Tag: sourav ganguly

  • ಇಬ್ಬರು ಲೆಗ್‍ಸ್ಪಿನ್ನರ್ಸ್ ಟೀಂ ಇಂಡಿಯಾದಲ್ಲಿ ಅಗತ್ಯವಿಲ್ಲ: ಸೌರವ್ ಗಂಗೂಲಿ

    ಇಬ್ಬರು ಲೆಗ್‍ಸ್ಪಿನ್ನರ್ಸ್ ಟೀಂ ಇಂಡಿಯಾದಲ್ಲಿ ಅಗತ್ಯವಿಲ್ಲ: ಸೌರವ್ ಗಂಗೂಲಿ

    ಕೋಲ್ಕತ್ತಾ: ಸಿಮೀತ ಮಾದರಿಯ ಕ್ರಿಕೆಟಿನಲ್ಲಿ ಟೀಂ ಇಂಡಿಯಾ ಮತ್ತಷ್ಟು ಬಲಿಷ್ಠವಾಗಿರಬೇಕಾದರೆ ತಂಡಕ್ಕೆ ಸ್ಪಿನ್ನರ್ ಗಳಾದ ಕುಲ್ದೀಪ್ ಯಾದವ್, ಯಜುವೇಂದ್ರ ಚಹಲ್‍ರನ್ನು ಆಯ್ಕೆ ಮಾಡಬೇಕಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಅಭಿಪ್ರಾಯ ಪಟ್ಟಿದ್ದಾರೆ.

    ಸದ್ಯ ಯುವ ಆಟಗಾರರಿಗೆ ಪರೀಕ್ಷೆ ನಡೆಸುವ ಉದ್ದೇಶದಿಂದ ಚಹಲ್‍ಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೇ ತಂಡದ ಬ್ಯಾಟಿಂಗ್ ಲೈನ್ ಬಲಿಷ್ಠ ಪಡಿಸುವ ಉದ್ದೇಶದಿಂದ ಪ್ರಯೋಗಕ್ಕೆ ಮುಂದಾಗಿದೆ. ಆದರೆ ಸಿಮೀತ ಮಾದರಿ ಕ್ರಿಕೆಟಿಗೆ ಚಹಲ್ ಅಗತ್ಯವಿದ್ದು, ಮುಂದಿನ ವರ್ಷ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಕುಲ್ದೀಪ್ ಯಾದವ್ ಹಾಗೂ ಚಹಲ್ ತಂಡದಲ್ಲಿರುವುದು ಅಗತ್ಯವಿದೆ ಎಂದಿದ್ದಾರೆ.

    ಟಿ20 ಟೂರ್ನಿಯಲ್ಲಿ ತಂಡದ ನಾಯಕರಾಗಿ ಕೊಹ್ಲಿ ಮಹತ್ವದ ಪಾತ್ರವಹಿಸುತ್ತಾರೆ. ಆದರೆ ಟೀಂ ಇಂಡಿಯಾಗೆ ಲೆಗ್ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ, ಕೃಣಾಲ್ ಪಾಂಡ್ಯ ಇಬ್ಬರು ಅಗತ್ಯವಿಲ್ಲ. ಇಬ್ಬರಲ್ಲಿ ಒಬ್ಬರಿದ್ದರೆ ಸಾಕು. ಇಬ್ಬರನ್ನು ಒಂದೇ ಪಂದ್ಯದಲ್ಲಿ ಕಣಕ್ಕಿಸುವ ಅಗತ್ಯತೆಯ ಅಂಶವನ್ನು ಆಯ್ಕೆ ಸಮಿತಿ ಗಮನಿಸಬೇಕಿದೆ ಎಂದು ಸೌರವ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೂರ್ನಿಯಲ್ಲಿ ತಂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

  • ಟೀಂ ಇಂಡಿಯಾ ಕೋಚ್ ಆಗ್ತೇನೆ: ಸೌರವ್ ಗಂಗೂಲಿ

    ಟೀಂ ಇಂಡಿಯಾ ಕೋಚ್ ಆಗ್ತೇನೆ: ಸೌರವ್ ಗಂಗೂಲಿ

    ನವದೆಹಲಿ: ಟೀಂ ಇಂಡಿಯಾ ಮುಖ್ಯ ಕೋಚ್ ಹಾಗೂ ಸಹಾಯಕ ಕೋಚ್‍ಗಳ ಆಯ್ಕೆಗೆ ಬಿಸಿಸಿಐ ಸಿದ್ಧತೆ ನಡೆಸಿದೆ. ಇತ್ತೀಚೆಗಷ್ಟೇ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರತಿಕ್ರಿಯೆ ಕೂಡ ಮುಕ್ತಾಯವಾಗಿದೆ. ಇದುವರೆಗೂ ಭಾರತ, ನ್ಯೂಜಿಲೆಂಡ್, ಶ್ರೀಲಂಕಾ ಸೇರಿದಂತೆ ವಿವಿಧ ದೇಶದ ಮಾಜಿ ಆಟಗಾರರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಭಾರತದಿಂದ ರಾಬಿನ್ ಸಿಂಗ್, ಲಾಲ್ ಚಂದ್ ರಾಜಪೂತ್ ಅವರು ಈ ಪಟ್ಟಿಯಲ್ಲಿದ್ದಾರೆ.

    ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಾವು ಖಂಡಿತಾ ತಂಡದ ಕೋಚ್ ಆಗಲು ಬಯಸುತ್ತೇನೆ ಎಂದಿದ್ದಾರೆ. ಸದ್ಯ ಕೋಚ್ ಪದವಿ ಪಡೆಯಲು ಸಾಧ್ಯವಿಲ್ಲ, ಆದರೆ ಮುಂದಿನ ಅವಧಿಯಲ್ಲಿ ತಂಡ ಕೋಚ್ ಆಗಲು ಇಷ್ಟಪಡುತ್ತೇನೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

    ನನಗೆ ಟೀಂ ಇಂಡಿಯಾ ಕೋಚ್ ಕರ್ತವ್ಯವನ್ನು ನಿರ್ವಹಿಸಲು ಆಸಕ್ತಿ ಇದೆ. ಆದರೆ ಈ ಸಮಯ ಕೋಚ್ ಆಗಲು ಸೂಕ್ತವಲ್ಲ. ನಾನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಭವಿಷ್ಯದಲ್ಲಿ ಕೋಚ್ ಆಗುತ್ತೇನೆ ಎಂದಿದ್ದಾರೆ. ಆದರೆ ತಂಡದ ಕೋಚ್ ಆಗಿರುವ ರವಿಶಾಸ್ತ್ರಿ ಅವರನ್ನು ಮುಂದುವರಿಸುವ ಬಗ್ಗೆ ಕಾಮೆಂಟ್ ಮಾಡಲು ನಿರಾಕರಿಸಿದ್ದಾರೆ.

    ಬಂಗಾಳ ಕ್ರಿಕೆಟ್ ಆಸೋಸಿಯೇಷನ್, ಐಪಿಎಲ್, ಕ್ರಿಕೆಟ್ ವಿಶ್ಲೇಷಣೆಯಲ್ಲಿ ಸೌರವ್ ಗಂಗೂಲಿ ಬ್ಯುಸಿಯಾಗಿದ್ದಾರೆ. ಈ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ ಬಳಿಕ ನಾನು ಕೂಡ ಕೋಚ್ ರೇಸ್‍ನಲ್ಲಿ ಇರುತ್ತೇನೆ. ಮುಂದಿನ ಸಮಯದಲ್ಲಿ ಟೀಂ ಇಂಡಿಯಾ ತಂಡದ ಕೋಚ್ ಆಗುವುದು ಖಂಡಿತಾ ಎಂದು ಹೇಳಿದ್ದಾರೆ.

  • ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

    ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

    ನವದೆಹಲಿ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಆಯ್ಕೆ ಆಗದ್ದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಆಗಸ್ಟ್ 2 ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಮೂರು ಮಾದರಿಯ ಸರಣಿಯನ್ನು ಆಡಲು ತೆರಳಲಿದ್ದು, ಆಗಲೇ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದ ಆಯ್ಕೆ ಸಮಿತಿಯೂ ಆಟಗಾರರನ್ನು ಕಳೆದ ಭಾನುವಾರ ಆಯ್ಕೆ ಮಾಡಿದೆ.

    ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಏಕದಿನ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ಶುಭಮನ್ ಗಿಲ್ ಇಲ್ಲದಿರವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ “ಎಲ್ಲಾ ಮಾದರಿಯಲ್ಲೂ ಆಡಬಲ್ಲ ಅನೇಕ ಆಟಗಾರರು ತಂಡದಲ್ಲಿ ಇದ್ದಾರೆ. ಆದರೆ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಏಕದಿನ ತಂಡದಲ್ಲಿ ಇಲ್ಲದಿರುವುದು ಆಶ್ಚರ್ಯ” ಎಂದು ಬರೆದುಕೊಂಡಿದ್ದಾರೆ.

    ಜೊತೆಗೆ ಬಿಸಿಸಿಐನ್ನು ಟ್ಯಾಗ್ ಮಾಡಿ ಇನ್ನೊಂದು ಟ್ವೀಟ್ ಮಾಡಿದ್ದು, ಭಾರತದ ಆಯ್ಕೆ ಸಮಿತಿಯೂ ಆಟಗಾರರ ಲಯ ಮತ್ತು ಆತ್ಮವಿಶ್ವಾಸ ನೋಡಿಕೊಂಡು ಎಲ್ಲಾ ಮಾದರಿಯ ಪಂದ್ಯಗಳಿಗೂ ಒಂದೇ ಆಟಗಾರರನ್ನು ಆಯ್ಕೆ ಮಾಡುವ ಸಮಯ ಬಂದಿದೆ. ಭಾರತದಲ್ಲಿ ಕೆಲ ಆಟಗಾರರು ಮಾತ್ರ ಎಲ್ಲಾ ಸ್ವರೂಪಗಳಲ್ಲಿ ಆಡುತ್ತಿದ್ದಾರೆ. ದೊಡ್ಡ ದೊಡ್ಡ ತಂಡಗಳು ಸ್ಥಿರ ಆಟಗಾರರನ್ನು ಹೊಂದಿರಬೇಕು. ಈ ಆಯ್ಕೆ ಎಲ್ಲರನ್ನು ಸಂತೋಷಪಡಿಸುವುದರ ಬದಲು ದೇಶಕ್ಕಾಗಿ ಮತ್ತು ಸ್ಥಿರ ಪ್ರದರ್ಶನಕ್ಕಾಗಿ ಇರಬೇಕು ಎಂದು ಬರೆದುಕೊಂಡಿದ್ದಾರೆ.

    ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ-20, ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡಗಳನ್ನು ಭಾನುವಾರ ಪ್ರಕಟಿಸಿದೆ. ಆದರೆ ಭಾರತ ಎ ಮತ್ತು ವೆಸ್ಟ್ ಇಂಡೀಸ್ ಎ ನಡುವೆ ಇತ್ತೀಚೆಗೆ ಮುಕ್ತಾಯಗೊಂಡ ಐದು ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಶುಭಮನ್ ಗಿಲ್ ಅವರನ್ನು ಏಕದಿನ ತಂಡದಿಂದ ಕೈಬಿಟ್ಟ ಬಗ್ಗೆ ಅನೇಕ ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

    ಇದರ ಜೊತೆ ಭಾರತ ತಂಡದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಯಾವ ಆಟಗಾರರ ಆಡಬೇಕು ಎಂಬ ಗೊಂದಲದ ನಡುವೇ ಬಿಸಿಸಿಐನ ಮಾಜಿ ಕಾರ್ಯದರ್ಶಿ ಸಂಜಯ್ ಜಗದಾಳೆ ಅವರು ಏಕದಿನ ತಂಡದಲ್ಲಿ 4ನೇ ಕ್ರಮಾಂಕಕ್ಕೆ ಅಜಿಂಕ್ಯ ರಹಾನೆ ಅವರು ಸೂಕ್ತ ಎಂದು ಹೇಳಿದ್ದರು.

    ಈ ಎಲ್ಲಾ ಗೊಂದಲಗಳ ನಡುವೇ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟಗೊಂಡಿದ್ದು ತಂಡಗಳು ಇಂತಿವೆ.

    ಟೆಸ್ಟ್ ತಂಡ:
    ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಉಮೇಶ್ ಯಾದವ್.

    ಏಕದಿನ ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

    ಟಿ-20 ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

  • ರೋಹಿತ್, ರಾಹುಲ್ ಭರ್ಜರಿ ಶತಕ – ಲಂಕಾ ವಿರುದ್ಧ 7 ವಿಕೆಟ್ ಭರ್ಜರಿ‌‌ ಜಯ

    ರೋಹಿತ್, ರಾಹುಲ್ ಭರ್ಜರಿ ಶತಕ – ಲಂಕಾ ವಿರುದ್ಧ 7 ವಿಕೆಟ್ ಭರ್ಜರಿ‌‌ ಜಯ

    ಲೀಡ್ಸ್: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಂತಿಮ ಲೀಗ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧ 7 ವಿಕೆಟ್ ಗೆಲುವು ಪಡೆದಿದೆ. ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಭಾರತ ಗೆಲುವಿಗೆ ಕಾರಣರಾದರು.

    ಶ್ರೀಲಂಕಾ ನೀಡಿದ 265 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 39 ಎಸೆತ ಬಾಕಿ ಇರುವಂತೆಯೇ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಪಂದ್ಯದಲ್ಲಿ ಮೊದಲ ವಿಕೆಟ್‍ಗೆ ರೋಹಿತ್ ಶರ್ಮಾ, ರಾಹುಲ್ ಜೋಡಿ 189 ರನ್ ಜೊತೆಯಾಟ ನೀಡಿದ್ದು, 2019ರ ವಿಶ್ವಕಪ್ ಕ್ರಿಕೆಟ್‍ನಲ್ಲಿ ಆಂಭಿಕರಾಗಿ 1 ಸಾವಿರ ಪ್ಲಸ್ ರನ್ ಸಿಡಿಸಿದ ಸಾಧನೆ ಮಾಡಿದರು. ಈ ಹಿಂದೆ 2007 ವಿಶ್ವಕಪ್ ನಲ್ಲಿ ಆಸೀಸ್ ಜೋಡಿ 1,142 ರನ್ ಸಿಡಿಸಿದ್ದು, ಅಲ್ಲದೇ ಇಂದಿನ ಟೂರ್ನಿಯಲ್ಲೂ ಆಸೀಸ್ ಆರಂಭಿಕ ಜೋಡಿ 1 ಸಾವಿರ ಪ್ಲಸ್ ರನ್ ಗಳಿಸಿದೆ.

    ರೋಹಿತ್ ಐತಿಹಾಸ ಶತಕ: ಪಂದ್ಯದಲ್ಲಿ 94 ಎಸೆತಗಳಲ್ಲಿ 14 ಬೌಂಡರಿ, 2 ಸಿಕ್ಸರ್ ನೆರವಿನಿಂದ 103 ರನ್ ಸಿಡಿಸಿದ ರೋಹಿತ್ ಶರ್ಮಾ 2019ರ ವಿಶ್ವಕಪ್‍ನಲ್ಲಿ 5ನೇ ಶತಕ ಸಿಡಿಸಿ ಈ ಸಾಧನೆ ಮಾಡಿದ ಮೊದಲಿಗರಾದರು. ಅಲ್ಲದೇ ಟೂರ್ನಿಯಲ್ಲಿ ಒಟ್ಟು 647 ರನ್ ಹೊಡೆದು ಸಚಿನ್ ಬಳಿಕ ಈ ಸಾಧನೆ ಮಾಡಿದ ಭಾರತೀಯ ಆಟಗಾರ ಎನಿಸಿಕೊಂಡರು. 2003ರ ವಿಶ್ವಕಪ್ ಟೂರ್ನಿಯಲ್ಲಿ ಸಚಿನ್ 673 ರನ್ ಸಿಡಿಸಿದ್ದರು.

    ಇತ್ತ ರೋಹಿತ್ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದರೆ ಮತ್ತೊಂದು ಬದಿಯಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಸಾಥ್ ನೀಡಿದ ಕೆಎಲ್ ರಾಹುಲ್ ಕೂಡ 118 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ನೆರವಿನಿಂದ 111 ರನ್ ಸಿಡಿಸಿದರು. ರಾಹುಲ್ ವಿಶ್ವಕಪ್ ನಲ್ಲಿ ಸಿಡಿಸಿದ ಮೊದಲ ಶತಕ ಇದಾದರೆ, ವೃತ್ತಿ ಜೀವನದ 2ನೇ ಏಕದಿನ ಶತಕ ಇದಾಗಿದೆ.

    ಕೊಹ್ಲಿ ದಾಖಲೆ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಪರ ಮತ್ತೊಂದು ದಾಖಲೆ ನಿರ್ಮಿಸಿದರು. ವಿಶ್ವಕಪ್‍ನಲ್ಲಿ ಕಡಿಮೆ ಇನ್ನಿಂಗ್ಸ್ ಸಾವಿರ ರನ್ ಸಂಪಾದಿಸಲು 5 ರನ್ ಗಳಿಸಿದ ವೇಳೆ ವಿಶ್ವಕಪ್ ಟೂರ್ನಿಯಲ್ಲಿ 1 ಸಾವಿರ ರನ್ ಪೂರ್ಣಗೊಳಿಸಿದರು. ಆ ಮೂಲಕ ಮಾಜಿ ಆಟಗಾರ ಸಚಿನ್ ಹಾಗೂ ಗಂಗೂಲಿ ಅವರ ಸಾಲಿಗೆ ಸೇರಿದರು. ಪಂದ್ಯಕ್ಕೂ ಮುನ್ನ ವಿಶ್ವಕಪ್ ಕ್ರಿಕೆಟ್‍ನ 2011, 2015, 2019ರ ಟೂರ್ನಿಗಳಲ್ಲಿ ಕೊಹ್ಲಿ ಇದುವರೆಗೂ 24 ಇನ್ನಿಂಗ್ಸ್ ಮೂಲಕ 995 ರನ್ ಗಳಿಸಿದ್ದರು. ಸಚಿನ್ 44 ಇನ್ನಿಂಗ್ಸ್ ಗಳಲ್ಲಿ 2,278 ರನ್ ಸಿಡಿಸಿದ್ದು, ಆ ಬಳಿಕ ಗಂಗೂಲಿ ಅವರು 1,006 ರನ್ ಗಳಿಸಿ ಭಾರತ ಪರ ವಿಶ್ವಕಪ್ ಟೂರ್ನಿಯಲ್ಲಿ ಸಾಧನೆ ಮಾಡಿದ್ದಾರೆ. ಊಳಿದಂತೆ 15 ಇನ್ನಿಂಗ್ಸ್ ಗಳಲ್ಲಿ 874 ರನ್ ಗಳಿಸಿರುವ ರೋಹಿತ್ ಶರ್ಮಾ, 21 ಇನ್ನಿಂಗ್ಸ್ ಗಳಲ್ಲಿ 860 ರನ್ ಗಳಿಸಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಪಂದ್ಯದಲ್ಲಿ ರೋಹಿತ್ ಶರ್ಮಾ ಪಂದ್ಯದಲ್ಲಿ ಶತಕ ಗಳಿಸಿದರೆ ಅವರು 1 ಸಾವಿರ ರನ್ ಪೂರೈಸಿದ ಆಟಗಾರರ ಪಟ್ಟಿ ಸೇರಲಿದ್ದಾರೆ.

    ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ ತಂಡ ಮ್ಯಾಥ್ಯೂಸ್‍ 128 ಎಸೆತಗಳಲ್ಲಿ 10 ಬೌಂಡರಿ, 2 ಸಿಕ್ಸರ್ ನೆರವಿನಿಂದ 113 ರನ್ , ತಿರಿಮಣೆ (53 ರನ್) ಅರ್ಧ ಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತ್ತು. ಭಾರತ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬುಮ್ರಾ 3 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ಪಾಂಡ್ಯ, ಜಡೇಜಾ, ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

  • ವಿಶ್ವಕಪ್ ಕಮೆಂಟ್ರಿ ಪಟ್ಟಿ – ಗಂಗೂಲಿ, ಭೋಗ್ಲೆ,  ಮಂಜ್ರೇಕರ್‌ಗೆ ಸ್ಥಾನ

    ವಿಶ್ವಕಪ್ ಕಮೆಂಟ್ರಿ ಪಟ್ಟಿ – ಗಂಗೂಲಿ, ಭೋಗ್ಲೆ, ಮಂಜ್ರೇಕರ್‌ಗೆ ಸ್ಥಾನ

    ಲಂಡನ್: ವಿಶ್ವಕಪ್ ಕ್ರಿಕೆಟ್ ಅಂಗವಾಗಿ ಭಾರತದ ಮೂವರನ್ನು ಐಸಿಸಿ ವೀಕ್ಷಕ ವಿವರಣೆಗಾರರನ್ನಾಗಿ ನೇಮಕ ಮಾಡಿದೆ. ಹರ್ಷ ಭೋಗ್ಲೆ, ಸಂಜಯ್  ಮಂಜ್ರೇಕರ್‌, ಸೌರವ್ ಗಂಗೂಲಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 23 ಮಂದಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಐಸಿಸಿ ಗುರುವಾರ ಪ್ರಕಟಿಸಿದೆ. ಇದರಲ್ಲಿ ಇಂಗ್ಲೆಂಡಿನ 4, ಭಾರತ ಮತ್ತು ನ್ಯೂಜಿಲೆಂಡಿನ 3, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಪಾಕಿಸ್ತಾನ ಪರ ಇಬ್ಬರು ಹಾಗೂ ಬಾಂಗ್ಲಾದೇಶ, ಶ್ರೀಲಂಕಾ, ಜಿಂಬಾಬ್ವೆಯಿಂದ ತಲಾ ಒಬ್ಬರನ್ನು ಆಯ್ಕೆ ಮಾಡಲಾಗಿದೆ.

    ಈ ಪಂದ್ಯಕ್ಕೆ ಮೂವರು ಮಹಿಳಾ ವೀಕ್ಷಕ ವಿವರಣೆಗಾರರನ್ನು ಆಯ್ಕೆ ಮಾಡಲಾಗಿದೆ. ಇಷಾ ಗುಹಾ, ಮೆಲಾಜಿ ಜೋನ್ಸ್, ಅಲಿಸನ್ ಮಿಚೆಲ್ ಸ್ಥಾನ ಪಡೆದಿದ್ದಾರೆ.

    ವೀಕ್ಷಕ ವಿವರಣೆಗಾರರ ಪಟ್ಟಿ: ಸೌರವ್ ಗಂಗೂಲಿ, ಇಯಾನ್ ಬಿಷಪ್, ಮೈಕಲ್ ಕ್ಲಾರ್ಕ್, ನಾಸಿರ್ ಹುಸೇನ್, ಮಿಚೆಲ್ ಜೋನ್ಸ್, ಕುಮಾರ ಸಂಗಕ್ಕಾರ, ಮೈಕಲ್ ಅಥರ್ಟನ್, ಅಲಿಸನ್ ಮಿಚೆಲ್, ಬ್ರೆಂಡನ್ ಮೆಕ್ಕಲಂ, ಗ್ರೇಮ್ ಸ್ಮಿತ್, ವಾಸೀಂ ಅಕ್ರಂ, ಶಾನ್ ಪೋಲಾಕ್, ಮೈಕಲ್ ಸ್ಲೇಟರ್, ಮಾರ್ಕ್ ನಿಕೋಲಸ್, ಮೈಕಲ್ ಹೋಲ್ಡಿಂಗ್, ಸಂಜಯ್ ಮಂಜ್ರೇಕರ್, ಹರ್ಷ ಭೋಗ್ಲೆ, ಸಿಮಾನ್ ಡೌಲ್, ಇಯಾನ್ ಸ್ಮಿತ್, ರಮೀಜ್ ರಾಜಾ, ಅಥರ್ ಅಲಿ ಖಾನ್, ಇಯಾನ್ ವಾರ್ಡ್.

