Tag: Spark Candle Factory

  • ಹುಬ್ಬಳ್ಳಿ ಕಾರ್ಖಾನೆ ಬ್ಲಾಸ್ಟ್: ಮಾಲೀಕ ಬಂಧನ

    ಹುಬ್ಬಳ್ಳಿ ಕಾರ್ಖಾನೆ ಬ್ಲಾಸ್ಟ್: ಮಾಲೀಕ ಬಂಧನ

    ಹುಬ್ಬಳ್ಳಿ: ನಗರದ ತಾರಿಹಾಳ ಕೈಗಾರಿಕಾ ವಲಯದಲ್ಲಿ ಬರ್ತ್‍ಡೆ ಸ್ಪಾರ್ಕ್ ತಯಾರಿಕಾ ಘಟಕ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ಫ್ಯಾಕ್ಟರಿಯ ಮಾಲೀಕ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾನೆ.

    ಅಬ್ದುಲ್ ಖಾದರ ಶೇಖ್‌ ಅಲಿಯಾಸ ಶಿರಟ್ಟಿ ಪೊಲೀಸರಿಗೆ ಶರಣಾಗಿರುವ ಫ್ಯಾಕ್ಟರಿ ಮಾಲೀಕ. ಯಾವುದೇ ಇಲಾಖೆ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಫ್ಯಾಕ್ಟರಿ ತೆರೆದು ನಾಲ್ಕು ಅಮಾಯಕ ಜೀವಗಳನ್ನು ಬಲಿ ಪಡೆದಿದ್ದ ಅಬ್ದುಲ್ ಖಾದರ್ ಘಟನೆ ನಡೆದ ದಿನದಿಂದ ತಲೆ ಮರೆಸಿಕೊಂಡಿದ್ದ.

    ಮಾಲೀಕ ಶೀಘ್ರವಾಗಿ ಬಂಧಿಸುವಂತೆ ಸಾರ್ವಜನಿಕ ಜೊತೆಗೆ ಶಾಸಕರ ಮತ್ತು ಸಚಿವ ಒತ್ತಡ ಪೊಲೀಸರಿಗಿತ್ತು. ಹೀಗಾಗಿ ತಲೆ ಮರೆಸಿಕೊಂಡಿದ್ದ ಅಬ್ದುಲ್‍ಗಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಮೂರು ತಂಡವಾಗಿ ಹುಡುಕಾಟ ನಡೆಸಿದ್ದರು. ಇದೀಗ ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಆ.4ರವರೆಗೆ ಇಡಿ ವಶಕ್ಕೆ ಸಂಜಯ್ ರಾವತ್

    ಈ ಬಗ್ಗೆ ಧಾರವಾಡ ಎಸ್‍ಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದು, ಕಳೆದ ವಾರ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ನಡೆದಿತ್ತು. ತನಿಖೆ ಮಾಡಿದಾಗ ಸುಮಾರು ಪರವಾನಿಗೆ ಇಲ್ಲದೇ ಕೆಮಿಕಲ್ಸ್ ಅಲ್ಲಿ ಇಡಲಾಗಿತ್ತು. ಕಾರ್ಮಿಕರ ಜೀವ ಹಾನಿ ಆಗುವಂತೆ ಕಾರ್ಖಾನೆ ನಡೆಸುತ್ತಿದ್ದರು. ಯಾವುದೇ ಸೆಫ್ಟಿ ಇರಲಿಲ್ಲ. ಇದರಿಂದಾಗಿ ಗಾಯಾಳುಗಳಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಖಾಸಗಿ ಬಸ್ – ಕಾರ್ ನಡುವೆ ಭೀಕರ ಅಪಘಾತ – ಓರ್ವ ಸಾವು, 6 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿ ಫ್ಯಾಕ್ಟರಿ ಸ್ಫೋಟ – 4 ದಿನ ಕಳೆದರೂ ಪತ್ತೆಯಾಗದ ಮಾಲೀಕ

    ಹುಬ್ಬಳ್ಳಿ ಫ್ಯಾಕ್ಟರಿ ಸ್ಫೋಟ – 4 ದಿನ ಕಳೆದರೂ ಪತ್ತೆಯಾಗದ ಮಾಲೀಕ

    ಹುಬ್ಬಳ್ಳಿ: ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಫ್ಯಾಕ್ಟರಿ ಸ್ಫೋಟಕ್ಕೆ ಸಂಬಂಧಿಸಿದಂತೆ ಇನ್ನೂ ಸಹ ಮಾಲೀಕ ಪತ್ತೆಯಾಗಿಲ್ಲ. ಯಾವುದೇ ಮುನ್ನೆಚ್ಚರಿಕೆ ಕ್ರಮಗಳಿಲ್ಲದೆ ಅನಧಿಕೃತವಾಗಿ ಫ್ಯಾಕ್ಟರಿ ಆರಂಭಿಸಿ 3 ಜೀವಗಳನ್ನು ಬಲಿಪಡೆದು, ಇದೀಗ ತಲೆ ಮರೆಸಿಕೊಂಡಿರುವ ಮಾಲೀಕ ಅಬ್ದುಲ್ಲ ಖಾದೀರ್ ಶೇಕ್‌ಗಾಗಿ ತೀವ್ರ ಹುಡುಕಾಟ ನಡೆದಿದೆ. ಈ ಕಾರ್ಯಾಚರಣೆಗೆ 3 ಪೊಲೀಸ್ ತಂಡಗಳು ರಚನೆಯಾಗಿವೆ. ಇದನ್ನೂ ಓದಿ: ಗೋಮಾಂಸ ಪ್ರಕರಣವನ್ನು ಪ್ರಸ್ತಾಪಿಸಿ ಸಿದ್ದುವನ್ನು ಸಿಂಹ ಎಂದು ಕೊಂಡಾಡಿದ ಜಮೀರ್

    ಮೃತ ವಿಜಯಲಕ್ಷ್ಮಿ ಪತಿ ವೀರಭದ್ರ ದೂರಿನ ಆಧಾರದ ಮೇಲೆ ಐಪಿಸಿ 286, 337, 338, 304, ಎಕ್ಸ್‌ಪ್ಲೋಸಿವ್ ಆ್ಯಕ್ಟ್ 1908 ಅಡಿ ಕೇಸ್ ದಾಖಲಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಫ್ಯಾಕ್ಟರಿ ಮ್ಯಾನೇಜರ್ ಮಂಜುನಾಥ್‌ನನ್ನು ಈಗಾಗಲೇ ಬಂಧನ ಮಾಡಿದ್ದಾರೆ. ತಲೆ ಮರೆಸಿಕೊಂಡಿರುವ ಮಾಲೀಕ ಅಬ್ದುಲ್ಲ ಖಾದೀರ್ ಶೇಕ್‌ಗಾಗಿ ತೀವ್ರ ಹುಡುಕಾಟ ನಡೆದಿದ್ದು, ಈ ಕಾರ್ಯಾಚರಣೆಗೆ 3 ಪೊಲೀಸ್ ತಂಡಗಳು ರಚನೆಯಾಗಿವೆ. ಇದನ್ನೂ ಓದಿ: ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

    ಘಟನೆ ನಡೆದು 4 ದಿನಗಳಾದರೂ ಪ್ರಕರಣದ ಪ್ರಮುಖ ಆರೋಪಿ ಮಾಲೀಕ ಅಬ್ದುಲ್ಲ ಖಾದೀರ್ ಶೇಕ್ ಇನ್ನೂ ಬಂಧನವಾಗಿಲ್ಲ. ಹೀಗಾಗಿ ಮೃತರ ಕುಟುಂಬಸ್ಥರು, ಗಾಯಾಳುಗಳ ಕುಟುಂಬಸ್ಥರು ಸೇರಿ ಫ್ಯಾಕ್ಟರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]