Tag: Spurious Liquor

  • Punjab | ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು – 6 ಮಂದಿ ಆಸ್ಪತ್ರೆಗೆ ದಾಖಲು

    Punjab | ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು – 6 ಮಂದಿ ಆಸ್ಪತ್ರೆಗೆ ದಾಖಲು

    ಚಂಡೀಗಢ: ಕಳ್ಳಭಟ್ಟಿ (Spurious Liquor) ಸೇವಿಸಿ ಐದು ಗ್ರಾಮದ 14 ಮಂದಿ ಸಾವನ್ನಪ್ಪಿದ್ದು, 6 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ (Punjab) ಅಮೃತಸರದಲ್ಲಿ (Amritsar) ನಡೆದಿದೆ.

    ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳಲ್ಲಿನ 14 ಮಂದಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟಿದ್ದಾರೆ. ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ 14 ಮಂದಿ ಸಾವಿನ ಕುರಿತು ದೃಢಪಡಿಸಿದರು. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರ’ ಸಂಭ್ರಮ: 17 ಶಿಶುಗಳಿಗೆ ‘ಸಿಂಧೂರ’ ನಾಮಕರಣ

    ಘಟನೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಭಜಿತ್ ಸಿಂಗ್, ಕುಲ್ಬೀರ್ ಸಿಂಗ್, ಸಾಹಿಬ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತಾ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

  • ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    – 7 ಪೊಲೀಸರು ಅಮಾನತು

    ಚೆನ್ನೈ: ತಮಿಳುನಾಡಿನ (Tamil Nadu) ವಿಲ್ಲುಪುರಂ (Villupuram) ಹಾಗೂ ಚೆಂಗಲ್‌ಪೇಟ್ (Chengelpet) ಜಿಲ್ಲೆಗಳಲ್ಲಿ ನಡೆದ 2 ಪ್ರತ್ಯೇಕ ಘಟನೆಗಳಲ್ಲಿ ಕಳ್ಳಭಟ್ಟಿ (Spurious liquor) ಸೇವಿಸಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

    ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಪ್ರದೇಶದಲ್ಲಿ 6 ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಸಂಜೆಯ ವೇಳೆಗೆ ಚೆಂಗಲ್‌ಪೇಟ್ ಜಿಲ್ಲೆಯ ಮಧುರಾಂತಕಂ ಬಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    spurious_liquor

    ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತದ ಬಳಿಕ ಒಟ್ಟು 7 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮರಕ್ಕನಂ ಮತ್ತು ಮದುರಾಂತಕಂ ಪ್ರದೇಶಗಳ ನಡುವೆ ಕೇವಲ 50 ಕಿಮೀ ಅಂತರವಿದ್ದು, ಎರಡು ಘಟನೆಗಳಿಗೆ ಸಂಬಂಧವಿದೆಯೇ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿಗೆ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್

    ವರದಿಗಳ ಪ್ರಕಾರ ಮರಕ್ಕನಂ ಬಳಿಯ ಎಕ್ಕಿಯಾರ್ ಕುಪ್ಪಂನ ನಿವಾಸಿಗಳು ಶನಿವಾರ ಸಂಜೆ ಕಳ್ಳಭಟ್ಟಿ ಸೇವಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಅವರನ್ನು ಪುದುಚೇರಿ ಮತ್ತು ವಿಲ್ಲುಪುರಂನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಮತ್ತೊಂದು ಗ್ರಾಮದಿಂದಲೂ ಸಾವಿನ ಸುದ್ದಿಗಳು ಕೇಳಿಬಂದಿದೆ. ಇನ್ನೂ ಹಲವು ಪ್ರದೇಶದ ವಿವಿಧ ಆಸ್ಪತ್ರೆಗಳಿಗೆ ಜನರು ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ರಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಕೆಲವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಭಾರತೀಯ ಸಿಮ್‌ಕಾರ್ಡ್, ಒಟಿಪಿ ಹಂಚಿಕೆ – ಮೂವರು ಅರೆಸ್ಟ್

  • ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ಸೇವಿಸಿ 3 ಸಾವು, 6 ಮಂದಿ ಆಸ್ಪತ್ರೆ ದಾಖಲು

    ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ಸೇವಿಸಿ 3 ಸಾವು, 6 ಮಂದಿ ಆಸ್ಪತ್ರೆ ದಾಖಲು

    ಪಾಟ್ನಾ: ಕೆಲ ದಿನಗಳ ಹಿಂದೆ ಬಿಹಾರದಲ್ಲಿ (Bihar) ಕಳ್ಳಭಟ್ಟಿ (Spurious Liquor) ಸೇವಿಸಿ 70ಕ್ಕೂ ಅಧಿಕ ಜನರು ಸಾವನ್ನಪ್ಪಿ ದೊಡ್ಡ ದುರಂತವೇ ಎನಿಸಿಕೊಂಡಿತ್ತು. ಇದೀಗ ಮತ್ತೆ ಕಳ್ಳಭಟ್ಟಿ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಸಿವಾನ್ (Siwan) ಜಿಲ್ಲೆಯಲ್ಲಿ ವರದಿಯಾಗಿದೆ.

    ಸಿವಾನ್ ಜಿಲ್ಲೆಯ ಬಾಲಾ ಗ್ರಾಮದಲ್ಲಿ ಭಾನುವಾರ ಕಳ್ಳಭಟ್ಟಿ ಸೇವಿಸಿ 3 ಜನರು ಸಾವನ್ನಪ್ಪಿದ್ದರೆ, 6 ಜನರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಪಾಂಡೆ ಮಧ್ಯರಾತ್ರಿ ಸದರ್ ಆಸ್ಪತ್ರೆಗೆ ತೆರಳಿ ವಿಷಯದ ಬಗ್ಗೆ ವಿಚಾರಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 3 ಜನರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ 6 ಜನರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಮೇಲ್ನೋಟಕ್ಕೆ ಕಳ್ಳಭಟ್ಟಿ ಸೇವಿಸಿ ಜನರು ಸಾವಿಗೀಡಾಗಿದ್ದಾರೆ. ಅಸ್ವಸ್ಥರು ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ಲೀಸ್ ಮುಕ್ತಿ ಕೊಡಿಸಿ ಸರ್- ಎಮ್ಮೆಗಳ ವಿರುದ್ಧ ಅರವಿಂದ ಲಿಂಬಾವಳಿಗೆ ಟೆಕ್ಕಿಗಳಿಂದ ದೂರು!

    2022ರ ಡಿಸೆಂಬರ್‌ನಲ್ಲಿ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ 70 ಜನರು ಸಾವನ್ನಪ್ಪಿದ್ದರು. ಛಾಪ್ರಾದಲ್ಲಿ ನಡೆದ ಕಳ್ಳಭಟ್ಟಿ ದುರಂತ (Bihar Hooch Tragedy) ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮದ್ಯ ಕಳ್ಳಸಾಗಣೆ ಮಾಡುತ್ತಿದ್ದವನನ್ನು ಬಂಧಿಸಿ 2.17 ಲಕ್ಷ ರೂ.ಯನ್ನು ವಶಪಡಿಸಿಕೊಂಡಿದ್ದರು.

    spurious_liquor

    ಇದೀಗ ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಹಾಗೂ ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತರನ್ನು ಗುರುತಿಸಲು ಹಾಗೂ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ಬಾಳಲ್ಲಿ ಶಿಕ್ಷಣ ಸಂಸ್ಥೆಗಳ ಎಡವಟ್ಟು- ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿಗಳಿಗೆ ಆತಂಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಕಲಿ ಮದ್ಯ ಸೇವಿಸಿ ಮೂವರು ಸಾವು – 44 ಮಂದಿ ಆಸ್ಪತ್ರೆಗೆ ದಾಖಲು

    ನಕಲಿ ಮದ್ಯ ಸೇವಿಸಿ ಮೂವರು ಸಾವು – 44 ಮಂದಿ ಆಸ್ಪತ್ರೆಗೆ ದಾಖಲು

    ಲಕ್ನೋ: ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, ಸುಮಾರು 44 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಪ್ರದೇಶದ ಅಜಂಗಢ್‍ನ ಅಹ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹುಲ್ ನಗರದಲ್ಲಿ ನಡೆದಿದೆ.

    ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 44 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು-ಏಳು ಮಂದಿ ಡಯಾಲಿಸಿಸ್‍ನಲ್ಲಿದ್ದಾರೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಜಂಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮೃತ್ ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಸದ್ಯ ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಶಿವಮೊಗ್ಗ ಡಿಐಜಿ

    ಇದೀಗ ಪೊಲೀಸರು ಅಂಗಡಿಯ ಇಬ್ಬರು ಮಾರಾಟಗಾರರನ್ನು ಬಂಧಿಸಿದ್ದಾರೆ ಮತ್ತು ಮಾಲೀಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸದ್ಯ ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

  • ಕಳ್ಳಭಟ್ಟಿ ಸೇವಿಸಿ 7 ಮಂದಿ ಸಾವು, 30 ಮಂದಿ ಅಸ್ವಸ್ಥ

    ಕಳ್ಳಭಟ್ಟಿ ಸೇವಿಸಿ 7 ಮಂದಿ ಸಾವು, 30 ಮಂದಿ ಅಸ್ವಸ್ಥ

    ಲಕ್ನೋ: ಕಳ್ಳಭಟ್ಟಿ ಸೇವಿಸಿ 7 ಮಂದಿ ಸಾವನ್ನಪ್ಪಿದ್ದು, 30 ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆಯ ಬಳಿಕ ಮದ್ಯದಂಗಡಿ ಮಾಲೀಕ ನಾಪತ್ತೆಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

    ಮಂಗಳವಾರ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಜನರು ಕಳ್ಳಭಟ್ಟಿ ಸೇವಿಸಿದ್ದು, 12 ಮಂದಿಯ ಸ್ಥಿತಿ ಅದೇ ಸಂದರ್ಭ ಹದಗೆಟ್ಟಿತ್ತು. ಸಾವನ್ನಪ್ಪಿದ 7 ಮಂದಿ ಹೊರತುಪಡಿಸಿ 6 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಕಳ್ಳಭಟ್ಟಿ ಸೇವಿಸಿ ಜನರು ಸಾವನ್ನಪ್ಪುತ್ತಿದ್ದಂತೆ ಮದ್ಯದಂಗಡಿ ಮಾಲೀಕ ನಾಪತ್ತೆಯಾಗಿದ್ದಾನೆ. ಕಳ್ಳಭಟ್ಟಿ ಮಾರಾಟ ಮಾಡುತ್ತಿದ್ದ ಅಂಗಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗನ್ ತರಿಸಿಕೊಳ್ಳುವುದು ಪಿಜ್ಜಾ ಆರ್ಡರ್ ಮಾಡಿದಷ್ಟೇ ಸುಲಭ!

    ಕಳ್ಳಭಟ್ಟಿ ಸರಬರಾಜು ಮಾಡುವವರ ಪತ್ತೆಗೆ ತನಿಖೆ ನಡೆಯುತ್ತಿದೆ. ಪೂರೈಕೆದಾರರು 2 ನಿರ್ದಿಷ್ಟ ಬ್ರ್ಯಾಂಡ್ ಮದ್ಯವನ್ನು ಮಾರಾಟ ಮಾಡಿದ್ದು, ಅದರಲ್ಲಿ ಒಂದು ಬ್ರ್ಯಾಂಡ್ ಸಾವುಗಳಿಗೆ ಕಾರಣವಾಗುತ್ತಿದೆ. ಮೃತರ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಲಾಗಿದೆ ಎಂದು ರಾಯ್ಬರೇಲಿ ಎಸ್‍ಪಿ ಶ್ಲೋಕ್ ಕುಮಾರ್ ತಿಳಿಸಿದ್ದಾರೆ.

  • ಕಳ್ಳ ಭಟ್ಟಿ ಸೇವಿಸಿ 4 ಮಂದಿ ಸಾವು

    ಪಾಟ್ನಾ: ಬಿಹಾರದ ನಲಂದಾದಲ್ಲಿ ಕಳ್ಳ ಭಟ್ಟಿ ಸೇವಿಸಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕಳ್ಳ ಭಟ್ಟಿ ಸೇವಿಸಿ ಮೃತಪಟ್ಟವರು ಭಾಗೋ ಮಿಸ್ತ್ರಿ (55), ಮುನ್ನಾ ಮಿಸ್ತ್ರಿ (55), ಧರ್ಮೇಂದ್ರ(50) ಹಾಗೂ ಕಾಳಿಚರಣ್ ಮಿಸ್ತ್ರಿ ಎಂದು ಗುರುತಿಸಲಾಗಿದೆ. ಘಟನೆ ನಳಂದಾದ ಸೋಹ್ಸರಾಯ್‌ನಲ್ಲಿರುವ ಚೋಟಾ ಪಹಾರಿ ಪ್ರದೇಶದಲ್ಲಿ ನಡೆದಿದೆ. ಇದನ್ನೂ ಓದಿ: ಸಂಕ್ರಾಂತಿ ಪುಣ್ಯಸ್ನಾನ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು

    ಕಳ್ಳ ಭಟ್ಟಿಯನ್ನು ಸೇವಿಸಿದ ಕಾರಣ ಸಾವು ಸಂಭವಿಸಿದೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ. ಆದರೆ ಸಾವಿಗೆ ಕಾರಣ ಏನು ಎಂಬುದನ್ನು ಜಿಲ್ಲಾಡಳಿತ ಇನ್ನೂ ಖಚಿತಪಡಿಸಿಲ್ಲ. ಡಿಎಸ್‌ಪಿ ಶಿಬ್ಲಿ ನೋಮಾನಿ ಈ ಪ್ರಕರಣದ ತನಿಖೆ ನಡೆಸಲಿದ್ದಾರೆ. ಇದನ್ನೂ ಓದಿ: ಹಾರೆಯಿಂದ ಹೊಡೆದು ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

    ಕಳೆದ ವರ್ಷ ದೀಪಾವಳಿಯ ಸಂದರ್ಭದಲ್ಲಿ ಪಶ್ಚಿಮ ಚಂಪಾರಣ್ ಪ್ರದೇಶದಲ್ಲಿ ಕಳ್ಳ ಭಟ್ಟಿ ಸೇವಿಸಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಘಟನೆಯ ಬಳಿಕ ಕಳ್ಳ ಭಟ್ಟಿ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವಂತೆ ಬಿಹಾರ ಸರ್ಕಾರ ಪೊಲೀಸ್ ಇಲಾಖೆಗೆ ಸೂಚನೆ ನೀಡಿತ್ತು.

  • ಬಿಹಾರ್‌: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!

    ಬಿಹಾರ್‌: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!

    ಪಾಟ್ನಾ: ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಪರಿಣಾಮವಾಗಿ ಕಳೆದೆರಡು ದಿನಗಳಿಂದ ಸ್ಥಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

    ಬೆಟ್ಟಿಯಾ ಬಳಿಯ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು. ಮತ್ತೆ ಗೋಪಾಲ್‌ಗಂಜ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಹಲವು ರಸ್ತೆಗಳು ಜಲಾವೃತ

    24 ಮಂದಿ ಸಾವಿಗೆ ನಿಖರ ಕಾರಣವನ್ನು ಜಿಲ್ಲಾಡಳಿತ ಇನ್ನೂ ಸ್ಪಷ್ಟಪಡಿಸಿಲ್ಲ. ತೆಲ್ಹುವಾದಲ್ಲಿ ಆಗಿರುವ ಕಳ್ಳಭಟ್ಟಿ ಪ್ರಕರಣವು ಉತ್ತರ ಬಿಹಾರ್‌ನಲ್ಲಿ ಸಂಭವಿಸಿದ ಮೂರನೇ ದುರಂತವಾಗಿದೆ. ಕಳೆದ 10 ದಿನಗಳ ಹಿಂದೆ ಇದೇ ಮಾದರಿಯಲ್ಲಿ ಸಾವು ಸಂಭವಿಸಿತ್ತು.

    ಬಿಹಾರ ಸಚಿವ ಜಾನಕ್‌ ರಾಮ್‌ ಅವರು ಗೋಪಾಲ್‌ಗಂಜ್‌ಗೆ ಭೇಟಿ ನೀಡಿದ್ದಾರೆ. ನಂತರ ಮಾತನಾಡಿರುವ ಅವರು, ಶಂಕಿತ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿದ್ದೇನೆ. ಇದು ಎನ್‌ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮಾಡಿರುವ ಪಿತೂರಿಯಾಗಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೆ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೋಪಾಲ್‌ಗಂಜ್‌ ಹಿರಿಯ ಪೊಲೀಸ್‌ ಅಧಿಕಾರಿ ಆನಂದ್‌ ಕುಮಾರ್‌, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜನರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಂಡಗಳು ತನಿಖೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

  • ನಕಲಿ ಮದ್ಯಕ್ಕೆ ಮೂವರು ಬಲಿ, 29 ಮಂದಿ ಅಸ್ವಸ್ಥ!

    ನಕಲಿ ಮದ್ಯಕ್ಕೆ ಮೂವರು ಬಲಿ, 29 ಮಂದಿ ಅಸ್ವಸ್ಥ!

    ಭುವನೇಶ್ವರ: ನಕಲಿ ಮದ್ಯವನ್ನು ಸೇವಿಸಿ 29 ಮಂದಿ ಅಸ್ವಸ್ಥಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ನಡೆದಿದೆ.

    ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನಕ್ಕಾಗಿ ಸ್ಥಳೀಯ ರಾಜಕೀಯ ನಾಯಕರು ಮತ ಹಾಕಲು ಜನರಿಗೆ ಹಣವನ್ನು ನೀಡಿದ್ದರು. ಈ ಹಣವನ್ನು ಬಳಸಿಕೊಂಡು ಅಲ್ಲಿನ ಜನರು ಮದ್ಯ ಖರೀದಿಸಿ ಕುಡಿದಿದ್ದರು. ಬಳಿಕ ಹೀಗೆ ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಅಂತ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಉಮಾಕಾಂತ್ ಹೇಳಿದ್ದಾರೆ.

    ಭದ್ರಾಕ್ ಜಿಲ್ಲೆಯ ತಿಹಿಡೀ ಪೊಲೀಸ್ ಠಾಣಾ ವ್ಯಾಪ್ತಿಯ ದೌಲತಪುರ ಗ್ರಾಮದ ಜನರು ಮತದಾನದ ಬಳಿಕ ಸ್ಥಳೀಯ ಮಾರುಕಟ್ಟೆಯಿಂದ ಮದ್ಯ ಖರೀದಿಸಿ ತಂದಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಉಮಾಕಾಂತ್ ಹೇಳಿದ್ದಾರೆ.

    ಘಟನೆಯಲ್ಲಿ ಅಸ್ವಸ್ಥರಾದ 29 ಮಂದಿಯನ್ನು ಎಸ್‍ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತರನ್ನು ಸುಧಾ ಚರಣ್ ನಾಯಕ್, ಸರಬೇಸವಾ ದಾಸ್, ರಾಮಚಂದ್ರ ದಾಸ್ ಎಂದು ಗುರುತಿಸಲಾಗಿದೆ.

    ನಕಲಿ ಮದ್ಯವನ್ನು ಸೇವಿಸಿದ ಬಳಿಕ ಕೆಲವರಿಗೆ ಹೊಟ್ಟೆ ನೋವು, ಕಣ್ಣು ಕಾಣದಿದ್ದ ಹಾಗೆ ಆಗಿತ್ತು ಎಂದು ಕೆಲವರು ತಿಳಿಸಿದ್ದಾರೆ. ಹಾಗೆಯೇ ಈ ನಕಲಿ ಮದ್ಯ ಸರಬರಾಜು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಭದ್ರಾಕ್‍ನ ಚಂದಬಲಿ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಕೂಡ ನಡೆಸಿದ್ದಾರೆ. ಇದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಬಳಿಕ ಪೊಲೀಸರು ಜನರ ಮನವೊಲಿಸಿ ಪ್ರತಿಭಟನೆಗೆ ತೆರೆ ಎಳೆಯಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.