Tag: sports

  • ಫುಟ್ಬಾಲ್ ಲೆಜೆಂಡ್ ಪೀಲೆ ಇನ್ನಿಲ್ಲ

    ಫುಟ್ಬಾಲ್ ಲೆಜೆಂಡ್ ಪೀಲೆ ಇನ್ನಿಲ್ಲ

    ಬ್ರೆಸಿಲಿಯಾ: ಕ್ಯಾನ್ಸರ್ ಕಾಯಿಲೆ, ಮೂತ್ರಪಿಂಡ (ಕಿಡ್ನಿ) ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಫುಟ್ಬಾಲ್ ದಂತಕತೆ (Football Legendary), ಸಾರ್ವಕಾಲಿಕ ಶ್ರೇಷ್ಠ ಆಟಗಾರ ಬ್ರೆಜಿಲ್‌ನ (Brazil) ಪೀಲೆ (82) (Pele) ನಿಧನರಾಗಿದ್ದಾರೆ.

    ಮೂರು ಬಾರಿ ಫಿಫಾ ವಿಶ್ವಕಪ್ (FIFA World Cup) ವಿಜೇತ ಪೀಲೆ ಅವರು, ನ.29ರಂದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಇತ್ತೀಚೆಗೆ ಅವರಿಗೆ ಕೋವಿಡ್-19 (Covid) ಸೋಂಕು ತಗಲಿತ್ತು. ಇದನ್ನೂ ಓದಿ: ರಣಜಿಯಲ್ಲಿ ಬ್ಯಾಟಿಂಗ್ ಅಬ್ಬರ- ಮನೀಷ್ ದ್ವಿಶತಕ ಮಿಂಚಿಂಗ್, ಸೂರ್ಯನಿಗೆ ಶತಕ ಮಿಸ್ಸಿಂಗ್

    ತನ್ನ 16ನೇ ವಯಸ್ಸಿನಲ್ಲಿ ಬ್ರೆಜಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಜಿಲ್ ಫಿಫಾ ವಿಶ್ವಕಪ್ (FIFA World Cup) ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಾಧನೆ ಮಾಡಿದ ಏಕೈಕ ಆಟಗಾರನಾಗಿದ್ದಾರೆ. ಬ್ರೆಜಿಲ್ ಪರ 95 ಪಂದ್ಯಗಳಲ್ಲಿ ಅತಿಹೆಚ್ಚು 77 ಗೋಲುಗಳನ್ನು ಗಳಿಸಿರುವ ಸಾಧನೆ ಮಾಡಿದ್ದರು. ಆದ್ರೆ ಇತ್ತೀಚಿನ ವಿಶ್ವಕಪ್ ಟೂರ್ನಿಯಲ್ಲಿ ನೇಮ 124 ಪಂದ್ಯಗಳಲ್ಲಿ 77 ಗೋಲುಗಳನ್ನು ಬಾರಿಸುವ ಮೂಲಕ ಸಾಧನೆ ಸಮಬಲ ಸಾಧಿಸಿದ್ದಾರೆ.

    2021ರ ಸೆಪ್ಟೆಂಬರ್‌ನಲ್ಲಿ ಪೀಲೆ ಅವರಿಗೆ ಶ‌ಸ್ತ್ರಚಿಕಿತ್ಸೆ ಮಾಡಿ ದೊಡ್ಡ ಕರುಳಿನ ಕ್ಯಾನ್ಸರ್ ಗೆಡ್ಡೆಯನ್ನು ತೆಗೆಯಲಾಗಿತ್ತು. ಆದರೆ ಇತ್ತೀಚೆಗೆ ಅವರು ಕೋವಿಡ್‌ಗೆ ತುತ್ತಾಗಿದ್ದರಿಂದ ಮತ್ತೆ ಕ್ಯಾನ್ಸರ್ ಸಮಸ್ಯೆ ಕೂಡ ಮರುಕಳಿಸಿತ್ತು. ಮೂರು ಬಾರಿ ಮದುವೆಯಾಗಿರುವ ಪೀಲೆ ಅವರಿಗೆ 7 ಮಕ್ಕಳಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಹಲವರಿಗೆ T20 ಯಿಂದ ಬ್ರೇಕ್?

    Live Tv
    [brid partner=56869869 player=32851 video=960834 autoplay=true]

  • ಟಿ20ಯಿಂದ ಟಿ10ನತ್ತ ಕ್ರಿಕೆಟ್

    ಟಿ20ಯಿಂದ ಟಿ10ನತ್ತ ಕ್ರಿಕೆಟ್

    ಆಂಗ್ಲರ ನಾಡಲ್ಲಿ ಜನಕವಾದ ಕ್ರಿಕೆಟ್ (Cricket) ಇದೀಗ ವಿಶ್ವದೆಲ್ಲೆಡೆ ಹಬ್ಬಿದೆ. ಫುಟ್‍ಬಾಲ್ (Football) ಬಿಟ್ಟರೆ ಜನ ಕ್ರಿಕೆಟ್‍ಗೆ ಹೆಚ್ಚು ಮರುಳಾಗಿದ್ದಾರೆ. ಅದರಲ್ಲೂ ಮೂರು ಮಾದರಿ ಕ್ರಿಕೆಟ್‍ನಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‍ಗಿಂತ ಟಿ20 ಮಾದರಿ (T20) ಕ್ರಿಕೆಟ್‍ಗೆ ಜನ ಹೆಚ್ಚು ಮನಸೋತಿದ್ದಾರೆ.

    ಕ್ರಿಕೆಟ್ ಆರಂಭಿಕ ಘಟ್ಟದಲ್ಲಿ ಟೆಸ್ಟ್ ಕ್ರಿಕೆಟ್‍ಗೆ ಇದ್ದಂತಹ ಮಹತ್ವ 50 ಓವರ್‌ಗಳ ಪಂದ್ಯ (ಏಕದಿನ ಕ್ರಿಕೆಟ್) ಆರಂಭವಾದ ಬಳಿಕ ಕುಗ್ಗಿತು. ಟೆಸ್ಟ್ ಎಂದರೆ 5 ದಿನಗಳ ಕಾಲ ನಡೆಯುವ ಸುದೀರ್ಘ ಕ್ರಿಕೆಟ್ ಪಂದ್ಯಾಟ. ಕ್ರಮೇಣ ಜನ ಟೆಸ್ಟ್ ಕ್ರಿಕೆಟ್‍ಗೆ ಬದಲಾವಣೆ ಬೇಕು ಎಂದು ಬಯಸತೊಡಗಿದರು. ಆಗ ಪರ್ಯಾಯವಾಗಿ 50 ಓವರ್‌ಗಳ ಪಂದ್ಯ ನಡೆಸಲು ತೀರ್ಮಾನಿಸಿ ಒಂದೇ ದಿನದಲ್ಲಿ ಮುಗಿಸುವ ರೀತಿ ಆಡಲು ಪ್ರಾರಂಭಿಸಲಾಯಿತು. ಏಕದಿನ ಕ್ರಿಕೆಟ್ 9 ರಿಂದ 10 ಗಂಟೆಗಳ ಕಾಲ ಆಡಿ ಫಲಿತಾಂಶ ಹೊರಬರುವಂತಾಯಿತು. ಇದು ಕೂಡ ಕೆಲ ಸಮಯಗಳ ಬಳಿಕ ಅಭಿಮಾನಿಗಳಿಗೆ ಬೋರ್ ಹೊಡೆಸಿತು. ಬಳಿಕ 20 ಓವರ್‌ಗಳಿಗೆ ಪಂದ್ಯ ನಡೆಸಲು ತೀರ್ಮಾನಿಸಲಾಯಿತು. ಈ ಮೂಲಕ ಟಿ20 ಮಾದರಿ ಕ್ರಿಕೆಟ್‍ನಲ್ಲಿ ಹೊಸ ಹುರುಪು ತರಿಸಿತು. ಇದನ್ನೂ ಓದಿ: ಟಿ20ಗೆ ಪಾಂಡ್ಯ ನಾಯಕ, ಸೂರ್ಯ ಉಪನಾಯಕ – ಟೀಂ ಇಂಡಿಯಾದಲ್ಲಿ ಪಂತ್‍ಗಿಲ್ಲ ಸ್ಥಾನ

    ಟಿ20 ಮಾದರಿ ಕ್ರಿಕೆಟ್ ಇದೀಗ ವಿಶ್ವ ಕ್ರಿಕೆಟ್‍ನಲ್ಲಿ ಟ್ರೆಂಡ್ ಸೆಟ್ ಮಾಡಿದೆ. ಕ್ರಿಕೆಟ್ ಮಾತ್ರವಲ್ಲ, ಓಟದ ಸ್ಪರ್ಧೆಗಳಲ್ಲಿ ನೀವು ನೋಡಿರಬಹುದು. 100 ಮೀ, 200 ಮೀ ಓಟಕ್ಕಿರುವ ಪ್ರಾಶಸ್ತ್ಯ 1,500 ಮೀ, 5,000 ಮೀ ಓಟದ ಸ್ಪರ್ಧೆಗಿಲ್ಲ. ವಿಶ್ವದಾದ್ಯಂತ ಹುಸೇನ್ ಬೋಲ್ಟ್ ಎಲ್ಲರಿಗೂ ಗೊತ್ತು. ಆದರೆ ಮೋ ಫರಾಹ್ ಯಾರಿಗೂ ಗೊತ್ತಿಲ್ಲ. ಯಾಕೆಂದರೆ ಒಲಿಪಿಂಕ್ಸ್‌ನಲ್ಲಿ 100, 200 ಮೀ.ನಲ್ಲಿ ಬೋಲ್ಟ್ ಚಿನ್ನದ ಪದಕ ಪಡೆದ ವೇಗದ ಓಟಗಾರ. ಆದರೆ ಮೋ ಫರಾಹ್ ಅದೇ ಒಲಿಂಪಿಕ್ಸ್‌ನಲ್ಲಿ 5,000 ಮೀ. ಓಟದಲ್ಲಿ ಚಿನ್ನ ಗೆದ್ದ ಓಟಗಾರ. ಆದರೆ ಆತನನ್ನು ಯಾರು ಹೆಚ್ಚಾಗಿ ಗಮನಿಸಲಿಲ್ಲ. ಯಾಕೆಂದರೆ ಲಾಂಗ್ ರನ್ನಿಂಗ್ ಮತ್ತು ಶಾರ್ಟ್ ರನ್ನಿಂಗ್ ನಡುವಿನ ವ್ಯಾತ್ಯಾಸ. ಇಬ್ಬರೂ ಕೂಡ ಚಿನ್ನದ ಸಾಧನೆಗೈದವರೆ. ಆದರೆ ವೇಗದ ನಡುವೆ ನಿಧಾನ ನಿಲ್ಲಲಿಲ್ಲ. ಹಾಗೆ ಕ್ರಿಕೆಟ್‍ನಲ್ಲೂ ಸುದೀರ್ಘ ಕ್ರಿಕೆಟ್ ಅಭಿರುಚಿ ಕಡಿಮೆಯಾಗುತ್ತಿದ್ದಂತೆ, ಜನ ಶಾರ್ಟ್ ಫಾರ್ಮೆಟ್ ಬೇಕೆಂಬ ಯೋಚನೆಗೆ ಮುಂದಾದರು.

    ಟಿ20 ಮಾದರಿ
    ಟಿ20, 20 ಓವರ್‌ಗಳ ಪಂದ್ಯ ಕೇವಲ 4 ಗಂಟೆಯಲ್ಲಿ ಪಂದ್ಯವನ್ನು ಮುಗಿಸುವ ಫಾರ್ಮೆಟ್ ಇದು. ಟಿ20 ಮಾದರಿ ಜಾರಿಗೆ ಬಂದ ಬಳಿಕ ಟೆಸ್ಟ್ ಕ್ರಿಕೆಟ್ ಮತ್ತು ಏಕದಿನ ಮಾದರಿ ಕ್ರಿಕೆಟ್‍ಗಿಂತ ಹೆಚ್ಚು ಜನಪ್ರಿಯವಾಯಿತು. ಏಕೆಂದರೆ ಇಲ್ಲಿ ಬ್ಯಾಟ್ಸ್‌ಮ್ಯಾನ್‌ಗಳ ಮನಮೋಹಕ ಹೊಡೆತ ನೋಡುವುದೇ ಒಂದು ಹಬ್ಬ. ಟಿ20 ಫಾರ್ಮೆಟ್‍ನಲ್ಲಿ ಇದೀಗ ಹೊಸ ಟ್ರೆಂಡ್ ಸೃಷ್ಟಿಯಾಗಿದೆ. ಅದು 360 ಡಿಗ್ರಿ ಬ್ಯಾಟಿಂಗ್. ಈ ಹಿಂದೆಯೇ ಟಿ20 ಕ್ರಿಕೆಟ್ ಎಂದರೆ ಅದು ಬ್ಯಾಟ್ಸ್‌ಮ್ಯಾನ್‌ಗಳ ಸ್ವರ್ಗ ಎಂಬ ಮಾತಿದೆ. ಇಲ್ಲಿ ಬೌಲರ್‌ಗಳ ಪಾಡು ಬಹಳ ಅನಾಯಸ. ಬ್ಯಾಟಿಂಗ್‍ನಲ್ಲಿ ಬೌಂಡರಿ, ಸಿಕ್ಸ್ ಚಚ್ಚುವ ಪರಿಗೆ ಬೌಲರ್ ಬೆಂಡಾಗುವುದೇ ಟಿ20 ಕ್ರಿಕೆಟ್. ಇಲ್ಲಿ ಹೊಡಿಬಡಿ ಆಟಗಾರ ಎಂದರೇ ಕ್ರಿಕೆಟ್ ಪ್ರಿಯರಿಗೆ ಅಚ್ಚುಮೆಚ್ಚು. ಅದರಲ್ಲೂ ಇದೀಗ 360 ಡಿಗ್ರಿ ಬ್ಯಾಟ್ಸ್‌ಮ್ಯಾನ್‌ಗಳಿಗೆ ಹೆಚ್ಚಿನ ಬೇಡಿಕೆ. ಇದನ್ನೂ ಓದಿ: ದ್ವಿಶತಕ ಸಿಡಿಸಿ ಅಬ್ಬರದ ಸಂಭ್ರಮದಲ್ಲಿ ವಾರ್ನರ್ ಎಡವಟ್ಟು – ಕೈ,ಕೈ ಹಿಡಿದು ಪೆವಿಲಿಯನ್‌ಗೆ ಕರೆತಂದ ಫಿಸಿಯೋ

    360 ಡಿಗ್ರಿ ಬ್ಯಾಟಿಂಗ್
    ಟಿ20 ಮಾದರಿಯಲ್ಲೂ ಇದೀಗ ಹೆಚ್ಚು ಬೇಡಿಕೆ ಇರುವುದು, ಮೈದಾನದ ಮೂಲೆ ಮೂಲೆಗೂ ಹೊಡೆದು ಭರ್ಜರಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯವಿರುವ ಆಟಗಾರನಿಗೆ. 360 ಡಿಗ್ರಿ ಬ್ಯಾಟ್ಸ್‌ಮ್ಯಾನ್ ಎಂದರೆ ಆತ ಯಾವುದೇ ಎಸೆತವನ್ನು ಮೈದಾನದ ಯಾವುದೇ ಮೂಲೆಗೂ ಹೊಡೆದಾಡುವ ಶಕ್ತಿ ಇರುವ ದಾಂಡಿಗ. ವಿಶ್ವ ಕ್ರಿಕೆಟ್‍ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಎಬಿ‌ ಡಿವಿಲಿಯರ್ಸ್ 360 ಡಿಗ್ರಿ ಬ್ಯಾಟ್ಸ್‌ಮ್ಯಾನ್‌ ಎಂದೇ ಖ್ಯಾತರಾಗಿದ್ದವರು. ಅವರನ್ನು ಹೊರತುಪಡಿಸಿದರೆ ಇದೀಗ 360 ಡಿಗ್ರಿ ಬ್ಯಾಟ್ಸ್‌ಮ್ಯಾನ್‌ ಆಗಿ ಭಾರತದ ಆಟಗಾರ ಸೂರ್ಯ ಕುಮಾರ್ ಯಾದವ್ ಗುರುತಿಸಿಕೊಂಡಿದ್ದಾರೆ. ಇವರ ಆಟ ನೋಡಲು ಅಭಿಮಾನಿಗಳು ಹೆಚ್ಚು ಇಷ್ಟ ಪಡುತ್ತಾರೆ. ಹಾಗಾಗಿ ಈ ಹೊಡಿಬಡಿ ಆಟ ಇನ್ನಷ್ಟು ರೋಚಕತೆ ಮೂಡಿಸಿದೆ. ಈ ನಡುವೆ ಟಿ20 ಮಾದರಿಯಿಂದ ಜನ ಬದಲಾವಣೆ ಬಯಸುತ್ತಿದ್ದಾರೆ.

    ಟಿ10ನತ್ತ ಚಿತ್ತ
    ಇದೀಗ ಕ್ರಿಕೆಟ್ ಪ್ರಿಯರ ದೃಷ್ಟಿ ಟಿ20 ಯಿಂದ ಟಿ10ನತ್ತ (T10) ನೆಟ್ಟಿದೆ. 20 ಓವರ್‌ಗಳ ಪಂದ್ಯಕ್ಕಿಂತಲೂ 10 ಓವರ್‌ಗಳ ಪಂದ್ಯದೆಡೆಗೆ ಸಾಗುತ್ತಿದೆ. ಈಗಾಗಲೇ ದುಬೈ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾಗಳಲ್ಲಿ ಟಿ10 ಮಾದರಿ ಲೀಗ್ ಯಶಸ್ಸು ಕಂಡಿದೆ. ಇದು ಟಿ20 ಗಿಂತ ಕಡಿಮೆ ಅವಧಿಯಲ್ಲಿ ಮುಗಿಯುತ್ತಿದ್ದು, ಕೇವಲ 2 ಗಂಟೆಯಲ್ಲಿ ಹೆಚ್ಚು ಅಬ್ಬರ ಕಾಣಸಿಗುವಂತಾಗಿಸಿದೆ. ಜನ ನಿಧಾನವಾಗಿ ಟಿ10 ಕ್ರಿಕೆಟ್‍ನತ್ತ ಮುಖ ಮಾಡುತ್ತಿದ್ದಾರೆ.

    ಮುಂದಿನ ದಿನಗಳಲ್ಲಿ ಇದು ಕೂಡ ಬದಲಾಗಬಹುದು. ಜನ ಸಮಯದ ಅಭಾವದಿಂದಾಗಿ 10 ರಿಂದ 5 ಓವರ್‌ಗಳ ಪಂದ್ಯದ ಕಡೆಗೂ ಸಾಗಬಹುದು. ಈ ರೀತಿಯ ಟೂರ್ನಿ ಲೋಕಲ್ ಆಟದಲ್ಲಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಕಾಣಸಿಕ್ಕರೂ ಅಚ್ಚರಿ ಪಡಬೇಕಾಗಿಲ್ಲ. ಇದನ್ನೂ ಓದಿ: ತನ್ನ ವಿಕೆಟ್ ಪಡೆದ ಬಾಂಗ್ಲಾ ಬೌಲರ್‌ಗೆ ವಿಶೇಷ ಉಡುಗೊರೆ ನೀಡಿದ ಕೊಹ್ಲಿ

    Live Tv
    [brid partner=56869869 player=32851 video=960834 autoplay=true]

  • ತಂದೆಯ ಸಾಧನೆ ಸರಿಗಟ್ಟಿದ ಮಗ – ಮೊದಲ ರಣಜಿ ಪಂದ್ಯದಲ್ಲೇ ಅರ್ಜುನ್‌ ತೆಂಡೂಲ್ಕರ್‌ ಶತಕ

    ತಂದೆಯ ಸಾಧನೆ ಸರಿಗಟ್ಟಿದ ಮಗ – ಮೊದಲ ರಣಜಿ ಪಂದ್ಯದಲ್ಲೇ ಅರ್ಜುನ್‌ ತೆಂಡೂಲ್ಕರ್‌ ಶತಕ

    ಪಣಜಿ: ಸಚಿನ್‌ ತೆಂಡೂಲ್ಕರ್‌(Sachin Tendulkar) ಅವರ ಪುತ್ರ 23 ವರ್ಷದ ಅರ್ಜುನ್‌ ತೆಂಡೂಲ್ಕರ್‌(Arjun Tendulkar) ತಾನು ಆಡಿದ ಮೊದಲ ರಣಜಿ(Ranji debut) ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ.

    ಗೋವಾ(Goa) ಪರ ಆಡುತ್ತಿರುವ ಅರ್ಜುನ್‌ ತೆಂಡೂಲ್ಕರ್‌ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ 120 ರನ್‌(207 ಎಸೆತ, 16 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾಗಿದ್ದಾರೆ. ಈ ಹಿಂದೆ ಸಚಿನ್‌ ತೆಂಡೂಲ್ಕರ್‌ ಮೊದಲ ರಣಜಿ ಪಂದ್ಯದಲ್ಲೇ ಶತಕ ಹೊಡೆದಿದ್ದರು. ಈಗ ತಂದೆಯಂತೆ ಅರ್ಜುನ್‌ ತೆಂಡೂಲ್ಕರ್‌ ಶತಕ ಬಾರಿಸಿದ್ದಾರೆ.

    ಟಾಸ್‌ ಸೋತು ಬ್ಯಾಟಿಂಗ್‌ ನಡೆಸುತ್ತಿರುವ ಗೋವಾ ಎರಡನೇ ದಿನಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ 8 ವಿಕೆಟ್‌ ನಷ್ಟಕ್ಕೆ 493 ರನ್‌ ಹೊಡೆದಿದೆ. ಗೋವಾ ಪರ ಸುಯಶ್ ಪ್ರಭುದೇಸಾಯಿ 202 ರನ್‌(416 ಎಸೆತ, 29 ಬೌಂಡರಿ), ಸ್ನೇಹಲ್ ಸುಹಾಸ್ ಕೌಠಂಕರ್ 59 ರನ್‌ ಹೊಡೆದಿದ್ದಾರೆ. ಇದನ್ನೂ ಓದಿ: ಡಿ.18ರ ಫೈನಲ್‌ ನನ್ನ ಕೊನೆಯ ವಿಶ್ವಕಪ್‌ ಪಂದ್ಯ – ನಿವೃತ್ತಿ ಖಚಿತಪಡಿಸಿದ ಮೆಸ್ಸಿ

    15 ವರ್ಷದಲ್ಲೇ ರಣಜಿ ಕ್ಯಾಪ್‌ ಧರಿಸಿದ್ದ ಸಚಿನ್‌ 1988ರಲ್ಲಿ ತಮ್ಮ ಮೊದಲ ರಣಜಿ ಪಂದ್ಯದಲ್ಲಿ ಗುಜರಾತ್‌ ವಿರುದ್ಧ ಅಜೇಯ 100 ರನ್‌ ಹೊಡೆದಿದ್ದರು. 23 ವರ್ಷದ ಅರ್ಜುನ್‌ ತೆಂಡೂಲ್ಕರ್‌ ಮಾಧ್ಯಮ ವೇಗಿ ಬೌಲರ್‌ ಆಗಿದ್ದು ಈ ಹಿಂದೆ ಸೈಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದ್ದರು. ಐಪಿಎಲ್‌ನಲ್ಲಿ ಮುಂಬೈ ತಂಡ ಖರೀದಿಸಿದ್ದರೂ ಅರ್ಜುನ್‌ ತೆಂಡೂಲ್ಕರ್‌ ಅಂತಿಮ 11ರ ಪಟ್ಟಿಯಲ್ಲಿ ಸ್ಥಾನ ಪಡೆದಿರಲಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ಧರಿಸದೇ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಗೆ ಬಂಧನದ ಭೀತಿ

    ಹಿಜಬ್ ಧರಿಸದೇ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಗೆ ಬಂಧನದ ಭೀತಿ

    ತೆಹ್ರಾನ್: ದಕ್ಷಿಣ ಕೊರಿಯಾದಲ್ಲಿ ನಡೆದ ಗೋಡೆ ಹತ್ತುವ ಕ್ರೀಡಾಕೂಟದಲ್ಲಿ (ಕ್ಲೈಂಬಿಂಗ್‌ ಚಾಂಪಿಯನ್‌ಶಿಪ್) ಇರಾನ್ ಕ್ರೀಡಾಪಟು ಎಲ್ನಾಜ್ ರೆಕಾಬಿ (Elnaz Rekabi) ಹಿಜಬ್ (Hijab) ಧರಿಸದೇ ಭಾಗವಹಿಸಿದ್ದುದು ಈಗ ವಿವಾದಕ್ಕೆ ಕಾರಣವಾಗಿದೆ. ಅದಕ್ಕೆ ಪೂರಕವಾಗಿ ಸಿಯೋಲ್‌ನಲ್ಲಿ ಇರುವ ಇರಾನ್ ಅಧಿಕಾರಿಗಳು ಕ್ರೀಡಾಪಟುವನ್ನು ಸ್ವದೇಶಕ್ಕೆ ಕರೆದೊಯ್ಯಲು ಮಂಗಳವಾರ ವಿಮಾನ (Flight) ಹತ್ತಿಸಿದ್ದಾರೆ.

    33 ವರ್ಷದ ರೆಕಾಬಿ ಸಿಯೋಲ್‌ನಲ್ಲಿ ನಡೆದ ಏಷ್ಯನ್ ಸ್ಪೋರ್ಟ್ಸ್ (Sports) ಕ್ಲೈಂಬಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ (Climbing Championships) ಹಿಜಬ್ ಧರಿಸದೇ ಭಾಗವಹಿಸಿದ್ದರು ಎಂದು ಹೇಳಲಾಗಿದೆ. ಅದಕ್ಕಾಗಿ ಅವರು ರಾಜಧಾನಿ ತೆಹ್ರಾನ್ ತಲುಪಿದ ನಂತರ ಇರಾನ್ ಪೊಲೀಸರು ಬಂಧಿಸುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ಇನ್ನೂ ಓದಿ: ಪ್ರೆಗ್ನೆಂಟ್ ಅಂತ ತಿಳಿದ 48 ಗಂಟೆಯಲ್ಲೇ ಮಗುವನ್ನು ಹೆತ್ತ ತಾಯಿ

    ಈ ಕುರಿತು ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಎಲ್ನಾಜ್ ರೆಕಾಬಿ, ಆಕಸ್ಮಿಕವಾಗಿ ತಲೆಯಿಂದ ಹಿಜಬ್ ಜಾರಿತು. ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾಳೆ.

    ಇರಾನ್ ಸಹ ವರದಿಗಳಿಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ್ದು, ರೆಕಾಬಿ ಕುರಿತು ಸುಳ್ಳು ಸುದ್ದಿಗಳು ಹರಡಲಾಗುತ್ತಿದೆ ಎಂದು ಹೇಳಿದೆ. ಸೋಲ್‌ನಲ್ಲಿರುವ ಇರಾನ್ ರಾಯಭಾರಿ ಕಚೇರಿ ಈ ಕುರಿತು ಪ್ರತಿಕ್ರಿಯೆ ನೀಡುವ ವೇಳೆ ಈ ಹಿಂದೆ ಹಿಜಬ್ ಧರಿಸಿ ರೆಕಾಬಿ ಅವರು ಸ್ಪರ್ಧೆಯಲ್ಲಿ ಪಾಲ್ಗೊಂಡ ಫೋಟೋವನ್ನು ಹಂಚಿಕೊಂಡಿದೆ. ಇನ್ನೂ ಓದಿ: ಭಾರತಕ್ಕೆ ನೀಡಿದ ದರದಲ್ಲೇ ರಷ್ಯಾದಿಂದ ಇಂಧನ ಖರೀದಿಗೆ ಪಾಕ್‌ ಸಿದ್ಧ – ಹಣಕಾಸು ಸಚಿವ

    ಹಿಜಬ್ ಧರಿಸದೇ ಇದ್ದಿದ್ದಕ್ಕೆ 22ರ ಹರೆಯದ ಮಹ್ಸಾ ಅಮಿನಿ (Mahsa Amini) ಹೆಸರಿನ ಯುವತಿ ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿದ್ದಳು. ಆಕೆ ಸಾವಿನ ವಿರುದ್ಧ ಇರಾನ್‌ನಲ್ಲಿ ಪ್ರತಿಭಟನೆ ಭುಗಿಲೆದ್ದಿತು. ಸಾವಿರಾರು ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು. ಇರಾನ್‌ನಲ್ಲಿ ಹಿಜಬ್ ಸುಟ್ಟು, ತಮ್ಮ ಜಡೆಯನ್ನು ಕತ್ತರಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಈವರೆಗೆ ಇಬ್ಬರು ಹುಡುಗಿಯರು ಸೇರಿ ಮೂವರು ಮೃತಪಟ್ಟಿದ್ದಾರೆ. ಆದರೂ ಪ್ರತಿಭಟನೆ ಮುಕ್ತಾಯಗೊಂಡಂತೆ ಕಾಣುತ್ತಿಲ್ಲ.

    Live Tv
    [brid partner=56869869 player=32851 video=960834 autoplay=true]

  • NationalGames: ಚಿನ್ನ ಬೇಟೆಯಾಡಿದ ಮೀರಾಬಾಯಿ ಚಾನು

    NationalGames: ಚಿನ್ನ ಬೇಟೆಯಾಡಿದ ಮೀರಾಬಾಯಿ ಚಾನು

    ಗಾಂಧಿನಗರ: 2020ರ ಟೋಕಿಯೋ ಒಲಿಂಪಿಕ್ಸ್ (Olympics) ಪದಕ ವಿಜೇತೆ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Olympics, CommonWealth Games) ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಸಾಯಿಕೋಮ್ ಮೀರಾಬಾಯಿ ಚಾನು (Mirabai Chanu) ಇದೀಗ ಗುಜರಾತ್‌ನಲ್ಲಿ ನಡೆಯುತ್ತಿರುವ ನ್ಯಾಷನಲ್ ಗೇಮ್ಸ್-2022 (National Games 2022) ಕ್ರೀಡಾಕೂಡದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

    49 ಕೆಜಿ ವೇಟ್‌ಲಿಫ್ಟಿಂಗ್ (WeightLifting) ವಿಭಾಗದಲ್ಲಿ ಒಟ್ಟು 191 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ (GoldMedal)ಕ್ಕೆ ಕೊರಳೊಡ್ಡಿದ್ದಾರೆ. ಸ್ನ್ಯಾಚ್‌ನಲ್ಲಿ 84 ಕೆಜಿ ಹಾಗೂ ಕ್ಲೀನ್ ಅಂಡ್ ಜೆರ್ಕ್‌ನಲ್ಲಿ 107 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಇದನ್ನೂ ಓದಿ: CommonwealthGames: ಚಿನ್ನದ ಬೇಟೆಯೊಂದಿಗೆ ದಾಖಲೆ ಬರೆದ ಮೀರಾಬಾಯಿ ಚಾನು

    ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದು ಹೊಸ ದಾಖಲೆ ಬರೆದಿದ್ದರು. ಅಲ್ಲದೇ 2014ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ, 2018ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 2017ರಲ್ಲಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ನಂತರ ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳನ್ನೂ ಬೇಟೆಯಾಡಿದ್ದಾರೆ. 2022ರ ಕಾಮನ್‌ವೆಲ್ತ್‌ ಗೇಮ್ಸ್‌  ಬಳಿಕ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮೀರಾಬಾಯಿ ಚಾನು, ಶೀಘ್ರದಲ್ಲೇ ಚೇತರಿಕೆ ಕಂಡು ಮತ್ತೆ ಚಿನ್ನದ ಪದಕ ಬಾಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಟಾಯ್ಲೆಟ್‌ನಲ್ಲಿ ಊಟ ತಯಾರಿ!

    ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಟಾಯ್ಲೆಟ್‌ನಲ್ಲಿ ಊಟ ತಯಾರಿ!

    ಲಕ್ನೋ: ಉತ್ತರಪ್ರದೇಶದ (Uttar Pradesh) ಸಹರಾನ್ ಪುರದಲ್ಲಿ ನಡೆದ ಬಾಲಕಿಯರ (Girls) ಕಬಡ್ಡಿ ಟೂರ್ನಿ (Kabaddi Tournament) ವೇಳೆ ಶೌಚಾಲಯದಲ್ಲಿ (Toilet) ಬೇಯಿಸಿದ ಆಹಾರವನ್ನೇ ಕ್ರೀಡಾಪಟುಗಳಿಗೆ ಬಡಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

    ಶೌಚಾಲಯ ನೆಲದ ಮೇಲೆ ಬೇಯಿಸಿದ ಅನ್ನದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿದ್ದಂತೆ ವಿವಾದ ಬುಗಿಲೆದ್ದಿದೆ. ಇದನ್ನೂ ಓದಿ: ರಾಕೇಶ್ ‘ಕಿಸ್’ ಕೊಟ್ಟಿದ್ದು ನಿಜ. ಆದರೆ, ಅದು ಅಮ್ಮನ ಮುತ್ತಿನಂತಿತ್ತು: ಸೋನು ಶ್ರೀನಿವಾಸ್ ಗೌಡ

    ಶುಕ್ರವಾರ (ಸೆಪ್ಟೆಂಬರ್ 16) ದಿಂದ ಆರಂಭವಾದ ಮೂರು ದಿನಗಳ ರಾಜ್ಯಮಟ್ಟದ ಅಂಡರ್-17 ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ (Kabaddi Tournament) ಭಾಗವಹಿಸಿದ್ದ ಸುಮಾರು 200 ಕ್ರೀಡಾಪಟುಗಳಿಗೆ ಶೌಚಾಲಯದ ನೆಲದಲ್ಲಿ ಬೇಯಿಸಿದ ಆಹಾರವನ್ನೇ (Food) ನೀಡಲಾಗಿದೆ. ಜೊತೆಗೆ ಒಂದು ಕಾಗದದ ಮೇಲೆ ಪೂರಿಯನ್ನು ಇಡಲಾಗಿತ್ತು. ಅದನ್ನೇ ಆಟಗಾರರಿಗೆ ಬಡಿಸಲಾಗಿದೆ ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

    ಈ ಆರೋಪ ತಳ್ಳಿಹಾಕಿರುವ ಕ್ರೀಡಾಧಿಕಾರಿ ಅನಿಮೇಶ್ ಸಕ್ಸೇನಾ ಅವರು, ಇದು ಆಧಾರ ರಹಿತ ಆರೋಪ ಎಂದು ಹೇಳಿದ್ದಾರೆ. ಇದನ್ನೂ ಓದಿ: ಖಾತೆಗಳನ್ನು ಖಾಲಿ ಉಳಿಸಿಕೊಂಡು ಕಾಲಹರಣ ಮಾಡೋ ಬದ್ಲು, ಸಚಿವ ಸ್ಥಾನ ನೀಡಿ: ಬಿಜೆಪಿ MLC

    ಇಲ್ಲಿ ಆಟಗಾರರಿಗೆ ನೀಡಲಾಗುವ ಆಹಾರವು ಉತ್ತಮ ಗುಣಮಟ್ಟದ್ದಾಗಿದೆ. ಅಕ್ಕಿ, ದಾಲ್, ಸಬ್ಜಿ ಸೇರಿದಂತೆ ಎಲ್ಲ ರೀತಿಯ ಆಹಾರವನ್ನು ಈಜುಕೊಳದ (Swimming Pool) ಬಳಿಯೇ ಸಾಂಪ್ರದಾಯಿಕ ಇಟ್ಟಿಗೆ ಒಲೆಯಲ್ಲಿ ದೊಡ್ಡ ಪಾತ್ರೆಗಳಲ್ಲಿ ಸಿದ್ಧಪಡಿಸಿ ಕೊಡಲಾಗಿದೆ. ಸ್ಥಳದ ಕೊರತೆಯಿದ್ದರಿಂದಾಗಿ ಕ್ರೀಡಾಂಗಣದ ಪೂಲ್ ಬಳಿಯೇ ಅಡುಗೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಕೆಲ ಆಟಗಾರರು ಕ್ರೀಡಾಂಗಣದ ಅಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿದ ಬಳಿಕ ಅನಿಮೇಶ್ ಸಕ್ಸೇನಾ ಅಡುಗೆಯವರಿಗೆ ಛೀಮಾರಿ ಹಾಕಿದ್ದು, ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ

    ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ

    ಶಾರ್ಜಾ: ಏಷ್ಯಾ ಕಪ್‌(Asia Cup) ಸೂಪರ್‌ 4 ಪಂದ್ಯದಲ್ಲಿ ಪಾಕಿಸ್ತಾನ(Pakistan) ವಿರುದ್ಧ ಸೋತಿದ್ದಕ್ಕೆ ಅಫ್ಘಾನಿಸ್ತಾನದ ಕ್ರಿಕೆಟ್‌ ಅಭಿಮಾನಿಗಳು ಕ್ರೀಡಾಂಗಣದಲ್ಲಿ ದಾಂಧಲೆ ನಡೆಸಿದ್ದಾರೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ(Afghanistan) 6 ವಿಕೆಟ್‌ ನಷ್ಟಕ್ಕೆ 129 ರನ್‌ ಗಳಿಸಿತು. ಪಾಕಿಸ್ತಾನ 19.2 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 131 ರನ್‌ ಗಳಿಸಿ ರೋಚಕ ಜಯಗಳಿಸಿತು. ಇದನ್ನೂ ಓದಿ: ಏಷ್ಯಾಕಪ್ ಸೋಲು, ರೊಚ್ಚಿಗೆದ್ದ ಅಭಿಮಾನಿಗಳು – #BoycottIPL ಟ್ರೆಂಡ್

    ಕೊನೆಯ ಓವರ್‌ನಲ್ಲಿ ಪಂದ್ಯ ಸೋತ ಬೆನ್ನಲ್ಲೇ ಅಫ್ಘಾನಿಸ್ತಾನದ ಅಭಿಮಾನಿಗಳು(Afghan Fans)  ರೊಚ್ಚಿಗೆದ್ದು ಕ್ರೀಡಾಂಗಣದಲ್ಲಿ ಅಳವಡಿಸಿದ್ದ ಕುರ್ಚಿಗಳನ್ನು ಕಿತ್ತಿದ್ದಾರೆ. ಕಿತ್ತ ಚಯರ್‌ಗಳನ್ನು ಮೇಲಿನಿಂದ ಎಸೆದಿದ್ದಾರೆ.

    ಆಕ್ರೋಶಗೊಂಡ ಅಭಿಮಾನಿಗಳು ಪಾಕಿಸ್ತಾನದ ಟೀಶರ್ಟ್‌ ಧರಿಸಿದ ಅಭಿಮಾನಿಗಳ ಮೇಲೆ ಚಯರ್‌ನಿಂದ ಹಲ್ಲೆ ನಡೆಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟದ ವೀಡಿಯೋ ವೈರಲ್‌ ಆಗಿದೆ. ತಾಲಿಬಾನ್‌ ಹೇಗೆ ಜನರನ್ನು ಹೆದರಿಸಿ ಸರ್ಕಾರ ನಡೆಸುತ್ತಿದೆಯೋ ಅದೇ ರೀತಿಯ ಮನಸ್ಥಿತಿ ಅಲ್ಲಿನ ಕ್ರಿಕೆಟ್‌ ಅಭಿಮಾನಿಗಳಿಗೆ ಬಂದಿದೆ ಎಂದು ಜನ ಸಿಟ್ಟು ಹೊರ ಹಾಕುತ್ತಿದ್ದಾರೆ.

    ಅಫ್ಘಾನಿಸ್ತಾನ ಈ ಪಂದ್ಯವನ್ನು ಸೋತ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಭಾರತದ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಲಿದೆ. ಎರಡು ಪಂದ್ಯ ಗೆದ್ದಿರುವ ಶ್ರೀಲಂಕಾ ಮತ್ತು ಪಾಕಿಸ್ತಾನ ಭಾನುವಾರ ಫೈನಲ್‌ನಲ್ಲಿ ಸೆಣಸಾಡಲಿವೆ.

    Live Tv
    [brid partner=56869869 player=32851 video=960834 autoplay=true]

  • ವಿದೇಶಿ ಲೀಗ್‌ನತ್ತ ಕಣ್ಣು – ಐಪಿಎಲ್‌ಗೆ ರೈನಾ ಗುಡ್‌ಬೈ

    ವಿದೇಶಿ ಲೀಗ್‌ನತ್ತ ಕಣ್ಣು – ಐಪಿಎಲ್‌ಗೆ ರೈನಾ ಗುಡ್‌ಬೈ

    ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಸುರೇಶ್‌ ರೈನಾ ಇಂಡಿಯನ್ ಪ್ರೀಮಿಯರ್‌ ಲೀಗ್‌ ಸೇರಿದಂತೆ ಎಲ್ಲಾ ಮಾದರಿಯ ದೇಶಿ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿದ ಅವರು, ನನ್ನ ದೇಶ ಮತ್ತು ರಾಜ್ಯ ಉತ್ತರ ಪ್ರದೇಶವನ್ನು ಪ್ರತಿನಿಧಿಸುವುದು ಒಂದು ಗೌರವ. ನಾನು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಕೆಲ ದಿನಗಳಿಂದ ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದ ರೈನಾ 2023ರ ಐಪಿಎಲ್‌ನಲ್ಲಿ ಆಡಲಿದ್ದಾರೆ ಎನ್ನಲಾಗುತ್ತಿತ್ತು.  ಸೋಮವಾರ ಟ್ವಿಟ್ಟರ್‌ನಲ್ಲಿ ಅಭ್ಯಾಸ ಮಾಡುತ್ತಿರುವ ವೀಡಿಯೋ ಅಪ್ಲೋಡ್‌ ಮಾಡಿದ್ದರು. ಆದರೆ ಈಗ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

    2020ರಲ್ಲಿ ಎಂ.ಎಸ್‌ ಧೋನಿ ಆಗಸ್ಟ್‌ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಿನವೇ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು. ಇದನ್ನೂ ಓದಿ: ಸುಳಿವು ಕೊಟ್ಟು ಆ ಪದ ನಾನು ಹೇಳಲ್ಲ – ನಾಚಿ ನೀರಾದ ದ್ರಾವಿಡ್, ಬಿದ್ದುಬಿದ್ದು ನಕ್ಕ ಪತ್ರಕರ್ತರು

    ಐಪಿಎಲ್‌ 2022 ಟೂರ್ನಿ ಸಲುವಾಗಿ ನಡೆದ ಮೆಗಾ ಆಕ್ಷನ್‌ಗೂ ಮೊದಲು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಸುರೇಶ್‌ ರೈನಾ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ 2 ಕೋಟಿ ಮೂಲ ಬೆಲೆಯ ಹೊಂದಿದ್ದ ರೈನಾ ಅವರನ್ನು ಯಾವುದೇ ತಂಡ ಖರೀದಿ ಮಾಡಿರಲಿಲ್ಲ. ಕೋವಿಡ್‌ ಕಾರಣದಿಂದ ಐಪಿಎಲ್‌ 2021ರಲ್ಲಿ ಆಡಿರಲಿಲ್ಲ.

    ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ಇನ್ನು 2-3 ವರ್ಷ ಕ್ರಿಕೆಟ್‌ ಆಡುವ ಬಯಕೆಯನ್ನು ಹೊಂದಿದ್ದೇನೆ. ಇಂದು ಉತ್ತರ ಪ್ರದೇಶದ ತಂಡ ಪ್ರತಿಭಾನ್ವಿತ ಆಟಗಾರನ್ನು ಹೊಂದಿದೆ. ಹೀಗಾಗಿ ಪ್ರತಿಭಾನ್ವಿತರಿಗೆ ಅವಕಾಶ ಮಾಡಿಕೊಡಲು ಉತ್ತರ ಪ್ರದೇಶ ಕ್ರಿಕೆಟ್‌ ಬೋರ್ಡ್‌ನಿಂದಲೂ ಎನ್‌ಒಸಿ ಪಡೆದುಕೊಂಡಿದ್ದೇನೆ ಎಂದಿದ್ದಾರೆ.

    ವಿಶ್ವದ ವಿವಿಧ ಲೀಗ್‌ಗಳಲ್ಲಿ ಆಡುವ ಉದ್ದೇಶ ಹೊಂದಿದ್ದೇನೆ. ದಕ್ಷಿಣ ಆಫ್ರಿಕಾ, ಯುಎಇ ಮತ್ತು ಶ್ರೀಲಂಕಾದ ಫ್ರಾಂಚೈಸಿಗಳು ಈಗಾಗಲೇ ನನ್ನನ್ನು ಸಂಪರ್ಕಿಸಿವೆ. ನನ್ನ ವೃತ್ತಿಬದುಕಿಗೆ ನೆರವಾದ ಬಿಸಿಸಿಐ ಮತ್ತು ಯುಪಿಸಿಎಗೆ ಧನ್ಯವಾದ. ನನ್ನ ನಿರ್ಧಾರದ ಬಗ್ಗೆ ಬಿಸಿಸಿಐಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ಐಪಿಎಲ್‌ನಲ್ಲಿ 5,000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆಯನ್ನು ಸುರೇಶ್‌ ರೈನಾ ಹೊಂದಿದ್ದಾರೆ. ಈವರೆಗೆ ಆಡಿದ 205 ಪಂದ್ಯಗಳಿಂದ 5,528 ರನ್‌ ಹೊಡೆದಿದ್ದಾರೆ.

    ಸುಮಾರು 13 ವರ್ಷಗಳ ಕಾಲ ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್, 226 ಏಕದಿನ ಪಂದ್ಯಗಳು ಹಾಗೂ 78 ಟಿ20 ಪಂದ್ಯಗಳನ್ನ ಆಡಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲೇ ಸರಿಸುಮಾರು 8,000 ರನ್‍ಗಳನ್ನ ಪೂರೈಸಿದ್ದಾರೆ. ಅಲ್ಲದೇ 2011ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆಲುವಿಗೆ ಸುರೇಶ್ ರೈನಾ ಅವರ ಪಾತ್ರವೂ ಅಪಾರವಾಗಿದೆ. ಕೆಲ ಪಂದ್ಯಗಳಲ್ಲಿ ನಾಯಕನಾಗಿಯೂ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅರ್ಶ್‌ದೀಪ್‌ ಪೇಜ್‌ ಎಡಿಟ್‌ – ವಿಕಿಪೀಡಿಯಾಗೆ ಸಮನ್ಸ್‌ ಜಾರಿ ಮಾಡಿದ ಕೇಂದ್ರ

    ಅರ್ಶ್‌ದೀಪ್‌ ಪೇಜ್‌ ಎಡಿಟ್‌ – ವಿಕಿಪೀಡಿಯಾಗೆ ಸಮನ್ಸ್‌ ಜಾರಿ ಮಾಡಿದ ಕೇಂದ್ರ

    ನವದೆಹಲಿ: ಟೀಂ ಇಂಡಿಯಾ ಸದಸ್ಯ ಅರ್ಶ್‌ದೀಪ್‌ ಸಿಂಗ್‌ ಅವರ ಪೇಜ್‌ ಅನ್ನು ಎಡಿಟ್‌ ಮಾಡಿದ್ದಕ್ಕೆ ಭಾರತದಲ್ಲಿರುವ ವಿಕಿಪೀಡಿಯಾ ಪ್ರತಿನಿಧಿಗೆ ಕೇಂದ್ರ ಸರ್ಕಾರ ಸಮನ್ಸ್‌ ಜಾರಿ ಮಾಡಿದೆ.

    ಅರ್ಶ್‌ದೀಪ್‌ ಅವರ ಪುಟದಲ್ಲಿ ಖಾಲಿಸ್ತಾನ ಆಟಗಾರ ಎಂದು ಎಡಿಟ್‌ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಸಚಿವಾಲಯ ವಿಕಿಪೀಡಿಯಾದ ಭಾರತದ ಪ್ರತಿನಿಧಿಗೆ ಸಮನ್ಸ್‌ ಜಾರಿ ಮಾಡಿದೆ.

    ಭಾನುವಾರ ನಡೆದ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅರ್ಶ್‌ದೀಪ್‌ ಸುಲಭ ಕ್ಯಾಚನ್ನು ಕೈ ಚೆಲ್ಲಿದ್ದರು. 18ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಅವರ ಬೌಲಿಂಗ್‌ನಲ್ಲಿ ಆಸಿಫ್ ಅಲಿ ಸಿಕ್ಸ್‌ ಹೊಡೆಯಲು ಮುಂದಾಗಿದ್ದರು. ಆದರೆ ಮೇಲಕ್ಕೆ ಚಿಮ್ಮಿದ ಬಾಲನ್ನು ಹಿಡಿಯಲು ಅರ್ಶ್‌ದೀಪ್‌ ವಿಫಲರಾದರು. ಸುಲಭವಾಗಿ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಮಾಡಲಾಗುತ್ತಿತ್ತು. ಇದನ್ನೂ ಓದಿ: ತಪ್ಪುಗಳು ಆಗಬಹುದು, ಅದರಿಂದ ಕಲಿಯುವುದು ಬಹಳ ಮುಖ್ಯ – ಅರ್ಶ್‌ದೀಪ್‌ ಬೆಂಬಲಿಸಿದ ಕಿಂಗ್ ಕೊಹ್ಲಿ

    ಈ ಟ್ರೋಲ್‌ ಅನ್ನೇ ಬಳಸಿಕೊಂಡ ಪಾಕಿಸ್ತಾನಿ ಪೇಜ್‌ಗಳು, ಅರ್ಶ್‌ದೀಪ್‌ ಸಿಂಗ್‌ ಖಾಲಿಸ್ತಾನಿ ಬೆಂಬಲಿಗ. ಭಾರತವನ್ನು ಸೋಲಿಸಲೆಂದೇ ಕ್ಯಾಚ್‌ ಬಿಟ್ಟಿದ್ದಾನೆ ಎಂಬರ್ಥದಲ್ಲಿ ಸುಳ್ಳು ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.

    ಭಾರತ ಬೇರೆ ದೇಶಗಳ ಜೊತೆ ಕ್ರಿಕೆಟ್‌ ಪಂದ್ಯಕ್ಕೆ ಅಷ್ಟೊಂದು ಮಹತ್ವ ಕೊಡದೇ ಇದ್ದರೂ  ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಅಭಿಮಾನಿಗಳು ಭಾರೀ ಮಹತ್ವ ಕೊಡುತ್ತಾರೆ. ಭಾವನಾತ್ಮಕವಾಗಿ ಪಂದ್ಯವನ್ನು ಸ್ವೀಕರಿಸುವ ಕಾರಣ ತಂಡ ಸೋತರೂ ಆಟಗಾರರ ಮೇಲೆ ತಮ್ಮ ಸಿಟ್ಟನ್ನು ಹೊರ ಹಾಕುತ್ತಿರುತ್ತಾರೆ. ಆರ್ಶ್‌ದೀಪ್‌ ವಿರುದ್ಧ ಸಿಟ್ಟು ಹೊರ ಹಾಕುತ್ತಿರುವಾಗಲೇ ಖಾಲಿಸ್ತಾನ ಬೆಂಬಲಿಗ ಎಂಬ ಪೋಸ್ಟ್‌ ವಿಕೀಪಿಡಿಯಾದಲ್ಲಿ ಪ್ರಕಟವಾಗಿದ್ದು ಬೆಂಕಿಗೆ ತುಪ್ಪ ಸುರಿದಂತಾಗಿತ್ತು. ಎಡಿಟ್‌ ಮಾಡಿದ ವಿಚಾರ ತಿಳಿಯತ್ತಿದ್ದಂತೆ, ಪಾಕಿಸ್ತಾನ ಭಾರತದ ಕ್ರಿಕೆಟ್‌ ಅಭಿಮಾನಿಗಳಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಬಲಿಯಾಗಬೇಡಿ ಎಂದು ಭಾರತೀಯ ಕ್ರಿಕೆಟ್‌ ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಐಪಿಎಲ್‌ಗೂ ಧೋನಿ ಚೆನ್ನೈ ತಂಡ ನಾಯಕ

    ಮುಂದಿನ ಐಪಿಎಲ್‌ಗೂ ಧೋನಿ ಚೆನ್ನೈ ತಂಡ ನಾಯಕ

    ಚೆನ್ನೈ: ಮಹೇಂದ್ರ ಸಿಂಗ್‌ ಧೋನಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ.

    2023ರ ಐಪಿಎಲ್‌ ಸರಣಿಗೆ ನಮ್ಮ ತಂಡವನ್ನು ಧೋನಿಯೇ ಮುನ್ನಡೆಸಲಿದ್ದಾರೆ ಎಂದು ಸಿಎಸ್‌ಕೆ ತಂಡ ಸಿಇಒ ಕಾಸಿ ವಿಶ್ವನಾಥನ್‌ ತಿಳಿಸಿದ್ದಾರೆ.

    ಧೋನಿ 2020ರಲ್ಲೇ ಎಲ್ಲ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದರೂ ಐಪಿಎಲ್‌ಗೆ ನಿವೃತ್ತಿ ಹೇಳಿಲ್ಲ. ಕಳೆದ ವರ್ಷದ ಐಪಿಎಲ್‌ನಲ್ಲೇ ಧೋನಿ ನಿವೃತ್ತಿ ಹೇಳಬಹುದು ಎಂವ ವದಂತಿ ಹರಡಿತ್ತು. ಆದರೆ ಧೋನಿ ನಿವೃತ್ತಿ ನಿರ್ಧಾರ ಕೈಗೊಂಡಿರಲಿಲ್ಲ.  ಇದನ್ನೂ ಓದಿ: 1.5 ಕೋಟಿ ರೂ. ನೀಡಿ ನೀರಜ್ ಚೋಪ್ರಾರ ಜಾವೆಲಿನ್ ಖರೀದಿಸಿದ ಬಿಸಿಸಿಐ

    MS DHONI (2)

    ಕಳೆದ ನವೆಂಬರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನನ್ನ ಕೊನೆಯ ತವರಿನ ಏಕದಿನ ಪಂದ್ಯ ರಾಂಚಿಯಲ್ಲೇ ನಡೆದಿದ್ದರೆ ನನ್ನ ಕೊನೆಯ ಟಿ20 ಪಂದ್ಯ ಚೆನ್ನೈನಲ್ಲೇ ಇರಬೇಕೆಂದು ಆಶಿಸುತ್ತೇನೆ. ಇದು ಮುಂದಿನ ವರ್ಷ ಆಗಿರುತ್ತಾ ಅಥವಾ ಮುಂದಿನ ಐದು ವರ್ಷದಲ್ಲಿ ಆಗುತ್ತಾ ನಿಜಕ್ಕೂ ಗೊತ್ತಿಲ್ಲ ಎಂದು ಹೇಳಿದ್ದರು.

    ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. 2008, 2012, 2013, 2015, 2019ರಲ್ಲಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿತ್ತು.

    Live Tv
    [brid partner=56869869 player=32851 video=960834 autoplay=true]