Tag: Sri Abhinava Gavisiddeshwara Swamiji

  • ಜನ ದೇವಾಲಯದ ಮುಂದೆ ಸಾಲುಗಟ್ಟಿ ನಿಲ್ಲುವಂತೆ, ವಿದ್ಯಾರ್ಥಿಗಳು ಗ್ರಂಥಾಲಯದ ಮುಂದೆ ನಿಲ್ಲಬೇಕು: ಗವಿ ಶ್ರೀ

    ಜನ ದೇವಾಲಯದ ಮುಂದೆ ಸಾಲುಗಟ್ಟಿ ನಿಲ್ಲುವಂತೆ, ವಿದ್ಯಾರ್ಥಿಗಳು ಗ್ರಂಥಾಲಯದ ಮುಂದೆ ನಿಲ್ಲಬೇಕು: ಗವಿ ಶ್ರೀ

    ಕೊಪ್ಪಳ: ವಿದ್ಯಾರ್ಥಿಗಳು ವಿಚಾರವಂತರಾಗಬೇಕು, ಶ್ರೇಷ್ಟ ದಾರ್ಶನಿಕರ ಮಾತಿನಂತೆ ದೇವಾಲಯದ ಮುಂದೆ ಜನರು ಸಾಲುಗಟ್ಟಿ ನಿಲ್ಲುವಂತೆ, ವಿದ್ಯಾರ್ಥಿಗಳು ಗ್ರಂಥಾಲಯದ ಮುಂದೆ ಸಾಲುಗಟ್ಟಿ ನಿಂತಾಗಲೇ ದೇಶಕ್ಕೆ ಹೊಸ ಭವಿಷ್ಯವಿದೆ ಎಂದು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

    ತಾಲೂಕಿನ ಹೊಸಬಂಡಿ ಹರ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಉಚಿತ ಪುಸ್ತಕಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜ್ಞಾನಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ. ನೀವೆಲ್ಲ ಜ್ಞಾನವಂತರಾಗಬೇಕು. ಹೀಗಾಗಿ ಆಧ್ಯಯನ ಬಹಳ ಮುಖ್ಯ. ಮೊಬೈಲ್ ಬಂದಾಗಿನಿಂದ ಪುಸ್ತಕ ಓದುವವರ ಸಂಖ್ಯೆ ಕಡಿಮೆ ಯಾಗುತ್ತಿದೆ, ಹಾಗಾಗಿದಿರಲಿ. ತಮ್ಮ ಅಧ್ಯಯನಕ್ಕೆ ಪೂರಕವಾದ ಪುಸ್ತಕಗಳನ್ನೇ ಇಂದು ನೀಡಲಾಗುತ್ತಿದೆ. ಓದಿ, ಜ್ಞಾನವಂತರಾಗಿ ಎಂದು ಕಿವಿ ಮಾತು ಹೇಳಿದರು. ಇದನ್ನೂ ಓದಿ: ನುಡಿದಂತೆ ನಡೆದ ಜಗ್ಗೇಶ್- 1 ಲಕ್ಷ ರೂ. ಚೆಕ್ ಹಸ್ತಾಂತರ

    ಮುನಿರಾಬಾದ್ ಪಿಎಸ್‍ಐ ಸುಪ್ರೀತ ಮಾತನಾಡಿ, ತಾವೆಲ್ಲ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿದ್ದು, ಸರ್ಕಾರಿ ನೌಕರಿ ಪಡೆಯಲೇಬೇಕೆಂಬ ಪ್ರಬಲ ಇಚ್ಛೆ ತಮ್ಮದಾಗಿರುತ್ತದೆ. ಯಾವ ವಲಯದ ಹುದ್ದೆ ಪಡೆಯ ಬೇಕಾದರೂ ನಿರಂತರ ಓದು ಅವಶ್ಯಕ, ಜ್ಞಾನವೆಂಬುದು ಯಾರ ಸ್ವತ್ತಲ್ಲ, ಒಳ್ಳೆಯ ಪುಸ್ತಕಗಳನ್ನು ಸಂಗ್ರಹಿಸಿ ನಿರಂತರ ಅಧ್ಯಯನಶೀಲರಾದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಈ ದಿಸೆಯಲ್ಲಿ ಸದಾ ನಿಮ್ಮೊಂದಿಗೆ ತನು, ಮನ, ಧನಗಳಿಂದ ನಾನು ಸಹಕಾರಕ್ಕೆ ಸಿದ್ಧನಿದ್ದೇನೆ. ನಿಮ್ಮ ಕನಸಿನ ಈಡೇರಿಕೆಗೆ ಈ ಪುಸ್ತಕಗಳು ದಾರಿ ತೋರಿಸುತ್ತವೆ ಎಂದರು. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

  • ಗವಿ ಶ್ರೀಗಳ ಮಾರ್ಗದರ್ಶನದಲ್ಲಿ ಪೊಲೀಸರಿಂದ ಸ್ಪೂರ್ತಿಸಾಗರ ಸರೋವರ ನಿರ್ಮಾಣ- ಸಚಿವ ಆಚಾರ್ ಲೋಕಾರ್ಪಣೆ

    ಗವಿ ಶ್ರೀಗಳ ಮಾರ್ಗದರ್ಶನದಲ್ಲಿ ಪೊಲೀಸರಿಂದ ಸ್ಪೂರ್ತಿಸಾಗರ ಸರೋವರ ನಿರ್ಮಾಣ- ಸಚಿವ ಆಚಾರ್ ಲೋಕಾರ್ಪಣೆ

    – ಪೊಲೀಸ್ ಅಧಿಕಾರಿಗಳಿಂದ ಸಮಾಜಮುಖಿ ಕೆಲಸ

    ಕೊಪ್ಪಳ: ಅಭಿನವ ಗವಿಶ್ರೀಗಳ ಮಾರ್ಗದರ್ಶನದಲ್ಲಿ ಕೆರೆ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಪೋಲಿಸರು ತಮ್ಮ ವೃತ್ತಿಯ ಜೊತೆಯಲ್ಲಿಯೇ ಕೆರೆ ನಿರ್ಮಾಣದಂತಹ ಉತ್ತಮ ಕಾರ್ಯ ಮಾಡಿರುವುದು ಶ್ಲಾಘನೀಯ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಸಚಿವ ಹಾಲಪ್ಪ ಬಸಪ್ಪ ಆಚಾರ್ ಹೇಳಿದರು.

    ಡಿ.ಆರ್.ಕೇಂದ್ರ ಸ್ಥಳ ಬಸಾಪೂರದಲ್ಲಿ ಸ್ಪೂರ್ತಿಸಾಗರ ಸರೋವರ ಲೋಕಾರ್ಪಣೆಮಾಡಿ ಮಾತನಾಡಿದ ಅವರು, ಈ ಹಿಂದೆ ನಮ್ಮ ಹಿರಿಯರು ಎಲ್ಲ ಕೆಲಸಗಳನ್ನು ತಾವೇ ಮಾಡಿಕೊಳ್ಳುತ್ತಿದ್ದರು. ಇಂದು ನಾವೆಲ್ಲರೂ ಸರ್ಕಾರಕ್ಕೆ ದೂರುವ ಬದಲಿಗೆ ನಮಗೆ ಬೇಕಾಗುವ ಮೂಲ ಸೌಕರ್ಯಗಳ ರಕ್ಷಣೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಜಿಲ್ಲೆಯ ಹಿರೆಹಳ್ಳ ಸ್ವಚ್ಛತೆ ಕಾರ್ಯ ಮತ್ತು ಗಿಣಿಗೆರೆ ಕೆರೆ ಅಭಿವೃದ್ಧಿಯಂತಹ ಮಹತ್ತರ ಕಾರ್ಯಗಳಿಗೆ ಮುಂದಾಗಿದ್ದಾರೆ. ಶ್ರೀಗಳು ಕರೆ ಕೊಟ್ಟಾಗ ಜನರು ಇಂಥ ಕಾರ್ಯಗಳಿಗೆ ಸಹಕಾರ ನೀಡುತ್ತಾರೆ ಎಂದರು.

    ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಕೆರೆ ನಿರ್ಮಿಸಿಕೊಂಡಿರುವುದು ಉತ್ತಮ ಸಮಾಜಮುಖಿ ಕಾರ್ಯವಾಗಿದೆ. ಹಿಂದೆ ನಾನು ನಾಲ್ಕು ಕೆರೆಗಳನ್ನು ನಿರ್ಮಿಸಿದ್ದೆ, ಇದರಿಂದ ಸಿಗುವ ಸಂತೃಪ್ತಿಯೆ ಬೇರೆಲ್ಲೂ ಸಿಗುವುದಿಲ್ಲ ಎಂದು ಸಚಿವರು ಹೇಳಿದರು.

    ಸಂಸದ ಕರಡಿ ಸಂಗಣ್ಣ ಮಾತನಾಡಿ, ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯದ ಜೊತೆಗೆ ಕೆರೆ ನಿರ್ಮಾಣದ ಕಾರ್ಯ ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ. ಒಬ್ಬ ಪೊಲೀಸ್ ಅಧಿಕಾರಿಯಾಗಿ ಏನು ಮಾಡಬಹುದು ಎಂಬುದಕ್ಕೆ ಇವರು ಸಾಕ್ಷಿಯಾಗಿದ್ದಾರೆ ಎಂದರು.

    ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿ, ಹುಟ್ಟು, ಸಾವು ಅನಿವಾರ್ಯ ಆದರೆ ಇಂಥ ಉತ್ತಮ ಸಮಾಜಮುಖಿ ಕೆಲಸ ಮಾಡಿದಾಗ ಅವು ಶಾಶ್ವತವಾಗಿ ಉಳಿಯುತ್ತವೆ. ನಡೆದಾಡುವ ದೇವರು ಎಂದು ಕರೆಯುವ ಗವಿಶ್ರೀಗಳ ಮಾರ್ಗದರ್ಶನದಲ್ಲಿ ಕೆರೆ ನಿರ್ಮಾಣ ಕಾರ್ಯ ಉತ್ತಮವಾಗಿದೆ ಎಂದು ಹೇಳಿದರು.

  • ಮನೆಯಲ್ಲಿ ದೇವರ ಕೋಣೆ ಚಿಕ್ಕದಾದರೂ ಮನೆಗೊಂದು ಗಿಡ ಬೆಳೆಸಿ: ಗವಿ ಶ್ರೀ

    ಮನೆಯಲ್ಲಿ ದೇವರ ಕೋಣೆ ಚಿಕ್ಕದಾದರೂ ಮನೆಗೊಂದು ಗಿಡ ಬೆಳೆಸಿ: ಗವಿ ಶ್ರೀ

    ಕೊಪ್ಪಳ: ಮನೆಯಲ್ಲಿ ದೇವರ ಕೋಣೆ ಚಿಕ್ಕದಾದರೂ ಪರವಾಗಿಲ್ಲ, ಆದರೆ ಮನೆಗೊಂದು ಗಿಡ ಬೆಳೆಸಿ ಎಂದು ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

    ನಗರದ ಭಾಗ್ಯನಗರ ಪಟ್ಟಣ ಪಂಚಾಯತ ಆವರಣದಲ್ಲಿ ಗವಿಮಠ, ಪಟ್ಟಣ ಪಂಚಾಯತಿ ಭಾಗ್ಯನಗರ ಆಶ್ರಯದಲ್ಲಿ ಏರ್ಪಡಿಸಿದ್ದ ಸಸಿ ವಿತರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು, ನೀರೆರೆದು ಆಶೀರ್ವಚನ ನೀಡಿದರು. ಮನೆಯಲ್ಲಿನ ದೇವರ ಕೋಣೆ ಚಿಕ್ಕದಾದರೂ ತೊಂದರೆ ಇಲ್ಲ. ಆದರೆ ಮನೆಗೊಂದು ಸಸಿ ನೆಟ್ಟು, ಬೆಳೆಸಬೇಕು. ಮರ ದೇವರು ಕೊಟ್ಟ ವರ ಎಂದು ಭಾವಿಸಬೇಕು ಎಂದರು.

    ಊರಿನಲ್ಲಿ ವಿಶಾಲವಾದ ರಸ್ತೆಗಳಿವೆ ಭಾಗ್ಯನಗರ ಚಂಡೀಗಢದಂತೆ ಕಾಣುತ್ತದೆ. ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಿದರೆ ಊರು ಇನ್ನೂ ಸುಂದರವಾಗಿ ಕಾಣುತ್ತದೆ. ವರ್ಷಕ್ಕೊಮ್ಮೆ ಕೇವಲ ಸಸಿಗಳನ್ನು ನೆಡುವುದಷ್ಟೇ ಅಲ್ಲ, ಅವುಗಳನ್ನು ಪಾಲನೆ ಮಾಡಬೇಕು. ಈಗ ಗಿಡ ನೆಟ್ಟು ಫೋಟೊ ತೆಗೆಸಿಕೊಂಡು, ಬಳಿಕ ಅದನ್ನು ತಿರುಗಿ ಸಹ ನೋಡುವುದಿಲ್ಲ. ಹೀಗೆ ಗಿಡ ನೆಟ್ಟರೆ ಏನೂ ಪ್ರಯೋಜನವಿಲ್ಲ. ನೆಟ್ಟ ಗಿಡಗಳನ್ನು ಬೆಳೆಸಬೇಕು, ಈ ಮೂಲಕ ನಿಸರ್ಗಕ್ಕೆ ಕಾಣಿಕೆ ನೀಡಬೇಕು ಎಂದು ಶ್ರೀಗಳು ಕಿವಿ ಮಾತು ಹೇಳಿದರು.

    ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿ, ಕೆರೆಗಳ ಅಭಿವೃದ್ಧಿ ಕಾರ್ಯ, ನೀರು ನಿಲ್ಲಿಸುವ ಕಾರ್ಯ, ಅಂತರ್ಜಲ ಹೆಚ್ಚಿಸುವುದು, ಗಿಡಗಳನ್ನು ನೆಡುವುದು, ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಕ್ರಾಂತಿಗಳು ನಡೆಯುತ್ತಿವೆ. ಈಗ ಸಸ್ಯಕಾಶಿಯನ್ನಾಗಿಸುವ ಸಸ್ಯಕಾಂತ್ರಿಯೂ ಹೆಮ್ಮರವಾಗಿ ವೃಕ್ಷಕ್ರಾಂತಿಯಾಗಲಿದೆ ಇದರಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದೇವೆ ಎಂಬುದೇ ಹೆಮ್ಮೆಯ ಸಂಗತಿ. ನಾವೆಲ್ಲರೂ ಬರಿ ಸುಮ್ಮನೆ ಗಿಡಗಳನ್ನು ನೆಟ್ಟು ಹೋದರೆ ಉಪಯೋಗವಿಲ್ಲ, ಅವುಗಳನ್ನು ಸಂರಕ್ಷಣೆ ಮಾಡುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ. ಕೇವಲ ನಗರ ಪ್ರದೇಶದಲ್ಲಿ ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಗಿಡಗಳನ್ನು ಬೆಳಸುವುದನ್ನು ಪೂಜ್ಯರ ನೇತೃತ್ವದಲ್ಲಿ ಮಾಡೋಣ ಎಂದು ಹೇಳಿದರು.