Tag: South India

  • ಇನ್‍ ಸ್ಟಾ ಫಾಲೋವರ್ಸ್ – ಯಾರಿಗೆ ಎಷ್ಟು ಮಂದಿ ಅಭಿಮಾನಿಗಳಿದ್ದಾರೆ?

    ಇನ್‍ ಸ್ಟಾ ಫಾಲೋವರ್ಸ್ – ಯಾರಿಗೆ ಎಷ್ಟು ಮಂದಿ ಅಭಿಮಾನಿಗಳಿದ್ದಾರೆ?

    ಹೈದರಾಬಾದ್: ದಕ್ಷಿಣ ಭಾರತದ ಟಾಲಿವುಡ್ ಸ್ಟೈಲಿಶ್ ನಟ ಅಲ್ಲು ಅರ್ಜುನ್ 1.3 ಕೋಟಿ ಫಾಲೋವರ್ಸ್‍ಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹೊಂದಿದ್ದು, ಈ ಮೂಲಕ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಸ್ಟೈಲ್ ಮೂಲಕವೇ ಎಲ್ಲರನ್ನು ಸೆಳೆಯುವ ನಟ ಅಲ್ಲು ಅರ್ಜುನ್. ಇವರಿಗೆ ಕೋಟ್ಯಂತರ ಅಭಿಮಾನಿ ಬಳಗವನ್ನೆ ಹೊಂದಿದ್ದಾರೆ. ಈಗ ಇನ್‍ಸ್ಟಾಗ್ರಾಮ್‍ನಲ್ಲಿಯೂ ಅತೀ ಹೆಚ್ಚು ಫಾಲೋವರ್ಸ್‍ಗಳಿಂದ ಇವರ ಗರಿ ಹೆಚ್ಚಿದೆ. ಅದು ಅಲ್ಲದೆ ಇವರು ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ದಕ್ಷಿಣದ ಮೊದಲ ನಟ ಎಂಬ ಖ್ಯಾತಿಗೂ ಒಳಗಾಗಿದ್ದಾರೆ.ಇದನ್ನೂ ಓದಿ :ಚಂದನವನದಲ್ಲಿ ಸುದೀಪ್ ಸಿನಿ ಜರ್ನಿ

    ದಕ್ಷಿಣ ಭಾರತದ ಸಿನಿಮಾ ನಟರ ಪಟ್ಟಿಯಲ್ಲಿ ವಿಜಯ್ ದೇವರಕೊಂಡ 2ನೇ ಸ್ಥಾನವನ್ನು ಹೊಂದಿದ್ದು, 12.9 ಮಿಲಿಯನ್(1.2 ಕೋಟಿ) ಜನರು ಇನ್‍ಸ್ಟಾದಲ್ಲಿ ಫಾಲೋ ಮಾಡುತ್ತಿದ್ದಾರೆ. ಮಹೇಶ್ ಬಾಬು 71 ಲಕ್ಷ, ಪ್ರಭಾಸ್ 69 ಲಕ್ಷ, ವಿಜಯ್ ಸೇತುಪತಿ 43 ಲಕ್ಷ, ರಾಮ್ ಚರಣ್ 41 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ.ಇದನ್ನೂ ಓದಿ :ಗಂಡನ ಮನೆ ಬಿಟ್ಟು ಹೋದ್ರಾ ಶಿಲ್ಪಾ ಶೆಟ್ಟಿ?

    ಅಲ್ಲು ಅರ್ಜುನ್ ಅವರ ‘ಪುಷ್ಪ’ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದು, ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ಡಿಸೆಂಬರ್‍ಗೆ ಹೋಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಡಾಲಿ ಧನಂಜಯ್ ನಟಿಸಿರುವುದು ಕನ್ನಡಿಗರಿಗೆ ಇನ್ನೂ ಸಂತೋಷ ತಂದಿದ್ದು, ಈ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

    ನಮ್ಮ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಮೂಲಕ ಇಡೀ ಇಂಡಿಯಾದಲ್ಲೇ ಅಲೆ ಎಬ್ಬಿಸಿದ್ದರು. ಇವರು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಿಂದೆ ಬಿದ್ದಿಲ್ಲ. ಇವರಿಗೂ 50 ಲಕ್ಷ ಫಾಲೋವರ್ಸ್ ಮತ್ತು ಟ್ಚೀಟರ್‍ನಲ್ಲಿ 7 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.ಇದನ್ನೂ ಓದಿ :ತಂದೆ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿದ ಬಾಲಕಿ

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 13 ಲಕ್ಷ ಫಾಲೋವರ್ಸ್‍ಗಳನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹೊಂದಿದ್ದು, ತಮ್ಮ ಮೂವೀ ಅಪ್ಡೇಟ್ ಕೊಡುವ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ.

  • ಟ್ವಿಟ್ಟರ್‌ನಲ್ಲಿ ಮಹೇಶ್ ಬಾಬು ಹೊಸ ಮೈಲುಗಲ್ಲು – ದಕ್ಷಿಣ ಭಾರತದಲ್ಲೇ ನಂ.1

    ಟ್ವಿಟ್ಟರ್‌ನಲ್ಲಿ ಮಹೇಶ್ ಬಾಬು ಹೊಸ ಮೈಲುಗಲ್ಲು – ದಕ್ಷಿಣ ಭಾರತದಲ್ಲೇ ನಂ.1

    ಬೆಂಗಳೂರು: ಟ್ವಿಟ್ಟರ್‌ನಲ್ಲಿ ತೆಲುಗಿನ ಫ್ರಿನ್ಸ್ ಮಹೇಶ್ ಬಾಬು ಅವರು ಹೊಸ ದಾಖಲೆಯನ್ನು ಮಾಡಿದ್ದಾರೆ. ಈ ಮೂಲಕ ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಟ್ವಿಟ್ಟರ್ ಫಾಲೋವರ್ಸ್ ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಟ್ವಿಟ್ಟರ್ ನಲ್ಲಿ ದಕ್ಷಿಣ ಭಾರತದ ದಿಗ್ಗಜ ನಟರಾದ ಸೂಪರ್ ಸ್ಟಾರ್ ರಜಿನಿಕಾಂತ್, ಕಮಲ್ ಹಾಸನ್, ಮೋಹನ್‍ಲಾಲ್ ಮತ್ತು ಪ್ರಭಾಸ್ ಈ ಎಲ್ಲಾ ನಟರನ್ನು ಹಿಂದಿಕ್ಕಿದ ಮಹೇಶ್, ದಕ್ಷಿಣ ಭಾರತದ ನಟರಲ್ಲೇ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಮಹೇಶ್ ಬಾಬು ಅವರಿಗೆ 9 ಮಿಲಿಯನ್ (90 ಲಕ್ಷ) ಟ್ವಿಟ್ಟರ್ ಹಿಂಬಾಲಕರು ಇದ್ದಾರೆ.

    ತಮಗೆ 9 ಮಿಲಿಯನ್ ಟ್ವಿಟ್ಟರ್ ಫಾಲೋವರ್ಸ್ ಆಗಿರುವ ಸಂತಸವನ್ನು ಟ್ವಿಟ್ಟರನಲ್ಲೇ ಪೋಸ್ಟ್ ಹಾಕುವ ಮೂಲಕ ಹಂಚಿಕೊಂಡಿರುವ ಮಹೇಶ್ ಬಾಬು, 9 ಮಿಲಿಯನ್ ಫಾಲೋವರ್ಸ್, ನನ್ನ ಹಿಂಬಾಲಕರಿಗೆ ಧನ್ಯವಾದಗಳು. ನನ್ನ ಅದ್ಭುತ ಪಯಾಣದಲ್ಲಿ ನನ್ನ ಜೊತೆ ಇದ್ದು, ಪ್ರೀತಿ ಮತ್ತು ಅಭಿಮಾನವನ್ನು ತೋರಿದ ನಿಮಗೆಲ್ಲರಿಗೂ ನನ್ನ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದಾರೆ.

    ಮಹೇಶ್ ಬಾಬು ಅವರನ್ನು ಬಿಟ್ಟರೆ, ಕಾಲಿವುಡ್ ಸೂಪರ್ ಸ್ಟಾರ್ ಧನುಶ್ ಅವರಿಗೆ 8.9 ಮಿಲಿಯನ್, ಸಮಂತಾ ಅಕ್ಕಿನೇನಿ ಅವರಿಗೆ 7.8 ಮಿಲಿಯನ್, ಮೋಹನ್ ಲಾಲ್ ಅವರಿಗೆ 5.9 ಮಿಲಿಯನ್, ರಜನಿಕಾಂತ್ ಅವರಿಗೆ 5.7 ಮಿಲಿಯನ್, ಕಮಲ್ ಹಾಸನ್ ಅವರಿಗೆ 5.8 ಮಿಲಿಯನ್, ತ್ರಿಶಾ ಅವರಿಗೆ 5.1 ಮಿಲಿಯನ್, ಅಲ್ಲು ಅರ್ಜುನ್ ಅವರಿಗೆ 3.8 ಮಿಲಿಯನ್, ಸೂರ್ಯ ಅವರಿಗೆ 5.5 ಮಿಲಿಯನ್, ಶ್ರುತಿ ಹಾಸನ್ ಅವರಿಗೆ 7.5 ಮಿಲಿಯನ್ ಫಾಲೋವರ್ಸ್ ಇದ್ದಾರೆ.

    ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಟ್ವಿಟ್ಟರ್ ಹಿಂಬಾಲಕರನ್ನು ಹೊಂದಿರುವ ನಟ ಎಂದರೆ ಅದು ಕಿಚ್ಚ ಸುದೀಪ್ ಆಗಿದ್ದು, ಅವರು 2.3 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು, 3.98 ಲಕ್ಷ, ಡಿ ಬಾಸ್ ದರ್ಶನ್ ಅವರು 7.35 ಲಕ್ಷ ಮತ್ತು ಪುನಿತ್ ರಾಜ್ ಕುಮಾರ್ ಅವರು, ಒಂದು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಇನ್ನೂ ನಟಿಯರ ಪೈಕಿ ರಶ್ಮಿಕಾ ಮಂದಣ್ಣ ಅವರಿಗೆ, 1 ಮಿಲಿಯನ್ ಫಾಲೋವರ್ಸ್ ಇದ್ದಾರೆ.

  • ದೆಹಲಿ ಚುನಾವಣೆ – ದಕ್ಷಿಣ ಭಾರತೀಯರ ಮತಗಳ ಮೇಲೆ ಬಿಜೆಪಿ ಕಣ್ಣು

    ದೆಹಲಿ ಚುನಾವಣೆ – ದಕ್ಷಿಣ ಭಾರತೀಯರ ಮತಗಳ ಮೇಲೆ ಬಿಜೆಪಿ ಕಣ್ಣು

    ನವದೆಹಲಿ: ಇನ್ನೈದು ದಿನಗಳಲ್ಲಿ ದೆಹಲಿ ವಿಧಾನಸಭೆಗೆ ಮತದಾನ ನಡೆಯಲಿದೆ. ಈಗಾಗಲೇ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಈ ಬಾರಿ ಕೆಲವು ಕಡೆ ನಿರ್ಣಾಯಕ ಪಾತ್ರ ವಹಿಸುವ ದಕ್ಷಿಣ ಭಾರತೀಯರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.

    ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ಮೂಲದ ಜನರು ದೆಹಲಿಯಲ್ಲಿ ವಾಸವಾಗಿರುವ ಪ್ರದೇಶಗಳನ್ನು ಗುರುತಿಸಿರುವ ಬಿಜೆಪಿ ದಕ್ಷಿಣ ಭಾರತದ ಪ್ರಮುಖ ನಾಯಕರಿಂದ ಪ್ರಚಾರ ನಡೆಸಲು ಮುಂದಾಗಿದೆ.

    ಕೇಂದ್ರ ಸಚಿವರು ಸೇರಿ ಸುಮಾರು 300 ಮಂದಿ ಬಿಜೆಪಿ ಕಾರ್ಯಕರ್ತರು ಎಬಿವಿಪಿ, ಆರ್‌ಎಸ್‌ಎಸ್‌ನ ಸ್ವಯಂ ಸೇವಕರು ಚುನಾವಣಾ ಕಣದಲ್ಲಿ ಪ್ರಚಾರ ನಡೆಸಿದ್ದಾರೆ. ಒಟ್ಟು 70 ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳನ್ನು ಗುರುತಿಸಿದ್ದು, ಪ್ರತಿ ಕ್ಷೇತ್ರಕ್ಕೆ 5-6 ಮಂದಿಯ ತಂಡ ರಚಿಸಲಾಗಿದೆ. ಈ ಗುಂಪುಗಳು ಮನೆ, ಮನೆಯನ್ನು ಸಂಪರ್ಕ ಮಾಡುವ ಮೂಲಕ ಮತಗಳನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

    ಕರ್ನಾಟಕದಿಂದ 35 ಮಂದಿ ಕಾರ್ಯಕರ್ತರು ದೆಹಲಿಯಲ್ಲಿ ಪ್ರಚಾರ ನಡೆಸಿದ್ದು, ಕರ್ನಾಟಕದ ಮತಗಳನ್ನು ಸೆಳೆಯುತ್ತಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ , ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಪ್ರತಾಪ್ ಸಿಂಹಾ, ಶೋಭಾ ಕರಂದ್ಲಾಜೆ ಸೇರಿ ಕೆಲ ಸಂಸದರ ಮೂಲಕ ದೆಹಲಿ ಕನ್ನಡಿಗರ ಮತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಇಬ್ಬರು ಕೇಂದ್ರ ಸಚಿವರು, ದೆಹಲಿಯ ಕನ್ನಡಿಗರು ಸೇರಿ ಇತರೆ ರಾಜ್ಯದ ಕೆಲ ಸಂಘ ಸಂಸ್ಥೆಗಳ ಮುಖಂಡರ ಸಭೆ ನಡೆಸಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

    ಫೆಬ್ರವರಿ 5ರಂದು ದೆಹಲಿ ಕರ್ನಾಟಕ ಸಂಘದಲ್ಲಿ ಕಾರ್ಯಕ್ರಮವೊಂದನ್ನ ಬಿಜೆಪಿ ನಾಯಕ ವೆಂಕಟೇಶ್ ಮೌರ್ಯ ಆಯೋಜಿಸಿದ್ದು, ರಾಜ್ಯ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. ಅಂದು ದೆಹಲಿ ಕನ್ನಡಗರನ್ನು ಪಕ್ಷದತ್ತ ಸೆಳೆಯುವ ಪ್ರಯತ್ನ ಬಿಜೆಪಿ ಮಾಡಲಿದೆ.

  • ಒಂದೂವರೆ ಲಕ್ಷ ಮಕ್ಕಳಿಗೆ ಗ್ರಹಣ ತೋರಿಸಿದ ಪಬ್ಲಿಕ್ ಹೀರೋ ಎ.ಪಿ ಭಟ್

    ಒಂದೂವರೆ ಲಕ್ಷ ಮಕ್ಕಳಿಗೆ ಗ್ರಹಣ ತೋರಿಸಿದ ಪಬ್ಲಿಕ್ ಹೀರೋ ಎ.ಪಿ ಭಟ್

    ಉಡುಪಿ: ಕಂಕಣ ಸೂರ್ಯಗ್ರಹಣವನ್ನು ವಿಶ್ವದ ಕೋಟ್ಯಾಂತರ ಜನ ಕಣ್ತುಂಬಿಕೊಂಡಿದ್ದಾರೆ. ರಾಜ್ಯದ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಅಪರೂಪದ ವಿದ್ಯಮಾನವನ್ನು ಕಣ್ತುಂಬಿಕೊಳ್ಳಲು ಉಡುಪಿಯ ಎ.ಪಿ ಭಟ್ ನಾಲ್ಕು ತಿಂಗಳು ಪಟ್ಟ ಪರಿಶ್ರಮ ಇವತ್ತು ಫಲ ಕೊಟ್ಟಿದೆ.

    ಪಬ್ಲಿಕ್ ಹೀರೋ ಕಾರ್ಯಕ್ರಮ ಮೂಲಕ ಲಕ್ಷ ಮಕ್ಕಳನ್ನು ತಲುಪುವ ಯೋಜನೆ ಹಾಕಿದ್ದ ಎ.ಪಿ.ಭಟ್, ಒಂದೂವರೆ ಲಕ್ಷ ಮಕ್ಕಳು ಗ್ರಹಣ ನೋಡುವಂತೆ ಮಾಡಿದರು. ರಾಜ್ಯರ ಮೂಲೆ ಮೂಲೆ ಮಕ್ಕಳು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿಗೆ ಕರೆಸಿ ಗ್ರಹಣ ತೋರಿಸಿದ್ದಾರೆ. ಈ ಸಂದರ್ಭದಲ್ಲಿ ಪಬ್ಲಿಕ್ ಟಿವಿಗೆ ಧನ್ಯವಾದ ಹೇಳಿದ್ದಾರೆ.

    ಗ್ರಹಣ ವಿಕ್ಷೇಣೆ ಮಾಡಲು ವಿಶೇಷ ವ್ಯವಸ್ಥೆಯನ್ನು ಮಾಡಿದ್ದೇವೂ. ನಮ್ಮ ಫಿನ್ ಹೋಲ್ ಅನ್ನು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಬಳಕೆ ಮಾಡಿದ್ದಾರೆ. ಉಡುಪಿ ಮಾತ್ರವಲ್ಲದೇ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ನಮ್ಮ ಯೋಜನೆ ಯಶಸ್ವಿಯಾಗಿದೆ. ಗ್ರಹಣದ ಕುರಿತು ಇರುವ ಭಯವನ್ನು ಬಿಟ್ಟು ಮಕ್ಕಳಿಗೆ ತೋರಿಸುವುದು ನಮ್ಮ ಉದ್ದೇಶವಾಗಿತ್ತು. ಆದ್ದರಿಂದಲೇ ಕಂಕಣ ಸೂರ್ಯಗ್ರಹಣ ಸಂಭ್ರಮ ಎಂದು ಕಾರ್ಯಕ್ರಮಕ್ಕೆ ಹೆಸರಿಟ್ಟೇವೂ. ದಕ್ಷಿಣ ಭಾರತದಲ್ಲಿ ಮತ್ತೆ ಕಂಕಣ ಸೂರ್ಯಗ್ರಹಣ ಕಾಣಿಸುವುದು 2064ಕ್ಕೆ ಮಾತ್ರ. ಆದ್ದರಿಂದಲೇ ಕಂಕಣ ಸೂರ್ಯಗ್ರಹಣವನ್ನು ಹೆಚ್ಚಿನ ಮಕ್ಕಳಿಗೆ ತೋರಿಸಲು ಯೋಜನೆ ರೂಪಿಸಲಾಗಿತ್ತು. ಉಡುಪಿ ಕಾಲೇಜಿನಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ ಎಂದು ಪಬ್ಲಿಕ್ ಟಿವಿ ಧನ್ಯವಾದ ತಿಳಿಸಿದರು.

  • ಹಿಂದಿ ಹೇರಿಕೆ ಕುರಿತು ಹೇಳಿಲ್ಲ, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ- ಅಮಿತ್ ಶಾ

    ಹಿಂದಿ ಹೇರಿಕೆ ಕುರಿತು ಹೇಳಿಲ್ಲ, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ- ಅಮಿತ್ ಶಾ

    – 2ನೇ ಭಾಷೆಯಾಗಿ ಹಿಂದಿ ಕಲಿಯಲು ವಿನಂತಿಸಿದ್ದೆ

    ನವದೆಹಲಿ: ಹಿಂದಿ ಹೇರಿಕೆಯ ಕುರಿತ ಹೇಳಿಕೆಯನ್ನು ನಾನು ನೀಡಿಲ್ಲ. ಮಾತೃ ಭಾಷೆ ನಂತರ 2ನೇ ಭಾಷೆಯಾಗಿ ಹಿಂದಿ ಬಳಸಲು ತಿಳಿಸಿದ್ದೇನೆ. ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಂದಿಗೂ ಇತರ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರುವ ಕುರಿತು ಹೇಳಿಕೆ ನೀಡಿಲ್ಲ. ಆಯಾ ರಾಜ್ಯಗಳ ಮಾತೃಭಾಷೆಯ ನಂತರ ಹಿಂದಿಯನ್ನು 2ನೇ ಭಾಷೆಯಾಗಿ ಕಲಿಯಬೇಕೆಂದು ಮಾತ್ರ ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.

    ಅಲ್ಲದೆ ನಾನೇ ಹಿಂದಿಯೇತರ ರಾಜ್ಯ ಗುಜರಾತ್‍ನಿಂದ ಬಂದವನು. ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ. ಇದೇ ಅವರ ಆಯ್ಕೆಯಾಗಿದೆ ಎಂದು ಆರೋಪಿಸಿದ್ದಾರೆ.

    ಅಮಿತ್ ಶಾ ಅವರ ಏಕಭಾಷಾ ಸೂತ್ರದ ಹೇಳಿಕೆ ಕುರಿತು ದಕ್ಷಿಣ ಭಾರತದ ರಾಜ್ಯಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅಲ್ಲದೆ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹಿಂದಿಯೇತರ ರಾಜ್ಯಗಳಲ್ಲಿ ಭಾಷೆಯನ್ನು ಹೇರಲು ಈ ಹಿಂದೆ ಸಾಕಷ್ಟು ಬಾರಿ ಪ್ರಯತ್ನ ಮಾಡಲಾಗಿದೆ ಆದರೂ ಅದು ಸಾಧ್ಯವಾಗಿಲ್ಲ. ಇದೀಗ ಏಕ ಭಾಷಾ ಸೂತ್ರವನ್ನು ಅಮಿತ್ ಶಾ ಮತ್ತೊಮ್ಮೆ ಉಚ್ಛರಿಸಿದ್ದರು.

    `ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದರು. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು `ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದರು.

    ಭಾರತವನ್ನು ಒಂದುಗೂಡಿಸುವ ಸಾಮಥ್ರ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದರು.

    ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ದೇಶದಲ್ಲಿನ ಎಲ್ಲ ಅಧಿಕೃತ ಭಾಷೆಗಳು ಸಮಾನವಾಗಿವೆ. ಅದೇ ರೀತಿ ಕರ್ನಾಟಕದಲ್ಲಿಯೂ ಕನ್ನಡ ಪ್ರಮುಖ ಭಾಷೆಯಾಗಿದೆ. ಕನ್ನಡದ ಮಹತ್ವ ಹಾಗೂ ಅಸ್ಮಿತೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿಯಾಗುವುದಿಲ್ಲ. ಅಲ್ಲದೆ, ಕನ್ನಡ ಹಾಗೂ ರಾಜ್ಯದ ಸಂಸ್ಕೃತಿಯನ್ನು ಬೆಳೆಸಲು ಕಟಿಬದ್ಧರಾಗಿದ್ದೇವೆ ಎಂದು ಅಮಿತ್ ಶಾ ಹೇಳಿಕೆಗೆ ಕುಟುಕ್ಕಿದ್ದರು.

    ಈ ಕುರಿತು ನಟ-ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿ, ಭಾರತ ಗಣತಂತ್ರವಾದಾಗಲೇ ವೈವಿಧ್ಯತೆಯಲ್ಲಿ ಏಖತೆಯಿಂದ ಕೂಡಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದೀಗ ಯಾವುದೇ ಶಾ, ಸುಲ್ತಾನ್ ಅಥವಾ ಸಾಮ್ರಾಟ್ ಇದನ್ನು ಹುಸಿಗೊಳಿಸಬಾರದು ಎಂದು ಸೋಮವಾರ ಪ್ರತಿಕ್ರಿಯಿಸಿದ್ದರು.

  • ಏಕಭಾಷೆ ಪರಿಕಲ್ಪನೆ ಸಾಧ್ಯವಿಲ್ಲ – ಅಮಿತ್ ಶಾಗೆ ರಜನಿಕಾಂತ್ ಟಾಂಗ್

    ಏಕಭಾಷೆ ಪರಿಕಲ್ಪನೆ ಸಾಧ್ಯವಿಲ್ಲ – ಅಮಿತ್ ಶಾಗೆ ರಜನಿಕಾಂತ್ ಟಾಂಗ್

    ಚೆನ್ನೈ: ಏಕಭಾಷೆ ಪರಿಕಲ್ಪನೆ ದೇಶದ ಬೆಳವಣಿಗೆಗೆ ಒಳ್ಳೆಯದು. ದುರದೃಷ್ಟಕರ ಸಂಗತಿ ಎಂದರೆ ನಮ್ಮ ದೇಶದಲ್ಲಿ ಇದು ಸಾಧ್ಯವಿಲ್ಲದಿರುವುದು. ಹೀಗಾಗಿ ಯಾವುದೇ ಭಾಷೆಯನ್ನು ಯಾರ ಮೇಲೆಯೂ ಹೇರಲು ಸಾಧ್ಯವಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯ ಪಟ್ಟಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಏಕಭಾಷಾ ಸೂತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಏಕ ಭಾಷಾ ಸೂತ್ರ ಭಾರತಕ್ಕೆ ಮಾತ್ರವಲ್ಲ ಯಾವುದೇ ದೇಶದ ಏಕತೆ ಹಾಗೂ ಪ್ರಗತಿಗೆ ಒಳ್ಳೆಯದು. ಆದರೆ ದುರದೃಷ್ಟವೆಂಬಂತೆ ನಮ್ಮ ದೇಶದಲ್ಲಿ ಸಾಮಾನ್ಯ ಭಾಷೆಯನ್ನು ತರಲು ಸಾಧ್ಯವಿಲ್ಲ. ಆದ್ದರಿಂದ ನೀವು ಯಾವುದೇ ಭಾಷೆಯನ್ನು ಯಾರ ಮೇಲೆಯೂ ಹೇರಲು ಸಾಧ್ಯವಿಲ್ಲ ಎಂದು ರಜನಿಕಾಂತ್ ತಿಳಿಸಿದ್ದಾರೆ.

    ವಿಶೇಷವಾಗಿ ತಮಿಳುನಾಡಿನಲ್ಲಿ ಮಾತ್ರವಲ್ಲ, ಹಿಂದಿ ಹೇರಿದಲ್ಲಿ ದಕ್ಷಿಣ ಭಾರತ ಯಾವುದೇ ರಾಜ್ಯಗಳು ಅದನ್ನು ಸ್ವೀಕರಿಸುವುದಿಲ್ಲ. ಉತ್ತರ ಭಾರತದಲ್ಲಿಯೂ ಅನೇಕ ರಾಜ್ಯಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

    ಹಿಂದಿಯೇತರ ರಾಜ್ಯಗಳಲ್ಲಿ ಭಾಷೆಯನ್ನು ಹೇರಲು ಈ ಹಿಂದೆ ಸಾಕಷ್ಟು ಬಾರಿ ಪ್ರಯತ್ನ ಮಾಡಲಾಗಿದೆ ಆದರೂ ಅದು ಸಾಧ್ಯವಾಗಿಲ್ಲ. ಇದೀಗ ಏಕ ಭಾಷಾ ಸೂತ್ರವನ್ನು ಅಮಿತ್ ಶಾ ಮತ್ತೊಮ್ಮೆ ಉಚ್ಛರಿಸಿದ್ದರು.

    `ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದರು. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು `ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದರು.

    ಭಾರತವನ್ನು ಒಂದುಗೂಡಿಸುವ ಸಾಮಥ್ರ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದರು.

    ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ದೇಶದಲ್ಲಿನ ಎಲ್ಲ ಅಧಿಕೃತ ಭಾಷೆಗಳು ಸಮಾನವಾಗಿವೆ. ಅದೇ ರೀತಿ ಕರ್ನಾಟಕದಲ್ಲಿಯೂ ಕನ್ನಡ ಪ್ರಮುಖ ಭಾಷೆಯಾಗಿದೆ. ಕನ್ನಡದ ಮಹತ್ವ ಹಾಗೂ ಅಸ್ಮಿತೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿಯಾಗುವುದಿಲ್ಲ. ಅಲ್ಲದೆ, ಕನ್ನಡ ಹಾಗೂ ರಾಜ್ಯದ ಸಂಸ್ಕೃತಿಯನ್ನು ಬೆಳೆಸಲು ಕಟಿಬದ್ಧರಾಗಿದ್ದೇವೆ ಎಂದು ಅಮಿತ್ ಶಾ ಹೇಳಿಕೆಗೆ ಕುಟುಕ್ಕಿದ್ದರು.

    ಈ ಕುರಿತು ನಟ-ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿ, ಭಾರತ ಗಣತಂತ್ರವಾದಾಗಲೇ ವೈವಿಧ್ಯತೆಯಲ್ಲಿ ಏಖತೆಯಿಂದ ಕೂಡಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದೀಗ ಯಾವುದೇ ಶಾ, ಸುಲ್ತಾನ್ ಅಥವಾ ಸಾಮ್ರಾಟ್ ಇದನ್ನು ಹುಸಿಗೊಳಿಸಬಾರದು ಎಂದು ಸೋಮವಾರ ಪ್ರತಿಕ್ರಿಯಿಸಿದ್ದರು.

  • ಹಿಂದಿ ಬಗ್ಗೆ ಅಭಿಮಾನ ಮೆರೆದಿದ್ದ ಅಮಿತ್ ಶಾಗೆ ಬಿಎಸ್‍ವೈ ಟಾಂಗ್

    ಹಿಂದಿ ಬಗ್ಗೆ ಅಭಿಮಾನ ಮೆರೆದಿದ್ದ ಅಮಿತ್ ಶಾಗೆ ಬಿಎಸ್‍ವೈ ಟಾಂಗ್

    ಬೆಂಗಳೂರು: ಹಿಂದಿ ಹೇರಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆಗೂ ಮೌನ ಮುರಿದಿದ್ದು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಟಾಂಗ್ ನೀಡಿದ್ದಾರೆ.

    ಅಮಿತ್ ಶಾ ಅವರ ಒಂದು ದೇಶ, ಒಂದೇ ಭಾಷೆ ಹೇಳಿಕೆ ಕುರಿತು ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದ್ದು, ದಕ್ಷಿಣ ಭಾರತದ ರಾಜಕೀಯ ನಾಯಕರು ಅವರ ಹೇಳಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸಿ, ಖಂಡನೆ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಸಿಎಂ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ದೇಶದಲ್ಲಿನ ಎಲ್ಲ ಅಧಿಕೃತ ಭಾಷೆಗಳು ಸಮಾನವಾಗಿವೆ. ಅದೇ ರೀತಿ ಕರ್ನಾಟಕದಲ್ಲಿಯೂ ಕನ್ನಡ ಪ್ರಮುಖ ಭಾಷೆಯಾಗಿದೆ. ಕನ್ನಡದ ಮಹತ್ವ ಹಾಗೂ ಅಸ್ಮಿತೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿಯಾಗುವುದಿಲ್ಲ. ಅಲ್ಲದೆ, ಕನ್ನಡ ಹಾಗೂ ರಾಜ್ಯದ ಸಂಸ್ಕೃತಿಯನ್ನು ಬೆಳೆಸಲು ಕಟಿಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

    `ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದರು. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು `ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದರು.

    ಭಾರತವನ್ನು ಒಂದುಗೂಡಿಸುವ ಸಾಮರ್ಥ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದರು.

  • ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಪ್ರವಾಸ ಉತ್ತಮವಾಗಿತ್ತು: ನವಜೋತ್ ಸಿಂಗ್

    ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಪ್ರವಾಸ ಉತ್ತಮವಾಗಿತ್ತು: ನವಜೋತ್ ಸಿಂಗ್

    ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಪದವಿ ಸ್ವೀಕಾರ ಸಮಾರಂಭದಲ್ಲಿ ಪಾಕ್ ರಕ್ಷಣಾ ಮುಖ್ಯಸ್ಥರನ್ನು ತಬ್ಬಿಕೊಂಡಿದ್ದನ್ನು ಸಮರ್ಥಿಸಿಕೊಂಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ, ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು, ದಕ್ಷಿಣ ಭಾರತದ ಭೇಟಿಗಿಂತ ಪಾಕಿಸ್ತಾನದ ಭೇಟಿ ನನಗೆ ಉತ್ತಮವಾಗಿತ್ತು ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

    ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಧು ಆಪ್ ಮುಖಂಡರೊಬ್ಬರ ಪ್ರಶ್ನೆಗೆ ಉತ್ತರಿಸಿ ಈ ಹೇಳಿಕೆ ನೀಡಿದ್ದಾರೆ. ನಾನು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡ ವೇಳೆ ಅಲ್ಲಿನ ಭಾಷೆಯನ್ನು ಅರ್ಥೈಸಿಕೊಳ್ಳುವುದು ಕಷ್ಟವಾಗಿತ್ತು. ಅಲ್ಲದೇ ಆಹಾರ, ಸಾಂಪ್ರದಾಯ, ಸಂಸ್ಕೃತಿ ಎಲ್ಲವೂ ಕೂಡ ಭಿನ್ನವಾಗಿತ್ತು. ಆದರೆ ನಾನು ಪಾಕಿಸ್ತಾನಕ್ಕೆ ಭೇಟಿ ನೀಡಿದ ವೇಳೆ ಎಲ್ಲವೂ ಒಂದೇ ಆಗಿತ್ತು. ಇಂಗ್ಲಿಷ್ ಭಾಷೆಯಲ್ಲಿ 10 ಬಾರಿ ನಿಮ್ಮನ್ನು ಬೈಯುವುದಕ್ಕಿಂತ ಒಮ್ಮೆ ಪಂಜಾಬಿ ಭಾಷೆಯಲ್ಲಿ ಬೈದರೆ ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿದ್ದಾರೆ.

    ತನ್ನದೇ ದೇಶದ ಸಂಸ್ಕೃತಿ ಹಾಗೂ ಭಾಷೆಯಗೆ ಗೌರವ ನೀಡದೇ ಪಾಕ್ ಭೇಟಿ ಅತ್ಯುತ್ತಮ ಎಂದು ಹೇಳಿರುವ ಸಿಧು ನಡೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡುವ ಪಂಜಾಬ್ ಅಕಾಲಿ ದಳದ ಹಿರಿಯ ಮುಖಂಡರೊಬ್ಬರು, ಭಾರತವನ್ನು ತುಳಿಯಲೆಂದೇ ಪಾಕಿಸ್ತಾನವನ್ನು ಹೊಗಳುತ್ತಾರೆ ಎಂದು ಟೀಕಿಸಿದ್ದಾರೆ.

    ಇತ್ತ ಬಿಜೆಪಿ ಪಕ್ಷದ ಮುಖಂಡರು ಕೂಡ ಸಿಧು ಪಾಕಿಸ್ತಾನದ ಮೇಲಿನ ಪ್ರೀತಿಯನ್ನು ಟೀಕಿಸಿದ್ದು, ಇಂತಹ ಹೇಳಿಕೆಗಳು ಸಹಿಸಿಕೊಳ್ಳುವಂತದಲ್ಲ ಎಂದು ಕಿಡಿಕಾರಿದ್ದಾರೆ. ದಕ್ಷಿಣ ಭಾರತವನ್ನು ಪಾಕಿಸ್ತಾನಕ್ಕೆ ಹೊಲಿಕೆ ಮಾಡಿರುವುದು ಖಂಡನಾರ್ಹವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ನಳಿನ್ ಕೊಹ್ಲಿ ತಿಳಿಸಿದ್ದಾರೆ.

    ಈ ಹಿಂದೆ ಪಾಕ್‍ಗೆ ಭೇಟಿ ನೀಡಿದ್ದ ಸಿಧು ನಡೆಯನ್ನು ಸಮರ್ಥಿಸಿಕೊಂಡಿದ್ದ ಇಮ್ರಾನ್ ಖಾನ್, ಸಿಧು ಒಬ್ಬ ಶಾಂತಿಯ ರಾಯಭಾರಿ ಎಂದು ಹಾಡಿಹೊಗಳಿದ್ದರು. ಭಾರತದಲ್ಲಿ ಸಿಧು ವಿರುದ್ಧ ಆರೋಪ ಮಾಡುತ್ತಿರುವುದು ಶಾಂತಿ ಮಂತ್ರಕ್ಕೆ ತೋರುತ್ತಿರುವ ಅಗೌರವ. ಶಾಂತಿ ಇಲ್ಲದೇ ನಮ್ಮ ಜನರ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv