Tag: sports

  • ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ಬೆಂಗಳೂರು: ಗೋವಾದಲ್ಲಿಂದು ನಡೆದ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕಲ್ ಮೂರು ರೀತಿಯ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು 1,900 ಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಮೂರು ವಿಭಾಗಗಳಲ್ಲಿ ಭಾಗಿಯಾಗಿ 8 ಗಂಟೆ, 27 ನಿಮಿಷ ಮತ್ತು 32 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು. ಈ‌ ಮೂಲಕ ಐರನ್ ಮ್ಯಾನ್ 70.3 ರೇಸ್‌ನಲ್ಲಿ (Ironman Race) ವಿಜೇತರಾದ ಪ್ರಥಮ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಸಂಸದ ತೇಜಸ್ವಿ ಸೂರ್ಯ ಭಾಜನರಾದ್ರು.

    ಈ ಸಂಸತವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡ ಸಂಸದರು, ಗೋವಾ (Goa) ಐರನ್‌ಮ್ಯಾನ್ ಸ್ಪರ್ಧೆ ಕ್ರೀಡೆಗೆ ಹೆಸರುವಾಸಿಯಾಗಿದ್ದು, 50ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಈ ರೇಸ್‌ನಲ್ಲಿ ಪಾಲ್ಗೊಂಡಿರುವುದು ವಿಶೇಷ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ

    ಈ ಸ್ಪರ್ಧೆಯಲ್ಲಿ ಭಾಗವಹಿಸುವುದು ಕಠಿಣ ಸವಾಲಾಗಿದ್ದು, ಕಳೆದ 4 ತಿಂಗಳಿಂದ ಫಿಟ್‌ನೆಸ್ ಅನ್ನು ಸುಧಾರಿಸಲು ಕಠಿಣವಾಗಿ ತರಬೇತಿ ಪಡೆದಿದ್ದು, ಪ್ರಸ್ತುತ ಈ ಸವಾಲನ್ನು ಪೂರ್ಣಗೊಳಿಸಿದ್ದಕ್ಕಾಗಿ ನನಗೆ ಅತ್ಯಂತ ಸಂತೋಷವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಫಿಟ್ ಇಂಡಿಯಾ ಉಪಕ್ರಮವು ಇಂತಹ ಸವಾಲನ್ನು ತೆಗೆದುಕೊಳ್ಳಲು ಪ್ರೇರಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ʻಫಿಟ್‌ ಇಂಡಿಯಾ‌ʼ ಅಭಿಯಾನ ನನ್ನ ಇಂದಿನ ಅಭಿಯಾನಕ್ಕೆ ಸ್ಫೂರ್ತಿಯಾಗಿದೆ ಎಂದು ಶ್ಲಾಘಿಸಿದ್ರು. ಇದನ್ನೂ ಓದಿ:  ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

    ಇದೇ ಸಂದರ್ಭದಲ್ಲಿ, ನನ್ನ ದೈಹಿಕ ಸಾಮರ್ಥ್ಯವು ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ಮೂಡಿದೆ. ದೊಡ್ಡ ಮಹತ್ವಾಕಾಂಕ್ಷೆಗಳನ್ನು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಮ್ಮ ದೈಹಿಕ ಸಾಮರ್ಥ್ಯ ಪೋಷಿಸುವಲ್ಲಿ ಹೆಚ್ಚಿನ ಉತ್ತೇಜನ ದೊರಕಿದ್ದು, ಭಾರತವನ್ನು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಮೂಲಕ ನಮ್ಮ ದೈಹಿಕ ಸಾಮರ್ಥ್ಯವನ್ನು ಸ್ಥಿರವಾಗಿಸಿಕೊಳ್ಳುವ ಮೂಲಕ ಯಾವುದೇ ಉದ್ಯಮದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಸುಧಾರಿಸಬಹುದಾಗಿದೆ‌.‌ #FitIndia ಅಭಿಯಾನವು ಕ್ರೀಡಾ ಸ್ಫೂರ್ತಿ, ಜಾಗೃತಿಯನ್ನು ಹೆಚ್ಚಿಸುವಲ್ಲಿ ಮತ್ತು ಹೆಚ್ಚಿನ ಜನರನ್ನು ಫಿಟ್‌ನೆಸ್ ದಿನಚರಿಗೆ ತರುವಲ್ಲಿ ಸಹಕಾರಿಯಾಗಿದೆ. ಅದು ನಮ್ಮ ರಾಷ್ಟ್ರಕ್ಕೆ ಮೂಲಭೂತವಾಗಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

  • ಧೋನಿಯನ್ನು ಯಾವತ್ತೂ ಕ್ಷಮಿಸಲ್ಲ – ಯುವರಾಜ್ ಸಿಂಗ್ ತಂದೆ ಕಿಡಿ

    ಧೋನಿಯನ್ನು ಯಾವತ್ತೂ ಕ್ಷಮಿಸಲ್ಲ – ಯುವರಾಜ್ ಸಿಂಗ್ ತಂದೆ ಕಿಡಿ

    – ಧೋನಿ ತಮ್ಮ ಮುಖವನ್ನು ಕನ್ನಡಿಯಲ್ಲಿ ಒಮ್ಮೆ ನೋಡಿಕೊಳ್ಳಲಿ ಅಂತ ಲೇವಡಿ

    ಮುಂಬೈ: ನನ್ನ ಮಗನ ಭವಿಷ್ಯಕ್ಕೆ ಅಡ್ಡಗಾಲು ಹಾಕಿದ ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ನಾನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಯುವರಾಜ್ ಸಿಂಗ್ (Yuvaraj Singh) ತಂದೆ, ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ (Yograj Singh) ಧೋನಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಭಾರತ ತಂಡದ ಪರ ಏಳು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಯೋಗರಾಜ್ ಸಿಂಗ್ ಅವರ ತಂದೆ ಸಾರ್ವಜನಿಕವಾಗಿ ಧೋನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನನ್ನ ಮಗನ ಭವಿಷ್ಯವನ್ನು ಧೋನಿ ಹಾಳು ಮಾಡಿದ್ದಾರೆ. ಹೀಗಾಗಿ ನಾನು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಎಷ್ಟೇ ದೊಡ್ಡ ಕ್ರಿಕೆಟಿಗನಾದರೂ ಧೋನಿ ನನ್ನ ಕ್ಷಮೆಗೆ ಅರ್ಹರಲ್ಲ ಎಂದು ಯೂಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಯೋಗರಾಜ್ ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

    ಧೋನಿ ತಮ್ಮ ಮುಖವನ್ನು ಕನ್ನಡಿಯಲ್ಲಿ ಒಮ್ಮೆ ನೋಡಿಕೊಳ್ಳಲಿ. ಅವರು ದೊಡ್ಡ ಕ್ರಿಕೆಟಿಗನೇ ಇರಬಹುದು. ಆದರೆ ಅವರು ನನ್ನ ಮಗನ ವಿರುದ್ಧ ಏನೆಲ್ಲಾ ಮಾಡಿದ್ದಾನೆ ಎಂಬುದು ಈಗ ಹೊರಗೆ ಬರುತ್ತಿದೆ. ಅದನ್ನು ನನ್ನ ಜೀವನದಲ್ಲಿ ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ನಾನು ನನ್ನ ಜೀವನದಲ್ಲಿ 2 ತಪ್ಪುಗಳನ್ನು ಮಾಡಿಲ್ಲ. ಮೊದಲನೆಯದಾಗಿ ಯಾರೇ ತಪ್ಪು ಮಾಡಿದರೂ ನಾನು ಅವರನ್ನು ಕ್ಷಮಿಸಿಲ್ಲ. ಎರಡನೆಯದಾಗಿ ತಪ್ಪು ಮಾಡಿದವರನ್ನು ನಾನು ಯಾವತ್ತಿಗೂ ತಬ್ಬಿಕೊಂಡಿಲ್ಲ. ಅದು ನನ್ನ ಕುಟುಂಬವೇ ಆಗಿರಲಿ, ಮಕ್ಕಳೆ ಆಗಿರಲಿ. ನಾನು ಅದನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

    ಎಂ.ಎಸ್ ಧೋನಿ ವಿರುದ್ಧ ಯೋಗರಾಜ್ ಸಿಂಗ್ ಈ ರೀತಿಯಾಗಿ ಆರೋಪಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಧೋನಿಯನ್ನು ಬಹಿರಂಗವಾಗಿ ದೂರಿದ್ದರು. 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಿಎಸ್‌ಕೆ (CSK) ಸೋಲಲು ಧೋನಿಯೇ ಪ್ರಮುಖ ಕಾರಣ. ಅವರಿಗೆ ಅಸೂಯೆ ಜಾಸ್ತಿ ಇದೆ ಎಂದು ಯೋಗರಾಜ್ ಸಿಂಗ್ ಆರೋಪಿಸಿದ್ದರು. ಇದನ್ನೂ ಓದಿ: Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

  • ಮಂಡ್ಯದಲ್ಲಿ ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಅಂದರ್‌!

    ಮಂಡ್ಯದಲ್ಲಿ ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಅಂದರ್‌!

    ಮಂಡ್ಯ: ತನ್ನ ಬಳಿ ಕ್ರೀಡೆ ಹಾಗೂ ಚಿತ್ರಕಲೆ (Sports, Painting) ಕಲಿಯಲು ಬರುತ್ತಿದ್ದ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಬೆತ್ತಲೆ ಚಿತ್ರ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಿಕೃತ ಕಾಮುಕನೊಬ್ಬನನ್ನು ಪೊಲೀಸರು (Mandya Police) ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಘಟನೆ ನಡೆದಿದೆ. ತಾಲೂಕಿನ ಅಮೃತಹಳ್ಳಿಯ ಯೋಗಿ ಬಂಧಿತ ಆರೋಪಿಯಾಗಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೂ ಎಸಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ರಾಜಪ್ಪ ಮೇಸ್ಟ್ರು ಶಾಲೆಗೆ ಸೇರಿಸದಿದ್ದರೆ ನಾನು ಸಿಎಂ ಆಗ್ತಿರಲಿಲ್ಲ

    ಈ ಸಂಬಂಧ ನಾಲ್ವರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ (Child Rights Protection Unit) ಕಾನೂನು ಪರಿವೀಕ್ಷಣಾಧಿಕಾರಿ ಎಸ್‌.ಎಂ. ಶೈಲಜಾ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು 15 ರಿಂದ 17 ವರ್ಷ ವಯಸ್ಸಿನವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವು

    ಆಸಾಮಿ ತಗಲಾಕ್ಕೊಂಡಿದ್ದು ಹೇಗೆ?
    ಆರೋಪಿ ಯೋಗಿ ವಿದ್ಯಾರ್ಥಿನಿಯರು ಸಂತ್ರಸ್ತ ವಿದ್ಯಾರ್ಥಿನಿಯರು ಓದುತ್ತಿದ್ದ ಪ್ರೌಢಶಾಲೆಯಲ್ಲೇ ಹಳೆಯ ವಿದ್ಯಾರ್ಥಿಯಾಗಿದ್ದ. ಶಾಲೆ ಸಮೀಪದಲ್ಲೇ ಸ್ವಂತ ತರಬೇತಿ ಕೇಂದ್ರ ನಡೆಸುತ್ತಿದ್ದ. ಕೆಲ ವಿದ್ಯಾರ್ಥಿನಿಯರಿಗೆ ಕ್ರೀಡೆ, ಚಿತ್ರಕಲೆಯಲ್ಲಿ ಆಸಕ್ತಿ, ಇದ್ದ ಕಾರಣ, ತರಬೇತಿಗೆ ಸೇರಿಕೊಂಡಿದ್ದರು. ತನ್ನ ಬಳಿ ಬರುವ ವಿದ್ಯಾರ್ಥಿನಿಯರಿಗೆ ಮೊದಲು ಅಣ್ಣನಂತೆ ನಾಟಕವಾಡಿ ನಂಬಿಸುತ್ತಿದ್ದ.

    ತರಬೇತಿ ಕೇಂದ್ರದ ಪಿಟಿ ರೂಮಿನಲ್ಲೇ ಇರುತ್ತಿದ್ದ ಈತ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ತನ್ನ ಮೊಬೈಲ್‌ನಿಂದ ಬೆತ್ತಲೆ, ಅರೆಬೆತ್ತಲೆ ಫೋಟೋಗಳನ್ನು ತೆಗೆದು, ಪೋಷಕರಿಗೆ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದ. ತನ್ನೊಂದಿಗೆ ಮಲಗುವಂತೆ ಬಲವಂತ ಮಾಡುತ್ತಿದ್ದ. ತರಬೇತಿ ನೀಡುವ ವೇಳೆ ಕೆಟ್ಟದ್ದಾಗಿ ವರ್ತಿಸುತ್ತಿದ್ದ. ಒಂದೊಮ್ಮೆ ಅದೇ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಐಸ್‌ಕ್ರೀಮ್‌ ಕೊಡಿಸಿ, ಪ್ರಜ್ಞೆ ತಪ್ಪಿಸುವಂತೆ ಮಾಡಿದ್ದ. ಬಳಿಕ ಆಕೆಯ ಬೆತ್ತಲೆ ಫೋಟೋ ಕ್ಲಿಕ್ಕಿಸಿ, ನೀನು ನನ್ನೊಂದಿಗೆ ಮಲಗದಿದ್ದರೆ, ನಿಮ್ಮ ಪೋಷಕರಿಗೆ ಫೋಟೋ ತೋರಿಸುವುದಾಗಿ ಬೆದರಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಈ ಸಂಬಂಧ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕಕ್ಕೆ ವಿದ್ಯಾರ್ಥಿನಿಯರು ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಬಳಿಕ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ಪೊಲೀಸ್‌ ಠಾಣೆಗೆ ನೀಡಿದ ದೂರಿನ ಮೇಲೆ ಯೋಗಿ ಎಂಬಾತನನ್ನ ಬಂಧಿಸಿ, ಎಫ್‌ಐಆರ್‌ ದಾಖಲಾಗಿದೆ. ಪೋಕ್ಸೋ ಕೇಸ್‌ ಜೊತೆಗೆ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಸೆಕ್ಷನ್‌ 354 ಎ, 354 ಡಿ, 509 ಅಡಿಯಲ್ಲಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

  • ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

    ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

    ಮುಂಬೈ: ಬಹುದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಕೊನೆಗೂ ಖಚಿತವಾಗಿದ್ದು ಟೀಂ ಇಂಡಿಯಾದ (Team India) ಕೋಚ್‌ ಆಗಿ ಗೌತಮ್‌ ಗಂಭೀರ್‌ (Gautam Gambhir)  ಆಯ್ಕೆಯಾಗಿದ್ದಾರೆ.

    ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದ್ದಾರೆ. ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಿಸಲಾಗಿದೆ ಜಯ್ ಶಾ ಪ್ರಕಟಿಸಿದರು.


    ಟೀಂ ಇಂಡಿಯಾದ ನೂತನ ಕೋಚ್‌ ಗೌತಮ್‌ ಗಂಭೀರ್‌ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್‌ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವ ಗೌತಮ್‌ ಗಂಭೀರ್‌ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಜಯ್‌ ಶಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

    ರಾಹುಲ್‌ ದ್ರಾವಿಡ್‌ (Rahul Dravid) ಅವರ ನಂತರ ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಈ ಹಿಂದೆ ಗೌತಮ್‌ ಗಂಭೀರ್‌ ಬಳಿ ಮನವಿ ಮಾಡಿರುವುದಾಗಿ ವರದಿಯಾಗಿತ್ತು. ಟಿ20 ವಿಶ್ವಕಪ್‌ ಟೂರ್ನಿ ಬಳಿಕ ದ್ರಾವಿಡ್‌ ಅವರ ಮುಖ್ಯಕೋಚ್‌ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಬಿಸಿಸಿಐ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.

    ಗಂಭೀರ್ ಕೋಚಿಂಗ್ ಅನುಭವ ಹೇಗಿದೆ?
    ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್‌ ಗೆದ್ದುಕೊಟ್ಟಿರುವ ಗೌತಮ್‌ ಗಂಭೀರ್‌ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ‌ ಮೆಂಟರ್‌ ಆಗಿ ಕೆಲಸ ಮಾಡಿದ್ದ ಗಂಭೀರ್‌, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ನಂತರ ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್‌ ಸಹ ಪ್ಲೇ ಆಫ್‌ ಪ್ರವೇಶಿಸಿದೆ. ಆದರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್‌ ಅವರಿಗಿಲ್ಲ.

  • WWEಗೆ ನಿವೃತ್ತಿ ಹೇಳಿದ ಜಾನ್‌ ಸೀನಾ

    WWEಗೆ ನಿವೃತ್ತಿ ಹೇಳಿದ ಜಾನ್‌ ಸೀನಾ

    ಟೊರೊಂಟೊ: 16 ಬಾರಿ WWE ಚಾಂಪಿಯನ್ ಆಗಿರುವ 47 ವರ್ಷದ ಜಾನ್ ಸೀನಾ (John Cena) 2025 ರಿಂದ ನಾನು ಸ್ಪರ್ಧೆಗೆ ನಿವೃತ್ತಿ ಹೇಳುತ್ತೇನೆ ಎಂದು ಘೋಷಿಸಿದ್ದಾರೆ.

    ಟೊರೊಂಟೊದಲ್ಲಿ ನಡೆದ ‘ಮನಿ ಇನ್ ದಿ ಬ್ಯಾಂಕ್’ ಕಾರ್ಯಕ್ರಮದಲ್ಲಿ ಜಾನ್ ಸೀನಾ ಅವರು ತಮ್ಮ ನಿವೃತ್ತಿ ನಿರ್ಧಾರವನ್ನು ಘೋಷಿಸಿದರು.  ಇದನ್ನೂ ಓದಿ: ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

    ಇಂದು ರಾತ್ರಿ ನಾನು WWE ಗೆ ನನ್ನ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸುತ್ತೇನೆ ಎಂದು ಜಾನ್ ಸೀನಾ ಹೇಳಿದರು. ಮುಂದುವರಿಸಿ ನಾನು ತಕ್ಷಣವೇ ನಿವೃತ್ತಿ ಹೇಳುವುದಿಲ್ಲ. 2025 ರ ರಾಯಲ್ ರಂಬಲ್, ಎಲಿಮಿನೇಷನ್ ಚೇಂಬರ್, ಲಾಸ್ ವೇಗಾಸ್‌ನಲ್ಲಿ ರೆಸಲ್ಮೇನಿಯಾ 41 ರಲ್ಲಿ ಅಲೆಜಿಯಂಟ್ ಸ್ಟೇಡಿಯಂನಲ್ಲಿ ಸ್ಪರ್ಧಿಸುವುದಾಗಿ ಹೇಳಿದರು. ಇದನ್ನೂ ಓದಿ: ಬಬಲೇಶ್ವರ | ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ

    2002 ರಲ್ಲಿ WWE ಗೆ ಜಾನ್ ಸೀನಾ ಪಾದಾರ್ಪಣೆ ಮಾಡಿದ್ದರು. ಕುಸ್ತಿಯ ಜೊತೆಗೆ ಜಾನ್ ಸೀನಾ ಫಾಸ್ಟ್ ಎಕ್ಸ್, ದಿ ಇಂಡಿಪೆಂಡೆಂಟ್, ದಿ ಸೂಸೈಡ್ ಸ್ಕ್ವಾಡ್‌ನಂತಹ ಚಲನ ಚಿತ್ರಗಳಲ್ಲಿ ಜಾನ್ ಸೀನಾ ಅಭಿನಯಿಸಿದ್ದಾರೆ.

     

  • ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಕೊಹ್ಲಿ

    ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಕೊಹ್ಲಿ

    ಬ್ರಿಡ್ಜ್‌ಟೌನ್‌(ಬಾರ್ಬಡೋಸ್‌): ಭಾರತ (Team India) ಎರಡನೇ ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಗೆದ್ದ ಬೆನ್ನಲ್ಲೇ ವಿರಾಟ್‌ ಕೊಹ್ಲಿ (Virat Kohli) ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ನಲ್ಲಿ ವಿಕೆಟ್‌ ಉರುಳುತ್ತಿದ್ದಾಗ ಗಟ್ಟಿ ಬಂಡೆಯಂತೆ ನಿಂತು 76 ರನ್‌ (59 ಎಸೆತ, 6 ಬೌಂಡರಿ, 2 ಸಿಕ್ಸರ್‌) ಸಿಡಿಸಿದ ವಿರಟ್‌ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದನ್ನೂ ಓದಿ: ವಿಶ್ವಕಪ್‌ ಜೊತೆ ವಿಶ್ವದಾಖಲೆ – ಟೀಂ ಇಂಡಿಯಾದ ಸಾಧನೆ ಮುರಿಯುವುದು ಬಲು ಕಷ್ಟ

    ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಟಿ 20 ವಿಶ್ವಕಪ್. ಇಲ್ಲಿಯವರೆಗೆ ಇದನ್ನೇ ಸಾಧಿಸಲು ನಾವು ಬಯಸುತ್ತಿದ್ದೆವು ಎಂದು ಹೇಳಿದರು.

    ಇದು ಭಾರತಕ್ಕಾಗಿ ಆಡುತ್ತಿರುವ ನನ್ನ ಕೊನೆಯ ಟಿ20 ಪಂದ್ಯ. ಮುಂದೆ ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು ಎಂದು ತಿಳಿಸಿ ಈ ಯಶಸ್ಸಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಗೆದ್ದ ಭಾರತ

  • ವಿಶ್ವಕಪ್‌ ಜೊತೆ ವಿಶ್ವದಾಖಲೆ – ಟೀಂ ಇಂಡಿಯಾದ ಸಾಧನೆ ಮುರಿಯುವುದು ಬಲು ಕಷ್ಟ

    ವಿಶ್ವಕಪ್‌ ಜೊತೆ ವಿಶ್ವದಾಖಲೆ – ಟೀಂ ಇಂಡಿಯಾದ ಸಾಧನೆ ಮುರಿಯುವುದು ಬಲು ಕಷ್ಟ

    ಸತತ 8 ಪಂದ್ಯಗಳನ್ನು ಗೆದ್ದು ದಾಖಲೆ

    ಬ್ರಿಡ್ಜ್‌ಟೌನ್‌(ಬಾರ್ಬಡೋಸ್‌): ಭಾರತ ಟಿ20 ಚಾಂಪಿಯನ್‌ (T20 Champion) ಆಗುವುದರ ಜೊತೆ ಟಿ20 ವಿಶ್ವಕಪ್‌ನಲ್ಲಿ ವಿಶ್ವದಾಖಲೆ (World Record) ನಿರ್ಮಿಸಿದೆ. ಟೂರ್ನಿಯ ಎಲ್ಲಾ ಪಂದ್ಯಗಳನ್ನು ಗೆದ್ದು ಕಪ್‌ ಜಯಿಸಿದ ಏಕಮಾತ್ರ ತಂಡ ಎಂಬ ಹೆಗ್ಗಳಿಕೆಗೆ ಭಾರತ (Team India) ಪಾತ್ರವಾಗಿದೆ.

