Tag: sports

  • ಸಿಂಧುಗೆ ಜಯ – ಭಾರತಕ್ಕೆ ಕಂಚಿನ ಸಿಂಧೂರ

    ಸಿಂಧುಗೆ ಜಯ – ಭಾರತಕ್ಕೆ ಕಂಚಿನ ಸಿಂಧೂರ

    ಟೋಕಿಯೋ: ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ  ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.

    ಇಂದು ನಡೆದ ಪಂದ್ಯದಲ್ಲಿ ಚೀನಾದ ಬಿಂಗ್ ಜಿಯಾವೋ ವಿರುದ್ಧ 21-13, 21-15 ನೇರ ಸೆಟ್‍ಗಳಿಂದ ಜಯಗಳಿಸಿ ಕಂಚಿನ ಪದಕ ಗೆದ್ದಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಸಿಂಧು ಫೈನಲ್ ನಲ್ಲಿ ಸೋತು ಬೆಳ್ಳಿ ಪದಕವನ್ನು ಗೆದ್ದಿದ್ದರು.

    ನಿನ್ನೆ ನಡೆದ ಪಂದ್ಯದಲ್ಲಿ ವಿಶ್ವದ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧ ಸಿಂಧು ಸೋಲನ್ನು ಅನುಭವಿಸಿದ್ದರು. ಇಂದು ಆರಂಭದಿಂದಲೇ ಭರ್ಜರಿ ಆಟ ಪ್ರದರ್ಶಿಸಿ ಎದುರಾಳಿಯನ್ನು ಸೋಲಿಸಿ ಭಾರತಕ್ಕೆ ಎರಡನೇ ಪದಕವನ್ನು ತಂದುಕೊಟ್ಟಿದ್ದಾರೆ. ಇದನ್ನೂ ಓದಿ : ಡಿಸ್ಕಸ್ ಥ್ರೋನಲ್ಲಿ ಕಮಲ್‍ಪ್ರೀತ್ ಅಚ್ಚರಿ- ಫೈನಲ್‍ಗೆ ಲಗ್ಗೆ

    ಪುರುಷರ 66 ಕೆಜಿ ಕುಸ್ತಿ ವಿಭಾಗದಲ್ಲಿ ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು, 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

  • ಟೋಕಿಯೋ ಒಲಿಂಪಿಕ್​ನಲ್ಲಿರುವ ಜೋಡಿ ಹಕ್ಕಿಗಳಿವರು

    ಟೋಕಿಯೋ ಒಲಿಂಪಿಕ್​ನಲ್ಲಿರುವ ಜೋಡಿ ಹಕ್ಕಿಗಳಿವರು

    ಟೋಕಿಯೋ: ವಿಶ್ವದ ಕ್ರೀಡಾ ಹಬ್ಬ ಒಲಿಂಪಿಕ್ಸ್ ಈ ಬಾರಿ ಜಪಾನ್‍ನ ಟೋಕಿಯೋದಲ್ಲಿ ನಡೆಯುತ್ತಿದೆ. ಇಲ್ಲಿ ಭಾರತದ ದಂಪತಿ ಸಹಿತ ಕೆಲ ಜೋಡಿಗಳು ಸ್ಪರ್ಧಿಗಳಾಗಿ ತಮ್ಮ ತಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

    ಒಲಿಂಪಿಕ್ಸ್ ನಲ್ಲಿ ತಮ್ಮ ದೇಶಕ್ಕಾಗಿ ಪದಕ ಬೇಟೆಗೆ ಸಿದ್ಧವಾಗಿರುವ ಕ್ರೀಡಾಪಟುಗಳಲ್ಲಿ ಕೆಲ ದಂಪತಿ ಒಟ್ಟಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇವರಲ್ಲಿ ಕೆಲವರು ಈಗಾಗಲೇ ಮದುವೆ ಆಗಿದ್ದರೆ, ಕೆಲವರು ಡೆಟಿಂಗ್‍ನಲ್ಲಿದ್ದಾರೆ. ಕೆಲವರು ಎಂಗೆಂಜ್ ಆದವರು ಕೂಡ ಇದ್ದಾರೆ.

    ಟೋಕಿಯೋ ಒಲಿಂಪಿಕ್ಸ್ ಭಾಗವಹಿಸಿದ ಭಾರತದ ಹೆಮ್ಮೆಯ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ ಮತ್ತು ಅತನುದಾಸ್ ಮೊದಲನೇ ಜೋಡಿ ಹಕ್ಕಿ ಇವರು ಒಲಿಂಪಿಕ್ಸ್ ಭಾಗವಹಿಸುವ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದರು. ಇದೀಗ ಒಟ್ಟಿಗೆ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಆರ್ಚರಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನೂ ಓದಿ: ಡಿಸ್ಕಸ್ ಥ್ರೋನಲ್ಲಿ ಕಮಲ್‍ಪ್ರೀತ್ ಅಚ್ಚರಿ- ಫೈನಲ್‍ಗೆ ಲಗ್ಗೆ

    ಎರಡನೇ ಜೋಡಿ ಅಮೆರಿಕದ ತಾರಾ ಡೇವಿಸ್ ಮತ್ತು ಹಂಟರ್ ವುಡ್ಹಾಲ್ ಆಗಿದ್ದು, ಇವರಿಬ್ಬರೂ ಕೂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಕೂಡ ಪದಕ ಗೆಲ್ಲುವ ನಿರೀಕ್ಷೆ ಹೊಂದಿದ್ದಾರೆ.

    ಮೂರನೇ ಜೋಡಿ ಇಂಗ್ಲೆಂಡ್‍ನ ಲಾರಾ ಮತ್ತು ಜೇಸನ್ ಕೆನ್ನಿ ಇವರಿಬ್ಬರು ಕೂಡ ತಮ್ಮ ದೇಶದ ಪರವಾಗಿ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಜೊತೆಯಾಗಿ ಸ್ಪರ್ಧಿಸುವ ದಂಪತಿ ಈ ಹಿಂದಿನ ಕ್ರೀಡಾಕೂಟಗಳಲ್ಲಿ ಹತ್ತಕ್ಕೂ ಹೆಚ್ಚು ಚಿನ್ನದ ಪದಕವನ್ನು ಗೆದ್ದಿದ್ದಾರೆ.

    ಸ್ಯಾಂಡಿ ಮೋರಿಸ್ ಅಮೆರಿಕ ಪರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ವಿಭಾಗದಲ್ಲಿ ಸ್ಪರ್ಧಿಸಿದರೆ, ಗಂಡ ಟೈರೋನ್ ಸ್ಮಿತ್ ಅಮೆರಿಕ ಪರ ಲಾಂಕ್ ಜಂಪ್ ಸ್ಪರ್ಧಿಯಾಗಿದ್ದಾರೆ. ಇವರಿಬ್ಬರೂ ಕೂಡ 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಒಲಿಂಪಿಕ್ಸ್‍ನಲ್ಲಿ ತಮ್ಮ ದೇಶದ ಪರ ಆಡುತ್ತಿದ್ದಾರೆ.

    ಷಾರ್ಲೆಟ್ ಕಾಸ್ಲಿಕ್ ಮತ್ತು ಲೂಯಿಸ್ ಹಾಲೆಂಡ್ ಆಸ್ಟ್ರೇಲಿಯಾದ ಜೋಡಿ ಹಕ್ಕಿಗಳಾಗಿದ್ದು, ಇವರಿಬ್ಬರು ಕೂಡ ಆಸ್ಟ್ರೇಲಿಯಾದ ಪುರುಷ ಮತ್ತು ಮಹಿಳಾ ತಂಡದ ರಗ್ಬಿ ತಂಡದಲ್ಲಿದ್ದಾರೆ. ಕಳೆದ ವರ್ಷ ಇವರಿಬ್ಬರಿಗೆ ಮದುವೆ ನಿಶ್ಚಯವಾಗಿತ್ತು. ಆ ಬಳಿಕ ಕೋವಿಡ್‍ನಿಂದಾಗಿ ಮುಂದೂಡಲ್ಪಟ್ಟಿತ್ತು.

    ಗರೆಕ್ ಮೈನ್‍ಹಾರ್ಡ್ ಮತ್ತು ಲೀ ಕೀಫರ್ ದಂಪತಿ ಅಮೆರಿಕ ಪರ ಫೆನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ಈ ಬಾರಿ ಪದಕ ಗೆಲ್ಲುವ ನೆಚ್ಚಿನ ಜೋಡಿಯಲ್ಲಿ ಒಂದಾಗಿದೆ. ತಮ್ಮ ತಮ್ಮ ದೇಶಕ್ಕಾಗಿ ಕ್ರೀಡೆಯಲ್ಲಿ ಭಾಗವಹಿಸುತ್ತಿರುವ ಈ ಜೋಡಿ ಹಕ್ಕಿಗಳು ಆಟದೊಂದಿಗೆ ಟೋಕಿಯೋದಲ್ಲಿ ಕಂಗೊಳಿಸುತ್ತಿದ್ದು, ಯಾವ ಜೋಡಿ ಪದಕಗಳಿಗೆ ಕೊರಳೊಡ್ಡಿ ಸಿಹಿ ಅನುಭವಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ಭಾರತಕ್ಕೆ ಮತ್ತೊಂದು ಪದಕ ಖಚಿತ – ಸೆಮಿಗೆ ಲವ್ಲೀನಾ ಎಂಟ್ರಿ

    ಭಾರತಕ್ಕೆ ಮತ್ತೊಂದು ಪದಕ ಖಚಿತ – ಸೆಮಿಗೆ ಲವ್ಲೀನಾ ಎಂಟ್ರಿ

    ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು  ಪದಕ ಸಿಗುವುದು ಖಚಿತವಾಗಿದೆ. ಬಾಕ್ಸಿಂಗ್‍ನಲ್ಲಿ ಮಹಿಳಾ ಸ್ಪರ್ಧಿ ಲವ್ಲೀನಾ ಸೆಮಿಫೈನಲ್ ಪ್ರವೇಶಿಸಿದ್ದಾರೆ.

    ಮಹಿಳೆಯರ ವೆಲ್ಟರ್ ವೇಟ್ 64-69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಕಾದಾಟದಲ್ಲಿ ಲವ್ಲೀನಾ ಚೈನೀಸ್ ತೈಪೆ(ತೈವಾನ್) ಚಿನ್ ಚೀನ್ ಅವರನ್ನು 4-1 ಅಂಕದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಇದನ್ನೂ ಓದಿ : ಒಲಿಂಪಿಕ್ಸ್ ಡೋಪಿಂಗ್ ಪರೀಕ್ಷೆ- 18 ಅಥ್ಲೀಟ್ಸ್ ಅನರ್ಹ

    ಬಾಕ್ಸಿಂಗ್‍ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಎಲ್ಲರಿಗೂ ಪದಕ ಸಿಗಲಿದೆ. ಸೋತ ಇಬ್ಬರು ಸ್ಪರ್ಧಿಗಳಿಗೆ ಕಂಚಿನ ಪದಕವನ್ನು ನೀಡಲಾಗುತ್ತದೆ. ಜುಲೈ 24 ರಂದು ಮೀರಾಬಾಯಿ ಚಾನು ಅವರು ವೇಟ್ ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕವನ್ನು ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದರು.

  • ವಿಶ್ವ ಚಾಂಪಿಯನ್‍ಶಿಪ್ – ಕುಸ್ತಿಯಲ್ಲಿ ಸ್ವರ್ಣ ಗೆದ್ದ ಪ್ರಿಯಾ ಮಲಿಕ್

    ವಿಶ್ವ ಚಾಂಪಿಯನ್‍ಶಿಪ್ – ಕುಸ್ತಿಯಲ್ಲಿ ಸ್ವರ್ಣ ಗೆದ್ದ ಪ್ರಿಯಾ ಮಲಿಕ್

    ನವದೆಹಲಿ: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ ಸಿಕ್ಕಿದೆ. ಆದರೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಅಲ್ಲ. ಹಂಗೇರಿಯಲ್ಲಿ ನಡೆದ ಕೆಡೆಟ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಕುಸ್ತಿಯಲ್ಲಿ ಸ್ವರ್ಣ ಗೆದ್ದ ಪ್ರಿಯಾ ಮಲಿಕ್ ಗೆದ್ದಿದ್ದಾರೆ.

    ಜಪಾನ್‍ಗೆ ಸಾವಿರ ಮೈಲುಗಳ ದೂರದಲ್ಲಿರುವ ಹಂಗೇರಿಯ  ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್‍ಷಿಪ್‍ನಲ್ಲಿ ಭಾರತದ ಉದಯೋನ್ಮುಖ ಕುಸ್ತಿಪಟು ಪ್ರಿಯಾ ಮಲಿಕ್ ಸ್ವರ್ಣ ಸಾಧನೆ ಮೆರೆದಿದ್ದಾರೆ. ಹಂಗರಿಯಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್‍ಶಿಪ್‍ನಲ್ಲಿ ಕುಸ್ತಿಪಟು ಪ್ರಿಯಾ ಮಲಿಕ್ ಅವರು ಚಿನ್ನವನ್ನು ಗೆದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಪತಾಕೆ ಹಾರಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2021 ರಲ್ಲಿ ನಿನ್ನೆ ಮೀರಾಬಾಯಿ ಚಾನು ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಗೆದ್ದಿದ್ದಾರೆ. ನಂತರ ಮಹಿಳೆಯೊಬ್ಬರು ದೇಶಕ್ಕೆ ವೈಭವ ತರುವ ಸಂತೋಷದ ಸುದ್ದಿ ಇದಾಗಿದೆ. ಇದನ್ನೂ ಓದಿ:  ಖ್ಯಾತ ನಟಿಯ ಕಾರು ಅಪಘಾತ – ಸ್ನೇಹಿತೆ ದಾರುಣ ಸಾವು

    ಟೋಕಿಯೊ ಒಲಂಪಿಕ್ಸ್ ನ ನಡುವೆ ನಡೆದ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವುದಕ್ಕೆ ಮತ್ತೊಂದು ಕಾರಣವಾಗಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್‍ನ ಕುಸ್ತಿ ಪಟು ಕ್ಸೆನಿಯಾ ಪಟಾಪೊವಿಚ್‌ ಅವರನ್ನು 5-0 ಅಂತರದಿಂದ ಮಣಿಸಿದ್ದಾರೆ. ಅವರ ಸಾಧನೆಗೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಟೋಕಿಯೋ ಒಪಂಪಿಕ್ಸ್ ನಲ್ಲಿ ಮೀರಾಬಾಯ್ ಚನು ಅವರು ಮಹಿಳೆಯರ 49 ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ ಭಾರತಕ್ಕೆ ಕೆಡೆಟ್ ವಿಶ್ವ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

  • ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್  ಕಡೆಯಿಂದ ಜೀವನ ಪೂರ್ತಿ ಪಿಜ್ಜಾ

    ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಪಿಜ್ಜಾ

    ಟೋಕಿಯೋ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮೀರಾಬಾಯಿ ಅವರಿಗೆ ಡೊಮಿನೊಸ್ ಪಿಜ್ಜಾವನ್ನು ಜೀವನ ಪೂರ್ತಿಯಾಗಿ ಉಚಿತವಾಗಿ ಕೊಡುವುದಾಗಿ ಡೊಮಿನೊಸ್ ಇಂಡಿಯಾ ಟ್ವೀಟ್ ಮಾಡಿದೆ.

    ಭಾರತಕ್ಕೆ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಬಳಿಕ ಸಂದರ್ಶನವೊಂದರಲ್ಲಿ ಇಷ್ಟದ ತಿನಿಸಿನ ಬಗ್ಗೆ ಮಾತನಾಡಿದ್ದಾರೆ. ಈ ಮೆಡಲ್ ಸಿಕ್ಕ ಬಳಿಕ ನಿಮ್ಮ ಮೊದಲ ಕೆಲಸ ಏನಾಗಿರುತ್ತೆ ಅನ್ನೋ ಪ್ರಶ್ನೆಗೆ ಉತ್ತರಿಸಿದ ಮೀರಾಬಾಯಿ ಪಿಜ್ಜಾ ತಿನ್ನೋದೇ ನನ್ನ ಮೊದಲ ಅಸೆ ಅಂತ ಹೇಳಿದ್ದಾರೆ. ನನಗೆ ಪಿಜ್ಜಾ ಅಂದ್ರೆ ತುಂಬಾನೇ ಇಷ್ಟ. ಆದರೆ ಕೆಲ ದಿನಗಳಿಂದ ಪಿಜ್ಜಾ ತಿನ್ನದೇ ಇರೋದ್ರಿಂದ ಕೊಂಚ ಜಾಸ್ತಿನೇ ತಿಂತೀನಿ ಅಂತ ಮೀರಾ ನಗೆ ಚಟಾಕಿ ಹಾರಿಸಿದ್ದಾರೆ.

    ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೊಮಿನೊಸ್ ಇಂಡಿಯಾ ಮೀರಾಬಾಯಿ ಚಾನು ಹೇಳಿದ್ದು ನಮಗೆ ಕೇಳಿಸಿದೆ. ಇನ್ನು ಮುಂದೆ ಮೀರಾಬಾಯಿ ಚಾನು ಪಿಜ್ಜಾಗಾಗಿ ಕಾಯುವುದು ಬೇಡ. ಅವರಿಗೆ ಜೀವನ ಪೂರ್ತಿ ಉಚಿತ ಪಿಜ್ಜಾವನ್ನು ನೀಡಲಿದ್ದೇವೆ ಎಂದು ಹೇಳಿದೆ. ಈ ಕುರಿತು ಟ್ವಿಟರ್‍ನಲ್ಲಿ ಡೊಮಿನೊಸ್ ಇಂಡಿಯಾ ಬರೆದುಕೊಂಡಿದೆ. ಅಲ್ಲದೇ ಇಂಫಾಲ್‍ನಲ್ಲಿರುವ ಅವರ ಮನೆಗೆ ಚಾನು ಅವರ ಗೆಲುವನ್ನು ಸಂಭ್ರಮಿಸಲು ಪಿಜ್ಜಾ ಕಳುಹಿಸಿಕೊಟ್ಟಿದೆ. ಡೊಮಿನೊಸ್ ಸಂಸ್ಥೆ ಮಾಡಿರೋ ಟ್ವೀಟ್‍ಗೆ ಸಾವಿರಾರು ಜನ ಪ್ರತಿಕ್ರಿಯೆ ನೀಡಿದ್ದು, ದೇಶಕ್ಕೆ ಕೀರ್ತಿ ತಂದ ಮೀರಾಬಾಯಿ ಚಾನು ಅವರ ಆಸೆಯನ್ನ ಪೂರ್ತಿ ಮಾಡೋ ನಿಟ್ಟಿನ ಕೆಲಸ ಮಾಡುತ್ತಿರೋದಕ್ಕೆ ಧನ್ಯವಾದಗಳನ್ನ ಹೇಳಿದ್ದಾರೆ. ಇದನ್ನೂ ಓದಿ: ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಮೀರಾಬಾಯಿ ಚಾನು ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಭಾರತೀಯರ ನಿರೀಕ್ಷೆ ಹುಸಿಗೊಳಿಸದ ಮೀರಾ ಅವರು ಮೊದಲ ದಿನವೇ ಬೆಳ್ಳಿ ಪದಕ ಗೆದ್ದು ಶುಭಾರಂಭ ಮಾಡಿದ್ದಾರೆ. ಮೀರಾ ಅವರ ಗೆಲುವು ಭಾರತದ ಎಲ್ಲ ಕ್ರೀಡಾಪಟುಗಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುವಂತೆ ಮಾಡಿದೆ. ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

    49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟಿದ್ದಾರೆ. ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.

    84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು. ಇದು ಒಲಿಂಪಿಕ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಣರ್ಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕಣರ್ಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.

  • ಟಿ20 ಕ್ರಿಕೆಟ್‍ನಲ್ಲಿ ಗೇಲ್ ವಿಶ್ವದಾಖಲೆ ಆಟ – ವಿಂಡೀಸಿಗೆ ಸರಣಿ

    ಟಿ20 ಕ್ರಿಕೆಟ್‍ನಲ್ಲಿ ಗೇಲ್ ವಿಶ್ವದಾಖಲೆ ಆಟ – ವಿಂಡೀಸಿಗೆ ಸರಣಿ

    ಸೈಂಟ್ ಲೂಸಿಯಾ: ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟಿನಲ್ಲಿ 14 ಸಾವಿರ ರನ್‍ಗಳ ಗಡಿಯನ್ನು ದಾಟಿದ ವಿಶ್ವದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಗೇಲ್ ಪಾತ್ರವಾಗಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಜಂಪಾ ಎಸೆದ ಇನ್ನಿಂಗ್ಸ್ ನ  9ನೇ ಓವರ್ ನಲ್ಲಿ ಸಿಕ್ಸರ್ ಸಿಡಿಸಿ ಗೇಲ್ ಈ ದಾಖಲೆ ಬರೆದರು. ಮೂರನೇ ಟಿ20 ಪಂದ್ಯಕ್ಕೂ ಮೊದಲು ಗೇಲ್ 13,971 ರನ್ ಹೊಡೆದಿದ್ದರು.

    ಮೊದಲ ಎರಡು ಪಂದ್ಯದಲ್ಲಿ ಕ್ರಮವಾಗಿ 4, 13 ರನ್ ಹೊಡೆದಿದ್ದ ಗೇಲ್ ಮೂರನೇ ಪಂದ್ಯದಲ್ಲಿ 67 ರನ್(38 ಎಸೆತ, 4 ಬೌಂಡರಿ, 7 ಸಿಕ್ಸರ್) ಹೊಡೆದು ಔಟಾದರು.

    ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 141 ರನ್ ಹೊಡೆದರೆ ವಿಂಡೀಸ್ 14.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 142 ರನ್‍ಗಳಿಸಿ ಜಯಗಳಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ದಾಖಲೆಯೊಂದಿಗೆ 67 ರನ್ ಸಿಡಿಸಿದ ಗೇಲ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ : ಐಪಿಎಲ್‍ನಲ್ಲಿ ಸಿಕ್ಸರ್‌ಗಳ ದಾಖಲೆಯ ಒಡೆಯನಾದ ಕ್ರಿಸ್ ಗೇಲ್

    ಗೇಲ್ ನಂತರದ ಸ್ಥಾನವನ್ನು ವಿಂಡೀಸಿನ ಪೊಲಾರ್ಡ್(10,836 ರನ್), ಪಾಕಿಸ್ತಾನದ ಶೋಯೆಬ್ ಮಲ್ಲಿಕ್(10,074 ರನ್), ಆಸ್ಟ್ರೇಲಿಯಾದ ಡೇವಿಡ್ ವಾರ್ನರ್(10,017 ರನ್), ವಿರಾಟ್ ಕೊಹ್ಲಿ(9,992 ರನ್) ಪಡೆದಿದ್ದಾರೆ.

    2013ರಲ್ಲಿ ನಡೆದ ಐಪಿಎಲ್‍ಲ್ಲಿ ಗೇಲ್ ಆರ್‌ಸಿಬಿ ಪರ ಆಡಿ ಪುಣೆ ವಾರಿಯರ್ಸ್ ವಿರುದ್ಧ ಔಟಾಗದೇ 175 ರನ್ ಹೊಡೆದಿದ್ದರು. ಇದು ಟಿ20ಯಲ್ಲಿ ಗೇಲ್ ಅವರ ಅತ್ಯಧಿಕ ಮೊತ್ತವಾಗಿದೆ.

    ಗೇಲ್ ಒಟ್ಟು 431 ಟಿ20 ಪಂದ್ಯಗಳಿಂದ 14,038 ರನ್ ಚಚ್ಚಿದ್ದಾರೆ. 37.63 ಸರಾಸರಿ, 146.18 ಸ್ಟ್ರೈಕ್ ರೇಟ್ ನೊಂದಿಗೆ 22 ಶತಕ, 87 ಅರ್ಧಶತಕ ಹೊಡೆದಿದ್ದಾರೆ. 1083 ಬೌಂಡರಿ, 1028 ಸಿಕ್ಸರ್ ಸಿಡಿಸಿದ್ದಾರೆ.

  • ಗಂಡು ಮಗುವಿನ ತಂದೆಯಾದ ಹರ್ಭಜನ್ ಸಿಂಗ್

    ಗಂಡು ಮಗುವಿನ ತಂದೆಯಾದ ಹರ್ಭಜನ್ ಸಿಂಗ್

    ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಹರ್ಭಜನ್ ಸಿಂಗ್ ಗಂಡು ಮಗುವಿನ ತಂದೆಯಾಗಿದ್ದಾರೆ.

    ಹರ್ಭಜನ್ ಸಿಂಗ್ ಪತ್ನಿ ಗೀತಾ ಬಾಸ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ಹಂಚಿಕೊಂಡಿರುವ ಬಜ್ಜಿ, ಗಂಡು ಮಗುವಿನ ತಂದೆಯಾಗಿದ್ದೇನೆ ಎಂದು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ತಂದೆಯಾಗಿರುವ ಸಂತೋಷವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ನಾನು ಈ ಮೂರು ವಸ್ತುಗಳನ್ನು ಮರೆಯುತ್ತೇನೆ: ರಮ್ಯಾ

    ಗೀತಾ ಬಸ್ರಾ ಮತ್ತು ಮಗು ಆರೋಗ್ಯವಾಗಿದ್ದಾರೆ. ನಾವು ಸಂತೋಷದಲ್ಲಿ ಮುಳುಗಿದ್ದೇವೆ. ನಿಮ್ಮೆಲ್ಲಾ ಪ್ರೀತಿ-ಹಾರೈಕೆಗಳಿಗೆ ನಮ್ಮ ಧನ್ಯವಾದಗಳು. ಆರೋಗ್ಯವಂತ ಮಗುವನ್ನು ನಮಗೆ ಆಶೀರ್ವದಿಸಿದ್ದಕ್ಕಾಗಿ ಸರ್ವಶಕ್ತನಿಗೆ ಧನ್ಯವಾದಗಳು ಎಂದು ಸಿಂಗ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

    2015ರಲ್ಲಿ ಅಕ್ಟೋಬರ್‌ನಲ್ಲಿ ಗೀತಾ ಬಾಸ್ರಾ ಅವರನ್ನು ಹರ್ಭಜನ್ ವಿವಾಹವಾಗಿದ್ದರು. ಹರ್ಭಜನ್ ದಂಪತಿ ಈಗಾಗಲೇ ಹಿನಯಾ ಎಂಬ ಹೆಣ್ಣು ಮಗು ಇದ್ದು, 2016ರಲ್ಲಿ ಹೆಣ್ಣು ಮಗು ಜನಿಸಿತ್ತು. ಟೀಂ ಇಂಡಿಯಾದ ಶ್ರೇಷ್ಠ ಸ್ಪಿನ್ನರ್ ಎಂದರೇ ಖ್ಯಾತಿ ಪಡೆದಿರುವ 41 ವರ್ಷದ ಹರ್ಭಜನ್ ಸಿಂಗ್, 2016ರ ಏಷ್ಯಾಕಪ್‍ನಲ್ಲಿ ಟೀಂ ಇಂಡಿಯಾ ಪರ ಕೊನೆಯ ಪಂದ್ಯವಾಡಿದ್ದರು.

  • ಜಾರಕಿಹೊಳಿ ಶೀಘ್ರ ಆರೋಪ ಮುಕ್ತರಾಗುತ್ತಾರೆ : ನಾರಾಯಣಗೌಡ

    ಜಾರಕಿಹೊಳಿ ಶೀಘ್ರ ಆರೋಪ ಮುಕ್ತರಾಗುತ್ತಾರೆ : ನಾರಾಯಣಗೌಡ

    ಮಡಿಕೇರಿ: ಶಾಸಕ ರಮೇಶ್ ಜಾರಕಿಹೊಳಿ ಅವರ ಮೇಲಿರುವ ಆರೋಪಗಳೆಲ್ಲಾ ಆದಷ್ಟು ಬೇಗ ಆರೋಪ ಮುಕ್ತವಾಗಿ ಅವರು ಸದ್ಯದಲ್ಲೇ ಸಚಿವರಾಗುತ್ತಾರೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮಡಿಕೇರಿಯಲ್ಲಿ ಹೇಳಿಕೆ ನೀಡಿದ್ದಾರೆ.

    ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಸಂದರ್ಭ ಮಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಗೌಡ, ನನ್ನನ್ನು ರಾಜಕೀಯವಾಗಿ ಮುಗಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷದವರೊಂದಿಗೆ ನಮ್ಮದೇ ಪಕ್ಷದ ಕೆಲವರು ಸೇರಿ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಅಂತಹ ಯಾವುದೇ ಅಂಶಗಳು ನನ್ನ ಗಮನಕ್ಕೆ ಬಂದಿಲ್ಲ ಎಂದರು.

    ಕೆಳ ದಿನಗಳಲ್ಲಿ ಮತ್ತೆ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಅವರೊಂದಿಗೆ ಶಾಸಕ ಮುನಿರತ್ನ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು. ಬಳಿಕ ಯಡಿಯೂರಪ್ಪ ಅವರು ವಿವಿಧ ಕಾಮಗಾರಿಗಳಲ್ಲಿ 12.5 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಅವರು ಎಸಿಬಿ ತನಿಖೆಗೆ ಅವಕಾಶ ನೀಡುವಂತೆ ಕೋರ್ಟಿಗೆ ಹೋಗಿರುವ ವಿಷಯಕ್ಕೆ ಪ್ರತಿಕ್ರಿಯಿಸಿ, ಯಡಿಯೂರಪ್ಪನವರು ಈಗಲ್ಲ, ಹಿಂದಿನಿಂದಲೂ ನನಗೆ ಚೆನ್ನಾಗಿ ಗೊತ್ತು. ಅವರು ನಾವು ಒಂದೇ ಊರಿನವರು. ಅವರು ಅಂತಹ ಕೆಲಸ ಮಾಡಿರುವುದಿಲ್ಲ, ಮಾಡುವುದೂ ಇಲ್ಲ. ಕೋರ್ಟ್‍ಗೆ ಹೋದವರಿಗೆ ಅದು ಗೊತ್ತಾಗುತ್ತದೆ ಎಂದು ನುಡಿದರು.

  • ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

    ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

    ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ 10ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ:  67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ

    2020 ರ ಒಲಿಂಪಿಕ್ಸ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದಿದ್ದಾರೆ.

    ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ. ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್‍ನ ಟೋಕಿಯೋದಲ್ಲಿ ಹಾರಿಸಲಿ. ಮತ್ತಷ್ಟು ಕಠಿಣ ಶ್ರಮವಹಿಸಿ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಬೇಕು. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೆ ರಾಜ್ಯ ಸರ್ಕಾರ ಕರ್ನಾಟಕದಕ್ರೀಡಾ ಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿ ಶುಭಹಾರೈಸಿದ್ದಾರೆ.

    ಸಂಭವನೀಯ ಪಟ್ಟಿಯಲ್ಲಿರುವ ಕ್ರೀಡಾಪಟುಗಳು:
    ಪೌವಾದ್ ಮಿರ್ಜಾ – ಈಕ್ವೆಸ್ಟ್ರಿಯನ್ – ಆಯ್ಕೆಯಾಗಿದ್ದಾರೆ.
    ಎಸ್.ವಿ. ಸುನೀಲ್ – ಹಾಕಿ – ಸಂಭವನೀಯ
    ರೋಹನ್ ಬೋಪಣ್ಣ – ಟೆನ್ನಿಸ್ – ಸಂಭವನೀಯ
    ಶ್ರೀಹರಿ ನಟರಾಜ್ – ಈಜು – ಸಂಭವನೀಯ
    ಕುಮಾರಿ ಅದಿತಿ ಅಶೋಕ್ – ಗಾಲ್ಫ್ -ಸಂಭವನೀಯ

    ಪ್ರತಿಷ್ಕೃತ ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪೂರ್ವ ತಯಾರಿ ಮತ್ತು ಬೆಂಬಲದ ದ್ಯೋತಕವಾಗಿ ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳು ತಲಾ ರೂ.10.00 ಲಕ್ಷ ಪ್ರೋತ್ಸಾಹ ಧನ ನೀಡಿವೆ. ಅದೇ ರೀತಿ ಕರ್ನಾಟಕ ಸಹ ಕ್ರೀಡಾಪಟುಗಳಿಗೆ ನಗದು ನೀಡಲಾಗುತ್ತಿದೆ. ಇದನ್ನೂ ಓದಿ:  ಸಿಎಂಗೆ ರೆಬೆಲ್ ಶಾಸಕ ಯತ್ನಾಳ್ ಮತ್ತೆ ಟಾಂಗ್

    ಪ್ರೋತ್ಸಾಹಧನ ನೀಡುವ ಸಂಬಂಧ ಇತ್ತೀಚೆಗೆ ನಡೆದ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

  • ಅವಳಿ ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್

    ಅವಳಿ ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್

    ಜಮೈಕಾ: ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ತಾನು ಅವಳಿ ಗಂಡು ಮಕ್ಕಳಿಗೆ ತಂದೆಯಾಗಿರುವ ಸಂತೋಷವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನೀವೂ ಮಾಡಿ ಚಿಕನ್ ಕಟ್ಲೆಟ್

    ನನ್ನ ಪತ್ನಿ ಬೆನೆಟ್ ಅವಳಿ ಗಂಡು ಮಕ್ಕಳಿಗೆ ಜನ್ನ ನೀಡಿದ್ದಾಳೆ. ಒಬ್ಬ ಥಂಡರ್ ಬೋಲ್ಟ್, ಮತ್ತೂಬ್ಬ ಸೆಂಟ್ ಲಿಯೋ ಬೋಲ್ಟ್ ಎಂದು ಮಕ್ಕಳ ಹೆಸರಾಗಿದೆ ಎಂದು ಬರೆದುಕೊಂಡು ಮಕ್ಕಳ ಜೊತೆಗೆ ಕುಳಿತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Usain St.Leo Bolt (@usainbolt)

    ಬೋಲ್ಟ್ ದಂಪತಿಗೆ ಒಲಿಂಪಿಯಾ ಲೈಟ್ನಿಂಗ್ ಬೋಲ್ಟ್ ಹೆಸರಿನ ಮಗಳೂ ಇದ್ದಾಳೆ. ಇದೀಗ ಉಸೇನ್ ಅವಳಿ ಗಂಡು ಮಕ್ಕಳಿಗೆ ತಂದೆಯಾದ ಬೆನ್ನಲ್ಲೇ ಸಾಮಾಜಿ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನೆಟ್ಟಿಗರು ಸಖತ್ ಫನ್ನಿಯಾಗಿ ಕಮೆಂಟ್ ಮಾಡುತ್ತಿದ್ದಾರೆ. 2040ರ ಒಲಂಪಿಕ್ಸ್ ನಲ್ಲಿ ಓಟದಲ್ಲಿ ಉಸೇನ್ ಬೋಲ್ಟ್ ಅವಳಿ ಗಂಡು ಟ್ರ್ಯಾಕ್‍ನಲ್ಲಿ ಓಡುವುದನ್ನು ಕಲ್ಪಸಿಕೊಳ್ಳಿ ಎಂದು ನೆಟ್ಟಿಗರು ಕಮೆಂಟ್ ಮಡುತ್ತಿದ್ದಾರೆ.