Tag: sp

  • ಮಂಡ್ಯ: ಎಸ್‍ಪಿ ಕಚೇರಿ ಮುಂದೆ ಪೊಲೀಸ್ ವಾಹನದಲ್ಲೇ ಪೊಲೀಸರ ಜೂಜಾಟ

    ಮಂಡ್ಯ: ಎಸ್‍ಪಿ ಕಚೇರಿ ಮುಂದೆ ಪೊಲೀಸ್ ವಾಹನದಲ್ಲೇ ಪೊಲೀಸರ ಜೂಜಾಟ

    ಮಂಡ್ಯ: ಕರ್ತವ್ಯ ನಿರತ ಮೂವರು ರಿಸರ್ವ್ ಪೊಲೀಸ್ ಅಧಿಕಾರಿಗಳು ಪೊಲೀಸ್ ವಾಹನದಲ್ಲೇ ಇಸ್ಪೀಟ್ ಆಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ.

    ಅಸಿಸ್ಟೆಂಟ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್‍ಗಳಾದ ನಾಗಚಂದ್ರಬಾಬು (ಸಮವಸ್ತ್ರ ಧರಿಸಿದವರು), ಗೋಪಾಲಕೃಷ್ಣ(ಜೇಬಿಂದ ಹಣ ತೆಗೆದು ಹಾಕುವವರು), ನಾಗಣ್ಣ ನೇತೃತ್ವದ ರಿಸರ್ವ್ ಪೊಲೀಸರ ಒಂದು ತುಕಡಿಯನ್ನ ಕಂಟ್ರೋಲ್ ರೂಂ ಡ್ಯೂಟಿಗೆ ನಿಯೋಜಿಸಲಾಗಿತ್ತು. ತುರ್ತು ಸಂದರ್ಭಗಳಲ್ಲಿ ತೆರಳಲು ಎಸ್‍ಪಿ ಕಚೇರಿ ಬಳಿ ನಿಯೋಜಿಸಲಾಗಿದ್ದ ಈ ತಂಡ ಎಸ್‍ಪಿ ಕಚೇರಿ ಮುಂದೆಯೇ ಪೊಲೀಸ್ ವಾಹನದಲ್ಲೇ ಕುಳಿತು ಇಸ್ಪೀಟ್ ಆಡ್ತಿರೋ ವಿಡಿಯೋ ವೈರಲ್ ಆಗಿದೆ.

    ಜೂಜಾಟ ಕಾನೂನು ಬಾಹಿರವಾಗಿದ್ದರೂ ಈ ಅಧಿಕಾರಿಗಳು ಸಮವಸ್ತ್ರ ಧರಿಸಿ, ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಪರಾಧ ಕೃತ್ಯ ನಿಯಂತ್ರಿಸಬೇಕಾದ ಪೊಲೀಸರೇ ಅದೂ ಎಸ್‍ಪಿ ಕಚೇರಿ ಎದುರೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿರೋದು ಪೊಲೀಸರ ಕಾರ್ಯಕ್ಷಮತೆ ಪ್ರಶ್ನಿಸುವಂತಾಗಿದೆ.

  • ಎಲ್ಲೆಂದ್ರಲ್ಲಿ ಗಾಡಿ ಪಾರ್ಕ್ ಮಾಡ್ತಿದ್ದ ಸವಾರರಿಗೆ ಬಿಸಿ ಮುಟ್ಟಿಸಿದ ಎಸ್‍ಪಿ ಅಣ್ಣಾಮಲೈ

    ಎಲ್ಲೆಂದ್ರಲ್ಲಿ ಗಾಡಿ ಪಾರ್ಕ್ ಮಾಡ್ತಿದ್ದ ಸವಾರರಿಗೆ ಬಿಸಿ ಮುಟ್ಟಿಸಿದ ಎಸ್‍ಪಿ ಅಣ್ಣಾಮಲೈ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಗಾಡಿಗಳನ್ನ ಪಾರ್ಕ್ ಮಾಡ್ತಿದ್ದ ವಾಹನ ಚಾಲಕರ ವಿರುದ್ಧ ಎಸ್‍ಪಿ ಅಣ್ಣಾಮಲೈ ಇಂದು ರೆಬೆಲ್ ಆಗಿದ್ರು. ಗಾಡಿ ಪಾರ್ಕಿಂಗ್‍ನಿಂದ ಟ್ರಾಫಿಕ್‍ನಲ್ಲಿ ತೊಂದರೆ ಕೊಡ್ತಿದ್ದ ವಾಹನವನ್ನ ಅಣ್ಣಾಮಲೈ ಅವರೇ ಖುದ್ದು ಕ್ರೇನ್‍ಗೆ ಕಟ್ಟಿ ಠಾಣೆಗೆ ಎಳೆದೊಯ್ದದ್ರು.

    ಇಂದು ನಗರದ ಎಂಜಿ ರಸ್ತೆಗೆ ದಿಢೀರನೆ ಭೇಟಿ ಕೊಟ್ಟ ಎಸ್‍ಪಿ ಅಣ್ಣಾಮಲೈ ವಾಹನ ಸವಾರರು ರಾಂಗ್ ವೇನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಫೈನ್ ಹಾಕಿದ್ರು. ಎಸ್‍ಪಿಯ ದಿಢೀರ್ ಭೇಟಿಯಿಂದ ಶಾಕ್ ಆದ ಇತರೆ ವಾಹನ ಚಾಲಕರು ರಾಂಗ್ ಪ್ಲೇಸ್‍ನಲ್ಲಿ ನಿಲ್ಲಿಸಿದ್ದ ತಮ್ಮ ವಾಹನಗಳನ್ನ ತೆಗೆಯಲು ಅಲ್ಲಿಂದ ಕಾಲ್ಕಿತ್ರು.

    ಹಲವು ದಿನಗಳಿಂದ ಚಿಕ್ಕಮಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್‍ನಿಂದಾಗ್ತಿರೋ ತೊಂದರೆ ಕುರಿತು ಸಾರ್ವಜನಿಕರಿಂದ ಹಲವು ಫೋನ್ ಕರೆಗಳು ಬಂದ ಹಿನ್ನೆಲೆಯಲ್ಲಿ ಇಂದು ಸ್ವತಃ ಎಸ್‍ಪಿಯೇ ಖುದ್ದಾಗಿ ವಾಹನ ಮಾಲೀಕರಿಗೆ ಶಾಕ್ ಕೊಟ್ರು.

    ನಾಳೆಯಿಂದ ಅಂಗಡಿ ಮುಂದೆ, ರಾಂಗ್ ಪ್ಲೇಸ್‍ನಲ್ಲಿ ನಿಲ್ಲೋ ವಾಹನಗಳ ಜವಾಬ್ದಾರಿ ಅಂಗಡಿ ಮಾಲೀಕರದ್ದೇ ಎಂದು ಅಣ್ಣಾಮಲೈ ಎಚ್ಚರಿಸಿದ್ದಾರೆ.

  • ಕರ್ನಾಟಕದ 2 ಸಾವಿರ ಕೋಟಿ ರೂ. ಹಗರಣಕ್ಕೆ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬಲಿ?

    ಕರ್ನಾಟಕದ 2 ಸಾವಿರ ಕೋಟಿ ರೂ. ಹಗರಣಕ್ಕೆ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬಲಿ?

    ಲಕ್ನೋ: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಸ್ಫೋಟಕ ತಿರುವು ಸಿಕ್ಕಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾವಿರಾರು ಕೋಟಿ ರೂ. ಹಗರಣವನ್ನು ಬಹಿರಂಗಪಡಿಸುವ ಉದ್ದೇಶ ಹೊಂದಿದ್ದರು ಎಂದು ಉತ್ತರ ಪ್ರದೇಶದ ಸಚಿವ ಸುರೇಶ್ ಖನ್ನಾ ಹೇಳಿದ್ದಾರೆ.

    ಗುರುವಾರ ಉತ್ತರಪ್ರದೇಶದ ವಿಧಾನಸಭೆ ಕಲಾಪದಲ್ಲಿ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಕುರಿತಂತೆ ಚರ್ಚೆ ನಡೆದಿದ್ದು, ಈ ವೇಳೆ ಸಚಿವರು ಹಗರಣವನ್ನು ಬಯಲಿಗೆಳೆಯುತ್ತಾರೆ ಎಂಬ ನಿಟ್ಟಿನಲ್ಲಿ ಅವರನ್ನು ಕೊಲೆ ಮಾಡಲಾಗಿದೆ ಅನ್ನೋ ಬಾಂಬ್ ಸಿಡಿಸಿದ್ದಾರೆ.

    ಸಮಾಜವಾದಿ ಪಕ್ಷದ ನಿತಿನ್ ಅಗರ್‍ವಾಲ್ ಎಂಬವರು ಪ್ರಶ್ನೆಯ ವೇಳೆ ಹೆಚ್ಚಿನ ಭದ್ರೆತೆ ಇರೋ ಪ್ರದೇಶದಲ್ಲಿಯೇ ತಿವಾರಿ ಹತ್ಯೆಯಾಗಿರುವುದರಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಲ್ಲಿಗೆ ತಲುಪಿದೆ ಅಂತಾ ಕೇಳಿದ್ದಾರೆ. ಇದಕ್ಕೆ ದನಿಗೂಡಿಸಿದ ಸಮಾಜವಾದಿ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ತಿವಾರಿ ಸಾವಿನ ಬಗ್ಗೆ ಧ್ವನಿಯೆತ್ತಿದ್ದಾರೆ.

    ಈ ವೇಳೆ ಸ್ಪೀಕರ್, ಈ ಬಗ್ಗೆ ಚರ್ಚಿಸಲು ಇದು ಸಮಯವಲ್ಲ. ದಯವಿಟ್ಟು ಗಲಾಟೆ ಮಾಡದೆ ನಿಮ್ಮ ನಿಮ್ಮ ಸೀಟಿನಲ್ಲಿ ಆಸೀನರಾಗಿ ಅಂತಾ ಹೇಳಿದ್ರು. ಇದ್ರಿಂದ ಕೋಪೋದ್ರಿಕ್ತರಾದ ವಿಪಕ್ಷ ನಾಯಕ ರಾಮ್ ಗೋವಿಂದ್ ಚೌಧರಿ, ಒಬ್ಬ ಐಎಎಸ್ ಅಧಿಕಾರಿಯ ಹತ್ಯೆಯಾಗಿದೆ ಅಂದ್ರೆ ಅದು ಗಂಭೀರ ವಿಷಯವಾಗಿದೆ ಅಂದ್ರು.

    ಪ್ರತಿಪಕ್ಷಗಳ ಆರೋಪಕ್ಕೆ ಸಂಸದೀಯ ಸಚಿವ ಸುರೇಶ್ ಕುಮಾರ್ ಖನ್ನಾ ಅವರು, ಅನುರಾಗ್ ತಿವಾರಿ ಅವರ ಮೃತದೇಹದ ಮಣೋತ್ತರ ಪರೀಕ್ಷೆ ನಡೆಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೃತ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಒಂದು ದೊಡ್ಡ ಹಗರಣ ಬಯಲಿಗೆಳೆಯಲಿದ್ದರು ಎಂದು ಹೇಳಿದ್ದು ಈಗ ಚರ್ಚೆಗೆ ಕಾರಣವಾಗಿದೆ.

    ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ಅವರ ಶವ ಉತ್ತರಪ್ರದೇಶದ ಹಜರತ್‍ಗಂಜ್‍ನಲ್ಲಿ ಮೇ 17ರಂದು ಪತ್ತೆಯಾಗಿತ್ತು. ಅನುರಾಗ್ ತಿವಾರಿ ಅವರ ಜನ್ಮದಿನದಂದೇ ಇಲ್ಲಿನ ಮೀರಾ ಬಾಯಿ ಗೆಸ್ಟ್‍ಹೌಸ್ ಬಳಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. 2007ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಇವರು ಸದ್ಯ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ರು. ಉತ್ತರಪ್ರದೇಶದ ಬಾಹ್ರಿಯಾಚ್‍ನಲ್ಲಿ ನೆಲೆಸಿದ್ದು, ಸಾವಿಗೂ ಎರಡು ದಿನಗಳಿಂದ ಮೀರಾಬಾಯಿ ಗೆಸ್ಟ್ ಹೌಸ್‍ನಲ್ಲಿ ತಂಗಿದ್ರು ಎಂದು ವರದಿಯಾಗಿತ್ತು.

  • ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೆ: ಸಿಎಂ ಸ್ಪಷ್ಟನೆ

    ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೆ: ಸಿಎಂ ಸ್ಪಷ್ಟನೆ

    ಶಿವಮೊಗ್ಗ: ಓರ್ವ ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೇನೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಸಿಎಂ ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಬಾವುಟ ಹಿಡಿದು ಏಕಾಏಕಿ ನಾನು ಹೋಗುತ್ತಿದ್ದ ಕಾರಿಗೆ ಅಡ್ಡ ಬಂದ. ಏನಾದರೂ ಅನಾಹುತ ಆಗಿದ್ದರೆ ಎಂಬ ಕಾರಣದಿಂದ ಎಸ್ಪಿಗೆ ಹೇಳಿದ್ದೆ. ಸರ್ಕಾರದ ಮುಖ್ಯಸ್ಥನಾಗಿ ಹೇಳಿದ್ದೇನೆ ಹೊರತು ಕಪ್ಪು ಬಾವುಟ ಪ್ರದರ್ಶನಕ್ಕೆ ಅಲ್ಲ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

    ಇದನ್ನೂ ಓದಿ: ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

    ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಲು ಸಿದ್ಧವಿದೆ. ಅದರೆ, ಕೇಂದ್ರ ಸರ್ಕಾರ ಮೊದಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ರಾಷ್ಟ್ರ ಮಟ್ಟದಲ್ಲಿ ಮಹಾಮೈತ್ರಿ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಅಂತಾ ಹೇಳಿದ್ರು.

    ಸಿಎಂ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಸ್ವತಃ ಪೂರ್ವ ವಲಯ ಐಜಿ ಡಾ.ಸಲೀಂ ಉಸ್ತುವಾರಿಯ ನೇತೃತ್ವ ವಹಿಸಿದ್ದರು. ಎಸ್ಪಿ ಅಭಿನವ್ ಖರೆ ಇನ್ನಿತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮಗಳ ನಡೆಯಲಿರುವ ಸ್ಥಳಗಳ ಬಂದೋಬಸ್ತ್ ಗೆ ನಿಂತಿದ್ದರು. ಸಿವಿಲ್ ಡ್ರೆಸ್‍ನಲ್ಲೆ ಹೆಚ್ಚು ಪೊಲೀಸರು ನಿಯೋಜಿತಗೊಂಡು, ಪ್ರತಿಭಟನೆ ಹತ್ತಿಕ್ಕಲು ಸಜ್ಜುಗೊಂಡಿದ್ದರು.

    ಇದನ್ನೂ ಓದಿಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ

  • ಉತ್ತರಪ್ರದೇಶ, ಉತ್ತರಾಖಂಡ್‍ನಲ್ಲಿ ಮೋದಿ ಸುನಾಮಿ – ಪಂಜಾಬ್‍ನಲ್ಲಿ ಮಾನ ಉಳಿಸಿಕೊಂಡ ಕಾಂಗ್ರೆಸ್

    ಉತ್ತರಪ್ರದೇಶ, ಉತ್ತರಾಖಂಡ್‍ನಲ್ಲಿ ಮೋದಿ ಸುನಾಮಿ – ಪಂಜಾಬ್‍ನಲ್ಲಿ ಮಾನ ಉಳಿಸಿಕೊಂಡ ಕಾಂಗ್ರೆಸ್

    – ಇಂದೇ ಹೋಳಿಯಲ್ಲಿ ಮುಳುಗೆದ್ದ ಕೇಸರಿ ಕಾರ್ಯಕರ್ತರು
    – ಅಮೇಥಿ, ರಾಯಬರೇಲಿಯಲ್ಲಿ ಕಾಂಗ್ರೆಸ್ ಅಲ್ಲೋಲ ಕಲ್ಲೋಲ
    – ಪ್ರಾದೇಶಿಕ ಪಕ್ಷಗಳಿಗೆ ಎದುರಾಯ್ತು ಕಷ್ಟಕಾಲ
    – ಮಣಿಪುರ, ಗೋವಾ ಅಸೆಂಬ್ಲಿ ಅತಂತ್ರ

    ನವದೆಹಲಿ: ದೇಶದ ರಾಜಕೀಯ ದಿಕ್ಸೂಚಿ ಅಂತ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್‍ನಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಉತ್ತರ ಪ್ರದೇಶದಲ್ಲಿ ಮೋದಿ ಸುನಾಮಿಗೆ ಪ್ರತಿಪಕ್ಷಗಳು ತರಗೆಲೆಗಳಂತೆ ತೂರಿ ಹೋಗಿವೆ.

