Tag: sp

  • ಮತಕ್ಕಾಗಿ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಹತ್ಯೆ: ರಾಮ್ ಗೋಪಾಲ್ ಯಾದವ್

    ಮತಕ್ಕಾಗಿ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಹತ್ಯೆ: ರಾಮ್ ಗೋಪಾಲ್ ಯಾದವ್

    ಲಕ್ನೋ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರವಾಗಿ ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ ಎಂದ ಅವರು, ಜಮ್ಮು ಮತ್ತು ಶ್ರೀನಗರ ಮಧ್ಯೆ ಯಾವುದೇ ತಪಾಸಣೆ ನಡೆಯಲಿಲ್ಲ. ಜೊತೆಗೆ ಯೋಧರು ಸಾಮಾನ್ಯ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು ಎಂದು ರಾಮ್ ಗೋಪಾಲ್ ಯಾದವ್ ಆರೋಪಿಸಿದ್ದಾರೆ.

    ಪುಲ್ವಾಮಾ ದಾಳಿಯಲ್ಲಿ ಪಿತೂರಿ ನಡೆದಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ ತನಿಖೆಗೆ ನೀಡಲು ಸಾಧ್ಯವಾಗುತ್ತದೆ. ತನಿಖೆಯ ಬಳಿಕ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಹೊರಬೀಳುತ್ತವೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು ಇದೇ ತಿಂಗಳು ಕೂಡ ಇಂತಹದ್ದೇ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ. ಹೀಗಾಗಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿ ನಡೆದಿದೆ ಎಂದು ಬಿ.ಕೆ.ಪ್ರಕಾಶ್ ಹೇಳಿದ್ದರು.

    ಜಮ್ಮು-ಕಾಶ್ಮೀರ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರ ಅದಿಲ್ ಅಹ್ಮದ್ ದಾರ್ ಸ್ಫೋಟಕ ತುಂಬಿದ್ದ ತನ್ನ ಇಕೋ ಕಾರನ್ನು ಸಿಆರ್‌ಪಿಎಫ್ ಯೋಧರ ಬಸ್ಸಿಗೆ ಗುದ್ದಿದ್ದ. ಪರಿಣಾಮ 40 ಯೋಧರು ಹುತಾತ್ಮರಾಗಿದ್ದರು. ದಾಳಿಗೆ ಪ್ರತ್ಯುತ್ತರ ನೀಡಿದ ಭಾರತೀಯ ವಾಯು ಪಡೆಯು ಪಾಕಿಸ್ತಾನದ ಉಗ್ರರ ಮೂರು ನೆಲೆಗಳ ಮೇಲೆ ದಾಳಿ ಮಾಡಿತ್ತು.

  • ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ನಾನು ಪ್ರಧಾನಿ ಅಭ್ಯರ್ಥಿ: ಮಾಯಾವತಿ

    ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ನಾನು ಪ್ರಧಾನಿ ಅಭ್ಯರ್ಥಿ: ಮಾಯಾವತಿ

    ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ನಿನ್ನೆಯಷ್ಟೇ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದರು. ಆದರೆ ಈಗ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ನಾನು ಪ್ರಧಾನಿ ಅಭ್ಯರ್ಥಿ ಎಂದು ತಿಳಿಸಿದ್ದಾರೆ.

    ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ತಾವು ಪ್ರಧಾನಿಯಾಗುವ ಬಗ್ಗೆ ಟ್ವೀಟ್‍ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ 1995ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಸಿಎಂ ಆಗಿ ಆಯ್ಕೆ ಅಧಿಕಾರ ಸ್ವೀಕರಿಸಿದ ಕುರಿತು ಮಾಯಾವತಿ ಹೇಳಿಕೊಂಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಜೊತೆಗೆ ಬಿಎಸ್‍ಪಿ ಮೈತ್ರಿ ಮಾಡಿಕೊಂಡಿದೆ. ಈ ಸಂಬಂಧ ಜನವರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಎಸ್‍ಪಿ ನಾಯಕ ಅಖಿಲೇಶ್ ಯಾದವ್, ಮಾಯಾವತಿ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದ್ದರು. ಆದರೆ ಈಗ ಮಾಯಾವತಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಮುಂದೇನು ಎನ್ನುವ ಪ್ರಶ್ನೆ ಎಸ್‍ಪಿ, ಬಿಎಸ್‍ಪಿ ಮೈತ್ರಿಯಲ್ಲಿ ಶುರುವಾಗಿತ್ತು. ಇದಕ್ಕೆ ಮಾಯಾವತಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 1995ರಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದೆ. ಆಗ ನಾನು ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದ್ಯಸೆ ಆಗಿರಲಿಲ್ಲ. ಅದೇ ರೀತಿ ಪ್ರಧಾನಿಯಾದ ಆರು ತಿಂಗಳ ಒಳಗಾಗಿ ಲೋಕಸಭೆ ಇಲ್ಲವೇ ರಾಜ್ಯಸಭೆಯಲ್ಲಿ ಸದಸ್ಯತ್ವ ಪಡೆಯಬೇಕಾಗುತ್ತದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎನ್ನುವ ನನ್ನ ನಿರ್ಧಾರವನ್ನು ನಿರಾಶೆಗೊಳಿಸಬೇಡಿ ಎಂದು ಮಾಯಾವತಿ, ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಪ್ರಧಾನಿ ಅಥವಾ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವ್ಯಕ್ತಿ ಲೋಕಸಭಾ ಅಥವಾ ರಾಜ್ಯಸಭೆಯ ಸದಸ್ಯರಾಗಿರಬೇಕು. ಸದಸ್ಯರಾಗದೇ ಇದ್ದರೂ ಪ್ರಮಾಣವಚನ ಸ್ವೀಕರಿಸಬಹುದು. ಆದರೆ ಅಧಿಕಾರ ಸ್ವೀಕರಿಸಿದ 6 ತಿಂಗಳ ಒಳಗಡೆ ಲೋಕಸಭೆ ಅಥವಾ ರಾಜ್ಯಸಭೆಯ ಸದಸ್ಯರಾಗಬೇಕಾಗುತ್ತದೆ. ಈ ಅವಧಿಯ ಒಳಗಾಗಡೆ ಸದಸ್ಯರಾಗದೇ ಇದ್ದಲ್ಲಿ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ.

  • ಬಿಜೆಪಿ ಸೋಲಿಸಲು ಕಾಂಗ್ರೆಸ್ ಅವಶ್ಯಕತೆ ನಮಗಿಲ್ಲ: ಮಾಯಾವತಿ

    ಬಿಜೆಪಿ ಸೋಲಿಸಲು ಕಾಂಗ್ರೆಸ್ ಅವಶ್ಯಕತೆ ನಮಗಿಲ್ಲ: ಮಾಯಾವತಿ

    ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಸ್‍ಪಿ-ಬಿಎಸ್‍ಪಿ ಮೈತ್ರಿ ಸಾಕು. ದೇಶದಲ್ಲಿ ಕಾಂಗ್ರೆಸ್ ಮೈತ್ರಿಯ ಅವಶ್ಯಕತೆ ನಮಗಿಲ್ಲ ಎಂದು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸ್ಪಷ್ಟ ಸಂದೇಶವನ್ನು ಕೈ ನಾಯಕರಿಗೆ ರವಾನಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ 7 ಕ್ಷೇತ್ರಗಳನ್ನು ಹೊರತುಪಡಿಸಿ ಎಲ್ಲ ಕಡೆಯೂ ಸ್ಪರ್ಧೆ ಮಾಡಲಿದೆ ಎಂದು ಕಾಂಗ್ರೆಸ್ ಭಾನುವಾರ ತಿಳಿಸಿತ್ತು. ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ ಮತ್ತು ರಾಷ್ಟ್ರೀಯ ಲೋಕ್ ದಳ ಪಕ್ಷಗಳ ಮುಖಂಡರು ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ.

    ಕಾಂಗ್ರೆಸ್ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ಮಾಯಾವತಿ, ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಕಾಂಗ್ರೆಸ್ ಮುಕ್ತವಾಗಿದೆ. ನಮ್ಮ ಮೈತ್ರಿಯೊಂದೇ ಬಿಜೆಪಿಯನ್ನು ಸೋಲಿಸುವ ಸಾಮಾರ್ಥ್ಯವನ್ನು ಹೊಂದಿದ್ದು, ಕಾಂಗ್ರೆಸ್ ಅವಶ್ಯಕತೆ ನಮಗಿಲ್ಲ. 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸದಂತೆ ನಾವು ಯಾವುದೇ ಒತ್ತಡ ಹಾಕಿಲ್ಲ. ಈ ಕುರಿತು ಹರಡುತ್ತಿರುವ ಸುದ್ದಿಗಳು ಸುಳ್ಳು. ದೇಶದಲ್ಲಿ ಎಲ್ಲಿಯೂ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಲ್ಲ ಎಂದು ಮಾಯಾವತಿ ಅವರು ಟ್ವೀಟ್ ಮೂಲಕ ಖಚಿತಪಡಿಸಿದರು.

    ಕಾರ್ಯಕರ್ತರ ಇಚ್ಛೆಯ ಮೇರೆಗೆ ಕಾಂಗ್ರೆಸ್ ನೊಂದಿಗೆ ನಾವು ಯಾವ ಕ್ಷೇತ್ರದಲ್ಲಿಯೂ ಮೈತ್ರಿ ಮಾಡಿಕೊಂಡಿಲ್ಲ. ನಮ್ಮದು ಕೇವಲ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮತದಾರರು ಊಹಾಪೋಹ ಸುದ್ದಿಗಳತ್ತ ಗಮನ ನೀಡಬೇಡಿ ಎಂದು ಮಾಯಾವತಿ ಮನವಿ ಮಾಡಿಕೊಂಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ 38, ಎಸ್‍ಪಿ 37 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ. ರಾಷ್ಟ್ರೀಯ ಲೋಕ್ ದಳ ಪಕ್ಷಕ್ಕೆ ಮಥುರಾ, ಮುಜಾಫರ್ ನಗರ ಮತ್ತು ಬಾಗಪಥ್ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಮೇಥಿ ಮತ್ತು ಕೈ ಅಧಿನಾಯಕಿ ಸೋನಿಯಾ ಗಾಂಧಿ ಅವರ ರಾಯ್ ಬರೇಲಿ ಕ್ಷೇತ್ರದಿಂದ್ದ ಮೈತ್ರಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ.

  • 24 ವರ್ಷಗಳ ಬಳಿಕ ಬದ್ಧವೈರಿ ಮುಲಾಯಂ ಪರ ಮಾಯಾವತಿ ಪ್ರಚಾರ

    24 ವರ್ಷಗಳ ಬಳಿಕ ಬದ್ಧವೈರಿ ಮುಲಾಯಂ ಪರ ಮಾಯಾವತಿ ಪ್ರಚಾರ

    ಲಕ್ನೋ: ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ತಮ್ಮ ರಾಜಕೀಯ ಬದ್ಧವೈರಿಯಾಗಿದ್ದ ಸಮಾಜವಾದಿ ಪಾರ್ಟಿ (ಎಸ್‍ಪಿ) ಸಂಸ್ಥಾಪಕ, ಸಮಾಜವಾದಿ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಪರ 24 ವರ್ಷಗಳ ಬಳಿಕ ಪ್ರಚಾರ ಮಾಡಲಿದ್ದಾರೆ.

    ಹೌದು. ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ಹಾಗೂ ಎಸ್‍ಪಿ ಲೋಕಸಭಾ ಚುನಾವಣಾ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಎರಡೂ ಪಕ್ಷದ ನಾಯಕರು ಒಟ್ಟಾಗಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ. ಮುಲಾಯಂ ಸಿಂಗ್ ಅವರ ಕ್ಷೇತ್ರ ಮೈನ್‍ಪುರಿಯಲ್ಲಿ ಏಪ್ರಿಲ್ 19ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಮಾಯಾವತಿ ಕೂಡ ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೆ ಮುಲಾಯಂ ಸಿಂಗ್ ಪರ ಪ್ರಚಾರ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಈ ಕುರಿತು ಎಸ್‍ಪಿ ವಕ್ತಾರ ರಾಜೇಂದ್ರ ಚೌಧರಿ ಅವರು ಪ್ರತಿಕ್ರಿಯೆ ನೀಡಿದ್ದು, ಮೈನ್‍ಪುರಿಯಲ್ಲಿ ಏಪ್ರಿಲ್ 19ರಂದು ನಡೆಯುವ ಸಮಾವೇಶದಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಭಾಗವಹಿಸಲಿದ್ದಾರೆ. ಜೊತೆಗೆ ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಹಾಗೂ ರಾಷ್ಟ್ರೀಯ ಲೋಕದಳ ಅಧ್ಯಕ್ಷ ಅಜಿತ್ ಸಿಂಗ್ ಅವರು, ಮುಲಾಯಂ ಸಿಂಗ್ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

    24 ವರ್ಷಗಳ ಹಿಂದೆ ಏನಾಗಿತ್ತು?:
    ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ನೇತೃತ್ವ ಸರ್ಕಾರಕ್ಕೆ ಬಿಎಸ್‍ಪಿ ಬೆಂಬಲ ನೀಡಿತ್ತು. ಆದರೆ 1995ರಲ್ಲಿ ಎರಡೂ ಪಕ್ಷದ ನಾಯಕರಲ್ಲಿ ಭಿನ್ನಮತ ಉಂಟಾಗಿತ್ತು. ಇದರಿಂದಾಗಿ ಬಿಎಸ್‍ಪಿ ನಾಯಕಿ ಮಾಯಾವತಿ ಅವರು, 1995 ಜೂನ್ 2ರಂದು ಸುದ್ದಿಗೋಷ್ಠಿ ನಡೆಸಿ ಎಸ್‍ಪಿಗೆ ನೀಡಿದ್ದ ಬೆಂಬಲ ಹಿಂಪಡೆಯುವುದಾಗಿ ತಿಳಿಸಿದರು. ಇದರಿಂದಾಗಿ ಮುಲಾಯಂ ಸಿಂಗ್ ನೇತೃತ್ವದ ಸರ್ಕಾರ ಪತನಗೊಂಡಿತು. ಸರ್ಕಾರ ಬೀಳಿಸಿದ ಮಾಯಾವತಿ ವಿರುದ್ಧ ಕಿಡಿಕಾರಿದ ಎಸ್‍ಪಿ ಕಾರ್ಯಕರ್ತರು ವಿಭಾನಸಭೆಯ ಮಾಯಾವತಿ ಕೊಠಡಿಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದರು. ಜೊತೆಗೆ ಮಾಯಾವತಿ ಅವರ ಮೇಲೆ ಹಲ್ಲೆ ಮಾಡಿದ್ದರು. ಇದಾದ ಮರು ದಿನವೇ ಬಿಜೆಪಿ ಬೆಂಬಲ ಪಡೆದ ಮಾಯಾವತಿ ಅವರು ಬಹುಮತ ಸಾಬೀತು ಪಡಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದಿದ್ದರು.

    1995ರ ಘಟನೆಯ ಬಳಿಕ ಮಾಯಾವತಿ ಹಾಗೂ ಮುಲಾಯಂ ಸಿಂಗ್ ಯಾದವ್ ರಾಜಕೀಯ ಬದ್ಧವೈರಿಗಳಾದರು. ಒಟ್ಟಾಗಿ ಯಾವುದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿಲ್ಲ. ಈಗ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಜೊತೆಗೆ ಮಾಯಾವತಿ ಕೈಜೋಡಿಸಿದ್ದಾರೆ. ಹೀಗಾಗಿ ಮುಲಾಯಂ ಪುತ್ರ ಪರವೂ ಪ್ರಚಾರ ಮಾಡುವ ನಿರೀಕ್ಷೆಯಿದೆ.

