Tag: speaker Om birla

  • ಸಂಸದರ ಪರಿಹಾರ ನಿಧಿಯಿಂದ ಒಂದು ಕೋಟಿ ರೂ. ನೀಡಿ: ಸ್ಪೀಕರ್ ಓಂ ಬಿರ್ಲಾ

    ಸಂಸದರ ಪರಿಹಾರ ನಿಧಿಯಿಂದ ಒಂದು ಕೋಟಿ ರೂ. ನೀಡಿ: ಸ್ಪೀಕರ್ ಓಂ ಬಿರ್ಲಾ

    ನವದೆಹಲಿ: ಪ್ರಪಂಚಾದ್ಯಂತ ಕೊರೊನಾ ಮಹಾಮಾರಿ ತಾಂಡವವಾಡುತ್ತಿದ್ದು, ದೇಶದಲ್ಲಿಯೂ ಸೋಂಕಿತರ ಸಂಖ್ಯೆ 933 ಕ್ಕೂ ಅಧಿಕವಾಗಿದೆ. ಹೀಗಾಗಿ ಎಲ್ಲ ನಟರು ಹಾಗೂ ಧನಿಕರು ಸಹಾಯ ಹಸ್ತ ಚಾಚುತ್ತಿದ್ದಾರೆ. ಇದರ ನಿಯಂತ್ರಣ ಅಗತ್ಯವಾಗಿದ್ದು, ಹೀಗಾಗಿ ಎಲ್ಲ ಸಂಸದರು ತಮ್ಮ ಪರಿಹಾರ ನಿಧಿಯಿಂದ ಕನಿಷ್ಟ ಒಂದು ಕೋಟಿ ರೂ.ಗಳನ್ನು ನೀಡುವಂತೆ ತಿಳಿಸಿದ್ದಾರೆ.

    ಕೆಲ ಸಂಸದರು ಈಗಾಗಲೇ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಹಣ ನೀಡುತ್ತಿದ್ದಾರೆ. ಇನ್ನೂ ಕೆಲವರು ಬಿಡುಗಡೆ ಮಾಡಿಲ್ಲ. ಹೀಗಾಗಿ ಎಲ್ಲ ಸಂಸದರು ಕನಿಷ್ಟ ಒಂದು ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಸೂಚಿಸಿದ್ದಾರೆ.

    ಇಡೀ ದೇಶವನ್ನು ಲಾಕ್‍ಡೌನ್ ಮಾಡಿ ನಾಲ್ಕು ದಿನಗಳು ಮಾತ್ರ ಆಗಿದ್ದು, ಸೋಂಕಿತರ ಸಂಖ್ಯೆ ಆಗಲೇ ಸಾವಿರಕ್ಕೆ ತಲುಪುತ್ತಿದೆ. ಒಟ್ಟು 922 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 76 ಜನ ಗುಣಮುಖರಾಗಿ ಡಿಸ್‍ಚಾರ್ಜ್ ಆಗಿದ್ದಾರೆ. ಪ್ರಸ್ತುತ 830 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ವಿಶ್ವಾದ್ಯಂತ 28,791 ಜನ ಸಾವನ್ನಪ್ಪಿದ್ದು, 6.21 ಲಕ್ಷ ಜನರಿಗೆ ಸೋಂಕು ತಗುಲಿದೆ. ಅಮೇರಿಕದಲ್ಲೇ ಹೆಚ್ಚು ಸೋಂಕಿತ ಪ್ರಕರಣಗಳಿದ್ದು, ಇಟಲಿ ಮೂರನೇ ಸ್ಥಾನದಲ್ಲಿದೆ. ಇದರ ಮಧ್ಯೆಯೇ ಇಂಗ್ಲೆಂಡ್‍ನಲ್ಲಿ ಒಟ್ಟು 1 ಸಾವಿರ ಜನ ಮೃತಪಟ್ಟಿದ್ದಾರೆ. ಯೂರೋಪ್‍ನಲ್ಲಿ 20 ಸಾವಿರ ಜನ ಸಾವನ್ನಪ್ಪಿದ್ದಾರೆ.

    ಇದೆಲ್ಲದರ ಮಧ್ಯೆ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿನ 356 ಜನ ಖೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ. ಸುಮಾರು 45 ದಿನಗಳ ಕಾಲ ಖೈದಿಗಳು ಹೊರಗಡೆಯೇ ಇರಲಿದ್ದಾರೆ. ಜೈಲಿನಲ್ಲಿ ಜನದಟ್ಟಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

  • ಕೇಂದ್ರ ಮಂತ್ರಿಗೆ ಕ್ಲಾಸ್ – ಗೈರಾದ ಸಂಸದರಿಗೂ ಬಿಸಿ ಮುಟ್ಟಿಸಿದ ಸ್ಪೀಕರ್

    ಕೇಂದ್ರ ಮಂತ್ರಿಗೆ ಕ್ಲಾಸ್ – ಗೈರಾದ ಸಂಸದರಿಗೂ ಬಿಸಿ ಮುಟ್ಟಿಸಿದ ಸ್ಪೀಕರ್

    ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೇಂದ್ರ ಸಚಿವರನ್ನು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ.

    ಪ್ರಶ್ನೋತ್ತರ ಅವಧಿಯಲ್ಲಿ ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ರೌಸಾಹೇಬ್ ಪಾಟೀಲ್ ದಾನ್ವೆ ಅವರಿಗೆ ಸ್ಪೀಕರ್ ಕ್ಲಾಸ್ ತೆಗೆದುಕೊಂಡಿದ್ದು, ಸದನದಲ್ಲಿ ಚರ್ಚೆಯಾಗುತ್ತಿರುವ ವಿಷಯಗಳ ಬಗ್ಗೆ ಗಮನಹರಿಸಿ ಎಂದು ಗರಂ ಆಗಿ ಪ್ರತಿಕ್ರಿಯಿಸಿದರು.

    ಶಿವಸೇನೆಯ ಸಂಸದ ಹೇಮಂತ್ ತುಕಾರಾಮ್ ಗೋಡ್ಸೆ ಅವರು ಹೆಚ್ಚುವರಿ ಪ್ರಶ್ನೆ ಕೇಳುವ ವೇಳೆ ದಾನ್ವೆ ಅವರು ಇನ್ನೊಂದು ಬಾರಿ ಕೇಳಿ ಎಂದು ಹೇಳಿದ್ದಾರೆ. ಆಗ ಕೋಪಗೊಂಡ ಓಂ ಬಿರ್ಲಾ ಅವರು, ಸನ್ಮಾನ್ಯ ಸಚಿವರೇ ಪ್ರಶ್ನೆಗಳ ಬಗ್ಗೆ ಗಮನಹರಿಸಿ, ಸರಿಯಾಗಿ ಕೇಳಿ ಎಂದು ಖಾರವಾಗಿ ಹೇಳಿದರು.

    ನಂತರ ಗೋಡ್ಸೆಯವರು ಮತ್ತೊಂದು ಪ್ರಶ್ನೆಯನ್ನು ಕೇಳಿದ್ದು, ಆಗ ದಾನ್ವೆಯವರ ಸಾಲಿನಲ್ಲೇ ಕುಳಿತಿದ್ದ ಕೇಂದ್ರ ನಾಗರಿಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಎದ್ದು ನಿಂತು ಪ್ರಶ್ನೆಗೆ ಉತ್ತರಿಸಿದರು. ಅಲ್ಲದೆ ಗೋಡ್ಸೆಯವರು ಕೇಳಿದ ಹೆಚ್ಚುವರಿ ಪ್ರಶ್ನೆಗಳಿಗೂ ಪಾಸ್ವಾನ್ ಅವರೇ ಉತ್ತರಿಸಿದರು.

    ನೀವು ಕುಳಿತುಕೊಂಡೇ ಉತ್ತರಿಸಿ, ಸದನವು ನಿಮಗೆ ಅನುಮತಿ ನೀಡುತ್ತದೆ. ನಿಮ್ಮ ಕಾಲು ಮುರಿದಿದೆ. ಕುಳಿತುಕೊಂಡೆ ಉತ್ತರ ನೀಡಿ ಎಂದು ಪಾಸ್ವಾನ್ ಅವರಿಗೆ ಸೂಚಿಸಿದರು.

    ಹಲವು ಸಂಸದರು ಗೈರಾಗಿದ್ದಕ್ಕೆ ಸ್ಪೀಕರ್ ಮೊದಲೇ ಕೆಂಡಾಮಂಡಲವಾಗಿದ್ದರು. ಪ್ರಶ್ನೋತ್ತರ ಅವಧಿಯಲ್ಲೇ ಸಂಸದರು ಇಲ್ಲದ್ದನ್ನು ಕಂಡು ಬೇಸರ ವ್ಯಕ್ತಪಡಿಸಿದ್ದರು. ಹೆಸರು ನೋಂದಾಯಿಸಿಕೊಂಡವರು ಯಾರು ಸದನಕ್ಕೆ ಹಾಜರಾಗಿಲ್ಲವೋ ಅವರು ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಯಾವುದೇ ಪ್ರಶ್ನೆ ಕೇಳುವಂತಿಲ್ಲ ಎಂದು ಖಡಕ್ ಆಗಿ ಹೇಳಿ ಬಿಸಿ ಮುಟ್ಟಿಸಿದ್ದಾರೆ.

  • ಡೋಂಟ್ ಟಚ್ ಮೈ ಸ್ಟಾಫ್: ವಿರೋಧ ಪಕ್ಷದ ಸದಸ್ಯರಿಗೆ ಸ್ಪೀಕರ್ ಓಂ ಬಿರ್ಲಾ ಎಚ್ಚರಿಕೆ

    ಡೋಂಟ್ ಟಚ್ ಮೈ ಸ್ಟಾಫ್: ವಿರೋಧ ಪಕ್ಷದ ಸದಸ್ಯರಿಗೆ ಸ್ಪೀಕರ್ ಓಂ ಬಿರ್ಲಾ ಎಚ್ಚರಿಕೆ

    ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸದಸ್ಯರಿಗೆ ಡೋಂಟ್ ಟಚ್ ಮೈ ಸ್ಟಾಫ್ ಎಂದು ಗುಡುಗಿದ ಪ್ರಸಂಗ ಶುಕ್ರವಾರ ಅಧಿವೇಶನದಲ್ಲಿ ನಡೆದಿದೆ.

    ಪ್ರಶ್ನೋತ್ತರ ವೇಳೆ ಕಾಂಗ್ರೆಸ್, ಡಿಎಂಕೆ, ಟಿಎಂಸಿ ನಾಯಕರುಗಳು ಕರ್ನಾಟಕದ ರಾಜಕೀಯ ಬಿಕ್ಕಟ್ಟಿನ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಸದನದ ಬಾವಿಗೆ ಇಳಿದು ಪ್ರತಿಭಟನೆ ಆರಂಭಿಸಿದರು. ಇದಕ್ಕೆ ಆಸ್ಪದ ನೀಡದ ಓಂ ಬಿರ್ಲಾ ಅವರು, ನಿಮ್ಮ ಸ್ಥಾನಗಳಿಗೆ ಹೋಗಿ ಕುಳಿತುಕೊಳ್ಳಿ ಎಂದು ಪ್ರತಿಭಟನಾನಿರತ ಸದಸ್ಯರಿಗೆ ಸೂಚನೆ ನೀಡಿದರು. ಆದರೆ ಪ್ರತಿಪಕ್ಷದ ಸದಸ್ಯರು ನಮಗೆ ನ್ಯಾಯ ಬೇಕು, ತಾನ್ ಶಾಹಿ ನಹಿ ಚಲೇಗಿ ಎಂದು ಘೋಷಣೆ ಕೂಗಲು ಆರಂಭಿಸಿದರು.

    ಪ್ರತಿಪಕ್ಷದ ಸದಸ್ಯರ ಘೋಷಣೆ ಜೋರಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಸ್ಪೀಕರ್, ಸದನದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಎತ್ತಬೇಡಿ. ಇದು ಕರ್ನಾಟಕಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಅದರಲ್ಲೂ ಪ್ರಮುಖವಾಗಿ ಸಂವಿಧಾನಿಕ ಹುದ್ದೆಗೆ ಸಂಬಂಧಪಟ್ಟದ್ದಾಗಿದೆ ಎಂದು ಹೇಳಿದರು.

    ಪ್ರತಿಪಕ್ಷ ನಾಯಕರ ಪ್ರತಿಭಟನೆ ಮಾತ್ರ ಮುಂದುವರಿದಿತ್ತು. ಸ್ವಲ್ಪ ಸಮಯದ ನಂತರ ಸ್ಪೀಕರ್ ಓಂ ಬಿರ್ಲಾ ಅವರು, ಪ್ರಶ್ನೋತ್ತರ ಅವಧಿಯ ಚರ್ಚೆ ನಡೆಸಲು ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಿದರು.

    ಬಳಿಕ ಮಾತನಾಡಿದ ಓಂ ಬಿರ್ಲಾ ಅವರು, ಕರ್ನಾಟಕ ರಾಜಕೀಯ ಬೆಳವಣಿಗೆ ವಿಚಾರವಾಗಿ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಚರ್ಚೆ ಮಾಡಲು ಈ ಹಿಂದಿನ ಎರಡು ಬಾರಿ ಅವಕಾಶ ನೀಡಿದ್ದೆ ಎಂದು ಪ್ರಸ್ತಾಪಿಸಿದರು. ಇದರಿಂದಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ಸದಸ್ಯರು ತಮ್ಮ ಆಸನದ ಕಡೆಗೆ ಮರಳಿದರು.