Tag: SR Patil

  • ನವಲಗುಂದದಲ್ಲಿ ಕೋನರೆಡ್ಡಿ ಗೆಲ್ಲಿಸಲು ಕೈ ಖೇಲ್ – ಬದಾಮಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಡೀಲ್..?

    ನವಲಗುಂದದಲ್ಲಿ ಕೋನರೆಡ್ಡಿ ಗೆಲ್ಲಿಸಲು ಕೈ ಖೇಲ್ – ಬದಾಮಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಡೀಲ್..?

    ಬಾಗಲಕೋಟೆ: ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆಯಂತೆ ಅಂತಾ ಹೇಳಿಕೊಂಡು 10 ದಿನದಿಂದ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡ್ತಿದ್ದಾರೆ. ಮೋದಿ-ದೇವೇಗೌಡರು ಪರಸ್ಪರ ಹೊಗಳಿಕೊಂಡ ಮೇಲಂತೂ ಸಿಎಂ ಹೇಳಿಕೆ ತೀವ್ರ ಸ್ವರೂಪ ಪಡೆದಿದೆ.

    ಈ ಬಾರಿಯ ಚುನಾವಣೆಯಲ್ಲಿ ಪ್ರತಿಯೊಂದು ಹೆಜ್ಜೆಯನ್ನು ಸಿದ್ದರಾಮಯ್ಯ ಎಚ್ಚರಿಕೆಯಿಂದ ಇಡುತ್ತಿದ್ದಾರೆ. ಯಾವುದಕ್ಕೂ ಇರಲಿ ಅಂತಾ ಸಿಎಂ ಕೆಲ ಜೆಡಿಎಸ್ ಅಭ್ಯರ್ಥಿಗಳ ಜೊತೆ ಡೀಲ್ ಮಾಡಿಕೊಂಡ್ರಾ ಎಂಬ ಪ್ರಶ್ನೆ ಕೇಳಿ ಬರುತ್ತಿದೆ. ನವಲಗುಂದದಲ್ಲಿ ಜೆಡಿಎಸ್ ಕೋನರೆಡ್ಡಿಯನ್ನು ಸುಲಭವಾಗಿ ಗೆಲ್ಲುವಂತೆ ನೋಡಿಕೊಂಡು, ಒಂದು ವೇಳೆ ಮೈತ್ರಿ ಸಂದರ್ಭ ಬಂದ್ರೆ ಕೋನರೆಡ್ಡಿಯನ್ನು ಟ್ರಂಪ್ ಕಾರ್ಡ್ ಆಗಿ ಬಳಸಿಕೊಳ್ಳಲು ಸಿಎಂ ಪ್ಲಾನ್ ಮಾಡಿದ್ದಾರೆ ಅಂತ ಹೇಳಲಾಗ್ತಿದೆ.

    ಕೋನರೆಡ್ಡಿ ಅವರನ್ನು ಗೆಲ್ಲಿಸುವುದಕ್ಕಾಗಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಸಿಎಂ ಸ್ಪರ್ಧಿಸಿರೋ ಬದಾಮಿಯಲ್ಲಿಯೂ ಕಾಂಗ್ರೆಸ್- ಜೆಡಿಎಸ್ ಒಳ ಒಪ್ಪಂದದ ಚರ್ಚೆ ನಡೆದಿದ್ಯಾ ಅನ್ನೋ ಪ್ರಶ್ನೆ ಕೂಡ ಎದ್ದಿದೆ.

    ಕಾಂಗ್ರೆಸ್-ಜೆಡಿಎಸ್ ಜೊತೆ ಒಪ್ಪಂದ ಮಾಡಿಕೊಂಡಿವೆ ಎಂಬ ಪ್ರಶ್ನೆಗಳಿಗೆ ಪೂರಕ ಎಂಬಂತೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಹಾಗೂ ಬದಾಮಿ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ್ ಭೇಟಿ ಮಾಡಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.

    ಭೇಟಿ ಬಳಿಕ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ್, ಎಸ್.ಆರ್.ಪಾಟೀಲರನ್ನ ಭೇಟಿಯಾಗಿದ್ದು ನಿಜ. ಔಪಚಾರಿಕವಾಗಿ ಭೇಟಿಯಾಗಿದ್ದೆ ಅಷ್ಟೇ ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ. ಆಕಸ್ಮಿಕವಾಗಿ ಹೋಟೆಲ್ ನಲ್ಲಿ ಸಿಕ್ಕಿದ್ದರು ಮಾತನಾಡಿಸಿದೆ. ಬಿಜೆಪಿ ನಾಯಕರು ಎದರುಗಡೆ ಸಿಕ್ಕರೆ ಮಾತನಾಡಿಸುವೆ ಇದರಲ್ಲಿ ಯಾವುದೇ ಒಳಒಪ್ಪಂದವಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ಸೋಲಿನ ಭಯದಿಂದ ಈ ರೀತಿ ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಬದಾಮಿ ಅತಿ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸುತ್ತೇವೆ ಅಂತಾ ಸ್ಪಷ್ಟನೆ ನೀಡಿದ್ರು.

    ಇದೇ ವಿಚಾರವಾಗಿ ಮಾತನಾಡಿದ ಎಸ್.ಆರ್.ಪಾಟೀಲ್, ಒಂದೇ ಹೋಟೆಲ್ ನಲ್ಲಿ ಇರೋದಕ್ಕೆ ಜೆಡಿಎಸ್ ಅಭ್ಯರ್ಥಿ ಭೇಟಿಯಾಗಿದ್ದಾರೆ. ಭೇಟಿ ವೇಳೆ ನನ್ನೊಂದಿಗೆ ಚಹಾ ಸೇವಿಸಿದ್ರು. ಭೇಟಿಯ ವೇಳೆ ನಮ್ಮಿಬ್ಬರ ಮಧ್ಯೆ ಯಾವುದೇ ರಾಜಕೀಯ ಒಳ ಒಪ್ಪಂದದ ಚರ್ಚೆಯಾಗಿಲ್ಲ. ಹಳೆಯ ಸ್ನೇಹ ಇರೋದಕ್ಕೆ ಜೆಡಿಎಸ್ ಅಭ್ಯರ್ಥಿ ಹನಮಂತ ಮಾವಿನಮರದ ನನ್ನನ್ನು ಭೇಟಿಯಾಗಿದ್ರು ಅಂತ ಪಾಟೀಲ್ ಸಮರ್ಥಿಸಿಕೊಂಡ್ರು.

  • ಬಿಎಸ್‍ವೈ ಜೈಲಿಗೆ ಹೋಗಲು ಬಿಜೆಪಿಯವರೆ ಕಾರಣ: ಎಸ್‍ಆರ್ ಪಾಟೀಲ್

    ಬಿಎಸ್‍ವೈ ಜೈಲಿಗೆ ಹೋಗಲು ಬಿಜೆಪಿಯವರೆ ಕಾರಣ: ಎಸ್‍ಆರ್ ಪಾಟೀಲ್

    ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೆ ಕಾರಣ. ಅವರ ಪಕ್ಷದಲ್ಲೇ ಅವರಿಗೆ ಸಾಕಷ್ಟು ವಿರೋಧಿಗಳಿದ್ದಾರೆ. ಬಿಜೆಪಿ ಇಂದು ಒಡೆದ ಮನೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‍ಆರ್ ಪಾಟೀಲ್ ಹೇಳಿದ್ದಾರೆ.

    ಮನೆ ಮನೆಗೆ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಾಟೀಲ್, ನಾವು ಜೈಲಿಗೆ ಕಳುಹಿಸುವವರಲ್ಲ, ಲೋಕಾಯುಕ್ತ ವರದಿಯ ಆಧಾರದ ಮೇಲೆ ಬಿಎಸ್‍ವೈ ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋಗಿದ್ದರು. ಅವರ ಪಕ್ಷದಲ್ಲಿ ಗುಂಪುಗಾರಿಕೆ ಇದೆ, ಒಬ್ಬರನ್ನ ಮತ್ತೊಬ್ಬರು ಜೈಲಿಗೆ ಕಳುಹಿಸಲು ಅವರಲ್ಲಿಯೇ ಪೈಪೋಟಿ ಇದೆ. ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಸಮರ್ಥಿಸಿಕೊಂಡರು.

    ಬಿಜೆಪಿ ಇಂದು ಒಡೆದ ಮನೆಯಾಗಿದೆ, ಈ ಹಿಂದೆ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ ಬಿಎಸ್‍ವೈ ಹಾಗೂ ಈಶ್ವರಪ್ಪ ಮಧ್ಯೆ ದೊಡ್ಡ ಯುದ್ಧವೇ ಆಯಿತು ಎಂದು ಲೇವಡಿ ಮಾಡಿದರು.

    ಬಿಎಸ್‍ವೈ ವಿರುದ್ಧ ಎಸಿಬಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಪಾಟೀಲ್, ಬಿಎಸ್‍ವೈಗೆ ತಾತ್ಕಾಲಿಕ ತಡೆಯಾಜ್ಞೆ ಸಿಕ್ಕಿದೆ. ನ್ಯಾಯಾಲಯದ ಆದೇಶವನ್ನ ನಾವು ಗೌರವಿಸುತ್ತೇವೆ ಎಂದರು.

  • ಲಿಂಗಾಯತ-ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ: ಎಸ್.ಆರ್.ಪಾಟೀಲ್

    ಲಿಂಗಾಯತ-ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ: ಎಸ್.ಆರ್.ಪಾಟೀಲ್

    ಬಾಗಲಕೋಟೆ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಬೇಕೆನ್ನುವವರಲ್ಲಿ ನಾನು ಮೊದಲಿಗ. ಲಿಂಗಾಯತ ಹಾಗೂ ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಹೇಳಿದ್ದಾರೆ.

    ಲಿಂಗಾಯತ ಧರ್ಮವನ್ನ ವಿಶ್ವಗುರು ಬಸವಣ್ಣ ಸ್ಥಾಪನೆ ಮಾಡಿದ್ದಾರೆ. ಆದ್ರೆ ಹಿಂದೂ ಧರ್ಮವನ್ನ ಯಾರು ಸ್ಥಾಪನೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಲಿಂಗಾಯತ ಧರ್ಮದಲ್ಲಿ ಸಮಾನತೆ ಇದೆ. ಜಾತ್ಯಾತೀತ ನಿಲುವಿದೆ. ನಾವು ಸಮಾಜ ಕಟ್ಟುವವರು, ಒಡೆಯುವವರಲ್ಲ. ಒಡೆಯುವವರು ಬೇರೆಯೇ ಇದ್ದಾರೆಂದು ಪರೋಕ್ಷವಾಗಿ ಬಿಜೆಪಿ ನಾಯಕರ ಕಾಲೆಳೆದ್ರು.

    ಲಿಂಗಾಯತ ಧರ್ಮಕ್ಕೆ ಪೇಜಾವರ ಶ್ರೀಗಳ ವೀರೋಧಕ್ಕೆ ಪ್ರತಿಕ್ರಿಯಿಸಿ, ಪೇಜಾವರ ಶ್ರೀಗಳು ಇದ್ರಲ್ಲಿ ಮೂಗು ತೂರಿಸೋದು ಬೇಡ. ಈ ಹಿಂದೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಎರಡು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರದಲ್ಲಿ ಯುಪಿಎ ಸರ್ಕಾರ ಮುಂದುವರೆದಿದ್ರೆ ಈಗಾಗಲೇ ಲಿಂಗಾಯತ ಧರ್ಮ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುತ್ತಿತ್ತು ಅಂದ್ರು.

    ಸಿಎಂ ಸಿದ್ದರಾಮಯ್ಯ ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡೋದು ಒಳ್ಳೆಯದು. ಈ ಬಗ್ಗೆ ಪ್ರಕ್ರಿಯೆಗಳು ನಡೆದಿವೆ. ಈ ಹಿಂದೆ ಲಿಂಗಾಯತ ಧರ್ಮ ಪ್ರತ್ಯೇಕಕ್ಕಾಗಿ ಬಿಎಸ್‍ವೈ ಅವ್ರೇ ಸಹಿ ಹಾಕಿದ್ರು. ಸದ್ಯ ವಿರೋಧಿಸೋದು ಬೇಡ ಎಂದು ಸಲಹೆ ನೀಡಿದರು.

     

  • ಕೆಪಿಸಿಸಿ ಅಧ್ಯಕ್ಷಗಾದಿಗಾಗಿ ಕಾಂಗ್ರೆಸ್‍ನಲ್ಲಿ ಬಿಗ್ ಫೈಟ್ – ನಾಲ್ವರಲ್ಲಿ ಯಾರಾಗ್ತಾರೆ ಪ್ರೆಸಿಡೆಂಟ್

    ಕೆಪಿಸಿಸಿ ಅಧ್ಯಕ್ಷಗಾದಿಗಾಗಿ ಕಾಂಗ್ರೆಸ್‍ನಲ್ಲಿ ಬಿಗ್ ಫೈಟ್ – ನಾಲ್ವರಲ್ಲಿ ಯಾರಾಗ್ತಾರೆ ಪ್ರೆಸಿಡೆಂಟ್

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕದ ಗೊಂದಲ ಇನ್ನೂ ಮುಂದುವರಿಯಲಿದೆ. ಅಧ್ಯಕ್ಷರನ್ನಾಗಿ ಯಾರನ್ನು ಮಾಡಬೇಕು ಎಂಬುದು ಹೈಕಮಾಂಡ್‍ಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

    ಕೆಪಿಸಿಸಿ ಅಧ್ಯಕ್ಷರ ರೇಸ್‍ನಲ್ಲಿ ಡಿಕೆ ಶಿವಕುಮಾರ್, ಎಂಬಿ ಪಾಟೀಲ್ ಮತ್ತು ಎಸ್‍ಆರ್ ಪಾಟೀಲ್ ಹೆಸರು ಬಲವಾಗಿ ಕೇಳಿಬರುತ್ತಿದ್ದು ಮತ್ತೊಂದು ಕಡೆ ಹಾಲಿ ಅಧ್ಯಕ್ಷ ಪರಮೇಶ್ವರ್ ಹುದ್ದೆಯಲ್ಲಿ ಮುಂದುವರಿಯುವ ಇಂಗಿತವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಆಯ್ಕೆಗೆ ಸಚಿವರಲ್ಲೇ ಒಮ್ಮತ ಇಲ್ಲ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಆದ್ರೆ ಡಿಕೆ ಶಿವಕುಮಾರ್ ಎಲ್ಲರನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದು ಕೆಪಿಸಿಸಿ ಅಧ್ಯಕ್ಷರ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

    ಹೈಕಮಾಂಡ್ ಜೊತೆಯೂ ಸಿಎಂ ಮಾತುಕತೆ ನಡೆಸಿದ್ದು ಪರಮೇಶ್ವರ್ ಅವರನ್ನು ಮುಂದುವರಿಸಲು ನಿರಾಸಕ್ತಿ ತೋರಿದ್ದಾರೆ. ಶಿವಕುಮಾರ್ ಆಯ್ಕೆಗೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗೀ ಹೈಕಮಾಂಡ್ ಕೂಡಾ ಗೊಂದಲಕ್ಕೆ ಈಡಾಗಿದ್ದು ಯಾವುದೇ ನಿರ್ಣಯ ತೆಗೆದುಕೊಳ್ಳಲು ತಯಾರಿಲ್ವಂತೆ. ಆದ್ರೆ ಶೀಘ್ರದಲ್ಲಿ ಅಧ್ಯಕ್ಷರ ಆಯ್ಕೆ ಮಾಡುವ ಭರವಸೆಯನ್ನ ಹೈಕಮಾಂಡ್ ನೀಡಿದೆಯಂತೆ.

    ಡಿಕೆ ಶಿವಕುಮಾರ್ ಇಲ್ಲವೇ ಎಂಬಿ ಪಾಟೀಲ್ ಅವರನ್ನ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದ್ದು ಒಂದು ವೇಳೆ ಪರಮೇಶ್ವರ್ ಮುಂದುವರಿಯುವುದಾದ್ರೆ ಎರಡು ತಿಂಗಳಲ್ಲಿ ಗೃಹ ಸಚಿವರ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಸಂಘಟನೆಗೆ ಒತ್ತು ನೀಡುವಂತೆ ಹೈಕಮಾಂಡ್ ಕೆಲವು ಷರತ್ತುಗಳನ್ನು ಹಾಕಿ ಮಂದುವರಿಸುವ ಸಾಧ್ಯತೆಯೂ ಇದೆ.

    ಇತ್ತ ವಿಧಾನ ಪರಿಷತ್‍ನ ಮೂರು ಸ್ಥಾನಕ್ಕೆ ಮೋಹನ್ ಕೊಂಡಜ್ಜಿ, ಸಿ.ಪಿ ಲಿಂಗಪ್ಪ ಹಾಗೂ ಕೆ.ಪಿ ನಂಜುಡಿ ಅವರ ಹೆಸರುಗಳು ಬಹುತೇಕ ಖಚಿತವಾಗಿದ್ದು ಅಂತಿಮ ಘೋಷಣೆ ಬಾಕಿ ಉಳಿದಿದೆ. ಸಿಎಂ ಬೆಂಗಳೂರಿಗೆ ಬಂದ ಬಳಿಕ ಘೋಷಣೆ ಮಾಡಲಿದ್ದಾರೆ.