    ಎಸ್‍ಪಿ, ಬಿಎಸ್‍ಪಿ ಮೈತ್ರಿ ಮೂಲಗಳ ಪ್ರಕಾರ, ಸಹರಾನ್‍ಪುರ್ ನ ದಿಯೋಬಂದ್‍ನಲ್ಲಿ ಏಪ್ರಿಲ್ 7ರಂದು ಬೃಹತ್ ಸಮಾವೇಶ ನಡೆಯಲಿದೆ. ಅದರಂತೆ ಏಪ್ರಿಲ್ 13ರಂದು ಬಾದಾನ್, ಏಪ್ರಿಲ್ 16ರಂದು ಆಗ್ರಾ, ಏಪ್ರಿಲ್ 19ಕ್ಕೆ ಮೈನ್‍ಪುರ್, ಏಪ್ರಿಲ್ 20ರಂದು ರಾಮ್‍ಪುರ್ ಹಾಗೂ ಫಿರೋಜಾಬಾದ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಎರಡೂ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರಂತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೌಡಿಶೀಟರ್ ಕೈನಲ್ಲಿದ್ದ ಟ್ಯಾಟೂ ನೋಡಿ ಎಸ್‍ಪಿ ಗರಂ

    ರೌಡಿಶೀಟರ್ ಕೈನಲ್ಲಿದ್ದ ಟ್ಯಾಟೂ ನೋಡಿ ಎಸ್‍ಪಿ ಗರಂ

    ಮಂಡ್ಯ: ರೌಡಿ ಶೀಟರ್ ಗಳ ಕೈ ಮೇಲಿದ್ದ ಟ್ಯಾಟೂಗಳನ್ನು ನೋಡಿ ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಗರಂ ಆಗಿದ್ದಾರೆ.

    ಅಸುರಕ್ಷಿತವಾಗಿ ಟ್ಯಾಟೂ ಹಾಕಿಸಿಕೊಂಡರೆ ಏಡ್ಸ್ ಬರುವ ಸಾಧ್ಯತೆ ಇದೆ ಎಂದು ಬುದ್ಧಿವಾದ ಹೇಳಿದ್ದಾರೆ. ಶನಿವಾರ ಮಂಡ್ಯದ ಡಿಆರ್ ಗ್ರೌಂಡ್‍ನಲ್ಲಿ ರೌಡಿಶೀಟರ್ ಗಳ ಪೆರೇಡ್ ಹಮ್ಮಿಕೊಳ್ಳಲಾಗಿತ್ತು. ಮಂಡ್ಯ ಜಿಲ್ಲೆಯ ಎಲ್ಲ ರೌಡಿಶೀಟರ್ ಗಳನ್ನು ಒಂದು ಕಡೆ ಕರೆಸಿ ಯಾವುದೇ ರೀತಿಯ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದೆ ಸನ್ಮಾರ್ಗದಲ್ಲಿ ನಡೆಯುವಂತೆ ಎಚ್ಚರಿಕೆ ನೀಡಲಾಯಿತು.

    ಈ ವೇಳೆ ಬಹುತೇಕ ರೌಡಿ ಶೀಟರ್‍ಗಳು ಟ್ಯಾಟೂ ಹಾಕಿಸಿಕೊಂಡಿದ್ದನ್ನು ಗಮನಿಸಿದ ಎಸ್‍ಪಿ ಗರಂ ಆಗಿದ್ದಲ್ಲದೇ ಅಸುರಕ್ಷಿತವಾಗಿ ಟ್ಯಾಟೂ ಹಾಕಿಸಿಕೊಂಡರೆ ಏಡ್ಸ್ ಬರುತ್ತೆ ಎಂದು ತಿಳುವಳಿಕೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಸ್‍ಪಿ, ಬಿಎಸ್‍ಪಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಮೆಗಾ ಪ್ಲಾನ್!

    ಎಸ್‍ಪಿ, ಬಿಎಸ್‍ಪಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಮೆಗಾ ಪ್ಲಾನ್!

    – ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಚಿಂತನೆ
    – 13 ಕಡೆಗಳಲ್ಲಿ ಬೃಹತ್ ರ‍್ಯಾಲಿಗೆ ರಾಹುಲ್ ಗಾಂಧಿ ಸಿದ್ಧತೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಹಾಗೂ ಸಮಾಜವಾದಿ ಪಕ್ಷಕ್ಕೆ (ಎಸ್‍ಪಿ) ತಿರುಗೇಟು ನೀಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೆಗಾ ಪ್ಲಾನ್ ರೂಪಿಸಿದ್ದಾರೆ.

    ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಆರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದೊಂದರಂತೆ ಒಟ್ಟು 13 ಕಡೆ ಬೃಹತ್ ಬಹಿರಂಗ ರ‍್ಯಾಲಿ ಕೈಗೊಳ್ಳಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಬಹಿರಂಗ ರ‍್ಯಾಲಿ ನಡೆಸುವ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಅಜಾದ್ ಮತ್ತು ಉತ್ತರ ಪ್ರದೇಶದ ಮುಖಂಡ ರಾಜ್ ಬಬ್ಬರ್ ಇಂದು ಸುದೀರ್ಘ ಚರ್ಚೆ ನಡೆಸಿದ್ದಾರೆ. ರಾಜ್ಯದ ಪಶ್ಚಿಮ ಕ್ಷೇತ್ರಗಳಾದ ಹಾಪುರ್, ಮೊರಾದಾಬಾದ್ ಮತ್ತು ಸಹರಾನ್ಪುರ್ ನಿಂದ ರ್ಯಾಲಿ ಆರಂಭಿಸಲು ನಿರ್ಧಾರವನ್ನು ಈ ನಾಯಕರು ಕೈಗೊಂಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಹಾಗೂ ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಶನಿವಾರ ಸುದ್ದಿಗೋಷ್ಠಿ ನಡೆಸಿ ಮೈತ್ರಿ ವಿಚಾರವನ್ನು ತಿಳಿಸಿದ್ದರು. ಈ ಮೈತ್ರಿಯ ಒಪ್ಪಂದದ ಪ್ರಕಾರ ಎರಡೂ ಪಕ್ಷಗಳು ಒಟ್ಟು ತಲಾ 38 ಕ್ಷೇತ್ರಗಳನ್ನು ಹಂಚಿಕೊಂಡು, ಅಮೇಠಿ ಹಾಗೂ ರಾಯ್ ಬರೇಲಿಯನ್ನು ಕಾಂಗ್ರೆಸ್‍ಗೆ, ಉಳಿದ ಎರಡು ಕ್ಷೇತ್ರಗಳನ್ನು ರಾಷ್ಟ್ರೀಯ ಲೋಕದಳಗೆ ಬಿಟ್ಟುಕೊಟ್ಟಿದ್ದರು.

    ಬಿಎಸ್‍ಪಿ ಹಾಗೂ ಎಸ್‍ಪಿ ಕೇವಲ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟು ಮೈತ್ರಿ ಮಾಡಿಕೊಂಡ ಬೆನ್ನಲೇ ರಾಹುಲ್ ಗಾಂಧಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಕೇವಲ ಎರಡು ಕ್ಷೇತ್ರ ಬಿಟ್ಟ ಮೈತ್ರಿ ವಿರುದ್ಧ ಗರಂ ಆಗಿರುವ ರಾಹುಲ್ ಗಾಂಧಿ, 80 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ನಿರ್ಧಾರ ಕೈಗೊಂಡಿದ್ದಾರೆ.

    ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ್‍ನಲ್ಲಿ ಅಧಿಕಾರ ಹೊಂದಿರುವ ಕಾಂಗ್ರೆಸ್ ಈ ರಾಜ್ಯಗಳಲ್ಲಿ ಹೆಚ್ಚು ಕ್ಷೇತ್ರಗಳಿಂದ ಜಯಗಳಿಸುವ ಸಾಧ್ಯತೆಗಳಿವೆ. ಆದರೆ ಮಾಯಾವತಿ ಹಾಗೂ ಅಖಿಲೇಶ್ ಮೈತ್ರಿಯಿಂದಾಗಿ ಉತ್ತರ ಪ್ರದೇಶದಿಂದ ಕಾಂಗ್ರೆಸ್ ಬೆರಳೆಣಿಕೆ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಉತ್ತರ ಪ್ರದೇಶದಲ್ಲಿ 1992ರಂದು ನಡೆದ ಬಾಬ್ರಿ ಮಸೀದಿ ದ್ವಂಸ ಘಟನೆ ಕಾಂಗ್ರೆಸ್ ಮೇಲೆ ಭಾರೀ ಪರಿಣಾಮ ಬೀರಿದೆ. ಈ ಘಟೆಯ ಬಳಿಕ ನಿಧಾನವಾಗಿ ಕಾಂಗ್ರೆಸ್ ಕ್ಷೇತ್ರಗಳನ್ನು ಕಳೆದುಕೊಂಡಿತು. ಇತ್ತ ಬಿಜೆಪಿ ತನ್ನ ಮೇಲುಗೈ ಸಾಧಿಸಿ 2014ರಲ್ಲಿ 71 ಕ್ಷೇತ್ರಗಳಿಂದ ಜಯ ಸಾಧಿಸಿತ್ತು. ಈಗ ಮತದಾರರ ನಿರೀಕ್ಷೆಗಳು ಭಿನ್ನವಾಗಿವೆ. ಯಾದವರು ಹಾಗೂ ದಲಿತರು ಬಿಎಸ್‍ಪಿ ಮತ್ತು ಎಸ್‍ಪಿಗೆ ನೀಡಿದ ಬೆಂಬಲ ಹೇಗಿದೆ ಎನ್ನುವ ಪ್ರಶ್ನೆಗೆ ಮೇ ತಿಂಗಳಿನಲ್ಲಿ ಪ್ರಕಟವಾಗಲಿರುವ ಫಲಿತಾಂಶ ಉತ್ತರ ನೀಡಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

    26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

    -ಮಹಾಘಟಬಂಧನ್ ದಿಂದ ಹೊರಬಂದು ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಎಸ್‍ಪಿ-ಬಿಎಸ್‍ಪಿ
    -80 ಕ್ಷೇತ್ರಗಳಲ್ಲಿ 38-38ರಂತೆ ಹಂಚಿಕೆ

    ಲಕ್ನೋ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್‍ಪಿ) 26 ವರ್ಷಗಳ ಬಳಿಕ ಮೈತ್ರಿ ರಚಿಸಿಕೊಂಡಿವೆ. ಈ ಮೂಲಕ ಕಾಂಗ್ರೆಸ್ ನಿಂದ ಹೊರ ಬಂದಿರುವ ಪ್ರಾದೇಶಿಕ ಪಕ್ಷಗಳು ಮಹಾಘಟಬಂಧನ್‍ಗೆ ಶಾಕ್ ನೀಡಿವೆ. ಇದೇ ಮೈತ್ರಿಯನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಸುವುದಾಗಿ ಎರಡು ಪಕ್ಷಗಳೂ ಹೇಳಿಕೊಂಡಿವೆ.

