Tag: sports

  • ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್‌?

    ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್‌?

    ಪಿಎಲ್‌ ಭ್ರಷ್ಟಾಚಾರದಿಂದ ಭಾರತ ಈ ಹಿಂದೆ ಸುದ್ದಿಯಾಗಿತ್ತು. ಈಗ ಫುಟ್‌ಬಾಲ್‌ನಿಂದ ಮತ್ತೆ ವಿಶ್ವ ಮಟ್ಟದಲ್ಲಿ ಸುದ್ದಿಯಾಗಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು(ಎಐಎಫ್‌ಎಫ್‌) ಅಮಾನುತು ಮಾಡಿದೆ. ಭಾರತವನ್ನು ಫಿಫಾ ಅಮಾನತು ಮಾಡಿದ್ದು ಯಾಕೆ ಎಂಬುದರ ಬಗ್ಗೆ ಕಿರು ಮಾಹಿತಿ ಇಲ್ಲಿದೆ.

    ಕ್ರೀಡಾ ಸಚಿವಾಲಯ ವ್ಯಾಪ್ತಿಯ ಅಡಿಯಲ್ಲಿ ಭಾರತೀಯ ಫುಟ್ಬಾಲ್ ಫೆಡರೇಶನ್ ಕೆಲಸ ಮಾಡುತ್ತಿದ್ದು ಇದರ ಅಧ್ಯಕ್ಷ ಸ್ಥಾನವನ್ನು ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್‌ ಪಟೇಲ್‌ 2009 ರಿಂದ ಅಲಂಕರಿಸಿದ್ದಾರೆ. ಪ್ರಫುಲ್‌ ಪಟೇಲ್‌ ಈಗಾಗಲೇ 4 ವರ್ಷ ಅಧ್ಯಕ್ಷರಾಗಿದ್ದು ರಾಷ್ಟ್ರೀಯ ಕ್ರೀಡಾ ಸಂಹಿತೆಯ(ಎನ್‌ಎಸ್‌ಸಿ) ಪ್ರಕಾರ ಮತ್ತೆ ಅಧ್ಯಕ್ಷರಾಗಿ ಮುಂದುವರಿಯಲು ಸಾಧ್ಯವಿಲ್ಲ. ಎನ್‌ಎಸ್‌ಸಿ ಪ್ರಕಾರ ಗರಿಷ್ಠ 12 ವರ್ಷದವರೆಗೆ ಮಾತ್ರ ಅಧ್ಯಕ್ಷರಾಗಲು ಮಾತ್ರ ಅವಕಾಶವಿದೆ. ಆದರೆ ಪ್ರಫುಲ್ ಪಟೇಲ್ ಅವರು ಹೊಸ ಚುನಾವಣೆಗಳನ್ನು ನಡೆಸದೆಯೇ ಅಧಿಕಾರದಲ್ಲಿ ಮುಂದುವರಿದ್ದರು.

    ಮೇ 18 ರಂದು ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ವಿಸರ್ಜಿಸಿತು ಮತ್ತು ದೇಶದಲ್ಲಿ ಫುಟ್‌ಬಾಲ್‌ ಕ್ರೀಡೆಯನ್ನು ನಿಯಂತ್ರಿಸಲು ಮೂರು ಸದಸ್ಯರ ಆಡಳಿತಾಧಿಕಾರಿಗಳ ಸಮಿತಿ(CoA) ನೇಮಿಸಿತು. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ಎಆರ್ ದವೆ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಮತ್ತು ಭಾರತೀಯ ಪುರುಷರ ಫುಟ್ಬಾಲ್ ತಂಡದ ಮಾಜಿ ನಾಯಕ ಭಾಸ್ಕರ್ ಗಂಗೂಲಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿತು. ಈ ಸಮಿತಿ ಸಭೆಗಳನ್ನು ನಡೆಸಿ 12 ಪರಿಚಿತ ಮುಖಗಳನ್ನು ಒಳಗೊಂಡ ಸಲಹಾ ಮಂಡಳಿಯನ್ನು ಸ್ಥಾಪಿಸಿತು. ಇದನ್ನೂ ಓದಿ: ಮೋದಿ, ಶಾ ಜೊತೆ ಗಂಗೂಲಿ ಚರ್ಚೆ – ರಾಜಕೀಯ ಇನ್ನಿಂಗ್ಸ್‌ ಆಡ್ತಾರಾ ದಾದಾ?

    ಯಾವಾಗ ಆಡಳಿತಾಧಿಕಾರಿಗಳ ಸಮಿತಿ ಸಲಹಾ ಸಮಿತಿಯನ್ನು ಸ್ಥಾಪಿಸಿತ್ತೋ ಆವಾಗ ಸಮಸ್ಯೆ ಆರಂಭವಾಯಿತು. ಯಾಕೆಂದರೆ ಫಿಫಾ ತನ್ನ ಎಲ್ಲ ವ್ಯವಹಾರವನ್ನು ದೇಶಗಳ ಫುಟ್‌ಬಾಲ್‌ ಆಡಳಿತ ಮಂಡಳಿ ಜೊತೆ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಫಿಫಾ ಎಐಎಫ್‌ಎಫ್‌ಗೆ ಕೂಡಲೇ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಎಐಎಫ್‌ಎಫ್‌ನಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಲು ಫಿಫಾ ಮತ್ತು ಏಷ್ಯನ್‌ ಫುಟ್‌ಬಾಲ್‌ ಒಕ್ಕೂಟ(ಎಎಫ್‌ಸಿ) ಜೂನ್‌ನಲ್ಲಿ ಗಡುವು ನೀಡಿತ್ತು. ಎಐಎಫ್‌ಎಫ್‌ಗೆ ಹೊಸದಾಗಿ ನಿಯಮಾವಳಿ ರೂಪಿಸಿ, ಜುಲೈ 31ರ ಒಳಗೆ ಅನುಮೋದನೆ ನೀಡಬೇಕು. ಸೆ.15ರ ಒಳಗಾಗಿ ಚುನಾವಣೆ ನಡೆಸಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಬೇಕು ಎಂದು ಫಿಫಾ ಸೂಚಿಸಿತ್ತು.

    ಈ ಡೆಡ್‌ಲೈನ್‌ ನೀಡಿದ ಬೆನ್ನಲ್ಲೇ ಪ್ರಫುಲ್‌ ಪಟೇಲ್‌ ಅವರು ದೇಶದ 35 ಫುಟ್‌ಬಾಲ್‌ ಸದಸ್ಯ ಸಂಘಗಳೊಂದಿಗೆ ಸಭೆ ನಡೆಸಿದ್ದರು. ಸಭೆ ನಡೆಸಿದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ಸಮಿತಿ ಸುಪ್ರೀಂ ಕೋರ್ಟ್‌ನಲ್ಲಿ ಭಾರತದಲ್ಲಿ ನಿಗದಿಯಾಗಿರುವ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್‌ಗೆ ಸಮಸ್ಯೆ ಮಾಡಲೆಂದೇ ಈ ಸಭೆ ನಡೆಸಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ನ್ಯಾ ಡಿ.ವೈ.ಚಂದ್ರಚೂಡ್‌, ನ್ಯಾ. ಸೂರ್ಯಕಾಂತ್‌ ಮತ್ತು ನ್ಯಾ. ಎ.ಎಸ್‌. ಬೋಪಣ್ಣ ಅವರಿದ್ದ ಪೀಠದಲ್ಲಿ ಈ ಅರ್ಜಿ ಇದ್ದು ವಿಚಾರಣೆ ನಡೆಸಬೇಕಿದೆ.

    ಅಮಾನತುಗೊಂಡಿದ್ದು ಯಾಕೆ?
    ತಾನು ನೀಡಿದ ಡೆಡ್‌ಲೈನ್‌ ಒಳಗಡೆ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು ಫಿಫಾ ಅಮಾನತುಗೊಳಿಸಿದೆ. ಫೆಡರೇಶನ್‌ನಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪ, ಪ್ರಭಾವ ಆರೋಪದ ಮೇಲೆ ಫಿಫಾ ಈ ಕ್ರಮ ಕೈಗೊಂಡಿದೆ. ಇದು ತನ್ನ ಕಾನೂನುಗಳ ಗಂಭೀರ ಉಲ್ಲಂಘನೆ ಎಂದಿರುವ ಫಿಫಾ ಎಐಎಫ್‌ಎಫ್ ತನ್ನ ದೈನಂದಿನ ವ್ಯವಹಾರಗಳ ಸಂಪೂರ್ಣ ನಿಯಂತ್ರಣವನ್ನು ಮರಳಿ ಪಡೆಯುವವರೆಗೆ ಅಮಾನತು ಜಾರಿಯಲ್ಲಿರುತ್ತದೆ ಎಂದು ಹೇಳಿದೆ. ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ಈ ಹಿಂದೆಯೂ ಹಲವು ದೇಶಗಳ ಸಂಸ್ಥೆಯನ್ನು ಫಿಫಾ ಅಮಾನುತು ಮಾಡಿತ್ತು.

    ಪಂದ್ಯ ನಡೆಯುತ್ತಾ?
    2020ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಪಂದ್ಯಾವಳಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಈ ಬಾರಿ ಅಕ್ಟೋಬರ್ 11 ರಿಂದ 30ರ ವರೆಗೆ ಭಾರತದಲ್ಲಿ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫಿಫಾ ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಮುಂದೇನು ಎಂಬ ಪ್ರಶ್ನೆ ಎದ್ದಿದೆ.

    ಮಂದೇನು?
    ಭಾರತದ ಕ್ರೀಡಾ ಸಂಸ್ಥೆಗಳಲ್ಲಿ ರಾಜಕೀಯ ಲಾಬಿಗಳು ಹೆಚ್ಚಿರುವುದು ಎಲ್ಲರಿಗೂ ತಿಳಿದ ವಿಚಾರ. ಐಪಿಎಲ್‌ನಲ್ಲಿ ಭಾರೀ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸಿ ಪಾರದರ್ಶನ ವ್ಯವಸ್ಥೆ ರೂಪಿಸಿತ್ತು. ಈಗ ಫುಟ್‌ಬಾಲ್‌ ಕಿತ್ತಾಟ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸುಪ್ರೀಂ ನೀಡುವ ಮುಂದಿನ ಆದೇಶದ ಮೇಲೆ ಭಾರತದಲ್ಲಿ ಫುಟ್‌ಬಾಲ್‌ ಪಂದ್ಯದ ಭವಿಷ್ಯ ನಿರ್ಧಾರವಾಗಿದೆ. ಅಮಾತು ನಿರ್ಧಾರ ತೆಗೆಯುವವರೆಗೆ ಫಿಫಾ ಆಯೋಜಿಸುವ ಟೂರ್ನಿಯಲ್ಲಿ  ಭಾರತ ತಂಡ ಆಡುವ ಅವಕಾಶವನ್ನು ಕಳೆದುಕೊಳ್ಳಲಿದೆ.

    ಅಪ್‌ಡೇಟ್‌ ಸುದ್ದಿ: ಫಿಫಾ ಅಮಾನತುಗೊಳಿಸಿದ ವಿಚಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದಿದೆ. ನ್ಯಾ.ಚಂದ್ರಚೂಡ್‌ ನೇತೃತ್ವದ ಪೀಠ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    ಮುಂಬೈ: 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಸಾರ್ಥಕಗೊಳಿಸಿದರು. ಬಳಿಕ ಪ್ರಧಾನಿ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

    ಇಡೀ ದೇಶದ ಜನರು ಮನೆ-ಮನೆಯಲ್ಲೂ ಧ್ವಜ ಹಾರಿಸುವ ಮೂಲಕ ದೇಶ ಪ್ರೇಮ ಮೆರೆದಿದ್ದಾರೆ. ಇದಕ್ಕೆ ಭಾರತದ ಕ್ರೀಡಾ ತಾರೆಗಳೂ ಹೊರತಾಗಿಲ್ಲ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೇರಿ ಹಲವರು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಿದ್ದಾರೆ.

    ತಮ್ಮ ತಮ್ಮ ಟ್ವಿಟ್ಟರ್ ಖಾತೆಗಳಲ್ಲಿ ರಾಷ್ಟ್ರಧ್ವಜ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದು, ಭಾರತದ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ಕೋರಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, `ನಾನು ಭಾರತೀಯನೆಂದು ಹೇಳಲು ಹೆಮ್ಮೆ ಪಡುತ್ತೇನೆ. ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ಹೇಳಿದ್ದಾರೆ.

    ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಬಜನ್ ಸಿಂಗ್, ನಮ್ಮ ರಾಷ್ಟ್ರಧ್ವಜ ಹಿಂದಿನ ತ್ಯಾಗ ಬಲಿದಾನಗಳ ಸಂಕೇತ, ವರ್ತಮಾನದ ಸಮೃದ್ಧಿ ಹಾಗೂ ಭವಿಷ್ಯದ ಭರವಸೆಗಳ ಸಂಕೇತವಾಗಿದೆ ಎಲ್ಲರೂ ಅದಕ್ಕೆ ಸಲ್ಯೂಟ್ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: IPLನಲ್ಲಿ ಸೊನ್ನೆಗೆ ಔಟಾಗಿದ್ದಕ್ಕೆ ಮೂರ್ನಾಲ್ಕು ಬಾರಿ ಕಪಾಳಕ್ಕೆ ಬಾರಿಸಿದ್ರು – ರಾಸ್‌ ಟೇಲರ್‌ ರೋಚಕ ಅನುಭವ

    ಇದೇ ರೀತಿ ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಚೇತೇಶ್ವರ್ ಪೂಜಾರ, ಜಸ್ಪಿತ್ ಬುಮ್ರಾ, ಶಿಖರ್ ಧವನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಬಾಕ್ಸಿಂಗ್ ಮಾಜಿ ಕ್ರೀಡಾಪಟು ಮೇರಿ ಕೋಮ್, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಮೊದಲಾದವರು ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ್ದಾರೆ.

    ವಿದೇಶಿ ಕ್ರೀಡಾ ತಾರೆಗಳಿಂದಲೂ ವಿಶ್: ಇನ್ನೂ ಭಾರತೀಯರು ಮಾತ್ರವಲ್ಲದೇ ವಿದೇಶಿ ಕ್ರಿಕೆಟಿಗರೂ ಶುಭ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಹಾಗೂ ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟಿಗ ಡೇರೆನ್ ಸಾಮಿ ಶುಭ ಕೋರಿದ್ದಾರೆ. ಡೇವಿಡ್ ವಾರ್ನರ್ ನನ್ನೆಲ್ಲಾ ಭಾರತೀಯ ಕುಟುಂಬದ ಸ್ನೇಹಿತರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಹೇಳಿದ್ದಾರೆ. ಇನ್ನೂ ಡೇರೆನ್ ಸಾಮಿ `ನನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದು ಭಾರತದಲ್ಲೇ’ ಎಂದು ನೆನಪಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಮುಂಬೈ: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಈ ವರ್ಷದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಲಿದ್ದಾರೆ.

    ಪಿ.ವಿ ಸಿಂಧು ಅವರು ಸದ್ಯ ಕಾಲಿನ ಪಾದದ ಫ್ರ್ಯಾಕ್ಚರ್‌ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    ಕಾಮನ್‌ಲ್ತ್‌ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ.ಸಿಂದು ಕಾಲು ನೋವಿನ ಹೊರತಾಗಿಯೂ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ಸ್ ಪಂದ್ಯವನ್ನು ಆಡಿದ್ದರು.

    ಈ ಕುರಿತು ಟ್ವೀಟ್ ಮಾಡಿರುವ ಸಿಂಧು, `ದುರಾದೃಷ್ಟವಶಾತ್ ನಾನು ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಹೊರಗುಳಿಯಬೇಕಿದೆ. ಸದ್ಯ ನಾನು ಗಾಯದ ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದೇನೆ. ಕಾಮನ್‌ವೆಲ್ತ್ ಕ್ವಾಲಿಫೈಯರ್‌ನಲ್ಲಿಯೇ ಗಾಯದ ಭಯವಿತ್ತು. ಆದರೆ ನನ್ನ ತರಬೇತುದಾರರು ಹಾಗೂ ದೈಹಿಕ ತರಬೇತುದಾರರ ಸಹಾಯದಿಂದ ಪಂದ್ಯವನ್ನಾಡಿದೆ ಎಂದು ಸಿಂಧು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಬರ್ಮಿಂಗ್‌ಹ್ಯಾಮ್‌ನಿಂದ ಹೈದರಾಬಾದ್‌ಗೆ ಹಿಂದಿರುಗಿದ ನಂತರ ತಕ್ಷಣ ನಾನು ಎಂಆರ್‌ಐ ಸ್ಕ್ಯಾನ್‌ಗೆ ಧಾವಿಸಿದೆ. ವೈದ್ಯರು ನನ್ನ ಎಡಪಾದದಲ್ಲಿ ಗಂಭೀರ ಸಮಸ್ಯೆಯಾಗಿರುವುದನ್ನು ಗುರುತಿಸಿ ಕೆಲ ವಾರಗಳ ವರೆಗೆ ವಿಶ್ರಾಂತಿ ಪಡೆಯುವಂತೆ ಶಿಫಾರಸು ಮಾಡಿದ್ದಾರೆ. ಕೆಲವೇ ವಾರಗಳಲ್ಲಿ ನಾನು ತರಬೇತಿಗೆ ಹಿಂದಿರುಗಬೇಕು. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    2020ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಳ್ಳಿ ಪದಕ, 2019ರ ಟೂರ್ನಿಯಲ್ಲಿ ಚಿನ್ನದ ಪದಕ ನಂತರ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ. ಕೊನೆಯದಾಗಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಹಾಗೂ ಸಿಂಗಲ್ಸ್ನಲ್ಲಿ ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ರೀಡಾ ವಿದ್ಯಾರ್ಥಿನಿಯರಿಗೆ ಸಹಾಯ ಮಾಡೋ ನೆಪದಲ್ಲಿ ಲೈಂಗಿಕ ಸುಖಕ್ಕಾಗಿ ಬೇಡಿಕೆ ಇಟ್ಟ ಕಾಮುಕ ಶಿಕ್ಷಕ ಅಂದರ್‌

    ಕ್ರೀಡಾ ವಿದ್ಯಾರ್ಥಿನಿಯರಿಗೆ ಸಹಾಯ ಮಾಡೋ ನೆಪದಲ್ಲಿ ಲೈಂಗಿಕ ಸುಖಕ್ಕಾಗಿ ಬೇಡಿಕೆ ಇಟ್ಟ ಕಾಮುಕ ಶಿಕ್ಷಕ ಅಂದರ್‌

    ಛತ್ತೀಸಗಡ: ವಿವಿಧ ಕ್ರೀಡೆಗಳಲ್ಲಿ ಮಿಂಚಲು ಸಹಾಯ ಮಾಡಿದ್ದಕ್ಕಾಗಿ ವಿದ್ಯಾರ್ಥಿನಿಯರಿಂದ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ ಬಂಧನವಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಆರೋಪಿ ಸಹಾಯಕ ಶಿಕ್ಷಕನನ್ನು 47 ವರ್ಷದ ದೀಪಕ್ ಕುಮಾರ್ ಸೋನಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶಿಕ್ಷಕ ಅಂತರ ಶಾಲಾ ಆಟಗಳಲ್ಲಿ ಖೋ-ಖೋ ಮತ್ತು ಕಬಡ್ಡಿ ಪಂದ್ಯಾವಳಿಗಳಲ್ಲಿ ಹಲವಾರು ಪದಕಗಳನ್ನು ಗೆಲ್ಲುವಲ್ಲಿ ತನ್ನ ಶಾಲೆಯ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಗುಂಪು ಘರ್ಷಣೆಗೆ ಇಬ್ಬರು ಬಲಿ – 58 ಜನರ ವಿರುದ್ಧ ದೂರು ದಾಖಲು

    ವರದಿ ಪ್ರಕಾರ, ಶಿಕ್ಷಕ ಬಲೋಡ್ ಜಿಲ್ಲೆಯ ಜುಂಗೇರಾ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಮಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಖೋ-ಖೋ ಮತ್ತು ಕಬಡ್ಡಿ ತರಬೇತಿಯನ್ನೂ ನೀಡಿದ್ದಾನೆ. ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯರಿಗೆ ದೀಪಕ್ ಕುಮಾರ್ ಸೋನಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ತಮ್ಮ ಶಿಕ್ಷಕರು ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿ ಐವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ದೂರು ದಾಖಲಿಸಿದ್ದಾರೆ.

    KILLING CRIME

    ಮುಂಬರುವ ಖೋ-ಖೋ ಸ್ಪರ್ಧೆಯ ಬಗ್ಗೆ ಕೇಳಲು 8 ನೇ ತರಗತಿಯ ವಿದ್ಯಾರ್ಥಿನಿ ಫೋನ್‌ನಲ್ಲಿ ಕರೆ ಮಾಡಿದಾಗ ಶಿಕ್ಷಕನ ಅಸಲಿಯತ್ತು ಬಯಲಾಗಿದೆ. ಫೋನಲ್ಲಿ ಮಾತಾಡುವ ವೇಳೆ ಹುಡುಗಿಯ ತಾಯಿ ತನ್ನ ಮಗಳ ಬಳಿ ನಿಂತಿದ್ದು ಫೋನನ್ನು ಸ್ಫೀಕರ್‌ನಲ್ಲಿ ಹಾಕುವಂತೆ ಹೇಳಿದ್ದರು. ಶಿಕ್ಷಕನ ಅಸಭ್ಯ ಮಾತು ಕೇಳಿ ಬಾಲಕಿಯ ತಾಯಿ ಬೆಚ್ಚಿಬಿದ್ದಿದ್ದರು. ಈ ಬಳಿಕ ಶಿಕ್ಷನ ಅಸಲಿ ಮುಖ ಬಹಿರಂಗಗೊಂಡಿದೆ. ನಂತರ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    ಹುಡುಗಿಯರು ಶಿಕ್ಷಕನ ವರ್ತನೆಯನ್ನು ವಿರೋಧಿಸಿದಾಗ, ಶಿಕ್ಷಕ ಆಟಗಳಲ್ಲಿ ಪದಕಗಳನ್ನು ಗೆಲ್ಲಲು ಸಹಾಯ ಮಾಡುವುದರಿಂದ ಆತನ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾನೆ ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ನವೀನ್ ಬೋರ್ಕರ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿನ್ನದ ಹುಡುಗಿಯ ಪರಿಸರ ಪ್ರೀತಿ – ಹುಟ್ಟುಹಬ್ಬಕ್ಕೆ ಗಿಡ ನೆಟ್ಟ ಮೀರಾಬಾಯಿ ಚಾನು

    ಚಿನ್ನದ ಹುಡುಗಿಯ ಪರಿಸರ ಪ್ರೀತಿ – ಹುಟ್ಟುಹಬ್ಬಕ್ಕೆ ಗಿಡ ನೆಟ್ಟ ಮೀರಾಬಾಯಿ ಚಾನು

    ಮುಂಬೈ: 2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಹಾಗೂ ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ವೇಟ್‌ಲಿಫ್ಟಿಂಗ್ ಕ್ರೀಡಾತಾರೆ ತಮ್ಮ ಹುಟ್ಟುಹಬ್ಬದಂದು ಪರಿಸರ ಪ್ರೀತಿ ಮೆರೆದಿದ್ದಾರೆ.

    ಇಂದು ವಿವಿಧೆಡೆ ಗಿಡಗಳನ್ನು ನೆಡುವ ಮೂಲಕ ಮೀರಾಬಾಯಿ ಚಾನು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೇ ಗಿಡಗಳನ್ನು ನೆಟ್ಟಿದ್ದು ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸಿದೆ ಎಂದು ಟ್ವೀಟ್‌ನಲ್ಲಿ ಬರೆದು, ಫೋಟೋಗಳನ್ನೂ ಹಂಚಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಶುಭಕೋರಿದ್ದಾರೆ. ಇದನ್ನೂ ಓದಿ: ಕಾಮನ್‌ವೆಲ್ತ್‌ಗೆ ತೆರಳಿದ್ದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆ – PBF

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಮಿರಾಬಾಯಿ ಚಾನು, `ದೇಶದ ಜನರ ಬೆಂಬಲ ನೋಡಿ ನಾನು ಉತ್ಸುಕಳಾಗಿದ್ದೇನೆ. ಅಲ್ಲದೇ ಕಾಮನ್‌ವೆಲ್ತ್‌ನಲ್ಲಿ ಚಿನ್ನ ಗೆದ್ದಾಗ ರಾಷ್ಟ್ರಗೀತೆ ನುಡಿಸುವ ವೇಳೆ ಎಲ್ಲರೂ ಗಟ್ಟಿಯಾಗಿ ಹಾಡಿದ್ದು, ಮತ್ತಷ್ಟು ಸ್ಫೂರ್ತಿ ನೀಡಿದಂತಾಗಿದೆ. ಸದ್ಯ ನಾನೀಗ ಗಾಯದ ಸಮಸ್ಯೆಗಳಿಂದ ಚೇತರಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?

    ಮೀರಾಬಾಯಿ ಚಾನು 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಪದಕ ಗೆದ್ದಿದರು. ಆದರೆ 2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಚಿನ್ನ ಗೆದ್ದು ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ಬರ್ಮಿಂಗ್‌ಹ್ಯಾಮ್: ಈ ಬಾರಿ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪ್ರತಿಷ್ಠಿತ ಕಾಮನ್‌ವೆಲ್ತ್ನಲ್ಲಿ 61 ಪದಗಳನ್ನು ಗೆದ್ದು ಬೀಗಿದ ಭಾರತ 4ನೇ ಸ್ಥಾನದೊಂದಿಗೆ ಹೊರಹೊಮ್ಮಿತು. ಈ ಬೆನ್ನಲ್ಲೇ 2026ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಎಲ್ಲಿ ನಡೆಯಲಿದೆ ಎನ್ನುವ ಅಧಿಕೃತ ಮಾಹಿತಿ ಹೊರಬಿದ್ದಿದೆ.

    ಮುಂದಿನ ಕಾಮನ್‌ವೆಲ್ತ್ ಗೇಮ್ಸ್ 2026ಕ್ಕೆ ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿ ನಡೆಯಲಿದೆ. 2026ರ ಮಾರ್ಚ್ 17 ರಿಂದ ಮಾರ್ಚ್ 29ರ ವರೆಗೆ ನಡೆಯಲಿದ್ದು, ಸುಮಾರು 20 ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು ಕಾಮನ್‌ವೆಲ್ತ್ ಕ್ರೀಡಾಮಂಡಳಿ ತಿಳಿಸಿದೆ. ಇದನ್ನೂ ಓದಿ: CWG 2022: ಬ್ಯಾಡ್ಮಿಂಟನ್‍ನಲ್ಲಿ 20ರ ಹರೆಯದ ಯುವಕನಿಗೆ ಚಿನ್ನದ ಹಾರ – ದಿಗ್ಗಜರ ಸಾಲಿಗೆ ಸೇರಿದ ಲಕ್ಷ್ಯ ಸೇನ್

    ಈ ಬಾರಿ ಬರ್ಮಿಂಗ್‌ಹ್ಯಾಂನಲ್ಲಿ ನಡೆದ ಕಾಮನ್‌ವೆಲ್ತ್ನಲ್ಲಿ ಒಟ್ಟು 61 ಪದಕಗಳನ್ನು ಗೆದ್ದು, ಭಾರತ 4ನೇ ಸ್ಥಾನ ಗಳಿಸಿದೆ. 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚಿನ ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ಹೊರಹೊಮ್ಮಿದೆ. 2010ಲ್ಲಿಯೂ ಭಾರತ 38 ಚಿನ್ನ ಸೇರಿದಂತೆ 101 ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನ ನೀಡಿತ್ತು. ಮ್ಯಾಂಚೆಸ್ಟರ್-2002ರಲ್ಲಿ 69 ಪದಕ, ಗೋಲ್ಡ್ ಕೋಸ್ಟ್-2018ರಲ್ಲಿ 66 ಪದಕ ಹಾಗೂ ಗ್ಲಾಸ್ಗೋ-2014ರಲ್ಲಿ 64 ಪದಕಗಳನ್ನು ಭಾರತ ಮುಡಿಗೇರಿಸಿಕೊಂಡಿತ್ತು.

