Tag: Sowmya Reddy

  • ವೀಡಿಯೋ: ಸುಧಾಕರ್ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಗಹಗಹಿಸಿ ನಕ್ಕರು ಸೌಮ್ಯ ರೆಡ್ಡಿ

    ವೀಡಿಯೋ: ಸುಧಾಕರ್ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಗಹಗಹಿಸಿ ನಕ್ಕರು ಸೌಮ್ಯ ರೆಡ್ಡಿ

    ಬೆಂಗಳೂರು: ರಾಜ್ಯದಲ್ಲಿ ಸದ್ಯ ‘ಒಂದೆಂಡ್ತಿ’ ರಾಜಕಾರಣ ನಡೆಯುತ್ತಿದೆ. ಸುಧಾಕರ್ ಅವರು ನೀಡಿರುವ ಹೇಳಿಕೆಯಿಂದ ಇಂದು ರಾಜ್ಯ ರಾಜ್ಯಕಾರಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಆರೋಗ್ಯ ಸಚಿವರ ಈ ಹೇಳಿಕೆಗೆ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ಜೋರಾಗಿ ನಕ್ಕಿದ್ದಾರೆ.

    ನಗರದಲ್ಲಿ ಸುಧಾಕರ್ ಹೇಳಿಕೆ ಪ್ರಸ್ತಾಪಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸೌಮ್ಯ ರೆಡ್ಡಿಯವರು ನಿಜನಾ.. ಹೀಗೆ ಹೇಳಿದ್ದಾರಾ..? ಮಹಿಳೆಯರಿಗೂ ಪತ್ನಿಯರು ಇರುತ್ತಾರಾ..? ಎಂದು ಅಚ್ಚರಿಯಿಂದಲೇ ಮರು ಪ್ರಶ್ನಿಸಿ ನಕ್ಕಿದ್ದಾರೆ. ಅಲ್ಲದೆ ನನಗೆ ಅರ್ಥ ಆಗಿಲ್ಲ. ನೀವು ಹೇಳಿದ ಪ್ರಶ್ನೆಯನ್ನು ನಾನು ಕರೆಕ್ಟಾಗಿ ಅರ್ಥ ಮಾಡಿಕೊಂಡ್ನಾ ಎಂದು ಗೊಂದಲಕ್ಕೀಡಾಗಿ ಶಾಸಕಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

    ಕೆಲ ಸಮಯದ ಬಳಿಕ ಪತ್ರಕರ್ತರು ಸುಧಾಕರ್ ಹೇಳಿಕೆಯನ್ನು ಶಾಸಕಿಗೆ ಕೇಳಿಸಿದ್ದಾರೆ. ಆಗ ಅವರು ಕಾಮಿಡಿ ಮಾಡ್ತಾ ಇದ್ದಾರಾ..?  ಇದಕ್ಕೆ ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿ ನಗುತ್ತಲೇ ಅಲ್ಲಿಂದ ತೆರಳಿದ್ದಾರೆ.

    ಸುಧಾಕರ್ ಹೇಳಿದ್ದೇನು..?
    ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು ವಿಪಕ್ಷ ನಾಯಕರಿಗೆ ಸವಾಲು ಎಸೆದರು. ಕಾನೂನಿನ ಪ್ರಕಾರ ನ್ಯಾಯಾಲಯದಿಂದ ರಕ್ಷಣೆ ಪಡೆದಿದ್ದೇವೆ. ಆರೋಪಗಳನ್ನ ಮಾಡುವ ನಾಯಕರು ಸಂವಿಧಾನಕ್ಕೆ ಗೌರವ ನೀಡಬೇಕು. ರಾಷ್ಟ್ರೀಯ ನಾಯಕರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮರ್ಯಾದೆ ಪುರುಷರು, ಶ್ರೀರಾಮಚಂದ್ರ ಅನ್ಕೊಂಡು ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ನೀವು ನಿಮ್ಮ ಜೀವನದಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿಲ್ವಾ? ಮಾನ್ಯ ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ ಯಾರು ಏನು ಮಾಡಿದ್ರು ಅನ್ನೋದು ಗೊತ್ತಾಗಲಿ. ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಏನು ಏಕಪತ್ನಿವ್ರತಸ್ಥರಾ? ನೈತಿಕತೆ ಬಗ್ಗೆ ಮಾತನಾಡೋರು ಮಾದರಿ ಆಗಿದ್ದರೆ ತನಿಖೆಗೆ ಎಲ್ಲರೂ ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದರು.

  • ಮಹಿಳಾ ಪೊಲೀಸ್‌ ಮೇಲೆ ಸೌಮ್ಯ ರೆಡ್ಡಿ ದಬ್ಬಾಳಿಕೆ

    ಮಹಿಳಾ ಪೊಲೀಸ್‌ ಮೇಲೆ ಸೌಮ್ಯ ರೆಡ್ಡಿ ದಬ್ಬಾಳಿಕೆ

    ಬೆಂಗಳೂರು: ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯ] ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

    ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್‌ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದ ಬಳಿಕ ರಾಜಭವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದಿದ್ದಾರೆ.

    ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯ ರೆಡ್ಡಿ “ಹೂ ದಿ ಹೆಲ್‌” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ ಕೈ  ಎತ್ತಿದ್ದಾರೆ.

    ತಳ್ಳಾಟ ನೂಕಾಟದಿಂದ ಕೋಪಗೊಂಡಿದ್ದ ಸೌಮ್ಯ ರೆಡ್ಡಿ ಹಲ್ಲೆ ಮಾಡಿ ಮಾಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಬಳಿ ಮಹಿಳಾ ಪೇದೆ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

    ನಾಯಕರ ಜೊತೆ ಭಾಗವಹಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು  ಪೊಲೀಸರು ತಡೆದು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

  • ಪೌರ ಕಾರ್ಮಿಕರೊಂದಿಗೆ ಸಂಕ್ರಾಂತಿ ಸಂಭ್ರಮ- ಸ್ವಚ್ಛತಾ ರಾಯಭಾರಿಗಳಿಗೆ ಗೌರವ

    ಪೌರ ಕಾರ್ಮಿಕರೊಂದಿಗೆ ಸಂಕ್ರಾಂತಿ ಸಂಭ್ರಮ- ಸ್ವಚ್ಛತಾ ರಾಯಭಾರಿಗಳಿಗೆ ಗೌರವ

    – 500 ಕಾರ್ಮಿಕರಿಗೆ ಸಿಹಿ ಪೊಂಗಲ್

    ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪೌರಕಾರ್ಮಿಕರಿಗಾಗಿ ಸಂಕ್ರಾಂತಿ ಸಂಭ್ರಮ ಏರ್ಪಡಿಸಲಾಗಿತ್ತು. ನಗರದ ಸ್ವಚ್ಛತಾ ರಾಯಭಾರಿಗಳಾದ ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲದ ಜೊತೆಗೆ, ಸೀರೆ, ಬ್ಲೌಸ್, ಪ್ಯಾಂಟ್ ಶರ್ಟ್ ಮತ್ತು ಉಡುಗೊರೆಗಳನ್ನು ವಿತರಿಸಲಾಯಿತು.

    ಪ್ರತಿನಿತ್ಯ ಮನೆಗಳಿಂದ ಕಸ ಕೊಂಡೊಯ್ಯುವ, ಬೀದಿಗಳನ್ನು ಸ್ವಚ್ಛಗೊಳಿಸುವ ಸ್ವಚ್ಛತಾ ರೂವಾರಿಗಳಾದ ಪೌರಕಾರ್ಮಿಕರನ್ನು ಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸೂಚಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಾರ್ಯಕ್ರಮದ ವಿಶೇಷವಾಗಿತ್ತು.

    ಜೆಪಿ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 500 ಕಾರ್ಮಿಕರಿಗೆ ಪೊಂಗಲ್ ತಯಾರಿಸಿ ಹಂಚಲಾಯಿತು. ಪೌರ ಕಾರ್ಮಿಕರು ಸಿಹಿ, ಎಳ್ಳು-ಬೆಲ್ಲ, ಕಬ್ಬು ಸ್ವೀಕರಿಸಿದರು. ಇಷ್ಟು ವರ್ಷಗಳಿಂದ ನಮ್ಮನ್ನು ಯಾರೂ ಕರೆದು ಗೌರವಿಸಿರಲಿಲ್ಲ. ನಮಗೆ ಹಬ್ಬದ ಸಿಹಿಯ ಜೊತೆಗೆ ಉಡುಗೊರೆಗಳನ್ನು ಸಹ ನೀಡಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಇದೇ ವೇಳೆ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಮಾತನಾಡಿ, ಸಂಕ್ರಾಂತಿ ಸಂತಸದ ಹಬ್ಬ. ಹೊಸ ವರ್ಷದ ಹೊಸ್ತಿಲಲ್ಲಿ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಬೆಂಗಳೂರು ನಗರವನ್ನು ಸುಂದರ, ಸ್ವಚ್ಛವಾಗಿಟ್ಟುಕೊಳ್ಳಲು ನಿಮ್ಮ ಪಾತ್ರ ಅನನ್ಯ. ಸದಾ ಕಾಲ ಸ್ವಚ್ಛತೆ ಕೈಗೊಳ್ಳುವ ನಿಮಗೂ ಖುಷಿ ಸಿಗಬೇಕು ಎಂಬ ಕಾರಣದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶುಚಿತ್ವದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿಮ್ಮ ಸಹಕಾರ ಅಗತ್ಯ. ನಿಮ್ಮ ಸುರಕ್ಷತೆ, ಆರೋಗ್ಯ ರಕ್ಷಣೆಗಾಗಿ ಸರ್ಕಾರ ಮತ್ತು ಪಾಲಿಕೆ ಬದ್ಧವಾಗಿದೆ. ಹಳ್ಳಿಯ ನೆನಪು ತರುವ ಸಡಗರದ ಹಬ್ಬ ನಿಮ್ಮೆಲ್ಲರ ಬಾಳಿನಲ್ಲಿ ಬೆಳಕು ತರಲಿ ಎಂದು ಹಾರೈಸಿದರು.

    ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಸದಾ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ನಿಮ್ಮ ಜೊತೆ ಸಂಕ್ರಾಂತಿ ಆಚರಿಸುವುದು ಅರ್ಥಪೂರ್ಣವಾಗಿದೆ. ಎಲ್ಲರಿಗಿಂತ ನಿಮಗೆ ಸಂಕ್ರಾಂತಿ ಹಬ್ಬದ ಉಡುಗೊರೆ ನೀಡಿದರೆ ಅದು ಸಾರ್ಥಕತೆ ಪಡೆಯುತ್ತದೆ. ಜಯನಗರ ಅತ್ಯಂತ ಶುಚಿ ಸ್ಥಳವಾಗಬೇಕು. ಸ್ವಚ್ಛ ಭಾರತದಲ್ಲಿ ಉತ್ತಮ ಹೆಸರು ಪಡೆಯಬೇಕು. ಕಸದ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗಬೇಕು. ಅದಕ್ಕಾಗಿ ಯಾವುದೇ ರೀತಿಯ ಸಹಕಾರ ಬೇಕಾದರೂ ನೀಡುತ್ತೇವೆ. ಕಸ ವಿಂಗಡಣೆ ಇನ್ನಷ್ಟು ಸುಧಾರಿಸಬೇಕು. ಇದರ ಸಂಪೂರ್ಣ ಉಸ್ತುವಾರಿಯನ್ನು ತಾವೇ ವಹಿಸಿರುವುದಾಗಿ ಹೇಳಿದರು.

    ಏಳು ವಾರ್ಡ್ ಗಳ ಸುಮಾರು 5000 ಜನ ಪೌರ ಕಾರ್ಮಿಕರು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಪಾಲಿಕೆ ಸದಸ್ಯರಾದ ನಾಗರಾಜ್, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಭಾಗಿಯಾಗಿದ್ದ ಕಾರ್ಯಕ್ರಮವನ್ನು ಬಾಂಧವ ತಂಡದ ಸದಸ್ಯರು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದರು.

  • ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯದ ಆರೋಗ್ಯಕ್ಕಾಗಿ ನಡಿಗೆ

    ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯದ ಆರೋಗ್ಯಕ್ಕಾಗಿ ನಡಿಗೆ

    ಬೆಂಗಳೂರು: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಗರದ ತಥಾಗತ್ ಹೃದ್ರೋಗ ಆಸ್ಪತ್ರೆ ವಾಕ್‍ಥಾನ್ ಮೂಲಕ ಅರಿವು ಮೂಡಿಸುವ ಅಭಿಯಾನ ನಡೆಸಿತು.

    ನಗರದ ಫ್ರೀಡಂ ಪಾರ್ಕ್ ನಿಂದ ಮಂತ್ರಿ ಮಾಲ್ ವರೆಗೂ ಕಾಲ್ನಡಿಗೆ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಫ್ರೀಡಂ ಪಾರ್ಕ್ ನಲ್ಲಿ ಶಾಸಕಿ ಸೌಮ್ಯ ರೆಡ್ಡಿ, ತಥಾಗತ್ ಹಾರ್ಟ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಿ.ಆರ್. ಮಹಾಂತೇಶ್ ವಾಕ್‍ಥಾನ್‍ಗೆ ಚಾಲನೆ ನೀಡಿದರು.

    ಸೆಪ್ಟೆಂಬರ್ 29 ರಂದು ವಿಶ್ವದಾದ್ಯಂತ ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಅದರ ಭಾಗವಾಗಿ ವಾಕ್ ಥಾನ್ ಹಾಗೂ ಉಚಿತವಾಗಿ ಹೃದಯ ಪರೀಕ್ಷೆ ಹಾಗೂ ಮಧುಮೇಹ ಪರೀಕ್ಷೆ ಮಾಡಲಾಗುತ್ತಿದೆ. ಆರೋಗ್ಯಕ್ಕೆ ಪೂರಕವಾಗಿರುವ ಆಹಾರ ಸೇವಿಸುವುದು, ಚೆನ್ನಾಗಿ ನೀರು ಕುಡಿಯುವುದು, ದಿನನಿತ್ಯ ವ್ಯಾಯಾಮ, ಧೂಮಪಾನ ನಿಲ್ಲಿಸುವುದು, ಸೇರಿದಂತೆ ಕೆಲ ಸಣ್ಣ ಸಣ್ಣ ಬದಲಾವಣೆಗಳು ಪ್ರತಿ ನಿತ್ಯ ಮಾಡಿದರೆ ಸಾಕು ನಮ್ಮ ಆರೋಗ್ಯ ನಾವು ಕಾಪಾಡಬಹದು ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಅರಿವು ಮೂಡಿಸುತ್ತಿದರು.

    ಈ ವೇಳೆ ಮಾತನಾಡಿದ ಶಾಸಕಿ ಸೌಮ್ಯಾರೆಡ್ಡಿ, ಯುವಪೀಳಿಗೆಯಲ್ಲೆ ಅತಿಹೆಚ್ಚು ಹೃದಯದ ಸಮಸ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು. ಜೀವನ ಕ್ರಮವನ್ನು ಉತ್ತಮಪಡಿಸಬೇಕು. ದೇಹ ದೇಗುಲ ಇದ್ದ ಹಾಗೆ, ಹೃದಯವೇ ಕೆಲಸ ನಿಲ್ಲಿಸಿಬಿಟ್ಟರೆ ಮನುಷ್ಯನಿಲ್ಲ. ಹೀಗಾಗಿ ವಾಯುಮಾಲಿನ್ಯವೂ ಹೃದಯದ ಸಮಸ್ಯೆಗೆ ಕಾರಣವಾಗುತ್ತೆ, ಪರಿಸರ ರಕ್ಷಣೆಯೂ ಜೊತೆ ಜೊತೆಗೆ ನಡೆಯಬೇಕು ಎಂದರು.

    ತಥಾಗತ್ ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಹಂತೇಷ್ ಹಿರೇಮಠ್ ಮಾತನಾಡಿ, ಪ್ರತಿ ವರ್ಷ ವಿಶ್ವ ಹೃದಯ ದಿನದಂದು ಈ ವಾಕ್ ಥಾನ್ ಆಯೋಜಿಸುತ್ತೇವೆ. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ದೇಶದಲ್ಲಿ ನೂರಕ್ಕೆ ನಲ್ವತ್ತು ಶೇಕಡಾದಷ್ಟು ಜನರು ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಡುತ್ತಿದ್ದಾರೆ. ಹೀಗಾಗಿ ಜನರಿಗೆ ಹೃದಯದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜನಜಾಗೃತಿಗಾಗಿ ಈ ವಾಕ್‍ಥಾನ್ ಆಯೋಜಿಸಿದ್ದು, ಮಂತ್ರಿಮಾಲ್ ಮುಂಭಾಗ ಉಚಿತವಾಗಿ ಹೃದಯದ ಪರೀಕ್ಷೆ ನಡೆಸಲಾಗುವುದು ಎಂದರು.

  • ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

    ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

    ಬೆಂಗಳೂರು: ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಾವು ನೀಡಿದ್ದ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.

    ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿರುವ ರೆಡ್ಡಿ ಗುರುವಾರ ಬೆಳಗ್ಗೆ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾಡುವ ವಿಜ್ಞಾಪನೆಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ಬಹುತೇಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಬಹುತೇಕ ಅರಿವಿದೆ. ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ವಿದ್ಯಾಮಾನಗಳಿಂದ ಬೇಸರವಾಗಿ (ಕಾರಣಗಳನ್ನು ಅನೇಕ ಬಾರಿ ಮಾಧ್ಯಮ ಮುಖಾಂತರ ತಿಳಿಸಿದ್ದೇನೆ) ಜುಲೈ 6 ರಂದು ನಾನು ಆಯ್ಕೆಯಾಗಿರುವ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ, ನಾನೆಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ ಸ್ಥಾನಮಾನ ಪಡೆಯಲು ನಾನು ಎಂದೂ ಆಸೆಪಟ್ಟವನಲ್ಲ,

    ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಕಾಂಗ್ರೆಸ್ ನ ಹಿರಿಯನಾಯಕರು ರಾಜೀನಾಮೆ ವಾಪಾಸ್ ಪಡೆದು ಪಕ್ಷದಲ್ಲಿರುವಂತೆ ಕೋರಿರುತ್ತಾರೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ವಾಪಾಸ್ ಪಡೆಯಲು ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ.

  • ಕೈಕೊಟ್ಟಿದ್ದ ರಾಮಲಿಂಗಾರೆಡ್ಡಿ ಯೂಟರ್ನ್ ತೆಗೆದುಕೊಳ್ತಾರಾ?

    ಕೈಕೊಟ್ಟಿದ್ದ ರಾಮಲಿಂಗಾರೆಡ್ಡಿ ಯೂಟರ್ನ್ ತೆಗೆದುಕೊಳ್ತಾರಾ?

    ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಲೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಯೂಟರ್ನ್ ತೆಗೆದುಕೊಳ್ಳಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

    ಸೋಮವಾರ ಎಐಸಿಸಿ ನಾಯಕಿ ಸೋನಿಯಾ ಗಾಂಧಿಯವರನ್ನು ರಾಮಲಿಂಗಾರೆಡ್ಡಿ ಪುತ್ರಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಭೇಟಿ ಮಾಡಿದ ಬಳಿಕ ಈ ಬಗ್ಗೆ ಸುದ್ದಿ ಹರಿದಾಡ್ತಿದೆ. ಇಂದಿನ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಸಭೆ)ಗೂ ರಾಮಲಿಂಗಾರೆಡ್ಡಿ ಆಗಮಿಸಬಹುದು ಎನ್ನಲಾಗಿದೆ.

    ಸೋನಿಯಾ ಗಾಂಧಿ ಸಲಹೆ ಮೇರೆಗೆ ಶಾಸಕಿ ಸೌಮ್ಯಾ ರೆಡ್ಡಿ ಕೂಡ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್‍ನಲ್ಲೇ ರಾಜಕಾರಣ ಮಾಡುತ್ತಾ ಬಂದಿರುವ ರಾಮಲಿಂಗಾರೆಡ್ಡಿಗೆ ಪಕ್ಷ ಬಿಡುವ, ಬಿಜೆಪಿ ಸೇರುವ ಮನಸ್ಸಿಲ್ವಾ ಎಂಬ ಪ್ರಶ್ನೆ ಎದ್ದಿದೆ.

    ನೇರವಾಗಿ ಸೋನಿಯಾರನ್ನ ಭೇಟಿಯಾಗಿಸಿ ಮಗಳ ಮೂಲಕ ಏಳು ಬಾರಿ ಆಯ್ಕೆಯಾಗಿರುವ ಶಾಸಕ ರಾಮಲಿಂಗಾ ರೆಡ್ಡಿ ಶಕ್ತಿಪ್ರದರ್ಶನ ಮಾಡಿದ್ರಾ ಎಂಬ ಅನುಮಾನವೂ ಮೂಡಿದೆ.

    ಸೋಮವಾರ ಸೌಮ್ಯಾ ರೆಡ್ಡಿ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸಲ್ಲಿ ಭೇಟಿ ಮಾಡಿ 14 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಈ ವೇಳೆ ನಿರ್ಧಾರ ಬದಲಿಸಲು ತಂದೆಗೆ ಹೇಳು. ಕಷ್ಟ ಕಾಲದಲ್ಲಿ ನಮ್ಮ ಜತೆ ಇರಿ ಎಂದು ಸೋನಿಯಾ ಗಾಂಧಿ ಸೌಮ್ಯಾ ರೆಡ್ಡಿ ಅವರಿಗೆ ಸಲಹೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು.

  • 14 ನಿಮಿಷದ ಮಾತುಕತೆಯಲ್ಲಿ ನಡೆಯಲಿಲ್ಲ ಸಂಧಾನ – ಸೌಮ್ಯಾ, ಸೋನಿಯಾ ಸಭೆಯ ಇನ್‍ಸೈಡ್ ಸ್ಟೋರಿ

    14 ನಿಮಿಷದ ಮಾತುಕತೆಯಲ್ಲಿ ನಡೆಯಲಿಲ್ಲ ಸಂಧಾನ – ಸೌಮ್ಯಾ, ಸೋನಿಯಾ ಸಭೆಯ ಇನ್‍ಸೈಡ್ ಸ್ಟೋರಿ

    ನವವೆಹಲಿ: ರಾಜೀನಾಮೆ ನೀಡಿರುವ ನನ್ನ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದ ರಾಮಲಿಂಗಾ ರೆಡ್ಡಿ ಅವರನ್ನು ಮನ ಒಲಿಸುವ ಕಾರ್ಯವೂ ವಿಫಲವಾಗಿದೆ.

    ಇಂದು ಸೌಮ್ಯಾ ರೆಡ್ಡಿ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸಲ್ಲಿ ಭೇಟಿ ಮಾಡಿ 14 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಿರ್ಧಾರ ಬದಲಿಸಲು ತಂದೆಗೆ ಹೇಳು. ಕಷ್ಟ ಕಾಲದಲ್ಲಿ ನಮ್ಮ ಜತೆ ಇರಿ ಎಂದು ಸೋನಿಯಾ ಗಾಂಧಿ ಸೌಮ್ಯಾ ರೆಡ್ಡಿ ಅವರಿಗೆ ಸಲಹೆ ನೀಡಿದರು.

    ಮಾತುಕತೆಯ ವೇಳೆ ಸೋನಿಯಾ ಗಾಂಧಿ ಅವರು ರಾಮಲಿಂಗಾರೆಡ್ಡಿ ಅವರಿಗೆ ಫೋನ್ ಮಾಡುವಂತೆ ಸೂಚಿಸಿದರು. ಹೀಗಾಗಿ ಸೌಮ್ಯಾರೆಡ್ಡಿ ಅವರು ಒಟ್ಟು 3 ಬಾರಿ ತಂದೆಗೆ ಫೋನ್ ಮಾಡಿದ್ದಾರೆ. ಆದರೆ ರಾಮಲಿಂಗಾರೆಡ್ಡಿ ಅವರು ಪುತ್ರಿ ಫೋನ್ ಮಾಡಿದರೂ ರಿಸೀವ್ ಮಾಡಲಿಲ್ಲ. ಆಗ ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಅವರು ರಾಮಲಿಂಗಾರೆಡ್ಡಿ ಅವರಿಗೆ ಕರೆ ಮಾಡಿದರು. ಅದಕ್ಕೂ ಡೋಂಟ್ ಕೇರ್ ಎಂದು ಮಾಜಿ ಸಚಿವರು ಸಂಧಾನಕ್ಕೆ ಹಿಂದೇಟು ಹಾಕಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದು ಬಂದಿದೆ.

    ರಾಮಲಿಂಗಾರೆಡ್ಡಿಯವರು ಫೋನ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು, ನಾಳೆ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸೌಮ್ಯಾರೆಡ್ಡಿ ಅವರು, ಆಯ್ತು ಮೇಡಂ ನಿಮ್ಮ ಅಭಿಪ್ರಾಯವನ್ನು ನಾನು ಹೇಳುತ್ತೇನೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಈ ಮಧ್ಯೆ ತಂದೆ ಹಾಗೂ ಕಾಂಗ್ರೆಸ್ ಜೊತೆಗಿನ ಸಂಬಂಧ ಗುಣಗಾನ ಮಾಡಿದ್ದಾರೆ ಎಂದು ಮೂಲಗಳಿಂದ ಕೇಳಿಬಂದಿದೆ.

  • ರಾಮಲಿಂಗಾರೆಡ್ಡಿಗೆ ಕೈ ತಪ್ಪಿದ ಸಚಿವ ಸ್ಥಾನ- ಅಸಮಾಧಾನ ಹೊರ ಹಾಕಿದ ಶಾಸಕಿ ಸೌಮ್ಯ ರೆಡ್ಡಿ

    ರಾಮಲಿಂಗಾರೆಡ್ಡಿಗೆ ಕೈ ತಪ್ಪಿದ ಸಚಿವ ಸ್ಥಾನ- ಅಸಮಾಧಾನ ಹೊರ ಹಾಕಿದ ಶಾಸಕಿ ಸೌಮ್ಯ ರೆಡ್ಡಿ

    ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.

    ತಮ್ಮ ಅಸಮಾಧಾನವನ್ನು ಪತ್ರದಲ್ಲಿ ಬರೆದು ಆ ಪತ್ರವನ್ನು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಸೌಮ್ಯ ರೆಡ್ಡಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಮೂಲಕ ಪಕ್ಷದ ಮುಖಂಡರಿಗೆ ದೂರು ನೀಡಿದ್ದಾರೆ.

    ತಮಗೆ ನೀಡಿರುವ ಸಂಸದೀಯ ಕಾರ್ಯದರ್ಶಿ ಹುದ್ದೆಯೂ ಬೇಡ ಎಂದು ಸೌಮ್ಯಾ ಪಕ್ಷದ ಮುಖಂಡರಿಗೆ ಪತ್ರ ಬರೆದಿದ್ದಾರೆ. ಶಾಸಕಿಯಾಗಿಯೇ ಸಾಕಷ್ಟು ಕೆಲಸ ಮಾಡಲು ಇದೆ. ಸಂಸದೀಯ ಕಾರ್ಯದರ್ಶಿಯಂತಹ ಜವಬ್ದಾರಿ ನಿರ್ವಹಿಸಲಾಗಲ್ಲ. ಕಾಂಗ್ರೆಸ್ ನಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಹಿಂದೇಟು ಆಗುವುದು ಸಹಜ. ಅದು ರಾಜಕೀಯದ ಒಂದು ಭಾಗ ಎಂದು ಟ್ವಿಟ್ಟರ್‍ನಲ್ಲಿ ವ್ಯಂಗ್ಯವಾಡಿದ್ದಾರೆ.

    ಪತ್ರದಲ್ಲೇನಿದೆ..?
    ಕಾಂಗ್ರೆಸ್ ಪಕ್ಷ ನನಗೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್ ನೀಡಿದ್ದು, ಜಯನಗರದ ಮತದಾರರು ನನಗೆ ಆಶೀರ್ವದಿಸಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿ ಅಭಿವೃದ್ಧಿ ಮಾಡಬೇಕಾಗಿದೆ. ನನಗೀಗ ಯಾವ ರೀತಿಯ ಪಾರ್ಲಿಮೆಂಟ್ರಿ ಸೆಕ್ರೆಟರಿ ಹಾಗೂ ಯಾವುದೇ ರೀತಿಯ ಹುದ್ದೆ ಬೇಡ. ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಸ್ವಲ್ಪ ಹಿಂದೇಟು ಆಗುವುದು ಖಂಡಿತ ಅದು ರಾಜಕೀಯದ ಒಂದು ಭಾಗ. ಆದ್ರೆ ಈ ರೀತಿ ಪಕ್ಷಕ್ಕೆ ನಿಷ್ಠೆಯಾದವರಿಗೆ ಹಿಂದೇಟು ಆದರೆ ಬೇಸರವಾಗುತ್ತದೆ.

    ನಾನು ಮೊದಲನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇನ್ನೂ ನನ್ನ ಕ್ಷೇತ್ರದ ಹಲವಾರು ಕೆಲಸಗಳು ಮಾಡಲು ನನಗೆ ಬಹಳ ಸಮಯ ಬೇಕಾಗಿದೆ. ನನಗೇ ಪಾರ್ಲಿಮೆಂಟ್ ಸೆಕ್ರೆಟರಿಯ ಸ್ಥಾನಮಾನ ನೀಡಿರುವುದು ಸದ್ಯಕ್ಕೆ ಬೇಡ. ಅದು ಯಾರಿಗೆ ಅವಶ್ಯಕತೆ ಇದೆ ಅವರಿಗೆ ಕೊಡಿ.

    ನನಗೆ ನನ್ನ ಕ್ಷೇತ್ರದ ಜನರಿಗೆ ಕೆಲ್ಸ ಮಾಡಿ ಅವರ ಋಣವನ್ನು ತೀರಿಸಬೇಕಾಗಿದೆ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಕೇವಲ ಒಂದು ಶಾಸಕರಿಂದ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದುಕೊಂಡಿದ್ದಾರೆ. ಈ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಗೆ ಟ್ಯಾಗ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೌರಕಾರ್ಮಿಕರಂತೆ ಶಾಸಕಿ ಸೌಮ್ಯಾ ರೆಡ್ಡಿಯಿಂದ ಕಸ ಕ್ಲೀನ್!

    ಪೌರಕಾರ್ಮಿಕರಂತೆ ಶಾಸಕಿ ಸೌಮ್ಯಾ ರೆಡ್ಡಿಯಿಂದ ಕಸ ಕ್ಲೀನ್!

    ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಜಯನಗರ ಶಾಸಕಿ ಸೌಮ್ಯರೆಡ್ಡಿಯವರು ಸ್ವತಃ ತಾವೇ ಸ್ವಚ್ಛ ಮಾಡುವ ಮೂಲಕ `ಸ್ವಚ್ಛ ಜಯನಗರ’ದ ಯೋಜನೆಗೆ ಚಾಲನೆ ನೀಡಿದ್ದಾರೆ.

    ಜಯನಗರದ ಬೈರಸಂದ್ರ ವಾರ್ಡ್ ನ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಪೌರಕಾರ್ಮಿಕರಂತೆ ಕಸ ಕ್ಲೀನ್ ಮಾಡಿ, ಪಾದಚಾರಿ ರಸ್ತೆ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.

    ಶಾಸಕಿಯಾದ ಮರು ದಿನದಂದಲೇ ಜನರಿಗೆ ಹತ್ತಿರವಾಗುತ್ತಿರುವ ಸೌಮ್ಯರೆಡ್ಡಿಯವರು ಚುನಾವಣಾ ಪ್ರಚಾರದ ವೇಳೆ ನೀಡಿದ್ದ `ಸ್ವಚ್ಛ ಜಯನಗರ’ ಯೋಜನೆಗೆ ಇಂದು ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಅವರು `ಸ್ವಚ್ಛ ಜಯನಗಕ್ಕೆ’ ಸಾರ್ವಜನಿಕರೆಲ್ಲರೂ ಸಹಕರಿಸಬೇಕು. ತಮ್ಮ ಮನೆಯಲ್ಲಿಯೇ ಕಸವನ್ನು ವಿಂಗಡನೆ ಮಾಡಿ ಪೌರಕಾರ್ಮಿಕರಿಗೆ ನೀಡಬೇಕು ಎಂದು ಮನವಿ ಮಾಡಿದರು. ಜಯನಗದ ಅಭಿವೃದ್ಧಿಗೆ ಬೇಕಾಗುವ ಯಾವುದೇ ಸಲಹೆ-ಸೂಚನೆಗಳನ್ನು ಮುಕ್ತವಾಗಿ ನಮ್ಮೊಂದಿಗೆ ಹಂಚಿಕೊಳ್ಳಬಹುದು ಎಂದು ಹೇಳಿದರು.

    ಜಯನಗರದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ಯಾವುದೇ ಸಮಸ್ಯೆಗಳಿದ್ದರೂ ಖುದ್ದು ನನ್ನ ದೂರವಾಣಿಗೆ ಕರೆ ಮಾಡಬಹುದು. ಇಲ್ಲವೇ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿ ಎಂದು ನಾಗರೀಕರಲ್ಲಿ ಸೌಮ್ಯಾ ರೆಡ್ಡಿ ಮನವಿ ಮಾಡಿಕೊಂಡರು. ಈಗಾಗಲೇ ಬಿಬಿಎಂಪಿ ಅಧಿಕಾರಿಗಳ ಜೊತೆ ಸೇರಿ ಫ್ಲೆಕ್ಸ್ ತೆರವು ಮಾಡಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

  • ಅಪ್ಪನಿಗಾಗಿ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ ಸೌಮ್ಯಾ ರೆಡ್ಡಿ!

    ಅಪ್ಪನಿಗಾಗಿ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ ಸೌಮ್ಯಾ ರೆಡ್ಡಿ!

    ಬೆಂಗಳೂರು: ಜಯನಗರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಶಾಸಕಿ ಸೌಮ್ಯಾರೆಡ್ಡಿಯವರು ತಂದೆಯ ಆಗಮನಕ್ಕಾಗಿ 40 ನಿಮಿಷ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಸೋಮವಾರ ಸಂಜೆ 4 ಗಂಟೆಯ ವೇಳೆಗೆ ಸ್ಪೀಕರ್ ಕಚೇರಿಯಲ್ಲಿ ನೂತನ ಶಾಸಕಿ ಸೌಮ್ಯಾರೆಡ್ಡಿಯವರ ಪ್ರಮಾಣ ವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸೌಮ್ಯರೆಡ್ಡಿಯವರು ತಮ್ಮ ತಾಯಿ ಹಾಗೂ ತಮ್ಮನ ಜೊತೆ ಕಚೇರಿಗೆ ಆಗಮಿಸಿದ್ದರು. ಇನ್ನೆನೂ ಕಾರ್ಯಕ್ರಮ ಪ್ರಾರಂಭಿಸಬೇಕು ಎನ್ನುವಷ್ಟರಲ್ಲಿ ಸೌಮ್ಯಾರೆಡ್ಡಿಯವರು ನಮ್ಮ ತಂದೆ ಬರುವವರೆಗೂ ಸ್ವಲ್ಪ ಹೊತ್ತು ಕಾಯುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ಮನವಿಮಾಡಿಕೊಂಡರು. ಸೌಮ್ಯಾರೆಡ್ಡಿಯವರ ಪಿತೃಪ್ರೇಮವನ್ನು ಕಂಡು ಸ್ಪೀಕರ್ ಕೂಡ ರಾಮಲಿಂಗರೆಡ್ಡಿಯವರಿಗಾಗಿ ಕಾದು ಕುಳಿತರು.

    ಸುಮಾರು 40 ನಿಮಿಷಗಳ ಕಾಲ ಕಾದರೂ ರಾಮಲಿಂಗರೆಡ್ಡಿಯವರು ಆಗಮಿಸಲಿಲ್ಲ. ಕೊನೆಗೆ ತಾಯಿ ಮತ್ತು ಸಹೋದರ ಸಮ್ಮುಖದಲ್ಲಿ ಭಗವಂತ ಹಾಗೂ ಸತ್ಯ ನಿಷ್ಠೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ನಂತರ ಮಾತನಾಡಿದ ಸೌಮ್ಯರೆಡ್ಡಿ ಜಯನಗರ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ ಎಂದು ಹೇಳಿದರು.