ಶ್ರೀಲೀಲಾ (Sreeleela) ಮತ್ತೆ ಮತ್ತೆ ಸುದ್ದಿಗೆ ಬರುತ್ತಿದ್ದಾರೆ. ವೈಷ್ಣವ್ ತೇಜ್ (Vaishnav Tej) ಜೊತೆ ಇವರು ಅಭಿನುಯಿಸಿದ ಆದಿಕೇಶವ ಸಿನಿಮಾ ಇನ್ನೇನು ತೆರೆಗೆ ಬರಲು ಸಿದ್ಧವಾಗಿದೆ. ಆದರೆ ಶ್ರೀಲೀಲಾ ಮಾತ್ರ ನಾ ಬರಲ್ಲ ಎಂದು ಹಠ ಹಿಡಿದಿದ್ದಾರೆ. ಇಷ್ಟಾದರೂ ಸಿನಿಮಾ ಗೆಲ್ಲುತ್ತೆ ಎನ್ನುತ್ತಿದ್ದಾರೆ ವೈಷ್ಣವ್. ಇದೇನಿದು ಹೀರೋ- ಹೀರೋಯಿನ್ ಜಗಳ ? ಇಲ್ಲಿದೆ ಅಪ್ಡೇಟ್.

ಶ್ರೀಲೀಲಾ ಯಾರ ಕೈಗೂ ಸಿಗುತ್ತಿಲ್ಲ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಟಾಪ್ ಹೀರೋಗಳು ಈಕೆ ಕಾಲ್ಶೀಟ್ಗೆ ಕಾಯುವಂತಾಗಿದೆ. ಪ್ರಿನ್ಸ್ ಮಹೇಶ್ ಬಾಬುವಿನಿಂದ ಹಿಡಿದು ಪವನ್ ಕಲ್ಯಾನ್ ಕೂಡ ಶ್ರೀಲೀಲಾ ಎಲ್ಲಿ ನಿನ್ನಯ ಪಾದ ಕಮಲ ಎನ್ನುತ್ತಿದ್ದಾರೆ. ಈ ಹೊತ್ತಲ್ಲೇ ಶ್ರೀ ನಟಿಸಿದ ಇನ್ನೊಂದು ಸಿನಿಮಾ ಆದಿಕೇಶವ ಬಿಡುಗಡೆಯಾಗುತ್ತಿದೆ. ಆದರೆ ಶ್ರೀಲೀಲಾ ಮಾತ್ರ ಪ್ರಚಾರಕ್ಕೆ ಬರಲ್ಲ ಎಂದು ಹಠ ಹಿಡಿದಿದ್ದಾರೆ. ಕಾರಣ ಕೊಬ್ಬಲ್ಲ, ಟೈಮ್ ಸಿಗುತ್ತಿಲ್ಲ. ಇದನ್ನೂ ಓದಿ:ರಿಲೀಸ್ಗೂ ಮುನ್ನ ಅಮೆರಿಕಾದಲ್ಲಿ ‘ಸಲಾರ್’ ಆರ್ಭಟ- ಟಿಕೆಟ್ ಸೋಲ್ಡ್ ಔಟ್
ಧಮಾಕಾ, ಭಗವಂತ ಕೇಸರಿ ಹಿಟ್ ಆಗಿವೆ. ಇದರ ಬೆನ್ನಿಗೇ ಆದಿಕೇಶವ ಬರುತ್ತಿದೆ. ಆದರೆ ಶ್ರೀಲೀಲಾಗೆ ಮಾತ್ರ ಪ್ರಚಾರಕ್ಕೆ ಬರಲು ಆಗುತ್ತಿಲ್ಲ. ಹೀಗಿದ್ದರೂ ಸಿನಿಮಾ ಹಿಟ್ ಆಗುತ್ತದೆ. ಶ್ರೀಲೀಲಾ ಇದ್ದರೆ ಸಾಕು, ಸಿನಿಮಾ ಗೆಲ್ಲುತ್ತದೆ ಎನ್ನುತ್ತಿದ್ದಾರೆ ಹೀರೋ ವೈಷ್ಣವ್ ತೇಜ್. ಮೆಗಾ ಫ್ಯಾಮಿಲಿಯಿಂದ ಬಂದ ಹುಡುಗನೇ ಹೀಗೆ ಹೇಳಬೇಕಾದರೆ ಶ್ರೀಲೀಲಾ ಕಮಾಲ್ ಹೇಗಿರಬೇಕು ನೀವೇ ಯೋಚಿಸಿ. ಏನಾದರೂ ಆಗಲಿ ಕನ್ನಡದ ಹುಡುಗಿಗೆ ಇಷ್ಟೊಂದು ಕ್ರೇಜ್ ಇದೆಯಲ್ಲ. ಅದನ್ನು ನಾವು ಮೆಚ್ಚಬೇಕು.
ಒಟ್ನಲ್ಲಿ ಶ್ರೀಲೀಲಾ ಸದ್ಯ ತೆಲುಗು ಹೀರೋಗಳ ಪಾಲಿಗೆ ಲಕ್ಕಿ ನಟಿಯಾಗಿ ಬೆಳೆಯುತ್ತಿದ್ದಾರೆ. ನಮ್ಮ ಸಿನಿಮಾದಲ್ಲಿ ಶ್ರೀಲೀಲಾ ಇದ್ದರೆ ಸಿನಿಮಾ ಗೆದ್ದೇ ಗೆಲ್ಲುತ್ತದೆ ಎಂಬ ಖುಷಿಯಲ್ಲಿದ್ದಾರೆ.



ತ್ರಿವಿಕ್ರಮ್- ಮಹೇಶ್ ಬಾಬು ಜೊತೆ ಶ್ರೀಲೀಲಾ (Sreeleela) ಮೊದಲ ಬಾರಿಗೆ ಜೊತೆಯಾಗಿ ಸಿನಿಮಾ ಮಾಡಿದ್ದಾರೆ. ಇಬ್ಬರ ಜುಗಲ್ಬಂದಿ ಸವಿಯೋಕೆ ಪ್ರೇಕ್ಷಕರು ಕೂಡ ಕಾಯ್ತಿದ್ದಾರೆ. ಸಿನಿಮಾ ಕೂಡ ಕೊನೆಯ ಹಂತಕ್ಕೆ ಬಂದಿದೆ. ಬಾಕಿ ಉಳಿದಿರೋ ಸಾಂಗ್ ಶೂಟ್ಗೆ ತಯಾರಿ ನಡೆಯುತ್ತಿದೆ. ಇದನ್ನೂ ಓದಿ:


ಕನ್ನಡತಿ ಶ್ರೀಲೀಲಾ ಮುಖ ಸಪ್ಪೆ ಮಾಡಿಕೊಂಡಿದ್ದಾರೆ. ಇನ್ಯಾರದ್ದೋ ತಪ್ಪಿಗೆ ಹೀಗೆ ಅವಮಾನ ಅನುಭವಿಸುತ್ತಿದ್ದಾರೆ. ಈಗ ತಾನೇ ಟಾಲಿವುಡ್ ಅಂಗಳದಲ್ಲಿ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿಯೇ ಇವರ ಹೆಸರು ಅದೊಬ್ಬ ಸೂಪರ್ಸ್ಟಾರ್ ನಟನ ಮಗನ ಜೊತೆ ಸೇರಿಕೊಂಡಿದೆ. ಅಷ್ಟೇ ಅಲ್ಲ. ಆ ಹುಡುಗನ ಜೊತೆ ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಯುತ್ತಿದೆ ಎಂದು ವೈರಲ್ ಆಗುತ್ತಿದೆ. ಇದನ್ನೂ ಓದಿ:
ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಭರ್ಜರಿ ಹೆಸರು ಮಾಡುತ್ತಿದ್ದಾರೆ. ಒಂದಲ್ಲ ಎರಡಲ್ಲ ಭರ್ತಿ ಹನ್ನೊಂದು ಸಿನಿಮಾ ಇವರ ಕೈಯಲ್ಲಿವೆ. ಸ್ಟಾರ್ ನಟರಿಂದ ಹಿಡಿದು ಬಡ್ಡಿಂಗ್ ಆರ್ಟಿಸ್ಟ್ ಅಂತಾರಲ್ಲ. ಅವರ ಜೊತೆ ನಟಿಸುತ್ತಿದ್ದಾರೆ. ಇದೀಗ ಇನ್ನೇನು ಬಿಡುಗಡೆಗೆ ಸಜ್ಜಾಗಿರುವ ‘ಭಗವಂತ ಕೇಸರಿ’ (Bhagavantha Kesari) ಸಿನಿಮಾದಲ್ಲಿ ಟಾಲಿವುಡ್ ಟಾಪ್ ಸ್ಟಾರ್ ಬಾಲಕೃಷ್ಣನ ಮಗಳಾಗಿ ನಟಿಸುತ್ತಿದ್ದಾರೆ. ಇದೇ ಬಾಲಯ್ಯನ ಮಗ ಮೋಕ್ಷಗಣನ ಜೊತೆ ಶ್ರೀಲೀಲಾ ಹೆಸರು ಓಡಾಡುತ್ತಿದೆ. ಬರೀ ಅಷ್ಟೆ ಅಲ್ಲ. ಆ ಹುಡುಗನ ಜೊತೆ ಮದುವೆ (Wedding) ಆಗಲಿದ್ದಾರಂತೆ ಕನ್ನಡದ ನಟಿ ಶ್ರೀಲೀಲಾ.