    ಹೌದು. ಭಾರತ (Team India) ಮತ್ತು ದಕ್ಷಿಣ ಆಫ್ರಿಕಾ (South Africa) ತಂಡಗಳು ಅಜೇಯವಾಗಿ ಫೈನಲ್‌ (Final) ಪ್ರವೇಶಿಸಿದ್ದವು. ಇದುವರೆಗಿನ ಟಿ20 ಇತಿಹಾಸದಲ್ಲಿ ಎರಡು ತಂಡಗಳು ಅಜೇಯವಾಗಿ ಫೈನಲ್‌ ತಲುಪಿರುವುದು ಇದೇ ಮೊದಲು. ಎರಡು ತಂಡಗಳು ಗುಂಪು, ಸೂಪರ್‌ 8 ವಿಭಾಗದಲ್ಲಿ ಅಗ್ರಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿತ್ತು. ಇದನ್ನೂ ಓದಿ: 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಗೆದ್ದ ಭಾರತ

    ದಕ್ಷಿಣ ಆಫ್ರಿಕಾ 8 ಜಯದೊಂದಿಗೆ ಫೈನಲ್‌ ಪ್ರವೇಶಿಸಿದ್ದರೆ ಗುಂಪು ಹಂತದಲ್ಲಿ ಕೆನಡಾದೊಂದಿಗಿನ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ 7 ಜಯದೊಂದಿಗೆ ಭಾರತ ಫೈನಲ್‌ ಪ್ರವೇಸಿಸಿತ್ತು. ಹೀಗಾಗಿ ಈ ಬಾರಿ ಯಾರೇ ಗೆದ್ದರೂ ಅಜೇಯವಾಗಿ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ತಂಡ ಎಂಬ ವಿಶಿಷ್ಟ ಸಾಧನೆ ನಿರ್ಮಾಣವಾಗುತಿತ್ತು. ಇದನ್ನೂ ಓದಿ: ವಿಶ್ವ ವಿಜೇತ ಭಾರತ- ಟಿ20 ವಿಶ್ವಕಪ್‌ಗೆ ಈಗ ಟೀಂ ಇಂಡಿಯಾ ಬಾಸ್‌

    ಹಾಗೆ ನೋಡಿದರೆ ಭಾರತ ಕಠಿಣ ಎದುರಾಳಿ ತಂಡಗಳನ್ನು ಮಣಿಸಿ ಫೈನಲ್‌ ಪ್ರವೇಶಿಸಿತ್ತು. ಲೀಗ್‌ನಲ್ಲಿ ಪಾಕಿಸ್ತಾನ, ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಸೆಮಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಭಾರತ ಸೋಲಿಸಿತ್ತು. ಲೀಗ್‌ನಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ, ಶ್ರೀಲಂಕಾ, ಸೂಪರ್‌ 8 ರಲ್ಲಿ ಇಂಗ್ಲೆಂಡ್‌, ವಿಂಡೀಸ್‌ ತಂಡವನ್ನು ಮಣಿಸಿತ್ತು. ಸೆಮಿಯಲ್ಲಿ ಅಫ್ಘಾನಿಸ್ತಾನ ದಕ್ಷಿಣ ಅಫ್ರಿಕಾಗೆ ಪ್ರಬಲ ಸ್ಪರ್ಧೆ ನೀಡಿರಲಿಲ್ಲ.

  • 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಗೆದ್ದ ಭಾರತ

    11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಗೆದ್ದ ಭಾರತ

    ಬ್ರಿಡ್ಜ್‌ಟೌನ್‌: 11 ವರ್ಷಗಳ ನಂತರ ಕೊನೆಗೂ ಭಾರತ ಐಸಿಸಿ ಟ್ರೋಫಿಯನ್ನು (ICC Trophy) ಗೆದ್ದುಕೊಂಡಿದೆ.

    ಹೌದು. 2013ರಲ್ಲಿ ಕೊನೆಯ ಬಾರಿಗೆ ಐಸಿಸಿ (ICC) ಆಯೋಜಿಸಿದ ಟ್ರೋಫಿಯನ್ನು ಭಾರತ ಗೆದ್ದುಕೊಂಡಿತ್ತು. ನಂತರ ಭಾರತ ಕಳೆದ 10 ವರ್ಷಗಳಿಂದ ಪ್ರಶಸ್ತಿಯ ಸನಿಹ ಬಂದು ಕೊನೆಯಲ್ಲಿ ಎಡವುತಿತ್ತು.

    2013 ರಲ್ಲಿ ಎಂಎಸ್‌ ಧೋನಿ (MS Dhoni) ನಾಯಕತ್ವದ ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ತಂಡವನ್ನು ಕೇವಲ 5 ರನ್‌ಗಳಿಂದ ಮಣಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಮುಡಿಗೇರಿಸಿಕೊಂಡಿತ್ತು. ಈ ಟ್ರೋಫಿಯ ಬಳಿಕ ಇಲ್ಲಿಯವರೆಗೆ ಐಸಿಸಿ ಆಯೋಜಿಸಿದ ಒಂದೇ ಒಂದು ಟ್ರೋಫಿಯನ್ನು ಗೆದ್ದುಕೊಂಡಿಲ್ಲ.

    ಅದರಲ್ಲೂ ಕಳೆದ 12 ತಿಂಗಳಿನಲ್ಲಿ ಭಾರತ ಮೂರು ಬಾರಿ ಫೈನಲ್‌ ಪ್ರವೇಶಿಸಿತ್ತು. ಕಳೆದ ವರ್ಷದ ಜೂನ್‌ನಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲಿನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ನಂತರ ಭಾರತದಲ್ಲಿ ನಡೆದ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ನಲ್ಲಿ ಆಸೀಸ್‌ ವಿರುದ್ಧ ಸೋತಿತ್ತು. ಆದರೆ ಮೂರನೇ ಬಾರಿ ಫೈನಲ್‌ ಪ್ರವೇಶಿಸಿದ್ದ ಭಾರತ ಈ ಬಾರಿ ಟಿ20 ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.

    ಯಾವ ವರ್ಷ ಏನಾಗಿತ್ತು?
    2014: ಟಿ20 ವಿಶ್ವಕಪ್‌
    ವಿಶ್ವಕಪ್‌ ಟಿ20 ಫೈನಲ್‌ನಲ್ಲಿ ಶ್ರೀಲಂಕಾ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಭಾರತ 4 ವಿಕೆಟ್‌ ನಷ್ಟಕ್ಕೆ 13 ರನ್‌ ಗಳಿಸಿದರೆ ಶ್ರೀಲಂಕಾ 4 ವಿಕೆಟ್‌ ನಷ್ಟಕ್ಕೆ 134 ರನ್‌ ಗಳಿಸಿತ್ತು.

