Tag: Spirituality

  • Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    ಕಾರವಾರ: ಹಿಂದೂ ಧರ್ಮದ ಧಾರ್ಮಿಕತೆಗೆ ವಾಲಿದ ರಷ್ಯಾ (Russia) ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (Kumta) ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.

    ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ರಕ್ಷಣೆಗೊಳಗಾದ ರಷ್ಯಾ ಮೂಲದ ಪ್ರಜೆಗಳು. ರಷ್ಯಾದಿಂದ ಬಿಸಿನೆಸ್ ವಿಸಾ ದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು. ಅಲ್ಲಿಯೇ ಚಿಕ್ಕ ರುದ್ರನ ಮೂರ್ತಿ ಇಟ್ಟುಕೊಂಡು ಪೂಜಾ ಕಾರ್ಯ ಮಾಡುತ್ತಾ ದಿನ ಕಳೆಯುತಿದ್ದಳು. ಸಿಪಿಐ ಶ್ರೀಧರ್ ನೇತ್ರತ್ವದ ತಂಡ ಈ ಭಾಗದಲ್ಲಿ ಗುಡ್ಡ ಕುಸಿತವಾದ್ದರಿಂದ ಗಸ್ತು ತಿರುಗುವಾಗ ಗುಹೆಯಲ್ಲಿ ಯಾರೋ ವಾಸವಾಗಿರುವುದನ್ನು ಪತ್ತೆ ಮಾಡಿ ವಿದೇಶಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:  ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

    ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು. ಗುಡ್ಡ ಕುಸಿತವಾಗಿರುವ ರಾಮತೀರ್ಥ ಗುಡ್ಡದ ಗುಹೆಯಲ್ಲಿ ತಮ್ಮ ಪುಟ್ಟ ಮಕ್ಕಳೊಂದಿಗೆ ಕತ್ತಲಲ್ಲೇ ಬದುಕು ಕಳೆಯುತಿದ್ದಳು. ಎಸ್.ಪಿ ಎಂ ನಾರಾಯಣ್ ಸಲಹೆಯಂತೆ ಆಕೆಗೆ ಸ್ಥಳೀಯ ಎನ್‌ಜಿಓ ಮೂಲಕ ಆಪ್ತ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದ್ದು ಆಕೆಯನ್ನು ಆಕೆಯ ದೇಶಕ್ಕೆ ಪುನಃ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

  • 11 ಮಂದಿ ಆತ್ಮಹತ್ಯೆ ಕೇಸ್: ಮನೆಯಲ್ಲಿ 11 ಪೈಪ್, 11 ರಾಡ್, 11 ಕಿಟಕಿ ಪತ್ತೆ!

    11 ಮಂದಿ ಆತ್ಮಹತ್ಯೆ ಕೇಸ್: ಮನೆಯಲ್ಲಿ 11 ಪೈಪ್, 11 ರಾಡ್, 11 ಕಿಟಕಿ ಪತ್ತೆ!

    ದೆಹಲಿ: ಜುಲೈ 1ರಂದು ನಡೆದಿದ್ದ ದೆಹಲಿಯ ಬುರಾರಿ ಪ್ರದೇಶದಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ.

    ಮನೆಯಲ್ಲಿ 11 ಕಿಟಕಿಗಳು, 11 ಪೈಪುಗಳು ಸಿಕ್ಕಿದ್ದು 11 ಮಂದಿಯ ಸಾವಿನ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ತನಿಖೆ ವೇಳೆ ಮನೆಯಲ್ಲಿ ಸಿಕ್ಕ ಚೀಟಿಯ ಪ್ರಕಾರ ಮೃತ 11 ಮಂದಿಯು 10 ಕ್ರಮಗಳನ್ನು ಅನುಸರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಇವರ ಮನೆಯಲ್ಲಿ ಬಾಗಿಲುಗಳು ಸಹ 11 ಕಬ್ಬಿಣದ ರಾಡ್‍ಗಳನ್ನು ಒಳಗೊಂಡಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಮನೆಯ ಪೈಪ್‍ಗಳು ಹಾಗೆಯೇ ಯಾರು ಬಿಡುವುದಿಲ್ಲ. ಬಿಟ್ಟರೂ ಒಂದು ಮೂರು ನಾಲ್ಕು ಪೈಪ್ ಗಳನ್ನು ಬಿಡುವುದಿಲ್ಲ. ಆದರೆ ಗೋಡೆಯಲ್ಲಿ 11 ಪೈಪ್‍ಗಳು ಕಂಡುಬಂದಿದ್ದು, ಈ ಪೈಪ್‍ಗಳಿಗೆ ಹೊರಗಡೆಯಿಂದ ಯಾವುದೇ ಸಂಪರ್ಕ ಇಲ್ಲ. ಅಷ್ಟೇ ಅಲ್ಲದೇ ಒಂದೊಂದು ಪೈಪ್ ಗಳ ಗಾತ್ರ ಸಹ ಭಿನ್ನವಾಗಿದೆ. ಯಾಕೆ ಈ ರೀತಿಯಾಗಿ 11 ಪೈಪ್ ಗಳನ್ನು ಹಾಗೆಯೇ ಬಿಟ್ಟಿದ್ದಾರೆ ಎನ್ನುವುದು ನಿಗೂಢವಾಗಿದೆ.

    11 ಮಂದಿಯೂ ಆಧ್ಯಾತ್ಯದ ಮೊರೆ ಹೋಗಿ ಮೋಕ್ಷ ಸಿಗುತ್ತದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಆತ್ಮಹತ್ಯೆಗೆ ಪ್ರೇರೇಪಿಸಿದ ಗುರುಗಳ ಸುಳಿವು ಸಿಕ್ಕಿದ್ದು, ಅಧ್ಯಾತ್ಮಿಕ ಗುರುವಾದ ಜಾನೆಗಡಿ ಎಂದು ತಿಳಿದು ಬಂದಿದೆ. ಆಧ್ಯಾತ್ಮಿಕ ಗುರುಗಳಾದ ಜಾನೆಗಡಿಯನ್ನು ವಿಚಾರಣೆಗೆ ಒಳಪಡಿಸಿದರೆ ಪ್ರಕರಣದ ಸತ್ಯ ಹೊರಬೀಳಬಹುದು. ಹೀಗಾಗಿ ಜಾನೆಗಡಿ ಪತ್ತೆ ಕಾರ್ಯವನ್ನು ಪೊಲೀಸರು ಆರಂಭಿಸಿದ್ದಾರೆ.

    ಜಾನೆಗಡಿಯನ್ನು ಪತ್ತೆಹಚ್ಚಲು ಪೊಲೀಸರು ರಾಜಸ್ಥಾನ, ದೆಹಲಿ ಹಾಗೂ ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

    ಅಕ್ಕಪಕ್ಕದವರ ಹೇಳಿಕೆಯ ಪ್ರಕಾರ ಕುಟುಂಬವು ಆತ್ಮಹತ್ಯೆಗೂ ಮುಂಚೆ ಪ್ರಿಯಾಂಕ ಎಂಬವರ ಮದುವೆಗೆ ತಯಾರು ಮಾಡಿಕೊಳ್ಳುತ್ತಿದ್ದರು. ಭಾನುವಾರ ತಮ್ಮ ದಿನಸಿ ಅಂಗಡಿಯನ್ನು ಸುಮಾರು 11.45ಕ್ಕೆ ಮುಚ್ಚಿದ್ದಾರೆ. ನಂತರ ಅವರ ಮನೆಗೆ 10.40ಕ್ಕೆ ಫುಡ್ ಡೆಲಿವರಿ ಮಾಡುವ ವ್ಯಕ್ತಿ ಮಾತ್ರ ಬಂದಿದ್ದ ಎಂದು ತಿಳಿಸಿದ್ದಾರೆ.

    ಸೋಮವಾರ ಬೆಳಗ್ಗೆ ಅಕ್ಕಪಕ್ಕದ ಮನೆಯವರು ಕಿಟಕಿ ಮೂಲಕ ನೋಡಿದಾಗ ಮನೆಯ ಎಲ್ಲಾ ಸದಸ್ಯರು ನೇಣುಹಾಕಿಕೊಂಡು ಮೃತಪಟ್ಟಿರುವುದು ತಿಳಿದು ಬಂದಿತ್ತು. ಅವರು ಮನೆಯ ಎಲ್ಲಾ ಕಿಟಕಿ, ಬಾಗಿಲುಗಳನ್ನು ತೆರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ ತಾವು ಸಾಕಿದ್ದ ನಾಯಿಗೆ ಯಾವುದೇ ತೊಂದರೆ ಕೊಡದೆ, ಅದನ್ನು ಮನೆಯ ಮೇಲೆ ಕಟ್ಟಿಹಾಕಿದ್ದಾರೆ ಎಂದು ಹೇಳಿದ್ದಾರೆ.

    ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ಮೃತರು ಒತ್ತಡಕ್ಕೊಳಗಾಗಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಕುಟುಂಬದ ನಾರಾಯಣ ದೇವಿ ಎಂಬ ವೃದ್ಧೆ ನೆಲದ ಮೇಲೆಯೇ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ ಬೆರಳಚ್ಚು ತಜ್ಞರ ವರದಿಯ ಪ್ರಕಾರ ಅವರು ಬೆಲ್ಟ್ ಸಹಾಯದಿಂದ ಸ್ವತಃ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.