದ (Darshan Fans) ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ನಟಿ ಸೋನು ವಿಡಿಯೋ ಮೂಲಕ ನೋವು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅರೆಸ್ಟ್‌ ಆಗಿದ್ದು, ಅವರ ಪರ ಸೋನು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸೋನು ಅಶ್ಲೀಲ ಕಾಮೆಂಟ್‌ಗಳಿಂದ ಕಿರುಕುಳ ಕೊಡುತ್ತಿದ್ದಾರೆ ಎಂದು ನಟಿ ಮಾತನಾಡಿದ್ದಾರೆ.

    ಸೋನು ಗೌಡ ಮಾತನಾಡಿ, ಇನ್ಸ್ಟಾಗ್ರಾಂ, ಯುಟ್ಯೂಬ್‌ನಲ್ಲಿ ತುಂಬಾ ಕೆಟ್ಟ ಕಾಮೆಂಟ್‌ಗಳು ನನಗೆ ಬರುತ್ತಿವೆ. ದರ್ಶನ್ ಅವರ ಬಗ್ಗೆ ನಾನು ಏನು ಮಾತನಾಡಿಲ್ಲ ಎಂದು. ನಾವು ಇನ್ನೂ ಚಿಕ್ಕವರು. ನಾವು ಅವರ ಬಗ್ಗೆ ಮಾತನಾಡುವಷ್ಟು ಇನ್ನೂ ಬೆಳೆದಿಲ್ಲ. ನಾವು ಒಂದ ಸಲ ಫ್ಯಾನ್ ಅಂತಾದರೆ, ಸಾಯುವರೆಗೂ ನಾವು ಫ್ಯಾನ್ ಆಗಿರುತ್ತೇವೆ. ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಆಗಿಯೇ ಆಗುತ್ತೆ. ನಾವು ಒಳ್ಳೆಯವರಾಗಿರಬಹುದು, ಕೆಟ್ಟವರಾಗಿರಬಹುದು ಆದರೆ ತೀರ್ಪು ಬಂದೇ ಬರುತ್ತದೆ. ಅಲ್ಲಿಯವರೆಗೂ ಕಾಯಿರಿ. ಅಲ್ಲಿಯವರೆಗೆ ನಮಗೆ ಕೆಟ್ಟ ಕಾಮೆಂಟ್ ಮಾಡಬೇಡಿ. ಅಲ್ಲಿಯವರೆಗೆ ಆ ದೇವರು ಎರಡೂ ಕುಟುಂಬಕ್ಕೆ ಧೈರ್ಯ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ. ನಮ್ಮ ಬಾಸ್ ದರ್ಶನ್ ಅವರು ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೋಪ್ ಇಟ್ಟುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

    ಇತ್ತೀಚೆಗೆ ಅಕ್ರಮವಾಗಿ ಮಗುವೊಂದನ್ನು ದತ್ತು ಪಡೆದ ವಿಚಾರವಾಗಿ 11 ದಿನಗಳ ಕಾಲ ನಟಿ ಸೋನು ಬಂಧನದಲ್ಲಿದ್ದರು. ಆ ನಂತರ ಬಿಡುಗಡೆಯಾದರು. ಇದನ್ನೂ ಓದಿ:ಮತ್ತೆ ಒಂದಾಯ್ತು ಒಂದು ಮೊಟ್ಟೆಯ ಕಥೆ ಟೀಮ್- ‘ರೂಪಾಂತರ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ

    ಅಂದಹಾಗೆ, ‘ಕ್ಯಾಡ್ಬರೀಸ್’ ಸಿನಿಮಾದಲ್ಲಿ ಸೋನು ಶ್ರೀನಿವಾಸ್ ಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಐಟಂ ಹಾಡಿಗೆ ನಟಿ ಹೆಜ್ಜೆ ಹಾಕಿದ್ದಾರೆ. ಧರ್ಮ ಕೀರ್ತಿರಾಜ್, ಅದ್ವಿತಿ ಶೆಟ್ಟಿ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ರಿಲೀಸ್‌ಗೆ ಸೋನು ಎದುರು ನೋಡ್ತಿದ್ದಾರೆ.

  • ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಬರುವ ಪ್ಲ್ಯಾನ್ ಇದೆ ಎಂದ ಸೋನು ಗೌಡ

    ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಬರುವ ಪ್ಲ್ಯಾನ್ ಇದೆ ಎಂದ ಸೋನು ಗೌಡ

    ಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿದ್ದ ‘ಬಿಗ್‌ ಬಾಸ್‌’ (Bigg Boss Kannada)  ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ತಮ್ಮ ಮದುವೆ (Wedding) ಬಗ್ಗೆ ಮೌನ ಮುರಿದಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮದುವೆ ಮತ್ತು ರಾಜಕೀಯಕ್ಕೆ (Politics) ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ.

    ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಇದೀಗ ಅಭಿಮಾನಿಗಳ ಜೊತೆ ಪ್ರಶ್ನಾವಳಿ ಮಾಡಿದ್ದಾರೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಭಿಮಾನಿಯೊಬ್ಬರು ನೀವು ಯಾವಾಗ ಮದುವೆಯಾಗುತ್ತೀರಾ? ಎಂದು ಸೋನುಗೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ಪ್ರಶ್ನೆಗಳಿಗೆ ನಟಿ ಉತ್ತರಿಸಿದ್ದಾರೆ. ನಾನು ಮದುವೆ ಬಗ್ಗೆ ಪ್ಲ್ಯಾನ್ ಇಲ್ಲ. ನಾನು ಮದುವೆ ಆಗಬಾರದು ಎಂದುಕೊಂಡಿದ್ದೇನೆ ಎಂದಿದ್ದಾರೆ.‌ ಇದನ್ನೂ ಓದಿ:‘ದಿ ಫ್ಯಾಮಿಲಿ ಮ್ಯಾನ್ 3’ ಸಿರೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಮನೋಜ್

    ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಆಸಕ್ತಿ ಇತ್ತು. ಈಗ ಇಲ್ಲ, ಆದರೆ ರಾಜಕೀಯಕ್ಕೆ ಹೋಗಬೇಕು. ಅಲ್ಲಿ ಕಾಣಿಸಿಕೊಳ್ಳಬೇಕು ಎಂದು ಪ್ಲ್ಯಾನ್ ಇದೆ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಸೋನು ಮಾತನಾಡಿದ್ದಾರೆ.

    ‘ಕ್ಯಾಡ್ಬರಿಸ್’ ಎಂಬ ಸಿನಿಮಾದಲ್ಲಿ ಸೋನು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸ್ಪೆಷಲ್ ಹಾಡಿಗೆ ಹೆಜ್ಜೆ ಕೂಡ ಹಾಕಲಿದ್ದಾರೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

  • 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅಂತ ಬೇಸರವಿದೆ: ಸೋನು ಶ್ರೀನಿವಾಸ್ ಗೌಡ

    23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅಂತ ಬೇಸರವಿದೆ: ಸೋನು ಶ್ರೀನಿವಾಸ್ ಗೌಡ

    ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ವಿಚಾರವಾಗಿ 11 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಏ.6ರಂದು ಸೋನು ಜೈಲಿನಿಂದ (Jail) ರಿಲೀಸ್ ಆಗಿದ್ದಾರೆ. ಜೈಲಿನಿಂದ ಹೊರಬಂದ್ಮೇಲೆ ಸೋನು ಸಖತ್ ಸೈಲೆಂಟ್ ಆಗಿದ್ದರು.

    ಪರಪ್ಪನ ಅಗ್ರಹಾರದಿಂದ ರಿಲೀಸ್ ಆದ್ಮೇಲೆ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡೋಕೆ ಸೋನು ನಿರಾಕರಿಸಿದ್ದರು. ಆದರೆ ಅವರ ಲಾಯರ್ ಸೂಚನೆಯ ಮೇರೆಗೆ ಸೋನು ಯಾವುದೇ ರಿಯಾಕ್ಷನ್ ನೀಡಿರಲಿಲ್ಲ. ಆದರೆ ಈ ಪ್ರಕರಣ ಇನ್ನೂ ನಡೆಯುತ್ತಿದೆ. ಜಾಮೀನಿನ ಮೇಲೆ ಸೋನು ಹೊರಬಂದಿದ್ದಾರೆ.

    ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸೋನು ಮೊದಲ ಪ್ರತಿಕ್ರಿಯೆ ಮುಂದಿನ ನಡೆ ಏನು ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಈಗ ಸಿಕ್ಕಾಪಟ್ಟೆ ಸೈಲೆಂಟ್‌ ಆಗಿದ್ದರು. ತಮ್ಮ ಮನೆಯಲ್ಲಿ ಸೋನು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಆಗಿರುವ ವಿವಾದದಿಂದ ಸೋನು ಮೌನಕ್ಕೆ ಶರಣಾಗಿದ್ದರು. ಈಗ ವಿಡಿಯೋವೊಂದನ್ನು ಮಾಡಿ ಜೈಲು ಎಕ್ಸಪಿರಿಯನ್ಸ್ ಹೇಳಿಕೊಂಡಿದ್ದಾರೆ.

    ಕೇಸ್ ಬಗ್ಗೆ ಏನೂ ಮಾತನಾಡಬಾರದು ಎನ್ನುವ ಲಾಯರ್ ಮಾತನ್ನು ಪಾಲಿಸಿರುವ ಅವರು, ಜೈಲು ಅನುಭವವನ್ನು ತೆರೆದಿಟ್ಟಿದ್ದಾರೆ. ನಾಲ್ಕು ಗೋಡೆ ಮಧ್ಯ ಬದುಕೋದು ತುಂಬಾ ಕಷ್ಟ ಅನಿಸಿತು ಎಂದಿದ್ದಾರೆ. ಜೈಲಿನಲ್ಲಿ ತುಂಬಾ ಸೊಳ್ಳೆಗಳು ಇದ್ದವು. ನನಗೆ ಮಲಗೋಕೆ ಕಷ್ಟ ಆಗುತ್ತಿತ್ತು ಅಂತಾನೂ ಹೇಳಿಕೊಂಡಿದ್ದಾರೆ.

     

    23ನೇ ವಯಸ್ಸಿಗೆ ಜೈಲು ನೋಡಿ ಬಂದಿದ್ದು ಅವರಿಗೆ ಆಘಾತ ತರಿಸಿದೆ. ನಾನು ಯಾವತ್ತೂ ಇಂಥದ್ದೊಂದು ಸನ್ನಿವೇಶ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಕೇಸ್ ಬಗ್ಗೆ ಎಲ್ಲವನ್ನೂ ಹಂಚಿಕೊಳ್ಳುತ್ತೇನೆ. ಯಾವ ವಿಷಯವನ್ನೂ ಮುಚ್ಚಿಡಲ್ಲ ಎಂದು ಪ್ರಾಮೀಸ್ ಮಾಡಿದ್ದಾರೆ. ಕಷ್ಟದ ದಿನಗಳಲ್ಲಿ ಸಾಥ್ ಕೊಟ್ಟವರನ್ನು ನೆನಪಿಸಿಕೊಂಡಿದ್ದಾರೆ ಸೋನು.

  • ಜೈಲಿಂದ ಹೊರಬಂದು ಯುಗಾದಿ ಹಬ್ಬ ಆಚರಿಸಿದ ಸೋನು ಶ್ರೀನಿವಾಸ್‌ ಗೌಡ

    ಜೈಲಿಂದ ಹೊರಬಂದು ಯುಗಾದಿ ಹಬ್ಬ ಆಚರಿಸಿದ ಸೋನು ಶ್ರೀನಿವಾಸ್‌ ಗೌಡ

    ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ವಿಚಾರವಾಗಿ ಸೋನು ಜೈಲು (Jail) ಪಾಲಾಗಿದ್ದರು. ಇದೀಗ 11 ದಿನಗಳ ಸೆರೆವಾಸದ ನಂತರ ಏ.6ರಂದು ಜೈಲಿಂದ ರಿಲೀಸ್ ಆಗಿದ್ದಾರೆ. ಪರಪ್ಪನ ಅಗ್ರಹಾರದಿಂದ ಬಿಡುಗಡೆ ಆದ್ಮೇಲೆ ಯುಗಾದಿ (Ugadi Festival) ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಸೆಲೆಬ್ರೇಶನ್ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

    ಪಿಂಕ್ ಬಣ್ಣ ಸೀರೆಯುಟ್ಟು ಸೋನು ಗೌಡ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ. ಕಹಿನೆಲ್ಲಾ ಮರೆತು ಖುಷಿಯಿಂದ ಹೊಸ ಹೆಜ್ಜೆ ಇಡುತ್ತಿದ್ದಾರೆ ನಟಿ ಸೋನು. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ದಿವ್ಯಾ ಉರುಡುಗ

    ಜೈಲಿಂದ ರಿಲೀಸ್ ಆದ್ಮೇಲೆ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡೋಕೆ ಸೋನು ನಿರಾಕರಿಸಿದ್ದರು. ಆದರೆ ಅವರ ಲಾಯರ್ ಸೂಚನೆಯ ಮೇರೆಗೆ ಸೋನು ಯಾವುದೇ ರಿಯಾಕ್ಷನ್ ನೀಡಿರಲಿಲ್ಲ. ಆದರೆ ಈ ಪ್ರಕರಣದ ಇನ್ನೂ ತನಿಖೆ ನಡೆಯುತ್ತಿದೆ.

    ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸೋನು ಮೊದಲ ಪ್ರತಿಕ್ರಿಯೆ ಮುಂದಿನ ನಡೆ ಏನು ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಈಗ ಸಿಕ್ಕಾಪಟ್ಟೆ ಸೈಲೆಂಟ್ ಆಗಿದ್ದರು. ವಿವಾದದಿಂದ ಸೋನು ಮೌನಕ್ಕೆ ಶರಣಾಗಿದ್ದರು. ಇದೀಗ ಮತ್ತೆ ಲವಲವಿಕೆಯಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ಫೋಟೋ ಶೇರ್ ಮಾಡಿದ್ದಾರೆ. ಈ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆದ್ರೂ ಉತ್ತರ ಕೊಡುತ್ತಾರಾ? ಕಾಯಬೇಕಿದೆ.

