Tag: Special Train

  • ದೀಪಾವಳಿ ಗುಡ್‌ ನ್ಯೂಸ್;‌ ಹುಬ್ಬಳ್ಳಿಯಿಂದ ಮೈಸೂರು, ಬೆಂಗಳೂರು, ಜೈಪುರ, ಗೋವಾಕ್ಕೆ ವಿಶೇಷ ರೈಲು

    ದೀಪಾವಳಿ ಗುಡ್‌ ನ್ಯೂಸ್;‌ ಹುಬ್ಬಳ್ಳಿಯಿಂದ ಮೈಸೂರು, ಬೆಂಗಳೂರು, ಜೈಪುರ, ಗೋವಾಕ್ಕೆ ವಿಶೇಷ ರೈಲು

    ಹುಬ್ಬಳ್ಳಿ: ದೀಪಾವಳಿ (Deepavali) ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈರುತ್ಯ ರೈಲ್ವೆ ಮಂಡಳಿ ಮೈಸೂರು ಮತ್ತು ಜೈಪುರ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್‌ಗಳಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ. ಬೆಂಗಳೂರು-ವಾಸ್ಕೊ-ಡ-ಗಾಮ ನಡುವೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

    ಟ್ರೈನ್ ವಿವರಗಳು ಈ ಕೆಳಗಿನಂತಿವೆ:
    ರೈಲು ಸಂಖ್ಯೆ 06231 ಮೈಸೂರು–ಜೈಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಅ.18 ಮತ್ತು 25 ರಂದು ಮೈಸೂರಿನಿಂದ ರಾತ್ರಿ 11:55 ಗಂಟೆಗೆ ಹೊರಡಲಿದೆ. ಸೋಮವಾರ ಸಂಜೆ 6:40 ಗಂಟೆಗೆ ಜೈಪುರವನ್ನು ತಲುಪಲಿದೆ. ಮತ್ತೆ ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06232 ಜೈಪುರ–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಅ.21 ಮತ್ತು 28 ರಂದು ಜೈಪುರದಿಂದ ಮುಂಜಾನೆ 4 ಗಂಟೆಗೆ ಹೊರಟು, ಗುರುವಾರ ಮುಂಜಾನೆ 3:30ಕ್ಕೆ ಮೈಸೂರಿಗೆ ಆಗಮಿಸಲಿದೆ. ಇದನ್ನೂ ಓದಿ: ಲೋಕ ಕಲ್ಯಾಣಕ್ಕಾಗಿಯೇ ಜನ್ಮ ತಾಳಿದ ಮಹಾನದಿ ಈ‌ ಕಾವೇರಿ – ಪುರಾಣ ಪುಣ್ಯಕಥೆ ನಿಮಗೆ ಗೊತ್ತೆ?

    ಈ ವಿಶೇಷ ರೈಲು ಮಾರ್ಗಮಧ್ಯೆ ಮಂಡ್ಯ, ಕೆಎಸ್‌ಆರ್ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ದಾವಣಗೆರೆ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಸತಾರಾ, ಪುಣೆ, ಕಲ್ಯಾಣ್, ವಸಾಯಿ ರೋಡ್, ಪಾಲ್ಘರ್, ವಾಪಿ, ವಲ್ಸಾದ, ಸೂರತ್, ವಡೋದರಾ, ಅಹಮದಾಬಾದ್, ಸಾಬರಮತಿ ಬಿಜಿ, ಮಹೆಸನಾ, ಪಾಲನ್‌ಪುರ, ಅಬು ರೋಡ್, ಫಲ್ನಾ, ರಾಣಿ, ಮಾರ್ವಾರ್, ಸೋಜತ್ ರೋಡ್, ಬೇವರ್, ಅಜ್ಮೀರ್, ಮತ್ತು ಕಿಶನ್‌ಗಢ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

    ಜೈಪುರದ ಕಡೆಗೆ ಹೋಗುವ ರೈಲು ಸಂಖ್ಯೆ 06231 ತನ್ನ ಪ್ರಯಾಣದಲ್ಲಿ ಸಾಬರಮತಿ ಬಿಜಿ ನಿಲುಗಡೆಯನ್ನು ಬಿಟ್ಟುಬಿಡುತ್ತದೆ. ಮತ್ತು ಮೈಸೂರಿನ ಕಡೆಗೆ ಹಿಂದಿರುಗುವ ಪ್ರಯಾಣದಲ್ಲಿ ರೈಲು ಸಂಖ್ಯೆ 06232 ಅಹಮದಾಬಾದ್ ನಿಲುಗಡೆ ಇರುವುದಿಲ್ಲ.

    ಈ ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 2 ಎಸಿ ಟು-ಟೈರ್, 12 ಎಸಿ ತ್ರಿ-ಟೈರ್, 2 ಸ್ಲೀಪರ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಇರಲಿವೆ.

    ಬೆಂಗಳೂರು-ವಾಸ್ಕೊ-ಡ-ಗಾಮ ನಡುವೆ ವಿಶೇಷ ರೈಲುಗಳು
    ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು– ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಇದನ್ನೂ ಓದಿ: ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್‌ ಪತ್ರ

    ರೈಲು ಸಂಖ್ಯೆ 07317/07318 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್‌ಪ್ರೆಸ್‌ ವಿಶೇಷ (ಒಂದು ಟ್ರಿಪ್):
    ರೈಲು ಸಂಖ್ಯೆ 07317 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ ವಿಶೇಷ ಎಕ್ಸ್‌ಪ್ರೆಸ್‌ ರೈಲು ಅ.17ರ ರಾತ್ರಿ 11:25ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2:55ಕ್ಕೆ ವಾಸ್ಕೊ-ಡ-ಗಾಮ ತಲುಪಲಿದೆ. ಮರಳಿ ಪ್ರಯಾಣದಲ್ಲಿ, ರೈಲು ಸಂಖ್ಯೆ 07318 ವಾಸ್ಕೊ-ಡ-ಗಾಮ – ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಅ.18 ರಂದು ಸಂಜೆ 5 ಕ್ಕೆ ವಾಸ್ಕೊ-ಡ-ಗಾಮದಿಂದ ಹೊರಟು, ಮರುದಿನ ಬೆಳಗ್ಗೆ 8:30ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ಗೆ ತಲುಪಲಿದೆ.

    ರೈಲು ಸಂಖ್ಯೆ 07317 ಮಾರ್ಗ ಮಧ್ಯೆ ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸ್ಯಾನ್‌ವೊರ್ಡೆಮ್ ಮತ್ತು ಮಡಗಾಂವ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಅದೇ ರೀತಿ, ರೈಲು ಸಂಖ್ಯೆ 07318 ಸಹ ಬೆಂಗಳೂರು ಕಂಟೋನ್ಮೆಂಟ್‌ನತ್ತ ಹಿಮ್ಮುಖ ದಿಕ್ಕಿನಲ್ಲಿ ಇದೇ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ರೈಲು ಒಟ್ಟು 22 ಬೋಗಿಗಳ ಸಂಯೋಜನೆಯನ್ನು ಹೊಂದಿದ್ದು, ಅದರಲ್ಲಿ 13 ಎಸಿ 3-ಟೈರ್, 7 ಸ್ಲೀಪರ್ ದರ್ಜೆ ಮತ್ತು 2 ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಇರಲಿವೆ.

  • ದೀಪಾವಳಿ | ನೈಋತ್ಯ ರೈಲ್ವೆಯಿಂದ ವಿಶೇಷ ರೈಲು – ಇಲ್ಲಿದೆ ಸಂಪೂರ್ಣ ಮಾಹಿತಿ

    ದೀಪಾವಳಿ | ನೈಋತ್ಯ ರೈಲ್ವೆಯಿಂದ ವಿಶೇಷ ರೈಲು – ಇಲ್ಲಿದೆ ಸಂಪೂರ್ಣ ಮಾಹಿತಿ

    ಬೆಂಗಳೂರು: ದೀಪಾವಳಿ ಹಬ್ಬದ (Deepawali) ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯಿಂದ (South Western Railway) ವಿಶೇಷ ರೈಲುಗಳು ಸಂಚರಿಸಲಿವೆ.

    ವಿಶೇಷ ರೈಲುಗಳು ಹುಬ್ಬಳ್ಳಿ, ಮಂಗಳೂರು ಹಾಗೂ ಬೆಂಗಳೂರು ನಡುವೆ ಸಂಚರಿಸಲಿದ್ದು, ಜನರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದೆ. ರೈಲುಗಳ ಸಮಯ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.ಇದನ್ನೂ ಓದಿ: ದೀಪಾವಳಿಗೆ ಬೆಂಗಳೂರಿನಿಂದ ಹೆಚ್ಚುವರಿ KSRTC ಬಸ್ – ನಿಮ್ಮ ಊರಿಗೂ ಇದ್ಯಾ ಪರಿಶೀಲಿಸಿ

    1. ರೈಲು ಸಂಖ್ಯೆ 07353/07354: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

    ರೈಲು ಸಂಖ್ಯೆ 07353: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.17ರಂದು 4:00ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅ.18ರಂದು ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

    ರೈಲು ಸಂಖ್ಯೆ 07354: ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.18ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

    2. ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

    ರೈಲು ಸಂಖ್ಯೆ 06229: ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಇದೇ ಅ.19ರಂದು ರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

    ರೈಲು ಸಂಖ್ಯೆ 06230: ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.19ರಂದು 2:35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಸ್ರೇಸನ್ ಲೈಸೆನ್ಸ್ ರದ್ದು, ಕಂಪನಿ ಬಂದ್

    ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ. 01 ಫಸ್ಟ್ ಕಮ್ ಸೆಕೆಂಡ್ ಎಸಿ, 01 ಎಸಿ 2-ಟೈರ್, 02 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.

    3. ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

    ರೈಲು ಸಂಖ್ಯೆ 06507: ಬೆಳಗಾವಿ -ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.18ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 07:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

    ರೈಲು ಸಂಖ್ಯೆ 06508: ಅ.18ರಂದು ರಾತ್ರಿ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅ.19ರಂದು ಬೆಳಗ್ಗೆ 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

    ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ. ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ. 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.ಇದನ್ನೂ ಓದಿ: ಕುಟುಂಬಕ್ಕಾಗಿ ಬೆಂಗಳೂರಿನ ಕಾರ್ಪೊರೇಟ್ ಕೆಲಸಕ್ಕೆ ಗುಡ್‌ಬೈ – ಈಗ ಉಬರ್ ಚಾಲಕ, ಹೆಚ್ಚು ಸಂಪಾದನೆ

  • ದಸರಾ | ಬೆಂಗಳೂರು, ಬೆಳಗಾವಿ, ಮೈಸೂರಿಗೆ ವಿಶೇಷ ರೈಲು

    ದಸರಾ | ಬೆಂಗಳೂರು, ಬೆಳಗಾವಿ, ಮೈಸೂರಿಗೆ ವಿಶೇಷ ರೈಲು

    ಬೆಂಗಳೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ದಸರಾ ಹಬ್ಬ ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ.

    ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.ಇದನ್ನೂ ಓದಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ

    1. ರೈಲು ಸಂಖ್ಯೆ 06271/06272: ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು:

    • ರೈಲು ಸಂಖ್ಯೆ 06271 2025ರ ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
    • ರೈಲು ಸಂಖ್ಯೆ 06272  2025ರ ಅಕ್ಟೋಬರ್ 1 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್‌ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

    2. ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು:

    • ರೈಲು ಸಂಖ್ಯೆ 06273 2025ರ ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
    • ರೈಲು ಸಂಖ್ಯೆ 06274 2025ರ ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

    3. ರೈಲು ಸಂಖ್ಯೆ 06275/06276 ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು:

    • ರೈಲು ಸಂಖ್ಯೆ 06275 2025ರ ಅಕ್ಟೋಬರ್ 4 ರಂದು ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
    • ರೈಲು ಸಂಖ್ಯೆ 06276 2025ರ ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿಟಿಗೆ ತಲುಪಲಿದೆ.

    ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

    ಮೇಲೆ ತಿಳಿಸಿದ ಎಲ್ಲಾ ರೈಲುಗಳು (06271/06272, 06273/06274 ಮತ್ತು 06275/06276) ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌/ಡಿ ಬೋಗಿಗಳು ಇರಲಿವೆ.

    ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು, ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ

     

  • ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಮತ್ತೊಂದು ವಿಶೇಷ ರೈಲು

    ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಮತ್ತೊಂದು ವಿಶೇಷ ರೈಲು

    ಶಿವಮೊಗ್ಗ: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ (Tamil Nadu) ತಿರುನೆಲ್ವೇಲಿ (Tirunelveli) – ಶಿವಮೊಗ್ಗ (Shivamogga) ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು (Special Train) ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವಿಶೇಷ ರೈಲಿನ ವೇಳಾಪಟ್ಟಿ
    ಆಗಸ್ಟ್‌ 17ರಂದು ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆ (ರೈಲು ಸಂಖ್ಯೆ 06103) ಒಂದು ಟ್ರಿಪ್‌ ರೈಲು ಸಂಚರಿಸಲಿದೆ. ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ. ‌ ಇದನ್ನೂ ಓದಿ: ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

    ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ ಸೋಮವಾರ ಮಧ್ಯಾಹ್ನ 2:20ಕ್ಕೆ ಹೊರಡಲಿದೆ. ಮಂಗಳವಾರ ಬೆಳಗ್ಗೆ 10:45ಕ್ಕೆ ತಿರುನಲ್ವೆಲಿಗೆ ತಲುಪಲಿದೆ. ಈ ರೈಲು ಭದ್ರಾವತಿ, ಅರಸಿಕೆರೆ ಬೆಂಗಳೂರು ಮಾರ್ಗವಾಗಿ ತಮಿಳುನಾಡಿನ ತಿರುನಲ್ವೆಲಿ ತಲುಪಲಿದೆ.

    ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿದ್ದು, ಈ ಪೈಕಿ 2 ಟೈರ್‌ ಎಸಿ ಕೋಚ್‌ – 1, 3 ಟೈರ್‌ ಎಸಿ ಕೋಚ್‌ – 1, 3 ಟೈರ್‌ ಸ್ಲೀಪರ್‌ ಕೋಚ್‌ -9, ಜನರಲ್‌ ಕೋಚ್‌ – 4, ಸಿಟ್ಟಿಂಗ್‌ ಕಮ್‌ ಲಗೇಜ್‌ ಕೋಚ್‌ – 2 ಬೋಗಿಗಳನ್ನು ಹೊಂದಿರುತ್ತದೆ. ಇದನ್ನೂ ಓದಿ: Dharmasthala‌ Case | ಇಡೀ ದೇಶದ ಹಿಂದೂಗಳಿಗೆ ನೋವಾಗಿದೆ – ಅನಾಮಿಕನನ್ನು ಬಂಧಿಸಿ: ಈಶ್ವರಪ್ಪ

  • ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

    ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

    ಹುಬ್ಬಳ್ಳಿ: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮುಂಬೈ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ 13 ಟ್ರಿಪ್‌ಗಳ ಬೇಡಿಕೆಯ ಮೇರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ.

    ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26 ಮತ್ತು ಮೇ 3, 10, 17, 24, 31 ಹಾಗೂ ಜೂನ್ 7, 14, 21, 28 (ಶನಿವಾರ) ರಂದು ಸಿಎಸ್ಎಂಟಿ ಮುಂಬೈನಿಂದ 00:30 ಗಂಟೆಗೆ ಹೊರಟು, ಅದೇ ದಿನ 23:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ.

    ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು – ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 6, 13, 20, 27 ಮತ್ತು ಮೇ 4, 11, 18, 25 ಹಾಗೂ ಜೂನ್ 1, 8, 15, 22, 29 (ಭಾನುವಾರ) ರಂದು ಎಸ್ಎಂವಿಟಿ ಬೆಂಗಳೂರಿನಿಂದ 04:40 ಗಂಟೆಗೆ ಹೊರಟು, ಮರುದಿನ 04:05 ಗಂಟೆಗೆ ಸಿಎಸ್ಎಂಟಿ ಮುಂಬೈ ತಲುಪಲಿದೆ.

    ಈ ರೈಲು ಎರಡೂ ದಿಕ್ಕುಗಳಲ್ಲಿ ದಾದರ, ಥಾಣೆ, ಕಲ್ಯಾಣ್, ಲೋನಾವಾಲ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ಕುಡಚಿ, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

    ಈ ರೈಲಿನಲ್ಲಿ 22 ಬೋಗಿಗಳಿದ್ದು, ಅವುಗಳಲ್ಲಿ 1-ಎಸಿ ಟು ಟೈರ್, 5-ಎಸಿ ತ್ರಿ ಟೈರ್, 10-ಸ್ಲೀಪರ್ ಕ್ಲಾಸ್, 4-ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2-ಎಸ್‌ಎಲ್‌ಆರ್‌ಡಿ ಬೋಗಿಗಳು ಸೇರಿವೆ.

    ಮುಂಗಡ ಬುಕ್ಕಿಂಗ್ ಮತ್ತು ಆಗಮನ/ನಿರ್ಗಮನ ಸಮಯಗಳ ಕುರಿತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಬಹುದು.

  • ಬೆಂಗ್ಳೂರಿನಿಂದ ಮೈಸೂರು, ಬೆಳಗಾವಿಗೆ ವಿಶೇಷ ರೈಲು – ಎಲ್ಲಿ ನಿಲುಗಡೆ? ಯಾವ ದಿನ ಓಡುತ್ತೆ?

    ಬೆಂಗ್ಳೂರಿನಿಂದ ಮೈಸೂರು, ಬೆಳಗಾವಿಗೆ ವಿಶೇಷ ರೈಲು – ಎಲ್ಲಿ ನಿಲುಗಡೆ? ಯಾವ ದಿನ ಓಡುತ್ತೆ?

    ಬೆಂಗಳೂರು: ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ.

    ಈ ರೈಲುಗಳ ಸೇವೆ ಮೇ 22ರಿಂದ ಆರಂಭವಾಗಲಿದ್ದು, ಭಾರತೀಯ ರೈಲ್ವೇ ವೆಬ್‍ಸೈಟ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಈ ರೈಲುಗಳನ್ನು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ನಿಲ್ದಾಣದಲ್ಲಿನ ಕೌಂಟರ್ ಗಳಲ್ಲಿ ಟಿಕೆಟ್ ನೀಡುವುದಿಲ್ಲ. ಭಾನುವಾರ ರೈಲುಗಳು ಸಂಚರಿಸುವುದಿಲ್ಲ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.

    ಬೆಂಗಳೂರಿನಿಂದ ಬೆಳಗಾವಿಗೆ ಸೋಮವಾರ, ಬುಧವಾರ, ಶುಕ್ರವಾರ ರೈಲು ಓಡಿದರೆ ಬೆಳಗಾವಿಯಿಂದ ಬೆಂಗಳೂರಿಗೆ ಮಂಗಳವಾರ, ಗುರುವಾರ ಶುಕ್ರವಾರ ಸಂಚರಿಸಲಿದೆ.

    ಈ ರೈಲು ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೇಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ ನಿಲ್ದಾಣಗಳಲ್ಲಿ ನಿಲ್ಲಲಿದೆ.

    ಬೆಂಗಳೂರಿನಿಂದ ಮೈಸೂರಿಗೆ ಬೆಳಗ್ಗೆ 9:43, 10:15, 10:48, 11:08, 11:44, 11:59, ಮಧ್ಯಾಹ್ನ 12:45ಕ್ಕೆ ಹೊರಟರೆ ಮೈಸೂರಿನಿಂದ ಬೆಂಗಳೂರಿಗೆ ಮಧ್ಯಾಹ್ನ 1:45, 1:54, 2:10, 2:40, 3:02, 3:34, 4:10ಕ್ಕೆ ಹೊರಡಲಿದೆ.

    ಬೆಂಗಳೂರು – ಮೈಸೂರು ರೈಲುಗಳಿಗೆ  ಕೆಂಗೇರಿ, ರಾಮನಗರ, ಮದ್ದೂರು, ಮಂಡ್ಯ, ಪಾಂಡವಪುರ, ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆಯಿದೆ.

    covid 19 corona railways