ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿರೋ ಮಾಜಿ ನಟಿ ಪವಿತ್ರಾ ಗೌಡ (Pavithra Gowda) ಮೊನ್ನೆಯಷ್ಟೇ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಗೆ ಬಂದಿತ್ತು. ಈ ಸಂದರ್ಭದಲ್ಲಿ ಜಾಮೀನು ನೀಡದಂತೆ ಪೊಲೀಸರ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದರು. ನ್ಯಾಯಾಧೀಶ ಜೈಶಂಕರ್ ಜಾಮೀನು ಅರ್ಜಿಯನ್ನು ಆ.27ಕ್ಕೆ ಮುಂದೂಡಿದರು.
ಚಾರ್ಜ್ ಶೀಟ್ ಸಲ್ಲಿಸೋಕೆ ಇನ್ನೂ ಕೆಲವು ದಿನಗಳು ಬಾಕಿ ಇರೋ ಬೆನ್ನಲ್ಲೇ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ದರ್ಶನ್ ದೂರಾದ ಬೆನ್ನಲ್ಲೇ ಏಕಾಂಗಿಯಾಗಿ ಹೋರಾಟ ಮಾಡ್ತಿರೋ ಪವಿತ್ರಾ ಗೌಡಗೆ ಆದಷ್ಟು ಬೇಗ ಜಾಮೀನು ಸಿಗಲಿದೆ ಎನ್ನುತ್ತಿದ್ದಾರೆ ಕಾನೂನು ಪಂಡಿತರು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ತನ್ನದೇನೂ ಪಾತ್ರವಿಲ್ಲ. ನನಗೆ ಮಸೇಜ್ ಬಂದಿದ್ದನ್ನು ದರ್ಶನ್ ಗೆ ತಿಳಿಸಿದ್ದೆ. ಆನಂತರ ಏನಾಯ್ತು ಅನ್ನೋದು ನನ್ನ ಗಮನಕ್ಕೆ ಬಂದಿಲ್ಲ ಅಂತ ಪವಿತ್ರಾ ಗೌಡಪರ ವಕೀಲರ ವಾದ ಮಾಡಲಿದ್ದಾರೆ ಅಂತಿವೆ ಮೂಲಗಳು. ಜೊತೆಗೆ ಮಹಿಳೆ ಅನ್ನೋ ಕಾರಣದಿಂದಾಗಿ ದರ್ಶನ್ ಗಿಂತ ಮೊದಲೇ ಪವಿತ್ರಾ ಗೌಡಗೆ ಜಾಮೀನು ಸಿಗಲಿದೆಯಂತೆ. ಆ.27ಕ್ಕೆ ಏನಾಗತ್ತೋ ಕಾದು ನೋಡಬೇಕು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎಸ್ಪಿಪಿ (SPP) ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಬದಲಾವಣೆ ಮಾಡೋದಾದ್ರೆ ಸರ್ಕಾರ ಮತ್ತು ಅಡ್ವೊಕೇಟ್ ಜನರಲ್, ಕಾನೂನು ತಜ್ಞರ ಸಲಹೆ ಪಡೆದು ಮುಂದುವರೆಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎಸ್ಪಿಪಿ ಬದಲಾವಣೆಗೆ ಒತ್ತಡ ಬರುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಯಾರೇ ಎಸ್ಪಿಪಿ ಆಗಿ ನೇಮಕಗೊಂಡರೂ ಸ್ಟ್ರಿಕ್ಟ್ ಆಗಿಯೇ ಇರಬೇಕು. ಕಾನೂನು ಪ್ರಕಾರವೇ ಕೆಲಸ ಮಾಡಬೇಕು. ಯಾರನ್ನೇ ನೇಮಕ ಮಾಡಿದರೂ ಎಲ್ಲರಿಗೂ ಒಂದೇ ಕಾನೂನು ಎಂದರು. ಇದನ್ನೂ ಓದಿ: ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು
ಈ ಪ್ರಕರಣದಲ್ಲಿ ಎಸ್ಪಿಪಿ ಬದಲಾವಣೆ ಆಗುತ್ತಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಒಂದು ವೇಳೆ ಎಸ್ಪಿಪಿ ಬದಲಾವಣೆ ಮಾಡಿದರೂ ಕೂಡಾ ಅದರಲ್ಲಿ ತಪ್ಪೇನಿಲ್ಲ. ಆ ರೀತಿ ತೀರ್ಮಾನ ತೆಗೆದುಕೊಂಡರೆ ಏನಾದರೂ ಕಾರಣ ಇದ್ದೇ ಇರುತ್ತದೆ. ಆದರೆ ಈ ಕೇಸ್ ಸಡಿಲ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಯಾವ ಮುಲಾಜೂ, ಒತ್ತಡ ಇಲ್ಲದೇ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್
ಬೆಂಗಳೂರು: ಸರ್ಕಾರದ ವಿಶೇಷ ಅಭಿಯೋಜಕರ (SPP) ರಿಮ್ಯಾಂಡ್ ಅರ್ಜಿಯಲ್ಲಿ ಸ್ಪಷ್ಟತೆಯಿರಲಿಲ್ಲ. ಅಲ್ಲದೇ ಅಭಿಯೋಜಕರು ಮಂಡಿಸಿದ ವಾದದಲ್ಲಿ ಯಾವುದೂ ಎ2 ಆರೋಪಿಗೆ ಸಂಬಂಧಿಸಿದ್ದಲ್ಲ. ಹಾಗಾಗಿ ಎಲ್ಲ ಆರೋಪಗಳನ್ನು ದರ್ಶನ್ (Darshan) ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲ ಅನಿಲ್ ಬಾಬು ತಿಳಿಸಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಎ2 ಆರೋಪಿ ದರ್ಶನ್ (Accused Darshan) ಪರ ವಕೀಲರು ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದರು. ಸರ್ಕಾರದ ವಿಶೇಷ ಅಭಿಯೋಜಕರ ರಿಮ್ಯಾಂಡ್ ಅರ್ಜಿಯಲ್ಲಿ ಸ್ಪಷ್ಟತೆಯಿರಲಿಲ್ಲ. ಅಲ್ಲದೇ ಅಭಿಯೋಜಕರು ಮಂಡಿಸಿದ ವಾದದಲ್ಲಿ ಯಾವುದೂ ಎ2 ಆರೋಪಿಗೆ ಸಂಬಂಧಿಸಿದ್ದಲ್ಲ. ಆದ ಕಾರಣ ಎಲ್ಲ ಆರೋಪಗಳನ್ನು ದರ್ಶನ್ ಅವರ ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಲಕಾವೇರಿ, ಭಾಗಮಂಡಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಸದ ಯದುವೀರ್
ಆರೋಪಿಗಳ ಮೊಬೈಲ್ ಡೇಟಾಗಳನ್ನ ರಿಟ್ರೀವ್ (Mobile Data Retrieve) ಮಾಡಬೇಕು. ಮೃತದೇಹ ಪತ್ತೆಯಾದ ಸ್ಥಳದಲ್ಲಿದ್ದ ಆರೋಪಿಗಳ ಬಟ್ಟೆ, ಇತರ ವಸ್ತುಗಳನ್ನು ವಶಪಡಿಸಿಕೊಳ್ಳಬೇಕು. ಜೊತೆಗೆ ರೇಣುಕಾಸ್ವಾಮಿ ಹತ್ಯೆಗೆ ಎಲೆಕ್ಟ್ರಿಕ್ ಶಾಕಿಂಗ್ ಮಿಷಿನ್ ಬಳಸಿದ್ದಾರೆ. ಅದನ್ನು ವಶಪಡಿಸಿಕೊಳ್ಳಬೇಕು. ಜೊತೆಗೆ ಆರೋಪಿಗಳ ವಾಟ್ಸಪ್ ಚಾಟ್ ಡಿಟೇಲ್ಸ್ ರಿಟ್ರೀವ್ ಮಾಡಬೇಕು. ಅದಕ್ಕಾಗಿ ಆರೋಪಿಗಳು ಪಾಸ್ವರ್ಡ್ ನೀಡಬೇಕು ಎಂಬುದು ಅಭಿಯೋಜಕರ ಮುಖ್ಯವಾದವಾಗಿತ್ತು. ಅದಕ್ಕಾಗಿ 9 ದಿನಗಳ ಕಾಲ ವಿಚಾರಣೆಗೆ ಅವಕಾಶ ಮಾಡಿಕೊಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು ಎಂದು ವಿವರಿಸಿದರು. ಇದನ್ನೂ ಓದಿ: ನಟ ದರ್ಶನ್, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ
ಅಲ್ಲದೇ ವಿಶೇಷ ಅಭಿಯೋಜಕರ ರಿಮ್ಯಾಂಡ್ ಅರ್ಜಿಯಲ್ಲಿ ಸ್ಪಷ್ಟತೆ ಇರಲಿಲ್ಲ. ಯಾವ ಆರೋಪಿಗಳಿಂದ ಏನು ವಸ್ತು? ವಾಟ್ಸಪ್ ಚಾಟ್? ಬಟ್ಟೆ ವಶಪಡಿಸಿಕೊಳ್ಳಬೇಕು? ಎಲೆಕ್ಟ್ರಿಕ್ ಮಿಷನ್ ಯಾರಿಂದ ವಶಕ್ಕೆ ಪಡೆಯಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆದ್ದರಿಂದ ಅಭಿಯೋಜಕರ ವಾದಕ್ಕೆ ನಮ್ಮ ತಕರಾರು ಇತ್ತು. ಯಾವುದೇ ಆರೋಪಿಗಳಿಂದ ಬಲವಂತವಾಗಿ ಮೊಬೈಲ್ ಪಾಸ್ವರ್ಡ್ಗಳನ್ನು ಪಡೆದು ಡೇಟಾ ರಿಟ್ರೀವ್ ಮಾಡೋದಕ್ಕೆ ಅವಕಾಶ ಇಲ್ಲ. ಅದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೋರ್ಟ್ ನೀಡಿದ್ದ ಆದೇಶಗಳನ್ನು ಉಲ್ಲೇಖಿಸಿ ತಕರಾರು ಮಂಡಿಸಿದೆವು. ನಮ್ಮ ವಾದವನ್ನು ನ್ಯಾಯಾಲಯ ಮಾನ್ಯಮಾಡಿತು. ಹಾಗಾಗಿ 9 ದಿನಗಳ ಬದಲಿಗೆ 5 ದಿನ ಮಾತ್ರ ವಿಚಾರಣೆಗೆ ಅವಕಾಶ ಮಾಡಿಕೊಟ್ಟಿತು ಎಂದು ತಿಳಿಸಿದರು.
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) ಗ್ಯಾಂಗ್ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಪ್ರಕರಣವನ್ನು ನಡೆಸಲು ಸರ್ಕಾರದ ವಿಶೇಷ ಅಭಿಯೋಜಕರಾಗಿ (SPP) ಹಿರಿಯ ವಕೀಲ ಪ್ರಸನ್ನಕುಮಾರ್ ಅವರನ್ನು ನೇಮಿಸಲಾಗಿದೆ.
ಜೂ.9 ರಂದು ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ಇಂದು ಕೋರ್ಟ್ಗೆ ಹಾಜರುಪಡಿಸಲಾಗುತ್ತಿದೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂದು ರೇಣುಕಾಸ್ವಾಮಿಯನ್ನು ಶೆಡ್ವೊಂದಕ್ಕೆ ಕರೆತಂದು ಹಲ್ಲೆ ನಡೆಸಲಾಗಿತ್ತು. ಗಂಭೀರ ಹಲ್ಲೆಯಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು. ಮೃತದೇಹ ವಿಲೇವಾರಿ ಮಾಡಲು ಮತ್ತು ದರ್ಶನ್ ಹೆಸರು ಬಾಯಿಬಿಡದಿರಲು ಕೆಲವರಿಗೆ 30 ಲಕ್ಷ ರೂ. ಹಣ ನೀಡಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೀಲ್ ಗಜನ ಪಳಗಿಸಿದ ರಿಯಲ್ ಸಲಗ | ಆಪರೇಷನ್ ’36’ ಸೂಪರ್ ಕಾಪ್ಸ್ – ಸೂಪರ್ ಸ್ಟೋರಿ ಓದಿ