Tag: sp balasubrahmanyam

  • 2006ರಲ್ಲಿ ಎಸ್‍ಪಿಬಿ ಹೇಳಿದ್ದ ಗುಟ್ಟು ನೆನೆದ ರಂಭಾಪುರಿ ಶ್ರೀ

    2006ರಲ್ಲಿ ಎಸ್‍ಪಿಬಿ ಹೇಳಿದ್ದ ಗುಟ್ಟು ನೆನೆದ ರಂಭಾಪುರಿ ಶ್ರೀ

    ಚಿಕ್ಕಮಗಳೂರು: ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ದೇಶದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ತಮ್ಮೊಂದಿಗಿನ ವಡನಾಟವನ್ನೂ ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಡಾ.ವೀರಸೋಮೇಶ್ವರ ಶ್ರೀಗಳು ಸಹ ತಮ್ಮ ಬಳಿ ಎಸ್‍ಪಿಬಿ ಹೇಳಿದ್ದ ಗುಟ್ಟಿನ ಕುರಿತು ಹೇಳಿದ್ದಾರೆ.

    ಕೊರೊನಾ ಚಿಕಿತ್ಸೆಯ ಬಳಿಕ ವಿಶ್ರಾಂತಿಯಲ್ಲಿರುವ ಶ್ರೀಗಳು ಅಲ್ಲಿಂದಲೇ ಗಾನಗಂಧರ್ವನ ಕುರಿತು ಮಾತನಾಡಿದ್ದಾರೆ. ಎಸ್‍ಪಿಬಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನನ್ನ ಹೆಸರು ಶ್ರೀಪತಿ ಪಂಡಿತಾರಾಧ್ಯ ಬಾಲಸುಬ್ರಹ್ಮಣ್ಯಂ ಎಂದು, ನಾನು ಆರಾಧಿಸೋದು ವೀರಭದ್ರಸ್ವಾಮಿಯನ್ನು, ನಮ್ಮದು ವೀರಭದ್ರಸ್ವಾಮಿಯನ್ನು ಆರಾಧಿಸುವ ಮನೆತನ ಎಂದು ಹೇಳಿದ್ದರಂತೆ. 2006ರಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಹೇಳಿದ ಗುಟ್ಟನ್ನು ರಂಭಾಪುರಿ ಶ್ರೀಗಳು ಇದೀಗ ನೆನೆದಿದ್ದಾರೆ.

    ಸೌಜನ್ಯಶೀಲ ಹಿನ್ನೆಲೆಯ ಗಾಯಕ ಬಾಲಸುಬ್ರಹ್ಮಣ್ಯಂ ಅವರ ನಿಧನದ ವಿಷಯ ಕೇಳಿ ಅತ್ಯಂತ ನೋವಾಗಿದೆ. ಎಸ್‍ಪಿಬಿ ಅವರು 15 ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಸುಮಧುರ ಕಂಠದಿಂದ ಹಾಡಿದ ಶ್ರೇಯಸ್ಸು ಅವರದ್ದು. ಕನ್ನಡದಲ್ಲಿ ಅವರು ಹಾಡಿದ ಭಕ್ತಿಗೀತೆಗಳು ಜನಮನ ಮುಟ್ಟಿದ್ದು, ನಾವು ಅವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ಹಾಡಿದ ಚಿತ್ರಗೀತೆಗಳು ಕೂಡ ಜನರ ಮನಸ್ಸಲ್ಲಿ ಸದಾ ಹಚ್ಚಹಸಿರಾಗಿವೆ ಎಂದಿದ್ದಾರೆ.

    ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯರಿಗೆ ಬೋಧಿಸಿದ ಸಿದ್ಧಾಂತ ಶೀಖಾಮಣಿಯ ಶ್ಲೋಕಗಳನ್ನು ರಾಗ-ಲಯ ಬದ್ಧವಾಗಿ ಹಾಡಿ ಅದಕ್ಕೆ ಕನ್ನಡದಲ್ಲಿ ಸರಳವಾಗಿ ಅರ್ಥವನ್ನೂ ಹೇಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬಾಳೆಹೊನ್ನೂರಿನಲ್ಲಿ ನಡೆದ ರಸಮಂಜರಿ ಕಾರ್ಯಕ್ರಮಕ್ಕೂ ಅವರು ಆಗಮಿಸಿದ್ದರು. ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ದರ್ಶನವನ್ನೂ ಮಾಡಿ ಸಂದರ್ಶನಕ್ಕೆ ಬಂದಾಗ ಗುಟ್ಟಿನ ಮಾತು ಹೇಳಿ ಸಂತೋಷಗೊಳಿಸಿದ್ದರು.

    ವೀರಭದ್ರಸ್ವಾಮಿ ನನ್ನ ಆರಾಧ್ಯ ದೈವ. ನಮ್ಮದು ವೀರಭದ್ರಸ್ವಾಮಿಯನ್ನೇ ಆರಾಧಿಸುವ ಮನೆತನ. ನನ್ನ ಹೆಸರು ಶ್ರೀಪತಿ ಪಂಡಿತರಾಧ್ಯ ಬಾಲಸುಬ್ರಹ್ಮಣ್ಯಂ ಇದು ನನ್ನ ಪೂರ್ಣ ಹೆಸರು ಎಂದು ಹೇಳಿದ್ದರು. ಶಿವ ಭಕ್ತರಾದ ಮತ್ತು ವೀರಶೈವ ಪರಂಪರೆಯಲ್ಲಿ ಹುಟ್ಟಿದ ಅವರು ಎಲ್ಲ ವರ್ಗದ ಎಲ್ಲ ಸಮುದಾಯದ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅಂತಹ ಶ್ರೇಷ್ಠ ಗಾಯಕರನ್ನು ಈ ನಾಡು ಕಳೆದುಕೊಂಡು ತಬ್ಬಲಿಯಾಗಿದೆ ಕೊರೊನಾ ಸೋಂಕಿನಿಂದ ಬಳಲಿ ಇಂದು ನಮ್ಮನ್ನೆಲ್ಲ ಬಿಟ್ಟು ಹೋಗಿದ್ದು ಅತೀವ ದುಃಖ ತಂದಿದೆ. ಅವರ ಪವಿತ್ರ ಆತ್ಮಕ್ಕೆ ಭಗವಂತ ಚಿರಶಾಂತಿ ಅನುಗ್ರಹಿಸಲಿ. ಭಗವಂತ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