    403 ಕ್ಷೇತ್ರಗಳಲ್ಲಿ 300ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಕಮಲ ಅರಳಿದೆ. ಉತ್ತರ ಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳ ಚುನಾವಣೆಯಲ್ಲಿ ಸಂಪೂರ್ಣ ಕೇಸರೀಮಯವಾಗಿದ್ದು ಒಂದು ರೀತಿ `ಕಮಲೇ ಕಮಲೋತ್ಪತ್ತಿಃ’ ಎನ್ನುವಂತಾಗಿದೆ. ಅಲ್ಲದೆ, ಕಾಂಗ್ರೆಸ್‍ಗೆ ಅಕ್ಷರಶಃ ಭೂಕಂಪನದ ಅನುಭವವಾದ್ರೆ, ಪ್ರಾದೇಶಿಕ ಪಕ್ಷಗಳಾದ ಎಸ್‍ಪಿ, ಬಿಎಸ್‍ಪಿಗಳ ಭವಿಷ್ಯಕ್ಕೆ ಮಂಕುಬಡಿದಂತಾಗಿದೆ.

    ಪಂಜಾಬ್‍ನಲ್ಲಿ ಕಾಂಗ್ರೆಸ್‍ನ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಮಾಲ್ ಮಾಡಿದ್ದಾರೆ. ಬಾದಲ್ ಕುಟುಂಬ ರಾಜಕಾರಣ ಹೀನಾಯ ಸೋಲು ಕಂಡಿದೆ. ಇದ್ರಿಂದ ಮೈತ್ರಿ ಬೆಳೆಸಿಕೊಂಡಿದ್ದ ಬಿಜೆಪಿಗೂ ಮುಖಭಂಗವಾಗಿದೆ. ಇದರ ಮಧ್ಯೆ, ಮಣಿಪುರ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೆಕ್ ಟು ನೆಕ್ ಫೈಟ್ ನಡೀತು.

    ಪಕ್ಷದ ವಿಜಯಯಾತ್ರೆ ಬಿಜೆಪಿ ನಾಯಕರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ್ರೆ, ಕಾರ್ಯಕರ್ತರು ನಾಳಿನ ಹೋಳಿಯನ್ನ ಇಂದೇ ಆಚರಿಸುವ ಮೂಲಕ ಸಂಭ್ರಮವನ್ನ ಇಮ್ಮಡಿಗೊಳಿಸಿಕೊಂಡ್ರು. ಈ ಮಧ್ಯೆ, ಜನಾದೇಶವನ್ನ ಎಸ್‍ಪಿ, ಕಾಂಗ್ರೆಸ್, ಆಪ್ ಸ್ವಾಗತಿಸಿದ್ರೆ ಬಿಎಸ್‍ಪಿ ಮಾತ್ರ ಮತಯಂತ್ರದಲ್ಲಿ ಏನೋ ಮಸಲತ್ತು ನಡೆದಿದೆ ಗುಮಾನಿ ವ್ಯಕ್ತಪಡಿಸಿದೆ. ಆದ್ರೆ, ಆರೋಪದಲ್ಲಿ ಹುರುಳಿಲ್ಲ ಅಂತ ಚುನಾವಣಾ ಆಯೋಗ ಹೇಳಿದೆ.

    ಚುನಾವಣೆಯಲ್ಲಿದ್ದ ಪ್ರಮುಖ ನಾಯಕರ ಭವಿಷ್ಯ ಏನಾಯ್ತು..?

    1. ಪಂಕಜ್ ಸಿಂಗ್ – ಬಿಜೆಪಿ – ನೋಯ್ಡಾ – ಗೆಲುವು
    2. ರೀಟಾ ಬಹುಗುಣ ಜೋಶಿ – ಬಿಜೆಪಿ – ಲಖನೌ ಕಂಟೋನ್ಮೆಂಟ್ – ಗೆಲುವು
    3. ಗರೀಮಾ ಸಿಂಗ್ – ಬಿಜೆಪಿ – ಅಮೇಥಿ – ಗೆಲುವು
    4. ಸಿದ್ಧಾರ್ಥ್ ನಾಥ್ ಸಿಂಗ್ – ಬಿಜೆಪಿ – ಅಲಹಾಬಾದ್ ಪಶ್ಚಿಮ – ಗೆಲುವು (ಲಾಲ್‍ಬಹದ್ದೂರ್‍ಶಾಸ್ತ್ರಿ ಮೊಮ್ಮಗ )
    5. ಅಪರ್ಣಾ ಯಾದವ್ – ಎಸ್‍ಪಿ – ಲಖನೌ ಕಂಟೋನ್ಮೆಂಟ್ – ಸೋಲು
    6. ಶಿವಪಾಲ್ ಸಿಂಗ್ – ಎಸ್‍ಪಿ – ಜಸ್ವಂತ್‍ನಗರ್ – ಗೆಲುವು
    7. ಅಜಂ ಖಾನ್ – ಎಸ್‍ಪಿ – ರಾಮ್‍ಪುರ್ – ಗೆಲುವು
    8. ಅಂಬಿಕಾ ಚೌಧರಿ – ಬಿಎಸ್‍ಪಿ – ಫೆಫಾನ – ಸೋಲು
    9. ಜಿತಿನ್ ಪ್ರಸಾದ್ – ಕಾಂಗ್ರೆಸ್- ತಿಹಾರ್ – ಸೋಲು

    ಮುಖ್ಯಮಂತ್ರಿ ಯಾರು ಅನ್ನೋದನ್ನು ಘೊಷಿಸದೇ ಕಣಕ್ಕಿಳಿಯೋದು ಬಿಜೆಪಿ ಜಾಯಮಾನ.. ಅದೇ ರೀತಿ ಉತ್ತರ ಪ್ರದೇಶದಲ್ಲಿ ಕಣಕ್ಕಿಳಿದ ಬಿಜೆಪಿ, ಮೋದಿ ಅಲೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದು ಪ್ರಶ್ನೆ. ರೇಸ್‍ನಲ್ಲಿ ಯಾರ್ಯಾರಿದ್ದಾರೆ..? ಅವರ ಹಿನ್ನೆಲೆ ಏನು ಅನ್ನೋದನ್ನ ನೋಡೋದಾದ್ರೆ..

    ಯಾರಾಗ್ತಾರೆ ಮುಖ್ಯಮಂತ್ರಿ..?
    1. ರಾಜನಾಥ್ ಸಿಂಗ್
    * ಸಿಎಂ ರೇಸ್‍ನಲ್ಲಿ ಕೇಳಿಬರುವ ಮೊದಲ ಹೆಸರು
    * ಕೇಂದ್ರ ಗೃಹ ಸಚಿವ. ಆದ್ರೆ, ಮೋದಿ ತಮ್ಮ ಕ್ಯಾಬಿನೆಟ್‍ನಿಂದ ಬಿಡುವ ಬಗ್ಗೆ ಸ್ಪಷ್ಟತೆ ಇಲ್ಲ

    2. ಕೇಶವ್ ಪ್ರಸಾದ್ ಮೌರ್ಯ
    * ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ
    * ಓಬಿಸಿಯ ಎಂಬಿಸಿ ಮುಖಂಡ, ವಿಹೆಚ್‍ಪಿ, ಆರ್‍ಎಸ್‍ಎಸ್ ನಾಯಕ
    * ಪೂರ್ವಾಂಚಲದಿಂದ ಸಿಎಂ ಆದ ಮೊದಲಿಗರು ಎಂಬ ಹೆಗ್ಗಳಿಕೆ

    3. ಸಂತೋಷ್ ಗಂಗ್ವಾರ್
    * ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ
    * 1989ರಿಂದಲೂ ಕಮಲದ ಕಟ್ಟಾಳು
    * ಕುರ್ಮಿ ಸಮುದಾಯದ ಪ್ರಭಾವಿ, ಮೃದು ಸ್ವಭಾವ
    * ರೋಹಿಲ್‍ಖಂಡ್ ಪ್ರಾಂತ್ಯದಲ್ಲಿ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ

    4. ಮಹೇಶ್ ಶರ್ಮಾ
    * ಕೇಂದ್ರ ಸಾಂಸ್ಕೃತಿಕ ಖಾತೆ ಸಚಿವ
    * ಸಂಘ ಪರಿವಾರದ ಜೊತೆ ಉತ್ತಮ ಸಂಬಂಧ
    * ಆದರೆ, ಹಲವು ಆರೋಪಗಳಿವೆ

    5. ಮನೋಜ್ ಸಿನ್ಹಾ
    * ಕೇಂದ್ರ ಟೆಲಿಕಾಂ ಸಚಿವ
    * ಭೂಮಿಹಾರ್ ಸಮುದಾಯದ ನಾಯಕ
    * ಬನಾರಸ್ ಹಿಂದೂ ವಿವಿಯ ಪದವೀಧರ
    ಇವರ ಜೊತೆ ಯೋಗಿ ಆದಿತ್ಯನಾಥ್, ಉಮಾಭಾರತಿ, ಕಲ್‍ರಾಜ್ ಮಿಶ್ರಾ ಹೆಸರು ಕೂಡ ಕೇಳಿಬರುತ್ತಿದೆ.
    ============
    ಉತ್ತರ ಪ್ರದೇಶದಲ್ಲಿ ಬಿಜೆಪಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಗೆಲ್ಲೋದಿಕ್ಕೆ ಕಾರಣಗಳೇನು..?
    * ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆ
    * ನೋಟ್ ಬ್ಯಾನ್ ಮೂಲಕ ತಾವು ಬಡವರ ಪರ ಎಂದು ನಿರೂಪಿಸಿಕೊಂಡಿದ್ದು
    * ಬಿಜೆಪಿಗೆ ವರವಾದ ಎಸ್‍ಪಿ, ಬಿಎಸ್‍ಪಿಯ ತಪ್ಪು ಲೆಕ್ಕಾಚಾರಗಳು
    * ಮುಸ್ಲಿಂ, ದಲಿತ, ಜಾಟ್ ಮತಗಳ ಮತಗಳ ವಿಭಜನೆ
    (ಎಂಐಎಂ ಸ್ಪರ್ಧೆ, ವರ್ಕ್ ಆಗದ ಮಾಯಾವತಿ ದಲಿತ್ ಕಾರ್ಡ್, ಫಲಿಸದ ಎನ್‍ಆರ್‍ಎಲ್‍ಡಿಯ ಅಜಿತ್ ಸಿಂಗ್ ಲೆಕ್ಕ)
    * ಯಾದವೇತರ ಓಬಿಸಿ, ಜಾಟ್‍ವೇತರ ದಲಿತ ವರ್ಗ, ಮೇಲ್ವರ್ಗದ ಸಮುದಾಯಗಳ ಮೇಲೆ ಕಣ್ಣು
    (ಈ ಸಮುದಾಯಗಳ ಒಟ್ಟು ಮತ ಪ್ರಮಾಣ ಶೇ. 55-60)
    * ಒಬ್ಬ ಮುಸ್ಲಿಂರಿಗೂ ಟಿಕೆಟ್ ಕೊಡದೇ ಬಿಜೆಪಿ `ಧರ್ಮ ರಾಜಕೀಯ’
    (ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ದುರ್ಬಲ ಅಭ್ಯರ್ಥಿ ಹಾಕಿ ಬಿಎಸ್‍ಪಿ ಗೆಲ್ಲುವಂತೆ ಮಾಡಿದ್ದು)
    * ತಲಾಕ್ ವಿಚಾರದಲ್ಲಿ ಮುಸ್ಲಿಮ್ ಮಹಿಳೆಯರಿಂದ ಬಿಜೆಪಿಗೆ ಮತ
    * ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷ ಸಂಘಟನೆ
    * ಗೆಲ್ಲುವ ಕುದುರೆಗಳಿಗೆ ಮಾತ್ರ ಟಿಕೆಟ್
    * ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಚುನಾವಣಾ ಚಾಣಾಕ್ಯ ಸುನಿಲ್ ಬನ್ಸಾಲ್ ತಂತ್ರ ವರ್ಕೌಟ್
    * ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ
    ============

    ಯಾವ ರಾಜ್ಯದಲ್ಲಿ ಈಗ ಯಾರ ಆಳ್ವಿಕೆ?

    ಬಿಜೆಪಿ: ಉತ್ತರ ಪ್ರದೇಶ, ಮಧ್ಯ ಪ್ರದೇಶ, ಅರುಣಾಚಲ ಪ್ರದೇಶ, ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಅಸ್ಸಾಂ, ಛತ್ತೀಸ್‍ಘಡ, ಹರಿಯಾಣ, ಜಾರ್ಖಂಡ್, ಉತ್ತರಾಖಂಡ್

    ಬಿಜೆಪಿ ಮೈತ್ರಿ : ಜಮ್ಮು ಕಾಶ್ಮೀರ, ಆಂಧ್ರಪ್ರದೇಶ

    ಕಾಂಗ್ರೆಸ್: ಪಂಜಾಬ್, ಕರ್ನಾಟಕ, ಹಿಮಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಾಂಡಿಚೆರಿ,

    ಇತರೆ: ದೆಹಲಿ, ಬಿಹಾರ್, ಒಡಿಶಾ, ಸಿಕ್ಕಿಂ, ತ್ರಿಪುರಾ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಕೇರಳ, ತೆಲಂಗಾಣ.

    ಅತಂತ್ರ – ಮಣಿಪುರ, ಗೋವಾ
    ============

    ಕರ್ನಾಟಕದ ಮೇಲೆ ಏನ್ ಪರಿಣಾಮ ಬೀರುತ್ತೆ?
    * ರಾಜ್ಯ ಬಿಜೆಪಿಗೆ ಚೈತನ್ಯ ತಂದಿರುವ ಗೆಲುವು
    * ಮೋದಿ, ಅಮಿತ್ ಶಾ ನೆಕ್ಸ್ಟ್ ಟಾರ್ಗೆಟ್ ಕರ್ನಾಟಕ
    * ರಾಜ್ಯದಲ್ಲೂ ಚಾಣಕ್ಯರ ತಂತ್ರಗಳ ಶುರುವಾಗಲಿದೆ
    * ಮೇನಿಂದ ರಾಜ್ಯದಲ್ಲಿ ಶಾ ಮಾಸ್ಟರ್ ಪ್ಲಾನ್
    * ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯ ಮೇಲೂ ಪರಿಣಾಮ
    * ಆಡಳಿತರೂಢ ಕಾಂಗ್ರೆಸ್‍ನ ಉತ್ಸಾಹಕ್ಕೆ ಬ್ರೇಕ್
    * ರಾಜ್ಯದಲ್ಲಿ ರಾಹುಲ್‍ಗಾಂಧಿ ಸಾಹಸಕ್ಕೆ ಹಿನ್ನಡೆ
    * ಚುನಾವಣಾ ಪೂರ್ವದಲ್ಲೇ ಜೆಡಿಎಸ್ ಜತೆ ಮೈತ್ರಿ ಜಪ ಮಾಡಬಹುದು
    * ನೋಟ್‍ಬ್ಯಾನ್ ವಿಚಾರವನ್ನೇ ಬಿಜೆಪಿ ಅಸ್ತ್ರವನ್ನಾಗಿ ಬಳಸಬಹುದು
    * ಐಟಿದಾಳಿ, ಡೈರಿ ವಿಚಾರಗಳನ್ನೇ ಅಸ್ತ್ರವನ್ನಾಗಿ ಬಳಸುವ ಸಾಧ್ಯತೆ
    * ಮಹಾದಾಯಿ ವಿವಾದಕ್ಕೆ ಮುಲಾಮು ಹಚ್ಚುವ ಸಾಧ್ಯತೆ
    ============

    ಶಿರೋಮಣಿ ಅಖಾಲಿದಳ, ಬಿಜೆಪಿ ಮೈತ್ರಿಗೆ ಮುಖಭಂಗ:
    ಆಡಳಿತರೂಢ ಶಿರೋಮಣಿ ಅಖಾಲಿದಳ ಮತ್ತು ಬಿಜೆಪಿ ಮೈತ್ರಿಗೆ ಭಾರೀ ಮುಖಭಂಗವಾಗಿದೆ. ಬಾದಲ್ ಕುಟುಂಬ ರಾಜಕಾರಣಕ್ಕೆ ರೋಸಿಹೋದ ಜನ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ನಾಯಕತ್ವಕ್ಕೆ ಮಣೆ ಹಾಕಿದೆ. ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್-ಆಪ್ ಮಧ್ಯೆ ನೆಕ್ ಟು ನೆಕ್ ಫೈಟ್ ಇರುತ್ತೆ ಅಂತ ಹೇಳಿದ್ವು. ಆದ್ರೆ, ಈಗ ಅದು ಬುಡಮೇಲಾಗಿದೆ. 117 ಕ್ಷೇತ್ರಗಳ ವಿಧಾನಸಭೆಯಲ್ಲಿ ಸರಳ ಬಹುಮತ 59 ಸ್ಥಾನಗಳು ಬೇಕಿದ್ದು ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

    ============

    ಪಂಜಾಬ್ ಸಿಎಂ: ಪಂಜಾಬ್‍ನಲ್ಲಿ ಕಾಂಗ್ರೆಸ್ ಗೆದ್ದಿರೋ ಕಾರಣ ಮಾಜಿ ಸಿಎಂ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೇ ಮುಂದಿನ ಸಿಎಂ ಆಗಲಿದ್ದಾರೆ.

    1. ಅಮರಿಂದರ್ ಸಿಂಗ್ – ಕಾಂಗ್ರೆಸ್ – ಪಟಿಯಾಲ – ಗೆಲುವು (ಲಂಬಿ -ಸೋಲು)
    2. ನವಜೋತ್ ಸಿಂಗ್ ಸಿದು – ಕಾಂಗ್ರೆಸ್ – ಪೂರ್ವ ಅಮೃತಸರ – ಗೆಲುವು
    3. ಪ್ರಕಾಶ್ ಸಿಂಗ್ ಬಾದಲ್ – ಎಸ್‍ಎಡಿ – ಲಂಬಿ – ಗೆಲುವು
    4. ಸುಖ್‍ಬೀರ್ ಸಿಂಗ್ ಬಾದಲ್ – ಎಸ್‍ಡಿಎ – ಜಲಲಾಬಾದ್ – ಗೆಲುವು
    5. ಪರಗತ್ ಸಿಂಗ್ – ಕಾಂಗ್ರೆಸ್ – ಜಲಂಧರ್ – ಗೆಲುವು (ಹಾಕಿ ತಂಡದ ಮಾಜಿ ನಾಯಕ)
    6. ಭಗವಂತ್ ಮನ್ – ಎಎಪಿ – ಜಲಲಾಬಾದ್ – ಸೋಲು
    ============
    ಅಮರೀಂದರ್ ಸಿಂಗ್ ಗೆಲುವಿಗೆ ಕಾರಣಗಳು ಏನು?
    * ಬಾದಲ್ ಕುಟುಂಬ, ಸ್ವಜನಪಕ್ಷಪಾತ ವಿರೋಧಿ ಅಲೆ
    * ಕೃಷಿ ಆಧರಿತ ರೈತರಿಗೆ ನೋಟ್‍ಬ್ಯಾನ್ ನೋವು
    * ಕ್ಯಾ.ಅಮರೀಂದರ್ ಸಿಂಗ್ ಸಿಎಂ ಅಭ್ಯರ್ಥಿ ಅಂತ ಘೋಷಣೆ
    * ಡ್ರಗ್ಸ್ ಮಾಫಿಯಾ ವಿರೋಧಿ, ರೈತರ ಪರ ಪ್ರಣಾಳಿಕೆ ಹೊರಡಿಸಿದ್ದ ಅಮರೀಂದರ್
    * ಬಿಜೆಪಿಯಿಂದ ಕಾಂಗ್ರೆಸ್‍ಗೆ ಜಂಪ್ ಆದ ನವಜೋತ್ ಸಿಂಗ್ ಸಿದು
    * ಆಪ್ ಎಂಟ್ರಿಯಿಂದ ಮತಗಳ ವಿಭಜನೆ
    ============

    ಉತ್ತರಾಖಂಡ್‍ನಲ್ಲಿ ಅರಳಿದ ಕಮಲ:
    ಉತ್ತರ ಪ್ರದೇಶ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಉತ್ತರಾಖಂಡ್‍ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್‍ನ ಹರೀಶ್ ರಾವತ್  ಸರ್ಕಾರ ಬಿದ್ದಿದೆ.

    ಉತ್ತರಾಖಂಡ್‍ನಲ್ಲಿ ಮುಂದಿನ ಸಿಎಂ ಯಾರಾಗಬಹುದು?
    1. ರಮೇಶ್ ಪೊಖ್ರಿಯಾಲ್, ಮಾಜಿ ಸಿಎಂ
    2. ಬಿ.ಸಿ. ಖಂಡೂರಿ, ಮಾಜಿ ಸಿಎಂ
    3. ಅಜಯ್ ಭಟ್, ಬಿಜೆಪಿ ರಾಜ್ಯಾಧ್ಯಕ್ಷ
    4. ಭಗತ್ ಸಿಂಗ್ ಕೊಸ್ಯಾರಿ, ಪ್ರಮುಖ ನಾಯಕ
    5. ವಿಜಯ್ ಬಹುಗುಣ, ಮಾಜಿ ಸಿಎಂ (ಕಾಂಗ್ರೆಸ್‍ನಲ್ಲಿದ್ದಾಗ ಸಿಎಂ ಆಗಿದ್ದರು)
    ============

    ಗೆದ್ದ ಸೋತ ಪ್ರಮುಖ ಅಭ್ಯರ್ಥಿಗಳು
    ಹರೀಶ್ ರಾವತ್ – ಕಾಂಗ್ರೆಸ್ – ಹರಿದ್ವಾರ ಗ್ರಾಮೀಣ, ಕಿಚ್ಛ – ಸೋಲು
    ಅಜಯ್ ಭಟ್ – ಬಿಜೆಪಿ – ರಾಣಿಕೇಟ್ – ಸೋಲು
    ರೀತು ಖಂಡೂರಿ ಭೂಷಣ್ – ಬಿಜೆಪಿ – ಯಮಕೇಶ್ವರ – ಗೆಲುವು
    ಸತ್ಪಾಲ್ ಮಹಾರಾಜ್ – ಬಿಜೆಪಿ – ಚೌಬಟ್ಟಖಾಲ್ – ಗೆಲುವು
    ಕಿಶೋರ್ ಉಪಾಧ್ಯಾಯ – ಕಾಂಗ್ರೆಸ್ – ಶಹಾಪುರ – ಸೋಲು
    ============

    ಮಣಿಪುರದಲ್ಲಿ ಅತಂತ್ರ ವಿಧಾನಸಭೆ:
    ಮಣಿಪುರದಲ್ಲಿ ನೆಕ್ ಟು ನೆಕ್ ಫೈಟ್ ನಡೆದಿದ್ದು, ಕಾಂಗ್ರೆಸ್ ದೊಡ್ಡ ಪಕ್ಷವಾದರೂ ಅತಂತ್ರ ಅಸೆಂಬ್ಲಿ ನಿರ್ಮಾಣವಾಗಿದೆ. ಪಕ್ಷೇತರರು ನಿರ್ಣಾಯಕವಾಗಿದೆ

    ಪ್ರಮುಖ ಅಭ್ಯರ್ಥಿಗಳು:
    1. ಓಕ್ರಮ್ ಇಬೋಬಿ ಸಿಂಗ್ – ಕಾಂಗ್ರೆಸ್ – ಥೌಬಾಲ್ – ಗೆಲುವು
    2. ಇರೋಮ್ ಶರ್ಮಿಳಾ – ಪಿಆರ್‍ಜೆಎ – ಥೌಬಾಲ್ – ಸೋಲು (90 ಮತ ಅಷ್ಟೇ)
    3. ಎನ್. ಬಿರೇನ್ – ಬಿಜೆಪಿ – ಹೇನ್‍ಗಂಗ್ – ಗೆಲುವು

    ಗೋವಾದಲ್ಲಿ ಅತಂತ್ರ:
    ಗೋವಾದಲ್ಲಿ ಜನರು ಯಾರಿಗೂ ಸ್ಪಷ್ಟ ಬಹುಮತ ನೀಡದ ಕಾರಣ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

    ಪ್ರಮುಖ ನಾಯಕರ ಭವಿಷ್ಯ ಏನಾಯ್ತು ?

    1. ಲಕ್ಷ್ಮಿಕಾಂತ್ ಪರ್ಸೇಕರ್ – ಬಿಜೆಪಿ – ಮಂಡ್ರೇಮ್ – ಸೋಲು
    2. ದಿಗಂಬರ್ ಕಾಮತ್ – ಕಾಂಗ್ರೆಸ್ – ಮರ್ಗೋವಾ – ಗೆಲುವು
    3. ಎಲ್ವಿಸ್ ಗೋಮ್ಸ್ – ಎಎಪಿ – ಕನ್ಸೊಲಿಮ್ – ಸೋಲು

  • ಬುಲೆಟ್ ಟ್ರೈನ್ ಆಸೆಗಾಗಿ ಬಿಜೆಪಿಗೆ ಮತ: ಅಖಿಲೇಶ್ ಸಿಂಗ್ ಯಾದವ್

    ಬುಲೆಟ್ ಟ್ರೈನ್ ಆಸೆಗಾಗಿ ಬಿಜೆಪಿಗೆ ಮತ: ಅಖಿಲೇಶ್ ಸಿಂಗ್ ಯಾದವ್

    ನವದೆಹಲಿ: ಜನರ ನಿರ್ಧಾರವನ್ನು ಸ್ವೀಕಾರ ಮಾಡ್ತೇವೆ. ಮತಯಂತ್ರದ ದೋಷದ ಬಗ್ಗೆ ತನಿಖೆಯಾಗ್ಬೇಕು ಅಂತಾ ಮಾಯಾವತಿ ಹಾಕಿದ ಪ್ರಶ್ನೆಯನ್ನೇ ಅಖಿಲೇಶ್ ಸಿಂಗ್ ಯಾದವ್ ಕೂಡ ಎತ್ತಿದ್ದಾರೆ.

    ಹೀನಾಯ ಸೋಲು ಕಂಡ ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಸಿಂಗ್ ಯಾದವ್, ಉತ್ತರಪ್ರದೇಶದ ಯುವಕರು ಮತದಾರರಿಗೆ ಇಷ್ಟವಾಗಲಿಲ್ಲ. ಕಳೆದ 5 ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. 1,600 ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಮಾಡಿದ್ದೇವೆ. ಆದ್ರೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರೆಯಲಿದೆ. ರಾಜ್ಯದ ಜನ ಬುಲೆಟ್ ಟ್ರೈನ್‍ಗಾಗಿ ಬಿಜೆಪಿಗೆ ಮತ ಹಾಕಿರಬಹುದು ಅಂತಾ ಎಂದು ಹೇಳಿದರು.

    ಹೆಸರು ಒಂದೇ ಜನ ಬೇರೆ: ಸಿಎಂ ಆಗಿದ್ದ ಅಖಿಲೇಶ್ ಸಿಂಗ್ ಯಾದವ್ ಉತ್ತರಪ್ರದೇಶದಲ್ಲಿ ಚುನಾವಣೆಗೆ ಸ್ಫರ್ಧಿಸಿಲ್ಲ.ಮುಬಾರಕ್‍ಪುರದಲ್ಲಿ ಸೋತಿದ್ದು ಸಿಎಂ ಅಖಿಲೇಶ್ ಅಲ್ಲ. ಎಸ್‍ಪಿ ಪಕ್ಷದ ಅಭ್ಯರ್ಥಿ ಅಖಿಲೇಶ್ ಯಾದವ್ ಸೋತಿದ್ದಾರೆ. ಅಖಿಲೇಶ್ ಯಾದವ್ ಎಂಎಲ್‍ಸಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದರು.

    ರಾಜೀನಾಮೆ: ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾದ ಅಖಿಲೇಶ್ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

    ಉತ್ತರಪ್ರದೇಶದಲ್ಲಿ ಬಿಜೆಪಿ 324 ಹಾಗೂ ಎಸ್‍ಪಿ, ಕಾಂಗ್ರೆಸ್ 54, ಬಿಎಸ್‍ಪಿ 20, ಇತರೆ 05 ಸ್ಥಾನಗಳನ್ನು ಗಳಿಸಿದೆ.

    ಇದನ್ನೂ ಓದಿ: ಇವಿಎಂ ದೋಷದಿಂದ ಬಿಜೆಪಿಗೆ ಗೆಲುವು, ಬ್ಯಾಲೆಟ್ ಪೇಪರ್‍ನಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ: ಮಾಯಾವತಿ

    ಇದನ್ನೂ ಓದಿ: ಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯದ ಚುನಾವಣೆಗೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

    ಇದನ್ನೂ ಓದಿ: ಮೋದಿಯ ಒನ್ ಮ್ಯಾನ್ ಶೋ ಕೆಲಸ ಮಾಡಿದೆ: ಎಚ್‍ಡಿಡಿ

  • ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ: ಅಮಿತ್ ಶಾ

    ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ: ಅಮಿತ್ ಶಾ

    ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ತೃಪ್ತಿ ತಂದಿದ್ದು, ನಾಲ್ಕು ರಾಜ್ಯಗಳಲ್ಲಿ ನಾವು ಸರ್ಕಾರ ನಡೆಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಗೋವಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಂಜಾಬ್‍ನಲ್ಲಿ ಬಿಜೆಪಿ ಶೇಖಡಾವಾರು ಹೆಚ್ಚು ಮತಗಳನ್ನು ಗಳಿಸಿದೆ ಎಂದು ತಿಳಿಸಿದರು.

    ಉತ್ತರ ಪ್ರದೇಶ ಜನತೆ ನೀಡಿದ ಭರವಸೆಯನ್ನು ನಾವು ಈಡೇರಿಸುತ್ತೇವೆ.ಪಂಜಾಬ್‍ನಲ್ಲಿ ನಾವು ಸೋಲನ್ನು ಸ್ವೀಕರಿಸಿದ್ದೇವೆ. ಸೋತಿದ್ದು ಯಾಕೆ ಎನ್ನುವುದನ್ನು ಅಧ್ಯಯನ ನಡೆಸುತ್ತೇವೆ ಎಂದು ಹೇಳಿದರು.

    ಬಡವನಿಂದ ಹಿಡಿದು ಇಡೀ ದೇಶದ ಜನತೆ ಬಿಜೆಪಿಯ ಜೊತೆಗಿದ್ದಾರೆ. ನರೇಂದ್ರ ಮೋದಿ ವಿರುದ್ಧ ಪ್ರಚಾರ ನಡೆಸುತ್ತಿರುವ ವಿರೋಧ ಪಕ್ಷಗಳಿಗೆ ಜನರು ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದು ತಿಳಿಸಿದರು.

    ಈ ಜಯಕ್ಕೆ ಕಾರಣರಾದ ದೇಶದ ಎಲ್ಲ ಕಾರ್ಯಕರ್ತರಿಗೆ ಧನ್ಯವಾದಗಳು. ಬಿಜೆಪಿಯ ಈ ಜಯ ಜನರ ಜಯ ಮತ್ತು ಮೋದಿಯವರ ಆಡಳಿತಕ್ಕೆ ಸಿಕ್ಕಿದ ಜಯ ಎಂದು ಅಮಿತ್ ಶಾ ಬಣ್ಣಿಸಿದರು.

  • ಉತ್ತರ ಪ್ರದೇಶದಲ್ಲಿ ಲೋಕಸಭಾ ಎಲೆಕ್ಷನ್ ಫಲಿತಾಂಶ ಮತ್ತೊಮ್ಮೆ ಪ್ರಕಟವಾಯ್ತು!

    ಉತ್ತರ ಪ್ರದೇಶದಲ್ಲಿ ಲೋಕಸಭಾ ಎಲೆಕ್ಷನ್ ಫಲಿತಾಂಶ ಮತ್ತೊಮ್ಮೆ ಪ್ರಕಟವಾಯ್ತು!

    ನವದೆಹಲಿ: ಉತ್ತರ ಪ್ರದೇಶದಲ್ಲಿ 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಮರುಕಳಿಸಿದ್ದು ಬಿಜೆಪಿ ಜಯಭೇರಿ ಬಾರಿಸಿದೆ.

    2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ ಬಿಜೆಪಿಗೆ ಸ್ವಲ್ಪ ಮತ ಹಂಚಿಕೆ ಕಡಿಮೆಯಾಗಬಹುದು. ಆದರೆ ಅಷ್ಟೇ ಪ್ರಮಾಣದ ವೋಟ್ ಬಿಜೆಪಿಗೆ ಬಿದ್ದರೆ 300 ಕ್ಕಿಂತ ಹೆಚ್ಚಿನ ಸೀಟ್ ಬರಬಹುದು ಎನ್ನುವ ವಿಶ್ಲೇಷಣೆಯ ಸುದ್ದಿಯನ್ನು ಪಬ್ಲಿಕ್ ಟಿವಿ ಗುರುವಾರ ಪ್ರಕಟಿಸಿತ್ತು. ಈ ವಿಶ್ಲೇಷಣಾತ್ಮಕ ಸುದ್ದಿ ನಿಜವಾಗುತ್ತಿದ್ದು, 300ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಸಮೀಪ ಬಂದಿದೆ.

    ಎಷ್ಟು ಸ್ಥಾನಗಳಿಸಬೇಕು? 2012ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದ್ದರೆ, 2014 ಲೋಕಸಭಾ ಚುನಾವಣೆಯ 80 ಕ್ಷೇತ್ರಗಳಲ್ಲಿ 71ರಲ್ಲಿ ಜಯವನ್ನು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಶೇ.42.6 ಮತಗಳನ್ನು ಬಿಜೆಪಿ ಪಡೆಯುವ ಮೂಲಕ ಮೋದಿ, ಅಮಿತ್ ಶಾ ರಣತಂತ್ರ ಯಶಸ್ವಿಯಾಗಿತ್ತು. ಇಷ್ಟೇ ಶೇಕಡವಾರು ಮತಗಳು ಈ ಚುನಾವಣೆಯಲ್ಲಿ ಬಿದ್ದರೆ ಬಿಜೆಪಿ 318 ಕ್ಷೇತ್ರಗಳನ್ನು ಗಳಿಸಬೇಕು.

    ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 202 ಸ್ಥಾನಗಳು ಬೇಕು. 2012ರ ಚುನಾವಣೆಯಲ್ಲಿ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷ 224 ಸ್ಥಾನವನ್ನು ಗೆದ್ದುಕೊಂಡಿತ್ತು. ಈ ಮೂಲಕ ಅಖಿಲೇಶ್ ಯಾದವ್ ಮೊದಲ ಬಾರಿಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಪಟ್ಟವನ್ನು ಆಲಂಕರಿಸಿದ್ದರು.

    ಇದನ್ನೂ ಓದಿ: ಲೋಕಸಭಾ ವೋಟ್ ನೋಡಿದ್ರೆ ಉತ್ತರ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಬಹುದು?

  • ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

    ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

    ನವದೆಹಲಿ: ಉತ್ತರ ಪ್ರದೇಶದಲ್ಲಿ ಮೋದಿ ಸುನಾಮಿಗೆ ಎಸ್‍ಪಿ ಕಾಂಗ್ರೆಸ್ ಮೈತ್ರಿಕೂಟ, ಬಿಎಸ್‍ಪಿ ಧೂಳೀಪಟವಾಗಿದೆ. ಹೀಗಾಗಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳನ್ನು ಇಲ್ಲಿ ನೀಡಲಾಗಿದೆ.

    1. ಮೋದಿ ಮುಖ:
    ಉತ್ತರ ಪ್ರದೇಶದಲ್ಲಿ ಮೋದಿ ಮುಖವನ್ನು ಇಟ್ಟುಕೊಂಡೇ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮೋದಿಗಾಗಿ ಬಿಜೆಪಿ ಮತ ನೀಡಿ ಎಂದಿದ್ದು ವರವಾಗಿದೆ. ಅಷ್ಟೇ ಅಲ್ಲದೇ ಮೋದಿ ತಮ್ಮ ಭಾಷಣದಲ್ಲಿ ಸ್ಕ್ಯಾಮ್(ಸಮಾಜವಾದಿ, ಕಾಂಗ್ರೆಸ್, ಅಖಿಲೇಶ್ ಯಾದವ್, ಮಾಯಾವತಿ), ಕಸಬ್ (ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ) ಹೋಲಿಸಿ ವಾಗ್ದಾಳಿ ನಡೆಸುವ ಮೂಲಕ ಮೂರು ಪಕ್ಷಗಳ ಒಂದೇ ತಟ್ಟೆಗೆ ತಂದು ಬಿಜೆಪಿ ಪರ ಅಲೆಯನ್ನು ಸೃಷ್ಟಿಸುವಲ್ಲಿ ಸಫಲರಾದರು.

    2. ನೋಟ್‍ಬ್ಯಾನ್:
    ನವೆಂಬರ್ 8ರ ನೋಟು ಬ್ಯಾನ್ ಬಳಿಕ ಬಿಜೆಪಿ ವಿವಿಧ ರಾಜ್ಯಗಳ ಸ್ಥಳೀಯ ಆಡಳಿತ ಮತ್ತು ಪಾಲಿಕೆ ಚುನಾವಣೆ ಯಶಸ್ಸನ್ನು ಗಳಿಸಿತ್ತು. ಈ ಫಲಿತಾಂಶ ಉತ್ತರ ಪ್ರದೇಶದಲ್ಲಿ ಪರಿವರ್ತನೆಯಾಗಿದೆ. ಬಿಎಸ್‍ಪಿ, ಕಾಂಗ್ರೆಸ್, ಎಸ್‍ಪಿ ನೋಟ್‍ಬ್ಯಾನ್ ವಿರುದ್ಧ ಎಷ್ಟೇ ಪ್ರತಿಭಟಿಸಿದರೂ ಜನ ಮಾತ್ರ ಬಿಜೆಪಿಗೆ ಮತ ನೀಡಿದ್ದಾರೆ.

    3. ಎಸ್‍ಪಿ ಆಂತರಿಕ ಕಿತ್ತಾಟ:
    ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ಶಿವಪಾಲ್ ಜಗಳದಿಂದಾಗಿ ಜನ ರೋಸಿ ಹೋಗಿದ್ದರು. ತದ ನಂತರ ನಮ್ಮಲ್ಲಿ ಒಗ್ಗಟ್ಟು ಇದೆ ಎಂದು ಬಿಂಬಿಸಿದ್ದರು. ಆದರೆ ಇವರ ಕಿತ್ತಾಟ ನಾಟಕವನ್ನು ನೋಡುತ್ತಿದ್ದ ಜನ ಈ ಬಾರಿ ಬಿಜೆಪಿಯ ಕೈ ಹಿಡಿದಿದ್ದಾರೆ.

    4. ಕಾಂಗ್ರೆಸ್ ಮೈತ್ರಿಕೂಟ:
    ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಕಾಂಗ್ರೆಸ್ ಬಿಹಾರದಲ್ಲಿ ಯಶಸ್ವಿಯಾದಂತೆ ಉತ್ತರ ಪ್ರದೇಶಲ್ಲಿ ಎಸ್‍ಪಿ ಜೊತೆಗೂಡಿ ಮೈತ್ರಿ ಮಾಡಿಕೊಂಡಿತ್ತು. ಆದರೆ ಪ್ರಶಾಂತ್ ಕಿಶೋರ್ ಈ ತಂತ್ರಗಾರಿಕೆ ವೈಫಲ್ಯ ಕಂಡಿದ್ದು ಮೈತ್ರಿಕೂಟಕ್ಕೆ ಹೀನಾಯ ಸೋಲಾಗಿದೆ. ಆಡಳಿತ ವಿರೋಧಿ ಅಲೆ ಇರುವಾಗಲೇ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಬಿಜೆಪಿ ಗೆಲ್ಲಲು ವರದಾನವಾಯ್ತು.

    5. ಮಾಯಾವತಿ ವೈಫಲ್ಯ:
    ಹಿಂದುಳಿದ ವರ್ಗಗಳ ಮತಗಳನ್ನು ಪಡೆದು ದಲಿತ ಮಹಿಳಾ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ಈ ಬಾರಿ ಚುನಾವಣಾ ನಡೆಯುವ ಮೊದಲೇ ಸೋಲನ್ನು ಒಪ್ಪಿಕೊಂಡಿದ್ದಂತೆ ಕಾಣುತಿತ್ತು. ಎಸ್‍ಪಿ ಕಾಂಗ್ರೆಸ್ ಮೈತ್ರಿ ಕೂಟ ಮತ್ತು ಬಿಜೆಪಿಯ ಅಬ್ಬರದ ಪ್ರಚಾರ ನಡುವೆ ಬಿಎಸ್‍ಪಿ ಮಂಕಾಗಿತ್ತು. ಇದರ ಜೊತೆ ಹಣ ಪಡೆದು ಟಿಕೆಟ್ ಹಂಚಿಕೆ ಮಾಡಿದ್ದರು ಎನ್ನುವ ಆರೋಪವೂ ಮಾಯಾವತಿ ವಿರುದ್ಧ ಕೇಳಿ ಬಂದಿತ್ತು.

    6. ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ:
    ಕಾಂಗ್ರೆಸ್ ಎಸ್‍ಪಿಯ ಅಖಿಲೇಶ್ ಯಾದವ್ ಮುಂದಿನ ಮುಖ್ಯಮಂತ್ರಿ ಎಂದು ಪ್ರಕಟಿಸಿದ್ದರೆ, ಬಿಎಸ್‍ಪಿಯಿಂದ ಮಾಯಾವತಿ ಮುಖ್ಯಮಂತ್ರಿ ರೇಸ್‍ನಲ್ಲಿದ್ದರು. ಆದರೆ ಈ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿದೇ ಚುನಾವಣೆಗೆ ಇಳಿದಿತ್ತು. ಇದರಿಂದಾಗಿ ಬಿಜೆಪಿ ನಾಯಕರ ಆಂತರಿಕ ಜಗಳಕ್ಕೆ ಆಸ್ಪದವೇ ಇರಲಿಲ್ಲ. ಎಲ್ಲ ನಾಯಕರ ಹೋರಾಟ ಮತ್ತು ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದು ಬಿಜೆಪಿಯ ಗೆಲುವಿಗೆ ಕಾರಣವಾಯ್ತು.

    7. ಕೈ ಹಿಡಿದ ಯುವ ಮತದಾರರು:
    ಈ ಹಿಂದಿನ ಜಾತಿ ರಾಜಕಾರಣವನ್ನು ಬಿಟ್ಟು ಬಿಜೆಪಿ ಈ ಬಾರಿ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಪ್ರಚಾರ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಐಟಿ ಸೆಲ್ ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ ವೈಫಲ್ಯಗಳನ್ನು ಪ್ರಚಾರ ಮಾಡಿತ್ತು. ಈ ಪ್ರಚಾರದಿಂದಾಗಿ ಹೊಸ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ ಎನ್ನುವ ವಿಶ್ಲೇಷಣೆ ಈಗ ಆರಂಭವಾಗಿದೆ.

    8. ಮೈತ್ರಿ ಲಾಭ:
    ಬಿಜೆಪಿ ಅಪ್ನಾ ದಳ(ಎಸ್) ಮತ್ತು ಸುಹಲ್ದೇವ್ ಭಾರತೀಯ ಸಮಾಜ ಪಾರ್ಟಿ (ಎಸ್‍ಬಿಎಸ್‍ಪಿ) ಜೊತೆ ಮೈತ್ರಿ ಮಾಡಿಕೊಂಡಿತ್ತು ಪೂರ್ವಾಂಚಲ ಮತ್ತು ಮಧ್ಯ ಉತ್ತರ ಪ್ರದೇಶದ ಪಟೇಲ್ ಕುಮಿ ದಳವನ್ನು ಅಪ್ನಾ ದಳ ಪ್ರತಿನಿಧಿಸಿದರೆ, ಎಸ್‍ಬಿಎಸ್‍ಪಿ 17 ಹಿಂದುಳಿದ ವರ್ಗಗಳನ್ನು ಪೂರ್ವ ಉತ್ತರ ಪ್ರದೇಶ ಪ್ರತಿನಿದಿಸುತ್ತದೆ. ಈ ಎರಡು ಪಕ್ಷಗಳ ಜೊತೆಗಿನ ಮೈತ್ರಿ ಬಿಜೆಪಿಗೆ ವರವಾಗಿದೆ.

    9. ಹಿಂದುತ್ವ ಟ್ರಂಪ್ ಕಾರ್ಡ್:
    19.98 ಕೋಟಿ ಜನ ಸಂಖ್ಯೆಯಲ್ಲಿ 14.05 ಕೋಟಿ ಮತದರಾರ ಪೈಕಿ ಹಿಂದುಳಿದ ವರ್ಗ ಶೇ.34.7, ದಲಿತರು ಶೇ. 20.5, ಮುಸ್ಲಿಮ್ ಶೇ.19, ಬ್ರಾಹ್ಮಣ ಶೇ.10.5, ಬುಡಕಟ್ಟು ಜನಾಂಗ ಶೇ.2, ವೈಶ್ಯ ಶೇ.4.3, ಠಾಕೂರ್ ಶೇ.7.6 ಮಂದಿ ಇದ್ದರು. ಆದರೆ ಬಿಜೆಪಿ ಯಾವೊಬ್ಬ ಮುಸ್ಲಿಮ್ ಧರ್ಮದ ವ್ಯಕ್ತಿಗೆ ಟಿಕೆಟ್ ಹಂಚಿಕೆ ಮಾಡಿರಲಿಲ್ಲ. ಈ ವಿಚಾರವನ್ನೇ ಇಟ್ಟುಕೊಂಡು ವಿರೋಧಿಗಳು ಬಿಜೆಪಿ ವಿರುದ್ಧ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ಹಿಂದುಳಿದ ವರ್ಗ, ಮೇಲ್ವರ್ಗ, ದಲಿತರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ವಿಜಯ ಸಾಧಿಸಿದೆ.

    10. ಕೋಮು ಗಲಾಟೆ ಇಲ್ಲ:
    ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗೆ ಮುನ್ನ ಕೋಮು ಗಲಾಟೆ ನಡೆಯುವುದು ಉತ್ತರಪ್ರದೇಶಲ್ಲಿ ಸಾಮಾನ್ಯ. ಆದರೆ ಈ ಬಾರಿ ಒಂದೇ ಒಂದು ಕೋಮು ಗಲಾಟೆಯಾಗಿಲ್ಲ. ಮಂಗಳವಾರ ಲಕ್ನೋದಲ್ಲಿ ಶಂಕಿತ ಐಸಿಸ್ ಉಗ್ರನ ಹತ್ಯೆ ಮಾಡಲಾಗಿತ್ತು. ಆದರೆ ಈ ಎನ್‍ಕೌಂಟರ್ ಫೇಕ್ ಆಗಿದ್ದು, ಅಖಿಲೇಶ್ ಯಾದವ್ ಸರ್ಕಾರ ಚುನಾವಣೆಗೂ ಮುನ್ನ ಕೋಮುಗಲಾಟೆ ಸೃಷ್ಟಿಸಲು ಉಗ್ರ ನಿಗ್ರಹ ದಳದ ಮೂಲಕ ಈ ಎನ್‍ಕೌಂಟರ್ ಮಾಡಲಾಗಿದೆ ಎಂದು ಈಗ ಅಲ್ಲಿನ ಸ್ಥಳಿಯ ಮುಸ್ಲಿಮ್ ನಾಯಕರು ಆರೋಪಿಸಿದ್ದಾರೆ.

    ಈ ಎಲ್ಲ ಕಾರಣದ ಜೊತೆಗೆ ಸರ್ಜಿಕಲ್ ಸ್ಟ್ರೈಕ್ ಎಫೆಕ್ಟ್, ಕೇಂದ್ರ ಸರ್ಕಾರದ ಯಶಸ್ವಿ ಯೋಜನೆಗಳು, ಮುಸ್ಲಿಂಯೇತರ ಓಬಿಸಿ ವರ್ಗ ಬಿಜೆಪಿಯನ್ನು ಕೈ ಹಿಡಿದ ಕಾರಣ ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿದೆ.

    ಮಧ್ಯಾಹ್ನ 1 ಗಂಟೆಯ ಟ್ರೆಂಡ್ಸ್ ಪ್ರಕಾರ ಬಿಜೆಪಿ 307 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎಸ್‍ಪಿ ಕಾಂಗ್ರೆಸ್ 82, ಬಿಎಸ್‍ಪಿ 18, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    2012ರ ಚುನಾವಣೆಯಲ್ಲಿ ಎಸ್‍ಪಿ 224, ಬಿಎಸ್‍ಪಿ 80, ಬಿಜೆಪಿ 47, ಕಾಂಗ್ರೆಸ್ 28 ಸ್ಥಾನಗಳನ್ನು ಗೆದ್ದುಕೊಂಡಿತ್ತು.

    ಇದನ್ನೂ ಓದಿ: ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ. ಪಕ್ಷ ಸಂಘಟನೆಯಾಗಿದ್ದು ಹೇಗೆ?

  • ಮೋದಿ, ನಿತೀಶ್ ಗೆಲ್ಲಿಸಿದ್ದ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ವರ್ಕೌಟ್ ಆಗ್ಲಿಲ್ಲ!

    ಮೋದಿ, ನಿತೀಶ್ ಗೆಲ್ಲಿಸಿದ್ದ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ವರ್ಕೌಟ್ ಆಗ್ಲಿಲ್ಲ!

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲ್ಲಿಸಿದ್ದ, ಬಿಹಾರ ಚುನಾವಣೆಯಲ್ಲಿ ಜೆಡಿಯು ಗೆಲುವಿನ ರೂವಾರಿಯಾಗಿದ್ದ ರಾಜಕೀಯ ಸಲಹೆಗಾರ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ಉತ್ತರಪ್ರದೇಶಲ್ಲಿ ವಿಫಲವಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು.

    ಪ್ರಶಾಂತ್ ಕಿಶೋರ್ ಅವರನ್ನು ನೇಮಿಸಿದ್ದಕ್ಕೆ ಆರಂಭದಲ್ಲೇ ಪಕ್ಷದ ಹಿರಿಯ ನಾಯಕರು ಅಪಸ್ವರ ಎತ್ತಿದ್ದರು. ನಮ್ಮ ಮಾತಿಗೆ ಬೆಲೆ ನೀಡದೇ ಪ್ರಶಾಂತ್ ಕಿಶೋರ್ ಮಾತಿಗೆ ಹೈಕಮಾಂಡ್ ಬೆಲೆ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

    ಹಿರಿಯ ನಾಯಕರೇ ಅಸಮಾಧಾನ ಹೊರ ಹಾಕಿದ್ದರೂ ಎಸ್‍ಪಿ, ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲು ಪ್ರಶಾಂತ್ ಕಿಶೋರ್ ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ಮೋದಿ ಅಲೆಯಲ್ಲಿ ಎಸ್‍ಪಿ ಮತ್ತು ಕಾಂಗ್ರೆಸ್ ಕೊಚ್ಚಿಕೊಂಡು ಹೋಗಿದೆ. ಈ ಮೂಲಕ ಎರಡು ಚುನಾವಣೆಯಲ್ಲಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್‍ಗೆ ಮೂರನೇ ಚುನಾವಣೆಯಲ್ಲಿ ಸೋಲಾಗಿದೆ.

    ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬಾರಿ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಬೇಕೆಂದು ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಕೆಲ ತಿಂಗಳ ಹಿಂದೆ ಪ್ರಕಟವಾಗಿತ್ತು.

    ಲೋಕಸಭಾ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಬಿಹಾರದಲ್ಲಿ ಮಹಾಘಟ್‍ಬಂಧನ್ ಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು.