Tag: sports

  • 41 ರನ್‌ಗಳಿಗೆ 7 ವಿಕೆಟ್‌ ಪತನ – 500 ರನ್‌ ಗಡಿಯಲ್ಲಿ ಭಾರತಕ್ಕೆ ಬಿಗ್‌ ಶಾಕ್‌!

    41 ರನ್‌ಗಳಿಗೆ 7 ವಿಕೆಟ್‌ ಪತನ – 500 ರನ್‌ ಗಡಿಯಲ್ಲಿ ಭಾರತಕ್ಕೆ ಬಿಗ್‌ ಶಾಕ್‌!

    ಲೀಡ್ಸ್‌: ಇಂಗ್ಲೆಂಡ್‌ (England) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ (Test Cricket) ಭಾರತ (Team) ಕೇವಲ 41 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಳ್ಳುವ ಮೂಲಕ 471 ರನ್‌ಗಳಿಗೆ ಆಲೌಟ್‌ ಆಗಿದೆ.

    ಮೊದಲ ದಿನವಾದ ಶುಕ್ರವಾರ ಭಾರತ 85 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 359 ರನ್‌ ಗಳಿಸಿ ಸುಭದ್ರ ಸ್ಥಿತಿಯಲ್ಲಿತ್ತು. ಆದರೆ ಇಂದು 28 ಓವರ್‌ಗಳಲ್ಲಿ 112 ರನ್‌ ಮಾತ್ರ ಗಳಿಸಿ ಅಂತಿಮವಾಗಿ 113 ಓವರ್‌ಗಳಲ್ಲಿ 471 ರನ್‌ಗಳಿಸಿ ಸರ್ವಪತನ ಕಂಡಿತು.

     

    ನಿನ್ನೆ 127 ರನ್‌ ಗಳಿಸಿದ್ದ ಶುಭಮನ್‌ ಗಿಲ್‌ ಇಂದು 147 ರನ್‌(227 ಎಸೆತ, 19 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಔಟಾದರು. ಗಿಲ್‌ ಔಟಾದಾಗ ತಂಡದ ಮೊತ್ತ 4 ವಿಕೆಟ್‌ ನಷ್ಟಕ್ಕೆ 430 ರನ್‌ ಗಳಿಸಿತ್ತು.

    ಗಿಲ್‌ ಔಟಾದ ಬೆನ್ನಲ್ಲೇ ಉಳಿದ ಮಧ್ಯಮ ಕ್ರಮಾಂಕದ ಆಟಗಾರರು ಕ್ರೀಸ್‌ನಲ್ಲಿ ಗಟ್ಟಿ ನಿಲ್ಲಲಿಲ್ಲ. ಕರಣ್‌ ನಾಯರ್‌ ಸೊನ್ನೆ ಸುತ್ತಿದರೆ, ರವೀಂದ್ರ ಜಡೇಜಾ 11 ರನ್‌, ಶಾರ್ದೂಲ್‌ ಠಾಕೂರ್‌ 1 ರನ್‌, ಬುಮ್ರಾ 0, ಸಿರಾಜ್‌ ಔಟಾಗದೇ 3 ರನ್‌ ಹೊಡೆದರೆ ಪ್ರಸಿದ್ಧ್‌ ಕೃಷ್ಣ 1 ರನ್‌ ಹೊಡೆದು ಔಟಾದರು. ಇದನ್ನೂ ಓದಿ: ಪಲ್ಟಿ ಹೊಡೆದು ಪಂತ್‌ ಶತಕ ಸಂಭ್ರಮ – ಧೋನಿ ರೆಕಾರ್ಡ್‌ ಬ್ರೇಕ್‌

     

    ನಾಯಕ ಗಿಲ್‌ ಮತ್ತು ಪಂತ್‌ 4ನೇ ವಿಕೆಟಿಗೆ 301 ಎಸೆತಗಳಲ್ಲಿ 209 ರನ್‌ ಜೊತೆಯಾಟವಾಡಿದ್ದರಿಂದ ತಂಡದ ಮೊತ್ತ 450 ರನ್‌ಗಳ ಗಡಿಯನ್ನು ದಾಟಿತು. ಈ ಜೊತೆಯಾಟದಲ್ಲಿ ಪಂತ್‌ 113 ರನ್‌ ಹೊಡೆದರೆ ಗಿಲ್‌ 84 ರನ್‌ ಹೊಡೆದಿದ್ದರು. ನಿನ್ನೆ 65 ರನ್‌ಗಳಿಸಿದ್ದ ಪಂತ್‌ ಇಂದು 134 ರನ್‌(178 ಎಸೆತ,12 ಬೌಂಡರಿ, 6 ಸಿಕ್ಸ್‌) ಸಿಡಿಸಿ ವಿಕೆಟ್‌ ಒಪ್ಪಿಸಿದರು.

    ಇಂಗ್ಲೆಂಡ್‌ ಪರ ಜೋಶ್ ಟಂಗ್ ಮತ್ತು ಬೆನ್‌ ಸ್ಟೋಕ್ಸ್‌ ತಲಾ 4 ವಿಕೆಟ್‌ ಕಿತ್ತರೆ, ಬ್ರೈಡನ್ ಕಾರ್ಸೆ ಮತ್ತು ಶೋಯೆಬ್‌ ಬಶೀರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

    ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

    ಬೆಂಗಳೂರು: ಈಗಲೇ ಕಪ್ ನಮ್ದೇ ಅಂತ ಹೇಳಬೇಡಿ. ಗೆದ್ದ ಮೇಲೆ ಹೇಳೋಣ ಎಂದು ಆರ್‌ಸಿಬಿ (RCB) ಮಾಜಿ ನಾಯಕ ಅನಿಲ್‌ ಕುಂಬ್ಳೆ (Anil Kumble) ಹೇಳಿದ್ದಾರೆ

    ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‌ಸಿಬಿ ತಂಡ ಚೆನ್ನಾಗಿ ಆಡುತ್ತಿದೆ. ಎರಡು ಬೆಸ್ಟ್‌ ತಂಡಗಳು ಫೈನಲ್‌ ಪ್ರವೇಶಿಸಿವೆ. ನಾನು ಎರಡು ತಂಡವನ್ನು ಪ್ರತಿನಿಧಿಸಿದ್ದೆ. ಆರ್‌ಸಿಬಿ ಗೆಲ್ಲಬೇಕೆಂದು ನಾನು ಹಾರೈಸುತ್ತೇನೆ ಎಂದು ತಿಳಿಸಿದರು.  ಇದನ್ನೂ ಓದಿ: ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

    ಕೊಹ್ಲಿ (Virat Kohl) ಉತ್ತಮವಾಗಿ ಆಡುತ್ತಿದ್ದು 600ಕ್ಕೂ ಅಧಿಕ ರನ್‌ ಹೊಡೆದಿದ್ದಾರೆ. ಸಂತೋಷದ ಸುದ್ದಿ ಏನೆಂದರೆ ಈ ಬಾರಿ ಹೊಸ ಐಪಿಎಲ್‌ ವಿನ್ನರ್‌ ಆಗುತ್ತಾರೆ. ಆರ್‌ಸಿಬಿ ಉತ್ತಮವಾಗಿ ಆಡುತ್ತಿದೆ. ಫೈನಲಿನಲ್ಲಿ ಆರ್‌ಸಿಬಿ ಗೆಲ್ಲಬೇಕು ಎಂದರು.

  • ಭಾರತ ಕೊಟ್ಟ ಏಟಿಗೆ ಡಿಆರ್‌ಎಸ್‌ ನಿಯಮವನ್ನೇ ಕೈಬಿಟ್ಟ ಪಿಎಸ್‌ಎಲ್‌!

    ಭಾರತ ಕೊಟ್ಟ ಏಟಿಗೆ ಡಿಆರ್‌ಎಸ್‌ ನಿಯಮವನ್ನೇ ಕೈಬಿಟ್ಟ ಪಿಎಸ್‌ಎಲ್‌!

    – ಪಾಕ್‌ ತೊರೆದ ಹಾಕ್‌ಐ ತಂತ್ರಜ್ಞರು
    – ಮೇ 17 ರಿಂದ ಟಿ-20 ಲೀಗ್‌ ಆರಂಭ

    ಕರಾಚಿ: ಭಾರತದ ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ಪಾಕಿಸ್ತಾನ ಸೂಪರ್‌ ಲೀಗ್‌ (PSL) ಮೇ 17 ರಿಂದ ಪುನಾರಂಭಗೊಂಡಿದ್ದರೂ ಪಂದ್ಯಗಳಲ್ಲಿ ತೀರ್ಪು ಮರು ಪರಿಶೀಲನಾ ನಿಯಮವನ್ನು(DRS) ಕೈಬಿಟ್ಟಿದೆ.

    ಡಿಆರ್‌ಎಸ್‌ಗೆ ಬೇಕಾಗಿರುವ ಹಾಕ್‌ಐ (Hawk-Eye) ಬಳಸಲು ಗೊತ್ತಿರುವ ತಂತ್ರಜ್ಞರು ಪಾಕಿಸ್ತಾನದಲ್ಲಿ (Pakistan) ಇಲ್ಲದ ಕಾರಣ ಈ ನಿಯಮನ್ನೇ ಕೈಬಿಡಲಾಗಿದೆ. ಟೂರ್ನಿ ಸ್ಥಗಿತಗೊಂಡ ಕಾರಣ ಹಾಕ್‌ಐ ತಂಡದ ಸದಸ್ಯರು ತಮ್ಮ ದೇಶಕ್ಕೆ ಮರಳಿದ್ದಾರೆ.

    ಪಿಎಸ್‌ಎಲ್‌ ಆರಂಭಗೊಂಡಿದ್ದರೂ ಹಾಕ್‌ಐ ತಂತ್ರಜ್ಞರು ಪಾಕಿಸ್ತಾನಕ್ಕೆ ಮರಳಲು ಹಿಂದೇಟು ಹಾಕಿದ್ದಾರೆ. ಪಾಕ್‌ನಲ್ಲಿ ಬೇರೆ ಯಾರಿಗೂ ಡಿಆರ್‌ಎಸ್ ಬಳಕೆಯ ಬಗ್ಗೆ ತಿಳಿಯದ ಕಾರಣ ಈ ನಿಯಮವನ್ನೇ ಟೂರ್ನಿಯಿಂದ ಕೈಬಿಡಲಾಗಿದೆ. ಹೀಗಾಗಿ ಅಂಪೈರ್ ನಿರ್ಧಾರವೇ ಅಂತಿಮವಾಗಿದ್ದು ಮರು ಪರಿಶೀಲನೆಗೆ ಆಟಗಾರರಿಗೆ ಅವಕಾಶವಿಲ್ಲದಂತಾಗಿದೆ.  ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

    ಪಿಎಸ್ಎಲ್‌ನ ಡಿಆರ್‌ಎಸ್‌ ಮತ್ತು ಹಾಕ್-ಐ ತಂತ್ರಜ್ಞಾನಗಳನ್ನು ನಿರ್ವಹಿಸುತ್ತಿದ್ದವರ ಪೈಕಿ ಹೆಚ್ಚಿನ ತಂತ್ರಜ್ಞರು ಭಾರತದವರೇ ಆಗಿದ್ದಾರೆ ಎಂದು ವರದಿಯಾಗಿದೆ. ಪಿಎಸ್‌ಎಲ್‌ನ ಕೊನೆಯ ಕೆಲವು ಪಂದ್ಯಗಳು ಡಿಆರ್‌ಎಸ್‌ ಇಲ್ಲದೇ ಪೂರ್ಣಗೊಳ್ಳುವ ಕಾರಣ ತಂಡಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಇದನ್ನೂ ಓದಿ: ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ: ಜೈಶಂಕರ್‌

    ಪುನರಾರಂಭದ ನಂತರದ ಮೊದಲ ಐದು ಪಂದ್ಯಗಳು ಯಾವುದೇ ವಿವಾದ ಇಲ್ಲದೇ ನಡೆದಿದೆ. ಪಿಎಸ್‌ಎಲ್ ಅಥವಾ ಪಿಸಿಬಿ ಡಿಆರ್‌ಎಸ್‌ ಕೈಬಿಟ್ಟ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

    ಭಾರತದ ಐಪಿಎಲ್‌ಗೆ ಪ್ರತಿಯಾಗಿ ಪಾಕಿಸ್ತಾನ ಪಿಎಸ್‌ಎಲ್‌ ಅನ್ನು 2017 ರಿಂದ ಆರಂಭಿಸಿದೆ. 2017 ರಿಂದ ಮೇ 7 ರವರೆಗೂ ಡಿಆರ್‌ಎಸ್‌ ನಿಯಮ ಜಾರಿಯಲ್ಲಿತ್ತು.

  • ದೋಹಾ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ

    ದೋಹಾ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ

    ದೋಹಾ: ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Niraj Chopra) ದೋಹಾ ಡೈಮಂಡ್ ಲೀಗ್ 2025ರಲ್ಲಿ(Doha Diamond League 2025) 90.23 ಮೀಟರ್ ಜಾವೆಲಿನ್ ಎಸೆದು ಭಾರತದ ಪರ ಇತಿಹಾಸ ಬರೆದಿದ್ದಾರೆ.

    ಶುಕ್ರವಾರ ಕತಾರ್‌ನ ಸುಹೀಮ್ ಬಿನ್ ಹಮದ್ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಸರಣಿಯ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮತ್ತೊಮ್ಮೆ 90 ಮೀಟರ್ ಜಾವೆಲಿನ್ ಎಸೆಯುವ ಮೂಲಕ ತನ್ನ ಹಳೆ ದಾಖಲೆಯನ್ನೇ ಮುರಿದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮುಸ್ಲಿಮರ ಪ್ರತಿಭಟನೆ – ಪೊಲೀಸರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

    ನೀರಜ್ ಚೋಪ್ರಾ 88.44 ಮೀಟರ್ ಜಾವೆಲಿನ್ ಎಸೆದು ಆರಂಭಿಕ ಮುನ್ನಡೆ ಸಾಧಿಸಿದರು. ನೀರಜ್ ಚೋಪ್ರಾ ಕೊನೆಯ ಎಸೆತದಲ್ಲಿ 90.23 ಮೀಟರ್ ದೂರಕ್ಕೆ ಎಸೆದು ದೋಹಾ ಡೈಮಂಡ್ ಲೀಗ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಭಾರತದ ಇನ್ನೋರ್ವ ಕ್ರೀಡಾಪಟು ಕಿಶೋರ್ ಜೆನಾ ಪುರುಷರ ಜಾವೆಲಿನ್ ಥ್ರೋ ಭಾಗಿಯಾಗಿದ್ದರು. ಇದನ್ನೂ ಓದಿ: 40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ

    ನಿರಾಜ್ ಚೋಪ್ರಾ 990.23 ಮೀಟರ್ ಎಸೆದರೂ ಎರಡನೇ ಸ್ಥಾನ ಪಡೆದರು. ಜರ್ಮನಿಯ ಜೂಲಿಯನ್ ವೆಬರ್ ತಮ್ಮ ಅಂತಿಮ ಪ್ರಯತ್ನದಲ್ಲಿ 91.06 ಮೀಟರ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದರು.

  • ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

    ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಸ್ಟಾರ್‌ ಬ್ಯಾಟರ್‌ ಟಿಮ್‌ ಡೇವಿಡ್‌ (Tim David) ಚಿನ್ನಸ್ವಾಮಿ ಮೈದಾನದ (Chinnaswamy Stadium) ನೀರಿನಲ್ಲಿ ಈಜಾಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಈಗ ರಾತ್ರಿ ಭಾರೀ ಮಳೆ ಸುರಿಯುತ್ತಿದೆ. ಆರ್‌ಸಿಬಿ ತಂಡ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಜೋರಾಗಿ ಸುರಿದಿದೆ.

    ಮಳೆದ ಸುರಿದ ಹಿನ್ನೆಲೆಯಲ್ಲಿ ಆಟಗಾರರು ಡ್ರೆಸ್ಸಿಂಗ್‌ ಕೊಠಡಿ ಸೇರಿದ್ದರೆ ಟಿಮ್‌ ಡೇವಿಡ್‌ ಮೈದಾನದಲ್ಲಿ ನಿಂತಿದ್ದ ನೀರಿನಲ್ಲ ಈಜಾಡಿದ್ದಾರೆ. ಡೇವಿಡ್‌ ಈಜಾಡುತ್ತಿರುವ ವಿಡಿಯೋವನ್ನು ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿದೆ. ಇದನ್ನೂ ಓದಿ: ಮತ್ತೆ ಆರಂಭವಾಗಲಿದೆ IPL – ಬೆಂಗಳೂರಲ್ಲಿ ಪಂದ್ಯದ ದಿನ ಮೆಟ್ರೋ ಸಮಯ ವಿಸ್ತರಣೆ


    ಆಸ್ಟ್ರೇಲಿಯಾದ ಟಿಮ್‌ ಡೇವಿಡ್‌ ಅವರನ್ನು ಆರ್‌ಸಿಬಿ ಹರಾಜಿನಲ್ಲಿ 3 ಕೋಟಿ ರೂ. ನೀಡಿ ಖರೀದಿಸಿತ್ತು. ಮೊದಲ ಬಾರಿಗೆ ಐಪಿಎಲ್‌ ಪ್ರತಿನಿಧಿಸುತ್ತಿರುವ ಡೇವಿಟ್‌ 11 ಪಂದ್ಯಗಳಿಂದ 186 ರನ್‌ ಹೊಡೆದಿದ್ದಾರೆ.

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಮೇ 17 ರಿಂದ ಆರಂಭವಾಗಲಿದೆ. ಶನಿವಾರ ಬೆಂಗಳೂರಿನಲ್ಲಿ ಆರ್‌ಸಿಬಿ ಮತ್ತು ಕೋಲ್ಕತ್ತಾ ಮಧ್ಯೆ ಪಂದ್ಯ ನಡೆಯಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

  • ನಿನ್ ಜೊತೆ ಮಲ್ಕೋಬೇಕು ಬಾ – ಟೀಂ ಇಂಡಿಯಾ ಮಾಜಿ ಆಟಗಾರ ಬಂಗಾರ್‌ ಪುತ್ರಿಗೆ ಕ್ರಿಕೆಟಿಗರಿಂದ ಲೈಂಗಿಕ ಕಿರುಕುಳ

    ನಿನ್ ಜೊತೆ ಮಲ್ಕೋಬೇಕು ಬಾ – ಟೀಂ ಇಂಡಿಯಾ ಮಾಜಿ ಆಟಗಾರ ಬಂಗಾರ್‌ ಪುತ್ರಿಗೆ ಕ್ರಿಕೆಟಿಗರಿಂದ ಲೈಂಗಿಕ ಕಿರುಕುಳ

    – ನಗ್ನ ಚಿತ್ರ ಕಳುಹಿಸಿ ಕಿರುಕುಳ
    – ಶಸ್ತ್ರ ಚಿಕಿತ್ಸೆಯ ಬಳಿ ಹೆಣ್ಣಾಗಿ ಬದಲಾದ ಬಂಗಾರ್‌ ಪುತ್ರ

    ಮುಂಬೈ: ಗಂಡಾಗಿದ್ದ ಬಳಿಕ ಹೆಣ್ಣಾಗಿ ಬದಲಾದ ಮಾಜಿ ಕ್ರಿಕೆಟಿಗ ಸಂಜಯ್‌ ಬಂಗಾರ್‌ (Sanjay Bangar) ಅವರ ಪುತ್ರಿ ಅನಯಾ ಬಂಗಾರ್ (Anaya Bangar) ಹಿರಿಯ ಕ್ರಿಕೆಟ್‌ ಆಟಗಾರರ ಬಗ್ಗೆ ಶಾಕಿಂಗ್‌ ಆರೋಪ ಮಾಡಿದ್ದಾರೆ.

    ಯೂಟ್ಯೂಬ್‌ ಚಾನೆಲ್‌ ಜೊತೆ ಮಾತನಾಡಿದ ಅನಯಾ ಹಿರಿಯ ಕ್ರಿಕೆಟಿಗರು ನನಗೆ ನಗ್ನ ಚಿತ್ರವನ್ನು ಕಳುಹಿಸಿ ಕಿರುಕುಳ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಲೀಕ್‌ – ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

    ನಾನು ಭಾರತದಲ್ಲಿದ್ದಾಗ (India) ನನಗೆ ಆಗುತ್ತಿರುವ ನೋವಿನ ಬಗ್ಗೆ ಓರ್ವ ಆಟಗಾರನ ಬಳಿ ತಿಳಿಸಿದ್ದೆ. ಈ ವೇಳೆ ಆತ ಕಾರಿನಲ್ಲಿ ಹೋಗೋಣ. ನಿನ್ನ ಜೊತೆ ನಾನು ಮಲಗಲು ಬಯಸುತ್ತೇನೆ ಎಂದು ಹೇಳಿದ್ದ ಎಂದು ತಿಳಿಸಿದರು. ಆದರೆ ಅನಯಾ ಆ ಆಟಗಾರನ ಹೆಸರನ್ನು ಬಹಿರಂಗ ಮಾಡಲು ನಿರಾಕರಿಸಿದರು. ಸಂದರ್ಶನದಲ್ಲಿ ಅನಯಾ ಪುಣೆಯ ಯೆಶ್ವಿ ಕ್ರಿಕೆಟ್ ಅಕಾಡೆಮಿಯಲ್ಲಿ ಈ ಘಟನೆ ನಡೆದಿತ್ತು ಎಂದು ಸುಳಿವು ನೀಡಿದರು.

    ನನ್ನ ತಂದೆ ಒಬ್ಬ ಕ್ರಿಕೆಟಿಗ ಮತ್ತು ಟೀಮ್ ಇಂಡಿಯಾದ ತರಬೇತುದಾರರಾಗಿ ಪ್ರಸಿದ್ಧಿ ಪಡೆದಿದ್ದ ಕಾರಣ ನಾನು ನನ್ನ ಬಗ್ಗೆ ರಹಸ್ಯವನ್ನು ಕಾಪಾಡಿಕೊಳ್ಳಬೇಕಾಯಿತು. ಕ್ರಿಕೆಟ್ ಜಗತ್ತು ಅಭದ್ರತೆ ಮತ್ತು ಕೆಟ್ಟ ಪುರುಷರ ಪ್ರಾಬಲ್ಯದಿಂದ ತುಂಬಿದೆ ಎಂದು ಸಿಟ್ಟು ಹೊರ ಹಾಕಿದರು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

    ಬಾಲ್ಯದಲ್ಲಿ ಇದ್ದಾಗಲೇ ತಪ್ಪಾದ ಲಿಂಗದಲ್ಲಿ ಜನಿಸಿದ್ದೀನಾ ಎಂದು ನನಗೆ ನಾನೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದೆ. 8 ಅಥವಾ 9 ವರ್ಷದಲ್ಲಿದ್ದಾಗ ನಾನು ನನ್ನ ತಾಯಿಯ ಕಪಾಟಿನಿಂದ ಬಟ್ಟೆಗಳನ್ನು ಆರಿಸಿ ಧರಿಸುತ್ತಿದ್ದೆ. ನಂತರ, ನಾನು ಕನ್ನಡಿಯಲ್ಲಿ ನೋಡಿಕೊಂಡು, “ನಾನು ಹುಡುಗಿ. ನಾನು ಹುಡುಗಿಯಾಗಲು ಬಯಸುತ್ತೇನೆ ಎಂದು ಹೇಳುತ್ತಿದ್ದೆ” ಎಂದು ತಿಳಿಸಿದರು.

    ಗಂಡಾಗಿದ್ದ ವೇಳೆ ಆರ್ಯನ್ ಬಂಗಾರ್‌  ಹಾರ್ಮೋನ್ ಬದಲಿ ಚಿಕಿತ್ಸೆ ಮತ್ತು ಲಿಂಗ ದೃಢೀಕರಣ ಶಸ್ತ್ರಚಿಕಿತ್ಸೆ ಮಾಡಿಸಿದ ಬಳಿಕ ಅನಯಾವಾಗಿ ಬದಲಾಗಿದ್ದಾರೆ. ಹೆಣ್ಣಾಗಿ ಬದಲಾಗುವ ಮೊದಲು ಯಶಸ್ವಿ ಜೈಸ್ವಾಲ್, ಮುಶೀರ್ ಖಾನ್ ಮತ್ತು ಸರ್ಫರಾಜ್ ಖಾನ್ ಅವರಂತಹ ಪ್ರಸಿದ್ಧ ಕ್ರಿಕೆಟಿಗರೊಂದಿಗೆ ಕ್ರಿಕೆಟ್ ಆಡಿದ್ದರು.

    ಅನಯಾ ಪ್ರಸ್ತುತ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವಾಸಿಸುತ್ತಿದ್ದಾರೆ. ಎಡಗೈ ಬ್ಯಾಟರ್‌ ಆಗಿರುವ ಅನಯಾ ಲೀಸೆಸ್ಟರ್‌ಶೈರ್‌ನಲ್ಲಿರುವ ಹಿಂಕ್ಲೆ ಕ್ರಿಕೆಟ್ ಕ್ಲಬ್‌ಗಾಗಿ ಆಡಿದ್ದರು. ನವೆಂಬರ್ 2023 ರಲ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಟದ ಸಮಗ್ರತೆಯನ್ನು ರಕ್ಷಿಸಲು ಟ್ರಾನ್ಸ್ಜೆಂಡರ್ ಕ್ರೀಡಾಪಟುಗಳಿಗೆ ಮಹಿಳಾ ಕ್ರಿಕೆಟ್‌ ತಂಡದಲ್ಲಿ ಆಡಲು ಅವಕಾಶ ನೀಡುವುದಿಲ್ಲ ಎಂಬ ನಿರ್ಧಾರ ತೆಗೆದುಕೊಂಡಿತ್ತು.

  • ಆರ್‌ಸಿಬಿ ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ!

    ಆರ್‌ಸಿಬಿ ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ!

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ. ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ.

    ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ 2019ರ ಬಳಿಕ ಗೆದ್ದಿರಲಿಲ್ಲ. ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ 2008ರ ಮೊದಲ ಐಪಿಎಲ್‌ ಆವೃತ್ತಿಯ ಬಳಿಕ ಆರ್‌ಸಿಬಿಗೆ ಇಲ್ಲಿ ಗೆಲುವು ದಕ್ಕಿರಲಿಲ್ಲ. ಮುಂಬೈನಲ್ಲಿ ಆರ್‌ಸಿಬಿ ಕೊನೆಯ ಬಾರಿ ಗೆದ್ದಿದ್ದು 2015 ರಲ್ಲಿ. ಆದರೆ ಈ ಬಾರಿ ಮೂರು ಪ್ರತಿಷ್ಠಿತ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಇದನ್ನೂ ಓದಿ: ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

    ಮೊದಲ ಪಂದ್ಯದಲ್ಲಿ ಕೋಲ್ಕತ್ತಾ (KKR) ವಿರುದ್ಧ 7 ವಿಕೆಟ್‌ಗಳಿಂದ ಗೆದ್ದ ಆರ್‌ಸಿಬಿ ಎರಡನೇ ಪಂದ್ಯದಲ್ಲಿ ಚೆನ್ನೈ (CSK) ವಿರುದ್ಧ 50 ರನ್‌ಗಳಿಂದ ಗೆದ್ದು ಬೀಗಿತ್ತು. ಮೂರನೇ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ (GT) ವಿರುದ್ಧ ಆರ್‌ಸಿಬಿ ಸೋತಿತ್ತು. ಈಗ ಮುಂಬೈ (MI) ವಿರುದ್ಧ ನಡೆದ ನಾಲ್ಕನೇ ಪಂದ್ಯದಲ್ಲಿ ರೋಚಕ 12 ರನ್‌ ಗಳಿಂದ ಗೆದ್ದು ಬೀಗಿದೆ. ಇದನ್ನೂ ಓದಿ: New Zealand v/s Pakistan – ಕ್ರಿಕೆಟ್ ಪಂದ್ಯದ ವೇಳೆಯೇ ಗ್ರೌಂಡ್‌ನಲ್ಲಿ ಪವರ್‌ಕಟ್; ಮುಂದೇನಾಯ್ತು?

    ಚೆನ್ನೈ ಮತ್ತು ಮುಂಬೈ ವಿರುದ್ಧದ ಪಂದ್ಯದಲ್ಲಿ ಉತ್ತಮ ಆಟವಾಡಿದ ನಾಯಕ ರಜತ್‌ ಪಾಟಿದರ್‌ (Rajat Patidar) ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿರುವುದು ವಿಶೇಷ. ಚೆನ್ನೈ ವಿರುದ್ಧ ರಜತ್‌ ಪಟೀದಾರ್‌ 51 ರನ್‌(32 ಎಸೆತ, 4 ಬೌಂಡರಿ, 3 ಸಿಕ್ಸ್‌) ಹೊಡೆದರೆ ಮುಂಬೈ ವಿರುದ್ಧ 64 ರನ್‌ (32 ಎಸೆತ, 5 ಬೌಂಡರಿ, 4 ಸಿಕ್ಸ್‌) ಚಚ್ಚಿದ್ದರು.

     

     

    ಸೋಮವಾರ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 221 ರನ್‌ ಬಾರಿಸಿತ್ತು. 222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ಮುಂದೆ ಆರ್‌ಸಿಬಿ ಏ.10 ರಂದು ಬೆಂಗಳೂರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಕಾದಾಡಲಿದೆ.

    ಅಂಕಪಟ್ಟಿಯಲ್ಲಿ ಆರ್‌ಸಿಬಿ 6 ಅಂಕ ಸಂಪಾದಿಸಿದರೂ ನೆಟ್‌ ರನ್‌ ರೇಟ್‌ನಲ್ಲಿ ಹಿಂದಿರುವ ಕಾರಣ ಮೂರನೇ ಸ್ಥಾನದಲ್ಲಿದೆ. ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಸ್ಥಾನದಲ್ಲಿದ್ದರೆ 4 ಪಂದ್ಯವಾಡಿ ಮೂರರಲ್ಲಿ ಜಯಗಳಿಸಿರುವ ಗುಜರಾತ್‌ ಎರಡನೇ ಸ್ಥಾನದಲ್ಲಿದೆ.

  • ಚಿಕ್ಕಬಳ್ಳಾಪುರ | 70 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ಹೈಟೆಕ್ ಮಾಡಲು ಕ್ರಮ: ಎಂ.ಸಿ ಸುಧಾಕರ್

    ಚಿಕ್ಕಬಳ್ಳಾಪುರ | 70 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ಹೈಟೆಕ್ ಮಾಡಲು ಕ್ರಮ: ಎಂ.ಸಿ ಸುಧಾಕರ್

    ಚಿಕ್ಕಬಳ್ಳಾಪುರ: ಇಲ್ಲಿನ ಸರ್ ಎಂ.ವಿ ಕ್ರೀಡಾಂಗಣವನ್ನು (Sir M.V. Stadium) ಸುಮಾರು 70 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ‌ ಕ್ರೀಡಾ ವ್ಯವಸ್ಥೆಗಳೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ನೀಲಿನಕ್ಷೆಯನ್ನೂ ಸಿದ್ಧಪಡಿಸಿ ಸಂಪನ್ಮೂಲ ಕ್ರೋಢೀಕರಣದತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ (MC Sudhakar) ಅವರು ತಿಳಿಸಿದರು.

    ಇಂದು ಬೆಳಗ್ಗೆ ಜಿಲ್ಲಾ ಕೇಂದ್ರದಲ್ಲಿನ ಸರ್.ಎಂ.ವಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಸಚಿವರು, ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

    ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಬೇಕೇ? ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಂತಹ ಸಂಸ್ಥೆಗಳಿಗೇ ಜವಾಬ್ದಾರಿ ನೀಡಿ ಅಭಿವೃದ್ಧಿಪಡಿಸಬೇಕೇ? ಇಲ್ಲವೇ ಸರ್ಕಾರದ ಅನುದಾನದಲ್ಲೇ ಅಭಿವೃದ್ಧಿಪಡಿಸಬೇಕೇ? ಎಂಬೆಲ್ಲಾ ದೃಷ್ಟಿಕೋನಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ.

    ಸಿಂಥೆಟಿಕ್ ಟ್ರಾಕ್ ಸೇರಿದಂತೆ ಕ್ರೀಡಾಂಗಣದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಿ ಹಂತ-ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಸದ್ಯದಲ್ಲೇ ಕ್ರೀಡಾ ವಸತಿ ನಿಲಯವನ್ನು ಉದ್ಘಾಟಿಸಲಾಗುವುದು ಎಂದರು. ಇದನ್ನೂ ಓದಿ: IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

  • Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

    Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

    – ಕಂಬಳ, ಎತ್ತಿನ ಬಂಡಿ, ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ

    ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು 3 ವರ್ಷಗಳ ವರೆಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.

    ದಾಖಲೆಯ 16ನೇ ಬಜೆಟ್‌ ಮಂಡಿಸಿದ ಅವರು ಈ ಬಾರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ಅದರಂತೆ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ (Olympics 2028) ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನ ಮೂರು ವರ್ಷ ನೀಡಲಾಗುವುದು. ಅದಕ್ಕಾಗಿ ಪ್ರಸಕ್ತ ವರ್ಷಕ್ಕೆ 6 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು


    ಬಜೆಟ್‌ ಘೋಷಣೆಗಳೇನು?

    ಅಲ್ಲದೇ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 2 ಕೋಟಿ ರೂ. ಒದಗಿಸಲಾಗುವುದು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಒದಗಿಸಲಾಗುವುದು. ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ಒದಗಿಸಲಾಗುವುದು.

    ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣವನ್ನು 6 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್ ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

    ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

    ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ಪೂಲ್ ವ್ಯವಸ್ಥೆಗಳನ್ನೊಳಗೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಚಾಮರಾಜನಗರದಲ್ಲಿ ಒಲಿಂಪಿಕ್ಸ್‌ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು.

    ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಾರ್ಷಿಕ ಹಾಜರಾತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಶೇ.5ರಷ್ಟು ಕೃಪಾಂಕವನ್ನು ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ನೀಡಲಾಗುವುದು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು. ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಿಸಲಾಗುವುದು.

    ಒಲಿಂಪಿಕ್ಸ್‌, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು.

     

  • ಬೌಂಡರಿ ಚಚ್ಚಿ ಆರ್‌ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?

    ಬೌಂಡರಿ ಚಚ್ಚಿ ಆರ್‌ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?

    ಬೆಂಗಳೂರು: ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ (WPL) ಆರ್‌ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್‌ (Mumbai Indians) 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಕೊನೆಯಲ್ಲಿ ಬೌಂಡರಿ ಹೊಡೆದ 16 ವರ್ಷದ ಆಲ್‌ರೌಂಡರ್‌ ಕಮಲಿನಿ (G Kamalini) ಈಗ ಎಲ್ಲರ ಕೇಂದ್ರಬಿಂದು ಆಗಿದ್ದಾರೆ.

    17.3 ಓವರ್‌ನಲ್ಲಿ 144 ರನ್‌ಗಳಿಸಿದ್ದಾಗ ಸಂಜೀವನ್‌ ಸಂಜನಾ ಔಟಾದರು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕ್ರೀಸ್‌ಗೆ ಇಳಿದ ಕಮಲಿನಿ ಅಮನ್‌ಜೋತ್‌ ಕೌರ್‌ ಅವರಿಗೆ ಉತ್ತಮ ಸಾಥ್‌ ನೀಡಿದರು. ಮುರಿಯದ 8ನೇ ವಿಕೆಟಿಗೆ ಈ ಜೋಡಿ 14 ಎಸೆತಗಳಲ್ಲಿ 26 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟಿತು.

    ಕೊನೆಯ 6 ಎಸೆತಗಳಲ್ಲಿ 6 ರನ್‌ ಬೇಕಿತ್ತು ಮತ್ತು ಸ್ಟ್ರೈಕ್‌ನಲ್ಲಿ ಕಮಲಿನಿ ಇದ್ದರು. ಬಿಶ್ತ್‌ ಎಸೆದ ಮೊದಲ ಎಸೆತದಲ್ಲಿ ಯಾವುದೇ ರನ್‌ ಬಂದಿರಲಿಲ್ಲ. ಎರಡನೇ ಎಸೆತದಲ್ಲಿ ಕಮಲಿನಿ ಎರಡು ರನ್‌ ಓಡಿದರು. ಮೂರು ಮತ್ತು ನಾಲ್ಕನೇ ಎಸೆತದಲ್ಲಿ 1 ರನ್‌ ಬಂದಿತ್ತು. ಕೊನೆಯ ಎರಡು ಎಸೆತದಲ್ಲಿ 2 ರನ್‌ ಬೇಕಿತ್ತು. ಈ ವೇಳೆ 5ನೇ ಎಸೆತವನ್ನು ಕಮಲಿನಿ ಬೌಂಡರಿಗೆ ಅಟ್ಟಿ ಮುಂಬೈ ತಂಡಕ್ಕೆ ಎರಡನೇ ಜಯವನ್ನು ತಂದುಕೊಟ್ಟರು. ಕಮಲಿನಿ ಔಟಾಗದೇ 11 ರನ್‌(8 ಎಸೆತ, 1 ಬೌಂಡರಿ), ಅಮನ್‌ಜೋತ್ ಕೌರ್ ಔಟಾಗದೇ 34 ರನ್‌(27 ಎಸೆತ, 2 ಬೌಂಡರಿ, 2 ಸಿಕ್ಸರ್‌) ಹೊಡೆಯುವ ಮೂಲಕ ತವರಿನಲ್ಲೇ ಆರ್‌ಸಿಬಿಯನ್ನು ಮಣಿಸಿದರು.

    ಬೌಂಡರಿ ಹೊಡೆಯುತ್ತಿದ್ದಂತೆ ಸ್ಟೇಡಿಂಯನಲ್ಲಿ ನಿಂತು ಪಂದ್ಯ ವೀಕ್ಷಿಸುತ್ತಿದ್ದ ಕಮಲಿನಿ ಕುಟುಂಬಸ್ಥರು ಕುಣಿದು ಕುಪ್ಪಳಿಸಿದರು. ಕುಟುಂಬದ ಸದಸ್ಯರು ಸಂತಸ ಪಡುತ್ತಿರುವ ದೃಶ್ಯವನ್ನು ಮುಂಬೈ ಇಂಡಿಯನ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಆರ್‌ಸಿಬಿ ಹ್ಯಾಟ್ರಿಕ್ ಕನಸು ಭಗ್ನ – ಮುಂಬೈಗೆ 4 ವಿಕೆಟ್‌ಗಳ ರೋಚಕ ಜಯ

    ಯಾರು ಕಮಲಿನಿ?
    ತಮಿಳುನಾಡು ಮೂಲದ ಕಮಲಿನಿ ಡಬ್ಲ್ಯೂಪಿಎಲ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಫೆ.18 ರಂದು ವಡೋದರಾದ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕಾಗಿ ಮುಂಬೈ ಇಂಡಿಯನ್ಸ್‌ನ ಪ್ಲೇಯಿಂಗ್ 11 ರಲ್ಲಿ ಕಮಲಿನಿ ಸ್ಥಾನ ಪಡೆದಿದ್ದರು.

     

    16 ವರ್ಷ 213 ದಿನಗಳಲ್ಲಿ ಪಾದಾರ್ಪಣೆ ಮಾಡಿದ ಕಮಲಿನಿ ಅವರು 16 ವರ್ಷ 263 ದಿನಗಳಲ್ಲಿ ಗುಜರಾತ್ ಜೈಂಟ್ಸ್ ಪರ ಆಡಿದ್ದ ಶಬ್ನಮ್ ಶಕಿಲ್ ಅವರ ಹಿಂದಿನ ಅತ್ಯಂತ ಕಿರಿಯ ಚೊಚ್ಚಲ ಆಟಗಾರ್ತಿಯ ದಾಖಲೆಯನ್ನು ಮುರಿದಿದ್ದಾರೆ.

    2025 ರ ಅಂಡರ್ -19 ವಿಶ್ವಕಪ್ ವಿಜೇತ ಭಾರತೀಯ ತಂಡದ ಆಟಗಾರ್ತಿಯಾಗಿರುವ ಕಮಲಿನಿ ತಮಿಳುನಾಡಿನ ಮಧುರೈ ಮೂಲದವರು. WPL 2025ರ ಹರಾಜಿನಲ್ಲಿ ಮುಂಬೈ ತಂಡವು ಅವರನ್ನು 1.6 ಕೋಟಿ ರೂ. ನೀಡಿ ಖರೀದಿಸಿತ್ತು. ಇದನ್ನೂ ಓದಿ: ಡಿವೋರ್ಸ್‌ ಬಳಿಕ ಚಹಲ್‌ನಿಂದ 60 ಕೋಟಿ ಜೀವನಾಂಶ – ಧನಶ್ರೀ ಕುಟುಂಬ ಹೇಳಿದ್ದೇನು?

    ಕಮಲಿನಿ ಅಂಡರ್-19 ವಿಶ್ವಕಪ್‌ನಲ್ಲಿ ಎಂಟು ಪಂದ್ಯಗಳಲ್ಲಿ ಒಟ್ಟು 311 ರನ್ ಗಳಿಸಿದ್ದರು. ಅಷ್ಟೇ ಅಲ್ಲದೇ ಎರಡು ಅರ್ಧಶತಕ ಸಹ ಸಿಡಿಸಿದ್ದರು. ಎಡಗೈ ಬ್ಯಾಟರ್‌ ಆಗಿರುವ ಕಮಲಿನಿ ಅಂಡರ್‌ 19 ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 29 ಎಸೆತಗಳಲ್ಲಿ 44 ರನ್‌ ಸಿಡಿಸಿದ್ದರು. ಪ್ರಸ್ತುತ ಕಮಲಿನಿ ಅವರು ಚೆನ್ನೈನಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಅಕಾಡೆಮಿಯಲ್ಲಿ ಕ್ರಿಕೆಟ್‌ ಅಭ್ಯಾಸ ಮಾಡುತ್ತಿದ್ದಾರೆ.