  • ಮತ್ತೆ ಬಂದು ಹಾಡ್ತಾರೆ ಎಂದುಕೊಂಡಿದ್ದೆವು- ಸಿದ್ದರಾಮಯ್ಯ ಸಂತಾಪ

    ಮತ್ತೆ ಬಂದು ಹಾಡ್ತಾರೆ ಎಂದುಕೊಂಡಿದ್ದೆವು- ಸಿದ್ದರಾಮಯ್ಯ ಸಂತಾಪ

    – ಹಾಡಿನಿಂದ ಅಮರರಾದ ಎಸ್‍ಪಿಬಿ

    ಬೆಂಗಳೂರು: ಗಾನ ಗಂಧರ್ವ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮ್ಯಯ ಅವರು ಸಂತಾಪ ಸೂಚಿಸಿದ್ದಾರೆ.

    ದೀರ್ಘ ಕಾಲ ಜೀವನ್ಮರಣ ಹೋರಾಟ ಮಾಡಿ ಇವತ್ತು ಎಸ್‍ಪಿಬಿ ನಮ್ಮನ್ನು ಅಗಲಿದ್ದಾರೆ. ತಮಿಳುನಾಡು ನಾಡಲ್ಲಿ ಹುಟ್ಟಿದ್ದರೂ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಹಾಡು ಹಾಡಿದ್ದರು. ಒಟ್ಟು 40 ಸಾವಿರ ಹಾಡು ಹಾಡಿದ್ದಾರೆ. ರಾಜಕುಮಾರ್ ಅಂದು ಒಂದು ಮಾತು ಹೇಳಿದ್ದರು. ಬಾಲಸುಬ್ರಹ್ಮಣ್ಯ ಆತ್ಮ, ನಾನು ಶರೀರ ಇದ್ದಹಾಗೆ ಎಂದಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.

    ಯಾವ ಭಾಷೆ ಎಂಬುವುದು ಮುಖ್ಯವಲ್ಲ. ಅವರು ಭಾವ ವಿಖ್ಯಾತ. ಅವರು ಯಾವಾಗಲೂ ಹಾಡುವಾಗ ಭಾವ ಪರವಶರಾಗಿ ಹಾಡುತ್ತಿದ್ದರು. ಮತ್ತು ಅವರು ಭಾವಗಳಗೆ ಜೀವ ತುಂಬುತ್ತಿದ್ದರು. ಅತ್ಯದ್ಬುತ ಪ್ರತಿಭೆ ಇದ್ದಂತ ಹಿನ್ನೆಲೆ ಗಾಯಕ. ಎದೆತುಂಬಿ ಹಾಡುವ ಕಾರ್ಯಕ್ರಮದ ಮೂಲಕ ದೀರ್ಘಕಾಲ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರು ಎಂದು ಎಸ್‍ಪಿಬಿ ಅವರನ್ನು ನೆನೆದರು.

    ಬಹು ಸಮಯದಿಂದ ಕೋವಿಡ್‍ನಿಂದ ಬಳಲಿದ್ದರು. ಅವರು ಐಸಿಯುನಿಂದ ಹೊರ ಬರುತ್ತಾರೆ ಅಂತ ಅವರ ಮಗ ಹೇಳಿದಾಗ ಮತ್ತು ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದಾಗ ಎಲ್ಲರೂ ಆಶಾಭಾವನೆಯಿಂದ ಇದ್ದರು. ಅವರು ಮತ್ತೆ ಬಂದು ಹಾಡ್ತಾರೆ ಎಂದುಕೊಂಡಿದ್ದೆವು. ಸುಮಾರು 59 ವರ್ಷಗಳ ಕಾಲ ಹಾಡಿ ಇವತ್ತು ಗಾನ ನಿಲ್ಲಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಹೇಳಿದ್ದಾರೆ.

    ಇತ್ತ ಡಿಸಿಎಂ ಸವದಿ ಅವರು ಕೂಡ ಸಂತಾಪ ಸೂಚಿಸಿದ್ದು, ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ಅಸ್ತಂಗತರಾಗುವುದರೊಂದಿಗೆ ಚಲನಚಿತ್ರ ಸಂಗೀತದ ಒಂದು ಯುಗವೇ ಅಂತ್ಯವಾಯಿತು ಎಂದು ಹೇಳಲು ನನಗೆ ತೀವ್ರ ದುಃಖವಾಗುತ್ತಿದೆ. ಎಸ್.ಪಿ.ಬಿ. ಈಗ ನಮ್ಮೊಂದಿಗೆ ಇಲ್ಲದಿರಬಹುದು, ಆದರೆ ಅವರ ಮಾಧುರ್ಯ ಸಿರಿಕಂಠದ ಗೀತ, ಸಂಗೀತಗಳಿಂದ ನಮ್ಮ ಮನಸ್ಸಿನಲ್ಲಿ ಸದಾ ನೆಲೆಸಿರುತ್ತಾರೆ. ಅವರಿಗೆ ಸಂಗೀತವೇ ಸರ್ವಸ್ವವಾಗಿತ್ತು.

    ನಿನ್ನ ನೀನು ಮರೆತರೇನು ಸುಖವಿದೆ…ತನ್ನತನವ ತೊರೆದರೇನು ಸೊಗಸಿದೆ… ಎಂದು ಅತ್ಯಂತ ಸೊಗಸಾಗಿ ಬದುಕಿನ ಅರ್ಥ ಸ್ಫುರಿಸುವಂತೆ ಹಾಡಿದ ಎಸ್‍ಪಿಬಿ ಅವರು ನಿಜಕ್ಕೂ ಅಮರರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಹೀಗೆ ಅನೇಕ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ ಎಂದರೆ ಅವರ ಸೃಜನಶೀಲತೆಯ ಅಂತಃಸತ್ವ ಎಷ್ಟೊಂದು ಸಮರ್ಥವಾಗಿತ್ತು ಎಂಬುದನ್ನು ಅರ್ಥೈಸಿಕೊಳ್ಳಬಹುದು. ಆದರೆ ಅವರ ಮೊದಲ ಪ್ರೀತಿ ಮತ್ತು ಒಲವು ಕನ್ನಡದ ಬಗ್ಗೆ ಇತ್ತು ಎಂಬುದು ಹೆಮ್ಮೆಯ ಸಂಗತಿ. ಅನೇಕ ಗೌರವ ಡಾಕ್ಟರೇಟ್ ಗಳಿಂದ ಹಿಡಿದು ಪದ್ಮ ಪ್ರಶಸ್ತಿವರೆಗೆ ಅನೇಕ ಪುರಸ್ಕಾರಗಳು ಅವರ ಪ್ರತಿಭೆಗೆ ಸಂದಿದ್ದವು.

    ಹೀಗೆ ಸರಸ್ವತಿಯ ಪುತ್ರರಾಗಿದ್ದ ಶ್ರೀ ಎಸ್.ಪಿ.ಬಿ. ಅವರ ಪ್ರತಿಭೆಗೆ ಅವರೇ ಸಾಟಿ. ಅವರ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅಗಲಿದ ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ. ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನನ್ನ ಸಾಂತ್ವನಗಳು. ಕೊರೊನಾ ಮಹಾಮಾರಿಯಿಂದಾಗಿ ನಮ್ಮ ನಾಡು ಇತ್ತೀಚೆಗೆ ಹಲವು ಗಣ್ಯರನ್ನು ಕಳೆದುಕೊಂಡು ಆತಂಕದಲ್ಲಿದೆ. ಇವರ ಅಗಲಿಕೆಯನ್ನು ನಮಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರು ಕೊರೊನಾ ಪಿಡುಗಿಗೆ ಮುಕ್ತಿ ನೀಡಿ ನಾಡಿನ ಜನರಲ್ಲಿ ಸುಖಶಾಂತಿ ಸಮಾಧಾನ ನೆಲೆಸುವಂತೆ ಆಶೀರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.

  • ಸಂಗೀತವನ್ನೇ ಉಸಿರಾಗಿಸಿದ್ದ ಎಸ್‍ಪಿಬಿಗೆ ಆಸ್ಪತ್ರೆಯಲ್ಲಿ ನಡೆದಿತ್ತು ಸಂಗೀತ ಥೆರಪಿ

    ಸಂಗೀತವನ್ನೇ ಉಸಿರಾಗಿಸಿದ್ದ ಎಸ್‍ಪಿಬಿಗೆ ಆಸ್ಪತ್ರೆಯಲ್ಲಿ ನಡೆದಿತ್ತು ಸಂಗೀತ ಥೆರಪಿ

    ಡೀ ಕರುನಾಡು ಎರಡೂ ಕೈ ಎತ್ತಿ ಮುಗಿಯುತ್ತಿತ್ತು. ದೇಶಾದ್ಯಂತ ಅಭಿಮಾನಿಗಳು ಕಂಡ ಕಂಡ ದೇವರಿಗೆ ಹರಕೆ ಹೊತ್ತಿದ್ದರು. ನಮ್ಮ ಸ್ವರ ಸಾಮ್ರಾಟ, ನಮ್ಮೆಲ್ಲರನ್ನು ಕಂಠದಿಂದ ಕುಣಿಸಿದ ದೇವರ ಮಗ ನಮ್ಮನ್ನು ನೂರಾರು ವರ್ಷ ಸುಖ ಕೊಟ್ಟ ಪವಿತ್ರ ಜೀವ. ಆ ಶರೀರವನ್ನು ನಮಗೆ ಉಳಿಸಿಕೊಡು, ನಮ್ಮ ಜೊತೆ ನೂರಾರು ವರ್ಷ ಬದುಕುವಂತೆ ಮಾಡು…ಹೀಗೆ ಕನ್ನಡ ಮಣ್ಣಿನ ಪ್ರತಿ ಜೀವ ಬೇಡುತ್ತಿತ್ತು. ಆದರೆ ವಿಧಿ ಬರಹವನ್ನು ಯಾರಿದಂಲೂ ಬದಲಿಸಲು ಸಾಧ್ಯವಾಗಲಿಲ್ಲ.

    ಎಸ್‍ಪಿಬಿ ನಮ್ಮನ್ನು ಅಗಲಿದರೂ ಅವರ ಹಾಡಿದ ಹಾಡುಗಳು ಈಗಲೂ ಜೀವಂತವಿದೆ. ಸಂಗೀತ ಕಾರ್ಯಕ್ರಮಗಳಲ್ಲಿ ಈಗಲೂ ಕೇಳಿಸುತ್ತದೆ. ಕೇವಲ ಸಿನಿಮಾ ಗೀತೆ ಮಾತ್ರ ಅಲ್ಲ, ಭಕ್ತಿಗೀತೆ, ಭಾವಗೀತೆ, ಶಾಸ್ತ್ರೀಯ ಗೀತೆ…ಯಾವುದನ್ನೇ ಕೇಳಿದರೂ ಅಲ್ಲಿ ಎಸ್‍ಪಿಬಿ ಹೆಸರು ಕಾಣಿಸುತ್ತದೆ ಮತ್ತು ಕೇಳಿಸುತ್ತದೆ.

    ಎಸ್‍ಪಿಬಿ ಸಂಗೀತವನ್ನೇ ಬದುಕು ಮಾಡಿಕೊಂಡವರು. ಎಂಜಿನಿಯರ್ ಆಗಬೇಕಿದ್ದ ಅವರು ಅದೊಂದು ದಿನ ಸಂಗೀತವೇ ನನ್ನ ಉಸಿರು ಎನ್ನುತ್ತಾ ಗಾಯನ ಲೋಕಕ್ಕೆ ಕಾಲಿಟ್ಟರು. ಹಾಡುತ್ತಾ ಹಾಡುತ್ತಾ ಅದನ್ನೇ ಉಸಿರು ಮಾಡಿಕೊಂಡರು. ಇನ್ನೊಬ್ಬರಿಂದ ಅಕ್ಷರ ಅಕ್ಷರ ಕಲಿತರು. ಎಲ್ಲರಿಂದಲೂ ಒಂದೊಂದು ಪದಗಳನ್ನು ಅರಿತರು. ಸಾಲುಗಳನ್ನು ಉರು ಹೊಡೆದರು. ಭಾಷೆ ಯಾವುದಾದರೇನು? ಸಂಗೀತಕ್ಕೆ ಯಾವುದೆ ಭಾಷೆ ಇಲ್ಲ ಎನ್ನುತ್ತಾ ಎಲ್ಲಾ ಭಾಷೆಗಳಲ್ಲೂ ಹಾಡಿದರು. ಕನ್ನಡ, ತಮಿಳು, ತೆಲುಗು, ಹಿಂದಿ…ಹೀಗೆ ಎಲ್ಲಾ ಭಾಷೆ ಚಿತ್ರರಂಗದಲ್ಲೂ ಹೆಸರು ಮಾಡಿದರು.

    ಈಗ ಅದೇ ಎಸ್‍ಪಿಬಿ ಆಸ್ಪತ್ರೆಯಲ್ಲಿ ಮಲಗಿದ್ದಾಗ ವೈದ್ಯರು ಅವರ ಜೀವವನ್ನು ಕಾಪಾಡಲು ಹಠ ಹಿಡಿದಿದ್ದರು. ಎಲ್ಲಾ ರೀತಿಯಿಂದಲೂ ಅವರ ಬದುಕನ್ನು ಕಾಪಾಡಲು ಪಣ ತೊಟ್ಟಿದ್ದರು. ಎಸ್‍ಪಿಬಿಗೆ ಸಂಗೀತ ಥೆರಪಿಯನ್ನು ವೈದ್ಯರು ನಡೆಸಿದ್ದರು.

    ಸಂಗೀತ ಥೆರಪಿ…ಇದೂ ಒಂದು ರೀತಿಯ ಚಿಕಿತ್ಸೆ. ಸಂಗೀತವನ್ನೇ ಉಸಿರು ಮಾಡಿಕೊಂಡಿರುವ ಬಾಲು ಅವರಿಗೆ ಅದೇ ಥೆರಪಿ ನೀಡಿ ಗುಣಮುಖರಾಗಿಸಲು ಯತ್ನಿಸಿದ್ದರು ಆಸ್ಪತ್ರೆ ವೈದ್ಯರು. ಅಂದರೆ ಐಸಿಯುನಲ್ಲಿ ಎಸ್‍ಪಿ ಅವರೇ ಹಾಡಿರುವ ಗೀತೆಗಳನ್ನು ಹಾಕಿದ್ದರು. ಭಕ್ತಿಗೀತೆ, ಭಾವಗೀತೆ, ಸಿನಿಮಾ ಗೀತೆ…ಎಲ್ಲವನ್ನೂ ಅಲ್ಲಿಯೇ ಕೇಳಿಸಿದ್ದರು. ಅದೇ ಅವರನ್ನು ಕಾಪಾಡಲಿ ಎನ್ನುವುದು ಉದ್ದೇಶ. ಸಂಗೀತವೇ ಅವರ ಹೃದಯ ಬಡಿತಕ್ಕೆ ದಾರಿ ದೀಪವಾಗಲಿ ಎನ್ನುವ ಬಯಕೆ. ಎಸ್‍ಪಿಬಿ ಕೂಡ ಆ ಹಾಡುಗಳನ್ನು ಕೇಳುತ್ತಾ ನಗು ಮುಖ ತಂದುಕೊಂಡಿದ್ದರು. ಆದರೆ ಮತ್ತೆ ಸ್ಥಿತಿ ಗಂಭೀರವಾಗುತ್ತಾ ಹೋಯಿತು.

    ಎಸ್‍ಪಿಬಿ ಎಲ್ಲ ಭಾಷೆಗಳಲ್ಲೂ ಎಲ್ಲಾ ಕ್ಷೇತ್ರಗಳಲ್ಲೂ ಹಾಡಿದ್ದಾರೆ. ಅಂದರೆ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆ ಸಿನಿಮಾಗಳಿಗೆ ಹಾಡಿದ್ದಾರೆ ನಿಜ. ಅದನ್ನು ಮೀರಿ ಕೆಲವು ಭಾಷೆಗಳಲ್ಲಿ ಭಕ್ತಿಗೀತೆ, ಭಾವಗೀತೆಗಳನ್ನು ಹಾಡಿದ್ದಾರೆ. ಅದರಲ್ಲೂ ಕನ್ನಡ ಭಾಷೆಗಳಲ್ಲಿ ಅನೇಕ ಭಕ್ತಿಗೀತೆಗಳನ್ನು ಹಾಡಿದ್ದಾರೆ. ಜನಪದ ಗೀತೆಗಳಿಗೂ ಧ್ವನಿ ನೀಡಿದ್ದಾರೆ. ಸಾಯಿಬಾಬಾ, ಗಣೇಶ ದೇವರ ಮೇಲೂ ಅನೇಕ ಗೀತೆಗಳನ್ನು ಹಾಡಿದ್ದಾರೆ. ಅದೇ ಗೀತೆಗಳು ಈಗ ಆಸ್ಪತ್ರೆಯ ಐಸಿಯು ವಾರ್ಡಿನಲ್ಲಿ ಮೊಳಗುತ್ತಿತ್ತು. ಅದರಿಂದ ಅವರ ಆರೋಗ್ಯ ಕೂಡ ಗುಣಮುಖದತ್ತ ತಿರುಗಿತ್ತು.

    ಅದೊಂದು ಕಾಲದಲ್ಲಿ ದೇವರನ್ನೇ ನೆನಪು ಮಾಡಿಕೊಳ್ಳುತ್ತಾ, ದೇವರನ್ನೇ ಸ್ಮರಿಸುತ್ತಾ, ದೇವರೇ ಎಲ್ಲರನ್ನೂ ಕಾಪಾಡಲಿ ಎನ್ನುತ್ತಾ ಎಸ್‍ಪಿಬಿ ಸಾಯಿಬಾಬಾ ಅವರನ್ನು ಕುರಿತು ಹಾಡಿದ್ದರು. ಉಸಿರು ಬಿಗಿ ಹಿಡಿದು, ನಾಭಿಯಿಂದ ಸಾಯಿಬಾಬಾ ಅವರನ್ನು ನೆನೆಯುತ್ತಿದ್ದ ಜೀವ ಈಗ ಹೈರಾಣಾಗಿತ್ತು

    ಕೇವಲ ಸಾಯಿಬಾಬಾ ಮಾತ್ರ ಅಲ್ಲ, ಶಬರಿಮಲೆ ಅಯ್ಯಪ್ಪ, ಚಾಮುಂಡಿ ತಾಯಿ, ತಿರುಪತಿ ವೆಂಕಟೇಶ್ವರ. ಹೀಗೆ ಎಲ್ಲಾ ದೇವಾನು ದೇವತೆಗಳನ್ನು ಸ್ಮರಣೆಯನ್ನು ಭಕ್ತಿಯಿಂದ, ಶ್ರದ್ದೆಯಿಂದ ಮಾಡಿದ್ದರು. ಅದನ್ನೇ ಬದುಕು ಮಾಡಿಕೊಂಡಿದ್ದರು. ಈ ದೇವರ ಅನುಗ್ರಹವೇ ನನ್ನನ್ನು ಉಳಿಸಲಿ, ಬೆಳೆಸಲಿ, ಕಾಪಾಡಲಿ ಎನ್ನುತ್ತಿದ್ದರು.

  • ಗಾಯನ ನಿಲ್ಲಿಸಿದ ಎಸ್‌ಪಿ ಬಾಲಸುಬ್ರಹ್ಮಣ್ಯಂ

    ಗಾಯನ ನಿಲ್ಲಿಸಿದ ಎಸ್‌ಪಿ ಬಾಲಸುಬ್ರಹ್ಮಣ್ಯಂ

    ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

    ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಸುಮಾರು 1.4 ನಿಮಿಷಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಅವರ ಮಗ ಚರಣ್ ಅಧಿಕೃತವಾಗಿ ಹೇಳಿದರು.

    ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ ವರದಿ ನೆಗೆಟಿವ್ ಬಂದಿತ್ತು.

    ಆಗಸ್ಟ್‌ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್‌–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್‌ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯುವ ಬಗ್ಗೆ ಮಾಹಿತಿ ಸಿಕ್ಕಿದೆ.

    ವಿಡಿಯೋ ಬಿಡುಗಡೆ ಮಾಡಿದ್ದ ಎಸ್‌ಪಿಬಿ ನನ್ನ ಆರೋಗ್ಯ ಸರಿ ಇರಲಿಲ್ಲ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶೀತ ಮತ್ತು ಜ್ವರ ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಬಳಿಗೆ ಚಿಕಿತ್ಸೆ ಪಡೆಯಲು ಮುಂದಾದೆ. ಪರೀಕ್ಷೆಯ ಬಳಿಕ ಕೊರೊನಾ ಸೋಂಕು ಸಣ್ಣ ಪ್ರಮಾಣದಲ್ಲಿರುವುದು ಗೊತ್ತಾಯಿತು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದರು. ಆದರೆ ಕುಟುಂಬದ ಸದಸ್ಯರು ಒಪ್ಪದ ಕಾರಣ ಆಸ್ಪತ್ರೆಗೆ ದಾಖಲಾದೆ. ನನ್ನ ಆರೋಗ್ಯದ ಬಗ್ಗೆ ಯಾರೊಬ್ಬರು ಚಿಂತಿಸಬೇಕಿಲ್ಲ. ನನ್ನ ಆರೋಗ್ಯ ವಿಚಾರಿಸಲು ಮೊಬೈಲ್ ಕಾಲ್‌ ಮಾಡಬೇಡಿ. ಕಾಲ್‌ ಸ್ವೀಕರಿಸುವ ಸ್ಥಿತಿಯಲ್ಲಿ ನಾನಿಲ್ಲ. ಶೀತದ ಹೊರತಾಗಿ ನಾನು ಚೆನ್ನಾಗಿದ್ದೇನೆ. ಜ್ವರವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಗುಣಮುಖನಾಗುತ್ತೇನೆ ಎಂದು ಹೇಳಿದ್ದರು.

    ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು. ಇವರ ಕಲಾ ಸೇವೆಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು.

    1946ರ ಜೂನ್‌ 4 ರಂದು ಜನಿಸಿದ್ದ ಎಸ್‌ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ.

    ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್‍ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

    https://www.instagram.com/p/B4omhXhBovv/

  • ಎಸ್‍ಪಿಬಿ ಆರೋಗ್ಯ ಮತ್ತಷ್ಟು ಚಿಂತಾಜನಕ

    ಎಸ್‍ಪಿಬಿ ಆರೋಗ್ಯ ಮತ್ತಷ್ಟು ಚಿಂತಾಜನಕ

    ಚೆನ್ನೈ: ಹಿರಿಯ ಗಾಯಕ, ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಲೈಫ್ ಸಪೋರ್ಟ್ ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್‍ಪಿಬಿ ಅವರ ಚಿಕಿತ್ಸೆ ಮುಂದುವರಿದಿದೆ.

    ಎಂಜಿಎಂ ಆಸ್ಪತ್ರೆ ಎಸ್‍ಪಿಬಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆಗಸ್ಟ್ 5ರಂದು ಎಸ್‍ಪಿಬಿ ದಾಖಲಾಗಿದ್ದರು. ಎಕ್ಮೋ ಮತ್ತು ಇನ್ನಿತರ ಲೈಫ್ ಸಪೋರ್ಟ್ ಮೇಲೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 24 ಗಂಟೆಯಿಂದ ಎಸ್‍ಪಿಬಿ ಆರೋಗ್ಯ ಕ್ಷೀಣಿಸುತ್ತಿದ್ದು, ಹೆಚ್ಚು ಲೈಫ್ ಸಪೋರ್ಟ್ ಸಾಧನಗಳನ್ನು ಬಳಕೆ ಮಾಡಲಾಗುತ್ತಿದೆ. ಎಂಜಿಎಂ ಆಸ್ಪತ್ರೆಯ ನುರಿತ ವೈದ್ಯರ ತಂಡ ಎಸ್‍ಪಿಬಿ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಹೇಳಿದೆ.

    ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್‍ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

    ತಂದೆಯ ಆರೋಗ್ಯ ಸುಧಾರಣೆಯಾಗುತ್ತಿದೆ. ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಸ್ಪತ್ರೆಯಲ್ಲಿ ಆಚರಿಸಿದ್ದಾರೆ. ಈಗ ಆಸ್ಪತ್ರೆಯಲ್ಲೇ ಎಸ್‍ಪಿಬಿ ಟೆನ್ನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದರು.

    ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿವೆ. ಆಗಸ್ಟ್ 24ರಂದು ಎಸ್‍ಪಿಬಿ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.

  • ಎಸ್‌ಪಿಬಿಗೆ ಶ್ವಾಸಕೋಶದ ಕಸಿ ಮಾಡಲ್ಲ, ವದಂತಿ ನಂಬಬೇಡಿ- ಆಸ್ಪತ್ರೆ ವೈದ್ಯರು

    ಎಸ್‌ಪಿಬಿಗೆ ಶ್ವಾಸಕೋಶದ ಕಸಿ ಮಾಡಲ್ಲ, ವದಂತಿ ನಂಬಬೇಡಿ- ಆಸ್ಪತ್ರೆ ವೈದ್ಯರು

    ಚೆನ್ನೈ: ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಶ್ವಾಸಕೋಶದ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿಲ್ಲ ಎಂದು ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ತಿಳಿಸಿದೆ.

    ಕೋವಿಡ್‌ 19 ನಿಂದ ಎಸ್‌ಪಿಬಿ ಚೇತರಿಸಿಕೊಂಡ ಬಳಿಕ ಅವರಿಗೆ ಶ್ವಾಸಕೋಶದ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ವಂದತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಎಂಜಿಎಂ ಆಸ್ಪತ್ರೆ ಸ್ಪಷ್ಟನೆ ನೀಡಿದೆ.

    ಕೊರೊನಾದಿಂದ ಚೇತರಿಕೆ ಕಂಡರೂ ಅವರಿಗೆ ಶ್ವಾಸಕೋಶದ ಸಮಸ್ಯೆಯಿದೆ. ಹೀಗಾಗಿ ಶೀಘ್ರವೇ ವೈದ್ಯರು ಶ್ವಾಸಕೋಶದ ಕಸಿ ಚಿಕಿತ್ಸೆ ಮಾಡಲಿದ್ದಾರೆ ಎಂಬ ಸುದ್ದಿ ವೈರಲ್‌ ಆಗಿತ್ತು.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದು ಆಸ್ಪತ್ರೆಯನ್ನು ಸಂಪರ್ಕಿಸಿದೆ. ಈ ವೇಳೆ ಶ್ವಾಸಕೋಶದ ಕಸಿ ಮಾಡುವುದಿಲ್ಲ. ಇದೊಂದು ಸುಳ್ಳು ವದಂತಿ ಎಂದು ಹೇಳಿದ್ದಾರೆ. ಶೀಘ್ರವೇ ವೈದ್ಯರು ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಿರುವ ವೆಂಟಿಲೇಟರ್‌ ಅನ್ನು ತೆಗೆಯುವ ಸಾಧ್ಯತೆಯಿದೆ.

    ಭಾನುವಾರ ಪುತ್ರ ಚರಣ್‌ ತಮ್ಮ ವಿಡಿಯೋದಲ್ಲಿ, ತಂದೆಯ ಆರೋಗ್ಯ ಸುಧಾರಣೆಯಾಗುತ್ತಿದೆ. ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಸ್ಪತ್ರೆಯಲ್ಲಿ ಆಚರಿಸಿದ್ದಾರೆ. ಈಗ ಆಸ್ಪತ್ರೆಯಲ್ಲೇ ಎಸ್‌ಪಿಬಿ ಟೆನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಎಂದು ತಿಳಿಸಿದ್ದರು. ಇದನ್ನೂ ಓದಿ: ತಂದೆ ಸಂಗೀತ ಕೇಳ್ತಾ, ತಾಳಕ್ಕೆ ತಕ್ಕಂತೆ ಕೈಯಾಡಿಸ್ತಿದ್ದಾರೆ: ಎಸ್‍ಪಿಬಿ ಪುತ್ರ

    ಇಷ್ಟು ದಿನ ಅಪ್‍ಡೇಟ್ ನೀಡದ್ದಕ್ಕೆ ದಯವಿಟ್ಟು ಕ್ಷಮಿಸಿ, ವೀಕೆಂಡ್ ಬಳಿಕ ನಮಗೆ ಗುಡ್ ನ್ಯೂಸ್ ಲಭ್ಯವಾಗಿದ್ದು, ಅವರ ಲಂಗ್ಸ್‍ನಲ್ಲಿ ಸಾಕಷ್ಟು ಸುಧಾರಣೆ ಕಾಣುತ್ತಿದೆ. ಆದರೆ ಇನ್ನೂ ಹೆಚ್ಚಿನ ಸುಧಾರಣೆಯಾಗಬೇಕಿರುವುದರಿಂದ ವೆಂಟಿಲೇಟರ್‍ನಲ್ಲಿಯೇ ಇಡಲಾಗಿದೆ. ಖುಷಿಯ ವಿಚಾರ ಎಂಬಂತೆ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ಆದರೆ ಕೋವಿಡ್ ವರದಿ ನೆಗೆಟಿವ್ ಪಾಸಿಟಿವ್ ಏನೇ ಇರಲಿ ನಮಗೀಗ ಶ್ವಾಸಕೋಶಗಳು ಬೇಗನೇ ಗುಣಮುಖವಾಗಬೇಕಿದೆ ಎಂದು ಹೇಳಿದ್ದರು.

    ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು. ಅಲ್ಲದೆ ಆಗಸ್ಟ್ 24ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.

     

  • ಕೊರೊನಾ ಮಣಿಸಿದ ಎಸ್‍ಪಿಬಿ- ಆರೋಗ್ಯದಲ್ಲಿ ಚೇತರಿಕೆ

    ಕೊರೊನಾ ಮಣಿಸಿದ ಎಸ್‍ಪಿಬಿ- ಆರೋಗ್ಯದಲ್ಲಿ ಚೇತರಿಕೆ

    – ಕ್ರಿಕೆಟ್, ಫುಟ್‍ಬಾಲ್ ಮ್ಯಾಚ್ ವೀಕ್ಷಣೆ
    – ಎಸ್‍ಪಿಬಿ ಪುತ್ರ ಚರಣ್ ಮಾಹಿತಿ

    ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಕಳೆದ ವಾರಕ್ಕಿಂತ ಈ ವಾರ ತುಂಬಾ ಸುಧಾರಣೆಯಾಗಿದೆ ಎಂದು ಎಸ್‍ಪಿಬಿ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ.

    ತಂದೆಯ ಆರೋಗ್ಯದ ಕುರಿತು ವಿಡಿಯೋ ಮೂಲಕ ಮಾಹಿತಿ ನೀಡಿರುವ ಅವರು, ಇಷ್ಟು ದಿನ ಅಪ್‍ಡೇಟ್ ನೀಡದ್ದಕ್ಕೆ ದಯವಿಟ್ಟು ಕ್ಷಮಿಸಿ, ವೀಕೆಂಡ್ ಬಳಿಕ ನಮಗೆ ಗುಡ್ ನ್ಯೂಸ್ ಲಭ್ಯವಾಗಿದ್ದು, ಅವರ ಲಂಗ್ಸ್‍ನಲ್ಲಿ ಸಾಕಷ್ಟು ಸುಧಾರಣೆ ಕಾಣುತ್ತಿದೆ. ಆದರೆ ಇನ್ನೂ ಹೆಚ್ಚಿನ ಸುಧಾರಣೆಯಾಗಬೇಕಿರುವುದರಿಂದ ವೆಂಟಿಲೇಟರ್‍ನಲ್ಲಿಯೇ ಇಡಲಾಗಿದೆ. ಖುಷಿಯ ವಿಚಾರ ಎಂಬಂತೆ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ಆದರೆ ಕೋವಿಡ್ ವರದಿ ನೆಗೆಟಿವ್ ಪಾಸಿಟಿವ್ ಏನೇ ಇರಲಿ ನಮಗೀಗ ಶ್ವಾಸಕೋಶಗಳು ಬೇಗನೇ ಗುಣಮುಖವಾಗಬೇಕಿದೆ ಎಂದು ತಿಳಿಸಿದ್ದಾರೆ.

    ಶ್ವಾಸಕೋಶಗಳು ಗುಣಮುಖವಾಗುತ್ತಿವೆ. ಆದರೆ ಕೆಲ ಸಮಯವನ್ನು ತೆಗೆದುಕೊಳ್ಳುತ್ತವೆ. ಮತ್ತೊಂದು ವಿಚಾರವೆಂದರೆ ನಮ್ಮ ತಂದೆ, ತಾಯಿಯ ವಿವಾಹ ವಾರ್ಷಿಕೋತ್ಸವವನ್ನು ಕಳೆದ ವಾರ ಸರಳವಾಗಿ ಸೆಲೆಬ್ರೇಟ್ ಮಾಡಿದ್ದೇವೆ. ತಂದೆಯವರು ಅವರ ಐ ಪ್ಯಾಡ್‍ನಲ್ಲಿಯೇ ಕ್ರಿಕೆಟ್ ಹಾಗೂ ಟೆನ್ನಿಸ್ ವೀಕ್ಷಿಸುತ್ತಿದ್ದಾರೆ. ಐಪಿಎಲ್ ಆರಂಭವಾಗುವುದನ್ನು ಕಾಯುತ್ತಿದ್ದಾರೆ. ಅಲ್ಲದೆ ಬರವಣಿಗೆ ಹಾಗೂ ಮಾತನಾಡುವುದನ್ನು ಮಾಡುತ್ತಿದ್ದಾರೆ. ಫಿಸಿಯೋಥೆರಪಿಯನ್ನು ಸಹ ಮಾಡಲಾಗುತ್ತಿದೆ. ನಿಮ್ಮೆಲ್ಲರ, ಪ್ರೀತಿ, ಕಾಳಜಿ, ಪ್ರಾರ್ಥನೆಗೆ ಧನ್ಯವಾದಗಳು ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

     

    View this post on Instagram

     

    A post shared by S. P. Charan/Producer/Director (@spbcharan) on

    ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು. ಅಲ್ಲದೆ ಆಗಸ್ಟ್ 24ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.

  • ಡೇಂಜರ್ ಝೋನ್‍ನಿಂದ ಎಸ್‍ಪಿಬಿ ಪಾರಾಗಿದ್ದು, ಖುಷಿ ತಂದಿದೆ: ತಲೈವಾ

    ಡೇಂಜರ್ ಝೋನ್‍ನಿಂದ ಎಸ್‍ಪಿಬಿ ಪಾರಾಗಿದ್ದು, ಖುಷಿ ತಂದಿದೆ: ತಲೈವಾ

    ಚೆನ್ನೈ: ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಡೇಂಜರ್ ಝೋನ್ ನಿಂದ ಪಾರಾಗಿದ್ದು, ಖುಷಿ ತಂದಿದೆ ಎಂದು ನಟ ರಜನಿಕಾಂತ್ ತಿಳಿಸಿದ್ದಾರೆ.

    ಈ ಸಂಬಂಧ ವಿಡಿಯೋ ಮಾಡಿ ಎಸ್‍ಪಿಬಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ತಲೈವಾ, ಈ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ 71 ವರ್ಷದ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಸದ್ಯ ಡೇಂಜರ್ ಝೋನ್ ನಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

    ಎಸ್‍ಪಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರ ಶೀಘ್ರ ಚೇರಿಕೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ. ಎಸ್‍ಪಿಬಿ ಅವರು ಕಳೆದ 50 ವರ್ಷಗಳಿಂದ ಹಲವು ಭಾರತೀಯ ಭಾಷೆಗಳಲ್ಲಿ ಹಾಡುಗಳನ್ನು ಹಾಡುವ ಮೂಲಕ ಜನರ ಮನ ಗೆದ್ದಿದ್ದಾರೆ. ತಮ್ಮ ಸುಮಧುರ ಕಂಠದಿಂದ ಕೋಟ್ಯಂತರ ಜನರ ಮೊಗದಲ್ಲಿ ಖುಷಿ ತಂದಿದ್ದಾರೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

    ಶುಕ್ರವಾರವಷ್ಟೇ ಎಸ್‍ಪಿಬಿ ಆರೋಗ್ಯದಲ್ಲಿ ಭಾರೀ ಏರುಪೇರು ಕಂಡಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು. ನಂತರ ಭಾನುವಾರ ಎಸ್‍ಪಿಬಿ ಪುತ್ರ ಎಸ್‍ಪಿ ಚರಣ್ ತಂದೆಯ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿ, ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸದ್ಯ ಅವರು ವೆಂಟಿಲೇಟರ್ ಸಹಾಯವಿಲ್ಲದೆ ಉಸಿರಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಆಗಸ್ಟ್ 5ರಂದು ಎಸ್‍ಪಿ ಅವರಿಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಶುಕ್ರವಾರ ಸಂಜೆ ಐಸಿಯುಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸದ್ಯ ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ.

  • ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ

    ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ

    ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

    ಎಸ್‍ಪಿಬಿ ಆರೋಗ್ಯ ಸ್ಥಿತಿಗತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಂಜಿಎಂ ಹೆಲ್ತ್ ಕೇರ್, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಜ್ಞ ವೈದ್ಯರ ತಂಡದ ಅವರ ಆರೈಕೆ ಮಾಡುತ್ತಿದೆ. ಅವರ ಸಲಹೆ ಮೇರೆಗೆ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.

    ಈಗಲೂ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಅವರ ಆರೋಗ್ಯದ ಕುರಿತು ನಿಗಾ ವಹಿಸಿದ್ದಾರೆ. ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.

    ಆಗಸ್ಟ್‌ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್‌–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್‌ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

    ವಿಡಿಯೋ ಬಿಡುಗಡೆ ಮಾಡಿದ್ದ ಎಸ್‌ಪಿಬಿ ಕಳೆದ ಎರಡು– ಮೂರು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶೀತ ಮತ್ತು ಜ್ವರ ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಬಳಿಗೆ ಚಿಕಿತ್ಸೆ ಪಡೆಯಲು ಮುಂದಾದೆ. ಪರೀಕ್ಷೆಯ ಬಳಿಕ ಕೊರೊನಾ ಸೋಂಕು ಸಣ್ಣ ಪ್ರಮಾಣದಲ್ಲಿರುವುದು ಗೊತ್ತಾಯಿತು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದರು. ಆದರೆ ಕುಟುಂಬದ ಸದಸ್ಯರು ಒಪ್ಪದ ಕಾರಣ ಆಸ್ಪತ್ರೆಗೆ ದಾಖಲಾದೆ. ನನ್ನ ಆರೋಗ್ಯದ ಬಗ್ಗೆ ಯಾರೊಬ್ಬರು ಚಿಂತಿಸಬೇಕಿಲ್ಲ. ನನ್ನ ಆರೋಗ್ಯ ವಿಚಾರಿಸಲು ಮೊಬೈಲ್ ಕಾಲ್‌ ಮಾಡಬೇಡಿ. ಕಾಲ್‌ ಸ್ವೀಕರಿಸುವ ಸ್ಥಿತಿಯಲ್ಲಿ ನಾನಿಲ್ಲ. ಶೀತದ ಹೊರತಾಗಿ ನಾನು ಚೆನ್ನಾಗಿದ್ದೇನೆ. ಜ್ವರವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಗುಣಮುಖನಾಗುತ್ತೇನೆ ಎಂದು ಹೇಳಿದ್ದರು.

    ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು.

  • ತನ್ನ ಮನೆಯನ್ನು ಕಂಚಿ ಮಠಕ್ಕೆ ದಾನ ಮಾಡಿದ ಎಸ್‍ಪಿಬಿ

    ತನ್ನ ಮನೆಯನ್ನು ಕಂಚಿ ಮಠಕ್ಕೆ ದಾನ ಮಾಡಿದ ಎಸ್‍ಪಿಬಿ

    ಹೈದರಾಬಾದ್: ಖ್ಯಾತ, ಬಹುಭಾಷಾ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಮನೆಯನ್ನು ಕಂಚಿ ಮಠದ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅವರಿಗೆ ದಾನ ಮಾಡಿದ್ದಾರೆ.

    ಈ ಹಿಂದೆ ಎಸ್‍ಪಿಬಿ ಅವರು ಆಂಧ್ರ ಪ್ರದೇಶದ ನೆಲ್ಲೂರ್ ನಲ್ಲಿರುವ ತಮ್ಮ ಮನೆಯನ್ನು ದಾನ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಕಂಚಿ ಮಠಕ್ಕೆ ಮನೆಯನ್ನು ದಾನ ಮಾಡಿದ್ದಾರೆ. ಆ ಮನೆಯಲ್ಲಿ ಸಂಸ್ಕೃತ ಹಾಗೂ ವೇದ ಪಾಠ ಶಾಲೆ ಮಾಡಬೇಕು ಎಂಬುದು ಎಸ್‍ಪಿಬಿ ಅವರ ಆಸೆ ಎಂದು ತಿಳಿದು ಬಂದಿದೆ.

    ದೇವರ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ಎಸ್‍ಪಿಬಿ ಅವರು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅಲ್ಲದೆ ಎಸ್‍ಪಿಬಿ ಅವರಿಗೆ ಸಂಸ್ಕೃತ ಮೇಲೆ ಸಾಕಷ್ಟು ಪ್ರೀತಿ ಇದೆ. ಹಾಗಾಗಿ ಒಂದು ಒಳ್ಳೆಯ ಉದ್ದೇಶಕ್ಕಾಗಿ ಎಸ್‍ಪಿಬಿ ತಮ್ಮ ಮನೆಯನ್ನು ದಾನ ಮಾಡಿದ್ದಾರೆ. ಈ ವಿಷಯ ತಿಳಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಎಸ್‍ಪಿ ಬಾಲಸುಬ್ರಮಣ್ಯಂ ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ಅತಿ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎಸ್‍ಪಿಬಿ ಒಟ್ಟು 16 ಭಾಷೆಯಲ್ಲಿ 40,000 ಹಾಡನ್ನು ಹಾಡಿದ್ದಾರೆ. ಸಿನಿಮಾಗಳಲ್ಲಿ ಅತಿ ಹೆಚ್ಚು ಹಾಡನ್ನು ಹಾಡಿ ಗಿನ್ನಿಸ್ ದಾಖಲೆ ಬರೆದಿದ್ದಾರೆ.

    ಎಸ್‍ಪಿಬಿ ಅವರಿಗೆ ಅತ್ಯುತ್ತಮ ಗಾಯಕನಾಗಿ ಒಟ್ಟು 6 ನ್ಯಾಷನಲ್ ಫಿಲ್ಮ್ ಪ್ರಶಸ್ತಿ ಬಂದಿದೆ.  ಬಾಲಿವುಡ್ ಹಾಡುಗಳಿಗೂ ಕೂಡ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ.