Tag: sp ravi channannavar

  • ಪ್ರತಾಪ್ ಸಿಂಹಗೆ ಪೊಲಿಟಿಕಲ್ ಮೆಚ್ಯುರಿಟಿ ಇಲ್ಲ: ಸಿಎಂ ಸಿದ್ದರಾಮಯ್ಯ

    ಪ್ರತಾಪ್ ಸಿಂಹಗೆ ಪೊಲಿಟಿಕಲ್ ಮೆಚ್ಯುರಿಟಿ ಇಲ್ಲ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಇನ್ನೂ ಪೊಲಿಟಿಕಲ್ ಮೆಚ್ಯೂರಿಟಿ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಹುಣುಸೂರು ಹನುಮ ಜಯಂತಿ ಘಟನೆಗೆ ಕೆಂಪಯ್ಯ ಕಾರಣ ಎಂದು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹಗೆ ಪೊಲಿಟಿಕಲ್ ಮೆಚ್ಯುರಿಟಿ ಬರಬೇಕು. ಆದರೆ ಅವರಿಗೆ ಮೆಚ್ಯುರಿಟಿ ಇಲ್ಲ. ಜನರ ಪ್ರತಿನಿಧಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಅವರು ಸಹಕರಿಸಬೇಕು. ಅದು ಬಿಟ್ಟು ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ. ಒಂದು ವೇಳೆ ಶಾಂತಿ ಕದಡುವ ಕೆಲಸ ಮಾಡಿದರೆ, ಅದನ್ನ ನಿಯಂತ್ರಣ ಮಾಡೋದು ವಿಪಕ್ಷ ಕೆಲಸವಲ್ಲ. ಅದು ಸರ್ಕಾರದ ಕೆಲಸ. ಆದ್ದರಿಂದ ಸರ್ಕಾರವೇ ಆ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

    ಪೊಲೀಸರು ನಿಗದಿ ಮಾಡಿದ ರಸ್ತೆಯಲ್ಲಿ ಮೆರವಣಿಗೆ ಹೋಗಬೇಕಿತ್ತು. ಆದರೆ ಪ್ರತಿಷ್ಠೆಗಾಗಿ ಬೇರೆ ಮಾರ್ಗದಲ್ಲಿ ಹೋಗಿದ್ದಾರೆ. ಸಮಾಜದಲ್ಲಿ ಶಾಂತಿ ಹಾಳು ಮಾಡೋ ಸಲುವಾಗಿ ಈ ರೀತಿ ಮಾಡಿದ್ದಾರೆ. ಇದಕ್ಕೆಲ್ಲಾ ಸರ್ಕಾರ ಅವಕಾಶ ಮಾಡಿಕೊಡಲ್ಲ. ಇದರಲ್ಲಿ ಕೆಂಪಯ್ಯ ಪಾತ್ರ ಏನು ಇಲ್ಲ ಎಂದು ಪ್ರತಾಪ್ ಸಿಂಹ ಮಾಡಿದ್ದ ಆರೋಪದ ವಿರುದ್ಧ ತಿರುಗೇಟು ನೀಡಿದರು.

    ಎಸ್.ಪಿ.ರವಿ ಚನ್ನಣ್ಣನವರ್‍ಗೆ ಕೆಂಪಯ್ಯ ಮಾತಾಡಿದರೆ ತಪ್ಪೇನು? ಯಾಕೆ ಮಾತಾಡಬಾರದು. ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಮಾತಾಡಿದ್ರೆ ಏನು ತಪ್ಪಿದೆ? ಅವರು ಗೃಹ ಇಲಾಖೆ ಸಲಹೆಗಾರರಾಗಿದ್ದು ಯಾಕೆ ಕೇಳಬಾರದು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಂಗಳವಾರ ಪ್ರತಾಪ್ ಸಿಂಹ ಫೇಸ್‍ಬುಕ್ ಲೈವ್ ನಲ್ಲಿ ನೀವು ಪೊಲೀಸ್ ಇಲಾಖೆಗೆ ನಿಷ್ಠರೋ, ಕೆಂಪಯ್ಯ ಅವರಿಗೆ ನಿಷ್ಠರೋ. ನಿಮ್ಮ ಮಾಸ್ಟರ್ ಯಾರು ಅಂತ ನನಗೆ ಗೊತ್ತಿದೆ. ಕರ್ತವ್ಯದ ಹೆಸರಿನಲ್ಲಿ ಜಿಲ್ಲಾಧಿಕಾರಿಗಳನ್ನು ಎಳೆದು ತರಬೇಡಿ ಎಂದು ಮೈಸೂರು ಎಸ್‍ಪಿ ರವಿಚನ್ನಣ್ಣನವರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

    https://www.youtube.com/watch?v=4lHDGBADYCs

    https://youtu.be/0C5M6aKA7SQ

     

  • ಪೊಲೀಸ್ ಇಲಾಖೆಗೆ ನಿಷ್ಠರೋ, ಕೆಂಪಯ್ಯಗೆ ನಿಷ್ಠರೋ: ಚನ್ನಣ್ಣನವರ್ ಗೆ ಪ್ರತಾಪ್ ಸಿಂಹ ಪ್ರಶ್ನೆ

    ಮೈಸೂರು: ಸಂಸದ ಪ್ರತಾಪ್ ಸಿಂಹ, ಎಸ್‍ಪಿ ರವಿಚನ್ನಣ್ಣನವರ್ ನಡುವಿನ ಸಮರ ಮತ್ತಷ್ಟು ತೀಕ್ಷ್ಣಗೊಳ್ಳುತ್ತಿದೆ. ಇಂದು ಫೇಸ್‍ಬುಕ್ ಲೈವ್ ನಲ್ಲಿ ಎಸ್‍ಪಿ ರವಿಚನ್ನಣ್ಣನವರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಫೇಸ್‍ಬುಕ್ ಲೈವ್‍ನಲ್ಲಿ ರವಿ ಚನ್ನಣ್ಣವರ್ ನೀವು ಪೊಲೀಸ್ ಇಲಾಖೆಗೆ ನಿಷ್ಠರೋ, ಕೆಂಪಯ್ಯ ಅವರಿಗೆ ನಿಷ್ಠರೋ. ನಿಮ್ಮ ಮಾಸ್ಟರ್ ಯಾರು ಅಂತ ನನಗೆ ಗೊತ್ತಿದೆ. ಕರ್ತವ್ಯದ ಹೆಸರಿನಲ್ಲಿ ಜಿಲ್ಲಾಧಿಕಾರಿಗಳನ್ನು ಎಳೆದು ತರಬೇಡಿ. ಹುಣಸೂರು ಪ್ರಕರಣವನ್ನು ಪಬ್ಲಿಕ್ ಟಿವಿ ಸರಿದೂಗಿಸಿದೆ. ರಂಗನಾಥ್ ಅವರು ಒಳ್ಳೆಯ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ ಎಂದು ಹೇಳಿದರು.

    ಹಿಂದಿನ ಫೇಸ್‍ಬುಕ್ ಲೈವ್ ಕುರಿತ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಅವರು, ನನ್ನ ಫೇಸ್‍ಬುಕ್ ಲೈವ್‍ನ ಒಂದು ತುಣುಕನ್ನು ಕಟ್ ಅಂಡ್ ಪೇಸ್ಟ್ ಮಾಡಲಾಗಿದೆ. ಅದನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹಾಗೂ ಕೆಲ ಮಾಧ್ಯಮಗಳ ನನ್ನ ಮೇಲೆ ಆರೋಪ ಮಾಡುತ್ತಿವೆ. ಆದರೆ ಆ ವಿಡಿಯೋ ಹಿಂದಿನ ಹಾಗೂ ಮುಂದಿನ ಭಾಗವನ್ನು ನೋಡಿ ಸುದ್ದಿ ಬಿತ್ತರಿಸಿ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದು ಸರ್ಕಾರದ ಮೇಲೆ ಒತ್ತಡ ತರುವ ಪ್ರತಿಭಟನೆ ಮಾಡಿದ್ದೀರಾ ಅಂತ. ನಾನು ಅದಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರತಿಭಟನೆ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದರು.