    ಇಂದು ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಎಸ್‍ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್‍ಪಿ ಮುಖ್ಯಸ್ಥೆ ಮಯಾವತಿ, ಚುನಾವಣೆಯ ಮೈತ್ರಿ ಬಗ್ಗೆ ಹೇಳಿಕೊಂಡರು. ಉತ್ತರ ಪ್ರದೇಶದ ಒಟ್ಟು 80 ಕ್ಷೇತ್ರಗಳಲ್ಲಿ ನಾವು 38-38ರಂತೆ ಕ್ಷೇತ್ರಗಳನ್ನು ಹಂಚಿಕೊಂಡಿದ್ದೇವೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವ ಅಮೇಥಿ ಮತ್ತು ಕಾಂಗ್ರೆಸ್ ಅಧಿನಾಯಕಿ ಸ್ಪರ್ಧಿಸುವ ರಾಯ್‍ಬರೇಲಿ ಕ್ಷೇತ್ರದಲ್ಲಿ ಎಸ್‍ಪಿ ಮತ್ತು ಬಿಎಸ್‍ಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲ್ಲ. ಉಳಿದೆರೆಡು ಕ್ಷೇತ್ರಗಳಲ್ಲಿ ರಾಜ್ಯದ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಮಯಾವತಿ ತಿಳಿಸಿದರು.

    ಮೈತ್ರಿ ಯಾಕೆ?
    ನಮ್ಮ ಈ ಸುದಿಗೋಷ್ಠಿ ಪ್ರಧಾನ ಮಂತ್ರಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಬ್ಬರ ನಿದ್ದೆಯನ್ನು ಕೆಡಿಸಲಿದೆ ಎಂದು ಹೇಳುತ್ತಲೇ ಮಾಯಾವತಿ ತಮ್ಮ ಮಾತು ಆರಂಭಿಸಿದರು. 1990ರಿಂದ ಬಿಜೆಪಿಯ ಜಾತಿವಾದಿ, ಸಂಪ್ರದಾಯಿಕ ನೀತಿಗಳಲ್ಲಿ ರಾಜಕೀಯ ತಂದಿದ್ದು, ಅಯೋಧ್ಯೆ ವಿಚಾರದಲ್ಲಿ ರಾಜಕಾರಣ ಮಾಡುತ್ತಿರೋದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಈ ಹಿಂದೆ ಚುನಾವಣೆಗೂ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಲು ಬಿಜೆಪಿ ವಿಫಲವಾಗಿದೆ. ರೈತ ವಿರೋಧಿ ನೀತಿ, ಬಿಜೆಪಿ ಸರ್ವಾಧಿಕಾರತ್ವವವನ್ನು ಶಮನಗೊಳಿಸಲು ಇಂದು ನಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಸ್‍ಪಿ ಮತ್ತು ಬಿಎಸ್‍ಪಿ ಒಂದಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಪಿ ಹೆಚ್ಚಿಸಿದ್ದ ಎಂಪಿ ರಿಸಲ್ಟ್ ಔಟ್- ಮಧ್ಯಪ್ರದೇಶದಲ್ಲಿ ಮೈತ್ರಿ ಸರ್ಕಾರ!

    ಬಿಪಿ ಹೆಚ್ಚಿಸಿದ್ದ ಎಂಪಿ ರಿಸಲ್ಟ್ ಔಟ್- ಮಧ್ಯಪ್ರದೇಶದಲ್ಲಿ ಮೈತ್ರಿ ಸರ್ಕಾರ!

    – ಕೈ ಹಿಡಿಯಲು ಸೈಕಲ್ ಮೇಲೆ ಏರಿ ಬರುತ್ತಾ ಆನೆ?

    ಭೋಪಾಲ್: ರಾಜಕೀಯ ಪಕ್ಷಗಳ ಬಿಪಿ ಹೆಚ್ಚಿಸಿದ್ದ ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ಯಾರಿಗೂ ಬಹುಮತ ಸಿಕ್ಕಿಲ್ಲ.

    ಕಾಂಗ್ರೆಸ್ ಬಹುಮತಕ್ಕೆ ಎರಡು ಸೀಟ್ ಕೊರತೆಯನ್ನು ಅನುಭವಿಸಿದೆ. ಕಾಂಗ್ರೆಸ್ 114, ಬಿಜೆಪಿ 109, ಬಿಎಸ್‍ಪಿ 2, ಎಸ್‍ಪಿ 1, ಪಕ್ಷೇತರರು 4 ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು 116 ಬಹುಮತ ಬೇಕಿದೆ. ಬಿಎಸ್‍ಪಿ ಮತ್ತು ಎಸ್‍ಪಿ ಎರಡು ಪಕ್ಷಗಳು ಕಾಂಗ್ರೆಸ್ ಗೆ ಬೆಂಬಲ ಸೂಚಿಸುವ ಸಾಧ್ಯತೆಗಳು ಹೆಚ್ಚಿವೆ.

    ಒಟ್ಟಿನಲ್ಲಿ ಕ್ಷಣಕ್ಷಣಕ್ಕೂ ಬದಲಾದ ಫಲಿತಾಂಶ, ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಾಣದ ಪೈಪೋಟಿ, ನಿರೀಕ್ಷಿಸದ ಅಚ್ಚರಿ ಬೆಳವಣಿಗೆಗೆ ಮಧ್ಯಪ್ರದೇಶ ಮತ ಎಣಿಕೆ ಸಾಕ್ಷಿಯಾಗಿತ್ತು. ಸದ್ಯ ಆಪರೇಷನ್ ಕಮಲ ಸದ್ದು ಕೇಳಿಬಂದಿದ್ದು, ಕೇಂದ್ರ ಸಚಿವ ತೋಮರ್ ಭೋಪಾಲ್‍ನಲ್ಲಿ ಬಿಡಾರ ಹೂಡಿದ್ದಾರೆ. ಸರ್ಕಾರ ರಚನೆಗೆ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪಕ್ಷೇತರ ಮತ್ತು ಎಸ್‍ಪಿ, ಬಿಎಸ್ ಪಿ ಶಾಸಕರನ್ನು ಸೆಳೆಯಲು ಬಿಜೆಪಿ ತೆರೆಮರೆಯಲ್ಲಿ ಕೆಲಸ ಮಾಡಲಾಗುತ್ತಿದೆ ಎನ್ನಲಾಗಿದೆ.

    ಮತ ಎಣಿಕೆ ವಿಳಂಬಕ್ಕೆ ಕಾರಣ:
    ಆಯಾ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪ್ರತಿ ಅಭ್ಯರ್ಥಿಯಿಂದ ಮತಗಳ ಪ್ರಮಾಣವನ್ನು ಲಿಖಿತವಾಗಿ ದೃಢೀಕರಿಸುವ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದ್ದರಿಂದ ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಯಿತು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆದಿರುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು, ಪ್ರತಿ ಸುತ್ತಿನಲ್ಲಿ ತಾವು ಪಡೆದ ಮತಗಳನ್ನು ದೃಢೀಕರಿಸುವ ಸಂಬಂಧ ಅರ್ಜಿ ನಮೂನೆ ಭರ್ತಿ ಮಾಡಿ, ಸಹಿ ಮಾಡಿ ಕೊಡಬೇಕಿತ್ತು. ಈ ಪ್ರಕ್ರಿಯೆಯಿಂದ ಫಲಿತಾಂಶ ವಿಳಂಬವಾಯ್ತು. ಅಲ್ಲದೆ, ಮಧ್ಯಪ್ರದೇಶದ 230 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಶೇ.15 ರಷ್ಟು ಮತಗಟ್ಟೆಗಳಲ್ಲಿ ಬಳಸಿರುವ ಇವಿಎಂ ಯಂತ್ರಗಳೊಂದಿಗೆ ಅಳವಡಿಸಿದ್ದ ವಿವಿ ಪ್ಯಾಟ್‍ಗಳ ಮತಗಳನ್ನು ತಾಳೆ ಹಾಕುವುದನ್ನು ಕಡ್ಡಾಯಗೊಳಿಸಿದ್ದು ಮತ ಎಣಿಕೆಯ ವಿಳಂಬಕ್ಕೆ ಮತ್ತೊಂದು ಕಾರಣವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೇರಪ್ರಸಾದಲ್ಲೇ ಕೈ ಕೈ ಮಿಲಾಯಿಸಿದ ಬಿಜೆಪಿ ಎಸ್‍ಪಿ ಮುಖಂಡರು

    ನೇರಪ್ರಸಾದಲ್ಲೇ ಕೈ ಕೈ ಮಿಲಾಯಿಸಿದ ಬಿಜೆಪಿ ಎಸ್‍ಪಿ ಮುಖಂಡರು

    ನವದೆಹಲಿ: ಖಾಸಗಿ ನ್ಯೂಸ್ ಚಾನೆಲ್‍ವೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಚರ್ಚೆ ವೇಳೆ ಬಿಜೆಪಿ ಹಾಗೂ ಸಮಾಜವಾದಿ ಪಾರ್ಟಿ(ಎಸ್‍ಪಿ) ನಾಯಕರು ಕಿತ್ತಾಡಿಕೊಂಡಿದ್ದಾರೆ.

    ಶನಿವಾರ ದೆಹಲಿಯ ಖಾಸಗಿ ನ್ಯೂಸ್ ಚಾನೆಲ್ ವೊಂದರ ಸ್ಟುಡಿಯೋದಲ್ಲಿ ಬಿಜೆಪಿ ಹಾಗೂ ಎಸ್‍ಪಿ ನಾಯಕರು ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಾ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತಿತ್ತು. ಈ ವೇಳೆ ಬಿಜೆಪಿಯ ಗೌರವ್ ಭಾಟಿಯಾ ಹಾಗೂ ಎಸ್‍ಪಿಯ ಅನುರಾಗ್ ಭದೋರಿಯಾ ನಡುವೆ ತೀವ್ರ ವಾಕ್ ಸಮರ ಏರ್ಪಟ್ಟಿತ್ತು.

    https://twitter.com/NaaPaak/status/1071439783027589120

    ಈ ವೇಳೆ ಚರ್ಚೆ ವಿಕೋಪಕ್ಕೆ ತಿರುಗಿ ನೇರಪ್ರಸಾರದಲ್ಲಿಯೇ ಅನುರಾಗ್ ಗೌರವ್‍ರನ್ನು ತಳ್ಳಿದ್ದಾರೆ. ನಂತರ ಸಿಟ್ಟಿಗೆದ್ದ ಇಬ್ಬರೂ ಪರಸ್ಪರ ಕೈ ಮಿಲಾಯಿಸಿದ್ದಾರೆ. ಕೂಡಲೇ ಎಚ್ಚೆತ್ತ ಚಾನೆಲ್ ಸಿಬ್ಬಂದಿ ಇಬ್ಬರನ್ನು ಸಮಾಧಾನ ಪಡಿಸಿದ್ದರು.

    ಇಬ್ಬರು ನಾಯಕರು ನೇರಪ್ರಸಾರದಲ್ಲೇ ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೂಡಲೇ ಗೌರವ್ ಎಸ್‍ಪಿ ಮುಖಂಡ ಅನುರಾಗ್ ಮೇಲೆ ದೂರನ್ನು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಅನುರಾಗ್ ರನ್ನು ವಶಕ್ಕೆಪಡೆದುಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ, ನೋಲ್ಡಾದ ಸೆಕ್ಟರ್ 16-ಎ ದಲ್ಲಿರುವ ಖಾಸಗಿ ಸುದ್ದಿ ವಾಹಿನಿಯ ಸ್ಟುಡಿಯೋದಲ್ಲಿ ರಾಜಕೀಯ ನಾಯಕರು ಜಗಳವಾಡಿಕೊಂಡಿದ್ದರು. ಈ ಸಂಬಂಧ ಬಿಜೆಪಿ ವಕ್ತಾರ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆ ಅನುರಾಗ್‍ರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಅಲ್ಲದೇ ಸ್ಟುಡಿಯೋದಲ್ಲಾದ ಜಗಳದ ವಿಡಿಯೋವನ್ನು ನೀಡುವಂತೆ ಸುದ್ದಿವಾಹಿನಿಗೆ ಆದೇಶಿದ್ದೇವೆಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶುಕ್ರವಾರ ಸಂಜೆ 6ರಿಂದ ಭಾನುವಾರದವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆ

    ಶುಕ್ರವಾರ ಸಂಜೆ 6ರಿಂದ ಭಾನುವಾರದವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆ

    ಕೊಡಗು: ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಾಗಲಿದೆ.

    ಟಿಪ್ಪು ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಸುಮನಾ ಡಿ ಪನ್ನೇಕರ್, ಕೊಡಗು ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ ಹಾಗೂ ವಿರಾಜಪೇಟೆಗಳಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೊರ ಜಿಲ್ಲೆಯಿಂದ ಕಿಡಿಗೇಡಿಗಳು ಬಾರದಂತೆ 10 ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ. ಇವುಗಳು ಈಗಾಗಲೇ ಬುಧವಾರದಿಂದ ಕಾರ್ಯಚರಣೆ ನಡೆಸುತ್ತಿವೆ. ಇದಲ್ಲದೇ ಆಂತರಿಕ ತಪಾಸಣೆಗಾಗಿ 30 ಚೆಕ್ ಪೋಸ್ಟ್‍ಗಳನ್ನು ಆರಂಭಿಸಲಾಗಿದ್ದು, ಇವುಗಳು ಇಂದಿನಿಂದ ಕಾರ್ಯಾರಂಭ ಮಾಡಿವೆ ಎಂದು ಹೇಳಿದರು.

    ಈಗಾಗಲೇ ಜಿಲ್ಲೆಯಾದ್ಯಂತ 10 ಕೆಎಸ್ಆರ್‌ಪಿ ತುಕಡಿ, ಒಂದು ವಜ್ರ ಪಡೆ ಕಾರ್ಯ ನಿರ್ವಹಿಸುತ್ತಿದೆ. ಭದ್ರತೆಗಾಗಿ ಒಟ್ಟು 2 ಸಾವಿರ ಪೊಲೀಸರು ನಿಯೋಜನೆಗೊಂಡಿದ್ದಾರೆ. ಯಾರಾದರೂ ಕಾನೂನು ಉಲ್ಲಂಘನೆ ಮಾಡಿದರೆ, ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬಂದ್‍ಗೆ ಕರೆ ಕೊಟ್ಟಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಬಲವಂತವಾಗಿ ಬಂದ್ ಮಾಡಿಸಿದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

    ಬಂದ್ ಏಕೆ?
    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಗೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ನಡುವೆಯೇ ಸಿದ್ದರಾಮಯ್ಯನವರು ಟಿಪ್ಪು ಜಯಂತಿಯನ್ನು ಆಚರಿಸಿದ್ದರು. ಈ ವೇಳೆ 2015ರ ನವೆಂಬರ್ 11ರಂದು ಮಡಿಕೇರಿಯಲ್ಲಿ ಟಿಪ್ಪು ಜಯಂತಿಯಂದು ನಡೆದ ಘರ್ಷಣೆಯ ವೇಳೆ ಕುಟ್ಟಪ್ಪ ಎಂಬವರು ಮೃತಪಟ್ಟಿದ್ದರು. ಇದರಿಂದಾಗಿ ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಈ ಬಾರಿಯೂ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿತ್ತು. ರಾಜ್ಯ ಸರ್ಕಾರದ ನಿರ್ಧಾರದಿಂದಾಗಿ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್‍ಗೆ ಕರೆ ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv