Tag: Sreegandha

  • ಕಳ್ಳರ ಗ್ಯಾಂಗ್ ಅರೆಸ್ಟ್ – 21 ಲಕ್ಷ ಮೌಲ್ಯದ ಶ್ರೀಗಂಧ ವಶ

    ಕಳ್ಳರ ಗ್ಯಾಂಗ್ ಅರೆಸ್ಟ್ – 21 ಲಕ್ಷ ಮೌಲ್ಯದ ಶ್ರೀಗಂಧ ವಶ

    ಚಿಕ್ಕಬಳ್ಳಾಪುರ: ಶ್ರೀಗಂಧ ಬೆಳೆಗಾರರಿಗೆ ಕಂಟಕವಾಗಿದ್ದ ಕಳ್ಳರ ಗುಂಪಿನ ಸದಸ್ಯರನ್ನು ಚಿಂತಾಮಣಿ ಪೊಲೀಸರು ಬಂಧಿಸಿದ್ದು, ಕಳ್ಳರ ಬಳಿಯಿದ್ದ 21 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಲಾಭದಾಯಕ ಶ್ರೀಗಂಧದ ಮರಗಳನ್ನು ಬೆಳೆಸಿ ನಾಲ್ಕು ಕಾಸು ನೋಡೋಣ ಎಂದು ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಯ ರೈತರು, ಹಗಲು ರಾತ್ರಿ ಕಷ್ಟಪಟ್ಟು ಶ್ರೀಗಂಧದ ಮರಗಳನ್ನು ಬೆಳೆಸುತ್ತಾರೆ. ಆದರೆ ರಾತ್ರೋರಾತ್ರಿ ಶ್ರೀಗಂಧದ ತೋಟಕ್ಕೆ ನುಗ್ಗುತ್ತಿದ್ದ ಕಳ್ಳರ ಗ್ಯಾಂಗ್, ರೈತರು ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗ್ತಿದ್ರು. ಆದ್ರೆ ಈಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪೊಲೀಸರು ಕಳ್ಳರ ಹಿಂದೆ ಬಿದ್ದು, 7 ಜನರ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸಕಲ ಸೌಲಭ್ಯಗಳಿರುವ ನವಬೆಂಗಳೂರು ನಿರ್ಮಾಣಕ್ಕೆ ನೀಲನಕ್ಷೆ: ಸಿಎಂ

    ದಬರಾಗನಹಳ್ಳಿಯ ನರಸಿಂಹಮೂರ್ತಿ, ಮುನಿಯಪ್ಪ, ಮುನಿರಾಜು, ಪ್ರಸನ್ನ, ಪ್ರದೀಪ್, ಕೃಷ್ಣಮೂರ್ತಿ ಹಾಗೂ ಕಟ್ಟಿಗೇನಹಳ್ಳಿಯ ಮಹಮದ್ ಇಸ್ಮಾಯಿಲ್ ಬಂಧಿತರು. ಕಳೆದ ಡಿಸೆಂಬರ್ 22 ರಂದು ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ರೈತ ರಮೇಶ್ ಅವರ ಶ್ರೀಗಂಧದ ತೋಟಕ್ಕೆ ಖದೀಮರು ನುಗ್ಗಿದ್ದು, ಶ್ರೀಗಂಧದ ಮರಗಳನ್ನ ಕಟಾವು ಮಾಡಿಕೊಂಡು ಹೋಗಿದ್ರು.

    ಈ ಸಂಬಂಧ ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ರಮೇಶ್ ದೂರು ನೀಡಿದ್ದರು. ಪ್ರಕರಣದ ತನಿಖೆಗಿಳಿದ ಪೊಲೀಸರಿಗೆ 03 ಜನವರಿ 2022 ರಂದು ಮಾಡಿಕೆರೆ ಕ್ರಾಸ್ ಬಳಿ ಅನುಮಾನಸ್ಪದವಾಗಿ, ಪೊಲೀಸರನ್ನು ಕಂಡು ಚಕ್ಕೆಗಳನ್ನ ಬಿಸಾಡಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಸಲಿ ಸತ್ಯ ಬಯಲಾಗಿದೆ.

    ಬಂಧಿತ ಪೊಲೀಸರ ಬಳಿ ಶ್ರೀಗಂಧ ಕಳ್ಳತನದ ಬಗ್ಗೆ ಬಾಯಿ ಬಿಟ್ಟಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗಿ ಕಳ್ಳರ ಹೆಸರನ್ನು ಹೇಳಿದ್ದಾನೆ. ಚಿಂತಾಮಣಿ ಹಾಗೂ ಶ್ರೀನಿವಾಸಪುರ ತಾಲೂಕುಗಳು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ 9 ಪ್ರಕರಣಗಳಲ್ಲಿ ಶ್ರೀಗಂಧ ಕದ್ದಿದ್ದ ಖತರ್ನಾಕ್ ಕಳ್ಳರು, ಪೊಲೀಸರು ಹಾಗೂ ರೈತರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗ್ತಿದ್ರು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಸ್ಫೋಟ – 4,246 ಪಾಸಿಟಿವ್, ಇಬ್ಬರು ಬಲಿ 

    ಆದರೆ ಈಗ ಪೊಲೀಸರು ಅತ್ಯಾಧುನಿಕ ಮೊಬೈಲ್ ತಂತ್ರಜ್ಞಾನ ಬಳಸಿ, 7 ಜನ ಶ್ರೀಗಂಧ ಕಳ್ಳರನ್ನು ಬಂಧಿಸಿದ್ದಾರೆ. ಅದು ಅಲ್ಲದೇ ಅವರಿಂದ ಒಟ್ಟು 70 ಕೆ.ಜಿ ಇನ್ನೂರು ಗ್ರಾಂ ತೂಕದ 21 ಲಕ್ಷದ 6 ಸಾವಿರ ರೂಪಾಯಿ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

  • ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

    ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

    ಶಿವಮೊಗ್ಗ: ತುಂಗಾನಗರ ಠಾಣೆ ಪೊಲೀಸರು ಹಾಗು ಅರಣ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 910 ಕೆಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

    ಶಿವಮೊಗ್ಗ ಜಿಲ್ಲೆಯ ಟಿಪ್ಪುನಗರದ 7ನೇ ತಿರುವಿನ ಗೋಡೌನ್‍ವೊಂದರಲ್ಲಿ, ಆರೋಪಿ ಅಪ್ಸರ್ 910 ಕೆಜಿ ಗಂಧದ ತುಂಡುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:  ಮಾಜಿ ಶಾಸಕ, ಜೆಡಿಎಸ್ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಬಂಧಿತ ಆರೋಪಿ ಅಪ್ಸರ್ ಬೇರೆ-ಬೇರೆ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ತೆಗೆದುಕೊಂಡು ಬಂದು ಸಂಗ್ರಹಿಸಿಟ್ಟಿದ್ದ. ಇದನ್ನು ಅಮರಾವತಿಗೆ ಮಾರಾಟ ಮಾಡಲು ಯತ್ನಿಸಿದ್ದ ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ ಎಂದರು.

    ಬಂಧಿತ ಆರೋಪಿ ಅಪ್ಸರ್ ವಿರುದ್ಧ ಈ ಹಿಂದೆ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಯಾವುದೇ ಮಾಹಿತಿ ಇಲ್ಲ. ಅರಣ್ಯ ಇಲಾಖೆಯಲ್ಲಿ ಮಾಹಿತಿ ಇದ್ದು, ಈತನ ವಿರುದ್ಧ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.

  • 12 ಕೆ.ಜಿ ಶ್ರೀಗಂಧ ವಶ – ಆರೋಪಿ ಬಂಧನ

    12 ಕೆ.ಜಿ ಶ್ರೀಗಂಧ ವಶ – ಆರೋಪಿ ಬಂಧನ

    ಕಾರವಾರ: ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ.

    ಮನಜವಳ್ಳಿಯ ಕೃಷ್ಣ ಗೌಡ ಬಂಧಿತ ಆರೊಪಿಯಾಗಿದ್ದಾನೆ. ಬಂಧಿತನಿಂದ 12. ಕೆ.ಜಿ. ತೂಕದ ಶ್ರೀ ಗಂಧ ಹಾಗೂ ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಶಿರಸಿ ತಾಲೂಕಿನ ಹುಲೆಕಲ್ ವಲಯದ ಶೀಗೆಹಳ್ಳಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಈತ ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ. ಈ ವಿಚಾರವಾಗಿ ತಿಳಿದ ಗ್ರಾಮಸ್ಥರು ಹಾಗೂ ಗ್ರಾಮ ಅರಣ್ಯ ಸಮೀತಿಯ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಆತನನ್ನು ಬಂಧಿಸಿದ್ಧಾರೆ.