Tag: Sreeleela

  • ತೆಲುಗಿನಲ್ಲಿ ಶ್ರೀಲೀಲಾಗೆ ಮತ್ತೊಂದು ಬಂಪರ್ ಆಫರ್

    ತೆಲುಗಿನಲ್ಲಿ ಶ್ರೀಲೀಲಾಗೆ ಮತ್ತೊಂದು ಬಂಪರ್ ಆಫರ್

    ನ್ನಡದ ನಟಿ ಶ್ರೀಲೀಲಾ (Sreeleela) ಇದೀಗ ಟಾಲಿವುಡ್‌ನಲ್ಲಿ (Tollywood) ಬಹುಬೇಡಿಕೆಯ ನಟಿಯಾಗಿದ್ದಾರೆ. ಸಕ್ಸಸ್‌ಗಾಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾದಿಯಲ್ಲಿ ನಟಿ ಕೂಡ ಹೆಜ್ಜೆ ಇಡ್ತಿದ್ದಾರೆ. ಇದೀಗ ಸೂಪರ್ ಸ್ಟಾರ್ ಬಾಲಯ್ಯ ಪುತ್ರನಿಗೆ ‘ಕಿಸ್‌’ ನಟಿ ಹೀರೋಯಿನ್ ಆಗಿದ್ದಾರೆ. ಇದನ್ನೂ ಓದಿ:ಡಾರ್ಲಿಂಗ್ ಜಾಗಕ್ಕೆ ಬಂದ ನಟ ರಾಕ್ಷಸ: ಹಲಗಲಿ ಚಿತ್ರಕ್ಕೆ ಧನಂಜಯ್ ಹೀರೋ

    ತೆಲುಗಿನ ಜೊತೆ ತಮಿಳಿನಲ್ಲಿ ನಟಿಸುವ ಅವಕಾಶ ಸಿಕ್ತಿದೆ. ಬಾಲಿವುಡ್‌ನಿಂದ ಕೂಡ ಬುಲಾವ್ ಬಂದಿದೆ. ಇದರ ನಡುವೆ ಬಾಲಯ್ಯ ಪುತ್ರ ಮೋಕ್ಷಜ್ಞ (Mokshagna) ಬೆಳ್ಳಿಪರದೆಯಲ್ಲಿ ನಾಯಕ ನಟನಾಗಿ ಮಿಂಚಲು ವೇದಿಕೆ ಕೂಡ ಸಿದ್ಧವಾಗಿದೆ. ನಾಯಕನಾಗಿ ಪಳಗಲು ಏನೆಲ್ಲಾ ತಯಾರಿ ಬೇಕೋ ಅದನ್ನೇಲ್ಲಾ ಮಾಡಿಕೊಂಡೇ ಅಖಾಡಕ್ಕೆ ಇಳಿಯುತ್ತಿದ್ದಾರೆ. ಬಾಲಯ್ಯ ಮಗನ ಚೊಚ್ಚಲ ಚಿತ್ರಕ್ಕೆ ಪ್ರತಿಭಾನ್ವಿತ ನಟಿ ಶ್ರೀಲೀಲಾನೇ ಸೂಕ್ತ ಎಂದು ನಟಿಗೆ ಆಫರ್ ಕೊಡಲಾಗಿದೆ.

    ಮೊದಲ ಸಿನಿಮಾವಾಗಿರುವ ಕಾರಣ, ಉತ್ತಮ ಕಥೆ ಪ್ರತಿಷ್ಟಿತ ನಿರ್ಮಾಣ ಸಂಸ್ಥೆಯಡಿ ಮೋಕ್ಷಜ್ಷ ಲಾಂಚ್ ಆಗ್ತಿದ್ದಾರೆ. ‘ಭಗವಂತ ಕೇಸರಿ’ (Bhagawantha Kesari) ಸಿನಿಮಾದಲ್ಲಿ ಶ್ರೀಲೀಲಾ ಅವರು ಬಾಲಯ್ಯ ಮಗಳ ಪಾತ್ರದಲ್ಲಿ ನಟಿಸಿದ್ದರು. ಆಗಲೇ ನಟಿಗೆ ನಟನೆಯ ಮೇಲಿರುವ ಶ್ರದ್ಧೆ ನೋಡಿ ಈಕೆಯೇ ಸೂಕ್ತ ಎಂದು ಮಗನ ಚಿತ್ರಕ್ಕೆ ನಾಯಕಿಯಾಗಿ ಬಾಲಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಬೇಕಿದೆ.

    ಇದೀಗ ನಿತಿನ್ ಜೊತೆ ‘ರಾಬಿನ್‌ಹುಡ್’ (Robinhood) ಸಿನಿಮಾ ಮಾಡುತ್ತಿರೋದು ಅಧಿಕೃತ ಘೋಷಣೆ ಆಗಿದೆ. ರವಿತೇಜ ಜೊತೆ ಸಿನಿಮಾಗೆ ಚಾಲನೆ ಸಿಕ್ಕಿದೆ. ಪವನ್ ಕಲ್ಯಾಣ್ ಜೊತೆಗಿನ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ‘ಜ್ಯೂನಿಯರ್’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ತಿದೆ ಚಿತ್ರತಂಡ.

    ಅದಷ್ಟೇ ಅಲ್ಲ, ತಮಿಳಿನ ಅಜಿತ್ ಕುಮಾರ್ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗೂ ಶ್ರೀಲೀಲಾ ನಾಯಕಿ ಎನ್ನಲಾಗಿದೆ. ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ನಟನೆಯ ಹೊಸ ಸಿನಿಮಾಗೂ ಇವರೇ ಹೀರೋಯಿನ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಟ್ನಲ್ಲಿ ಕಿಸ್ ನಟಿಗೆ ಚಿತ್ರರಂಗದಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗೋದು ಗ್ಯಾರಂಟಿ.

  • ಬಾಲಿವುಡ್‌ನಲ್ಲಿ ಬಿಗ್ ಚಾನ್ಸ್- ಶ್ರೀಲೀಲಾ ಟೆಂಪಲ್ ರನ್

    ಬಾಲಿವುಡ್‌ನಲ್ಲಿ ಬಿಗ್ ಚಾನ್ಸ್- ಶ್ರೀಲೀಲಾ ಟೆಂಪಲ್ ರನ್

    ನ್ನಡತಿ ಶ್ರೀಲೀಲಾಗೆ (Sreeleela) ಟಾಲಿವುಡ್ ಬಳಿಕ ಬಾಲಿವುಡ್‌ನಲ್ಲೂ ಬಿಗ್ ಚಾನ್ಸ್ ಸಿಕ್ಕಿದೆ. ಈ ಬೆನ್ನಲ್ಲೇ ಶ್ರೀಲೀಲಾ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿಗೆ (Tirupati Temple) ನಟಿ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ವರುಣ್ ಧವನ್ (Varun Dhawan) ಹೊಸ ಸಿನಿಮಾಗೆ ನಾಯಕಿಯಾಗಿ ಶ್ರೀಲೀಲಾ ಆಯ್ಕೆಯಾಗಿದ್ದಾರೆ. ಬಾಲಿವುಡ್‌ನಿಂದ ಉತ್ತಮ ಅವಕಾಶಗಳು ನಟಿಗೆ ಅರಸಿ ಬರುತ್ತಿವೆ. ಹಾಗಾಗಿ ಅಮ್ಮ ಸ್ವರ್ಣ ಲತಾ ಜೊತೆ ಶ್ರೀಲೀಲಾ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಮಿಡಲ್ ಕ್ಲಾಸ್ ಮನೆಯ ‘ಮರ್ಯಾದೆ ಪ್ರಶ್ನೆ’ ಎಂದ ರಾಕೇಶ್ ಅಡಿಗ, ಶೈನ್ ಶೆಟ್ಟಿ

    ಅಂದಹಾಗೆ, ಶ್ರೀಲೀಲಾ ನಟಿಸಲಿರುವ ಬಾಲಿವುಡ್‌ (Bollywood) ಚಿತ್ರ ಪಕ್ಕಾ ಕಾಮಿಡಿ ಡ್ರಾಮಾ ಸಿನಿಮಾ ಆಗಿದ್ದು, ವರುಣ್ ತಂದೆ ಡೇವಿಡ್ ಧವನ್ ನಿರ್ದೇಶನ ಮಾಡಲಿದ್ದಾರೆ. ಜುಲೈ ಕೊನೆಯಲ್ಲಿ ಶೂಟಿಂಗ್ ಶುರುವಾಗಲಿದ್ದು, ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

    ಇನ್ನೂ ನಿತಿನ್ ಜೊತೆ ‘ರಾಬಿನ್‌ಹುಡ್’ ಸಿನಿಮಾ ಮಾಡುತ್ತಿರೋದು ಅಧಿಕೃತ ಘೋಷಣೆ ಆಗಿದೆ. ರವಿತೇಜ ಜೊತೆ ಸಿನಿಮಾಗೆ ಚಾಲನೆ ಸಿಕ್ಕಿದೆ. ಪವನ್ ಕಲ್ಯಾಣ್ ಜೊತೆಗಿನ ಉಸ್ತಾದ್ ಭಗತ್ ಸಿಂಗ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಕನ್ನಡದ ಜ್ಯೂನಿಯರ್ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ತಿದೆ ಚಿತ್ರತಂಡ.

    ಅದಷ್ಟೇ ಅಲ್ಲ, ತಮಿಳಿನ ಅಜಿತ್ ಕುಮಾರ್ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗೂ ಶ್ರೀಲೀಲಾ ನಾಯಕಿ ಎನ್ನಲಾಗಿದೆ. ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ನಟನೆಯ ಹೊಸ ಸಿನಿಮಾಗೂ ಇವರೇ ಹೀರೋಯಿನ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಟ್ನಲ್ಲಿ ಶ್ರೀಲೀಲಾಗೆ ಚಿತ್ರರಂಗದಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿರೋದು ಗ್ಯಾರಂಟಿ.

  • ವರುಣ್ ಧವನ್ ಜೊತೆ ಶ್ರೀಲೀಲಾ ಡ್ಯುಯೆಟ್‌

    ವರುಣ್ ಧವನ್ ಜೊತೆ ಶ್ರೀಲೀಲಾ ಡ್ಯುಯೆಟ್‌

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಬಳಿಕ ಶ್ರೀಲೀಲಾಗೆ (Sreeleela) ಬಾಲಿವುಡ್ ಬಾಗಿಲು ತೆರೆದಿದೆ. ಸೌತ್‌ನಲ್ಲಿ ಬೇಡಿಕೆಯ ನಟಿಯಾಗಿರುವ ಶ್ರೀಲೀಲಾಗೆ ಈಗ ಬಿಟೌನ್‌ನಲ್ಲಿ ಬಂಪರ್ ಆಫರ್ ಸಿಕ್ಕಿದೆ. ವರುಣ್ ಧವನ್ (Varun Dhawan) ಜೊತೆ ಡ್ಯುಯೆಟ್‌ ಹಾಡೋಕೆ ರೆಡಿಯಾಗಿದ್ದಾರೆ.

    ಶ್ರೀಲೀಲಾ ಬ್ಯೂಟಿ ಜೊತೆ ಪ್ರತಿಭೆ ಇರುವ ಕಲಾವಿದೆ. ಡ್ಯಾನ್ಸ್‌ನಲ್ಲೂ ಎತ್ತಿದ ಕೈ. ಹೀಗೆ ಎಲ್ಲದಕ್ಕೂ ಸೈ ಎನ್ನುತ್ತಿರುವ ನಟಿಯ ಮೇಲೆ ಬಾಲಿವುಡ್ ಮಂದಿಯ ಕಣ್ಣು ಬಿದ್ದಿದೆ. ವರುಣ್ ಧವನ್ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ನಟಿಸಲು ಬುಲಾವ್ ಬಂದಿದೆ.

    ನಟಿ ಕೂಡ ಕಥೆ ಕೇಳಿ ಥ್ರಿಲ್ ಆಗಿದ್ದಾರಂತೆ. ಈ ಚಿತ್ರದ ಭಾಗವಾಗ್ತಾರಾ? ಕಾಯಬೇಕಿದೆ. ಇದೇ ಚಿತ್ರದಲ್ಲಿ ಮತ್ತೊಬ್ಬ ನಟಿ ಮೃಣಾಲ್ ಠಾಕೂರ್ (Mrunal Thakur) ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಕುಂದಾಪುರಕ್ಕೆ ಬಂದ ‘ಕಲ್ಕಿ’ ಬುಜ್ಜಿ ಜೊತೆ ರಿಷಬ್ ಶೆಟ್ಟಿ ರೌಂಡ್ಸ್

    ಇದೊಂದು ಪಕ್ಕಾ ಕಾಮಿಡಿ ಡ್ರಾಮಾ ಸಿನಿಮಾ ಆಗಿದ್ದು, ವರುಣ್ ತಂದೆ ಡೇವಿಡ್ ಧವನ್ ನಿರ್ದೇಶನ ಮಾಡಲಿದ್ದಾರೆ. ಜುಲೈ ಕೊನೆಯಲ್ಲಿ ಶೂಟಿಂಗ್ ಶುರುವಾಗಲಿದ್ದು, ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

    ಅಂದಹಾಗೆ, ನಿತಿನ್ ಜೊತೆ ‘ರಾಬಿನ್‌ಹುಡ್’ ಸಿನಿಮಾ ಮಾಡುತ್ತಿರೋದು ಅಧಿಕೃತ ಘೋಷಣೆ ಆಗಿದೆ. ರವಿತೇಜ ಜೊತೆ ಸಿನಿಮಾಗೆ ಚಾಲನೆ ಸಿಕ್ಕಿದೆ. ಪವನ್ ಕಲ್ಯಾಣ್ ಜೊತೆಗಿನ ಉಸ್ತಾದ್ ಭಗತ್ ಸಿಂಗ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಕನ್ನಡದ ‘ಜ್ಯೂನಿಯರ್’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ತಿದೆ ಚಿತ್ರತಂಡ.

    ಅದಷ್ಟೇ ಅಲ್ಲ, ತಮಿಳಿನ ಅಜಿತ್ ಕುಮಾರ್ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾಗೂ ಶ್ರೀಲೀಲಾ ನಾಯಕಿ ಎನ್ನಲಾಗಿದೆ. ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ನಟನೆಯ ಹೊಸ ಸಿನಿಮಾಗೂ ಇವರೇ ಹೀರೋಯಿನ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಟ್ನಲ್ಲಿ ಶ್ರೀಲೀಲಾಗೆ ಚಿತ್ರರಂಗದಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿರೋದು ಗ್ಯಾರಂಟಿ.

  • ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ

    ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ

    ನ್ನಡದ ಬ್ಯೂಟಿ ಶ್ರೀಲೀಲಾಗೆ (Sreeleela) ತೆಲುಗಿನಲ್ಲಿ ಭಾರೀ ಬೇಡಿಕೆಯಿದೆ. ಸೌಂದರ್ಯದ ಜೊತೆ ಪ್ರತಿಭೆ ಇರುವ ಶ್ರೀಲೀಲಾ ಬ್ರೇಕ್ ನಂತರ ಮತ್ತಷ್ಟು ಬ್ಯುಸಿಯಾಗಿದ್ದಾರೆ. ತೆಲುಗಿನ ಜೊತೆ ಬಾಲಿವುಡ್‌ನಿಂದಲೂ ‘ಕಿಸ್’ (Kiss) ನಟಿಗೆ ಬುಲಾವ್ ಬರುತ್ತಿದೆ. ಇದನ್ನೂ ಓದಿ:ಭಾವಿ ಪತಿಗೆ ಕಾರ್ ಗಿಫ್ಟ್ ಮಾಡಿದ ‘ಅಗ್ನಿಸಾಕ್ಷಿ’ ನಟಿ

    ಶ್ರೀಲೀಲಾ ಬೆಂಗಳೂರಿನ ಕಾಲೇಜುವೊಂದರಲ್ಲಿ ಮೆಡಿಕಲ್ ಓದುತ್ತಿದ್ದಾರೆ. ಇದರ ಪರೀಕ್ಷೆಯ ನಿಮಿತ್ತ ‘ಗುಂಟೂರು ಖಾರಂ’ ಸಿನಿಮಾದ ನಂತರ ಬ್ರೇಕ್ ಪಡೆದುಕೊಂಡಿದ್ದರು. ಪರೀಕ್ಷೆ, ಓದು ಅಂತ ಬ್ಯುಸಿಯಿದ್ದ ನಟಿ ಮತ್ತೆ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟ ‘ಗಟ್ಟಿಮೇಳ’ ನಟಿ

    ಇದೀಗ ನಿತಿನ್ ಜೊತೆ ‘ರಾಬಿನ್‌ಹುಡ್’ (Robinhood Film) ಸಿನಿಮಾ ಮಾಡುತ್ತಿರೋದು ಅಧಿಕೃತ ಘೋಷಣೆ ಆಗಿದೆ. ರವಿತೇಜ ಜೊತೆ ಸಿನಿಮಾಗೆ ಚಾಲನೆ ಸಿಕ್ಕಿದೆ. ಪವನ್ ಕಲ್ಯಾಣ್ (Pawan Kalyan) ಜೊತೆಗಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಕನ್ನಡದ ‘ಜ್ಯೂನಿಯರ್’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ತಿದೆ ಚಿತ್ರತಂಡ.

    ಅದಷ್ಟೇ ಅಲ್ಲ, ತಮಿಳಿನ ಅಜಿತ್ ಕುಮಾರ್ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗೂ ಶ್ರೀಲೀಲಾ ನಾಯಕಿ ಎನ್ನಲಾಗಿದೆ. ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ನಟನೆಯ ಹೊಸ ಸಿನಿಮಾಗೂ ಇವರೇ ಹೀರೋಯಿನ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಟ್ನಲ್ಲಿ ಶ್ರೀಲೀಲಾಗೆ ಚಿತ್ರರಂಗದಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿರೋದು ಗ್ಯಾರಂಟಿ.

  • ದರ್ಶನ್ ಪ್ರಕರಣದ ಬಗ್ಗೆ ಶ್ರೀಲೀಲಾ ಹೇಳಿದ್ದೇನು?

    ದರ್ಶನ್ ಪ್ರಕರಣದ ಬಗ್ಗೆ ಶ್ರೀಲೀಲಾ ಹೇಳಿದ್ದೇನು?

    ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಸದ್ಯ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದ ಕುರಿತು ಸುದೀಪ್, ಉಪೇಂದ್ರ, ರಮ್ಯಾ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೆ ಕನ್ನಡದ ನಟಿ ಶ್ರೀಲೀಲಾ (Sreeleela) ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ಕಲ್ಕಿ’ ಇವೆಂಟ್‌ಗೆ 1,14,000 ಮೌಲ್ಯದ ಡ್ರೆಸ್ ಧರಿಸಿ ಬಂದ ದೀಪಿಕಾ ಪಡುಕೋಣೆ

    ಬಳ್ಳಾರಿಯಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಜೊತೆ ನಟಿ ಶ್ರೀಲೀಲಾ ಕೂಡ ಭಾಗಿಯಾಗಿ ಯೋಗ ಪ್ರದರ್ಶನ ಮಾಡಿದರು. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಲೀಲಾಗೆ ದರ್ಶನ್ ಪ್ರಕರಣ ಬಗ್ಗೆ ಪ್ರಶ್ನೆ ಎದುರಾಯಿತು. ಈ ವೇಳೆ, ಉತ್ತರಿಸೋಕೆ ನಿರಾಕರಿಸಿದ್ದಾರೆ. ಈ ಬಗ್ಗೆ ಏನೂ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.

    ಸದ್ಯ ಶ್ರೀಲೀಲಾ ಟಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗಿನ ನಟ ನಿತಿನ್ ಜೊತೆ ಸಿನಿಮಾ, ರವಿತೇಜ ಜೊತೆ ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಸೈಫ್ ಅಲಿ ಖಾನ್ ಪುತ್ರನಿಗೂ ಶ್ರೀಲೀಲಾ ನಾಯಕಿಯಾಗಿದ್ದಾರೆ. ಕನ್ನಡಲ್ಲಿ ‘ಜ್ಯೂನಿಯರ್’ ಎಂಬ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಬಿಡುಗಡೆ ದಿನಾಂಕ ಇನ್ನೂ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗಬೇಕಿದೆ.

    ಕನ್ನಡದ `ಕಿಸ್’ ಸಿನಿಮಾ ಮೂಲಕ ಶ್ರೀಲೀಲಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈಗ ಪರಭಾಷೆಯಲ್ಲಿ ನಟಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ.

  • ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

    ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

    ಬಳ್ಳಾರಿ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ಹಿನ್ನೆಲೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಳ್ಳಾರಿಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ ಯೋಗ ಪ್ರದರ್ಶನ ಮಾಡಿದರು.

    ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ನಟಿ ಶ್ರೀಲೀಲಾ (Actress Sreeleela), ಸಚಿವ ಸಂತೋಷ ಲಾಡ್, ಸಂಸದ ಈ. ತುಕಾರಾಂ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಸಿಎಂಗೆ ಸಾಥ್‌ ನೀಡಿದರು. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ಆರಂಭವಾಯಿತು. ಅವಧೂತ ವಿನಯ್ ಗುರೂಜಿ ಅವರು ಯೋಗ ಕಾರ್ಯಕ್ರಮ ನಿರ್ವಹಣೆ ಮಾಡಿದರು. ವಿವಿಧ ಯೋಗಾಸನಗಳ ಸೂಚನೆ ನೀಡುತ್ತಾ, ತಾವೂ ಯೋಗ ಆಸನಗಳ ಪ್ರದರ್ಶನ ನಡೆಸಿಕೊಟ್ಟರು. ಇದೇ ವೇಳೆ ಸಾಂಪ್ರದಾಯಿಕವಾಗಿ ಪಂಚೆ ಶಲ್ಯ ಧರಿಸಿದ್ದ ಸಿದ್ದರಾಮಯ್ಯ ಅವರು ವಚನಾನಂದ ಶ್ರೀಗಳ ಸೂಚನೆಯಂತೆ ಏಕಾಗ್ರತೆಯಿಂದ ಯೋಗ ಪ್ರದರ್ಶನ ಮಾಡಿದರು. ವೇದಿಕೆಯಲ್ಲಿ ನಟಿ ಶ್ರೀಲೀಲಾ ಸಹ ತದೇಕಚಿತ್ತದಿಂದ ಯೋಗ ಮಾಡಿದರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳೂ ಪಾಲ್ಗೊಂಡಿದ್ದರು.

    ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

    ಯೋಗ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಹೊಸಪೇಟೆಯ ಡಿಸಿ ಕಚೇರಿಯಲ್ಲಿ ನಡೆಯಲಿರುವ ಕೆಡಿಪಿ ಸಭೆಗೆ ತೆರಳಲಿದ್ದಾರೆ. ಇದನ್ನೂ ಓದಿ: International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

  • ರಶ್ಮಿಕಾ ಕೈಬಿಟ್ಟ ಚಿತ್ರಕ್ಕೆ ನಾಯಕಿಯಾದ ಶ್ರೀಲೀಲಾ

    ರಶ್ಮಿಕಾ ಕೈಬಿಟ್ಟ ಚಿತ್ರಕ್ಕೆ ನಾಯಕಿಯಾದ ಶ್ರೀಲೀಲಾ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿಯಾಗಿ ನಟಿಸಬೇಕಿದ್ದ ಚಿತ್ರಕ್ಕೆ ಕನ್ನಡದ ‘ಕಿಸ್’ ನಟಿ ಹೀರೋಯಿನ್ ಆಗಿದ್ದಾರೆ. ರಶ್ಮಿಕಾ ಕೈಬಿಟ್ಟ ಚಿತ್ರಕ್ಕೆ ಶ್ರೀಲೀಲಾ (Sreeleela) ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ನಟಿಯ ರಾಯಲ್ ಎಂಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಶ್ರೀಲೀಲಾ ಹುಟ್ಟುಹಬ್ಬದ (ಜೂನ್.14) ಸಂಭ್ರಮದಲ್ಲಿದ್ದಾರೆ. ನಟಿಯ ಜನ್ಮದಿನದಂದೇ ‘ರಾಬಿನ್ ಹುಡ್’ ಚಿತ್ರಕ್ಕೆ ಕಿಸ್ ನಟಿ ಹೀರೋಯಿನ್ ಎಂದು ಸ್ಪೆಷಲ್ ಟೀಸರ್ ರಿಲೀಸ್ ಮಾಡಿ ಅಧಿಕೃತ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ:ಮಾಲಿವುಡ್ ಸ್ಟಾರ್ ಮಮ್ಮುಟ್ಟಿ ಸಿನಿಮಾದಲ್ಲಿ ಸಮಂತಾ

     

    View this post on Instagram

     

    A post shared by Mythri Movie Makers (@mythriofficial)

    ಕೆಂಪು ಬಣ್ಣದ ಉಡುಗೆಯಲ್ಲಿ ಸ್ಟೈಲೀಶ್ ಆಗಿ ವಿಮಾನದಿಂದ ನಟಿ ಇಳಿದು ಬರುತ್ತಿರುವ ಟೀಸರ್ ರಿವೀಲ್ ಮಾಡಿ ನಟಿಗೆ ಚಿತ್ರತಂಡ ಶುಭಕೋರಿದೆ. ಇನ್ನೂ ‘ರಾಬಿನ್ ಹುಡ್’ ಚಿತ್ರದ ಮೂಲಕ ನಿತಿನ್‌ಗೆ 2ನೇ ಬಾರಿ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ.

    ಈ ಹಿಂದೆ ರಶ್ಮಿಕಾ ಮಂದಣ್ಣ ನಾಯಕಿ ಎಂದು ಘೋಷಿಸಿದ್ದರು. ಆದರೆ ಡೇಟ್ಸ್ ಹೊಂದಾಣಿಕೆಯಿಂದ ನಟಿ ಸಿನಿಮಾದಿಂದ ಹೊರಬಂದಿದ್ದರು. ಈಗ ಅದೇ ಚಿತ್ರಕ್ಕೆ ಕನ್ನಡದ ‘ಕಿಸ್’ ನಟಿ ಆಯ್ಕೆಯಾಗಿದ್ದಾರೆ.‌ ಇದನ್ನೂ ಓದಿ:ಝಹೀರ್ ಜೊತೆಗಿನ ಮದುವೆ ನನ್ನ ಆಯ್ಕೆ- ಟ್ರೋಲಿಗರ ಬಾಯಿ ಮುಚ್ಚಿಸಿದ ಸೋನಾಕ್ಷಿ

    ಆ್ಯಕ್ಷನ್ ಕಮ್ ಕಾಮಿಡಿಯಾಗಿರುವ ಈ ಸಿನಿಮಾವನ್ನು ವೆಂಕಿ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷ ಡಿಸೆಂಬರ್ 20ರಂದು ಸಿನಿಮಾ ರಿಲೀಸ್ ಆಗುತ್ತಿದೆ.

    ಅಂದಹಾಗೆ, ಸೈಫ್ ಅಲಿ ಖಾನ್ ಪುತ್ರನ ಬಾಲಿವುಡ್ ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ರವಿತೇಜ ಹೊಸ ಚಿತ್ರಕ್ಕೆ ನಟಿ ಫೈನಲ್ ಆಗಿದ್ದಾರೆ. ಇತ್ತೀಚೆಗೆ ಮುಹೂರ್ತ ಕಾರ್ಯಕ್ರಮ ಕೂಡ ಅದ್ಧೂರಿಯಾಗಿ ನಡೆದಿದೆ.

  • ರಶ್ಮಿಕಾ, ಶ್ರೀಲೀಲಾ ಅಬ್ಬರದ ನಡುವೆ ಕಾಣೆಯಾದ ಕೃತಿ ಶೆಟ್ಟಿ

    ರಶ್ಮಿಕಾ, ಶ್ರೀಲೀಲಾ ಅಬ್ಬರದ ನಡುವೆ ಕಾಣೆಯಾದ ಕೃತಿ ಶೆಟ್ಟಿ

    ಮಂಗಳೂರಿನ ಬೆಡಗಿ ಕೃತಿ ಶೆಟ್ಟಿಗೆ (Krithi Shetty) ಅದ್ಯಾಕೋ ಅದೃಷ್ಟ ಕೈ ಕೊಟ್ಟಂತಿದೆ. ‘ಉಪ್ಪೇನ’ ಸಿನಿಮಾ ರಿಲೀಸ್ ಬಳಿಕ ಡಿಮ್ಯಾಂಡ್‌ನಲ್ಲಿದ್ದ ನಟಿ ಈಗ ಸಕ್ಸಸ್ ರೇಸ್‌ನಲ್ಲಿ ಹಿಂದೆ ಬಿದ್ದಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾ ಹವಾ ನಡುವೆ ಕೃತಿ ಶೆಟ್ಟಿ ಮರೆಯಾಗ್ತಿದ್ದಾರಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಕಾಡುತ್ತಿದೆ.

    ಕೃತಿ ಶೆಟ್ಟಿ ಈಗ ಆಗೊಂದು ಈಗೊಂದು ಸಿನಿಮಾ ಮಾಡ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಮನಮೇಯ್’ ಎಂಬ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ತೆಲುಗಿನಲ್ಲಿ ಕೃತಿಗೆ ಆಫರ್ಸ್‌ ಕಮ್ಮಿಯಾಗ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಇದನ್ನೂ ಓದಿ:ಧನುಷ್ ನಟನೆಯ ‘ರಾಯನ್’ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ‘ಉಪ್ಪೇನ’ ಸಿನಿಮಾ ಸಕ್ಸಸ್ ನಂತರ ಎಲ್ಲಾ ಸಿನಿಮಾಗಳನ್ನು ಒಪ್ಪಿಕೊಂಡರು. ಕಥೆಗೆ ಮಹತ್ವ ಕೊಡೋದ್ರಲ್ಲಿ ನಟಿ ಎಡವಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯ ಅವರ ಕೈಯಲ್ಲಿ ಯಾವುದೇ ತೆಲುಗಿನ ಸಿನಿಮಾಗಳು ಇಲ್ಲ ಎನ್ನಲಾಗಿದೆ. ಮಲಯಾಳಂ ಚಿತ್ರ ಬಿಟ್ಟರೇ ಬೇರೆ ಚಿತ್ರಗಳಿಲ್ಲ.

    ಇನ್ನೂ ರಶ್ಮಿಕಾ ಮಂದಣ್ಣ 6ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರವಿತೇಜ ಜೊತೆಗಿನ ಸಿನಿಮಾ, ಸೈಫ್ ಅಲಿ ಖಾನ್ ಪುತ್ರನ ಜೊತೆಗಿನ ಚಿತ್ರ ಸೇರಿದಂತೆ ಕೆಲವು ಪ್ರಾಜೆಕ್ಟ್‌ಗಳಿವೆ. ಹೀಗಿರುವಾಗ ರಶ್ಮಿಕಾ, ಶ್ರೀಲೀಲಾ (Sreeleela) ಅಬ್ಬರದ ನಡುವೆ ಕೃತಿ ಶೆಟ್ಟಿಗೆ ಬೇಡಿಕೆ ಕಮ್ಮಿಯಾಗಿದೆ. ಮತ್ತೆ ಹಳೆಯ ಚಾರ್ಮ್‌ಗೆ ನಟಿ ಬರುತ್ತಾರಾ? ಇತರೆ ನಟಿಯರಿಗೆ ಕೃತಿ ಪೈಪೋಟಿ ಕೊಡ್ತಾರಾ ಕಾದುನೋಡಬೇಕಿದೆ.

  • ರವಿತೇಜಗೆ ಶ್ರೀಲೀಲಾ ಹೀರೋಯಿನ್- ಹೊಸ ಚಿತ್ರಕ್ಕೆ ಅದ್ಧೂರಿ ಚಾಲನೆ

    ರವಿತೇಜಗೆ ಶ್ರೀಲೀಲಾ ಹೀರೋಯಿನ್- ಹೊಸ ಚಿತ್ರಕ್ಕೆ ಅದ್ಧೂರಿ ಚಾಲನೆ

    ನ್ನಡದ ನಟಿ ಶ್ರೀಲೀಲಾ (Sreeleela) ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಗ್ಯಾಪ್‌ನ ನಂತರ ಮತ್ತೆ ನಟಿಸಲು ‘ಕಿಸ್‌’ ನಟಿ ಸಜ್ಜಾಗಿದ್ದಾರೆ. ಇದೀಗ ರವಿತೇಜ (Ravi Teja) ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿದ್ದಾರೆ. ಈಗ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ಜರುಗಿದೆ.

    ‘ಧಮಾಕ’ ನಂತರ ಮತ್ತೆ ಸ್ಟಾರ್ ನಟ ರವಿತೇಜಗೆ ಶ್ರೀಲೀಲಾ ಜೋಡಿಯಾಗಿದ್ದಾರೆ. ಮತ್ತೊಂದು ಹೊಸ ಪ್ರೇಮಕಥೆಯಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಪೂಜೆ ಮಾಡುವ ಮೂಲಕ ಸಿನಿಮಾಗೆ ರವಿತೇಜ ಟೀಮ್ ಚಾಲನೆ ನೀಡಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ರವಿತೇಜ ಜೊತೆ ಶ್ರೀಲೀಲಾ ಕೂಡ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಯಾರು?

    ಜೂನ್ 11ರಿಂದಲೇ ರವಿತೇಜ 75ನೇ (Raviteja 75th) ಸಿನಿಮಾದ ಶೂಟಿಂಗ್ ಶುರುವಾಗಿದ್ದು, ಮುಂದಿನ ವರ್ಷ ಸಂಕ್ರಾಂತಿಗೆ ಸಿನಿಮಾ ರಿಲೀಸ್ ಆಗಲಿದೆ.

    ಅಂದಹಾಗೆ, ತೆಲುಗಿನ ರವಿತೇಜ ಪ್ರಾಜೆಕ್ಟ್ ಜೊತೆಗೆ ಬಾಲಿವುಡ್‌ಗೂ ನಟಿ ಎಂಟ್ರಿ ಕೊಡ್ತಿದ್ದಾರೆ. ಸೈಫ್ ಅಲಿ ಖಾನ್ ಪುತ್ರನಿಗೆ ಶ್ರೀಲೀಲಾ ನಾಯಕಿಯಾಗಿದ್ದಾರೆ.

  • ಬಾಲಿವುಡ್‌ಗೆ ನಟಿ- ಸ್ಟಾರ್ ನಟನ ಪುತ್ರನಿಗೆ ಶ್ರೀಲೀಲಾ ನಾಯಕಿ

    ಬಾಲಿವುಡ್‌ಗೆ ನಟಿ- ಸ್ಟಾರ್ ನಟನ ಪುತ್ರನಿಗೆ ಶ್ರೀಲೀಲಾ ನಾಯಕಿ

    ನ್ನಡದ ನಟಿ ಶ್ರೀಲೀಲಾ (Sreeleela) ಇದೀಗ ಟಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸ್ಯಾಂಡಲ್‌ವುಡ್, ಟಾಲಿವುಡ್‌ನಲ್ಲಿ ಮಿಂಚಿದ ಬಳಿಕ ಬಾಲಿವುಡ್‌ಗೆ (Bollywood) ‘ಕಿಸ್’ ನಟಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸ್ಟಾರ್ ನಟನ ಪುತ್ರನ ಜೊತೆ ನಟಿ ರೊಮ್ಯಾನ್ಸ್ ಮಾಡಲಿದ್ದಾರೆ. ಇದನ್ನೂ ಓದಿ:ರಾಜ-ರಾಣಿ ಶೋ: ಸೆಲೆಬ್ರಿಟಿ ದಂಪತಿಗಳ ಕಚಗುಳಿ

    ಟಾಲಿವುಡ್ ಬಳಿಕ ಬಾಲಿವುಡ್‌ನಲ್ಲಿ ನಟಿಗೆ ಅದೃಷ್ಟದ ಬಾಗಿಲು ತೆರೆದಿದೆ. ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂಗೆ (Ibrahim Ali Khan) ಶ್ರೀಲೀಲಾ ಜೋಡಿಯಾಗ್ತಿದ್ದಾರೆ ಎನ್ನಲಾಗಿದೆ. ‘ಡೈಲರ್’ ಎಂಬ ಹಿಂದಿ ಸಿನಿಮಾದಲ್ಲಿ ಶ್ರೀಲೀಲಾ ಲೀಡ್ ರೋಲ್‌ನಲ್ಲಿ ನಟಿಸಲು ಕರೆ ಬಂದಿದೆಯಂತೆ. ಇದೇ ಆಗಸ್ಟ್‌ನಿಂದ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದ್ದು, ಶ್ರೀಲೀಲಾ ಕೂಡ ಸಾಥ್ ನೀಡುತ್ತಿದ್ದಾರೆ.

    ಮೊದಲ ಹಿಂದಿ ಸಿನಿಮಾದಲ್ಲೇ ನಟಿಗೆ ಉತ್ತಮ ಪಾತ್ರ ಸಿಕ್ಕಿದೆಯಂತೆ. ಇದೇ ಮೊದಲ ಬಾರಿಗೆ ಯುವ ನಟ ಇಬ್ರಾಹಿಂ ಜೊತೆ ಶ್ರೀಲೀಲಾ ನಟಿಸುತ್ತಿರುವ ಕಾರಣ, ಈ ಜೋಡಿಯನ್ನು ಸಿನಿಮಾದಲ್ಲಿ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.

    ಅಂದಹಾಗೆ, ಭಗವಂತ ಕೇಸರಿ, ಗುಂಟೂರು ಖಾರಂ ಸಿನಿಮಾ ಬಳಿಕ ನಟಿ ಸೈಲೆಂಟ್ ಆಗಿದ್ದರು. ಇದೀಗ ಮತ್ತೆ ಸಿನಿಮಾ ಟ್ರ್ಯಾಕ್‌ಗೆ ನಟಿ ಮರಳಿದ್ದಾರೆ. ತೆಲುಗಿನ ನಟ ರವಿತೇಜ (Ravi Teja) ಜೊತೆ ಕೂಡ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಮತ್ತೆ ಶ್ರೀಲೀಲಾ ಜಮಾನ ಶುರುವಾಗೋದು ಗ್ಯಾರಂಟಿ ಅಂತಿದ್ದಾರೆ ನೆಟ್ಟಿಗರು.