Tag: sp

  • ಲಾಕ್‍ಡೌನ್ ವೇಳೆ ಅನಗತ್ಯ ಓಡಾಟ- ಕೋಲಾರದಲ್ಲಿ 200ಕ್ಕೂ ಹೆಚ್ಚು ಬೈಕ್ ವಶಕ್ಕೆ

    ಲಾಕ್‍ಡೌನ್ ವೇಳೆ ಅನಗತ್ಯ ಓಡಾಟ- ಕೋಲಾರದಲ್ಲಿ 200ಕ್ಕೂ ಹೆಚ್ಚು ಬೈಕ್ ವಶಕ್ಕೆ

    ಕೋಲಾರ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೂ ಕೆಲವರು ಅನಗತ್ಯವಾಗಿ ಸಂಚರಿಸಿದ್ದು, ಪೊಲೀಸರು ಎಲ್ಲೆಡೆ ಬಂದೋಬಸ್ತ್ ಮಾಡಿದ್ದರು. ಹೀಗಾಗಿ ವಾಹನ ಸೀಜ್ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತಿದ್ದಾರೆ.

    ಜಿಲ್ಲೆಯ ಮಾಲೂರು ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದ ನೂರಕ್ಕೂ ಹೆಚ್ಚು ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರ ನಗರ ಪೊಲೀಸರು 26 ಬೈಕ್ ಗಳು ಹಾಗೂ ಜಿಲ್ಲೆಯ ವಿವಿಧೆಡೆ ಒಟ್ಟು 200ಕ್ಕೂ ಹೆಚ್ಚು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಇದ್ದರೂ ಅನಗತ್ಯವಾಗಿ ಓಡಾಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರ ಪುಲ್ ಡ್ರಿಲ್ ನಡೆಸಿದ್ದಾರೆ.

    ಸರ್ಕಾರ ಸ್ಪಷ್ಟವಾಗಿ ಹೇಳಿದೆ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಮನೆಯಿಂದ ಹೊರಬರಬೇಕು, ಉಳಿದಂತೆ ಮನೆಯಲ್ಲಿಯೇ ಇದ್ದು, ಕೊರೊನಾ 2ನೇ ಅಲೆ ತಡೆಯುವಂತೆ ಮನವಿ ಮಾಡಲಾಗಿದೆ. ಆದರೂ ಕೆಲವರು ಸುಖಾಸುಮ್ಮನೆ ಬೈಕ್ ಗಳಲ್ಲಿ ಸಂಚರಿಸುತ್ತಿದ್ದರು, ಇಂತಹವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್‍ಗಳಿಗಾಗಿ ಜನ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದು, ಎಲ್ಲೆಡೆ ಕಂಡು ಬಂತು.

    ಡಿಸಿ, ಎಸ್‍ಪಿ ಸಿಟಿ ರೌಂಡ್ಸ್

    ಡಿಸಿ ಡಾ.ಆರ್.ಸೆಲ್ವಮಣಿ ಹಾಗೂ ಎಸ್‍ಪಿ ಕಾರ್ತಿಕ್ ರೆಡ್ಡಿ ಖುದ್ದು ನಗರ ಪ್ರದಕ್ಷಿಣೆ ಹಾಕಿ ಲಾಕ್‍ಡೌನ್ ಪರಿಶೀಲನೆ ನಡೆಸಿದರು. ನಗರದ ನಗರದ ಅಮ್ಮವಾರಿಪೇಟೆ, ಎಂಬಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಿರಿಸಿ, ಪರಿಶೀಲನೆ ನಡೆಸಿದರು.

    ಅನ್ಯಗತ್ಯವಾಗಿ ಓಡಾಟ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಡಿಸಿ ಸೆಲ್ವಮಣಿ, ಎಲ್ಲ ಕಡೆ ಬ್ಯಾರಿಕೇಡ್ ಹಾಕಿ ನಾಕಾಬಂಧಿ ಮಾಡುವಂತೆ ಸೂಚಿಸಿದರು. ಕೋಲಾರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಇದೇ ವೇಳೆ ಮನವಿ ಮಾಡಿದರು. ನಗರದಲ್ಲಿ ಪ್ರದಕ್ಷಿಣೆ ಹಾಕಿ ಬಂದೋ ಬಸ್ತ್ ಪರಿಶೀಲನೆ ನಡೆಸಿದ ಎಸ್ಪಿ ಕಾರ್ತಿಕ್ ರೆಡ್ಡಿ, ಅನಗತ್ಯವಾಗಿ ಓಡಾಟ ನಡೆಸಿದ ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

  • ಮಾಸ್ಕ್, ಸಾಮಾಜಿಕ ಅಂತರ ಕಾಪಾಡದಿದ್ದರೆ ಜೈಲೇ ಗತಿ- ಕೊಡಗು ಎಸ್‍ಪಿ ಎಚ್ಚರಿಕೆ

    ಮಾಸ್ಕ್, ಸಾಮಾಜಿಕ ಅಂತರ ಕಾಪಾಡದಿದ್ದರೆ ಜೈಲೇ ಗತಿ- ಕೊಡಗು ಎಸ್‍ಪಿ ಎಚ್ಚರಿಕೆ

    ಮಡಿಕೇರಿ: ರಾಜ್ಯಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಸಹ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಷ್ಟಾದರೂ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಕೊರೊನಾ ನಿಯಮ ಪಾಲಿಸದಿದ್ದರೆ ಜೈಲೇ ಗತಿ ಎಂದು ಎಸ್‍ಪಿ ಕ್ಷಮಾ ಮಿಶ್ರಾ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ಜೈಲೇ ಗತಿ. ಮಾಸ್ಕ್ ಹಾಕದಿದ್ದರೆ ಸಾಮಾಜಿಕ ಅಂತರ ಕಾಪಾಡದಿದ್ದರೆ ಜೈಲು ವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಈಗಾಗಲೇ ಕೋವಿಡ್ ನಿಯಮ ಉಲ್ಲಂಘಿಸಿದ 11 ಜನರ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಅಷ್ಟೇ ಅಲ್ಲದೆ ಈ 11 ಜನರ ಮೇಲೆ ಜಾಮೀನು ರಹಿತ ಕೇಸ್ ದಾಖಲು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರ ಮೇಲೆ ಎಫ್‍ಐಆರ್ ದಾಖಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸಿಸಲಾಗಿದ್ದು, ಕೊಡಗಿನ ಕುಶಾಲನಗರದಲ್ಲಿ 9 ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ತಲಾ ಒಂದು ಕೇಸ್ ದಾಖಲು ಮಾಡಲಾಗಿದೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚು ಕೇಸ್ ದಾಖಲಿಸಲಾಗುವುದು ಎಂದು ಖಡಕ್ ವಾರ್ನ್ ಮಾಡಿದ್ದಾರೆ.

    ಮಾಸ್ಕ್, ಸಾಮಾಜಿಕ ಅಂತರ ಪಾಲಿಸದೆ ಎಲ್ಲೆಂದರಲ್ಲಿ ಜನ ಸೇರುವುದು, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇನ್ನೊಂದೆಡೆ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿತ್ಯ ನೂರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಅಲ್ಲದೆ ಇಂದು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ 183 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಷ್ಟಾದರೂ ಜನ ಎಚ್ಚೆತ್ತುಕೊಂಡಿಲ್ಲ, ಹೀಗಾಗಿ ಕಠಿಣ ಕ್ರಮ ಅಗತ್ಯವಾಗಿದೆ ಎಂದರು.

  • ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್

    ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್

    ಕೋಲ್ಕತ್ತಾ: ಟಿಎಂಸಿ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತಾರೆ ಎಂದು ನಟಿ, ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಭವಿಷ್ಯ ನುಡಿದಿದ್ದಾರೆ.

    ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ನಾಯಕಿಯಾಗಿರುವ ಜಯಾ ಬಚ್ಚನ್ ಇವತ್ತು ಟಿಎಂಸಿ ಅಭ್ಯರ್ಥಿಗಳ ಪರವಾಗಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮತ ಯಾಚನೆ ಮಾಡಿದರು. ಟಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಅರುಣ್ ವಿಶ್ವಾಸ್ ಕಣಕ್ಕಿಳಿಸಿದ್ದಾರೆ. ಬಿಜೆಪಿ ಪರವಾಗಿ ಕೇಂದ್ರ ಸಚಿವೆ ಬಬುಲ್ ಸುಪ್ರಿಯೋ ಚುನಾವಣೆ ಮೈದಾನದಲ್ಲಿದ್ದಾರೆ.

    ರೋಡ್ ಶೋ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಯಾ ಬಚ್ಚನ್, ಪಶ್ಚಿಮ ಬಂಗಾಳದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಆಗಲಿದೆ. ಅದು ಕೇವಲ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆದಾಗ ಮಾತ್ರ ಸಾಧ್ಯ ಎಂದು ಹೇಳಿದರು. ಇತ್ತ ಟಿಎಂಸಿಗೆ ಸಾಥ್ ನೀಡಿದ್ದಕ್ಕೆ ಜಯಾ ಬಚ್ಚನ್ ಮತ್ತು ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಮಮತಾ ಬ್ಯಾನರ್ಜಿ ಧನ್ಯವಾದ ಸಲ್ಲಿಸಿದ್ದಾರೆ.

    ಜಯಾ ಬಚ್ಚನ್ ಕ್ಯಾಂಪೇನ್ ಕುರಿತು ಪ್ರತಿಕ್ರಿಯಿಸಿರುವ ಬಬುಲ್ ಸುಪ್ರಿಯೋ, ಅವರು ನೇರವಾಗಿ ಮಾತನಾಡುವ ನಾಯಕಿ. ಪಕ್ಷಗಳ ಆದೇಶದ ಹಿನ್ನೆಲೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿರಬಹುದು. ಬಚ್ಚನ್ ಕುಟುಂಬದ ಆಪ್ತರಲ್ಲಿ ನಾನು ಒಬ್ಬ. ಕ್ಯಾಂಪೇನ್ ನಲ್ಲಿ ಬಿಜೆಪಿ ವಿರುದ್ಧ ಆರೋಪಗಳನ್ನ ಮಾಡಬಹುದು, ಆದ್ರೆ ನನ್ನ ವಿರುದ್ಧ ಜಯಾಜೀ ಮಾತನಾಡಲಾರು ಎಂದು ಹೇಳಿದ್ದಾರೆ. ಅಭಿಷೇಕ್ ಬಚ್ಚನ್ ಸಿನಿಮಾಗಳ ಹಾಡುಗಳಿಗೆ ಬಬೂಲ್ ಸುಪ್ರಿಯೋ ಧ್ವನಿ ನೀಡಿದ್ದಾರೆ. ಇದನ್ನೂ ಓದಿ: ಇಷ್ಟು ಕೆಟ್ಟ ಪ್ರಧಾನಿ, ಗೃಹ ಸಚಿವರನ್ನ ನೋಡಿಯೇ ಇಲ್ಲ: ದೀದಿ ವಾಗ್ದಾಳಿ

  • ಸ್ಫೋಟಕ್ಕೆ ಸಂಚು ರೂಪಿಸಿದ್ದ ಕ್ರಷರ್‌ಗೆ ಜಿಲ್ಲಾಡಳಿತ ದಾಳಿ – ನಾಲ್ವರ ಬಂಧನ

    ಸ್ಫೋಟಕ್ಕೆ ಸಂಚು ರೂಪಿಸಿದ್ದ ಕ್ರಷರ್‌ಗೆ ಜಿಲ್ಲಾಡಳಿತ ದಾಳಿ – ನಾಲ್ವರ ಬಂಧನ

    ಕೋಲಾರ: ರಾಜ್ಯದಲ್ಲಿ ನಡೆದ ಅಕ್ರಮ ಜಿಲೆಟಿನ್ ಸ್ಫೋಟ ಪ್ರಕರಣಗಳ ನಂತರ ಎಚ್ಚೆತ್ತಿರುವ ಗಣಿ ಇಲಾಖೆ ರಾಜ್ಯದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ಹದ್ದಿನ ಕಣ್ಣಿಟ್ಟಿದೆ. ಪರಿಣಾಮ ಇಂದು ಜಿಲ್ಲೆಯಲ್ಲಿ ಅಕ್ರಮವಾಗಿ ಬ್ಲಾಸ್ಟಿಂಗ್ ಮಾಡಲು ಮುಂದಾಗಿದ್ದವರ ಮೇಲೆ ಜಿಲ್ಲಾಡಳಿತ ದಾಳಿ ಮಾಡಿ ನಾಲ್ವರನ್ನು ಬಂಧಿಸಿದೆ.

    ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಆನಿಮಿಟ್ಟನಹಳ್ಳಿ ಗ್ರಾಮದ ಬಳಿ. ಜಿಲ್ಲಾಪಂಚಾಯತ್ ಸದಸ್ಯೆ ಗೀತಾ ಅವರ ಪತಿ ವೆಂಕಟೇಶ್ ಗೌಡ ಎಂಬವರ ಒಡೆತನದ ವೆಂಕಟೇಶ್ವರ ಸ್ಟೋನ್ ಕ್ರಷರ್ ನಲ್ಲಿ ಅಕ್ರಮವಾಗಿ ಬ್ಲಾಸ್ಟಿಂಗ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿಗಳ ತಂಡ ದಾಳಿ ಮಾಡಿದಾಗ ಬ್ಲಾಸ್ಟಿಂಗ್ ಮಾಡಲು ಬಂಡೆಗಳಲ್ಲಿ ಸುಮಾರು 70 ಹೋಲ್‍ಗಳನ್ನು ಮಾಡಿ ಅದರಲ್ಲಿ ಜಿಲೆಟಿನ್ ಹಾಗೂ ಮೋನಿಯನ್ ತುಂಬಿರುವುದು ಕಂಡುಬಂದಿದೆ. ದಾಳಿ ವೇಳೆ ಜಿಲ್ಲಾಧಿಕಾರಿಗಳ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕ್ರಷರ್ ಮಾಲೀಕ ವೆಂಕಟೇಶ್ ಗೌಡ ತಲೆಮರೆಸಿಕೊಂಡಿದ್ದಾರೆ.

    ರಾಜ್ಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣದ ನಂತರ ಕಲ್ಲುಗಣಿಗಾರಿಕೆ ಸ್ಫೋಟಕ್ಕೂ ಮೊದಲು ಡೈರೆಕ್ಟರ್ ಜನರಲ್ ಮತ್ತು ಮೈನ್ಸ್ ಸೇಪ್ಟಿ ಇಲಾಖೆಯಿಂದ ಅನುಮತಿ ಪಡೆಯಬೇಕು, ಬ್ಲಾಸ್ಟಿಂಗ್ ಮಾಡುವ ಮೊದಲು ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹಾಗಾಗಿ ಅನುಮತಿ ಪಡೆಯುವವರೆಗೂ ಜಿಲ್ಲೆಯಲ್ಲಿ ಬ್ಲಾಸ್ಟಿಂಗ್ ಮಾಡದಂತೆ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಗಣಿಮಾಲೀಕರಿಗೂ ನೋಟೀಸ್ ನೀಡಿತ್ತು.

    ಆದರೆ ಜಿಲ್ಲೆಯ ಆನಿಮಿಟ್ಟನಹಳ್ಳಿ ವೆಂಕಟೇಶ್ವರ ಸ್ಟೋನ್ ಕ್ರಷರ್‌ ನಲ್ಲಿ ಈ ನಿಯಮವನ್ನು ಗಾಳಿಗೆ ತೂರಿ ಬ್ಲಾಸ್ಟಿಂಗ್ ಮಾಡಲು ಮುಂದಾಗಿತ್ತು. ಈ ವೇಳೆ ದಾಳಿ ಮಾಡಿದ ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಎಸ್ಪಿ ಕಾರ್ತಿಕ್ ರೆಡ್ಡಿ ಮತ್ತು ತಂಡ ನಾಲ್ವರನ್ನು ಬಂಧಿಸಿ ಅಕ್ರಮ ಸ್ಫೋಟಕ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

  • ಚಿಕ್ಕಬಳ್ಳಾಪುರ ಎಸ್‍ಪಿ, ಡಿಸಿಗೆ ಡಿಕೆಶಿ ಖಡಕ್ ವಾರ್ನಿಂಗ್

    ಚಿಕ್ಕಬಳ್ಳಾಪುರ ಎಸ್‍ಪಿ, ಡಿಸಿಗೆ ಡಿಕೆಶಿ ಖಡಕ್ ವಾರ್ನಿಂಗ್

    ಚಿಕ್ಕಬಳ್ಳಾಪುರ: ನಮ್ಮ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ- ನಾನು ಬಂದು ಧರಣಿ ಮಾಡುತ್ತೇವೆ. ನಿಮ್ಮ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಸ್‍ಪಿ ಹಾಗೂ ಜಿಲ್ಲಾಧಿಕಾರಿಗೆ ಎಚ್ಚರಿಸಿದರು.

    ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಜನಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜನಧ್ವನಿ ಯಾತ್ರೆ ನಡೆಯಿತು. ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕಂದವಾರ ಕೆರೆಗೆ ಬಾಗಿನ ಅರ್ಪಿಸಿದರು. ನಂತರ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ರೋಡ್ ಶೋ ಹಾಗೂ ಕಾಲ್ನಿಡಿಗೆ ಮೂಲಕ ಶಿಡ್ಲಘಟ್ಟ ವೃತ್ತಕ್ಕೆ ಬಂದ ಕಾಂಗ್ರೆಸ್ ನಾಯಕರು ಶಿಡ್ಲಘಟ್ಟ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನನಗೆ ದೂರು ಕೊಟ್ಟಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರ ಕಿರುಕುಳ ಜಾಸ್ತಿ ಆಗಿದೆಯಂತೆ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಿದ್ದರಾಮಯ್ಯ- ನಾನು ಬಂದು ಧರಣಿ ಮಾಡುತ್ತೇವೆ. ನಿಮ್ಮ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ವಾರ್ನ್ ಮಾಡಿದರು. ಇದೇ ವೇಳೆ ನಿನ್ನೆ ಇದ್ದ ಮಂತ್ರಿ ಇಂದು ಇಲ್ಲ ಇವತ್ತು ಇರೋರು ನಾಳೆ ಇರಲ್ಲ. ಸರ್ಕಾರಗಳೇ ಉರುಳಿ ಹೋಗುತ್ತವೆ. ಸೂರ್ಯ ಹುಟ್ಟಿ ಮುಳುಗಿ ಹೋಗುತ್ತಾನೆ, ಹೀಗಾಗಿ ನಿಮ್ಮ ತಪ್ಪು ತಿದ್ದಿಕೊಳ್ಳಿ ಎಂದು ಡಿಕೆಶಿ ಎಚ್ಚರಿಸಿದರು.

    ನಾಳೆ ವಿಧಾನಸಭೆ ಅಧಿವೇಶನ ಇದ್ದು, ಇಂದು ಯಾಕೆ ಜನಧ್ವನಿ ಯಾತ್ರೆ ಆರಂಭ ಮಾಡಬೇಕಿತ್ತು ಎಂದು ಹಲವರು ಕೇಳುತ್ತಿದ್ದಾರೆ. ಈ ದಿನ ಬುದ್ಧ, ಬಸವಣ್ಣನವರು ಮನೆ ಬಿಟ್ಟ ಗಳಿಗೆ. ಏಸು ಕ್ರಿಸ್ತ ಶಿಲುಬೆಗೆ ಏರಿದ, ಭೀಮಾಭಾಯಿಯವರು ಅಂಬೇಡ್ಕರ್ ಗೆ ಜನ್ಮ ಕೊಟ್ಟ, ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡ, ಸೋನಿಯಾ ಗಾಂಧಿಯವರು ದೇಶದ ಅರ್ಥಿಕತೆಗಾಗಿ ಪ್ರಧಾನಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದಂತಹ ಗಳಿಗೆಯಲ್ಲಿ ನಾವೆಲ್ಲ ಸೇರಿದ್ದೇವೆ. ಈ ಪವಿತ್ರ ಗಳಿಗೆಯಲ್ಲಿ ಜನಧ್ವನಿ ಯಾತ್ರೆ ಆರಂಭ ಮಾಡಿದ್ದೇವೆ ಎಂದು ತಿಳಿಸಿದರು.

  • ಎಸ್‍ಪಿ ಹೆಸರು ಹೇಳಿ ಪಿಎಸ್‍ಐಗೆ ಮಕ್ಮಲ್ ಟೋಪಿ ಹಾಕಿದವ ಅರೆಸ್ಟ್

    ಎಸ್‍ಪಿ ಹೆಸರು ಹೇಳಿ ಪಿಎಸ್‍ಐಗೆ ಮಕ್ಮಲ್ ಟೋಪಿ ಹಾಕಿದವ ಅರೆಸ್ಟ್

    ಕಲಬುರಗಿ: ಜಿಲ್ಲೆಯ ಎಸ್‍ಪಿ ಸಿಮಿ ಮರಿಯಮ್ ಜಾರ್ಜ್ ಹೆಸರಲ್ಲಿ ಪಿಎಸ್‍ಐ ಬಳಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

    ಜಿಲ್ಲೆಯ ಜೇವರ್ಗಿ ಪೊಲೀಸ್ ಠಾಣೆಯ ಪಿಎಸ್‍ಐ ಮಂಜುನಾಥ್ ಹೂಗಾರಗೆ ಜೇವರ್ಗಿ ತಾಲೂಕಿನ ಕೊಂಡಗುಳಿ ಗ್ರಾಮದ ಖಾಸಿಂ ಪಟೇಲ್ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದು, ನನಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ನಾಯಕರ ಎಲ್ಲರೊಂದಿಗೆ ಒಳ್ಳೆಯ ಒಡನಾಟವಿದೆ ಅಂತ ಪಿಎಸ್‍ಐಗೆ ವಂಚಕ ಹೇಳಿದ್ದಾನೆ. ವಂಚಕನ ಜಾಲಕ್ಕೆ ಬಿದ್ದ ಪಿಎಸ್‍ಐ ಹೂಗಾರ ನಿಜಕ್ಕೂ ಈತ ಒಳ್ಳೆಯ ಪ್ರೊಫೈಲ್ ವ್ಯಕ್ತಿ ಎಂದು ನಂಬಿ ಸ್ನೇಹ ಬೆಳೆಸಿಕೊಂಡಿದ್ದಾರೆ.

    ಇದನ್ನೇ ಎನ್‍ಕ್ಯಾಶ್ ಮಾಡಿಕೊಂಡ ವಂಚಕ ಖಾಸಿಂ, ಕೆಲ ದಿನಗಳ ನಂತರ ಕಾನೂನು ಸುವ್ಯವಸ್ಥೆಯಲ್ಲಿ ತೊಡಕು ಉಂಟಾದ್ರೆ ಎಸ್‍ಪಿ ಮೇಡಂಗೇ ಹೇಳಿ ಬಗೆಹರಿಸೋದಾಗಿ ನಂಬಿಸಿದ್ದಾನೆ. ಎಸ್‍ಪಿ ಸಿಮಿ ಮರಿಯಮ್ ಜಾರ್ಜ್ ಅವರ ಡಿಪಿಯನ್ನು ಇಟ್ಟು ಎಸ್‍ಪಿ ಮೇಡಂ ಅವರು ಕೆಲವೇ ಕೆಲವು ಜನರಿಗೆ ಅವರ ನಂಬರ್ ನೀಡಿದ್ದಾರೆ. ಅದರಲ್ಲಿ ನಾನು ಸಹ ಒಬ್ಬನಾಗಿದ್ದೆನೆ. ನಿಮ್ಮ ಬಳಿ ಸಹ ಈ ನಂಬರ್ ಇರಲಿ. ಆದರೆ ಯಾವುದೇ ಕಾರಣಕ್ಕು ಅವರಿಗೆ ಕಾಲ್ ಮಾಡಬೇಡಿ, ಏನೇ ಸಮಸ್ಯೆಯಾದ್ರೆ ಬರೀ ವಾಟ್ಸಪ್ ಅಂತ ಹೇಳಿದ್ದಾನೆ.

    ಕೆಲ ದಿನಗಳ ನಂತರ ಎಸ್‍ಎಂಜಿ ನಂಬರ್ ನಿಂದ ತುರ್ತಾಗಿ ಹಣ ಬೇಕಾಗಿದೆ ಅಂತ ಪಿಎಸ್‍ಐ ಕಡೆಯಿಂದ 2.5 ಲಕ್ಷ ಪಡೆದಿದ್ದಾನೆ. ನಂತರ ಕೆಲ ದಿನಗಳ ಬಳಿಕ ಮತ್ತೆ 6 ಲಕ್ಷ ಹಣ ಪಡೆದಿದ್ದಾನೆ.

    ಪಿಎಸ್‍ಐ ಹಣ ನೀಡಿದ್ದು ಯಾಕೆ..?
    ವಂಚಕ ಖಾಸೀಂ ತನ್ನ ಪರ್ಸನಲ್ ನಂಬರನ್ನೇ ಎಸ್‍ಪಿ ಅವರ ಮೊಬೈಲ್ ನಂಬರ್ ಅಂತ ನಂಬಿಸಿ ಬಿಟ್ಟಿದ್ದ. ಅದಾದ ಬಳಿಕ ನಮ್ಮ ತಂದೆಯವರಿಗೆ ಕೇರಳದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಹಣ ಬೇಕು ಅಂತ ವಾಟ್ಸಪ್ ಮೇಸೆಜ್ ಕಳುಹಿಸಿದ್ದಾನೆ. ಈ ವೇಳೆ ಮಂಜುನಾಥ ಹೂಗಾರ ಅವರು ಎಸ್‍ಪಿ ಅವರಿಗೆ ಹಣದ ಅವಶ್ಯಕತೆ ಇದೆ ಅಂತ ಮೊದಲಿಗೆ ತನ್ನ ಸ್ನೇಹಿತನಿಂದ ಎರಡೂವರೆ ಲಕ್ಷ ಸಾಲ ಪಡೆದಿದ್ದರು. ನಂತರ 6 ಲಕ್ಷ ಹಣ ಬೇಕು ಅಂತ ಎರಡನೇ ಬಾರಿ ವಾಟ್ಸಪ್ ಮೆಸೇಜ್ ಬಂದಾಗ ಪಿಎಸ್‍ಐ ಹೂಗಾರ ತನ್ನ ಸ್ಟೇಷನ್ ಬಜಾರ್ ವ್ಯಾಪ್ತಿಯ ಎಸ್‍ಬಿಐ ಬ್ಯಾಂಕಿನಲ್ಲಿಟ್ಟ ಫಿಕ್ಸ್ಡ್ ಡೆಪಾಸಿಟ್ ಹಣವನ್ನು ಕ್ಯಾನ್ಸಲ್ ಮಾಡಿಸಿ ಆರೋಪಿಗೆ ನೀಡಿದ್ದಾರೆ.

    ಪ್ರಕರಣ ಬೆಳಕಿಗೆ: ಎರಡು ದಿನದ ಹಿಂದೆ ಅದೇ ನಂಬರ್ ನಿಂದ ಪಿಎಸ್‍ಐಗೆ ಒಂದು ವಾಟ್ಸಪ್ ವಾಯ್ಸ್ ಕಾಲ್ ಬಂದಿದ್ದು, ವಾಯ್ಸ್ ಕಾಲ್ ನಲ್ಲಿ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಹೆಣ್ಣು ಮಕ್ಕಳು ಮಾತಾಡಿರುವ ಧ್ವನಿ ಕೇಳಿ ಅನುಮಾನ ಬಂದಿದೆ. ಈ ಹಿನ್ನೆಲೆ ಪಿಎಸ್‍ಐ ಅವರು ವಂಚಕ ಖಾಸಿಂ ಪಟೇಲ್ ಮೇಲೆ ಅನುಮಾನ ಬಂದು ಎಸ್‍ಪಿ ಅವರನ್ನು ಸಂಪರ್ಕಿಸಿದ್ದಾರೆ. ಅದು ನನ್ನ ನಂಬರ್ ಅಲ್ಲ ನಿಮಗೆ ಮೋಸ ಮಾಡಿದ್ದಾನೆ ಹೋಗಿ ಪ್ರಕರಣ ದಾಖಲಿಸಿ ಎಂದು ಎಸ್ಪಿ ಸೂಚನೆ ನೀಡಿದ್ದಾರೆ.

    ಹೀಗಾಗಿ ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ವಂಚಕನ ವಿರುದ್ಧ ಪಿಎಸ್‍ಐ ಮಂಜುನಾಥ್ ಹೂಗಾರ ದೂರು ಸಲ್ಲಿಸಿದ್ದಾರೆ. ಸದ್ಯ ಆರೋಪಿಯನ್ನು ಸ್ಟೇಷನ್ ಬಜಾರ್ ಪೊಲೀಸರು ಆರೋಪಿ ಖಾಸಿಂ ಪಟೇಲ್ ಬಂಧಿಸಿದ್ದು, ಬಂಧಿತನಿಂದ 2 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ.

  • ಕೋಸ್ಟ್ ಗಾರ್ಡ್ ಎಸ್‍ಪಿ ಹೆಸರಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್

    ಕೋಸ್ಟ್ ಗಾರ್ಡ್ ಎಸ್‍ಪಿ ಹೆಸರಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್

    ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು.

    ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು ನೀಡಿದ್ದಾರೆ.

    ನಕಲಿ ಅಕೌಂಟ್ ಕ್ರಿಯೆಟ್ ಮಾಡಿದ್ದು ಯಾರು?, ಇದರ ಹಿಂದಿನ ಉದ್ದೇಶ ಏನು? ಎಂಬ ಬಗ್ಗೆ ಪೊಲೀಸರು ಈಗಾಗಲೇ ತನಿಖೆಯನ್ನು ಶುರುಮಾಡಿದ್ದಾರೆ. ಎಸ್‍ಪಿ ಚೇತನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್ ಪಿ ಚೇತನ್ ಕುಮಾರ್, ಈ ಬಗ್ಗೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ಉಡುಪಿ ಜಿಲ್ಲಾ ವಿಭಾಗಕ್ಕೆ ದೂರು ನೀಡಿದ್ದೇವೆ. ಅಕೌಂಟ್ ಕ್ರಿಯೇಟ್ ಆಗಿ ಕೆಲವೇ ನಿಮಿಷಗಳಲ್ಲಿ ಬಗ್ಗೆ ಮಾಹಿತಿ ಗೊತ್ತಾಗಿದೆ. ಕೃತ್ಯದ ಹಿಂದಿನ ಉದ್ದೇಶವೇನು ಎಂಬುದು ತನಿಖೆಯಿಂದ ಗೊತ್ತಾಗಬೇಕಾಗಿದೆ ಎಂದರು.

  • ಕೊಡಗಿಗೆ ಅಗಮಿಸುವ ಪ್ರವಾಸಿಗರ ಮೇಲೆ ಪೊಲೀಸರ ಹದ್ದಿನ ಕಣ್ಣು

    ಕೊಡಗಿಗೆ ಅಗಮಿಸುವ ಪ್ರವಾಸಿಗರ ಮೇಲೆ ಪೊಲೀಸರ ಹದ್ದಿನ ಕಣ್ಣು

    ಮಡಿಕೇರಿ: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದ ಬೆನ್ನಲ್ಲೇ ಕೊಡಗು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರವಾಸೋದ್ಯಮಕ್ಕೆ ಫೇಮಸ್ ಆಗಿರುವ ಜಿಲ್ಲೆಯಲ್ಲಿ ಸಾವಿರಾರು ಹೋಂ ಸ್ಟೇ, ರೆಸಾರ್ಟ್‍ಗಳಿದ್ದು, ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಂದ ಬರುವ ಸಾವಿರಾರು ಪ್ರವಾಸಿಗರ ಮೇಲೆ ಕೊಡಗು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

    ಹೌದು ಬೆಂಗಳೂರಿನಲ್ಲಿ ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸದ್ದು ಮಾಡುತ್ತಿದ್ದಂತೆ ಕೊಡಗು ಎಸ್ ಪಿ ಕ್ಷಮಾ ಮಿಶ್ರಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಬೇಕು. ಬೀಟ್‍ಗಳಲ್ಲಿ ಎಚ್ಚರವಹಿಸಿ ಡ್ರಗ್ಸ್ ಮತ್ತು ಗಾಂಜಾ ಸಾಗಾಟಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.

    ಅಂತರ್ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್ ಗಳಲ್ಲಿ ಕೊಡಗಿನ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜಿಲ್ಲೆಗೆ ಬರುವ ಎಲ್ಲ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೂ ಸೂಚನೆ ನೀಡಿರುವ ಎಸ್‍ಪಿ ಹಗಲು ರಾತ್ರಿ ರೌಂಡ್ಸ್ ಹಾಕುತ್ತಿದ್ದಾರೆ. ಹೋಂ ಸ್ಟೇ ಮತ್ತು ರೆಸಾರ್ಟ್‍ಗಳ ಮಾಲೀಕರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

    ಒಂದು ವೇಳೆ ಇಂತಹ ಯಾವುದೇ ಅಕ್ರಮ ಚಟುವಟಿಕೆಗಳ ನಡೆದರೆ ಹೋಂ ಸ್ಟೇ ಮತ್ತು ರೆಸಾರ್ಟ್ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಸ್‍ಪಿ ಕ್ಷಮಾ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರವಾಸಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಎಲ್ಲೆಡೆ ಹದ್ದಿನ ಕಣ್ಣಿಟ್ಟು ಸರ್ಚ್ ಮಾಡುತ್ತಿರುವ ಪೊಲೀಸರು ಅಕ್ರಮ ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

  • ಮಂಡ್ಯದಲ್ಲಿ ಡ್ರಗ್ಸ್ ದಂಧೆ ಇಲ್ಲ, ಗಾಂಜಾ ಮಾರಾಟ ನಡೆದಿರೋದು ನಿಜ: ಎಸ್‍ಪಿ ಸ್ಪಷ್ಟನೆ

    ಮಂಡ್ಯದಲ್ಲಿ ಡ್ರಗ್ಸ್ ದಂಧೆ ಇಲ್ಲ, ಗಾಂಜಾ ಮಾರಾಟ ನಡೆದಿರೋದು ನಿಜ: ಎಸ್‍ಪಿ ಸ್ಪಷ್ಟನೆ

    ಮಂಡ್ಯ: ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಇಲ್ಲ. ಆದರೆ ಗಾಂಜಾ ಮಾರಾಟ ನಡೆದಿರುವುದು ನಿಜ ಎಂದು ಮಂಡ್ಯ ಎಸ್‍ಪಿ ಪರಶುರಾಮ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ:  ಪೊಲೀಸರ ಸಹಕಾರ ಇಲ್ಲದೆ ಡ್ರಗ್ಸ್ ದಂಧೆ ನಡೆಯೋದಿಲ್ಲ: ಡಿಸಿ ತಮ್ಮಣ್ಣ ಗಂಭೀರ ಆರೋಪ 

    ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‍ಪಿ, ಇದುವರೆಗೆ ಮಂಡ್ಯ ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟ ಕಂಡುಬಂದಿಲ್ಲ. ಆದರೆ ಗಾಂಜಾ ಮಾರಾಟ ಪ್ರಕರಣಗಳು ಸಿಕ್ಕಿವೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ಡ್ರಗ್ಸ್ ಸಿಗುತ್ತೇ ಎಂದು ಮಾಜಿ ಎಂಪಿ ಶಿವರಾಮೇಗೌಡ ಹಾಗೂ ಶಾಸಕ ಡಿ.ಸಿ.ತಮ್ಮಣ್ಣ ಆರೋಪಿಸಿದ್ದರು.

    ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 43 ಗಾಂಜಾ ಪ್ರಕರಣಗಳು ಪತ್ತೆಯಾಗಿವೆ. 5 ವರ್ಷದಲ್ಲಿ 145 ಕೆಜಿ ಗಾಂಜಾವನ್ನು ಸೀಜ್ ಮಾಡಿದ್ದೇವೆ. ಇದುವರೆಗೆ 64 ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದೇವೆ. ಇದರಲ್ಲಿ ಪೆಡ್ಲರ್, ಗ್ರಾಹಕರು ಮತ್ತು ಮಾರಾಟ ಮಾಡುವವರು ಇದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಹೆಚ್ಚು ಗಾಂಜಾ ಮಾರಾಟವಾಗುತ್ತಿತ್ತು. ಕಳೆದ ವರ್ಷ 7 ಪ್ರಕರಣಗಳ ದಾಖಲಾಗಿವೆ. ಒಂಭತ್ತು ಆರೋಪಿಗಳನ್ನು ಬಂಧಿಸಿದ್ದೇವೆ ಎಂದರು.

    ನಾಗಮಂಗಲಕ್ಕೆ ಆಂಧ್ರ ಪ್ರದೇಶದ ಲಿಂಕ್ ಇದೆ. ನಾಗಮಂಗಲಕ್ಕೆ ಆಂಧ್ರ ಪ್ರದೇಶದಿಂದ ಗಾಂಜಾ ಬರುತ್ತಿತ್ತು. ಆ ಲಿಂಕ್‍ನನ್ನು ಈಗ ಬ್ರೇಕ್ ಮಾಡಿದ್ದೇವೆ. ಮಂಡ್ಯ ಜಿಲ್ಲೆಗೆ ಮೈಸೂರು, ಬಳ್ಳಾರಿ ಹಾಗೂ ಆಂಧ್ರದ ಲಿಂಕ್ ಹೆಚ್ಚಿದೆ. ಇಲ್ಲಿಂದ ಹೆಚ್ಚು ಗಾಂಜಾ ಸಪ್ಲೈ ಆಗುತ್ತಿದೆ. ಗಾಂಜಾ ಮಾರಾಟ ಹಾಗೂ ಸೇವನೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಎಸ್‍ಪಿ ಪರಶುರಾಮ್ ಹೇಳಿದರು.

  • ಮೂರನೇ ಬಾರಿ ಬೇರೊಬ್ಬರ ಹೆಂಡ್ತಿ ಜೊತೆ ಕಾನ್‍ಸ್ಟೇಬಲ್ ಎಸ್ಕೇಪ್

    ಮೂರನೇ ಬಾರಿ ಬೇರೊಬ್ಬರ ಹೆಂಡ್ತಿ ಜೊತೆ ಕಾನ್‍ಸ್ಟೇಬಲ್ ಎಸ್ಕೇಪ್

    – ಮಂಡ್ಯದಲ್ಲಿ ವಿಚಿತ್ರ ಪ್ರಕರಣ
    – ಪೇದೆಯಿಂದ ನನ್ನ ಪತ್ನಿಯನ್ನ ದೂರ ಮಾಡಿ

    ಮಂಡ್ಯ/ಚಾಮರಾಜನಗರ: ಬೇರೊಬ್ಬರ ಪತ್ನಿಯ ಜೊತೆ ಪೊಲೀಸ್ ಕಾನ್‍ಸ್ಟೇಬಲ್ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

    ನಿಮ್ಮದೇ ಇಲಾಖೆಯ ಕಾನ್‍ಸ್ಟೇಬಲ್ ನನ್ನ ಪತ್ನಿಯನ್ನು ಅಪಹರಿಸಿದ್ದಾನೆ. ಆತನಿಂದಾಗಿ ನನ್ನ ಸಂಸಾರ ಬೀದಿಗೆ ಬಂದಿದೆ. ದಯಮಾಡಿ ನನಗೆ ನ್ಯಾಯ ಕೊಡಿಸಿ ಎಂದು ಚಾಮರಾಜನಗರ ಜಿಲ್ಲೆಯ ವ್ಯಕ್ತಿಯೊಬ್ಬ ಮಂಡ್ಯ ಎಸ್‍ಪಿಗೆ ದೂರು ನೀಡಿರುವ ವಿಚಿತ್ರ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?
    ಕೊಳ್ಳೇಗಾಲ ತಾಲೂಕಿನ ಮುಳ್ಳೂರು ನಿವಾಸಿ ನಾಗರಾಜಪ್ಪ ಕೊಳ್ಳೇಗಾಲ ಪಟ್ಟಣದಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಮಕ್ಕಳೊಂದಿಗೆ ವಾಸವಾಗಿದ್ದ. ಆದರೆ ಈತನ ಹೆಂಡತಿ ಜೊತೆ ಮಂಡ್ಯ ಹಲಗೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಹರೀಶ್ ಸಂಬಂಧ ಇಟ್ಟುಕೊಂಡಿದ್ದನು. ಹರೀಶ್ ಕೊಳ್ಳೇಗಾಲ ಮೂಲದವನಾಗಿದ್ದು, ಈ ಹಿಂದೆ ಕೊಳ್ಳೇಗಾಲದಲ್ಲಿ ಕೆಲಸ ಮಾಡುತ್ತಿದ್ದನು. ಹೀಗಾಗಿ ಇಬರಿಬ್ಬರು ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು.

    ಕಾನ್‍ಸ್ಟೇಬಲ್ ಮತ್ತು ನಾಗರಾಜಪ್ಪನ ಪತ್ನಿ ಈ ಹಿಂದೆ ಎರಡು ಬಾರಿ ಓಡಿ ಹೋಗಿದ್ದರು. ಆದರೂ ಅವರಿಬ್ಬರನ್ನು ಕರೆಸಿ ರಾಜಿ ಪಂಚಾಯಿತಿ ಮಾಡಿ ಮತ್ತೆ ಆಕೆಯನ್ನು ಪತಿಯೊಂದಿಗೆ ಕಳುಹಿಸಿದ್ದರು. ಇದೀಗ ಮೂರನೇ ಬಾರಿ ನಾಗರಾಜಪ್ಪನ ಪತ್ನಿಯನ್ನು ಕರೆದುಕೊಂಡು ಕಾನ್‍ಸ್ಟೇಬಲ್ ಪರಾರಿಯಾಗಿದ್ದಾನೆ. ಪತಿ ಎಲ್ಲ ಕಡೆ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ. ಹೀಗಾಗಿ ನಾಜರಾಜಪ್ಪ ಮಂಡ್ಯ ಎಸ್‍ಪಿಗೆ ದೂರು ನೀಡಿದ್ದಾರೆ.

    ಕಾನ್‍ಸ್ಟೇಬಲ್ ಹಲಗೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವುದರಿಂದ ನಾಗರಾಜಪ್ಪ ಮಂಡ್ಯ ಎಸ್‍ಪಿಗೆ ದೂರು ನೀಡಿದ್ದಾರೆ. ನಾನು ಸರ್ಕಾರಿ ಕೆಲಸದಲ್ಲಿ ಇದ್ದೇನೆ, ನನ್ನ ಜೊತೆ ಬಾ ಚೆನ್ನಾಗಿ ನೋಡಿಕೊಳ್ಳುವೆ ಎಂದು ನನ್ನ ಪತ್ನಿಯನ್ನು ಪುಸಲಾಯಿಸಿದ್ದಾನೆ. ಅಲ್ಲದೇ ನೀನು ನನ್ನ ಜೊತೆಗಿರುವ ವಿಡಿಯೋ ಮತ್ತು ಮಾತನಾಡಿರುವ ಸಂಭಾಷಣೆ ಇದೆ ಎಂದು ಬೆದರಿಸಿ ನನ್ನ ಪತ್ನಿಯನ್ನು ತನ್ನ ಜೊತೆ ಕರೆದುಕೊಂಡು ಹೋಗಿದ್ದಾನೆ ಎಂದು ನಾಗರಾಜಪ್ಪ ಆರೋಪಿಸಿದ್ದಾರೆ.

    ಅಲ್ಲದೇ ನನ್ನ ಪತ್ನಿಯನ್ನು ಮಕ್ಕಳಿಂದ ದೂರ ಮಾಡಿ ತನ್ನ ಜೊತೆ ಕರೆದುಕೊಂಡು ಹೋಗಿದ್ದಾನೆ. ಇದರಿಂದಾಗಿ ನನ್ನ ಕುಟುಂಬ ಇದೀಗ ಬೀದಿಗೆ ಬಿದ್ದಿದೆ. ಹಾಗಾಗಿ ನನ್ನ ಹೆಂಡತಿಯನ್ನು ಹುಡುಕಿಕೊಟ್ಟು, ಆ ಪೇದೆಯಿಂದ ನನ್ನ ಪತ್ನಿಯನ್ನು ದೂರ ಮಾಡಿ. ದಯವಿಟ್ಟು ನನಗೆ ನ್ಯಾಯ ಕೊಡಿಸಿ ಎಂದು ನಾಗರಾಜಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.