Tag: sourav ganguly

  • ಪಾಕಿಸ್ತಾನಿಯರ ಹೃದಯ ಗೆಲ್ಲಿ-ಗಂಗೂಲಿ ಪಡೆಗೆ ಕಿವಿಮಾತು ಹೇಳಿದ್ದ ಅಟಲ್‍ಜೀ

    ಪಾಕಿಸ್ತಾನಿಯರ ಹೃದಯ ಗೆಲ್ಲಿ-ಗಂಗೂಲಿ ಪಡೆಗೆ ಕಿವಿಮಾತು ಹೇಳಿದ್ದ ಅಟಲ್‍ಜೀ

    ನವದೆಹಲಿ: ಪಾಕಿಸ್ತಾನ ಹಾಗೂ ಭಾರತ ನಡುವೆ ಕ್ರೀಡೆ ಮೂಲಕ ಸ್ನೇಹ ಸಂಬಂಧ ಉತ್ತಮ ಪಡಸಿಲು ಪ್ರಯತ್ನಿಸಿದ್ದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಟೀಂ ಇಂಡಿಯಾ ತಂಡ ಪ್ರವಾಸ ಕೈಗೊಳ್ಳುವ ಮುನ್ನ ತಂಡಕ್ಕೆ ಪಾಕ್ ಪ್ರಜೆಗಳ ಹೃದಯ ಗೆಲ್ಲಲು ಹೇಳಿ ಕಳುಹಿಸಿದ್ದರು.

    2004 ರಲ್ಲಿ 19 ವರ್ಷಗಳ ಬಳಿಕ ಅಟಲ್ ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಈ ವೇಳೆ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾಕ್ ಪ್ರವಾಸಕ್ಕೆ ತೆರಳುವ ಮುನ್ನ ತಂಡದ ಆಟಗಾರರು ಭೇಟಿ ಮಾಡಿದ್ದರು. ಈ ವೇಳೆ ಅಟಲ್ ಅವರು ಟೀಂ ಇಂಡಿಯಾಗೆ ಗೆಲುವು ಒಂದೇ ನಮ್ಮ ಉದ್ದೇಶವಲ್ಲ, ಹೃದಯ ಗೆಲ್ಲುವುದು ಕೂಡ ನಮ್ಮ ಉದ್ದೇಶ ಎಂದು ಹೇಳಿದ್ದರು. ಅಲ್ಲದೇ ನಾಯಕ ಸೌರವ್ ಗಂಗೂಲಿ ಅವರಿಗೆ ವಿಶೇಷ ಬ್ಯಾಟ್ ಸಹ ಗಿಫ್ಟ್ ನೀಡಿದ್ದರು.

    ಈ ವೇಳೆ ಪಾಕಿಸ್ತಾನದಲ್ಲಿ ಪಂದ್ಯಗಳನ್ನು ವೀಕ್ಷಿಸಲು ಸುಮಾರು 20 ಸಾವಿರ ವೀಸಾಗಳನ್ನು ಸರ್ಕಾರ ನೀಡಿತ್ತು. ಅಂದು ತಂಡದಲ್ಲಿ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಯುವರಾಜ್ ಸಿಂಗ್, ಕೈಫ್, ಜಹೀರ್ ಖಾನ್ ರಂತಹ ಸ್ಟಾರ್ ಆಟಗಾರು ಸ್ಥಾನ ಪಡೆದಿದ್ದರು. ಈ ಸರಣಿಯಲ್ಲಿ ಭಾರತ ಏಕದಿನ ಹಾಗೂ ಟೆಸ್ಟ್ ಟೂರ್ನಿಯನ್ನು ಕ್ರಮವಾಗಿ 3-2, 2-1 ಅಂತರದಿಂದ ಗೆದ್ದಿತ್ತು.

    ಪಾಕಿಸ್ತಾನದೊಂದಿಗೆ ಸ್ನೇಹ ಸಂಬಂಧ ಸುಧಾರಿಸಲು ಎಲ್ಲಾ ಮಾರ್ಗಗಳಲ್ಲೂ ಪ್ರಯತ್ನಿಸಿದ್ದ ಮಾಜಿ ಪ್ರಧಾನಿ, ಅಜಾತಶತ್ರು ಮತ್ತು ಭಾರತರತ್ನ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯಿಂದ ದೇಶದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಗಣ್ಯಾತಿ ಗಣ್ಯರು ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸುತ್ತಿದ್ದಾರೆ.

    ದೆಹಲಿಯ 6ಎ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಈ ವೇಳೆ ಬಂಧು ಮಿತ್ರರು ಮತ್ತು ಗಣ್ಯರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಬಿಜೆಪಿ ಮುಖಂಡ ಹಾಗೂ ವಾಜಪೇಯಿ ಅವರ ಆಪ್ತ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಹೊಸ ಅವತಾರದ ವೀರೇಂದ್ರ ಸೆಹ್ವಾಗ್ ಫೋಟೋ ವೈರಲ್!

    ಹೊಸ ಅವತಾರದ ವೀರೇಂದ್ರ ಸೆಹ್ವಾಗ್ ಫೋಟೋ ವೈರಲ್!