    2015: ವಿಶ್ವಕಪ್‌
    ವಿಶ್ವಕಪ್‌ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯಾ 7 ವಿಕೆಟ್‌ ನಷ್ಟಕ್ಕೆ 328 ರನ್‌ ಹೊಡೆದರೆ ಭಾರತ 233 ರನ್‌ಗಳಿಗೆ ಆಲೌಟ್‌ ಆಗಿತ್ತು.

    2016: ಟಿ20 ವಿಶ್ವಕಪ್‌
    ಮುಂಬೈಯಲ್ಲಿ ನಡೆದ ಟಿ20 ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್ ರೋಚಕ 7 ವಿಕೆಟ್‌ ಜಯ ಸಾಧಿಸಿತ್ತು. ಭಾರತ 2 ವಿಕೆಟ್‌ ನಷ್ಟಕ್ಕೆ 192 ರನ್‌ ಹೊಡೆದರೆ ವಿಂಡೀಸ್‌ 19.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 196 ರನ್‌ ಹೊಡೆದಿತ್ತು.

    2017: ಐಸಿಸಿ ಚಾಂಪಿಯನ್ಸ್‌ ಟ್ರೋಫಿ
    ಐಸಿಸಿ ಚಾಂಪಿಯನ್‌ ಟ್ರೋಫಿ ಫೈನಲ್‌ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಹೀನಾಯವಾಗಿ ಸೋತಿತ್ತು. ಮೊದಲು ಬ್ಯಾಟ್‌ ಮಾಡಿದದ ಪಾಕಿಸ್ತಾನ 4 ವಿಕೆಟ್‌ ನಷ್ಟಕ್ಕೆ 338 ರನ್‌ ಹೊಡೆದರೆ ಭಾರತ 158 ರನ್‌ಗಳಿಗೆ ಆಲೌಟ್‌ ಆಗಿತ್ತು.

    2019: ವಿಶ್ವಕಪ್‌
    ಸೆಮಿಫೈನಲ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ನ್ಯೂಜಿಲೆಂಡ್‌ 239 ರನ್‌ ಗಳಿಸಿದ್ದರೆ ಭಾರತ 221 ರನ್‌ ಗಳಿಸಿ ಆಲೌಟ್‌ ಆಗಿತ್ತು. ಎಂಸ್‌ ಧೋನಿ ರನೌಟ್‌ ಆಗಿದ್ದು ಪಂದ್ಯದ ಗತಿಯನ್ನೇ ಬದಲಾಯಿಸಿತ್ತು. 92 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದಾಗ ಧೋನಿ ಮತ್ತು ಜಡೇಜಾ 7ನೇ ವಿಕೆಟಿಗೆ 104 ಎಸೆತಗಳಲ್ಲಿ 116 ರನ್‌ ಜೊತೆಯಾಟವಾಡಿ ಪಂದ್ಯವನ್ನು ಭಾರತದತ್ತ ವಾಲಿಸಿದ್ದರು. ಧೋನಿ ರನೌಟ್‌ ಬಲಿಯಾಗುವ ವೇಳೆ ಭಾರತಕ್ಕೆ 10 ಎಸೆತಗಳಲ್ಲಿ 25 ರನ್‌ ಅಗತ್ಯವಿತ್ತು

    2021 ಟಿ20 ವಿಶ್ವಕಪ್‌
    ಐಸಿಸಿ ಟೂರ್ನಿ ಪೈಕಿ 2021 ಟಿ20 ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಕೆಟ್ಟ ಸಾಧನೆ ಮಾಡಿತ್ತು. ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ಗುಂಪು ಹಂತದಲ್ಲೇ ಹೊರ ಬಿದ್ದಿತ್ತು. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ವಿರುದ್ಧ ಸೋತಿದ್ದರೆ ಸ್ಕಾಟ್‌ಲ್ಯಾಂಡ್‌ ವಿರುದ್ಧ ಮಾತ್ರ ಗೆದ್ದಿತ್ತು.

    2022 ಟಿ20 ವಿಶ್ವಕಪ್‌
    ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಭಾರತ 6 ವಿಕೆಟ್‌ ನಷ್ಟಕ್ಕೆ 168 ರನ್‌ ಹೊಡೆದರೆ ಇಂಗ್ಲೆಂಡ್‌ ಕೇವಲ 16 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 170 ರನ್‌ ಹೊಡೆದಿತ್ತು.

    2023 ವಿಶ್ವಕಪ್‌
    ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳ ಜಯಗಳಿಸಿ ಕಪ್‌ ಗೆದ್ದುಕೊಂಡಿತ್ತು. ಭಾರತ 240 ರನ್‌ಗಳಿಗೆ ಆಲೌಟ್‌ ಆಗಿದ್ದರೆ ಆಸ್ಟ್ರೇಲಿಯಾ 4 ವಿಕೆಟ್‌ ನಷ್ಟಕ್ಕೆ 241 ರನ್‌ ಗಳಿಸಿತ್ತು.

  • ವಿಶ್ವ ವಿಜೇತ ಭಾರತ- ಟಿ20 ವಿಶ್ವಕಪ್‌ಗೆ ಈಗ ಟೀಂ ಇಂಡಿಯಾ ಬಾಸ್‌

    ವಿಶ್ವ ವಿಜೇತ ಭಾರತ- ಟಿ20 ವಿಶ್ವಕಪ್‌ಗೆ ಈಗ ಟೀಂ ಇಂಡಿಯಾ ಬಾಸ್‌

    – ಬುಮ್ರಾ ಮ್ಯಾಜಿಕ್‌, ಸೂರ್ಯ ಸ್ಟನಿಂಗ್‌ ಕ್ಯಾಚ್‌
    – ಭಾರತಕ್ಕೆ ರೋಚಕ 7 ರನ್‌ ಜಯ

    ಬ್ರಿಡ್ಜ್‌ಟೌನ್‌(ಬಾರ್ಬಡೋಸ್‌): ಶತಕೋಟಿ ಭಾರತೀಯರು ಕನಸು, ಪ್ರಾರ್ಥನೆಗೆ ಕೊನೆಗೂ ಈಡೇರಿತು. 17 ವರ್ಷದ ಬಳಿಕ ಟಿ 20 ವಿಶ್ವಕಪ್‌ ಗೆಲ್ಲುವ ಭಾರತದ (Team India) ಕನಸಾಗಿದೆ. ರೋಚಕ 7 ರನ್‌ಗಳ ಜಯ ಸಾಧಿಸುವುದರೊಂದಿಗೆ ಭಾರತ ಎರಡನೇ ಬಾರಿ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.

    ಗೆಲ್ಲಲು 177 ರನ್‌ಗಳ ಗುರಿಯನ್ನು ಪಡೆದ ದಕ್ಷಿಣ ಆಫ್ರಿಕಾ (South Africa) ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 169 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

    ಕೊನೆಯ 6 ಎಸೆತಗಳಲ್ಲಿ 16 ರನ್‌ ಬೇಕಿತ್ತು. ಪಾಡ್ಯ ಎಸೆದ ಮೊದಲ ಎಸೆತವನ್ನು ಮಿಲ್ಲರ್‌ ಸಿಕ್ಸರ್‌ಗೆ ಅಟ್ಟಿದರು. ಆದರೆ ಬೌಂಡರಿ ಗೆರೆಯ ಬಳಿ ಸೂರ್ಯಕುಮಾರ್‌ ಯಾದವ್‌ ಅವರು ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಮಿಲ್ಲರ್‌ 21 ರನ್‌ ಗಳಿಸಿ ಔಟ್‌ ಆದರು. ನಂತರ ಬಂದ ರಬಡಾ ಮೊದಲ ಎಸೆತ ಬೌಂಡರಿಗೆ ಅಟ್ಟಿದರು. ನಂತರ ಎಸೆತದಲ್ಲಿ ಲೆಗ್‌ಬೈ ಮೂಲಕ 1 ರನ್‌ ಬಂತು. ನಂತರ 1 ರನ್‌ ಒಂದು ವೈಡ್‌ ಬಂತು. ಐದನೇ ಎಸೆತದಲ್ಲಿ ಸಿಕ್ಸ್‌ ಸಿಡಿಸಲು ಹೋದ ರಬಡಾ ಕ್ಯಾಚ್‌ ನೀಡಿ ಔಟಾದ ಬೆನ್ನಲ್ಲೇ ಸಂಭ್ರಮಾಚರಣೆ ಆರಂಭವಾಯಿತು. ಕೊನೆಯ ಎಸೆತದಲ್ಲಿ ಒಂದು ರನ್‌ ಬಂತು. ಈ ಮೂಲಕ ಭಾರತ ಎರಡನೇ ಬಾರಿ ವಿಶ್ವಕಪ್‌ ಚಾಂಪಿಯನ್‌ ಪಟ್ಟ ಅಲಂಕರಿಸಿತು.

    ಟೀಂ ಇಂಡಿಯಾದಂತೆ ಆರಂಭದಲ್ಲೇ ದಕ್ಷಿಣ ಆಫ್ರಿಕಾ 2 ವಿಕೆಟ್‌ ಕಳೆದುಕೊಂಡಿತ್ತು. ಆರಂಭಿಕ ಆಟಗಾರ ರೀಜಾ ಹೆಂಡ್ರಿಕ್ಸ್ 4 ರನ್‌, ನಾಯಕ ಆಡೆನ್ ಮಾರ್ಕ್ರಾಮ್ 4 ರನ್‌ ಗಳಿಸಿ ಔಟಾಗಿದ್ದರು. 12 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದದಾಗ ಕೀಪರ್‌ ಕ್ವಿಂಟಾನ್‌ ಡಿ ಕಾಕ್‌ ಮತ್ತು ಟ್ರಿಸ್ಟಾನ್ ಸ್ಟಬ್ಸ್ ನಿಧಾನವಾಗಿ ರನ್‌ ಪೇರಿಸಿ ಆಫ್ರಿಕಾ ಇನ್ನಿಂಗ್ಸ್‌ ಕಟ್ಟ ತೊಡಗಿದರು.  ಇದನ್ನೂ ಓದಿ: ಆರಂಭದಲ್ಲೇ ಆಘಾತ – ಕೊಹ್ಲಿ, ಅಕ್ಷರ್‌ ಸಮಯೋಚಿತ ಆಟ, ಆಫ್ರಿಕಾಗೆ 177 ರನ್‌ ಟಾರ್ಗೆಟ್‌ ನೀಡಿದ ಭಾರತ

    ಮೂರನೇ ವಿಕೆಟಿಗೆ ಕ್ವಿಂಟಾನ್‌ ಡಿ ಕಾಕ್‌ ಮತ್ತು ಟ್ರಿಸ್ಟಾನ್‌ ಸ್ಟಬ್ಸ್‌ 38 ಎಸೆತಗಳಲ್ಲಿ 58 ರನ್‌ ಜೊತೆಯಾಟವಾಡಿದರು. ಸ್ಟಬ್ಸ್‌ 31 ರನ್‌ (21 ಎಸೆತ, 3 ಬೌಂಡರಿ, 1 ಸಿಕ್ಸರ್‌) ಗಳಿಸಿದ್ದಾಗ ಅಕ್ಷರ್‌ ಪಟೇಲ್‌ ಎಸೆತದಲ್ಲಿ ಬೌಲ್ಡ್‌ ಆದರು. ಕ್ವಿಂಟಾನ್‌ ಡಿ ಕಾಕ್‌ ಅವರು 39 ರನ್‌ (31 ಎಸೆತ, 4 ಬೌಂಡರಿ, 1 ಸಿಕ್ಸರ್‌), ಕ್ಲಾಸೆನ್‌ ಸ್ಫೋಟಕ 52 ರನ್‌ (27 ಎಸೆತ, 2 ಬೌಂಡರಿ, 5 ಸಿಕ್ಸರ್‌), ಡೇವಿಡ್‌ ಮಿಲ್ಲರ್‌ 21 ರನ್‌ (17 ಎಸೆತ, 1 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಔಟ್ ಆದರು.

     

    ಹಾರ್ದಿಕ್‌ ಪಾಂಡ್ಯ 3 ವಿಕೆಟ್‌ ಕಿತ್ತರೆ ಅರ್ಶ್‌ದೀಪ್‌ ಮತ್ತು ಬುಮ್ರಾ ತಲಾ 2 ವಿಕೆಟ್‌ ಪಡೆದರು, ಅಕ್ಷರ್‌ ಪಟೇಲ್‌ 1 ವಿಕೆಟ್‌ ಕಿತ್ತರು. 59 ಎಸೆತಗಳಲ್ಲಿ 76 ರನ್‌ ಹೊಡೆದ ವಿರಾಟ್‌ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಜಸ್‌ಪ್ರೀತ್‌ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

  • ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಎರಡು ಬಲಿಷ್ಠ ತಂಡಗಳ ಮಧ್ಯೆ ಫೈನಲ್‌ ಪಂದ್ಯ

    ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಎರಡು ಬಲಿಷ್ಠ ತಂಡಗಳ ಮಧ್ಯೆ ಫೈನಲ್‌ ಪಂದ್ಯ

    ಬ್ರಿಡ್ಜ್‌ಟೌನ್‌(ಬಾರ್ಬಡೋಸ್‌): ಇದೇ ಮೊದಲ ಬಾರಿಗೆ ಟಿ20 ಕ್ರಿಕೆಟ್‌ ವಿಶ್ವಕಪ್‌ (T20 World Cup) ಇತಿಹಾಸದಲ್ಲಿ ಎರಡು ಬಲಿಷ್ಠ ತಂಡಗಳ ಮಧ್ಯೆ ಫೈನಲ್‌ ಪಂದ್ಯ ನಡೆಯುತ್ತಿದೆ.

    ಹೌದು. ಭಾರತ (Team India) ಮತ್ತು ದಕ್ಷಿಣ ಆಫ್ರಿಕಾ (South Africa) ತಂಡಗಳು ಅಜೇಯವಾಗಿ ಫೈನಲ್‌ ಪ್ರವೇಶಿಸಿವೆ. ಇದುವರೆಗಿನ ಟಿ20 ಇತಿಹಾಸದಲ್ಲಿ ಎರಡು ತಂಡಗಳು ಅಜೇಯವಾಗಿ ಫೈನಲ್‌ ತಲುಪಿರುವುದು ಇದೇ ಮೊದಲು. ಎರಡು ತಂಡಗಳು ಗುಂಪು, ಸೂಪರ್‌ 8 ವಿಭಾಗದಲ್ಲಿ ಅಗ್ರಸ್ಥಾನಿಯಾಗಿ ಫೈನಲ್‌  (Final) ಪ್ರವೇಶಿಸಿವೆ.

    ದಕ್ಷಿಣ ಆಫ್ರಿಕಾ 8 ಜಯದೊಂದಿಗೆ ಫೈನಲ್‌ ಪ್ರವೇಶಿಸಿದೆ. ಗುಂಪು ಹಂತದಲ್ಲಿ ಕೆನಡಾದೊಂದಿಗಿನ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ 7 ಜಯದೊಂದಿಗೆ ಭಾರತ ಫೈನಲ್‌ ಪ್ರವೇಶಿಸಿದೆ. ಹೀಗಾಗಿ ಈ ಬಾರಿ ಯಾರೇ ಗೆದ್ದರೂ ಅಜೇಯವಾಗಿ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ತಂಡ ಎಂಬ ವಿಶಿಷ್ಟ ಸಾಧನೆ ಮಾಡಲಿದೆ. ಇದನ್ನೂ ಓದಿ: ಗೆದ್ದು ಬಾ ಟೀಂ ಇಂಡಿಯಾ – 2014 ರಿಂದ 2023ವರೆಗೆ ಐಸಿಸಿ ಟೂರ್ನಿಯಲ್ಲಿ ಭಾರತ ಸಾಧನೆ ಏನು?

    ಹಾಗೆ ನೋಡಿದರೆ ಭಾರತ ಕಠಿಣ ಎದುರಾಳಿ ತಂಡಗಳನ್ನು ಮಣಿಸಿ ಫೈನಲ್‌ ಪ್ರವೇಶಿಸಿದೆ. ಲೀಗ್‌ನಲ್ಲಿ ಪಾಕಿಸ್ತಾನ, ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಸೆಮಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಭಾರತ ಸೋಲಿಸಿದೆ. ಲೀಗ್‌ನಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ, ಶ್ರೀಲಂಕಾ, ಸೂಪರ್‌ 8 ರಲ್ಲಿ ಇಂಗ್ಲೆಂಡ್‌, ವಿಂಡೀಸ್‌ ತಂಡವನ್ನು ಮಣಿಸಿದೆ. ಸೆಮಿಯಲ್ಲಿ ಅಫ್ಘಾನಿಸ್ತಾನ ದಕ್ಷಿಣ ಅಫ್ರಿಕಾಗೆ ಪ್ರಬಲ ಸ್ಪರ್ಧೆ ನೀಡಿರಲಿಲ್ಲ.

     

    ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದರೆ ಭಾರತ ಮೂರನೇ ಬಾರಿ ಫೈನಲ್‌ ಪ್ರವೇಶಿಸಿದೆ. 2007ರಲ್ಲಿ ಚಾಂಪಿಯನ್‌ ಆಗಿದ್ದರೆ, 2014ರಲ್ಲಿ ಲಂಕಾ ವಿರುದ್ಧ ಫೈನಲ್‌ನಲ್ಲಿ ಭಾರತ ಸೋತಿತ್ತು.