    6 ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್‌ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ಬಾಂಡ್ ಷರತ್ತನ್ನು ನ್ಯಾಯಾಧೀಶರು ವಿಧಿಸಿದ್ದರು. ಏ.6ರಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ ರಾತ್ರಿ 8:10ರ ಸುಮಾರಿಗೆ ಜೈಲಿನಿಂದ ಬಿಡುಗಡೆಯಾಗಿದ್ದರು.

  • ಜೈಲಿಂದ ರಿಲೀಸ್‌ ಆದ ಬಳಿಕ ಜ್ಯೂಸ್‌ ಕುಡಿದು ಸೋನು ಕೂಲ್‌.. ಕೂಲ್‌..

    ಜೈಲಿಂದ ರಿಲೀಸ್‌ ಆದ ಬಳಿಕ ಜ್ಯೂಸ್‌ ಕುಡಿದು ಸೋನು ಕೂಲ್‌.. ಕೂಲ್‌..

    ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅಕ್ರಮವಾಗಿ ಮಗು ದತ್ತು ಪಡೆದ ವಿಚಾರವಾಗಿ ಜೈಲು ಸೇರಿದ್ದರು. ಇದೀಗ 11 ದಿನಗಳ ಕಾಲ ಜೈಲು ವಾಸದ ನಂತರ ಏ.6ರಂದು ರಿಲೀಸ್ ಆಗಿದ್ದಾರೆ. ಜೈಲಿನಿಂದ (Jail) ಹೊರಬಂದ್ಮೇಲೆ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

    ಜೈಲಿನಿಂದ ಮುಕ್ತಿ ಸಿಗುತ್ತಿದ್ದಂತೆ ಸೋನು ಶ್ರೀನಿವಾಸ್ ಗೌಡ ಅವರು ಕಾರಿನಲ್ಲಿ ಕುಳಿತು ಕೂಲ್‌ ಆಗಿ ಜ್ಯೂಸ್ ಕುಡಿದು ಕ್ಯಾಮೆರಾ ಕಣ್ಣಿಗೆ ಮುಗುಳು ನಗೆ ಬೀರಿದ್ದಾರೆ. ಲೈಟ್ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಅಮೆರಿಕಾದಲ್ಲಿ ಭೂಕಂಪ: ನಟ ನಿರೂಪ್ ಭಂಡಾರಿ ಬಿಚ್ಚಿಟ್ಟ ಅನುಭವ

    ಪರಪ್ಪನ ಅಗ್ರಹಾರದಿಂದ ರಿಲೀಸ್ ಆದ್ಮೇಲೆ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡೋಕೆ ಸೋನು ನಿರಾಕರಿಸಿದ್ದರು. ಆದರೆ ಅವರ ಲಾಯರ್ ಸೂಚನೆಯ ಮೇರೆಗೆ ಸೋನು ಯಾವುದೇ ರಿಯಾಕ್ಷನ್ ನೀಡಿರಲಿಲ್ಲ. ಆದರೆ ಈ ಪ್ರಕರಣದ ಇನ್ನೂ ತನಿಖೆ ನಡೆಯುತ್ತಿದೆ.

    ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸೋನು ಮೊದಲ ಪ್ರತಿಕ್ರಿಯೆ ಮುಂದಿನ ನಡೆ ಏನು ಎಂಬುದರ ಬಗ್ಗೆ ಫ್ಯಾನ್ಸ್ಗೆ ಕುತೂಹಲ ಮೂಡಿಸಿದೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಈಗ ಸಿಕ್ಕಾಪಟ್ಟೆ ಸೈಲೆಂಟ್ ಆಗಿದ್ದರು. ವಿವಾದದಿಂದ ಸೋನು ಮೌನಕ್ಕೆ ಶರಣಾಗಿದ್ದರು. ಇದೀಗ ಮತ್ತೆ ಲವಲವಿಕೆಯಿಂದ ಕ್ಯಾಮೆರಾಗೆ ಪೋಸ್ ಕೊಟ್ಟು ಜ್ಯೂಸ್ ಕುಡುಯುತ್ತಿರುವ ಫೋಟೋ ಶೇರ್ ಮಾಡಿದ್ದಾರೆ. ಈ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆದ್ರೂ ಉತ್ತರ ಕೊಡುತ್ತಾರಾ? ಕಾಯಬೇಕಿದೆ.

    5 ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ಬಾಂಡ್ ಷರತ್ತನ್ನು ನ್ಯಾಯಾಧೀಶರು ವಿಧಿಸಿದ್ದರು. ಏ.6ರಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ ರಾತ್ರಿ 8:10ರ ಸುಮಾರಿಗೆ ಜೈಲಿನಿಂದ ಬಿಡುಗಡೆಯಾಗಿದ್ದರು.