    ಮುಂಬೈ: ಕ್ರಿಕೆಟ್ ವೃತ್ತಿ ಜೀವನದಿಂದ ನಿವೃತ್ತಿ ಬಳಿಕ ಸಾಮಾಜಿಕ ಜಾಲ ತಾಣಗಳಲ್ಲಿ ಕ್ರಿಯಾಶೀಲರಾಗಿರುವ ಸೆಹ್ವಾಗ್ ತಮ್ಮದೇ ವಿಶೇಷ ಫೋಟೊವೊಂದನ್ನು ಟ್ವೀಟ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಹಿಂದೆಯೂ ಹಲವು ಬಾರಿ ಕ್ರಿಕೆಟ್ ಆಟಗಾರರು ಸೇರಿದಂತೆ ತಮ್ಮ ಆತ್ಮೀಯರನ್ನು ತಮ್ಮ ಟ್ವೀಟ್ ಮೂಲಕ ಕಾಲೆಳೆಯುತ್ತಿದ್ದ ಸೆಹ್ವಾಗ್, ಸದ್ಯ ಬಾಬಾ ಅವತಾರದಲ್ಲಿ ಕಾಣಿಸಿಕೊಂಡಿರುವ ಫೋಟೋ ಶೇರ್ ಮಾಡಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

    ಬಾಬಾ ವೇಷದಲ್ಲಿ ಕಾಣಿಸಿಕೊಂಡಿರುವ ಸೆಹ್ವಾಗ್, ಗುರು ಕಾರ್ನಾ ಜಾನ್ ಕರ್, ಪಾನಿ ಪೀನಾ ಚಾನ್ ಕರ್. ಜೈ ಭೋಲೆ! ಜೈ ಶ್ರೀ ರಾಮ್! ಜೈ ಬಜರಂಗಬಲಿ! ಎಂದು ಸ್ವಾಮೀಜಿ ಶೈಲಿಯಲ್ಲಿ ಫೋಟೋಗೆ ಅಡಿ ಬರಹವನ್ನು ನೀಡಿದ್ದಾರೆ.

    ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹುಟ್ಟುಹಬ್ಬದ ವಿಶೇಷವಾಗಿ ಟ್ವೀಟ್ ಮಾಡಿ ಸೆಹ್ವಾಗ್ ಗಮನ ಸೆಳೆದಿದ್ದರು. ಗಂಗೂಲಿ ಮೈದಾನದಲ್ಲಿ ಹೇಗಿರುತ್ತಾರೆ ಎಂದು ತಿಳಿಸಿ 4 ಉದಾಹರಣೆ ನೀಡಿ ಪೂರಕವಾಗಿ 4 ಫೋಟೋಗಳನ್ನು ಸೆಹ್ವಾಗ್ ನೀಡಿದ್ದರು. ಇದರಲ್ಲಿ ವಿಶೇಷವಾಗಿ ಗಂಗೂಲಿ ಜೀವನ ಶ್ರೇಷ್ಠ ಬ್ಯಾಟಿಂಗ್ ನೆನಪಿಸುವ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ 183 ರನ್ ಸಿಡಿದ್ದ ಫೋಟೋ, ಬಳಿಕ ಅಭಿಮಾನಿಯೊಬ್ಬ ಗಾಯಗೊಂಡು ರಕ್ತ ಸುರಿಸಿದ್ದು, ಗಂಗೂಲಿ ಬೌಲಿಂಗ್ ಫೋಟೋ ಸೇರಿದಂತೆ ನ್ಯಾಟ್‍ವೆಸ್ಟ್ ಟೆಸ್ಟ್ ಸರಣಿ ಗೆದ್ದ ವೇಳೆ ಶಾರ್ಟ್ ಬಿಚ್ಚಿ ಸಂಭ್ರಮಿಸಿದ್ದ ಫೋಟೋಗಳು ಪೋಸ್ಟ್ ಮಾಡಿದ್ದರು. ಸೆಹ್ವಾಗ್ ಅವರ ಈ ನಡೆ ಹಲವು ಅಭಿಮಾನಿಗಳಿಗೆ ಇಷ್ಟವಾಗಿದ್ದು, ಅವರ ಟ್ವೀಟ್ ಗಳಿಗೆ ಮರುಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

  • ಮೊದಲ ಟೆಸ್ಟ್‌ಗೆ ಆರಂಭಿಕನಾಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿ : ಗಂಗೂಲಿ

    ಮೊದಲ ಟೆಸ್ಟ್‌ಗೆ ಆರಂಭಿಕನಾಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿ : ಗಂಗೂಲಿ

    ನವದೆಹಲಿ: ಬಹುನಿರೀಕ್ಷಿತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮುರಳಿ ವಿಜಯ್ ಜೊತೆ ಕೆಎಲ್ ರಾಹುಲ್ ಆರಂಭಿಕ ಬ್ಯಾಟ್ಸ್ ಮನ್ ಆಗಿ ಕಣಕ್ಕೆ ಇಳಿಯಬೇಕೆಂದು ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

    ಸದ್ಯ ತಂಡದ ಆರಂಭಿಕರಾಗಿರುವ ಶಿಖರ್ ಧವನ್ ಏಕದಿನ ಮಾದರಿಗೆ ಹೆಚ್ಚು ಸೂಕ್ತವಾಗಿದ್ದು, ಟೆಸ್ಟ್ ನಲ್ಲಿ ಉತ್ತಮ ದಾಖಲೆಯನ್ನು ಹೊಂದಿಲ್ಲ. ಈ ಹಿಂದಿನ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಹಾಗೂ ಇಂಗ್ಲೆಂಡ್ ವಿರುದ್ಧದ ಟೂರ್ನಿಗಳಲ್ಲಿ ಧವನ್ ಸಾಕಷ್ಟು ಹೆಣಗಾಡಿದ್ದಾರೆ. ಅದ್ದರಿಂದ ನಾನು ಇಂಗ್ಲೆಂಡ್ ಟೆಸ್ಟ್ ಸರಣಿಯ ಆರಂಭಿಕರಾಗಿ ಮುರಳಿ ವಿಜಯ್, ಕೆಎಲ್ ರಾಹುಲ್ ಜೋಡಿಯನ್ನು ಆಯ್ಕೆ ಮಾಡುತ್ತೇನೆ ಎಂದಿದ್ದಾರೆ.

    ಶಿಖರ್ ಧವನ್ ತವರಿನಲ್ಲಿ ಆಡಿರುವ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಸದ್ಯ ತಂಡದ ಆಡಳಿತ ಮಂಡಳಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಗಂಗೂಲಿ ಹೇಳಿದರು.

    ಸದ್ಯ ಮಾಧ್ಯಮ ಕ್ರಮಾಂಕದಲ್ಲಿಯೂ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿರುವುದರಿಂದ ಚೇತೇಶ್ವರ ಪೂಜಾರ ಸ್ಥಾನದಲ್ಲಿ ರಾಹುಲ್‍ರನ್ನು ಕಣಕ್ಕೆ ಇಳಿಸಬೇಕೆಂಬ ಚರ್ಚೆ ಕ್ರಿಕೆಟ್ ವಿಮರ್ಶಕರಿಂದ ಕೇಳಿಬಂದಿದೆ. ಈ ಕುರಿತು ಖಾಸಗಿ ಮಾಧ್ಯಮದೊಂದಿಗೆ ಶುಕ್ರವಾರ ತಮ್ಮ ಅಭಿಪ್ರಾಯ ಹಂಚಿಕೊಂಡ ಇಂಗ್ಲೆಂಡ್ ತಂಡದ ಮಾಜಿ ವೇಗಿ ಡ್ಯಾರೆನ್ ಗಫ್ ಇತ್ತೀಚಿನ ಪ್ರದರ್ಶನಗಳನ್ನು ಅವಲೋಕಿಸಿದರೆ ಪೂಜಾರ ಆಡುವ 11ರ ಬಳಗಕ್ಕೆ ಫಿಟ್ ಎಂದು ಕಾಣುತ್ತಿಲ್ಲ. ಈ ಸ್ಥಾನದಲ್ಲಿ ರಾಹುಲ್‍ಗೆ ಅವಕಾಶ ನೀಡುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಚೇತೇಶ್ವರ ಪೂಜಾರ ಟೆಸ್ಟ್ ಕ್ರಿಕೆಟ್‍ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದು, 50.34 ರ ಸರಾಸರಿ ಯಲ್ಲಿ 4,531 ರನ್ ಗಳಿಸಿದ್ದಾರೆ. ಆದರೆ ಇತ್ತೀಚೆಗೆ ಅವರು ಭಾಗವಹಿಸಿದ್ದ ಕೌಟಿ ಚಾಂಪಿಯನ್ ಶಿಪ್ ನಲ್ಲಿ 14.33 ಸರಾಸರಿಯಲ್ಲಿ ಕೇವಲ 172 ರನ್ ಮಾತ್ರ ಗಳಿಸಿ ನಿರಾಸೆ ಮೂಡಿಸಿದ್ದರು.

    ಕೆಎಲ್ ರಾಹುಲ್ ಎಸ್ಸೆಕ್ಸ್ ತಂಡ ವಿರುದ್ಧ ನಡೆದ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 58 ರನ್ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದು ಅಜೇಯ 36 ರನ್ ಗಳಿಸಿ ಭರವಸೆ ಮೂಡಿಸಿದ್ದರು.

     

  • ಕೆಎಲ್ ರಾಹುಲ್‍ರನ್ನ ತಂಡದಿಂದ ಕೈ ಬಿಟ್ಟಿದಕ್ಕೆ ಸೌರವ್ ಗಂಗೂಲಿ ಗರಂ

    ಕೆಎಲ್ ರಾಹುಲ್‍ರನ್ನ ತಂಡದಿಂದ ಕೈ ಬಿಟ್ಟಿದಕ್ಕೆ ಸೌರವ್ ಗಂಗೂಲಿ ಗರಂ

    ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕರ ಸೌರವ್ ಗಂಗೂಲಿ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ಟೀಂ ಇಂಡಿಯಾ ಬ್ಯಾಟಿಂಗ್ ಬಲಗೊಳಿಸಲು ಉತ್ತಮ ಫಾರ್ಮ್ ಹೊಂದಿರುವ ಕೆಎಲ್ ರಾಹುಲ್ ಅವರ ಅಗತ್ಯತೆ ಇದೆ ಎಂದು ಸಮರ್ಥನೆ ನೀಡಿದರು.

    ಟೀಂ ಇಂಡಿಯಾ ಬ್ಯಾಟಿಂಗ್ ಕ್ರಮಾಂಕದಲ್ಲಿ 4ನೇ ಸ್ಥಾನ ತುಂಬುವ ಸಮರ್ಥ ಆಟಗಾರ ಯಾರು ಎಂಬ ಪ್ರಶ್ನೆಗೆ ಉತ್ತರಿಸಿ, ಕೆಎಲ್ ರಾಹುಲ್ ಈ ಸ್ಥಾನವನ್ನು ತುಂಬಲು ಸಮರ್ಥರಾಗಿದ್ದಾರೆ. ಯಾವುದೇ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಮೊದಲ ನಾಲ್ವರು ಬ್ಯಾಟ್ಸ್ ಮನ್ ಗಳು ಬಲಿಷ್ಠರಾಗಿರಬೇಕು. ಅಲ್ಲದೇ ಯಾವುದೇ ಆಟಗಾರರನ ವೃತ್ತಿ ಜೀವನದ ಆರಂಭದಲ್ಲಿ ಮೊದಲ 15 ಪಂದ್ಯಗಳನ್ನು ಯಾವುದೇ ಒತ್ತಡವಿಲ್ಲದೇ ಆಡಲು ಅವಕಾಶ ನೀಡಬೇಕು. ನಾನು ಕೆಎಲ್ ರಾಹುಲ್ ಗೆ 15 ಪಂದ್ಯಗಳನ್ನು ನೀಡುತ್ತಿದ್ದೆ ಎಂದು ಹೇಳಿದರು.

    ಇದೇ ವೇಳೆ ಸದ್ಯ ಟೀಂ ಇಂಡಿಯಾದ 5,6,7 ಬ್ಯಾಟಿಂಗ್ ಕ್ರಮಾಂಕದಲ್ಲಿ ಧೋನಿ, ದಿನೇಶ್ ಕಾರ್ತಿಕ್, ರೈನಾ ಸೂಕ್ತ ಎಂದು ತಿಳಿಸಿದರು. ಅಂದಹಾಗೇ ಇಂಗ್ಲೆಂಡ್ ವಿರುದ್ಧ ಕೊನೆಯ ಮಂಗಳವಾರ ನಡೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿ 22 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು.

    ವಿರಾಟ್ ಕೊಹ್ಲಿ ತಂಡದ ನಾಯಕತ್ವದ ತಂಡದಲ್ಲಿ ಸದ್ಯ ರೋಹಿತ್ ಹಾಗೂ ವಿರಾಟ್ ಹೆಚ್ಚಿನ ಒತ್ತಡ ಎದುರಿಸುತ್ತಿದ್ದು, ಕೆಎಲ್ ರಾಹುಲ್ ಅಥವಾ ರಹಾನೆ ಅವರನ್ನು ಬಳಸಿಕೊಳ್ಳಬೇಕಿದೆ. ಇದಕ್ಕೆ ಸೂಕ್ತ ಉದಾಹರಣೆ ದಕ್ಷಿಣ ಆಫ್ರಿಕಾ ವಿರುದ್ಧದ ರಣಿಯಲ್ಲಿ ಕೊಹ್ಲಿ ನಂ.3 ಕ್ರಮಾಂಕದಲ್ಲಿ ಬ್ಯಾಟ್ ಬಿಸಿ 6 ಪಂದ್ಯಗಳಲ್ಲಿ 3 ಶತಕ ಸಿಡಿಸಿದರು. ಕೊಹ್ಲಿ ಶತಕ ಗಳಿಸಿದರೆ ಮಾತ್ರ ತಂಡ ಜಯದ ನಿರೀಕ್ಷೆಯಲ್ಲಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • 2019ರ ವಿಶ್ವಕಪ್ ಗೆದ್ದರೆ ಕೊಹ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸುತ್ತಾರೆ: ಸೌರವ್ ಗಂಗೂಲಿ

    2019ರ ವಿಶ್ವಕಪ್ ಗೆದ್ದರೆ ಕೊಹ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸುತ್ತಾರೆ: ಸೌರವ್ ಗಂಗೂಲಿ

    ಕೋಲ್ಕತ್ತಾ: ಟೀಂ ಇಂಡಿಯಾ ಮುಂಬರುವ 2019ರ ವಿಶ್ವಕಪ್ ಕಪ್ ಗೆದ್ದರೆ ನಾಯಕ ವಿರಾಟ್ ಕೊಹ್ಲಿ ತಮ್ಮ ಶರ್ಟ್ ಬಿಚ್ಚಿ ಇಂಗ್ಲೆಂಡ್ ನ ಆಕ್ಸ್ ಫರ್ಡ್ ಬೀದಿಗಳಲ್ಲಿ ಕಪ್ ಹಿಡಿದು ಸಂಭ್ರಮಿಸುತ್ತಾರೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

    ಭಾರತದ ಇತಿಹಾಸ ತಜ್ಞ ಬೋರಿಯಾ ಮಜುಂದಾರ್ ಅವರ `ಎಲೆವೆನ್ ಗಾಡ್ಸ್ ಅಂಡ್ ಎ ಬಿಲಿಯನ್ ಇಂಡಿಯನ್ಸ್’ ಕೃತಿ ಬಿಡುಗಡೆ ಸಮಾರಂಭದಲ್ಲಿ ಕೊಹ್ಲಿಯೊಂದಿಗೆ ಭಾಗವಹಿಸಿದ ವೇಳೆ ಸೌರವ್ ಈ ಮಾತು ಹೇಳಿದ್ದಾರೆ.

    ಕ್ರಿಕೆಟ್ ಕಾಶಿ ಎಂದೇ ಹೆಸರು ಪಡೆದಿರುವ ಇಂಗ್ಲೆಂಡ್ ನಲ್ಲಿ ನಾಟ್ ವೆಸ್ಟ್ ಕ್ರಿಕೆಟ್ ಸರಣಿಯ ಫೈನಲ್ ಪಂದ್ಯ ಗೆದ್ದ ವೇಳೆ ಗಂಗೂಲಿ ತಮ್ಮ ಶರ್ಟ್ ಬಿಚ್ಚಿ ಸಂಭ್ರಮಿಸಿದರು. ಈ ಘಟನೆಯನ್ನು ಕಾರ್ಯಕ್ರಮದ ವೇಳೆ ನೆನಪಿಸಿಕೊಂಡ ಗಂಗೂಲಿ, ಮುಂದಿನ 2019 ರ ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆದ್ದರೆ ಕೊಹ್ಲಿ ಸಹ ಶರ್ಟ್ ಬಿಚ್ಚಿ ಸಂಭ್ರಮಿಸುತ್ತಾರೆ. ಕ್ಯಾಮೆರಾಗಳಿಗೆ ಕೊಹ್ಲಿ ಅವರ ಸಿಕ್ಸ್ ಪ್ಯಾಕ್ ಕಾಣಲಿದೆ ಎಂದರು. ಈ ವೇಳೆ ಪಕ್ಕದಲ್ಲೇ ಕುಳಿತಿದ್ದ ಕೊಹ್ಲಿ, ಗಂಗೂಲಿ ಮಾತಿಗೆ ಸಮ್ಮತಿಸಿದರು.