    ಯಾವ ಕ್ರೀಡೆಯಲ್ಲಿ ಎಷ್ಟು ಪದಕ: ಕುಸ್ತಿಯಲ್ಲಿ 6 ಚಿನ್ನ, 1 ಬೆಳ್ಳಿ, 5 ಕಂಚು. ಟೇಬಲ್ ಟೆನ್ನಿಸ್‌ನಲ್ಲಿ 4 ಚಿನ್ನ, 1 ಬೆಳ್ಳಿ, 2 ಕಂಚು. ವೈಟ್‌ಲಿಫ್ಟಿಂಗ್‌ನಲ್ಲಿ 3 ಚಿನ್ನ, 3 ಬೆಳ್ಳಿ, 4 ಕಂಚು. ಬಾಕ್ಸಿಂಗ್‌ನಲ್ಲಿ 3 ಚಿನ್ನ, 1 ಬೆಳ್ಳಿ, 3 ಕಂಚು. ಬ್ಯಾಡ್ಮಿಂಟನ್‌ನಲ್ಲಿ 3 ಚಿನ್ನ, 1 ಬೆಳ್ಳಿ, 2 ಕಂಚು. ಅಥ್ಲೆಟಿಕ್ಸ್ನಲ್ಲಿ 1 ಚಿನ್ನ, 4 ಬೆಳ್ಳಿ, 3 ಕಂಚು. ಲಾನ್ ಬೌಲ್ಸ್ನಲ್ಲಿ 1 ಚಿನ್ನ, 1 ಬೆಳ್ಳಿ. ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ 1 ಚಿನ್ನ. ಜುಡೋದಲ್ಲಿ 2 ಬೆಳ್ಳಿ, 1 ಕಂಚು. ಹಾಕಿಯಲ್ಲಿ 1 ಬೆಳ್ಳಿ, 1 ಕಂಚು. ಕ್ರಿಕೆಟ್‌ನಲ್ಲಿ 1 ಬೆಳ್ಳಿ. ಸ್ಕ್ವಾಷ್‌ನಲ್ಲಿ 2 ಕಂಚು.

    ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದ ಕೊಹ್ಲಿ: ಈ ಬಾರಿ ಕಾಮನ್‌ವೆಲ್ತ್‌ನಲ್ಲಿ ಪ್ರಶಸ್ತಿ ವಿಜೇತರಿಗೆ ಶುಭ ಕೋರಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ನೀವು ನಮ್ಮ ದೇಶಕ್ಕೆ ದೊಡ್ಡ ಪ್ರಶಸ್ತಿಗಳನ್ನೇ ತಂದಿದ್ದೀರಿ. ಎಲ್ಲಾ ವಿಜೇತರು ಹಾಗೂ ಕಾಮನ್‌ವೆಲ್ತ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು. ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ’ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿಮ್ಮದು ಅದ್ಭುತ ಸಾಧನೆ – ಪಿ.ವಿ ಸಿಂಧುರನ್ನ ಹೊಗಳಿದ ಆಸ್ಟ್ರೇಲಿಯಾ ಸ್ಟಾರ್ ಡೇವಿಡ್ ವಾರ್ನರ್

    ನಿಮ್ಮದು ಅದ್ಭುತ ಸಾಧನೆ – ಪಿ.ವಿ ಸಿಂಧುರನ್ನ ಹೊಗಳಿದ ಆಸ್ಟ್ರೇಲಿಯಾ ಸ್ಟಾರ್ ಡೇವಿಡ್ ವಾರ್ನರ್

    ಬರ್ಮಿಂಗ್‌ಹ್ಯಾಮ್: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆಯಾಗಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಕಾಮನ್‌ವೆಲ್ತ್ನಲ್ಲಿ ಚಿನ್ನ ಗೆದ್ದ ಸಾಧನೆಯನ್ನು ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಹೊಗಳಿದ್ದಾರೆ.

    ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದನ್ನೂ ಓದಿ: ಎದ್ದು ಬಿದ್ದು ಬ್ಯಾಟಿಂಗ್‌ಗೆ ಆಗಮಿಸಿದ ಯಾಸ್ತಿಕಾ ಭಾಟಿಯಾ – ಬಿದ್ದು ಬಿದ್ದು ನಕ್ಕ ಸ್ಮೃತಿ, ಕೌರ್

    ಫೈನಲ್ ಪಂದ್ಯದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ನೇರ ಸೆಟ್‌ಗಳಿಂದ ಪಂದ್ಯವನ್ನು ಗೆದ್ದು ಸತತ ಮೂರು ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಸಿಂಧು ಅವರ ಈ ಸಾಧನೆಯನ್ನು ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಹೊಗಳಿದ್ದಾರೆ. ಇದನ್ನೂ ಓದಿ: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

    `ಸಿಂಧು ಅವರು ಪದಕ ಪಡೆದ ಚಿತ್ರವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದು, `ವೆಲ್‌ಡನ್ ಪಿ.ವಿ.ಸಿಂಧು, ಕಾಮನ್‌ವೆಲ್ತ್ನಲ್ಲಿ ಚಿನ್ನಗೆದ್ದು ಅದ್ಭುತ ಸಾಧನೆ ಮಾಡಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

    ಪಿ.ವಿ.ಸಿಂಧು ಈ ಹಿಂದೆ 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚು ಗೆದ್ದಿದ್ದರು. 2018 ರಲ್ಲಿ ಸೈನಾ ನೆಹ್ವಾಲ್ ವಿರುದ್ಧ ಸೋತು ಬೆಳ್ಳಿ ಗೆದ್ದಿದ್ದ ಸಿಂಧು, ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ಮೂಲಕ ಕನಸು ನನಸು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

    Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

    – 34 ರನ್‌ಗಳಿಗೆ 8 ವಿಕೆಟ್‌ ಪತನ

    ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್‌ ಗೇಮ್ಸ್‌ ಕ್ರಿಕೆಟ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಮಹಿಳೆಯರು ಸ್ವಲ್ಪದರಲ್ಲೇ ಚಿನ್ನದ ಪದಕದಿಂದ ವಂಚಿತರಾಗಿದ್ದಾರೆ. ರೋಚಕ ಫೈನಲ್‌ನಲ್ಲಿ ಆಸ್ಟ್ರೇಲಿಯಾ 9 ರನ್‌ಗಳಿಂದ ಇಂಡಿಯಾವನ್ನು ಸೋಲಿಸಿ ಚೊಚ್ಚಲ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಕ್ರಿಕೆಟ್‌ ಸೇರಿಸಲಾಗಿತ್ತು.

    ಗೆಲ್ಲಲು 162 ರನ್‌ಗಳ ಗುರಿಯನ್ನು ಪಡೆದ ಭಾರತ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡಿದ್ದರೂ ನಾಯಕಿ ಹರ್ಮನ್‌ಪ್ರೀತ್‌ ಕೌರ್‌, ಜೆಮಿಮಾ ರಾಡಿಗ್ರಾಸ್‌ ಹೋರಾಟದಿಂದ ಗೆಲುವಿನ ಹಂತದವರೆಗೆ ತಲುಪಿತ್ತು. ಆದರೆ ಕೊನೆಯಲ್ಲಿ ವಿಕೆಟ್‌ ಕಳೆದುಕೊಳ್ಳುವುದರೊಂದಿಗೆ ಅಂತಿಮವಾಗಿ 19.3 ಓವರ್‌ಗಳಲ್ಲಿ 152 ರನ್‌ಗಳಿಗೆ ಆಲೌಟ್‌ ಆಯ್ತು.

    ಚೇಸ್‌ ಮಾಡಿದ್ದ ಭಾರತ 22 ರನ್‌ಗಳಿಸುವಷ್ಟರಲ್ಲೇ ಆರಂಭಿಕ ಇಬ್ಬರು ಆಟಗಾರ್ತಿಯರಾದ ಸ್ಮೃತಿ ಮಂದನಾ ಮತ್ತು ಶಫಾಲಿ ವರ್ಮಾ ಅವರ ವಿಕೆಟ್‌ ಕಳೆದುಕೊಂಡಿತ್ತು. ಈ ಹಂತದಲ್ಲಿ ಜೊತೆಯಾದ ಜೆಮಿಮಾ ಮತ್ತು ಕೌರ್‌ ನಿಧನವಾಗಿ ಆಡಿ ಇನ್ನಿಂಗ್ಸ್‌ ಕಟ್ಟತೊಡಗಿದರು. ಇವರಿಬ್ಬರು ಮೂರನೇ ವಿಕೆಟಿಗೆ 71 ಎಸೆತಗಳಲ್ಲಿ 96 ರನ್‌ ಜೊತೆಯಾಟವಾಡಿದಾಗ ಗೆಲುವಿನ ಆಸೆ ಚಿಗುರಿತ್ತು. ಆದರೆ ಇವರಿಬ್ಬರು ಔಟಾದ ಬೆನ್ನಲ್ಲೇ ಟೀಂ ಇಂಡಿಯಾದ ಪತನ ಆರಂಭವಾಯಿತು.

    14.3 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 118 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಭಾರತ ನಂತರ 34 ರನ್‌ ಗಳಿಸುವಷ್ಟರಲ್ಲಿ 8 ವಿಕೆಟ್‌ ಕಳೆದುಕೊಂಡಿತ್ತು. ಮಧ್ಯಮ ಕ್ರಮಾಂಕ ಮತ್ತು ಬೌಲರ್‌ಗಳಿಂದ ಬ್ಯಾಟಿಂಗ್‌ ಪ್ರದರ್ಶನ ಬಾರದ ಕಾರಣ ಪಂದ್ಯವನ್ನು ಕೈಚೆಲ್ಲಿತು. ಇದನ್ನೂ ಓದಿ: CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    ಹರ್ಮನ್‌ ಪ್ರೀತ್‌ ಕೌರ್‌ 65 ರನ್‌(43 ಎಸೆತ, 7 ಬೌಂಡರಿ, 2 ಸಿಕ್ಸರ್)‌, ಜೆಮಿಮಾ 33 ರನ್‌(33 ಎಸೆತ, 3 ಬೌಂಡರಿ) ದೀಪ್ತಿ ಶರ್ಮಾ 13 ರನ್‌ ಗಳಿಸಿ ಔಟಾದರು.

    ಟಾಸ್‌ ಸೋತು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯಾ ಪರವಾಗಿ ಬೆಥ್‌ ಮೂನಿ 61 ರನ್‌(41 ಎಸೆತ, 8 ಬೌಂಡರಿ) ಮೆಗ್‌ ಲ್ಯಾನಿಂಗ್‌ 36 ರನ್‌(26 ಎಸೆತ, 5 ಬೌಂಡರಿ, 1 ಸಿಕ್ಸರ್‌), ಗಾರ್ಡ್‌ನರ್‌ 25 ರನ್‌(15 ಎಸೆತ, 2 ಬೌಂಡರಿ, 1 ಸಿಕ್ಸರ್‌) ಹೊಡೆದ ಪರಿಣಾಮ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 161 ರನ್‌ ಗಳಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿಂದು 3ನೇ ಚಿನ್ನದ ಪದಕ ಭಾರತದ ಪಾಲಾಗಿದೆ. ಗೇಮ್ಸ್‌ನಲ್ಲಿ ಒಟ್ಟಾರೆಯಾಗಿ ಇಂದು ಒಂದೇ ದಿನದಲ್ಲಿ 4 ಚಿನ್ನದ ಬೇಟೆಯಾಡಿದ ಕೀರ್ತಿಯನ್ನು ಭಾರತ ಸಂಪಾದಿಸಿದೆ.

    50 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್‌ನಲ್ಲಿ ನಿಖತ್ ಜರೀನ್ ಭರ್ಜರಿ ಗೆಲುವಿನೊಂದಿಗೆ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಇದಕ್ಕೂ ಮುನ್ನ 48 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ನೀತು ಗಂಗಾಸ್ ಹಾಗೂ 51 ಕೆಜಿ ಪುರುಷರ ವಿಭಾಗದಲ್ಲಿ ಅಮಿತ್ ಪಂಗಲ್ ಭರ್ಜರಿ ಜಯ ಸಾಧಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

    10ನೇ ದಿನದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 4 ಚಿನ್ನದ ಪದಕಗಳು ಲಭಿಸಿವೆ. ಟ್ರಿಪಲ್ ಜಂಪ್‌ನಲ್ಲಿ ಒಂದು ಹಾಗೂ ಬಾಕ್ಸಿಂಗ್‌ನಲ್ಲಿ 3 ಚಿನ್ನದ ಪದಕ ಪಡೆದಿದೆ.

    ಬೆಳ್ಳಿ ಕಿರಣ ಮೂಡಿಸಿದ ಕಮಲ್‌ -ಸತ್ಯನ್‌: ಇಂದಿನ ಪುರುಷರ ಡಬಲ್ಸ್ ಟೇಬಲ್‌ ಟೆನ್ನಿಸ್‌ ಭಾರತದ ಶರತ್ ಕಮಲ್ ಹಾಗೂ ಸತ್ಯನ್‌ ಜ್ಞಾನ ಶೇಖರನ್‌ ಬೆಳ್ಳಿ ಪದಕ ಗೆದ್ದಿದ್ದಾರೆ.

    ಆದರೆ ಇನ್ನೊಂದೆಡೆ ಮಹಿಳೆಯರ ವಿಭಾಗದ ಟೇಬಲ್‌ ಟೆನ್ನಿಸ್‌ ನಲ್ಲಿ ಭಾರತದ ಶ್ರೀಜಾ ಅಕುಲಾ ಅವರು ಪ್ಲೇ ಆಫ್‌ನಲ್ಲಿ ಆಸ್ಟ್ರೇಲಿಯಾದ ಯಾಂಗ್ಜಿ ಲಿಯು ವಿರುದ್ಧ 3-4 ಅಂತರದಲ್ಲಿ ಸೋಲನ್ನು ಕಂಡಿದ್ದಾರೆ. ಒಂದೂವರೆ ಗಂಟೆಗಳಿಗೂ ಅಧಿಕಕಾಲ ಸೆಣಸಿದ ಅವರು 3 6-11 2-11 11-7 13-15 11-9 7-11 ಅಂತರದಲ್ಲಿ ಪರಾಭವಗೊಂಡಿದ್ದು, ಕಂಚಿನ ಪದಕದಿಂದ ವಂಚಿತರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿ ಎರಡು ಚಿನ್ನದ ಪದಕಗಳು ಭಾರತದ ಪಾಲಾಗಿವೆ.

    48 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ನೀತು ಗಂಗಾಸ್ ಹಾಗೂ 51 ಕೆಜಿ ಪುರುಷ ವಿಭಾಗದಲ್ಲಿ ಅಮಿತ್ ಪಂಗಲ್ ಭರ್ಜರಿ ಜಯ ಸಾಧಿಸಿದ್ದು, ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

    ಪುರುಷರ ಫ್ಲೈವೇಟ್‌ನಲ್ಲಿ ಎದುರಾಳಿಯಾಗಿದ್ದ ಯುರೋಪಿಯನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಇಂಗ್ಲೆಂಡ್‌ನ ಕಿಯಾರನ್ ಮ್ಯಾಕ್‌ಡೊನಾಲ್ಡ್ ಅವರನ್ನು 5-0 ಅಂತರದಿಂದಲ್ಲಿ ಮಣಿಸುವ ಮೂಲಕ ಪಂಗಲ್ ಚಿನ್ನದ ಹಾರಕ್ಕೆ ಕೊರಳೊಡ್ಡಿದರು. 2018ರ  ಕಾಮನ್‌ವೆಲ್ತ್ ಆವೃತ್ತಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದ ಪಂಗಾಲ್ ಈ ಬಾರಿ ಉತ್ತಮ ಪ್ರದರ್ಶನದಿಂದ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರ ಹಾಕಿಯಲ್ಲಿ ರೋಚಕ ಕಾದಾಟ – ಪೆನಾಲ್ಟಿ ಶೂಟೌಟ್‍ನಲ್ಲಿ ಗೆದ್ದು ಕಂಚು ಮುಡಿಗೇರಿಸಿಕೊಂಡ ಭಾರತ

    ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತರಾಗಿದ್ದ ನೀತು ಗಂಗಾಸ್ ಇಂಗ್ಲೆಂಡ್‌ನ ಡೆಮಿ-ಜೇಡ್ ರೆಸ್ಟನ್ ರನ್ನು 5-0 ಅಂತರದಲ್ಲಿ ಬಗ್ಗು ಬಡಿಯುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದಾರೆ.

    ಸಿಂಧು ಫೈನಲ್‌ಗೆ ಎಂಟ್ರಿ: 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತರಾದ ಸಿಂಧು ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಸಿಂಗಾಪುರದ ಯೆಯೂ ಜಿಯಾಮಿನ್ ಅವರೊಂದಿಗೆ 49 ನಿಮಿಷಗಳ ಕಾಲ ಸೆಣಸಿದ ಸಿಂಧು ಜಿಯಾಮಿನ್ ಅವರನ್ನು 21-19, 21-17 ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆಯನ್ನೂ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]