  • ಧೋನಿ ಸಹ ಮನುಷ್ಯರೇ ಅಲ್ವಾ? – ಎಂಎಸ್‍ಡಿ ಪರ ಬ್ಯಾಟ್ ಬೀಸಿದ ಗಂಗೂಲಿ

    ಧೋನಿ ಸಹ ಮನುಷ್ಯರೇ ಅಲ್ವಾ? – ಎಂಎಸ್‍ಡಿ ಪರ ಬ್ಯಾಟ್ ಬೀಸಿದ ಗಂಗೂಲಿ

    ಕೋಲ್ಕತ್ತಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೈದಾನದಲ್ಲಿ ಅಂಪೈರ್ ಗಳೊಂದಿಗೆ ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಎಲ್ಲರೂ ಮನುಷ್ಯರೇ ಎಂದು ಹೇಳುವ ಮೂಲಕ ಬೆಂಬಲ ನೀಡಿದ್ದಾರೆ.

    ಡೆಲ್ಲಿ, ಕೋಲ್ಕತ್ತಾ ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿದ್ದ ಗಂಗೂಲಿ, ಪ್ರತಿಯೊಬ್ಬರು ಮನುಷ್ಯರೇ. ಅವರ ಸ್ಪಧಾತ್ಮಕತೆ ಏನು? ಎಂಬುದು ಮಾತ್ರ ಇಲ್ಲಿ ಗಮನಾರ್ಹವಾಗಿರುತ್ತದೆ. ಕೆಲ ಸಂದರ್ಭಗಳಲ್ಲಿ ಭಾವನಾತ್ಮಕ ಪರಿಸ್ಥಿತಿಗೆ ಸಿಲುಕಿದಾಗ ಇಂತಹ ಘಟನೆಗಳು ನಡೆಯುತ್ತದೆ ಎಂದಿದ್ದಾರೆ. ಇದೇ ವೇಳೆ ಡೆಲ್ಲಿ ತಂಡದ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಗಂಗೂಲಿ, ತಂಡ ಕೋಲ್ಕತ್ತಾ ವಿರುದ್ಧ ತೋರಿದ ಪ್ರದರ್ಶನ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.

    ಇತ್ತ ಧೋನಿ ಮೈದಾನಕ್ಕೆ ಪ್ರವೇಶ ಮಾಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಹಲವು ಹಿರಿಯ ಆಟಗಾರರು ಧೋನಿ ನಡೆ ವಿರುದ್ಧ ಕಿಡಿಕಾರಿದ್ದರು. ಧೋನಿ ಕ್ರಿಕೆಟಿನಲ್ಲಿ ತನ್ನ ಬಲ ಎಷ್ಟಿದೆ ಎಂದು ತೋರಿಸಿದ್ದಾರೆ. ಇಂತಹ ವರ್ತನೆ ತೋರಿದ್ದರೂ ಕೂಡ ಪಂದ್ಯದ ಶೇ..50 ರಷ್ಟು ಸಂಭಾವನೆಯನ್ನು ಮಾತ್ರ ದಂಡವಾಗಿ ವಿಧಿಸಿ ಬಿಸಿಸಿಐ ಉದಾರತೆಯನ್ನು ತೋರಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಟೀಕೆ ಮಾಡಿದ್ದಾರೆ.

    ಏನಿದು ವಿವಾದ?
    ಐಪಿಎಲ್ 12ನೇ ಆವೃತ್ತಿಯ ಭಾಗವಾಗಿ ಗುರುವಾರ ಚೆನ್ನೈ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದಲ್ಲಿ ಘಟನೆ ನಡೆದಿತ್ತು. ಪಂದ್ಯದ ಅಂತಿಮ ಓವರಿನಲ್ಲಿ ಅಂಪೈರ್ ನೋಬಾಲ್ ನೀಡಿ ಬಳಿಕ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದರು. ಈ ವೇಳೆ ಬೌಂಡರಿ ಲೈನ್ ಬಳಿ ಕುಳಿತಿದ್ದ ಧೋನಿ ಮೈದಾನಕ್ಕೆ ಆಗಮಿಸಿ ಅಂಪೈರ್ ಜೊತೆ ಚರ್ಚೆ ನಡೆಸಿದ್ದರು. ಬ್ಯಾಟಿಂಗ್ ನಡೆಸುತ್ತಿದ್ದ ಜಡೇಜಾ ಕೂಡ ಅಂಪೈರ್ ರೊಂದಿಗೆ ಮಾತುಕತೆ ನಡೆಸಿದ್ದರು. ಯಾವುದೇ ಸಮಯದಲ್ಲೂ ತಾಳ್ಮೆ ಕಳೆದುಕೊಳ್ಳದೇ ಇರುತ್ತಿದ್ದ ಧೋನಿ ಮಾತ್ರ ಐಪಿಎಲ್ ನಿಯಮಗಳನ್ನು ಮೀರಿ ಮೈದಾನಕ್ಕೆ ನುಗ್ಗಿದ್ದು ವಿಶೇಷವಾಗಿತ್ತು.

  • ಸೌರವ್ ಗಂಗೂಲಿ, ದಿಲ್‍ಶಾನ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

    ಸೌರವ್ ಗಂಗೂಲಿ, ದಿಲ್‍ಶಾನ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

    ಸಿಡ್ನಿ: ಇಲ್ಲಿನ ಸಿಡ್ನಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಹಿಟ್‍ಮ್ಯಾನ್ ರೋಹಿತ್ ಶರ್ಮಾ 22ನೇ ಶತಕ ಸಿಡಿಸಿದ್ದಾರೆ.

    ಈ ಸಾಧನೆ ಮಾಡುವ ಮೂಲಕ ಹೆಚ್ಚು ಶತಕ ಸಿಡಿಸಿದ ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಹಾಗೂ ಶ್ರೀಲಂಕಾದ ತಿಲಕರತ್ನೆ ದಿಲ್‍ಶಾನ್ ಅವರನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ.

    ರೋಹಿತ್ ಶರ್ಮಾ ಒಟ್ಟು 194 ಅಂತರಾಷ್ಟ್ರೀಯ ಏಕದಿನ ಮ್ಯಾಚ್‍ಗಳನ್ನು ಆಡಿದ್ದು, 22 ಶತಕ ಹಾಗೂ 37 ಅರ್ಧಶತಗಳ ದಾಖಲಿಸಿ, 7,587 ರನ್‍ಗಳನ್ನು ಗಳಿಸಿದ್ದಾರೆ. ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಅಂತರಾಷ್ಟ್ರೀಯ ಬ್ಯಾಟ್ಸ್ ಮನ್ ಸಾಲಿನಲ್ಲಿ ಒಂಬತ್ತನೇ ಸ್ಥಾನವನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

    ಸಿಡ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ 18 ಎಸೆತಗಳನ್ನು ಎದುರಿಸಿದ್ದರೂ ರೋಹಿತ್ ಶರ್ಮಾ ಒಂದೇ ಒಂದು ರನ್ ಬಾರಿಸಿರಲಿಲ್ಲ. ಈ ವೇಳೆ ನೋ ಬಾಲ್ ಫ್ರಿ ಹಿಟ್‍ನಲ್ಲಿ ಸಿಕ್ಸರ್ ಸಿಡಿಸಿ ರನ್ ಖಾತೆ ತೆರೆದ ಹಿಟ್‍ಮ್ಯಾನ್ ಬೌಂಡರಿ, ಸಿಕ್ಸರ್ ಮೂಲಕ ರನ್ನ ಕಲೆಹಾಕಿ ಟೀಂ ಇಂಡಿಯಾ ಅಭಿಮಾನಿಗಳನ್ನು ರಂಜಿಸಿದರು. ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಗೆ ಮಹೇಂದ್ರ ಸಿಂಗ್ ಧೋನಿ ಆಸರೆಯಾದರು.

    ವಿಕೆಟ್ ಕಾಯ್ದುಕೊಂಡು ನಿದಾನವಾಗಿ ಆಟವಾಡಿದ ಧೋನಿ, ರೋಹಿತ್‍ಗೆ ಸಾಥ್ ನೀಡಿದರು. ಆದರೆ ಎಲ್‍ಬಿಡ್ಲ್ಯು ಆದ ಧೋನಿ (51 ರನ್- 3ಬೌಂಡರಿ, ಒಂದು ಸಿಕ್ಸರ್‍ಗೆ) ಪೆವಲಿನ್‍ಗೆ ತೆರಳಿದರು. ಬಳಿಕ ಬಂದ ದಿನೇಶ್ ಕಾರ್ತೀಕ್ (12) ಹಾಗೂ ರವೀಂದ್ರ ಜಡೇಜಾ (8) ರನ್‍ಗೆ ವಿಕೆಟ್ ಒಪ್ಪಿಸಿದರು. ಏಕಾಂಗಿಯಾಗಿ ಹೋರಾಡಿದ ರೋಹಿತ್ ಶರ್ಮಾ 110 ಎಸೆತಗಳಲ್ಲಿ ಶತಕ ಪೂರೈಸಿ, ಏಕದಿನದಲ್ಲಿ 22ನೇ ಶತಕ ಸಾಧನೆ ಮಾಡಿದರು. ಶತಕದ ಬಳಿಕ ಸ್ಫೋಟಕ ಬ್ಯಾಟಿಂಗ್ ಮಾಡಿದ ರೋಹಿತ್ 129 ಎಸೆತಗಳಲ್ಲಿ 10 ಬೌಂಡರಿ, 6 ಸಿಕ್ಸರ್ ಗಳನ್ನು ಸಿಡಿಸಿ ವಿಕೆಟ್ ಒಪ್ಪಿಸಿದರು.

    ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್ ಮನ್‍ಗಳು:

    1. ಸಚಿನ್ ತೆಂಡೂಲ್ಕರ್: 49
    2. ವಿರಾಟ್ ಕೊಹ್ಲಿ: 38
    3. ರಿಕಿ ಪಾಂಟಿಂಗ್: 30
    4. ಸನತ್ ಜಯಸೂರ್ಯ: 28
    5. ಹಾಶೀಮ್ ಆಮ್ಲಾ: 26
    6. ಎಬಿಡಿ ವಿಲಿಯರ್ಸ್: 25
    7. ಕುಮಾರ ಸಂಗಕ್ಕರ: 25
    8. ಕ್ರಿಸ್ ಗೇಲ್: 23
    9. ಸೌರವ್ ಗಂಗೂಲಿ: 22
    10. ತಿಲಕರತ್ನೆ ದಿಲ್‍ಶಾನ್: 22
    11. ರೋಹಿತ್ ಶರ್ಮಾ: 22

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಂಗೂಲಿ ದಾಖಲೆ ಟೈ, ಧೋನಿಗೆ ಸಮನಾಗಲು ಕೊಹ್ಲಿಗೆ ಬೇಕು 1 ಗೆಲುವು!

    ಗಂಗೂಲಿ ದಾಖಲೆ ಟೈ, ಧೋನಿಗೆ ಸಮನಾಗಲು ಕೊಹ್ಲಿಗೆ ಬೇಕು 1 ಗೆಲುವು!

    ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಕೊನೆಯ ದಿನವಾದ ಇಂದು ಟೀಂ ಇಂಡಿಯಾ ದಾಖಲೆಗಳ ಮೇಲೆ ದಾಖಲೆ ಮಾಡಿತು. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಇದುವರೆಗೆ ಆಡಿದ 45 ಟೆಸ್ಟ್ ಗಳಲ್ಲಿ 26ನೇ ಗೆಲುವು ಸಾಧಿಸಿದೆ. ಈ ಮೂಲಕ ಧೋನಿ ನಂತರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿದ ಕ್ಯಾಪ್ಟನ್ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾದರು.

    ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಇದುವರೆಗೆ ಆಡಿದ 60 ಪಂದ್ಯಗಳಲ್ಲಿ 27 ಪಂದ್ಯಗಳನ್ನು ಗೆದ್ದಿತ್ತು. ಇನ್ನೊಂದು ಟೆಸ್ಟ್ ಗೆದ್ದರೆ ಈ ದಾಖಲೆ ಸರಿಸಮಾನವಾಗಲಿದ್ದು, 2 ಪಂದ್ಯ ಗೆದ್ದರೆ ಕೊಹ್ಲಿಯೇ ಅತಿ ಹೆಚ್ಚು ಟೆಸ್ಟ್ ಗೆದ್ದ ನಾಯಕನಾಗುತ್ತಾರೆ.

    ಕೊಹ್ಲಿ ನೇತೃತ್ವದಲ್ಲಿ ವಿದೇಶದಲ್ಲಿ ಇದು ಟೀಂ ಇಂಡಿಯಾದ 11ನೇ ಗೆಲುವು. ಈ ಮೂಲಕ ಮಾಜಿ ಕಪ್ತಾನ ಸೌರವ್ ಗಂಗೂಲಿ ಮಾಡಿದ್ದ ಸಾಧನೆಯನ್ನು ಕೊಹ್ಲಿ ಸರಿಗಟ್ಟಿದರು. ಗಂಗೂಲಿ ಅವರ ನೇತೃತ್ವದಲ್ಲಿ ಕೂಡಾ ಟೀಂ ಇಂಡಿಯಾ ವಿದೇಶದಲ್ಲಿ 11 ಗೆಲುವು ಸಾಧಿಸಿತ್ತು. ಅಲ್ಲದೇ ತನ್ನ ವೃತ್ತಿ ಜೀವನದಲ್ಲಿ 49 ಟೆಸ್ಟ್‍ಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಗಂಗೂಲಿ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರು.

    ಟಾಸ್ ಗೆದ್ದು ಪಂದ್ಯ ಸೋತಿಲ್ಲ ಕೊಹ್ಲಿ!: ಟೀಂ ಇಂಡಿಯಾ ನಾಯಕ ಕೊಹ್ಲಿ ಇದುವರೆಗೆ ಟಾಸ್ ಗೆದ್ದ ಯಾವುದೇ ಟೆಸ್ಟ್ ಪಂದ್ಯದಲ್ಲಿ ಸೋತಿಲ್ಲ ಎನ್ನುವುದೂ ವಿಶೇಷ. ಇದುವರೆಗೆ ಕೊಹ್ಲಿ 21 ಮ್ಯಾಚ್ ಗಳಲ್ಲಿ ಟಾಸ್ ಗೆದ್ದಿದ್ದಾರೆ. ಇದರಲ್ಲಿ 18 ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ, ಇನ್ನು ಮೂರು ಟೆಸ್ಟ್ ಪಂದ್ಯಗಳು ಡ್ರಾ ಆಗಿತ್ತು.

    ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯ ಜನವರಿ 3ರಿಂದ ಸಿಡ್ನಿಯಲ್ಲಿ ಶುರುವಾಗಲಿದ್ದು ಈ ಪಂದ್ಯವನ್ನು ಗೆದ್ದರೆ ಎರಡು ದಾಖಲೆಗಳು ಕೊಹ್ಲಿ ಪಾಲಾಗಲಿದೆ. ಸಿಡ್ನಿ ಪಂದ್ಯ ಗೆದ್ದರೆ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಇದಲ್ಲದೇ ತನ್ನ ನಾಯಕತ್ವದಲ್ಲಿ ವಿದೇಶಿ ನೆಲದಲ್ಲಿ 12ನೇ ಗೆಲುವು ಸಾಧಿಸುವ ಮೂಲಕ ವಿದೇಶಿ ಮಣ್ಣಿನಲ್ಲಿ ಅತಿ ಹೆಚ್ಚು ಗೆಲುವಿನ ಸಾಧನೆಯೂ ಕೊಹ್ಲಿ ಹೆಸರಿಗೆ ಬರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಡಿಯನ್ ಕ್ರಿಕೆಟ್ ಡೇಂಜರ್‌ನಲ್ಲಿದೆ – ಸೌರವ್ ಗಂಗೂಲಿ ಆತಂಕ

    ಇಂಡಿಯನ್ ಕ್ರಿಕೆಟ್ ಡೇಂಜರ್‌ನಲ್ಲಿದೆ – ಸೌರವ್ ಗಂಗೂಲಿ ಆತಂಕ

    ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕೋಲ್ಕತ್ತಾ ಕ್ರಿಕೆಟ್ ಅಸೋಶಿಯೇಷನ್ ಕಾರ್ಯದರ್ಶಿ ಸೌರವ್ ಗಂಗೂಲಿ ಸದ್ಯ ಇಂಡಿಯನ್ ಕ್ರಿಕೆಟ್ ಪರಿಸ್ಥಿತಿ ಅಪಾಯದಲ್ಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಬಿಸಿಸಿಐ ಆಡಳಿತ ನಿಯಂತ್ರಣ ಮಂಡಳಿ ನಡುವೆ ನಾಯತ್ವದ ಗೊಂದಲ ಹಾಗೂ ಮೀಟೂ ಕಿರುಕುಳ ಆರೋಪದ ಬಗೆಗಿನ ಅಭಿಪ್ರಾಯ ಬೇಧ ಇದಕ್ಕೆ ಕಾರಣ ಎಂದು ಗಂಗೂಲಿ ಅಂತಕ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಬಿಸಿಸಿಐಗೆ ಪತ್ರವನ್ನು ಬರೆದಿರುವ ಸೌರವ್ ಗಂಗೂಲಿ, ಬಿಸಿಸಿಐ ನಾಯಕತ್ವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಗಂಗೂಲಿ ಅವರ ಪತ್ರದಲ್ಲಿ ಪ್ರಮುಖವಾಗಿ ಬಿಸಿಸಿಐ ಸಿಇಒ ಅವರ ಮೇಲೆ ಬಂದ ಲೈಂಗಿಕ ಕಿರುಕುಳದ ಮೀಟೂ ಆರೋಪದ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದು ನಿಜವಾ ಅಥವಾ ಸುಳ್ಳ ನನಗೆ ಗೊತ್ತಿಲ್ಲ. ಆದರೆ ಭಾರತದಲ್ಲಿ ಕ್ರಿಕೆಟ್ ಬಹಳ ವರ್ಷಗಳಿಂದ ಬೆಳೆದು ಬಂದಿದ್ದು, ಸದ್ಯದ ಆರೋಪ ಭಾರತೀಯ ಕ್ರಿಕೆಟ್ ವ್ಯವಸ್ಥೆಯನ್ನೇ ಆತಂಕದಲ್ಲಿ ಉಂಟಾಗುವಂತೆ ಮಾಡಿದೆ. ಜನರು ಇದನ್ನು ಗಮನಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸಿಇಒ ರಾಹುಲ್ ಜೋಹ್ರಿ ಅವರ ಮೇಲಿನ ಆರೋಪ ಭಾರತದ ಕೋಟ್ಯಂತರ ಪ್ರೇಮಿಗಳ ಭಾವನೆಗೆ ಧಕ್ಕೆ ತರುವಂತದ್ದು. ಈ ಕುರಿತು ಬಿಸಿಸಿಐ ಕಠಿಣ ನಿರ್ಣಯ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದ್ದು, ಗಂಗೂಲಿ ಅವರ ಈ ಪತ್ರ ಬಿಸಿಸಿಐ ಆಡಳಿತ ಮಂಡಳಿ ಮೇಲೆ ಒತ್ತಡವನ್ನು ಹೆಚ್ಚಿಸಿದೆ.

    ಇತ್ತ ಬಿಸಿಸಿಐ ನಾಯಕತ್ವದ ಬಗ್ಗೆಯೂ ಗೊಂದಲ ಉಂಟಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ಗಂಗೂಲಿ, ಕ್ರಿಕೆಟ್ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳಿಗೆ ಬಿಸಿಸಿಐ ನಿಂದ ಯಾರಿಗೆ ಅಧಿಕೃತ ಆಹ್ವಾನ ನೀಡಬೇಕು ಎಂಬ ಬಗ್ಗೆಯೂ ಗೊಂದಲ ಉಂಟಾಗಿದೆ. ಈ ಬಗ್ಗೆ  ವಿದೇಶಿ ಕ್ರಿಕೆಟ್ ಸಂಸ್ಥೆಯ ಸ್ನೇಹಿತರು ನನಗೆ ಪ್ರಶ್ನೆ ಮಾಡಿದ್ದು, ಏನೆಂದು ಉತ್ತರ ನೀಡಲಿ ಎಂದು ಪ್ರಶ್ನಿಸಿದ್ದಾರೆ.

    ಬಿಸಿಸಿಐ ಸಿಇಒ ಆಗಿರುವ ರಾಹುಲ್ ಜೋಹ್ರಿ ಅವರ ಮೇಲೆ ಲೇಖಕಿ ಹರ್ನಿಧ್ ಕೌರ್ ಎಂಬವರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಕೆಲ ಮೆಸೇಜ್ ಗಳ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದರು. ಭಾರತೀಯ ಕ್ರಿಕೆಟ್‍ನಲ್ಲಿ ಮೊದಲ ಬಾರಿಗೆ ಮೀಟೂ ಆರೋಪ ಇದಾಗಿದ್ದು, ಈ ಹಿಂದೆ ಶ್ರೀಲಂಕಾ ಕ್ರಿಕೆಟರ್ ಅರ್ಜುನ್ ರಣತುಂಗ, ಲಸಿತ್ ಮಾಲಿಂಗ ಮೇಲೆ ಮೀಟೂ ಆರೋಪ ಕೇಳಿಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೌರವ್ ಗಂಗೂಲಿ ನಾಯಕತ್ವದ ದಾಖಲೆ ಮುರಿದ ವಿರಾಟ್

    ಸೌರವ್ ಗಂಗೂಲಿ ನಾಯಕತ್ವದ ದಾಖಲೆ ಮುರಿದ ವಿರಾಟ್

    ನವದೆಹಲಿ: ಟೀಂ ಇಂಡಿಯಾ ನಾಟಿಂಗ್ ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿದ್ದು, ಇದರೊಂದಿಗೆ ಕೊಹ್ಲಿ ನಾಯಕತ್ವದಲ್ಲಿ ತಂಡ 22 ಪಂದ್ಯಗಳಲ್ಲಿ ಜಯಗಳಿಸಿದಂತಾಗಿದೆ. ಈ ಮೂಲಕ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿಸಿದ್ದಾರೆ.

    ಕೊಹ್ಲಿ ನಾಯಕತ್ವದಲ್ಲಿ ಇದುವರೆಗೂ 38 ಪಂದ್ಯಗಳನ್ನು ಆಡಿದ್ದು, 22 ಪಂದ್ಯಗಳಲ್ಲಿ ಭಾರತ ಜಯಗಳಿಸಿದೆ. ಗಂಗೂಲಿ ನಾಯಕತ್ವದಲ್ಲಿ ಆಡಿರುವ 49 ಟೆಸ್ಟ್ ಪಂದ್ಯಗಳಲ್ಲಿ 21 ರಲ್ಲಿ ತಂಡ ಜಯಗಳಿತ್ತು. ಇನ್ನು ಎಂಎಸ್ ಧೋನಿ ನಾಯಕತ್ವದಲ್ಲಿ 60 ಟೆಸ್ಟ್ ಪಂದ್ಯಗಳು ನಡೆದಿದ್ದು, 27 ರಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಸೌರವ್ ಗಂಗೂಲಿ ನಾಯಕತ್ವದ ಗೆಲುವಿನ ಸರಾಸರಿ 42.85 ಇದ್ದರೆ, ಧೋನಿ 45 ಹಾಗೂ ಕೊಹ್ಲಿ 57.89 ಸರಾಸರಿ ಹೊಂದಿದ್ದಾರೆ.

    2014 ರಲ್ಲಿ ತಂಡದ ನಾಯಕತ್ವ ವಹಿಸಿದ ಕೊಹ್ಲಿ ಆಸೀಸ್, ಶ್ರೀಲಂಕಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್, ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

    ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಟೂರ್ನಿಯಲ್ಲಿ ಸದ್ಯ ಟೀ ಇಂಡಿಯಾ ಎರಡರಲ್ಲಿ ಸೋಲುಂಡು 3ನೇ ಪಂದ್ಯದಲ್ಲಿ ಜಯದ ಹಾದಿಗೆ ಮರಳಿದೆ. ಸರಣಿ ಗೆಲುವಿಗೆ ಕೊಹ್ಲಿ ಬಳಗ ಇನ್ನುಳಿದ 2 ಪಂದ್ಯಗಳಲ್ಲಿ ಗೆಲುವು ಪಡೆಯುವುದು ಅನಿವಾರ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv