Tag: special Assembly session

  • ಯುಎಇಯಿಂದ ಕೇರಳ ಸಂತ್ರಸ್ತರಿಗೆ 700 ಕೋಟಿ ರೂ. ಆರ್ಥಿಕ ನೆರವು

    ಯುಎಇಯಿಂದ ಕೇರಳ ಸಂತ್ರಸ್ತರಿಗೆ 700 ಕೋಟಿ ರೂ. ಆರ್ಥಿಕ ನೆರವು

    ತಿರುವನಂತಪುರಂ: ಮಹಾಮಳೆಗೆ ಮನೆಗಳನ್ನು ಕಳೆದುಕೊಂಡ ಜನರಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಯುನೈಟೆಡ್ ಎಮಿರೇಟ್ಸ್ (ಯುಎಇ) 700 ಕೋಟಿ ರೂ. ಆರ್ಥಿಕ ನೆರವು ನೀಡಲು ಮುಂದಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ವಿಜಯನ್, ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಹಾಗೂ ಪುನರ್ ನಿರ್ಮಾಣ ಕುರಿತಾಗಿ ಚರ್ಚೆ ನಡೆಸಲು, ಆಗಸ್ಟ್ 30ರಂದು ವಿಶೇಷ ಕಲಾಪ ಕರೆಯಲಾಗುತ್ತಿದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ಪ್ರವಾಹಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ, 500 ಕೋಟಿ ರೂ. ಪರಿಹಾರ ಹಾಗೂ ರಕ್ಷಣಾ ಕಾರ್ಯಚರಣೆಗೆ ಸಹಕಾರ ನೀಡುವುದಾಗಿ ಘೋಷಿಸಿದ್ದರು. ಇದಕ್ಕೆ ಮತ್ತೆ 100 ಕೋಟಿ ರೂ. ಸೇರಿಸಿ ಪರಿಹಾರ ನೀಡುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ ಎಂದು ವಿಜಯನ್ ವಿವರಿಸಿದರು.

    ಮಹಾಮಳೆಯ ಪ್ರವಾಹಕ್ಕೆ ರಾಜ್ಯದಲ್ಲಿ 223 ಜನರು ಮೃತಪಟ್ಟಿದ್ದಾರೆ. ಜೊತೆಗೆ 10 ಲಕ್ಷ ಜನರನ್ನು ರಕ್ಷಿಸಿ 3,200 ನಿರಾಶ್ರಿತ ಕೇಂದ್ರಗಳಲ್ಲಿ ಇರಿಸಲಾಗಿದೆ. ಭಾರೀ ಪ್ರಮಾಣದ ಅನಾಹುತದಿಂದ ಒಟ್ಟು 20 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಪ್ರಾಥಮಿಕ ವರದಿ ಮೂಲಕ ತಿಳಿದು ಬಂದಿದೆ ಎಂದು ಸಿಎಂ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv