Tag: sorry

  • ಕಾಲೇಜು ಗೋಡೆ, ರಸ್ತೆ ಮೇಲೆ Sorry ಬರಹ ಪ್ರಕರಣ- ಕೆಟಿಎಂ ಡ್ಯೂಕ್‍ನಲ್ಲಿ ಬಂದ ಇಬ್ಬರಿಂದ ಕೃತ್ಯ?

    ಕಾಲೇಜು ಗೋಡೆ, ರಸ್ತೆ ಮೇಲೆ Sorry ಬರಹ ಪ್ರಕರಣ- ಕೆಟಿಎಂ ಡ್ಯೂಕ್‍ನಲ್ಲಿ ಬಂದ ಇಬ್ಬರಿಂದ ಕೃತ್ಯ?

    ಬೆಂಗಳೂರು: ಸುಂಕದಕಟ್ಟೆ ಶಾಂತಿಧಾಮ ಕಾಲೇಜು ಗೋಡೆ, ರಸ್ತೆ ಮೇಲೆ Sorry ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಕೆಟಿಎಂ ಡ್ಯೂಕ್ ನಲ್ಲಿ ಬಂದ ಇಬ್ಬರು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಎಕ್ಸ್ ಕ್ಲೂಸೀವ್ ದೃಶ್ಯ ಪಬ್ಲಿಕ್ ಟಿವಿಗೆ ಲಭಿಸಿದೆ. ವೀಡಿಯೋದಲ್ಲಿ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಝೋಮ್ಯಾಟೊ ಬ್ಯಾಗ್ ಹಿಡಿದು ಇಬ್ಬರು ಕೆಟಿಎಂ ಡ್ಯೂಕ್ ಬೈಕಿನಲ್ಲಿ ಬಂದಿರುವುದನ್ನು ಕಾಣಬಹುದಾಗಿದೆ. ಈ ಇಬ್ಬರೇ ಎಲ್ಲಾ ಕಡೆ Sorry ಬರೆದಿದ್ದಾರೆ ಎಂದು ಶಂಕಿಸಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಇಬ್ಬರು ಬಂದಿದ್ದಾರೆ. ಅಲ್ಲದೆ ಬ್ಯಾಗ್ ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ರು. ಸ್ಪ್ರೇ ಮೂಲಕ Sorry ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಹಿಳೆಯನ್ನು ಗುದ್ದಿ ಕೊಂದ ಟಗರಿಗೆ 3 ವರ್ಷ ಜೈಲು ಶಿಕ್ಷೆ

    ರಸ್ತೆ, ಮನೆಯ ಕಾಂಪೌಂಡ್, ಗೋಡೆ, ಸ್ಕೂಲ್ ಮೆಟ್ಟಿಲು, ಸ್ಕೂಲ್ ಕಾಂಪೌಂಡ್ ಹೀಗೆ ಎಲ್ಲಾ ಕಡೆ Sorry ಅಂತಾ ಬರೆಯಲಾಗಿದೆ. ಸ್ಪ್ರೇ ಪೈಂಟ್ ನಲ್ಲಿ ಈ ರೀತಿ ಬರೆಯಲಾಗಿದೆ. ಮನೆಯ ಗೋಡೆಯೊಂದರ ಮೇಲೆ Sorry Ma, Sorry Pa ಅಂತಾ ಸಹ ಬರೆಯಲಾಗಿದೆ. ಮತ್ತೊಂದು ಕಡೆ ಹಾರ್ಟ್ ಸಿಂಬಲ್ ಸಹ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೇ ಈ ರೀತಿ ಹುಚ್ಚಾಟ ನಡೆಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

    ಇಡೀ ರಸ್ತೆಯಲ್ಲಿ Sorry ಬರೆದಿರೋ ದುಷ್ಕರ್ಮಿಗಳು, ಕಾಲೇಜು ಹೆಸರಿಗೆ ಮಸಿ ಬಳಿಯೋಕೆ ಮಾಡಿದ್ದಾರೆ ಅನ್ನೊ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಶಾಂತಿಧಾಮ ಕಾಲೇಜು ಪ್ರಾಂಶುಪಾಲರಿಂದ ಮಾಹಿತಿ ನೀಡಿದ್ದಾರೆ. ಸದ್ಯ Sorry ಎಂದು ಬರೆದಿರುವ ಸೂತ್ರದಾರನ ಹಿಂದೆ ಪೊಲೀಸರು ಬಿದ್ದಿದ್ದಾರೆ.

  • ಸ್ಕೂಲ್ ಮೆಟ್ಟಿಲು, ಕಾಂಪೌಂಡ್, ರಸ್ತೆಯಲ್ಲೆಲ್ಲಾ Sorry- ವ್ಯಕ್ತಿಗಾಗಿ ಪೊಲೀಸರು ಹುಡುಕಾಟ

    ಸ್ಕೂಲ್ ಮೆಟ್ಟಿಲು, ಕಾಂಪೌಂಡ್, ರಸ್ತೆಯಲ್ಲೆಲ್ಲಾ Sorry- ವ್ಯಕ್ತಿಗಾಗಿ ಪೊಲೀಸರು ಹುಡುಕಾಟ

    ಬೆಂಗಳೂರು: ಸಿಲಿಕಾನ್ ಸಿಟಿಯ ಶಾಲೆಯೊಂದರ ಮೆಟ್ಟಿಲು, ಕಾಂಪೌಂಡ್ ಹಾಗೂ ರಸ್ತೆಯುದ್ದಕ್ಕೂ Sorry ಎಂದು ಬರೆಯಲಾಗಿದ್ದು, ಇದೀಗ ಪೊಲೀಸರು ವ್ಯಕ್ತಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

    ಹೌದು, ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ತಡರಾತ್ರಿಯಲ್ಲಿ ಹುಚ್ಚಾಟ ಮೆರೆಯಲಾಗಿದೆ. ಅದ್ಯಾವ ಪುಣ್ಯಾತ್ಮ ಈ ಕೆಲಸ ಮಾಡಿದ್ದಾನೋ ಗೊತ್ತಿಲ್ಲ. ಸ್ಕೂಲ್ ನ ಕಾಂಪೌಂಡ್, ರಸ್ತೆ ಹೀಗೆ ಎಲ್ಲಾ ಕಡೆ Sorry ಅಂತಾ ಬರೆಯಲಾಗಿದೆ. ಇದನ್ನೂ ಓದಿ: ಬೆಳಗಾವಿಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಕ್ಕೆ

    ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಯಾರು ಮತ್ತು ಯಾಕೆ ಈ ರೀತಿ Sorry ಕೇಳಿರುವುದು ಎಂದು ಸ್ಥಳೀಯರು ಕೂಡ ತಲೆಕೆಡಿಸಿಕೊಂಡಿದ್ದಾರೆ. ಇತ್ತ ಪೊಲೀಸರು ಕೂಡ Sorry ಬರೆದ ವ್ಯಕ್ತಿ ಯಾರು ಎಂಬುದನ್ನು ಪತ್ತೆಹಚ್ಚಲು ಫೀಲ್ಡ್ ಗಿಳಿದಿದ್ದಾರೆ.

    ಒಟ್ಟನಲ್ಲಿ ಇದೀಗ ರಸ್ತೆ, ಕಾಂಪೌಂಡ್ ಹಾಗೂ ಕಾಲೇಜ್ ಬಳಿ Sorry ಕೇಳಿದವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

  • ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ- ಕ್ಷಮೆಯಾಚಿಸಲ್ಲ

    ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ- ಕ್ಷಮೆಯಾಚಿಸಲ್ಲ

    ನವದೆಹಲಿ: ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು, ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

    ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸತ್ಯ ಹೇಳಿದ್ದರ ಕುರಿತು ನಾನೆಂದೂ ಕ್ಷಮೆಯಾಚಿಸುವುದಿಲ್ಲ. ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ. ನಾನೂ ಕ್ಷಮೆಯಾಚಿಸುವುದಿಲ್ಲ, ಕಾಂಗ್ರೆಸ್‍ನ ಯಾವ ನಾಯಕರೂ ಈ ರೀತಿ ಕ್ಷಮೆಯಚಿಸುವುದಿಲ್ಲ ಎಂದರು.

    ಕ್ಷಮೆ ಕೇಳಬೇಕಿರುವುದು ನಾನಲ್ಲ. ದೇಶದ ಆರ್ಥಿಕತೆಯನ್ನು ನಾಶಪಡಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಹಾಯಕ ಅಮಿತ್ ಶಾ ಕ್ಷಮೆಯಾಚಿಸಬೇಕು. ಲೋಕಸಭೆಯ ಅಧಿವೇಶನದಲ್ಲಿಯೂ ನಾನು ಈ ಕುರಿತು ಸ್ಪಷ್ಟಪಡಿಸಿದ್ದೇನೆ. ನಾನು ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ತಿರಸ್ಕರಿಸಿದರು.

    ತಮ್ಮ ಹೇಳಿಕೆ ಕುರಿತು ಲೋಕಸಭೆಯ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ಯಾವುದೇ ಪತ್ರಿಕೆಗಳನ್ನು ತೆರೆದು ನೋಡಿದರೂ ಅದರಲ್ಲಿ ಬಹುತೇಕ ಅತ್ಯಾಚಾರದ ಸುದ್ದಿಗಳೇ ಕಣ್ಣಿಗೆ ಕಾಣುತ್ತವೆ. ಹೀಗಾಗಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಆಗಿದೆ ಎಂದು ಹೇಳಿಕೆ ನೀಡಿದೆ ಎಂದರು.

    ಜಾರ್ಖಂಡ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಮಾತನಾಡಿದ್ದ ಅವರು, ಪ್ರಧಾನಿ ಮೋದಿ ಮೇಕ್ ಇಂಡಿಯಾ ಎಂದು ಹೇಳುತ್ತಾರೆ. ಆದರೆ ದೇಶದಲ್ಲಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆಡಳಿತ ಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದವು. ಅಲ್ಲದೆ ಈ ಕುರಿತು ಲೋಕಸಭೆಯಲ್ಲಿ ಸಹ ಪಟ್ಟು ಹಿಡಿಯುವ ಮೂಲಕ ಗದ್ದಲ ಎಬ್ಬಿಸಲಾಗಿತ್ತು.

  • ಹೌಡಿ ಮೋದಿ – ಯುಎಸ್ ಸಂಸದನ ಪತ್ನಿ ಬಳಿ ಕ್ಷಮೆ ಕೇಳಿದ ಪ್ರಧಾನಿ

    ಹೌಡಿ ಮೋದಿ – ಯುಎಸ್ ಸಂಸದನ ಪತ್ನಿ ಬಳಿ ಕ್ಷಮೆ ಕೇಳಿದ ಪ್ರಧಾನಿ

    ಹ್ಯೂಸ್ಟನ್: ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಯುಎಸ್ ಟಕ್ಸಾಸ್‍ನ ಸೆನೆಟರ್(ಸಂಸದ) ಜಾನ್ ಕಾರ್ನಿನ್ ಅವರ ಪತ್ನಿಯ ಜನ್ಮದಿನದಂದು ಕ್ಷಮೆಯಾಚಿಸಿದ್ದಾರೆ.

    60ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಕಾರ್ನಿನ್ ಅವರ ಪತ್ನಿ ಸ್ಯಾಂಡಿಯವರನ್ನು ನೇರವಾಗಿ ಉದ್ದೇಶಿಸಿ ಅವರ ಬಳಿ ಮೋದಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ಸಮೃದ್ಧ ಹಾಗೂ ಶಾಂತಿಯುತ ಭವಿಷ್ಯ ನಿಮ್ಮದಾಗಲೆಂದು ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಟ್ವೀಟ್ ಮಾಡಿದೆ.

    ನಾನು ಕ್ಷಮೆ ಕೇಳಲು ಬಯಸುತ್ತೇನೆ, ಏಕೆಂದರೆ ಇಂದು ನಿಮ್ಮ ಜನ್ಮದಿನ ಮತ್ತು ನಿಮ್ಮ ಉತ್ತಮ ಜೀವನ ಸಂಗಾತಿ ನನ್ನೊಂದಿಗಿದ್ದಾರೆ. ಆದ್ದರಿಂದ ಸ್ವಾಭಾವಿಕವಾಗಿ ನಿಮಗೆ ಜಲಸ್ ಆಗಿರಬೇಕು ಎಂದು ಮೋದಿ ಹೇಳಿದ್ದಾರೆ. ಆಗ ಮೋದಿ ಪಕ್ಕದಲ್ಲೇ ಇದ್ದ 67 ವರ್ಷದ ಸೆನೆಟರ್ ಮೋದಿಯವರನ್ನು ನೋಡಿ ಮುಗುಳುನಕ್ಕಿದ್ದಾರೆ.

    ನಿಮಗೆ ಶುಭ ಹಾರೈಸುತ್ತೇನೆ, ಸಂತೋಷದ, ಸಮೃದ್ಧಯುತ ಶಾಂತಿಯ ಭವಿಷ್ಯ ನಿಮ್ಮದಾಗಲಿ ಎಂದು ಬಯಸುತ್ತೇನೆ. ಆಲ್ ದಿ ಬೆಸ್ಟ್ ಎಂದು ಹೇಳಿದ್ದಾರೆ. ಈ ದಂಪತಿಗೆ ಮದುವೆಯಾಗಿ 40 ವರ್ಷಗಳಾಗಿದ್ದು, ಇಬ್ಬರು ಹೆಣ್ಣುಮಕ್ಕಳಿದ್ದಾರೆ.

    ಭಾನುವಾರ ಹ್ಯೂಸ್ಟನ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದರು. ಅಲ್ಲದೆ, 50 ಸಾವಿರ ಭಾರತೀಯ ಅಮೆರಿಕನ್ನರ ದಾಖಲೆಯ ಜನಸಮೂಹವನ್ನುದ್ದೇಶಿಸಿ ಭಾಷಣ ಮಾಡಿದ್ದರು.

  • ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷಮೆ

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷಮೆ

    ಹಾವೇರಿ: ಜಿಲ್ಲೆಯ ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಕ್ಷಮೆ ಕೇಳಿದ್ದಾರೆ.

    ಬಿ.ಸಿ.ಪಾಟೀಲ್ ಅವರು ಮಂತ್ರಿ ಸ್ಥಾನ ಕೊಡದೇ ಪಕ್ಷ ತಾಲೂಕಿಗೆ ಅನ್ಯಾಯ ಮಾಡಿದೆ ಎಂಬ ಸಂದೇಶವನ್ನ ಹಾಕಿದ್ದು, ವಾಟ್ಸಪ್ ಗ್ರೂಪ್ ಮೂಲಕ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ. ನಿಮ್ಮ ಸಲಹೆ ಸೂಚನೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳತ್ತೇನೆ ಎಂಬ ಸಂದೇಶವನ್ನ ತಾಲೂಕಿನ ಕಾರ್ಯಕರ್ತರಿಗೆ ರವಾನಿಸಿದ್ದಾರೆ.

    ಸಂದೇಶ:
    ಆತ್ಮೀಯ ಬಂಧುಗಳೇ ರಾಜಕೀಯ ಗೊತ್ತಿಲ್ಲದ ನನಗೆ ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದಾಗ ಮೂರು ಬಾರಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದೀರಿ. ಇದುವರೆಗೂ ನಾನು ನನ್ನ ಕೈಲಾದ ಅಭಿವೃದ್ಧಿ ಕೆಲಸವನ್ನು ಸರ್ಕಾರದಿಂದ ಮಾಡಿ ತಾಲೂಕು ಅಭಿವೃದ್ಧಿಯ ಕಡೆಗೆ ದಾಪುಗಾಲಿಟ್ಟಿದೆ. ಈಗ ತಮ್ಮೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ತಾಲೂಕಿಗೆ ಸಾಕಷ್ಟು ಅನ್ಯಾಯವನ್ನು ಮಾಡಿ ಕಾಂಗ್ರೆಸ್ ಪಕ್ಷ ಬೇರೆಯವರಿಗೆ ಮಂತ್ರಿ ಪದವಿಯನ್ನು ಕೊಟ್ಟು ನಮ್ಮ ತಾಲೂಕಿಗೆ ದೊಡ್ಡ ದ್ರೋಹವನ್ನು ಮಾಡಿದೆ. ಇದರಿಂದಾಗಿ ಸರ್ವತೋಮುಖ ಅಭಿವೃದ್ಧಿಗೆ ಕುಂಠಿತವಾಗುತ್ತದೆ.

    ಅಲ್ಲದೆ ಮುಂದಿನ ತಾಲೂಕಿನ ಬೃಹತ್ ಭವಿಷ್ಯವನ್ನು ನೆನೆದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದೇನೆ. ತಮ್ಮ ಕ್ಷಮೆ ಇರಲಿ, ಮುಂದಿನ ದಿನಗಳಲ್ಲಿ ತಮ್ಮ ಸಲಹೆ ಸೂಚನೆಗಳನ್ನು ಪಡೆದು ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಸದಾ ನಿಮ್ಮ ಆಶೀರ್ವಾದ ಬೇಕೆಂದು ಕೇಳಿ ಮತ್ತೊಮ್ಮೆ ತಮ್ಮಲ್ಲಿ ಕ್ಷಮೆಯನ್ನು ಕೇಳಿ ತಮ್ಮ ಆಶೀರ್ವಾದವನ್ನು ಬೇಡುತ್ತಿದ್ದೇನೆ ಇಂತಿ ನಿಮ್ಮ ವಿಶ್ವಾಸಿ ಬಿ.ಸಿ ಪಾಟೀಲ್ ಎಂದು ವಾಟ್ಸಪ್ ಗ್ರೂಪಿಗೆ ಸಂದೇಶ ರವಾನೆ ಮಾಡಿದ್ದಾರೆ.

    ವಾಪಸ್ ಪಡೆಯಲ್ಲ: ಕಳೆದ ದಿನ ರಾಜೀನಾಮೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆಯನ್ನು ವಾಪಸ್ಸ್ ಪಡೆಯುವುದಿಲ್ಲ. ಮುಂದೆ ಏನಾಗಬೇಕು, ಎನು ಮಾಡಬೇಕು ಅನ್ನೋ ಚರ್ಚೆ ಆಗಿಲ್ಲ. ಮುಂದೆ ಏನಾಗುತ್ತೆ ಕಾದುನೋಡೋಣ. ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಕೇಳಿದ್ದೇನೆ. ಕ್ಷೇತ್ರಕ್ಕೆ ಅನ್ಯಾಯವಾದ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಅವರು ಸಹ ಸಹಮತ ನೀಡಿದ್ದಾರೆ. ನಾವೆಲ್ಲ ಮುಂಬೈನಲ್ಲಿ ಇದ್ದೇವೆ. ಬಿಜೆಪಿಗೆ ಹೋಗುವ ಬಗ್ಗೆ ಚರ್ಚೆ ಆಗಿಲ್ಲ. ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಪಬ್ಲಿಕ್ ಟಿವಿಗೆ ದೂರವಾಣಿ ಮೂಲಕ ಬಿಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

  • ಅಣ್ಣನ ತಪ್ಪಿಗೆ ಕ್ಷಮೆ ಕೇಳಿದ ಸಿಎಂ!

    ಅಣ್ಣನ ತಪ್ಪಿಗೆ ಕ್ಷಮೆ ಕೇಳಿದ ಸಿಎಂ!

    ಬೆಂಗಳೂರು: ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಸುಮಲತಾ ಅಂಬರೀಶ್ ಅವರ ಬಗ್ಗೆ ಕೊಟ್ಟ ಹೇಳಿಕೆಗೆ ಸ್ವತಃ ಸಿಎಂ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ.

    ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಅವರು ಪುಟಾಣಿ ಮಕ್ಕಳಿಗೆ ಲಸಿಕೆ ಹಾಕೋ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇವಣ್ಣ ಅವರು ಸುಮಲತಾ ಅವರ ವಿರುದ್ಧ ಮಾತನಾಡಿಲ್ಲ. ಅವರನ್ನು ಟೀಕಿಸಿಲ್ಲ. ರೇವಣ್ಣ ಬಳಿ ನಾನು ಈ ಬಗ್ಗೆ ಮಾತನಾಡಿ, ಯಾಕೆ ಈ ಹೇಳಿಕೆ ನೀಡಿದಿರಿ ಅಂತ ಕೇಳಿದ್ದೇನೆ. ಸುಮಲತಾ ಅವರು ಅಂಬರೀಶ್ ಅವರು ಅಗಲಿರುವ ನೋವಿನಲ್ಲಿದ್ದಾರೆ. ಈ ನಡುವೆ ರಾಜಕೀಯ ಬೇಡವಾಗಿತ್ತು ಎನ್ನುವ ದೃಷ್ಟಿಯಲ್ಲಿ ಹೇಳಿದ್ದು ಅಷ್ಟೆ. ಆದರೆ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ರೇವಣ್ಣ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಮಹಿಳೆಯರಿಗೆ ಗೌರವ ಕೊಡುವ ಕುಟುಂಬ. ಯಾವ ಹೆಣ್ಣು ಮಕ್ಕಳಿಗೂ ನಾವು ಅವಮಾನ ಮಾಡಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ.

    ರೇವಣ್ಣ ಅವರು ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು ಅಂತ ಹೇಳಿಕೆಗೆ ಅಂಬಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಬಿಜೆಪಿ ನಾಯಕರು ಕೂಡ ರೇವಣ್ಣ ಹೇಳಿಕೆಯನ್ನು ಖಂಡಿಸಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಬಹುತೇಕ ಜನರು ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿ, ದೇವೇಗೌಡರು ಕುಟುಂಬ ರಾಜಕೀಯ ಮಾಡುತ್ತಿದ್ದಾರೆ ಅಂತ ಆರೋಪಗಳನ್ನೂ ಕೂಡ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪ್ರೇಯಸಿಗಾಗಿ 300 Sorry ಬ್ಯಾನರ್ ಗಳನ್ನು ರಸ್ತೆ ತುಂಬೆಲ್ಲಾ ಹಾಕ್ದ!

    ಪ್ರೇಯಸಿಗಾಗಿ 300 Sorry ಬ್ಯಾನರ್ ಗಳನ್ನು ರಸ್ತೆ ತುಂಬೆಲ್ಲಾ ಹಾಕ್ದ!

    ಪುಣೆ: ಪ್ರೇಯಸಿ ಮುನಿಸಿಕೊಂಡರೆ ಪ್ರಿಯತಮ ಏನೇನೋ ಉಪಾಯ ಮಾಡಿ ಆಕೆಯನ್ನು ಒಲಿಸಿಕೊಳ್ಳುತ್ತಾನೆ. ಆದರೆ ಇಲ್ಲೊಬ್ಬ ಪ್ರೇಮಿ ಮುನಿಸಿಕೊಂಡಿದ್ದ ಪ್ರೇಯಸಿಯನ್ನು ಒಲಿಸಿಕೊಳ್ಳಲು ಬರೋಬ್ಬರಿ 300 ಸಾರಿ ಬ್ಯಾನರ್ ಗಳನ್ನು ರಸ್ತೆಯಲ್ಲಿ ಹಾಕಿದ್ದಾನೆ.

    ನಿಲೇಶ್ ಖೇಡೇಕರ್ ರಸ್ತೆಯಲ್ಲಿ ಬ್ಯಾನರ್ ಹಾಕಿದ ಪ್ರೇಮಿ. ನಿಲೇಶ್ ಓರ್ವ ಉದ್ಯಮಿ ಆಗಿದ್ದು, ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ ನಲ್ಲಿ ಪ್ರದೇಶದಲ್ಲಿ ಮುನಿಸಿಕೊಂಡಿದ್ದ ಪ್ರೇಯಸಿಯನ್ನು ಒಲಿಸಿಕೊಳ್ಳಲು ಸಾರಿ ಬ್ಯಾನರ್ ಹಾಕುವುದರ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.

    ಶುಕ್ರವಾರ ಪಿಂಪ್ರಿ ಚಿಂಚ್ವಾಡ್ ಜನರು ಎಂದಿನಂತೆ ಎದ್ದು ತಮ್ಮ ಕೆಲಸ ಕಾರ್ಯಗಳಿಗೆ ಹೋಗುತ್ತಿದ್ದರು. ಆಗ ರಸ್ತೆಯಲ್ಲಿ ಬಿತ್ತಿ ಪತ್ರ ಹಾಗೂ ಬ್ಯಾನರ್ ಕಣ್ಣಿಗೆ ಬಿದ್ದಿವೆ. ಬ್ಯಾನರ್ ಮೇಲೆ ಐ ಯಮ್ ಸಾರಿ (ನನ್ನನು ಕ್ಷಮಿಸು) ಎಂದು ಬರೆದಿದೆ. ಜೊತೆಗೆ ಅದರ ಪಕ್ಕ ಕೆಂಪು ಬಣ್ಣದ ಹೃದಯವನ್ನು ಸಹ ಬಿಡಿಸಲಾಗಿದೆ.

    ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದಕ್ಕೆ ಉದ್ಯಮಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ನಿಲೇಶ್ ಪರಾರಿಯಾಗಿದ್ದು, ಬ್ಯಾನರ್ ಹಾಕಲು ಸಹಾಯ ಮಾಡಿದ್ದ ಗೆಳೆಯ ವಿಲಾಸ್ ಸಿಂಧೆ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ನಿಲೇಸ್ ಮತ್ತು ಆತನ ಪ್ರೇಮಿ ಮಧ್ಯ ಯಾವುದೋ ವಿಚಾರಕ್ಕೆ ಜಗಳವಾಗಿತ್ತು. ಪ್ರೇಯಸಿಯನ್ನ ಒಲಿಸಿಕೊಳ್ಳಲು ಖೇಡಕರ್ ಬ್ಯಾರನ್ ಉಪಾಯವನ್ನು ಮಾಡಿ, ಗೆಳೆತಿ ಸಂಚರಿಸುವ ಮಾರ್ಗದ ಬದಿಯಲ್ಲಿ ಬ್ಯಾನರ್ ಹಾಕುವ ಮೂಲಕ ಕ್ಷಮೆ ಕೇಳಿದ್ದಾರೆ. ಬ್ಯಾನರ್ ಗಳಿಗಾಗಿ ನಿಲೇಶ್ 72 ಸಾವಿರ ರೂಪಾಯಿ ಖರ್ಚು ಮಾಡಿದ್ದು, ಪ್ರತಿ ಬ್ಯಾನರ್ ನಲ್ಲಿ `I Am Sorry ‘ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ನಿಲೇಶ್ ಖೇಡೇಕರ್ ವಿರುದ್ಧ ಅಕ್ರಮ ಹೋರ್ಡಿಂಗ್ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಆರೋಪದ ಮೇಲೆ ದೂರು ದಾಖಲಿಸಿದ್ದು, ಈ ಬಗ್ಗೆ ನಗರಾಡಳಿಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೈವ್ ಟೆಲಿಕಾಸ್ಟ್ ಮಾಡ್ತಿರುವಾಗ್ಲೇ ರಿಪೋರ್ಟರ್ ಗೆ ಕಿಸ್!- ವಿಡಿಯೋ ವೈರಲ್

    ಲೈವ್ ಟೆಲಿಕಾಸ್ಟ್ ಮಾಡ್ತಿರುವಾಗ್ಲೇ ರಿಪೋರ್ಟರ್ ಗೆ ಕಿಸ್!- ವಿಡಿಯೋ ವೈರಲ್

    ಮಾಸ್ಕೋ: ಲೈವ್ ಟೆಲಿಕಾಸ್ಟ್ ಮಾಡುವಾಗಲೇ ಮಹಿಳಾ ರಿಪೋರ್ಟರ್ ಗೆ ವ್ಯಕ್ತಿಯೊಬ್ಬ ಕಿಸ್ ಕೊಡಲು ಮುಂದಾಗಿದ್ದ ಘಟನೆ ರಷ್ಯಾದಲ್ಲಿ ನಡೆದಿದೆ.

    ಕಿಸ್ ಕೊಡಲು ಮುಂದಾಗಿದ್ದ ವ್ಯಕ್ತಿಯನ್ನು ರಷ್ಯಾ ಫುಟ್‍ ಬಾಲ್ ಅಭಿಮಾನಿ ಎಂದು ಗುರುತಿಸಲಾಗಿದೆ. ಆತ ಕೊಲಂಬಿಯಾದ ಪತ್ರಕರ್ತೆಗೆ ಮುತ್ತು ಕೊಡಲು ಮುಂದಾಗಿದ್ದನು. ಕೆಲವು ದಿನಗಳ ನಂತರ ಆತ ತನ್ನ ವರ್ತನೆಯ ಬಗ್ಗೆ ಅರಿತುಕೊಂಡು ಪತ್ರಕರ್ತೆ ಬಳಿ ಕ್ಷಮೆಯಾಚಿಸಿದ್ದಾನೆ.

    ನಡೆದಿದ್ದೇನು?:
    ಭಾನುವಾರ ಬ್ರೆಜಿಲಿಯನ್ ಪತ್ರಕರ್ತೆ ಜುಲಿಯಾ ಗಿಮಾರಾಸ್ ಅವರು ಮತ್ತೊಬ್ಬ ಮಹಿಳಾ ವರದಿಗಾರರೊಂದಿಗೆ ರಷ್ಯಾದ ಯೆಕಟೇನ್ಬರ್ಗ್ ಅರೆನಾದ ಹೊರಗೆ ನೇರ ಪ್ರಸಾರ ಮಾಡುತ್ತಿದ್ದರು.

    ಈ ವೇಳೆ ಒಬ್ಬ ವ್ಯಕ್ತಿ ಬಂದು ಜುಲಿಯಾ ಅವರಿಗೆ ಕಿಸ್ ಮಾಡಲು ಪ್ರಯತ್ನಿಸಿದ್ದಾನೆ. ಆಗ ಜುಲಿಯಾ ಆತನನ್ನು ತಳ್ಳಿ ಬೈಯುತ್ತಾರೆ. “ಇದನ್ನು ಮಾಡಬೇಡಿ!. ಇದಕ್ಕೆ ನಾನು ಅನುಮತಿಸುವುದಿಲ್ಲ, ಎಂದಿಗೂ ಇಂತಹ ಘಟನೆ ಸರಿ ಇಲ್ಲ. ನನಗೆ ಈ ರೀತಿಯ ವರ್ತನೆ ಇಷ್ಟ ಆಗಲ್ಲ” ಎಂದು ಹೇಳಿದ್ದಾರೆ. ಈ ವೇಳೆ ಆತ ತಕ್ಷಣ ಕ್ಷಮಿಸಿ ಎಂದು ರಿಪೋರ್ಟರ್ ಬಳಿ ಕ್ಷಮೆಯಾಚಿಸಿದ್ದಾನೆ.

    ಇದೊಂದು ಅವಮಾನಕರವಾದ ಘಟನೆ. ಅದೃಷ್ಟವಶಾತ್ ಇದು ಬ್ರೆಜಿಲ್ ನಲ್ಲಿ ಎಂದಿಗೂ ನಡೆದಿರಲಿಲ್ಲ. ರಷ್ಯಾದಲ್ಲಿ ಈ ತರಹದ ಘಟನೆ ಎರಡು ಬಾರಿ ಸಂಭವಿಸಿದೆ. ಇದು ಅವಮಾನಕರ ಎಂದು ರಿಪೋರ್ಟರ್ ಜುಲಿಯಾ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಕೊಲಂಬಿಯಾದ ಪತ್ರಕರ್ತೆ ಜೂಲಿಯೆತ್ ಗೊನ್ಜಾಲೆಜ್ ಥೇರನ್ ಅವರು ನೇರ ಪ್ರಸಾರ ಮಾಡುತ್ತಿದ್ದಾಗ ಫುಟ್ಬಾಲ್ ಅಭಿಮಾನಿಯೋರ್ವ ಕಿಸ್ ಮಾಡಿದ್ದನು. ಅಂದು ಆ ಘಟನೆಯನ್ನು ಅನೇಕ ಜನರು ಲೈಂಗಿಕ ಕಿರುಕುಳ ಎಂದು ಆಪಾದನೆ ಮಾಡಿದ್ದರು.