Tag: south korea

  • ಚೀನಾ ಬಳಿಕ ದಕ್ಷಿಣ ಕೊರಿಯಾ – ಕೋವಿಡ್ ಪ್ರಕರಣಗಳಲ್ಲಿ ಭಾರೀ ಏರಿಕೆ!

    ಸಿಯೋಲ್: ಚೀನಾ ಬಳಿಕ ಇದೀಗ ದಕ್ಷಿಣ ಕೊರಿಯಾದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಕಳೆದ ವಾರ ಚೀನಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕೊರಿಯಾದ ಜನತೆಗೂ ಕೋವಿಡ್ ಭೀತಿ ಎದುರಾಗಿದೆ.

    ದಕ್ಷಿಣ ಕೊರಿಯಾದಲ್ಲಿ ಬುಧವಾರ 4 ಲಕ್ಷ ಕೋವಿಡ್ ಕೇಸ್‌ಗಳು ಪತ್ತೆಯಾಗಿವೆ. ಕಳೆದ ವರ್ಷ ಜನವರಿ ತಿಂಗಳಲ್ಲಿ ಭಾರೀ ಕೋವಿಡ್ ಕೇಸ್‌ಗಳು ಕಂಡುಬಂದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯ ಇಷ್ಟೊಂದು ಪ್ರಮಾಣದಲ್ಲಿ ಕೊವಿಡ್ ಕೇಸ್‌ಗಳನ್ನು ಎದುರಿಸುತ್ತಿದೆ.

    ದಕ್ಷಿಣ ಕೊರಿಯಾದಲ್ಲಿ ಬುಧವಾರ 4,00,741 ಹೊಸ ಕೆಸ್‌ಗಳು ಪತ್ತೆಯಾಗಿದ್ದು, ಒಂದೇ ದಿನ 293 ಸಾವುಗಳು ಸಂಭವಿಸಿವೆ. ಪ್ರಸ್ತುತ ಕೋವಿಡ್ ಕೇಸ್‌ಗಳೊಂದಿಗೆ ಕೊರಿಯಾದಲ್ಲಿ ಇಲ್ಲಿಯವರೆಗೆ 76,29,275 ಪ್ರಕರಣಗಳು ಪತ್ತೆಯಾಗಿವೆ. ಇದನ್ನೂ ಓದಿ: ಚೀನಾದಲ್ಲಿ 2 ವರ್ಷಗಳ ಬಳಿಕ ಒಂದೇ ದಿನ 3 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್

    ಚೀನಾದಲ್ಲಿ ಕೋವಿಡ್ ಹಾವಳಿ ಹೆಚ್ಚುತ್ತಿದ್ದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡಿದೆ. ಬುಧವಾರ ಚೀನಾದಲ್ಲಿ ಒಟ್ಟು 3,290 ಕೇಸ್‌ಗಳು ಪತ್ತೆಯಾಗಿವೆ. ಇದನ್ನೂ ಓದಿ: ಅಮೆರಿಕಗೆ ಮತ್ತೆ ಟಕ್ಕರ್ ಕೊಟ್ಟ ಸೌದಿ ಅರೇಬಿಯಾ- ಡಾಲರ್‌ಗೆ ಬಿಗ್‌ ಶಾಕ್‌?

    ವಿಶ್ವದಲ್ಲೇ ಮೊದಲ ಬಾರಿಗೆ 2019ರಲ್ಲಿ ಚೀನಾದಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತಾದರೂ ಕಳೆದ 1 ವರ್ಷದಿಂದ ಚೀನಾ ಅಧಿಕೃತವಾಗಿ ಕೋವಿಡ್ ಕೇಸ್‌ನಿಂದ ಸಾವು ಸಂಭವಿಸಿರುವ ಪ್ರಕರಣವನ್ನು ವರದಿ ಮಾಡಿಲ್ಲ.

  • ದಕ್ಷಿಣ ಕೊರಿಯಾದ ನಟಿ ಕಿಮ್ ಮಿ ಸೂ ನಿಧನ – ನಟಿ ಸಾವಿನ ಬಗ್ಗೆ ಅನುಮಾನ

    ದಕ್ಷಿಣ ಕೊರಿಯಾದ ನಟಿ ಕಿಮ್ ಮಿ ಸೂ ನಿಧನ – ನಟಿ ಸಾವಿನ ಬಗ್ಗೆ ಅನುಮಾನ

    ಸಿಯೋಲ್: ದಕ್ಷಿಣ ಕೊರಿಯಾದ ನಟಿ ಕಿಮ್ ಮಿ ಸೂ(29) ಬುಧವಾರ ನಿಧನರಾಗಿದ್ದಾರೆ.

     Kim Mi-soo

    ಜನವರಿ 5 ರಂದು ಕಿಮ್ ಇದ್ದಕ್ಕಿದ್ದಂತೆ ಮೃತಪಟ್ಟಿದ್ದು, ಅವರ ಅಗಲಿಕೆಯಿಂದ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಅಲ್ಲದೇ ಕಿಮ್ ಹಠಾತ್ ಸಾವಿನಿಂದ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು, ಈ ಮಧ್ಯೆ ಕುಟುಂಬಸ್ಥರು ದಯವಿಟ್ಟು ಯಾರು ಸಹ ಸುಳ್ಳಿನ ವದಂತಿಗಳನ್ನು ಹರಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

     

    View this post on Instagram

     

    A post shared by Kim Mi Soo (@kimmi8329)

    ಕಿಮ್ ಮಿ ಸೂ ಅವರ ಸಾವಿನ ಕಾರಣ ಕುರಿತಂತೆ ಮಾಹಿತಿ ಇನ್ನು ಬಹಿರಂಗವಾಗಿಲ್ಲ. ಕಿಮ್ ಹಲವಾರು ಕೊರಿಯನ್ ಚಿತ್ರಗಳಲ್ಲಿ ನಟಿಸಿದ್ದು, 1987 ರ ಪ್ರಜಾಸತ್ತಾತ್ಮಕ ಚಳುವಳಿಯ ವಿರುದ್ಧದ ರೋಮ್ಯಾಂಟಿಕ್ ಮೆಲೋಡ್ರಾಮಾದ ‘ಸ್ನೋಡ್ರಾಪ್’ ಎಂಬ ಪಾತ್ರದಿಂದ ಖ್ಯಾತಿ ಪಡೆದಿದ್ದರು. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

  • ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಸಿಯೋಲ್: ನೈಸರ್ಗಿಕ ಜೀವವಿಜ್ಞಾನದಿಂದ ಪ್ರೇರಿತವಾದ ದಕ್ಷಿಣ ಕೊರಿಯಾದ ಸಂಶೋಧಕರು ಊಸರವಳ್ಳಿಯಂತೆ ಬದಲಾಗುವ ಕೃತಕ ಚರ್ಮವನ್ನು ಕಂಡು ಹಿಡಿದಿದ್ದಾರೆ.

    sದಕ್ಷಿಣ ಕೊರಿಯಾದ ಸಿಯೋಲ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪ್ರಾಧ್ಯಾಪಕ ಕೋ ಸೆಯುಂಗ್ ಹ್ವಾನ್ ಈ ಕೃತಕ ಚರ್ಮವನ್ನು ಕಂಡು ಹಿಡಿದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನೈಸರ್ಗಿಕ ಜೀವವಿಜ್ಞಾನದಿಂದ ಪ್ರೇರಿತನಾಗಿ ಕೃತಕ ಚರ್ಮದಂತಹ ವಸ್ತುವನ್ನು ಕಂಡು ಹಿಡಿದಿದ್ದೇನೆ. ಈ ಕೃತಕ ಚರ್ಮ ತಾಪಮಾನಕ್ಕೆ ತಕ್ಕಂತೆ ಊಸರವಳ್ಳಿಯ ರೀತಿ ತಕ್ಷಣ ತನ್ನ ಬಣ್ಣವನ್ನ ಬದಲಾಯಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳ ಮಧ್ಯೆ ಮಾರಾಮಾರಿ- ಮೂವರಿಗೆ ಗಾಯ

    ಒಂದು ವೇಳೆ ನಾವು ಮರುಭೂಮಿ ರೀತಿಯ ಪ್ರದೇಶಕ್ಕೆ ಹೋದರೆ ಈ ರೀತಿಯ ಚರ್ಮವನ್ನು ಧರಿಸಬಹುದು. ಈ ಮೂಲಕ ನಾವು ಎಷ್ಟೇ ಬಿಸಿಲಿನಲ್ಲಿದ್ದರೂ ಸುಲಭವಾಗಿ ಓಡಾಡಬಹುದು. ಅದೇ ರೀತಿ ನಾವು ತಯಾರಿಸುವ ಈ ಕೃತಕ ಚರ್ಮವನ್ನು ಆ ವಾತಾವರಣಕ್ಕೆ ತಕ್ಕಂತೆ ಬದಲಾಯಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕೋ ಸೆಯುಂಗ್ ಹ್ವಾನ್ ಮತ್ತು ಅವರ ತಂಡ ವಿವಿಧ ಬಣ್ಣಗಳ ಮೇಲೆ ರೋಬೋಟ್ ಅನ್ನು ಬಿಟ್ಟು ತಮ್ಮ ಪ್ರಯೋಗವನ್ನು ಪ್ರದರ್ಶಿಸಿದರು. ರೋಬೋಟ್ ಕೆಂಪು, ನೀಲಿ ಮತ್ತು ಹಸಿರು ಬಣ್ಣಗಳ ಮೇಲೆ ಹೋಗುತ್ತ ಇದ್ದಂತೆ ಆ ಬಣ್ಣಗಳಿಗೆ ತಿರುಗುತ್ತಿತ್ತು ಇದನ್ನು ನೋಡಿದ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಬೆರಗಾಗಿ ನಿಂತಿದ್ದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

    ಈ ಕುರಿತು ಪ್ರತಿಕ್ರಿಯಿಸಿದ ಕೋ, ಸೆನ್ಸರ್‍ಗಳಿಂದ ಪತ್ತೆಯಾದ ಬಣ್ಣದ ಮಾಹಿತಿಯನ್ನು ಮೈಕ್ರೊಪ್ರೊಸೆಸರ್ ಗೆ ಮತ್ತು ನಂತರ ಸಿಲ್ವರ್ ನ್ಯಾನೊವೈರ್ ಹೀಟರ್‍ಗಳಿಗೆ ವರ್ಗಾಯಿಸಲಾಗುತ್ತದೆ. ಹೀಟರ್‍ಗಳು ಒಂದು ನಿರ್ದಿಷ್ಟ ತಾಪಮಾನವನ್ನು ತಲುಪಿದ ನಂತರ, ಥರ್ಮೋಕ್ರೋಮಿಕ್ ಲಿಕ್ವಿಡ್ ಸ್ಫಟಿಕ ಪದರವು ಅದರ ಬಣ್ಣವನ್ನು ಬದಲಾಯಿಸುತ್ತೆ ಎಂದು ತಿಳಿಸಿದರು.

  • ಕೊರೊನಾ ಭಯ- ನೋಟ್‍ಗಳನ್ನು ವಾಶಿಂಗ್ ಮಶೀನ್‍ಗೆ ಹಾಕಿದ್ರು

    ಕೊರೊನಾ ಭಯ- ನೋಟ್‍ಗಳನ್ನು ವಾಶಿಂಗ್ ಮಶೀನ್‍ಗೆ ಹಾಕಿದ್ರು

    – ನೋಟುಗಳೆಲ್ಲ ಹಾಳು, ಬದಲಾಯಿಸಲು ಬ್ಯಾಂಕ್ ನಕಾರ

    ಸಿಯೋಲ್: ಕೊರೊನಾ ಜನರನ್ನು ಯಾವ ಮಟ್ಟಿಗೆ ಭಯಪಡಿಸಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದ್ದು, ಸೋಂಕು ತಗುಲುವ ಭಯದಲ್ಲಿ ಇಲ್ಲೊಬ್ಬರು ನೋಟುಗಳನ್ನೇ ವಾಶಿಂಗ್ ಮಶೀನ್‍ಗೆ ಹಾಕಿ ತೊಳೆದಿದ್ದಾರೆ.

    ದಕ್ಷಿಣ ಕೋರಿಯಾದ ಸಿಯೋಲ್‍ನಲ್ಲಿ ವ್ಯಕ್ತಿಯೊಬ್ಬರು ಈ ರೀತಿ ಮಾಡಿದ್ದು, ಅವರು ಪುರುಷನೋ ಮಹಿಳೆಯೋ ಎಂಬುದು ತಿಳಿದು ಬಂದಿಲ್ಲ. ಕೊರೊನಾ ವೈರಸ್ ತಗುಲುವುದರಿಂದ ತಪ್ಪಿಸಿಕೊಳ್ಳಲು 50,000 ವೋನ್(3,137 ರೂಪಾಯಿ)ನ್ನು ವಾಶಿಂಗ್ ಮಶೀನ್‍ಗೆ ಹಾಕಿ ತೊಳೆದಿದ್ದಾರೆ ಎಂದು ವರದಿಯಾಗಿದೆ.

    ಕುಟುಂಬದವರು ನಿಧನರಾಗಿದ್ದಾಗ ಸಂಬಂಧಿಕರು ಹಾಗೂ ಸ್ನೇಹಿತರು ವ್ಯಕ್ತಿಗೆ ಈ 3,132 ರೂ. ಸಂತಾಪ ಹಣವಾಗಿ ನೀಡಿದ್ದಾರೆ. ಈ ಹಣ ನೀಡಿದವರಲ್ಲಿ ಯಾರಾದರೂ ಕೊರೊನಾ ಸೋಂಕಿತರು ಇದ್ದರೆ, ನನಗೂ ಕೊರೊನಾ ಸೋಂಕು ತಗುಲುತ್ತದೆ ಎಂದು ವಾಶಿಂಗ್ ಮಶೀನ್‍ಗೆ ಹಾಕಿ ತೊಳೆದಿದ್ದಾರೆ. ಆದರೆ ವಾಶಿಂಗ್ ಮಶೀನ್‍ನಲ್ಲಿ ಒಂದು ಬಾರಿ ಸ್ಪಿನ್ ಆಗುತ್ತಿದ್ದಂತೆ ನೋಡುಗಳು ಹಾನಿಯಾಗಿದ್ದು, ಉಪಯೋಗಕ್ಕೆ ಬರದಂತಾಗಿವೆ.

    ನಂತರ ವ್ಯಕ್ತಿ ನೋಟುಗಳನ್ನು ತೆಗೆದುಕೊಂಡು ಬ್ಯಾಂಕ್ ಆಫ್ ಕೋರಿಯಾಗೆ ತೆರಳಿದ್ದು, ನೋಟುಗಳು ತುಂಬಾ ಹಾನಿಯಾಗಿವೆ ಬೇರೆ ನೋಟುಗಳನ್ನು ಕೊಡಿ ಎಂದು ಕೇಳಿದ್ದಾರೆ. ಆದರೆ ಬ್ಯಾಂಕ್‍ನವರು ಹೊಸ ನೋಟುಗಳನ್ನು ಕೊಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಕಡೆಗೆ 507ರ ಅರ್ಧದಷ್ಟು ಹಣವನ್ನು ನೀಡಿದ್ದು, ವಾಶೀಂಗ್ ಮಶೀನ್‍ನಲ್ಲಿ ಹಾಕಿದ್ದರಿಂದ ನೋಟುಗಳು ಪೂರ್ತಿ ಹಾಳಾಗಿದ್ದವು. ಹೀಗಾಗಿ ಎಷ್ಟು ನಗದು ಇತ್ತು ಎಂದು ನಿಖರವಾಗಿ ತಿಳಿದಿಲ್ಲ ಎಂದು ಬ್ಯಾಂಕ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ ಹಣವನ್ನು ವಾಶಿಂಗ್ ಮಶೀನ್ ಹಾಗೂ ಶಾಖಕ್ಕೆ ಇಡಬೇಡಿ ಎಂದು ಬ್ಯಾಂಕ್ ಸಿಬ್ಬಂದಿ ಸಾರ್ವಜನಿಕರಿಗೆ ತಿಳಿ ಹೇಳಿದ್ದಾರೆ.

  • ದಕ್ಷಿಣ ಕೊರಿಯಾ ಕಂಪನಿ ಜೊತೆ ಡಾ. ಅಶ್ವಥ್ ನಾರಾಯಣ ಮಾತುಕತೆ

    ದಕ್ಷಿಣ ಕೊರಿಯಾ ಕಂಪನಿ ಜೊತೆ ಡಾ. ಅಶ್ವಥ್ ನಾರಾಯಣ ಮಾತುಕತೆ

    ಬೆಂಗಳೂರು: ದಕ್ಷಿಣ ಕೊರಿಯಾದ ಹೂಡಿಕೆ ಕಂಪನಿ ನಿಯೋಪ್ಲಕ್ಸ್ (Neoplux)ನಿಯೋಗದ ಜೊತೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಗುರುವಾರ ಬೆಳಗ್ಗೆ ಮಾತುಕತೆ ನಡೆಸಿದರು.

    ಭಾರತ ಹಾಗೂ ದಕ್ಷಿಣ ಕೊರಿಯಾ ನಡುವಿನ ಸಹಯೋಗಕ್ಕೆ ವೇದಿಕೆ ಕಲ್ಪಿಸುವ ಟಿಕೆಎನ್ ಅಡ್ವೈಸರ್ಸ್ ಹಾಗೂ ಸಿಟಿ ಪ್ರೆನ್ಯೂರ್ ಸಂಸ್ಥೆಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ಸ್ಟಾರ್ಟ್ ಅಪ್ ವಲಯದಲ್ಲಿ ಹೊಸ ಅವಕಾಶ ಹಾಗೂ ಸಹಯೋಗದ ಸಾಧ್ಯತೆ ಕುರಿತು ನಿಯೋಪ್ಲಕ್ಸ್ ನ ಸಿಇಓ ಸ್ಯಾಂಗ್ ಹಾ ಲೀ ನೇತೃತ್ವದ ತಂಡದ ಜೊತೆಗೆ ಮಾತುಕತೆ ನಡೆಸಲಾಗಿದೆ ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

    ಭಾರತದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 8 ಸ್ಟಾರ್ಟ್ ಅಪ್‍ಗಳ ಪೈಕಿ ಐದನ್ನು ಬೆಂಗಳೂರಿನಲ್ಲೇ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸಿದ ನಿಯೋಪ್ಲಕ್ಸ್, ನಗರದಲ್ಲೇ ಸಂಸ್ಥೆಯ ಕೇಂದ್ರ ಕಚೇರಿ ತೆರೆಯುವ ಇಂಗಿತವನ್ನೂ ವ್ಯಕ್ತಪಡಿಸಿದೆ. ಯುವ ಉದ್ಯಮಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಸಿಟಿಪ್ರೆನ್ಯೂರ್ಸ್, ಮುಂದಿನ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ಸಮಾವೇಶ ಆಯೋಜಿಸುವ ಆಶಯ ವ್ಯಕ್ತಪಡಿಸಿದೆ.

    ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ತಿಳಿಸಿದರು. ನವೋದ್ಯಮಿಗಳಿಗೆ ಹೂಡಿಕೆದಾರರು, ಸರ್ಕಾರಿ ಅಧಿಕಾರಿಗಳು, ಖಾಸಗಿ ವಲಯದ ದಿಗ್ಗಜರೊಂದಿಗೆ ಸಂಪರ್ಕ ಕಲ್ಪಿಸಿ ಅಗತ್ಯ ನೆರವು ಒದಗಿಸುವ ಸಿಟಿಪ್ರೆನ್ಯೂರ್ಸ್, ವಿಶ್ವಸಂಸ್ಥೆಯ ಅರ್ಬನ್ ಇನ್ನೋವೇಶನ್ ಚಾಲೆಂಜ್‍ನಲ್ಲಿ ಭಾಗಿಯಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ.

  • ವಿನಾಯ್ತಿ ಬೇಡ, ಶಾಂತಿ ಪ್ರಶಸ್ತಿಗೆ ತೆರಿಗೆ ಪಾವತಿಸುತ್ತೇನೆ – ಮೋದಿ ಪತ್ರ

    ವಿನಾಯ್ತಿ ಬೇಡ, ಶಾಂತಿ ಪ್ರಶಸ್ತಿಗೆ ತೆರಿಗೆ ಪಾವತಿಸುತ್ತೇನೆ – ಮೋದಿ ಪತ್ರ

    – ತೆರಿಗೆ ವಿನಾಯಿತಿ ನೀಡಿದ್ದ ಐಟಿ ಇಲಾಖೆ
    – ಸಾಮಾನ್ಯರಂತೆ ನಾನೂ ತೆರಿಗೆ ಕಟ್ಟುತ್ತೇನೆಂದ ಪ್ರಧಾನಿ

    ನವದೆಹಲಿ: ಪ್ರಧಾನಿ ಮೋದಿ ಅವರು ಮತ್ತೊಮ್ಮೆ ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದು, ಸಾಮಾನ್ಯರಂತೆ ನಾನೂ ಸಹ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತೇನೆ ಎಂದು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾ ಸರ್ಕಾರ 2018ನೇ ಸಾಲಿನ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಪ್ರಶಸ್ತಿಯ ಭಾಗವಾಗಿ 1.30 ಕೋಟಿ ರೂ. ನಗದನ್ನು ಮಾರ್ಚ್ 6ರಂದು ನೀಡಿತ್ತು. ಇದಕ್ಕೆ ಕೇಂದ್ರ ನೇರ ತೆರಿಗೆ ವಿಭಾಗ(ಸಿಬಿಡಿಟಿ) ಐಟಿ ಕಾಯ್ದೆಯ ಸೆಕ್ಷನ್ 10(17ಎ)(ಐ) ಅಡಿ ಸಿಯೋಲ್ ಶಾಂತಿ ಪ್ರಶಸ್ತಿಗೆ ತೆರಿಗೆ ವಿನಾಯಿತಿ ನೀಡಿತ್ತು.

    ಈ ವಿಷಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಡವಾಗಿ ತಿಳಿದಿದೆ. ನಂತರ ಪ್ರಧಾನಿ ಮೋದಿ ಆಗಸ್ಟ್ 11ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಪತ್ರ ಬರೆದಿದ್ದು, ಪ್ರಶಸ್ತಿಯ ನಗದಿನ ಮೇಲಿನ ತೆರಿಗೆಗೆ ಹಣಕಾಸು ಸಚಿವಾಲಯ ವಿನಾಯಿತಿ ನೀಡಿದೆ ಎಂದು ತಿಳಿಯಿತು. ಲೋಕಸಭಾ ಚುನಾವಣೆ ಹಾಗೂ ಇತರೆ ಒತ್ತಡಗಳ ಮಧ್ಯೆ ನಿಮಗೆ ಬೇಗನೇ ಪತ್ರ ಬರೆದು ತಿಳಿಸಲು ಸಾಧ್ಯವಾಗಿಲ್ಲ ಎಂದು ಉಲ್ಲೇಖಿಸಿದ್ದಾರೆ.

    ಇದನ್ನು ಸಾಮಾನ್ಯ ನಗದು ಎಂದು ಪರಿಗಣಿಸಿ ಎಲ್ಲರಿಗೂ ವಿಧಿಸಿದಂತೆ ನನಗೂ ತೆರಿಗೆ ವಿಧಿಸಿ. ಆದಾಯ ತೆರಿಗೆ ಪಾವತಿ ದೇಶದ ಬೆಳವವಣಿಗೆಗೆ ನೀಡುವ ಕೊಡುಗೆಯಾಗಿದೆ. ನಿಮ್ಮ ಹಿಂದಿನ ಆದೇಶವನ್ನು ಮರು ಪರಿಶೀಲಿಸಿ ಅದನ್ನು ಹಿಂಪಡೆಯುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

    ಸಿಯೋಲ್ ಶಾಂತಿ ಪ್ರಶಸ್ತಿಯಂತಹ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಭಾರತ ಗೆದ್ದಾಗಲೆಲ್ಲ ಪ್ರತಿಯೊಬ್ಬ ಭಾರತೀಯನ ಹೃದಯ ಹೆಮ್ಮೆಯಿಂದ ಹಿಗ್ಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಶಸ್ತಿಯ ಹಣವನ್ನು ನಮಾಮಿ ಗಂಗಾ ಯೋಜನೆಗೆ ನೀಡುವುದಾಗಿ ಈ ಹಿಂದೆಯೇ ಪ್ರಧಾನಿ ಮೋದಿ ತಿಳಿಸಿದ್ದರು.

    ಸಿಬಿಡಿಟಿ ಆಗಸ್ಟ್ 14ರಂದು ಮತ್ತೆ ಆದೇಶ ಹೊರಡಿಸುವ ಮೂಲಕ ತನ್ನ ಹಿಂದಿನ ಆದೇಶವನ್ನು ಹಿಂಪಡೆದಿದೆ. ಆದಾಯ ತೆರಿಗೆ ಕಾಯ್ದೆ ಮೂಲಕ ನೀಡಲಾಗಿದ್ದ ಅಧಿಕಾರವನ್ನು ಚಲಾಯಿಸಿದ್ದು, ಕೇಂದ್ರ ಸರ್ಕಾರವು ‘ಸಿಯೋಲ್ ಶಾಂತಿ ಪ್ರಶಸ್ತಿ’ ಸಂಬಂಧ ಮಾರ್ಚ್ 6ರಂದು ಹೊರಡಿಸಿದ ಆದೇಶದಲ್ಲಿ ಪ್ರಕಟಿಸಲಾಗಿದ್ದ ತೆರಿಗೆ ವಿನಾಯಿತಿಯನ್ನು ಹಿಂಪಡೆಯುತ್ತಿದೆ. ಹೀಗಾಗಿ ತೆರಿಗೆ ಕಾಯ್ದೆಯ ಅನ್ವಯ ಈ ಪ್ರಶಸ್ತಿ ಎಲ್ಲ ನಿಯಮಗಳಿಗೆ ಒಳಪಟ್ಟಿದೆ ಎಂದು ಆದೇಶದಲ್ಲಿ ತಿಳಿಸಿದೆ.

  • 55 ಕೋಟಿ ರೂ. ಮೌಲ್ಯದ ಆಸ್ತಿ ಖರೀದಿಸಿದ 6 ವರ್ಷದ ಯೂಟ್ಯೂಬ್ ಸ್ಟಾರ್

    55 ಕೋಟಿ ರೂ. ಮೌಲ್ಯದ ಆಸ್ತಿ ಖರೀದಿಸಿದ 6 ವರ್ಷದ ಯೂಟ್ಯೂಬ್ ಸ್ಟಾರ್

    ಸಿಯೋಲ್: ಎರಡು ಯೂಟ್ಯೂಬ್ ಜಾನೆಲ್ ನಡೆಸುತ್ತಿರುವ 6 ವರ್ಷದ ಪುಟ್ಟ ಬಾಲಕಿ ಯೂಟ್ಯೂಬ್ ಸ್ಟಾರ್ 55 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾಳೆ.

    ದಕ್ಷಿಣ ಕೊರಿಯಾದ ಬಾಲಕಿ ಬೋರಾಮ್, ಯೂಟ್ಯೂಬ್‍ನಲ್ಲಿ 30 ದಶಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾಳೆ. ಬಾಲಕಿ ಎರಡು ಚಾನೆಲ್‍ಗಳನ್ನು ನಡೆಸುತ್ತಿದ್ದು, ಬೋರಾಮ್ ಟ್ಯೂಬ್ ವ್ಲಾಗ್ 17.5 ಮಿಲಿಯನ್ ಚಂದಾದಾರರು ಮತ್ತು ಬೋರಮ್ ಟ್ಯೂಬ್ ಟಾಯ್ ರಿವ್ಯೂ 13.6 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾಳೆ.

    ಈ ಪುಟ್ಟ ಸೆಲೆಬ್ರಿಟಿ ಗಂಗ್ನಮ್‍ನ ಚಿಯೊಂಗ್ಡ್ಯಾಮ್-ಡಾಂಗ್‍ನಲ್ಲಿ 258.3 ಚದರ ಮೀಟರ್ ಪ್ರದೇಶದಲ್ಲಿ ನಿರ್ಮಿಸಿರುವ 1975ರ ಕಟ್ಟಡವನ್ನು ಖರೀದಿಸಿದ್ದಾರೆ. ಇದು ಸಿಯೋಲ್‍ನ ಸಮೃದ್ಧ ಪ್ರದೇಶಗಳಲ್ಲಿ ಒಂದಾಗಿದೆ ಎಂದು ವರದಿಯಾಗಿದೆ.

    ಬಾಲಕಿ ಬೋರಾಮ್ ಪೋಷಕರು ಆರು ವರ್ಷಗಳ ಹಿಂದೆ ಪುತ್ರಿಯ ಹೆಸರಿನಲ್ಲಿ ಕಂಪನಿ ಆರಂಭಿಸಿದ್ದರು. ಸದ್ಯ ಈ ಕಂಪನಿಯೇ 55 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಖರೀದಿಸಿದೆ.

    ಯೂಟ್ಯೂಬ್ ಸ್ಟಾರ್ ಬೋರಾಮ್ ಪ್ರತಿ ತಿಂಗಳಿಗೆ ಮಾಸಿಕ 16 ಕೋಟಿ ರೂ. ಆದಾಯವನ್ನು ಹೊಂದಿದ್ದಾಳೆ. ಈ ಪುಟ್ಟ ಬಾಲಕಿ ತಾನು ಆಟವಾಡುವ ಹಾಗೂ ಪೋಷಕರೊಂದಿಗೆ ಕಾಲ ಕಳೆಯುವ ಮುದ್ದಾದ ವಿಡಿಯೋಗಳನ್ನು ತಮ್ಮ ಯೂಟ್ಯೂಬ್ ಚಾನೆಲ್‍ಗೆ ಅಪ್‍ಲೋಡ್ ಮಾಡುತ್ತಾಳೆ. ಈ ವಿಡಿಯೋಗಳು ಅನೇಕರ ಮನ ಗೆದ್ದಿವೆ.

    ಕೊರಿಯಾದ ಇತರ ಯೂಟ್ಯೂಬ್ ಚಾನೆಲ್‍ಗಳಿಗಿಂತ ಬೋರಾಮ್‍ನ ಚಾನಲ್‍ಗಳು ಮಾರ್ಕೆಟಿಂಗ್ ಲಾಭದಲ್ಲಿ ಹೆಚ್ಚಿನ ಪಾಲನ್ನು ಹೊಂದಿವೆ. ಬಾಲಕಿಯ ಹಲವಾರು ವಿಡಿಯೋಗಳು ಲಕ್ಷಾಂತರ ವೀವ್ಸ್ ಗಳಿಸಿವೆ. ಅಷ್ಟೇ ಅಲ್ಲದೆ ಬಾಲಕಿ ತನ್ನ ವಿಡಿಯೋಗಳ ಮೂಲಕ ಉತ್ಪನ್ನಗಳನ್ನು ಉತ್ತೇಜಿಸಲು ಬ್ರಾಂಡ್‍ಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾಳೆ. ಹೀಗಾಗಿ ಆದಾಯವು ಮತ್ತಷ್ಟು ಹೆಚ್ಚಾಗಿದೆ.

    ಬೋರಾಮ್ ಮಿಲಿಯನೇರ್ ಆದ ಮೊದಲ ಮಗು ಅಲ್ಲ. ಫೋಬ್ರ್ಸ್ ಪಟ್ಟಿಯಲ್ಲಿ ಹೆಚ್ಚು ಆದಾಯ ಗಳಿಸುವ 10 ಯೂಟ್ಯೂಬ್ ತಾರೆಗಳಲ್ಲಿ ಟಾಯ್ಸ್ ರಿವ್ಯೂ ನಡೆಸುತ್ತಿರುವ ಏಳು ವರ್ಷದ ರಿಯಾನ್ ಅಗ್ರಸ್ಥಾನದಲ್ಲಿದ್ದಾನೆ.

  • ವಾಹನ ನಿಲ್ಲಿಸಬೇಕಿಲ್ಲ, ಇನ್ಮುಂದೆ ಬ್ಯಾಂಕ್ ಖಾತೆಯಿಂದಲೇ ಟೋಲ್ ಹಣ ಕಡಿತಗೊಳ್ಳುತ್ತೆ!

    ವಾಹನ ನಿಲ್ಲಿಸಬೇಕಿಲ್ಲ, ಇನ್ಮುಂದೆ ಬ್ಯಾಂಕ್ ಖಾತೆಯಿಂದಲೇ ಟೋಲ್ ಹಣ ಕಡಿತಗೊಳ್ಳುತ್ತೆ!

    ನವದೆಹಲಿ: ಇನ್ನು ಮುಂದೆ ಟೋಲ್ ಗಳಲ್ಲಿ ವಾಹನಗಳನ್ನು ನಿಲ್ಲಿಸಿ ಶುಲ್ಕ ಪಾವತಿಸಬೇಕಿಲ್ಲ. ನೇರವಾಗಿ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

    ಸರ್ಕಾರ ಟೋಲ್ ಗಳಲ್ಲಿ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆಯನ್ನು ತರಲು ಮುಂದಾಗಿದೆ. ಹೊಸ ವ್ಯವಸ್ಥೆಯಲ್ಲಿ ಚಾಲಕರು ವಾಹನಗಳನ್ನು ನಿಲ್ಲಿಸುವ ಅನಿವಾರ್ಯತೆ ಇಲ್ಲ ಎಂದು ಕೇಂದ್ರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

    ಬ್ಯಾಂಕಿನ ಖಾತೆಯಿಂದ ನೇರವಾಗಿ ಹಣ ಜಮೆಯಾಗುವ ವ್ಯವಸ್ಥೆ ದಕ್ಷಿಣ ಕೊರಿಯಾದಲ್ಲಿದೆ. ಮೇ ನಲ್ಲಿ ದಕ್ಷಿಣ ಕೊರಿಯಾದ ಅಧ್ಯಕ್ಷ ಭಾರತಕ್ಕೆ ಭೇಟಿಕೊಡಲಿದ್ದಾರೆ. ಅವರ ಭೇಟಿ ವೇಳೆ ಹೊಸ ವ್ಯವಸ್ಥೆ ತಿಳುವಳಿಕಾ ಪತ್ರಕ್ಕೆ(ಎಂಒಯು) ಸಹಿ ಹಾಕಲಿದ್ದೇವೆ. ಹೊಸ ವ್ಯವಸ್ಥೆಯಿಂದಾಗಿ ಟೋಲ್ ಗಳಲ್ಲಿ ವಾಹನ ಸಂಚಾರ ಸುಗುಮವಾಗಲಿದೆ ಎಂದು ಗುರು ಗ್ರಾಮದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದರು.

    ಮೆಟ್ರೊ ಸಿಟಿಗಳಲ್ಲಿರುವ ಟೋಲ್ ಗಳಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುತ್ತದೆ. ಹಾಗಾಗಿ ಆರಂಭದಲ್ಲಿ ಮೆಟ್ರೋ ನಗರದಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ನಿರ್ಧಾರ ಮಾಡಿದ್ದೇವೆ ಇದರಿಂದ ಟೋಲ್ ಗಳಲ್ಲಿ ಸಂಚಾರ ಸುಗುಮವಾಗಲಿದೆ ಎಂದು ತಿಳಿಸಿದರು.

  • ಒಲಿಂಪಿಕ್ಸ್ ಪಂದ್ಯಾವಳಿಗೆ ಪೂರೈಕೆ ಆಯ್ತು 1 ಲಕ್ಷಕ್ಕೂ ಅಧಿಕ ಕಾಂಡೋಮ್

    ಒಲಿಂಪಿಕ್ಸ್ ಪಂದ್ಯಾವಳಿಗೆ ಪೂರೈಕೆ ಆಯ್ತು 1 ಲಕ್ಷಕ್ಕೂ ಅಧಿಕ ಕಾಂಡೋಮ್

    ಪೈಯೋಂಗ್ ಚಾಂಗ್: ದಕ್ಷಿಣ ಕೊರಿಯಾದ ಪಿಯಾಂಗ್ ಚಾಂಗ್‍ನಲ್ಲಿ ನಡೆಯಲಿರುವ 2018 ರ ಚಳಿಗಾಲದ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಆಟಗಾರರಿಗೆ ಓಲಿಂಪಿಕ್ ಸಮಿತಿ ಸುಮಾರು 1 ಲಕ್ಷಕ್ಕೂ ಅಧಿಕ ಕಾಂಡೋಮ್‍ಗಳನ್ನು ಪೂರೈಕೆ ಮಾಡಿದೆ.

    ಒಲಿಂಪಿಕ್ಸ್ ಪಂದ್ಯಾವಳಿಗಳು ಮುಂದಿನ ವಾರದಿಂದ ಆರಂಭವಾಗುತ್ತಿದೆ. ಕಳೆದ ಬಾರಿ ರಷ್ಯಾದ ಸೋಚಿ ಯಲ್ಲಿ ಆಯೋಜಿಸಲಾಗಿದ್ದ ಒಲಿಂಪಿಕ್ಸ್ ಪಂದ್ಯಾವಳಿ ಗಳಿಗೆ ಪೂರೈಕೆ ಮಾಡಲಾಗಿದ್ದ 1 ಲಕ್ಷ ಕಾಂಡೋಮ್ ಗಳ ಸಂಖ್ಯೆಯನ್ನು ಹೆಚ್ಚಿಸಿ ಆಧಿಕ ಹತ್ತು ಸಾವಿರ ಕಾಂಡೋಮ್‍ಗಳನ್ನು ಪೂರೈಕೆ ಮಾಡಲಾಗಿದೆ. ಹಾಗೂ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಕೇವಲ 100 ಹೆಚ್ಚಿನ ಆಟಗಾರರು ಭಾಗವಹಿಸುತ್ತಿದ್ದಾರೆ.

     

    ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಆಟಗಾರರಿಗಾಗಿಯೇ ಪ್ರತ್ಯೇಕ ಒಲಿಂಪಿಕ್ ವಿಲೇಜ್ ನಿರ್ಮಾಣ ಮಾಡಲಾಗಿದೆ. ಇಲ್ಲಿ ಆಟಗಾರರಿಗೆ ಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅಲ್ಲದೇ ಅಂತರಾಷ್ಟ್ರೀಯ ಅಂಚೆ ಸೇವೆ, ಹೂವಿನ ಮಾರುಕಟ್ಟೆ ಸೇರಿದಂತೆ ವಿವಿಧ ಅಂಗಡಿಗಳು, ಫಿಟ್‍ನೆಸ್ ಸೆಂಟರ್, 24 ಗಂಟೆ ಊಟದ ವ್ಯವಸ್ಥೆ, ಪ್ರಾರ್ಥನಾ ಸ್ಥಳ, ಜೊತೆಗೆ ಮನೆಯಲ್ಲಿ ಸಿಗುವ ಎಲ್ಲಾ ವ್ಯವಸ್ಥೆಗಳನ್ನ ಕಲ್ಪಿಸಲಾಗುತ್ತದೆ.

    ದಕ್ಷಿಣ ಕೊರಿಯಾದ ಕಾಂಡೋಮ್ ಉತ್ಪಾದಕರ ವಕ್ತಾರರು ಸ್ಥಳೀಯ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ, ಸದಾಶಯದಿಂದ ಕಾಂಡೋಮ್ ಪೂರೈಕೆ ಮಾಡಲಾಗ್ತಿದೆ ಎಂದು ತಿಳಿಸಿದ್ದಾರೆ.

    ಈ ಬಾರಿ ಒಲಿಂಪಿಕ್ ವಿಲೇಜ್ ಗೆ 90 ವಿವಿಧ ದೇಶಗಳ 2,925 ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಆಗಮಿಸುವ ನಿರೀಕ್ಷೆ ಇದೆ. ಎರಡು ವಾರಗಳ ಕಾಲ ಕ್ರೀಡಾಕೂಟ ನಡೆಯಲಿದೆ.

    ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಮೊದಲ ಬಾರಿಗೆ 1988 ರಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆದ ಬೇಸಿಗೆ ಕ್ರೀಡಾಕೂಟದಲ್ಲಿ ಕಾಂಡೋಮ್‍ಗಳನ್ನು ಸಾರ್ವಜನಿಕವಾಗಿ ಪೂರೈಕೆ ಮಾಡಲಾಗಿತ್ತು. ಆಟಗಾರರು ಎಚ್‍ಐವಿ ವೈರಸ್ ನಿಂದ ರಕ್ಷಣೆ ಪಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಅನಂತರದಲ್ಲಿ ಈ ಕ್ರಮವನ್ನು ಮುಂದುವರೆಸಲಾಗಿತ್ತು. 2016 ರ ಬ್ರೆಜಿಲ್ ನ ರಿಯೋ ಡಿ ಜನೈರೊ ದಲ್ಲಿ ನಡೆದ ಕ್ರೀಡಾಕೂಟದಲ್ಲಿ 4.5 ಲಕ್ಷ ಕಾಂಡೋಮ್ ಗಳನ್ನು ಪೂರೈಕೆ ಮಾಡಲಾಗಿತ್ತು.

     

  • ವಿದೇಶದಲ್ಲಿ ಪ್ಲಾಸ್ಟಿಕ್ ಸರ್ಜರಿ, ಫೋಟೋ ಗುರುತು ಸಿಗದೆ ಮನೆಗೆ ವಾಪಸ್ ಬರೋಕೆ ಪರದಾಡಿದ ಮಹಿಳೆಯರು!

    ವಿದೇಶದಲ್ಲಿ ಪ್ಲಾಸ್ಟಿಕ್ ಸರ್ಜರಿ, ಫೋಟೋ ಗುರುತು ಸಿಗದೆ ಮನೆಗೆ ವಾಪಸ್ ಬರೋಕೆ ಪರದಾಡಿದ ಮಹಿಳೆಯರು!

    ಬೀಜಿಂಗ್: ವಿದೇಶಕ್ಕೆ ಹೋಗಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಮೂವರು ಚೀನಾ ಮಹಿಳೆಯರು ಮನೆಗೆ ವಾಪಸ್ ಬರಲು ಪರದಾಡಿದ ಘಟನೆ ನಡೆದಿದೆ.

    ಚೀನಾದ ವಾರ್ಷಿಕ ಗೋಲ್ಡನ್ ವೀಕ್ ರಜೆ ವೇಳೆ ಈ ಮೂವರು ಮಹಿಳೆಯರು ದಕ್ಷಿಣ ಕೊರಿಯಾಗೆ ಹೋಗಿದ್ದರು. ಆದ್ರೆ ವಾಪಸ್ ಬರೋ ವೇಳೆ ಮಹಿಳೆಯರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಮ್ಮ ಗುರುತನ್ನ ದೃಢಪಡಿಸಲು ಸಾಧ್ಯವಾಗ್ಲಿಲ್ಲ. ಯಾಕಂದ್ರೆ ಮಹಿಳೆಯರು ಪಾಸ್‍ಪೋರ್ಟ್ ಫೋಟೋದಲ್ಲಿ ಇದ್ದಂತೆ ಕಾಣಿಸುತ್ತಿರಲಿಲ್ಲ. ಪ್ಲಾಸ್ಟಿಕ್ ಸರ್ಜರಿ ನಂತರ ಅವರ ಮುಖ ತುಂಬಾ ಊದಿಕೊಂಡು ಬ್ಯಾಂಡೇಜ್ ಸುತ್ತಲಾಗಿತ್ತು. ಸುಂದರವಾಗಿ ಕಾಣ್ಬೇಕು ಅಂತ ಸರ್ಜರಿ ಮಾಡಿಸಿಕೊಂಡವರು ಫೋಟೋದಲ್ಲಿರೋದು ನಾವೇ ಅಂದ್ರೂ ನಂಬೋ ಸ್ಥಿತಿಯಲ್ಲಿ ಭದ್ರತಾ ಸಿಬ್ಬಂದಿ ಇರ್ಲಿಲ್ಲ.

    ಈ ಮೂವರು ಮಹಿಳೆಯರು ಮುಖಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಕೈಯಲ್ಲಿ ಪಾಸ್‍ಪೋರ್ಟ್ ಹಿಡಿದು ವಿಮಾನ ನಿಲ್ದಾಣದಲ್ಲಿ ಕುಳಿತಿರೋ ಫೋಟೋವನ್ನ ಚೀನಾ ಸುದ್ದಿ ವಾಹಿನಿಯೊಂದರ ನಿರೂಪಕಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ರು. ನಂತರ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

    ಇಲ್ಲಿನ ಪತ್ರಿಕೆಯೊಂದರ ವರದಿಯ ಪ್ರಕಾರ ಮಹಿಳೆಯರನ್ನು ಕೊರಿಯಾ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದ್ರೆ ಇವರಿಗೆ ಚೀನಾಗೆ ವಾಪಸ್ ಹೋಗಲು ಅವಕಾಶ ನೀಡಲಾಯ್ತಾ ಇಲ್ಲವಾ ಎಂಬ ಬಗ್ಗೆ ಈವರೆಗೆ ವರದಿಯಾಗಿಲ್ಲ.