    ಮುಂಬರುವ ಇಂಗೆಂಡ್ ಹಾಗೂ ಆಸ್ಟ್ರೇಲಿಯಾ ಸರಣಿಯಲ್ಲೂ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತದೆ ಎಂಬ ವಿಶ್ವಾಸವನ್ನು ಗಂಗೂಲಿ ವ್ಯಕ್ತಪಡಿಸಿದರು.

    ಗಂಗೂಲಿ ಶರ್ಟ್ ಬಿಚ್ಚಿ ಸಂಭ್ರಮಿಸಿದ್ದು ಏಕೆ?
    2002 ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ 3-3 ಸಮಬಲದೊಂದಿಗೆ ಮುಕ್ತಾಯಗೊಂಡಿತ್ತು. ಮುಂಬೈನಲ್ಲಿ ನಡೆದ 6ನೇ ಪಂದ್ಯದಲ್ಲಿ ಭಾರತ ಕೊನೆಯ 6 ಎಸೆತದಲ್ಲಿ 2 ವಿಕೆಟ್ ಗಳ ಸಹಾಯದಿಂದ 11 ರನ್ ಗಳನ್ನು ಗಳಿಸಬೇಕಿತ್ತು. ಫ್ಲಿಂಟಾಫ್ ಎಸೆದ ಕೊನೆಯ ಓವರ್ ನಲ್ಲಿ ಭಾರತ ಎಲ್ಲ ವಿಕೆಟ್ ಕಳೆದುಕೊಂಡು 250 ರನ್‍ಗಳಿಗೆ ಆಲೌಟ್ ಆಗಿತ್ತು. 5 ರನ್ ಗಳಿಂದ ಪಂದ್ಯ ಜಯಿಸಿದ್ದನ್ನು ಕಂಡ ಫ್ಲಿಂಟಾಫ್ ಶರ್ಟ್ ಬಿಚ್ಚಿ ಸಂಭ್ರಮಿಸಿದ್ದರು.

    ಈ ಸರಣಿಯ ನಂತರ ನಾಟ್‍ವೆಸ್ಟ್ ಸರಣಿಯಲ್ಲಿ ಪಾಲ್ಗೊಂಡಲು ಟೀಂ ಇಂಡಿಯಾ ಇಂಗ್ಲೆಂಡಿಗೆ ಪ್ರಯಾಣಿಸಿತ್ತು. ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಸೋಲುವತ್ತ ಮುಖಮಾಡಿತ್ತು. 325 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತ 146 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಜೊತೆಯಾದ ಮೊಹಮ್ಮದ್ ಕೈಫ್ ಮತ್ತು ಯುವರಾಜ್ 7ನೇ ವಿಕೆಟ್‍ಗೆ 121 ರನ್ ಜೊತೆಯಾಟವಾಡಿ ಭಾರತಕ್ಕೆ ಗೆಲುವವನ್ನು ತಂದುಕೊಟಿದ್ದರು. ಕೈಫ್ ಔಟಾಗದೇ 87 ರನ್ ಹೊಡೆದಿದ್ದರೆ ಯುವರಾಜ್ 69 ರನ್ ಹೊಡೆದಿದ್ದರು. ಅಂತಿಮವಾಗಿ ಇನ್ನೂ 3 ಎಸೆತ ಬಾಕಿ ಇರುವಂತೆಯೇ ಭಾರತ ಪಂದ್ಯವನ್ನು ಗೆದ್ದಿತ್ತು. ಭಾರತ ಜಯಗಳಿಸಿದ್ದನ್ನು ಕಂಡು ನಾಯಕ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಸಂತಸ ವ್ಯಕ್ತಪಡಿಸಿದ್ದರು.

  • ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

    ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

    ನವದೆಹಲಿ: 2003ರ ವಿಶ್ವಕಪ್ ವೇಳೆ ಎಂಎಸ್ ಧೋನಿ ಟೀಂ ಇಂಡಿಯಾದ ಸದಸ್ಯರಾಗಿ ಇರುತ್ತಿದ್ದರೆ ಪಂದ್ಯದ ಫಲಿತಾಂಶವೇ ಬದಲಾಗುತಿತ್ತು ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪ್ರಸ್ತುತ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ, ತಮ್ಮ ಜೀವನವನ್ನು ಆಧರಿಸಿ ಬರೆದಿರುವ `ಎ ಸೆಂಚೂರಿ ಈಸ್ ನಾಟ್ ಇನಫ್’ ಪುಸ್ತಕದಲ್ಲಿ ಕ್ರಿಕೆಟ್ ಜೀವನವನ್ನು ಮೆಲುಕು ಹಾಕಿ ಧೋನಿ ಅವರನ್ನು ಹೊಗಳಿದ್ದಾರೆ.

    ಒತ್ತಡದ ಸನ್ನಿವೇಶದಲ್ಲಿ ಆಟವಾಡಿ ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಆಟಗಾರರನ್ನು ನಾನು ಕೆಲ ವರ್ಷಗಳಿಂದ ಗಮನಿಸುತ್ತಲೇ ಇದ್ದೇನೆ. 2004ರಲ್ಲಿ ಧೋನಿ ನನ್ನ ಗಮನಕ್ಕೆ ಬಂದರು. ಅವರನ್ನು ನೋಡಿದ ಮೊದಲ ದಿನದಿಂದಲೇ ಅವರ ಆಟಕ್ಕೆ ಆಕರ್ಷಿತನಾದೆ ಎಂದು ಬರೆದಿದ್ದಾರೆ.

    ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ 2003ರ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಪಡೆಯ ಬೇಕಾಯಿತು. ಆದರೆ ಅಂದು ಧೋನಿ ನನ್ನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಪಂದ್ಯದ ಫಲಿತಾಂಶ ಬೇರೆಯಾಗಿರುತ್ತಿತ್ತು. ಈ ವೇಳೆ ಧೋನಿ ರೈಲ್ವೇಯ ಟಿಕೆಟ್ ಕಲೆಕ್ಟರ್ ಆಗಿದ್ದರು. ಇದು ನಂಬಲು ಅಸಾಧ್ಯ ಸಂಗತಿ. ಆದರೆ ಈಗ ಅವರ ಸಾಧನೆಯಿಂದ ಗುರುತಿಸುತ್ತಿರುವುದು ನನಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.

    ಧೋನಿ ಅವರು ಗಂಗೂಲಿ ಅವರ ನಾಯಕತ್ವದಲ್ಲಿ 2004 ರಲ್ಲಿ ಬಾಂಗ್ಲಾ ದೇಶದ ವಿರುದ್ಧದ ಚಿತ್ತಗಾಂಗ್ ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ್ದರು. ಆರಂಭದ ಪಂದ್ಯಗಳಲ್ಲಿ ಧೋನಿ ಆರಂಭಿಕ ಬ್ಯಾಟ್ಸ್ ಮನ್ ಗಳಾಗಿ ಕಣಕ್ಕೆ ಇಳಿಯುತ್ತಿದ್ದರು. ನಂತರ ಧೋನಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಈ ವೇಳೆ ಅವರ ಬ್ಯಾಟಿಂಗ್ ಸ್ಥಾನವನ್ನು ಬದಲಾಯಿಸಿ ಮೂರನೇ ಕ್ರಮಾಂಕದಲ್ಲಿ ಇಳಿಯಲು ಆರಂಭಿಸಿದರು. ಈ ವೇಳೆ ಧೋನಿ ಪಾಕಿಸ್ತಾನದ ವಿರುದ್ಧದ ಏಕದಿನ ಪಂದ್ಯದಲ್ಲಿ ಆಕರ್ಷಕ 148 ರನ್ ಸಿಡಿಸಿ ಶತಕ ಗಳಿಸಿದರು. ಕೆಲ ತಿಂಗಳ ಬಳಿಕ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 183 ರನ್ ಸಿಡಿಸಿದ್ದರು. ಇದನ್ನೂ ಓದಿ: ಕೊಹ್ಲಿಯಂತೆ ಧೋನಿ ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜ ಯಾಕಿಲ್ಲ?

    ಅನಂತರದಲ್ಲಿ 2007 ರಲ್ಲಿ ನಡೆದ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್ ತಂಡದ ನಾಯಕತ್ವವನ್ನು ಧೋನಿ ಅವರಿಗೆ ವಹಿಸಲಾಯಿತು. ಯುವ ಆಟಗಾರರನ್ನೇ ಹೊಂದಿದ್ದ ತಂಡವನ್ನು ಸಮರ್ಥವಾಗಿ ಮುನ್ನಡೆಸಿ ಪಾಕಿಸ್ತಾನದ ವಿರುದ್ಧದ ಫೈನಲ್ ರೋಚಕ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಿದರು.  ಇದನ್ನೂ ಓದಿ: ಆ ಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು – ಪಾಂಡೆ ವಿರುದ್ಧ ಕ್ಯಾಪ್ಟನ್ ಕೂಲ್ ಗರಂ

    ಮೊದಲ ಟಿ20 ವಿಶ್ವಕಪ್ ನಡೆದ ನಾಲ್ಕು ವರ್ಷಗಳ ನಂತರ ಧೋನಿ 2011ರ ಶ್ರೀಲಂಕಾ ವಿರುದ್ಧ ಏಕದಿನ ವಿಶ್ವಕಪ್ ಫೈನಲ್ ನಲ್ಲಿ 78 ಎಸೆತಗಳಲ್ಲಿ 91 ರನ್ ಸಿಡಿಸುವ ಮೂಲಕ ಭಾರತಕ್ಕೆ ಎರಡನೇ ವಿಶ್ವ ಕಪ್ ಗೆಲ್ಲಿಸಿಕೊಟ್ಟು ಇತಿಹಾಸ ನಿರ್ಮಿಸಿದರು. ಆದರೆ ಧೋನಿ ಫೈನಲ್ ಪಂದ್ಯ ಹೊರತು ಪಡಿಸಿ ಸರಣಿಯ ಎಂಟು ಪಂದ್ಯಗಳಲ್ಲಿ ಕ್ರಮವಾಗಿ 31,34,19,12,22,7 ಮತ್ತು 25 ರನ್ ಗಳಿಸಿ ಕೆಟ್ಟ ಫಾರ್ಮ್ ಹೊಂದಿದ್ದರು. ಆದರೆ ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯದಲ್ಲಿ 275 ರನ್ ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಭರ್ಜರಿ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಧೋನಿ ಹಾಗೂ ಗೌತಮ್ ಗಂಭೀರ್ (97) ಜೋಡಿ ನಾಲ್ಕನೇ ವಿಕೆಟ್ ಗೆ 109 ರನ್ ಕಾಣಿಕೆ ನೀಡಿದ್ದರು.

    2013 ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಧೋನಿ ಸಾರಥ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿತ್ತು.  ಇದರೊಂದಿಗೆ ಧೋನಿ ತಮ್ಮ ವೃತ್ತಿ ಜೀವನದಲ್ಲಿ ಐಸಿಸಿ ನಡೆಸುವ ಎಲ್ಲಾ ಟ್ರೋಫಿ ಗಳನ್ನು ಗೆದ್ದ ಏಕೈಕ ನಾಯಕ ಎನ್ನುವ ಹೆಗ್ಗಳಿಕೆ ಪಡೆದಿದ್ದಾರೆ. ಇದನ್ನೂ ಓದಿ: ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ

  • ಗಂಟೆಗೆ 140 ಪ್ಲಸ್ ವೇಗ: ಯುವ ಕ್ರಿಕೆಟಿಗರ ಮೇಲೆ ಕಣ್ಣಿಡಲು ಕೊಹ್ಲಿಗೆ ಗಂಗೂಲಿ ಸಲಹೆ

    ಗಂಟೆಗೆ 140 ಪ್ಲಸ್ ವೇಗ: ಯುವ ಕ್ರಿಕೆಟಿಗರ ಮೇಲೆ ಕಣ್ಣಿಡಲು ಕೊಹ್ಲಿಗೆ ಗಂಗೂಲಿ ಸಲಹೆ

    ನವದೆಹಲಿ: ಟೀಂ ಇಂಡಿಯಾ ಅಂಡರ್ 19ರ ತಂಡದ ಯುವ ವೇಗಿಗಳು ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್‍ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಗಂಟೆಗೆ 140 ಕಿ.ಮೀ ವೇಗದಲ್ಲಿ ಬೌಲ್ ಮಾಡಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

    ಕಿರಿಯ ತಂಡದ ಪ್ರದರ್ಶನ ಕಂಡ ಮಾಜಿ ನಾಯಕ ಸೌರವ್ ಗಂಗೂಲಿ, ಯುವ ಆಟಗಾರರಿಗೆ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿದ್ದು, ಯುವ ಆಟಗಾರರ ಬಗ್ಗೆ ಒಂದು ಕಣ್ಣಿಟ್ಟಿರಿ ಎಂದು ಟೀಂ ಇಂಡಿಯಾ ನಾಯಕ ಕೊಹ್ಲಿ, ಮಾಜಿ ಆಟಗಾರ ವಿವಿಎಸ್ ಲಕ್ಷಣ್ ರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

     

    ಅಂಡರ್ 19 ತಂಡದ ಪ್ರಮುಖ ವೇಗಿಗಳಾದ ಕಮಲೇಶ್ ನಾಗರಕೋಟಿ (18) ಹಾಗೂ ಶಿವಂ ಮಾವಿ(19) ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ವೇಗದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಈ ವೇಳೆ ನಾಗರಕೋಟೆ ಗಂಟೆಗೆ 149 ಕಿ.ಮೀ ವೇಗದಲ್ಲಿ ಬೌಲ್ ಮಾಡಿ ಅಚ್ಚರಿ ಮೂಡಿಸಿದ್ದರು.

    ಅಲ್ಲದೇ ಈ ಕುರಿತು ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್, ಯುವ ಬೌಲರ್ ಗಳ ವೇಗವನ್ನು ತಿಳಿಸುವ ಚಾರ್ಟ್ ಫೋಟೋವನ್ನು ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ.

    ಅಂದ ಹಾಗೆ ರಾಜಸ್ಥಾನ ವೇಗಿ ಕಮಲೇಶ್ ಈ ಹಿಂದೆಯೂ ಸುದ್ದಿಯಾಗಿದ್ದು, ಭಾರತದ ಎ ತಂಡದ ಕ್ರಿಕೆಟ್‍ನಲ್ಲಿ ಗುಜರಾತ್ ವಿರುದ್ಧದ ವಿಜಯ್ ಹಜಾರೆ ಟ್ರೋಫಿಯಲ್ಲಿ ರಾಜಸ್ಥಾನ ಪರ ಮೊಟ್ಟ ಮೊದಲ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದರು.

    ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಅಂಡರ್ 19 ತಂಡದ ನಾಯಕ ಪೃಥ್ವಿ ಶಾ (94), ಮನ್‍ಜೋತ್ ಕಾಲ್ರಾ (86) ಹಾಗೂ ಶುಬ್‍ಮನ್ ಗಿಲ್ (62) ಅವರು ಆಕರ್ಷಕ ಬ್ಯಾಟಿಂಗ್ ಪ್ರದರ್ಶನ ನೀಡಿ 328ನ ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತ್ತು. ಟೀಂ ಇಂಡಿಯಾ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆ ಭಾರತದ ಬೌಲಿಂಗ್ ದಾಳಿ ಎದುರಿಸಲಾಗದೆ 228 ರನ್ ಗೆ ಅಲೌಟ್ ಆಯಿತು. ಇದರೊಂದಿಗೆ ಟೀಮ್ ಇಂಡಿಯಾ 100 ರನ್ ಗಳ ಭರ್ಜರಿ ಜಯ ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

  • ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 19 ಪಂದ್ಯಗಳಲ್ಲಿ ಗೆಲುವು ಪಡೆದು ಟೀಂ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

    ಭಾರತದ ಪರ ಟೆಸ್ಟ್ ನಲ್ಲಿ ಯಶಸ್ವಿ ನಾಯಕನೆಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಧೋನಿ ನೇತೃತ್ವದಲ್ಲಿ 60 ಪಂದ್ಯಗಳನ್ನು ಟೀಂ ಇಂಡಿಯಾ ಆಡಿದ್ದು 27 ರಲ್ಲಿ ಜಯಿಸಿದೆ. ನಂತರ ಸ್ಥಾನದಲ್ಲಿ ಗಂಗೂಲಿ ಇದ್ದು 49 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿ 21 ರಲ್ಲಿ ಗೆಲುವು ಪಡೆದಿದ್ದಾರೆ.

    ಅಂತರಾಷ್ಟ್ರೀಯ ಮಟ್ಟದಲ್ಲಿ ಗರಿಷ್ಠ ಟೆಸ್ಟ್ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ದಕ್ಷಿಣ ಆಫ್ರಿಕಾದ ನಾಯಕ ಗ್ರೇಮ್ ಸ್ಮಿತ್ ಹೆಸರಿನಲ್ಲಿದೆ. 104 ಪಂದ್ಯಗಳನ್ನು ಮುನ್ನಡೆಸಿದ ಸ್ಮಿತ್ 53ರಲ್ಲಿ ಗೆಲುವು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಟಿಂಗ್ ಇದ್ದು, 77 ಪಂದ್ಯಗಳಲ್ಲಿ 48ರಲ್ಲಿ ಗೆಲುವು ಪಡೆದಿದ್ದಾರೆ.

    ತಿಂಗಳ ಹಿಂದೆಯಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯನ್ನು ಭಾರತ 9-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.

     

  • ಗಂಗೂಲಿ ದಾಖಲೆ ಬ್ರೇಕ್ ಮಾಡಿ ಡ್ರೆಸ್ಸಿಂಗ್ ರೂಂನಲ್ಲಿ ಮೌನಕ್ಕೆ ಶರಣಾದ ಧೋನಿ: ವಿಡಿಯೋ ನೋಡಿ

    ಗಂಗೂಲಿ ದಾಖಲೆ ಬ್ರೇಕ್ ಮಾಡಿ ಡ್ರೆಸ್ಸಿಂಗ್ ರೂಂನಲ್ಲಿ ಮೌನಕ್ಕೆ ಶರಣಾದ ಧೋನಿ: ವಿಡಿಯೋ ನೋಡಿ

    ಆಂಟಿಗುವಾ: ಭಾರತದ ವಿರುದ್ಧದ ನಾಲ್ಕನೇಯ ಏಕದಿನ ಪಂದ್ಯವನ್ನು ವೆಸ್ಟ್ ಇಂಡೀಸ್ 11 ರನ್ ಗಳಿಂದ ಗೆದ್ದಿದ್ದು, ಈ ಪಂದ್ಯದಲ್ಲಿ ಧೋನಿ ಡ್ರೆಸ್ಸಿಂಗ್ ರೂಂನಲ್ಲಿ ಬೇಸರದಲ್ಲಿ ಕುಳಿತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತ್ತು. ಸುಲಭ ಸವಾಲನ್ನು ಬೆನ್ನಟ್ಟಿದ್ದ ಭಾರತ 49.4 ಓವರ್ ಗಳಲ್ಲಿ 178 ರನ್ ಗಳಿಗೆ ಆಲೌಟ್ ಆಯ್ತು.

    ಈ ಪಂದ್ಯದಲ್ಲಿ ಧೋನಿ 54 ರನ್ ಹೊಡೆದಿದ್ದರು. ಧೋನಿ ಇಷ್ಟು ರನ್ ಹೊಡೆಯಲು 114 ಎಸೆತಗಳನ್ನು ಎದುರಿಸಿದ್ದರು. ಈ ಇನ್ನಿಂಗ್ಸ್ ನಲ್ಲಿ ಧೋನಿ ಒಂದೇ ಬೌಂಡರಿ ಹೊಡೆದಿದ್ದರು.

    ಪಂದ್ಯ ಸೋತ ಬಳಿಕ ಟೀಂ ಇಂಡಿಯಾ ಆಟಗಾರರು ವೆಸ್ಟ್ ಇಂಡೀಸ್ ತಂಡವನ್ನು ಅಭಿನಂದಿಸುತ್ತಿದ್ದರೆ, ಧೋನಿ ಡ್ರೆಸ್ಸಿಂಗ್ ರೂಂನಲ್ಲಿ ಕುಳಿತಲ್ಲಿಯೇ ಇದ್ದರು. ಈ ವೇಳೆ ಆಟಗಾರರೊಬ್ಬರು ಕೈ ಕುಲುಕಿದಾಗಲೂ ಧೋನಿ ಮನಸ್ಸಿಲ್ಲದ ಮನಸ್ಸನಿಂದ ಶೇಕ್ ಹ್ಯಾಂಡ್ ಮಾಡಿದ್ದರು.

    ಗಂಗೂಲಿ ದಾಖಲೆ ಬ್ರೇಕ್: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಈ ಹಿಂದೆ 2005ರಲ್ಲಿ ಶ್ರೀಲಂಕಾ ವಿರುದ್ಧ  104 ಎಸೆತಗಳಲ್ಲಿ ಅರ್ಧಶತಕ ಹೊಡೆದಿದ್ದರು. ಇಲ್ಲಿಯವರೆಗೆ ಅತಿ ಹೆಚ್ಚು ಎಸೆತಗಳನ್ನು ಎದುರಿಸಿ 50 ರನ್ ಹೊಡೆದ ಟೀಂ ಇಂಡಿಯಾದ ಆಟಗಾರ ಎನ್ನುವ ದಾಖಲೆ ಸೌರವ್ ಗಂಗೂಲಿ ಹೆಸರಿನಲ್ಲಿತ್ತು. ಈಗ ಧೋನಿ 108 ಎಸೆತಗಳಲ್ಲಿ 50 ರನ್ ಹೊಡೆಯುವ ಮೂಲಕ ಈ ದಾಖಲೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

    ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ ಎರಡನೇ ಪಂದ್ಯವನ್ನು ಭಾರತ 105 ರನ್ ಗಳಿಂದ ಗೆದ್ದುಕೊಂಡಿತ್ತು. ಮೂರನೇ ಪಂದ್ಯವನ್ನು ಭಾರತ 93 ರನ್ ಗಳಿಂದ ಗೆದ್ದುಕೊಂಡಿತ್ತು. ನಾಲ್ಕನೇಯ ಪಂದ್ಯವನ್ನು ವಿಂಡೀಸ್ ಗೆದ್ದುಕೊಂಡಿದ್ದು, ಕೊನೆಯ ಪಂದ್ಯ ಜುಲೈ 6ರಂದು ನಡೆಯಲಿದೆ.

    https://twitter.com/CricGif17/status/881625413927133185