Tag: spot-fixing

  • ಫಿಕ್ಸಿಂಗ್ ನಡೆಸಿ ನಿಷೇಧಕ್ಕೊಳಗಾದ ಪಾಕ್ ಕ್ರಿಕೆಟಿಗರು ಇವರೇ!

    ಫಿಕ್ಸಿಂಗ್ ನಡೆಸಿ ನಿಷೇಧಕ್ಕೊಳಗಾದ ಪಾಕ್ ಕ್ರಿಕೆಟಿಗರು ಇವರೇ!

    ಫಿಕ್ಸಿಂಗ್‍ಗೂ ಪಾಕಿಸ್ತಾನಕ್ಕೂ ಬಿಡದ ನಂಟು..!

    ಇಸ್ಲಾಮಾಬಾದ್: ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಚ್ ಫಿಕ್ಸಿಂಗ್, ಸ್ಪಾಟ್ ಫಿಕ್ಸಿಂಗ್ ಎಂದಾಕ್ಷಣ ಪಾಕಿಸ್ತಾನ ಕ್ರಿಕೆಟ್ ಆಟಗಾರರ ಹೆಸರು ನೆನಪಾಗುತ್ತದೆ. ಕಳೆದ 2 ದಶಕಗಳಲ್ಲಿ ಸರಿ ಸುಮಾರು 8 ಮಂದಿ ಪಾಕಿಸ್ತಾನ ಕ್ರಿಕೆಟ್ ಆಟಗಾರರು ಮ್ಯಾಚ್ ಫಿಕ್ಸಿಂಗ್ ಕಾರಣದಿಂದ ನಿಷೇಧವನ್ನು ಎದುರಿಸಿದ್ದಾರೆ. ಈಗಲೂ ಕೂಡ ಪಾಕ್ ಕ್ರಿಕೆಟಿಗರೊಂದಿಗೆ ಫಿಕ್ಸಿಂಗ್ ನಡೆಸಲು ಬುಕ್ಕಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದರೇ ಆಟಗಾರರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಸ್ಪಷ್ಟವಾಗುತ್ತದೆ.

    ಇತ್ತೀಚೆಗೆ ಪಾಕಿಸ್ತಾನ ಸೂಪರ್ ಲೀಗ್‍ಗೂ ಮುನ್ನ ಪಾಕಿಸ್ತಾನ ಅನುಭವಿ ಆಟಗಾರ ಉಮರ್ ಅಕ್ಮಲ್‍ರನ್ನು ಫಿಕ್ಸಿಂಗ್ ಮಾಡಲು ಬುಕ್ಕಿಗಳು ಸಂಪರ್ಕಿಸಿದ್ದರು. ಪರಿಣಾಮ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಕ್ಮಲ್‍ಗೆ ಮೂರು ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ಅಮಾನತು ಮಾಡಿದೆ. ಇದೇ ವೇಳೆ ಫಿಕ್ಸಿಂಗ್ ಕಾರಣದಿಂದ ನಿಷೇಧಕ್ಕೊಳಗಾದ ಆಟಗಾರರ ಪಟ್ಟಿ ಇಂತಿದೆ.

    ಸಲೀಂ ಮಲಿಕ್ (2000): ಮ್ಯಾಚ್ ಫಿಕ್ಸಿಂಗ್ ಕಾರಣದಿಂದ ಮೊದಲ ಬಾರಿಗೆ ಪಾಕ್ ಕ್ರಿಕೆಟ್ ಇತಿಹಾಸದಲ್ಲಿ ನಿಷೇಧಕ್ಕೆ ಒಳಗಾದ ಆಟಗಾರ ಸಲೀಂ ಮಲಿಕ್. ಆ ವೇಳೆ ಆತನ ಮೇಲೆ ಜೀವಮಾನದ ಅಮಾನತು ವಿಧಿಸಲಾಗಿತ್ತು. ಆದರೆ ಕೆಲ ಸಮಯದ ಬಳಿಕ ಆತನ ಮೇಲಿನ ಅಮಾನತು ವಾಪಸ್ ಪಡೆಯಲಾಗಿತ್ತು. ಆದರೆ 2008ರಲ್ಲಿ ಮತ್ತೊಮ್ಮೆ ಫಿಕ್ಸಿಂಗ್ ನಡೆಸಿ ಸಲೀಂ ಸಿಕ್ಕಿಹಾಕಿಕೊಂಡಿದ್ದ.

    ಅಟಾ-ಉರ್-ರೆಹಮಾನ್ (2000): ಫಿಕ್ಸಿಂಗ್ ನಡೆಸಲು ಬುಕ್ಕಿಗಳೊಂದಿಗೆ ಮಾತುಕತೆ ನಡೆಸಿದ ಕಾರಣದಿಂದ 2000ರಲ್ಲಿ ಆತನ ವಿರುದ್ಧ ಜೀವಮಾನದ ಅಮಾನತು ವಿಧಿಸಲಾಗಿತ್ತು. ಆದರೆ 2006 ರಲ್ಲಿ ಅಮಾನತು ಹಿಂಪಡೆಯಲಾಗಿತ್ತು.

    ಮೊಹಮ್ಮದ್ ಅಮಿರ್ (2011): ಇಂಗ್ಲೆಂಡ್ ಟೂರ್ನಿ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ನೋ ಬಾಲ್ ಎಸೆಯಲು ಬುಕ್ಕಿಗಳೊಂದಿಗೆ ಸ್ಪಾಟ್ ಫಿಕ್ಸಿಂಗ್ ಮಾಡಿಕೊಳ್ಳಲಾಗಿತ್ತು. 2010 ರಲ್ಲಿ ಅಮಿರ್ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ. ಪರಿಣಾಮ 2011ರಲ್ಲಿ 5 ವರ್ಷ ಅಮಾನತು ಮಾಡಲಾಗಿತ್ತು. ಅಮಾನತು ಅಂತ್ಯವಾದ ಬಳಿಕ 2016ರಲ್ಲಿ ಮತ್ತೆ ಅಮಿರ್ ಪಾಕ್ ತಂಡಕ್ಕೆ ರೀ ಎಂಟ್ರಿ ಕೊಟ್ಟಿದ್ದ.

    ಮೊಹಮ್ಮದ್ ಆಸಿಫ್ (2011): ಸ್ಪಾಟ್ ಫಿಕ್ಸಿಂಗ್ ಭಾಗವಾಗಿ ನೋ ಬಾಲ್ ಎಸೆದಿದ್ದ ಆಸಿಫ್‍ಗೆ 7 ವರ್ಷ ಅಮಾನತು ವಿಧಿಸಿಲಾಗಿತ್ತು. ಆದರೆ ಆ ಬಳಿಕ ಅಮಾನತು ಶಿಕ್ಷೆಯನ್ನು 5 ವರ್ಷಕ್ಕೆ ಇಳಿಸಲಾಗಿತ್ತು. ಅಲ್ಲದೇ ವಿಚಾರಣೆ ಕಾರಣದಿಂದ ಆಸಿಫ್ 12 ತಿಂಗಳು ಜೈಲು ವಾಸ ಅನುಭವಿಸಿದ್ದ.

    ಸಲ್ಮಾನ್ ಭಟ್ (2011): 2010ರ ಇಂಗ್ಲೆಂಡ್ ಟೂರ್ನಿ ಭಾಗವಾಗಿ ನಡೆದಿದ್ದ ಟೂರ್ನಿಯಲ್ಲಿ ಅಮಿರ್, ಆಸಿಫ್‍ರೊಂದಿಗೆ ಭಟ್ ಕೂಡ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದ. ಪರಿಣಾಮ ಜೀವಮಾನ ನಿಷೇಧಕ್ಕೆ ಒಳಗಾಗಿದ್ದ ಭಟ್‍ಗೆ ಆ ಬಳಿಕ ಶಿಕ್ಷೆಯನ್ನು 5 ವರ್ಷಕ್ಕೆ ಇಳಿಸಲಾಗಿತ್ತು.

    ಡ್ಯಾನಿಶ್ ಕನೇರಿಯಾ (2010): ಪಾಕಿಸ್ತಾನ ಪರ ಆಡಿದ ಮೊದಲ ಹಿಂದೂ ಎಂಬ ದಾಖಲೆ ಬರೆದಿದ್ದ ಡ್ಯಾನಿಶ್ ಕನೇರಿಯಾ ಇಂಗ್ಲೆಂಡ್‍ನಲ್ಲಿ ನಡೆದಿದ್ದ ಕೌಂಟಿ ಕ್ರಿಕೆಟ್ ಟೂರ್ನಿ ಸಂದರ್ಭದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ. ಪರಿಣಾಮ ಆತನ ವಿರುದ್ಧ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಜೀವಮಾನ ನಿಷೇಧ ವಿಧಿಸಿತ್ತು. 2018 ರಲ್ಲಿ ಸ್ಪಾಟ್ ಫಿಕ್ಸಿಂಗ್ ಕುರಿತು ಮಾತನಾಡಿದ್ದ ಕನೇರಿಯಾ ಫಿಕ್ಸಿಂಗ್ ನಡೆಸಿದ್ದಾಗಿ ಒಪ್ಪಿಕೊಂಡಿದ್ದ.

    ಶಾರ್ಜೀಲ್ ಖಾನ್ (2018): ಪಾಕ್ ತಂಡದ ಆರಂಭಿಕ ಆಟಗಾರನಾಗಿದ್ದ ಶಾರ್ಜೀಲ್ ಖಾನ್ ಪಾಕ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ಪಾಕಿಸ್ತಾನ್ ಸೂಪರ್ ಲೀಗ್‍ನಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿ ಸಿಕ್ಕಿಹಾಕಿಕೊಂಡಿದ್ದ. ಪರಿಣಾಮ 5 ವರ್ಷ ಆತನನ್ನು ಅಮಾನತು ಮಾಡಲಾಗಿದೆ.

    ಉಮರ್ ಅಕ್ಮಲ್ (2020): ಪಾಕಿಸ್ತಾನ ಸೂಪರ್ ಲೀಗ್‍ನಲ್ಲಿ ಫಿಕ್ಸಿಂಗ್ ನಡೆಸಲು ಬುಕ್ಕಿಗಳು ಉಮರ್ ಅಕ್ಮಲ್‍ನನ್ನು ಸಂಪರ್ಕಿಸಿದ್ದರು. ಆದರೆ ಈ ವಿಚಾರವನ್ನು ಆತ ಪಾಕ್ ಕ್ರಿಕೆಟ್ ಬೋರ್ಡಿಗೆ ತಿಳಿಸಿರಲಿಲ್ಲ. ಪರಿಣಾಮ ಪಾಕ್ ಕ್ರಿಕೆಟ್ ಬೋರ್ಡಿನ ಭ್ರಷ್ಟಾಚಾರ ನಿಗ್ರಹ ಸಮಿತಿ ಉಮರ್ ಅಕ್ಮಲ್‍ಗೆ 3 ವರ್ಷ ನಿಷೇಧ ವಿಧಿಸಲಾಗಿದೆ.

  • ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್‍ಗೆ 3 ವರ್ಷ ನಿಷೇಧ

    ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್‍ಗೆ 3 ವರ್ಷ ನಿಷೇಧ

    – ಸ್ಪಾಟ್ ಫಿಕ್ಸಿಂಗ್ ಅಪ್ರೋಚ್ ಮಾಹಿತಿ ನೀಡಲು ವಿಫಲ

    ಇಸ್ಲಾಮಾಬಾದ್: ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್ ಮೇಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ 3 ವರ್ಷ ನಿಷೇಧಿಸಿದೆ.

    ಬೋರ್ಡ್ ಇಂದು ನಿಷೇಧ ಕುರಿತ ಮಾಹಿತಿಯನ್ನು ನೀಡಿದೆ. ಆದರೆ ಉಮರ್ ಅಕ್ಮಲ್ ಯಾವ ತಪ್ಪಿನ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಆದರೆ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಲು ಅಪ್ರೋಚ್ ಆಗಿರುವ ಕುರಿತು ಕ್ರಿಕೆಟ್ ಬೋರ್ಡಿಗೆ ಮಾಹಿತಿ ನೀಡಲು ವಿಫಲರಾದ ಕಾರಣದಿಂದ ಕ್ರಮಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

    ಅಕ್ಮಲ್ ವಿರುದ್ಧ ಎರಡು ತಿಂಗಳ ಹಿಂದೆ ಭ್ರಷ್ಟಾಚಾರ ನೀತಿ ಸಂಹಿತೆ ಅಡಿ ತನಿಖೆ ಆರಂಭಿಸಲಾಗಿತ್ತು. ನಿಷೇಧ ಕುರಿತು ಮಾಹಿತಿ ನೀಡಿ ಪಿಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ನಿವೃತ್ತ ನ್ಯಾಯಮೂರ್ತಿ ಫಜಲ್ ಇ ಮಿರಾನ್ ನೇತೃತ್ವದ ಶಿಸ್ತು ಸಮಿತಿ 3 ವರ್ಷ ನಿಷೇಧ ವಿಧಿಸಿದೆ. ಫೆ.20 ರಂದು ಅಕ್ಮಲ್‍ರನ್ನು ಅಮಾನತು ಮಾಡಿ ಆದೇಶ ನೀಡಲಾಗಿತ್ತು.

    29 ವರ್ಷದ ಅಕ್ಮಲ್ ಪಾಕ್ ಪರ ಅಕ್ಟೋಬರಿನಲ್ಲಿ ಅಂತಿಮ ಪಂದ್ಯವನ್ನಾಡಿದ್ದರು. ಇದುವರೆಗೂ 21 ಟೆಸ್ಟ್, 121 ಏಕದಿನ ಹಾಗೂ 84 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಅಂತಿಮವಾಗಿ ಶ್ರೀಲಂಕಾ ವಿರುದ್ಧದ ಟಿ20 ಟೂರ್ನಿಯಲ್ಲಿ ಭಾಗಿಯಾಗಿದ್ದ ಅಕ್ಮಲ್, ಆಡಿದ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದರು.

  • ಸ್ಪಾಟ್ ಫಿಕ್ಸಿಂಗ್ ಪ್ರಕರಣ: ಶ್ರೀಶಾಂತ್‍ಗೆ  ಸುಪ್ರೀಂನಿಂದ ಬಿಗ್ ರಿಲೀಫ್

    ಸ್ಪಾಟ್ ಫಿಕ್ಸಿಂಗ್ ಪ್ರಕರಣ: ಶ್ರೀಶಾಂತ್‍ಗೆ ಸುಪ್ರೀಂನಿಂದ ಬಿಗ್ ರಿಲೀಫ್

    ನವದೆಹಲಿ: 2013ರಲ್ಲಿ ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ಶಿಸ್ತು ಸಮಿತಿ ವಿಧಿಸಿದ್ದ ಅಜೀವ ನಿಷೇಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ನಿಷೇಧದ ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದೆ.

    ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಕೆಎಂ ಜೋಸೆಫ್ ದ್ವಿಸದಸ್ಯ ಪೀಠ ಶ್ರೀಶಾಂತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಈ ವೇಳೆ ಬಿಸಿಸಿಐ ಶ್ರೀಶಾಂತ್ ಮೇಲೆ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಿ ಮೂರು ತಿಂಗಳ ಒಳಗಾಗಿ ಮರುವಿಚಾರಣೆ ನಡೆಸಿ ಉತ್ತರಿಸುವಂತೆ ಸೂಚಿಸಿದೆ.

    ಶ್ರೀಶಾಂತ್ ಪರ ವಕೀಲರಾದ ಸಲ್ಮಾನ್ ಖುರ್ಷಿದ್ ಮಂಡಿಸಿದ ವಾದ ಆಲಿಸಿದ ನ್ಯಾಯಾಲಯ ಖಚಿತವಾದ ಆಧಾರಗಳಿಲ್ಲದೇ ಅಜೀವ ನಿಷೇಧ ಶಿಕ್ಷೆ ಬಹಳ ಕಠಿಣ ನಿರ್ಣಯ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ನಿರ್ಧಾರ ಶ್ರೀಶಾಂತ್ ವಿರುದ್ಧದ ಕ್ರಿಮಿನಲ್ ಪ್ರಕರಣ ಮೇಲೆ ಇದು ಪ್ರಭಾವ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    2013ರ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಆಡಿದ್ದ ಶ್ರೀಶಾಂತ್ ವಿರುದ್ಧ ಸ್ಪಾಟ್ ಫಿಕ್ಸಿಂಗ್ ಆರೋಪ ಕೇಳಿ ಬಂದಿತ್ತು. ಈ ವೇಳೆ ಓವರಿನಲ್ಲಿ 14 ರನ್ ನೀಡಲು ಶ್ರೀಶಾಂತ್ ಫಿಕ್ಸಿಂಗ್ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಆ ಓವರಿನಲ್ಲಿ 13 ರನ್ ಮಾತ್ರ ಬಂದಿದೆ. ಶ್ರೀಶಾಂತ್ ಯಾವುದೇ ಫಿಕ್ಸಿಂಗ್ ಮಾಡಿಕೊಂಡಿರಲಿಲ್ಲ ಎಂದು ವಕೀಲರು ವಾದ ಮಂಡಿಸಿದ್ದರು. ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಕೇವಲ ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ಕ್ರಮಕೈಗೊಳ್ಳಲಾಗಿತ್ತು ಎಂಬುದನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಅಲ್ಲದೇ ಬಿಸಿಸಿಐ ನಿಷೇಧವನ್ನು ತೆರವುಗೊಳಿಸಿದರೆ ಮತ್ತೆ ಕ್ರಿಕೆಟ್ ಆಡಲು ಶ್ರೀಶಾಂತ್ ಸಿದ್ಧರಿದ್ದಾರೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

    2018 ರಲ್ಲಿ ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠ ಬಿಸಿಸಿಐ ಆದೇಶವನ್ನು ರದ್ದುಗೊಳಿಸಿತ್ತು. ಬಿಸಿಸಿಐ ಈ ತೀರ್ಪಿನ ಬಗ್ಗೆ ಮರುಪರಿಶೀಲನೆ ನಡೆಸಲು ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿಷೇಧವನ್ನು ತೆರವುಗೊಳಿಸಲು ತಡೆ ನೀಡಿತ್ತು. ಪರಿಣಾಮ ಶ್ರೀಶಾಂತ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

    ಶ್ರೀಶಾಂತ್ ಮಾತ್ರವಲ್ಲದೇ ಮತ್ತಿಬ್ಬರು ಆಟಗಾರರ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮೂವರನ್ನು ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ

    ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ

    ಕೊಚ್ಚಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆಯಬೇಕೆಂಬ ಆಸೆ ಹೊಂದಿದ್ದ ಕ್ರಿಕೆಟಿಗ ಎಸ್ ಶ್ರೀಶಾಂತ್‍ಗೆ ಭಾರೀ ಹಿನ್ನಡೆಯಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶ್ರೀಶಾಂತ್ ಮೇಲೆ ವಿಧಿಸಿದ್ದ ಅಜೀವ ನಿಷೇಧವನ್ನು ತೆರವುಗೊಳಿಸಲು ಕೇರಳ ಹೈಕೋರ್ಟ್ ತಡೆ ನೀಡಿದೆ.

    ಆಗಸ್ಟ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ಬಿಸಿಸಿಐಗೆ ಶ್ರೀಶಾಂತ್ ಮೇಲಿನ ಅಜೀವ ನಿಷೇಧವನ್ನು ತೆರವುಗೊಳಿಸುವಂತೆ ಆದೇಶವನ್ನು ನೀಡಿತ್ತು. ಆದರೆ ಬಿಸಿಸಿಐ, ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಅರ್ಜಿಯನ್ನು ಸಲ್ಲಿಸಿತ್ತು. ಬಿಸಿಸಿಐ ಮನವಿಯನ್ನು ಪರಿಶೀಲಿಸಿದ ಹೈ ಕೋರ್ಟ್‍ನ ವಿಭಾಯ ಪೀಠವು ಬಿಸಿಸಿಐ ಪುನರ್ ಪರಿಶೀಲನಾ ಅರ್ಜಿಯನ್ನು ಎತ್ತಿ ಹಿಡಿದಿದ್ದು, ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ ನೀಡಿದೆ.

    ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಶ್ರೀಶಾಂತ್ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುವುದಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಇದು ಅತ್ಯಂತ ಕೆಟ್ಟ ತೀರ್ಮಾನವಾಗಿದ್ದು, ನನಗೆ ಮಾತ್ರ ವಿಶೇಷ ಕಾನೂನು ಏಕೆ? ನಿಜವಾದ ಅಪರಾಧಿಗಳು ಎಲ್ಲಿ? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ತಂಡಗಳ ವಿರುದ್ಧ ಯಾವ ಕ್ರಮನ್ನು ಕೈಗೊಳ್ಳಲಾಗಿದೆ ಎಂದು ಬಿಸಿಸಿಐಗೆ ಪ್ರಶ್ನಿಸಿದ್ದಾರೆ. ನನಗೆ ನನ್ನ ಕುಟುಂಬ ಹಾಗೂ ನನ್ನನ್ನು ನಂಬುವ ಹಲವು ಆತ್ಮೀಯರ ಬೆಂಬಲವಿದ್ದು, ನಿಷೇಧ ತೆರವಿನ ವಿಚಾರದಲ್ಲಿ ನಿರಂತರವಾಗಿ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

    2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್ ಜೊತೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಅಜಿತ್ ಚಾಂಡೀಲ, ಅಂಕಿತ್ ಚೌಹಾಣ್, ಅಲ್ಲದೇ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಎರಡು ವರ್ಷಗಳ ಕಾಲ ನಿಷೇಧವನ್ನು ವಿಧಿಸಲಾಗಿತ್ತು.