Tag: Spiritual

  • ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು: ಋತಂಭರಾ

    ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು: ಋತಂಭರಾ

    ಲಕ್ನೋ: ಈಗ ಪ್ರತಿ ಹಿಂದೂ ಪೋಷಕರು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಿರಬೇಕು. ಅವರಲ್ಲಿ ಇಬ್ಬರನ್ನು ಆರ್‌ಎಸ್‌ಎಸ್ ಅಥವಾ ವಿಶ್ವಹಿಂದೂ ಪರಿಷತ್‌ಗೆ ಹಸ್ತಾಂತರಿಸಬೇಕು ಎಂದು ಆಧ್ಯಾತ್ಮಿಕ ಮುಖಂಡರಾದ ಸಾಧ್ವಿ ಋತಂಭರಾ ಕರೆ ನೀಡಿದ್ದಾರೆ.

    ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಶ್ವ ಹಿಂದೂ ಪರಿಷತ್ (VHP) ವತಿಯಿಂದ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗ ಪ್ರತಿಯೊಬ್ಬ ಹಿಂದೂ ಕನಿಷ್ಠ 4 ಮಕ್ಕಳನ್ನು ಹೊಂದಿರಬೇಕು. ಅವರಲ್ಲಿ ಇಬ್ಬರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ವಿಶ್ವ ಹಿಂದೂ ಪರಿಷತ್‌ಗೆ ಹಸ್ತಾಂತರಿಸಿದರೆ, ಅವರು ರಾಷ್ಟçತ್ಯಾಗಕ್ಕೆ ಕೊಡುಗೆ ನೀಡಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50ಜನ ಸಂತರು ಸ್ಪರ್ಧಿಸಲಿದ್ದಾರೆ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

    SADHVI

    ರಾಮೋತ್ಸವವನ್ನುದ್ದೇಶಿಸಿ ಮಾತನಾಡುತ್ತಾ, ರಾಮನ ಭಕ್ತನಾಗಲು, ರಾಮತ್ವವನ್ನು ಅಳವಡಿಸಿಕೊಳ್ಳಬೇಕು. ಏಕೆಂದರೆ ರಾಮನು ಅಜೇಯ ಪುರುಷತ್ವದ ಸಂಕೇತ. ರಾಜಕೀಯ ಪಕ್ಷಗಳು ಹಿಂದೂಗಳನ್ನು ವಿಭಜಿಸುತ್ತವೆ. ಆದರೆ ಶ್ರೀರಾಮನ ನಡವಳಿಕೆಯು ಇಡೀ ಸಮಾಜವನ್ನು ಒಂದುಗೂಡಿಸುತ್ತದೆ ಎಂದು ಅವರು ಹೇಳಿದರು.

    ಹೆಚ್ಚಿನ ಮಕ್ಕಳಿಗೆ ಜನ್ಮನೀಡಿ: ಅಖಿಲ ಭಾರತೀಯ ಸಂತ ಪರಿಷತ್ತಿನ ಹಿಮಾಚಲ ಪ್ರದೇಶ ಉಸ್ತುವಾರಿ ಯತಿ ಸತ್ಯದೇವಾನಂದ ಸರಸ್ವತಿ ಮಾತನಾಡಿ, ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ಭಾರತವು ಪ್ರಜಾಪ್ರಭುತ್ವ ರಾಷ್ಟçವಾಗಿದೆ. ಆದರೆ ಮುಸ್ಲಿಮರು ಯೋಜಿತ ರೀತಿಯಲ್ಲಿ ಅನೇಕ ಮಕ್ಕಳಿಗೆ ಜನ್ಮ ನೀಡುವ ಮೂಲಕ ತಮ್ಮ ಜನಸಂಖ್ಯೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಭಾರತವು ಇಸ್ಲಾಮಿಕ್ ರಾಷ್ಟçವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ದಲಿತರ ಓಲೈಕೆಗಾಗಿ SC, ST ಸಮಾವೇಶ ಮಾಡಿದ ರೇಣುಕಾಚಾರ್ಯ – ಮಹಿಳೆಯರೊಂದಿಗೆ ಸಖತ್ ಸ್ಟೆಪ್

    RAMANAVAMI
    ಸಾಂದರ್ಭಿಕ ಚಿತ್ರ

    ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಪೊಲೀಸರು ಸರಸ್ವತಿ ಅವರಿಗೆ ಪೊಲೀಸ್ ಕಾಯ್ದೆ- 2007ರ ಸೆಕ್ಷನ್ 64ರ (ಕೂಮುಪ್ರಚೋದನಕಾರಿ ಭಾಷಣ) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಿದೆ. ಸೂಚನೆಯನ್ನು ಪಾಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.

  • ಜಾಗತಿಕ ಪೌರತ್ವ ರಾಯಭಾರಿಯಾದ ರವಿಶಂಕರ್ ಗುರೂಜಿ

    ಜಾಗತಿಕ ಪೌರತ್ವ ರಾಯಭಾರಿಯಾದ ರವಿಶಂಕರ್ ಗುರೂಜಿ

    ವಾಷಿಂಗ್ಟನ್: ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಅಮೆರಿಕ ನಾರ್ತ್ ಈಸ್ಟರ್ನ್ ಯುನಿವರ್ಸಿಟಿ ಸೆಂಟರ್ ಫಾರ್ ಸ್ಪಿರಿಚುವಲ್ ಡಯಲಾಗ್ ಮತ್ತು ಸರ್ವಿಸ್ ಗುರೂಜಿ ಅವರನ್ನು ತನ್ನ ಸಂಸ್ಥೆಯ ಜಾಗತಿಕ ಪೌರತ್ವ ರಾಯಭಾರಿ ಎಂದು ಗುರುತಿಸಿದೆ.

    ಅಫ್ಗಾನಿಸ್ತಾನ, ಬ್ರೆಜಿಲ್, ಕ್ಯಾಮರೂನ್, ಕೊಲಂಬಿಯಾ, ಭಾರತ, ಇಂಡೊನೇಷ್ಯಾ, ಇರಾಕ್, ಇಸ್ರೇಲ್, ಕಿನ್ಯಾ, ಕೊಸೊವೊ, ಲೆಬನಾನ್, ಮಾರಿಷಸ್, ಮೊರಾಕೊ, ನೇಪಾಳ, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಅಮೆರಿಕದಲ್ಲಿ ಸಂಘರ್ಷ ಪರಿಹಾರಕ್ಕಾಗಿ ಅವರು ಕೆಲಸ ಮಾಡಿದ್ದಾರೆ ಎಂದು ವಿಶ್ವವಿದ್ಯಾಲಯ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಆಧ್ಯಾತ್ಮಿಕ ಸಲಹೆಗಾರ ಅಲೆಕ್ಸಾಂಡರ್ ಡೆಲಿವರಿ ಕರ್ನ್ ಹೇಳಿದ್ದಾರೆ.

    ರವಿಶಂಕರ್ ಗೂರುಜಿ ಅವರು ಶಾಂತಿ ಸ್ಥಾಪಿಸಲು ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಗೌರವಿಸಲಾಗಿದೆ. ನಾವು ರವಿಶಂಕರ್ ಗುರೂಜಿ ಅವರಿಗೆ ಕೃತಜ್ಞರಾಗಿದ್ದೇವೆ. ಮಾನವೀಯ ಮೌಲ್ಯಗಳನ್ನು ಸಾಕಾರಗೊಳಿಸಿದ ಅತ್ಯುತ್ತಮ ವ್ಯಕ್ತಿಯ ಮೂಲಕ ನಾವು ಜಾಗತಿಕ ಪೌರತ್ವ ರಾಯಭಾರಿಯನ್ನು ಗುರುತಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ, ಎಂದು ಅಲೆಕ್ಸಾಂಡರ್ ಡೆಲಿವರಿ ಕರ್ನ್ ಹೇಳಿದ್ದಾರೆ.

  • ಖ್ಯಾತ ಉದ್ಯಮಿಯ 24 ವರ್ಷದ ಮಗಳಿಂದ ಸನ್ಯಾಸತ್ವ ಸ್ವೀಕಾರ

    ಖ್ಯಾತ ಉದ್ಯಮಿಯ 24 ವರ್ಷದ ಮಗಳಿಂದ ಸನ್ಯಾಸತ್ವ ಸ್ವೀಕಾರ

    ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹುಡುಗಿಯರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಬಣ್ಣ ಬಣ್ಣದ ಬಟ್ಟೆ ತೊಟ್ಟು ತಮ್ಮಿಷ್ಟದಂತೆ ಜೀವನ ನಡೆಸುವುದು ಕಾಮನ್. ಆದರೆ ಇಲ್ಲೊಬ್ಬ ಯುವತಿ ಇದೆಲ್ಲವನ್ನು ಧಿಕ್ಕರಿಸಿ ಆಧ್ಯಾತ್ಮಿಕ ಜಗದತ್ತ ಮುಖ ಮಾಡಿದ್ದಾಳೆ.

    ಜಿಲ್ಲೆಯ ಸುರಪುರದ 24 ವರ್ಷದ ಯುವತಿ ಮೋನಿಕಾ ಗೃಹಸ್ಥಾಶ್ರಮ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ್ದಾಳೆ. ಜೈನ್ ಧರ್ಮದವಳಾದ ಮೋನಿಕಾ B.Com ಸಹ ಓದಿದ್ದಾಳೆ. ಅಲ್ಲದೇ ಸುರಪುರ ಪಟ್ಟಣದ ಖ್ಯಾತ ಉದ್ಯಮಿಯಾಗಿರುವ ಭರತ್‍ಕುಮಾರ್ ಜೈನ್ ಅವರು ಸುಪುತ್ರಿಯಾಗಿದ್ದಾಳೆ. ಮೋನಿಕಾಳಿಗೆ ಬಾಲ್ಯದಿಂದಲೂ ಸನ್ಯಾಸತ್ವದ ಬಗ್ಗೆ ಒಲವು ಇದ್ದು, ಮನೆಯವರ ಒಪ್ಪಿಗೆ ಪಡೆದು ಈಗ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿದ್ದಾಳೆ.

    ಸದ್ಯಕ್ಕೆ ಸಾಂಕೇತಿಕವಾಗಿ ಸನ್ಯಾಸತ್ವ ಸ್ವೀಕರಿಸಿರುವ ಮೋನಿಕಾಳಿಗೆ ಮುಂದಿನ ತಿಂಗಳು ಫೆ.2 ರಂದು ರಾಜಸ್ಥಾನದಲ್ಲಿ ಅಧಿಕೃತವಾಗಿ ಸನ್ಯಾಸತ್ವ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಇಂದು ಸುರಪುರ ಪಟ್ಟಣದಲ್ಲಿ ಕಬಾಡಗೇರಾದಿಂದ ಶೆಟ್ಟಿಮೋಹಲ್ಲಾದ ಓಣಿಯ ಜೈನ ಮಂದಿರದವರೆಗೆ ತೆರೆದ ಕುದುರೆ ಸಾರೋಟದ ವಾಹನದಲ್ಲಿ ಅದ್ಧೂರಿಯಾಗಿ ದೀಕ್ಷಾರ್ಥಿ ಮೋನಿಕಾಳ ಮೆರವಣಿಗೆ ನಡೆಸಲಾಯಿತು.

    ದೀಕ್ಷಾರ್ಥಿ ಮೋನಿಕಾ ಮೆರವಣಿಗೆ ವೇಳೆ ವಿವಿಧ ವಸ್ತುಗಳನ್ನು ದಾನ ಮಾಡಿದರು. ಮೆರವಣಿಗೆ ಉದ್ದಕ್ಕೂ ಜೈನ್ ಮಹಿಳೆಯರು ನೃತ್ಯ ಮಾಡಿ ಮೋನಿಕಾಳಿಗೆ ಶುಭಕೋರಿದರು.

  • ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆಧ್ಯಾತ್ಮದ ಕಡೆಗೆ ಟೆಕ್ಕಿ ಚಿತ್ತ!

    ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆಧ್ಯಾತ್ಮದ ಕಡೆಗೆ ಟೆಕ್ಕಿ ಚಿತ್ತ!

    ಬೆಂಗಳೂರು: ನಗರದ ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದ್ದು, ಬೇಕು ಅಂತಾಲೇ ನಾಪತ್ತೆಯಾಗಿರಬಹುದು ಎಂದು ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಮೂಲತಃ ಬಿಹಾರದ ಪಾಟ್ನಾ ಮೂಲದ ಟೆಕ್ಕಿ ಅಜಿತಾಬ್ ಗೆ 25 ವರ್ಷವಾಗಿದ್ದು, ಆಧ್ಯಾತ್ಮ ಕಡೆ ಇನ್ನಿಲ್ಲದ ಒಲವು ಹೊಂದಿದ್ದರು. ಅಲ್ಲದೇ ತಮ್ಮ ಕೆಲ ಸ್ನೇಹಿತರಿಗೆ ಆರ್ ವಿಎಸ್(ರಾಜು ವಿಕಾಸ ಕೇಂದ್ರ)ದ ಚಿಂತನೆಗಳ ಬಗ್ಗೆ ಒಲವು ಬೆಳೆಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಸಿಐಡಿ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಆರ್ ವಿಎಸ್ ಆಧ್ಯಾತ್ಮ ಕೇಂದ್ರಗಳು ಭಾರತ ಸೇರಿದಂತೆ ವಿದೇಶದ ಹಲವು ಕಡೆಗಳಲ್ಲಿದ್ದು, ಸಾಕಷ್ಟು ಭಾರೀ ವಿದೇಶಗಳಲ್ಲಿರುವ ಆರ್ ವಿಎಸ್ ಆಶ್ರಮಗಳಿಗೆ ಹೋಗಿ ಬಂದಿದ್ದಾರೆ. ಇದಲ್ಲದೇ ಟೆಕ್ಕಿ ಮನೆಯಲ್ಲಿ ಮದುವೆ ವಿಚಾರ ಕೂಡ ಪ್ರಸ್ತಾಪ ಮಾಡಿದ್ದಾರೆ. ಮೊದಲೇ ಆಧ್ಯಾತ್ಮದ ಕಡೆ ಹೆಚ್ಚು ಒಲವು ತೋರಿದ್ದ ಟೆಕ್ಕಿ ಇದರಿಂದ ತಪ್ಪಿಸಿಕೊಳ್ಳಲು ತಾನೇ ಸುವ್ಯವಸ್ಥಿತವಾಗಿ ಪ್ಲಾನ್ ಮಾಡಿ ಮಿಸ್ಸಿಂಗ್ ಆಗಿರಬಹುದು ಎಂದು ಸಿಐಡಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಸಿಐಡಿ ಪೊಲೀಸರು ಈ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದು, ಕೆಲ ದೇಶಿ ಆರ್ ವಿಎಸ್ ಆಧ್ಯಾತ್ಮ ಕೇಂದ್ರಗಳಲ್ಲಿ ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ದೇಶಿ ಆಧ್ಯಾತ್ಮ ಕೇಂದ್ರಗಳು ಟೆಕ್ಕಿ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಲು ನಿರಾಕರಿಸಿವೆ. ಅಲ್ಲದೇ ವಿದೇಶಿ ಆಧ್ಯಾತ್ಮ ಕೇಂದ್ರಗಳಿಗೆ ಹೋಗಿ ತನಿಖೆ ನಡೆಸಲು ಮುಂದಾಗಲು ಅರ್ಥಿಕವಾಗಿ ತೊಂದರೆಯಿದೆ ಎಂದು ಸಿಐಡಿ ತಿಳಿಸಿದೆ.

    ಏನಿದು ಪ್ರಕರಣ?
    ಬೆಳ್ಳಂದೂರಿನ ಬ್ರಿಟೀಷ್ ಟೆಲಿಕಾಂ ನಲ್ಲಿ ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಬ್ ತನ್ನ ಸಿಯಾಜ್ ಕಾರನ್ನು ಮಾರಾಟ ಸಂಬಂಧ ಓಎಲ್ ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್ ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಕುಮಾರ್ ಅಜಿತಾಬ್ ಕರೆ ಬಂದಾಗಲೆಲ್ಲ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್ 18 ರಂದು ಅವರ ಮೊಬೈಲ್ ಗೆ ಕರೆ ಬಂದಿತ್ತು. ಎಂದಿನಂತೆಯೇ ಅಜಿತಾಬ್, ಕೆಎ 03 ಎನ್‍ಎ 1751 ನಂಬರಿನ ತನ್ನ ಸಿಯಾಜ್ ಕಾರಿನಲ್ಲಿ ಹೊರ ಹೋಗಿದ್ದರು. ಹೊರ ಹೋದವರು ಇದೂವರೆಗೂ ಎಲ್ಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

    ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಜಿತಾಬ್ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿತ್ತು. ನಂತರ ಪೋಷಕರ ಒತ್ತಡ ಹೆಚ್ಚಾಗುತ್ತಿದ್ದಂತೆ ಈ ಕೇಸನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೊಂಡ ಸಿಐಡಿ ಪೊಲೀಸರು ಸ್ಫೋಟಕ ಮಾಹಿತಿಯನ್ನು ಕಲೆಹಾಕಿದ್ದಾರೆ.