    https://www.youtube.com/watch?v=4lHDGBADYCs

    https://youtu.be/0C5M6aKA7SQ

  • ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

    ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

    ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪೊಲೀಸ್ ಅಧಿಕಾರಿಗಳ ಮೇಲೆ ಮಾಡಿರುವ ಆರೋಪವನ್ನು ಎಸ್‍ಪಿ ರವಿ ಚೆನ್ನಣ್ಣನವರ್ ತಿರಸ್ಕರಿಸಿ, ನಾನು ಯಾರ ಆಳು ಅಲ್ಲ. ಕಾನೂನು ಮತ್ತು ಕರ್ತವ್ಯಕ್ಕೆ ಆಳು ಎಂದು ಹೇಳಿಕೆ ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಎಸ್‍ಪಿ ರವಿ ಚೆನ್ನಣ್ಣನವರ್, ಮಾನ್ಯ ಸಂಸದರ ಬಗ್ಗೆ ಅಪಾರ ಗೌರವವಿದೆ, ಅವರ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಯಾರ ಪರ ಅಥವಾ ವಿರೋಧವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಾವು ಸತ್ಯ ಹಾಗೂ ನ್ಯಾಯದ ಪರ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.

    ಒಂದು ವೇಳೆ ನನ್ನ ವಿರುದ್ಧ ಅಂತಹ ಅನುಮಾನ ಶಂಕೆ ಇದ್ದರೆ ನನ್ನ ಮೇಲೆ ಒಂದು ವ್ಯವಸ್ಥೆ ಇದೆ. ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ ವ್ಯವಸ್ಥೆ ಇದ್ದು ಅಲ್ಲಿ ದೂರು ನೀಡಬಹುದು. ನಾನೇ ಅಂತಿಮನಲ್ಲ. ಯಾವ ಘಟನೆಯಲ್ಲಿ ಈ ರೀತಿ ಪಕ್ಷಪಾತವಾಗಿದೆ ಎಂಬುವುದನ್ನು ಸಂಸದರು ಸ್ಪಷ್ಟಪಡಿಸಬೇಕು. ಯಾರಿಗೆ ಅನ್ಯಾಯವಾಗಿದ್ದರೂ ಪರಿಹಾರ ಸಿಗುತ್ತದೆ. ಸಂಸದರ ಆರೋಪಗಳು ಅವರ ನನ್ನ ನಡುವಿನ ಸಣ್ಣ ಸಂವಹನ ಕೊರತೆಯಿಂದ ಉಂಟಾಗಿದೆ. ಈ ಕುರಿತು ಸ್ವತಃ ನಾನೇ ಕರೆಮಾಡಿ ಮಾತನಾಡುತ್ತೇನೆ ಎಂದರು.

    ಇನ್ನೂ ಭಾಷಣ ಮಾಡುವ ಕುರಿತ ಟೀಕೆಗೆ ಉತ್ತರಿಸಿದ ಅವರು, ನಾನು ಭಾಷಣ ಮಾಡುವುದು ಕಾನೂನು, ಕೋರ್ಟ್, ಅಧಿಕಾರಿಗಳು, ಪ್ರಜಾಪ್ರಭುತ್ವ, ಪೊಲೀಸ್ ಪೇದೆ ಕರ್ತವ್ಯಗಳ ಅರಿವು ಯಾರಿಗೆ ಇರುವುದಿಲ್ಲವೋ ಅವರ ತಿಳುವಳಿಕೆ ನೀಡಲು ನಾನು ಮಾತನಾಡುತ್ತೇನೆ. ಇದು ನನ್ನ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

    ಇದುವರೆಗೂ ಹಿರಿಯ ಅಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದ ಮೂಲಕ ಕಾರ್ಯನಿರ್ವಹಿಸಿದ್ದೇವೆ, ಆದರೆ ಸಂಸದರು ಹೇಳಿರುವ ಒಂದು ಸತ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾನು ಕಲಿಯುವುದು ಇನ್ನು ಇದೆ. ಅವರಿಂದಲೂ ನಾನು ಸಾಕಷ್ಟು ಕಲಿಯುವುದು ಇದೆ. ನನ್ನ ಪೊಲೀಸ್ ವೃತ್ತಿ ಜೀವನದ ಉದ್ದಕ್ಕೂ ಕಲಿಯುತ್ತೇನೆ. ನಾನು ಪರಿಪೂರ್ಣನಲ್ಲ, ಪೊಲೀಸ್ ಇಲಾಖೆಯಲ್ಲಿ 20 ರಿಂದ 30 ವರ್ಷ ಪೇದೆಯಾಗಿ, ಎಎಸ್‍ಐ ಆಗಿ ಕಾರ್ಯನಿರ್ವಹಿಸಿದ ವ್ಯಕ್ತಿಯಿಂದಲೂ ಕಲಿಯುತ್ತೇನೆ. ಗುಲ್ಬರ್ಗ, ಮೈಸೂರು, ಬೆಳಗಾವಿ, ಶಿವಮೊಗ್ಗ ಪ್ರತಿ ಸ್ಥಳದಲ್ಲಿ ಕೆಲಸ ಮಾಡುವ ವೇಳೆಯೂ ಹಲವರು ಒಳ್ಳೆ ವ್ಯಕ್ತಿಗಳಿಂದ ಉತ್ತಮ ಅಂಶಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದರು. ( ಇದನ್ನೂ ಓದಿ: ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್ )

    ಸಂಸದರನ್ನು ಕೂಡಲೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಕ್ಕೆ, ಪ್ರಕರಣದ ಕುರಿತು ತನಿಖೆ ನಡೆಸಲು ತನಿಖಾಧಿಕಾರಿಗಳಿದ್ದಾರೆ. ಯಾವುದೇ ವ್ಯಕ್ತಿಯನ್ನು ಬಂಧಿಸಿದ ನಂತರ ಆರೋಗ್ಯ ತಪಾಸಣೆ ಸೇರಿದಂತೆ ಹಲವು ಕಾನೂನು ಕ್ರಮಗಳಿರುತ್ತವೆ. ಅವುಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದರು.

    ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಎಸ್‍ಪಿ ರವಿ ಚೆನ್ನಣ್ಣನವರ್ ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು. ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸಾರ್ ಅಂತ ಟ್ವಿಟರ್‍ನಲ್ಲಿ ಎಸ್‍ಪಿ ಗೆ ಪರೋಕ್ಷವಾಗಿ ಪ್ರಶ್ನೆ ಮಾಡಿದ್ದರು. ಅಲ್ಲದೇ ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿದ ಎಸ್.ಪಿ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪಾ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ. ಭಾಷಣ ನಿಲ್ಲಿಸಿ ಅಂತ ಟ್ವೀಟ್ ಮಾಡಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕಿಂತ ನನ್ನ ಧರ್ಮ, ಸಂಪ್ರದಾಯ ರಕ್ಷಣೆ ನನಗೆ ಮುಖ್ಯ ಅಂತ ಪ್ರತಾಪ್ ಸಿಂಹ ಹೇಳಿದ್ದರು.  ( ಇದನ್ನೂ ಓದಿ: ನಾನು ಕಾನೂನು ಉಲ್ಲಂಘಿಸಿಲ್ಲ, ಜಿಲ್ಲಾಡಳಿತ, ಪೊಲೀಸರಿಂದಲೇ ತಪ್ಪಾಗಿದೆ: ಪ್ರತಾಪ್ ಸಿಂಹ )

    https://www.youtube.com/watch?v=26wWJftihNg

    https://www.youtube.com/watch?v=yzTzIO0gaXM