Tag: Sri Lanka

  • ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ – ಕ್ರಮಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದ ಸ್ಟಾಲಿನ್

    ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ – ಕ್ರಮಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದ ಸ್ಟಾಲಿನ್

    ಚೆನ್ನೈ: ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ 47 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ (Lankan Navy) ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ.

    ಶ್ರೀಲಂಕಾ (Sri Lanka) ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಉತ್ತರ ಶ್ರೀಲಂಕಾದ ತಲೈಮನ್ನಾರ್‌ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಮೀನುಗಾರರ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ (MK Stalin) ಅವರು ಕೇಂದ್ರ ಸಚಿವ ಎಸ್ ಜೈಶಂಕರ್ (Jaishankar) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

    ಒಂದು ತಿಂಗಳ ಹಿಂದೆ ಉತ್ತರ ಶ್ರೀಲಂಕಾದ ಜಾಫ್ನಾ ಬಳಿ 12 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಪಡೆ ಬಂಧಿಸಿತ್ತು. ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧದಲ್ಲಿ ಮೀನುಗಾರರಿಗೆ ಸಂಬಂಧಿಸಿದ ವಿಷಯ ವಿವಾದವಾಗಿಯೇ ಉಳಿದಿದೆ. ಶ್ರೀಲಂಕಾ ನೌಕಾಪಡೆಯು ಕೆಲವು ಸಂದರ್ಭಗಳಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದೆ.

    ಈ ಬಗ್ಗೆ ರಾಜತಾಂತ್ರಿಕ ಚರ್ಚೆಗಳ ನಡೆಯುತ್ತಿವೆ. ಇಷ್ಟಾದರೂ ಮೀನುಗಾರಿಕೆ ವಿವಾದವು ಉಭಯ ದೇಶಗಳ ನಡುವೆ ದೀರ್ಘಕಾಲದಿಂದ ಬಾಕಿ ಉಳಿದಿದೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ 37 ಭಾರತೀಯ ಮೀನುಗಾರರ ಬಂಧನ – 5 ದೋಣಿಗಳು ವಶ

  • ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಬಂಧನ

    ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಬಂಧನ

    ಕೊಲಂಬೊ: ಸರ್ಕಾರಿ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರನ್ನು ಬಂಧಿಸಲಾಗಿದೆ.

    ಅಧ್ಯಕ್ಷರಾಗಿದ್ದಾಗ ಖಾಸಗಿ ವಿದೇಶ ಪ್ರವಾಸಕ್ಕಾಗಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದೆ. ಇದನ್ನೂ ಓದಿ: ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    2023 ರ ಸೆಪ್ಟೆಂಬರ್‌ನಲ್ಲಿ ಬ್ರಿಟಿಷ್ ವಿಶ್ವವಿದ್ಯಾಲಯವೊಂದರಲ್ಲಿ ನಡೆದ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು, ಇಂಗ್ಲೆಂಡ್‌ಗೆ ಪ್ರಯಾಣಿಸಲು ಸಾರ್ವಜನಿಕ ಹಣವನ್ನು ಬಳಸಿದ್ದಾರೆ ಎಂದು ವಿಕ್ರಮಸಿಂಘೆ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಾವು ಅವರನ್ನು ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತಿದ್ದೇವೆ ಎಂದು ಅಧಿಕಾರಿ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ವೈಯಕ್ತಿಕ ಉದ್ದೇಶಗಳಿಗಾಗಿ ರಾಜ್ಯದ ಸಂಪನ್ಮೂಲಗಳನ್ನು ಬಳಸಿದ್ದಕ್ಕಾಗಿ ಅವರ ಮೇಲೆ ಆರೋಪ ಹೊರಿಸಲಾಗಿದೆ.

    ಪೊಲೀಸರು ಈ ಹಿಂದೆ ಅವರ ಸಿಬ್ಬಂದಿಯನ್ನು ಪ್ರಯಾಣ ವೆಚ್ಚದ ಬಗ್ಗೆ ಪ್ರಶ್ನಿಸಿದ್ದರು. 2023 ರಲ್ಲಿ ಹವಾನಾದಲ್ಲಿ ನಡೆದ G77 ಶೃಂಗಸಭೆಯಲ್ಲಿ ಭಾಗವಹಿಸಿದ್ದ ವಿಕ್ರಮಸಿಂಘೆ ಅವರು ಲಂಡನ್‌ಗೆ ಹಿಂತಿರುಗುವಾಗ ಅಲ್ಲಿ ತಂಗಿದ್ದರು. ಯುಕೆ ರಾಜಧಾನಿಯಲ್ಲಿ ಅವರು ಮತ್ತು ಅವರ ಪತ್ನಿ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ವಿಕ್ರಮಸಿಂಘೆ ಅವರು ತಮ್ಮ ಪತ್ನಿಯ ಪ್ರಯಾಣ ವೆಚ್ಚವನ್ನು ಅವರೇ ಭರಿಸುತ್ತಿದ್ದರು. ಯಾವುದೇ ರಾಜ್ಯ ನಿಧಿಯನ್ನು ಬಳಸಲಾಗಿಲ್ಲ ಎಂದು ವಾದಿಸಿದ್ದರು. ಆದಾಗ್ಯೂ, ವಿಕ್ರಮಸಿಂಘೆ ಅವರು ಖಾಸಗಿ ಭೇಟಿಗಾಗಿ ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆ. ಅವರ ಅಂಗರಕ್ಷಕರಿಗೂ ರಾಜ್ಯದಿಂದ ವೇತನ ನೀಡಲಾಗಿದೆ ಎಂದು ಸಿಐಡಿ ಆರೋಪಿಸಿದೆ.

  • ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

    ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

    ಕೊಲಂಬೋ: ಕೇರಳದ ಶಬರಿಮಲೆ ಅಯ್ಯಪ್ಪ (Sabarimala) ದೇಗುಲಕ್ಕೆ ಶ್ರೀಲಂಕಾ (Sri Lanka) ಪ್ರಜೆಗಳು ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳಬಹುದು ಎಂದು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ.

    ಸೋಮವಾರ (ಆ.11) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಮಂಗಳವಾರ (ಆ.12) ಹೇಳಿಕೆ ಬಿಡುಗಡೆಗೊಳಿಸಿದೆ.ಇದನ್ನೂ ಓದಿ: Delhi | ಈಜು ತರಗತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

    ಶ್ರೀಲಂಕಾದ ಭಕ್ತಾದಿಗಳು ಶಬರಿಮಲೆ ಅಯ್ಯಪ್ಪನನ್ನು ಪೂಜಿಸುತ್ತಾರೆ. ಅದಲ್ಲದೇ ಪ್ರತಿ ವರ್ಷ ಸುಮಾರು 15 ಸಾವಿರಕ್ಕೂ ಅಧಿಕ ಶೀಲಂಕಾ ಪ್ರಜೆಗಳು ಶಬರಿಮಲೆ ದೇಗುಲಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ಶ್ರೀಲಂಕಾ ಸರ್ಕಾರ ಶಬರಿಮಲೆ ಯಾತ್ರೆಯನ್ನು ಸರ್ಕಾರದ ಮಾನ್ಯತೆ ಪಡೆದ ಯಾತ್ರೆ ಎಂದು ಪರಿಗಣಿಸಿದೆ.

    ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ವಾರ್ಷಿಕ ಮಂಡಲ ಪೂಜೆ ಉತ್ಸವವು ನವೆಂಬರ್‌ನಿAದ ಡಿಸೆಂಬರ್‌ವರೆಗೆ ನಡೆಯುತ್ತದೆ. ಬಳಿಕ ಜನವರಿಯಲ್ಲಿ ಮಕರವಿಳಕ್ಕು ಉತ್ಸವ ನಡೆಯುತ್ತದೆ. ಈ ಅವಧಿಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ.ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

     

  • ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

    ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

    ಕೊಲಂಬೊ: ಶ್ರೀಲಂಕಾದ (Sri Lanka) ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಏಂಜಲೊ ಮ್ಯಾಥ್ಯೂಸ್‌ (Angelo Mathews) ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

    ಜೂನ್‌ 17ರಿಂದ 21ರ ವರೆಗೆ ಗಾಲೆ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್‌ ಪಂದ್ಯದ ಬಳಿಕ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್‌ ಕ್ರಿಕೆಟ್‌ಗೆ (Test Cricket) ಗುಡ್‌ಬೈ ಹೇಳಲಿದ್ದಾರೆ. ಈ ಕುರಿತು ತಮ್ಮ ಎಕ್ಸ್‌‌ ಖಾತೆಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಭಾರತ ಕೊಟ್ಟ ಏಟಿಗೆ ಡಿಆರ್‌ಎಸ್‌ ನಿಯಮವನ್ನೇ ಕೈಬಿಟ್ಟ ಪಿಎಸ್‌ಎಲ್‌!

    ಗಾಳೆ ಅಂಗಳದಲ್ಲಿ ನಡೆಯುವ ಟೆಸ್ಟ್‌ ಮ್ಯಾಥ್ಯೂಸ್‌ ಅವರ 119ನೇ ಟೆಸ್ಟ್‌ ಪಂದ್ಯವಾಗಿದೆ. 2009ರಲ್ಲಿ ಇದೇ ಗಾಲೆ ಕ್ರೀಡಾಂಗಣದಲ್ಲೇ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮ್ಯಾಥ್ಯೂಸ್‌ ಅದೇ ಅಂಗಳದಲ್ಲಿ ತಮ್ಮ ಕೊನೆಯ ಟೆಸ್ಟ್‌ ಪಂದ್ಯವನ್ನಾಡಲಿದ್ದಾರೆ. ಇದನ್ನೂ ಓದಿ: IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

    ನಾಯಕನಾಗಿ 34 ಟೆಸ್ಟ್‌ ಪಂದ್ಯಗಳನ್ನಾಡಿರುವ ಮಾಥ್ಯೂಸ್‌ ಲಂಕಾ ಪರ ಅತಿಹೆಚ್ಚು ಟೆಸ್ಟ್‌ ಋನ್‌ ಗಳಿಸಿರುವ 3ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊದಲ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಕುಮಾರ್‌ ಸಂಗಕ್ಕಾರ, ಮಹೇಲ ಜಯವರ್ದನೆ ಇದ್ದಾರೆ. ಸಂಗಕ್ಕಾರ 134 ಟೆಸ್ಟ್‌ ಪಂದ್ಯಗಳನ್ನಾಡಿದ್ದು 57.40 ಸರಾಸರಿಯಲ್ಲಿ 12,400 ರನ್‌ ಗಳಿಸಿದ್ದರೆ, ಜಯವರ್ದನೆ 149 ಪಂದ್ಯಗಳನ್ನಾಡಿದ್ದು 49.84 ಸರಾಸರಿಯಲ್ಲಿ 11,814 ರನ್‌ ಗಳಿಸಿದ್ದಾರೆ. 3ನೇ ಸ್ಥಾನದಲ್ಲಿರುವ ಮ್ಯಾಥ್ಯೂಸ್‌ ಕೊನೆಯ ಟೆಸ್ಟ್‌ ಪಂದ್ಯಕ್ಕೂ ಮುನ್ನ 118 ಪಂದ್ಯಗಳಲ್ಲಿ 44.62 ಸರಾಸರಿಯಲ್ಲಿ 8,167 ರನ್‌ ಗಳಿಸಿದ್ದಾರೆ. ಇದರಲ್ಲಿ 16 ಶತಕ ಮತ್ತು 45 ಅರ್ಧಶತಕಗಳೂ ಸೇರಿವೆ. ಅಲ್ಲದೇ ಅವರು ಟೆಸ್ಟ್‌ 33 ವಿಕೆಟ್ ಗಳನ್ನೂ ಕಬಳಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಭಾವು ಸಂದೇಶ ಹಂಚಿಕೊಂಡಿರುವ ಏಂಜಲೊ ಮ್ಯಾಥ್ಯೂಸ್‌, ನಾನು ಈ ಆಟಕ್ಕೆ ಕೃತಜ್ಞನಾಗಿದ್ದೇನೆ. ಜೊತೆಗೆ ವೃತ್ತಿಜೀವನದುದ್ದಕ್ಕೂ ನನ್ನನ್ನು ಬೆಂಬಲಿಸಿದ ಸಾವಿರಾರು ಶ್ರೀಲಂಕಾ ಕ್ರಿಕೆಟ್ ಅಭಿಮಾನಿಗಳಿಗೆ ಕೃತಜ್ಞನಾಗಿದ್ದೇನೆ. ಈ ಟೆಸ್ಟ್ ತಂಡವು ಪ್ರತಿಭಾನ್ವಿತರ ತಂಡವಾಗಿದೆ ಎಂದು ನಾನು ನಂಬುತ್ತೇನೆ, ಇದರಲ್ಲಿ ಅನೇಕ ಭವಿಷ್ಯದ ಮತ್ತು ಪ್ರಸ್ತುತ ಶ್ರೇಷ್ಠರು ಆಟವಾಡುತ್ತಿದ್ದಾರೆ. ಮುಂದಿನ ಪೀಳಿಗೆಗೆ ಅವಕಾಶ ಕಲ್ಪಿಸಲು ಇದು ಉತ್ತಮ ಸಮಯವೆಂದು ಭಾವಿಸುತ್ತೇನೆ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

    `Timed Out’ಗೆ ವಿಕೆಟ್‌ ಒಪ್ಪಿಸಿದ ಮೊದಲ ಆಟಗಾರ:
    ಏಕದಿನ ವಿಶ್ವಕಪ್‌ ಕ್ರಿಕೆಟ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಶ್ರೀಲಂಕಾದ ಕ್ರಿಕೆಟಿಗ ಏಂಜಲೋ ಮಾಥ್ಯೂಸ್ ಒಂದೇ ಒಂದು ಎಸೆತ ಎದುರಿಸದೇ ಟೈಮ್ಡ್‌ ಔಟ್‌ಗೆ (Timed Out) ಬಲಿಯಾದ ಘಟನೆ 2023ರಲ್ಲಿ ನಡೆದಿತ್ತು. ಇದನ್ನೂ ಓದಿ: ವಿಶ್ವಕಪ್‌ನಲ್ಲಿ `Timed Out’ ಟಾಕ್‌ ವಾರ್‌ ಜೋರು – ವೀಡಿಯೋ ಪ್ರೂಫ್‌ ಕೊಟ್ಟ ಮಾಥ್ಯೂಸ್

    ಬಾಂಗ್ಲಾ (Bangladesh) ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಶ್ರೀಲಂಕಾ 24.2ನೇ ಓವರ್‌ನಲ್ಲಿ 135 ರನ್‌ಗಳಿಸಿದ್ದಾಗ ಸಮರವಿಕ್ರಮ ಔಟಾದರು. ಈ ವೇಳೆ ಏಂಜಲೊ ಮಾಥ್ಯೂಸ್ ಕ್ರೀಸ್‌ಗೆ ಬಂದರು. ಆದ್ರೆ ಬಾಲ್‌ ಎದುರಿಸಲು ಮುಂದಾದಾಗ ಹೆಲ್ಮೆಟ್‌ ಪಟ್ಟಿ ತುಂಡಾಗಿರುವುದು ಗೊತ್ತಾಯಿತು. ಹೀಗಾಗಿ ಬೇರೆ ಹೆಲ್ಮೆಟ್‌ ತರುವಂತೆ ಮಾಥ್ಯೂಸ್ ತಂಡಕ್ಕೆ ಸೂಚಿಸಿದರು. ಈ ಸಂದರ್ಭದಲ್ಲಿ ಬಾಂಗ್ಲಾ ನಾಯಕ ಶಕೀಬ್‌ ಅಲ್‌ ಹಸನ್‌ ಅಂಪೈರ್‌ ಜೊತೆ ಬ್ಯಾಟರ್‌ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿ ಟೈಮ್ಡ್‌ ಔಟ್‌ಗೆ ಮನವಿ ಮಾಡಿದರು. ಈ ಮನವಿಯನ್ನು ಅಂಪೈರ್‌ ಪುರಸ್ಕರಿಸಿದರು. ಈ ವೇಳೆ ಮ್ಯಾಥ್ಯೂಸ್‌ ಅವರು, ನನ್ನ ಹೆಲ್ಮೆಟ್‌ ಪಟ್ಟಿ ಮುರಿದು ಹೋಗಿದೆ. ಹೀಗಾಗಿ ಬೇರೆ ಹೆಲ್ಮೆಟ್‌ ತರುವಂತೆ ಹೇಳಿದ್ದೇನೆ ಎಂದು ಅಂಪೈರ್‌ಗೆ ಸಮಸ್ಯೆಯನ್ನು ವಿವರಿಸಿದರು. ಅಂಪೈರ್‌ ಮತ್ತು ಬಾಂಗ್ಲಾ ಆಟಗಾರರ ಜೊತೆಗೆ ಹೆಲ್ಮೆಟ್‌ ದೋಷದ ಬಗ್ಗೆ ಮನವರಿಕೆ ಮಾಡಿದರೂ ಶಕೀಬ್‌ ಮಾತ್ರ ತಮ್ಮ ಟೈಮ್ಡ್‌ ಔಟ್‌ ಮನವಿಯಿಂದ ಹಿಂದಕ್ಕೆ ಸರಿಯಲಿಲ್ಲ. ಕೊನೆಗೆ ಏಂಜಲೊ ಮಾಥ್ಯೂಸ್ ಬಾಂಗ್ಲಾ ವಿರುದ್ಧ ಗೊಣಗುತ್ತಲೇ ಪೆವಿಲಿಯನ್‌ಗೆ ಮರಳಿದರು. ಬೌಂಡರಿ ಗೆರೆ ದಾಟುತ್ತಿದ್ದಂತೆ ಹೆಲ್ಮೆಟ್‌ ಎಸೆದು ಸಿಟ್ಟು ಹೊರಹಾಕಿದರು.

  • ಭಾರತ ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ – ಸುಪ್ರೀಂ

    ಭಾರತ ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ – ಸುಪ್ರೀಂ

    – ಶ್ರೀಲಂಕಾ ಪ್ರಜೆಯ ಮನವಿ ತಿರಸ್ಕರಿಸಿದ ಕೋರ್ಟ್‌

    ನವದೆಹಲಿ: ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ (Dharamshala) ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್‌ (Supreme Court) ಶ್ರೀಲಂಕಾದ ತಮಿಳು ಪ್ರಜೆಯೊಬ್ಬರ ಬಂಧನದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

    ಯುಎಪಿಎ (UAPA) ಪ್ರಕರಣದಲ್ಲಿ ವಿಧಿಸಲಾದ 7 ವರ್ಷಗಳ ಶಿಕ್ಷೆ ಮುಗಿದ ತಕ್ಷಣ ಅರ್ಜಿದಾರ ಶ್ರೀಲಂಕಾ ಪ್ರಜೆಯು (Sri Lankan) ಭಾರತವನ್ನು ತೊರೆಯಬೇಕು ಎಂದು ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ದೀಪಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಕೆ. ವಿನೋದ್‌ ಚಂದ್ರನ್‌ ಅವರಿದ್ದ ದ್ವೀಸದಸ್ಯ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ಬಿಡದಿ ಅಪ್ರಾಪ್ತ ಬಾಲಕಿ ಹತ್ಯೆ ಕೇಸ್‌ಗೆ ಟ್ವಿಸ್ಟ್ – ರೈಲು ಡಿಕ್ಕಿ ಹೊಡೆದು ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಈ ವೇಳೆ ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಬೇಕೇ? ನಾವು 140 ಕೋಟಿ ಜನಸಂಖ್ಯೆ ಹೊಂದಿದ್ದು ಕಷ್ಟಪಡುತ್ತಿದ್ದೇವೆ. ಇದು ಎಲ್ಲೆಡೆಯಿಂದ ಬಂದ ವಿದೇಶಿ ಪ್ರಜೆಗಳಿಗೆ ಆಶ್ರಯ ನೀಡಬಹುದಾದ ಧರ್ಮ ಛತ್ರವಲ್ಲ ಎಂದು ಕೋರ್ಟ್‌ ಹೇಳಿತು. ಇದನ್ನೂ ಓದಿ: ಕೊನೆ ಕ್ಷಣದವರೆಗೂ ಆಪರೇಷನ್ ಸಿಂಧೂರದ ಟಾರ್ಗೆಟ್ ಟಾಪ್ ಸೀಕ್ರೆಟ್ – ಗೊತ್ತಿದ್ದಿದ್ದು ಅಜಿತ್ ದೋವಲ್‍ಗೆ ಮಾತ್ರ!

    ಏನಿದು ಪ್ರಕರಣ?
    ಈ ಹಿಂದೆ ಶ್ರೀಲಂಕಾದಲ್ಲಿ ಸಕ್ರೀಯವಾಗಿದ್ದ ಭಯೋತ್ಪಾದಕ ಸಂಘಟನೆಯಾದ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಅನುಮಾನದ ಮೇಲೆ ವಿದೇಶಿ ಪ್ರಜೆಯನ್ನು 2015 ರಲ್ಲಿ ಬಂಧಿಸಲಾಗಿತ್ತು. 2018 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ಸೆಕ್ಷನ್-10ರ ಅಡಿಯಲ್ಲಿ ಅಪರಾಧಕ್ಕಾಗಿ ವಿಚಾರಣಾ ನ್ಯಾಯಾಲಯವು ಅರ್ಜಿದಾರನನ್ನ ದೋಷಿ ಎಂದು ಘೋಷಿಸಿತು, 10 ವರ್ಷಗಳ ಕಾಲ ಜೈಲು ಶಿಕ್ಷೆಯನ್ನೂ ವಿಧಿಸಿತ್ತು. ಕೊನೆಗೆ 2022 ರಲ್ಲಿ, ಮದ್ರಾಸ್ ಹೈಕೋರ್ಟ್ ಆತನ ಶಿಕ್ಷೆಯನ್ನು 7 ವರ್ಷಗಳಿಗೆ ಇಳಿಸಿತು. ಶಿಕ್ಷೆ ಅವಧಿ ಮುಗಿದ ಬಳಿಕ ಅವನು ಭಾರತವನ್ನ ತೊರೆಯಬೇಕು, ಅಲ್ಲಿಯವರೆಗೆ ನಿರಾಶ್ರಿತರ ಶಿಬಿರದಲ್ಲೇ ಇರಬೇಕು ಎಂದು ನಿರ್ದೇಶನ ನೀಡಿತ್ತು.

    ಇದಾದ ಬಳಿಕ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಅರ್ಜಿದಾರ, ಅವರ ತಾಯ್ನಾಡಿನಲ್ಲಿ ಜೀವಕ್ಕೆ ಅಪಾಯವಿದೆ ಎಂದು ಅರ್ಜಿದಾರನ ಪರ ವಕೀಲರು ತಿಳಿಸಿದ್ದರು. ಅಲ್ಲದೇ ಅವರು ಕಳೆದ ಮೂರು ವರ್ಷಗಳಿಂದ ಬಂಧನದಲ್ಲಿದ್ದಾರೆ, ಗಡೀಪಾರು ಪ್ರಕ್ರಿಯೆ ಕೂಡ ಆರಂಭವಾಗಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದರು. ಅಲ್ಲದೇ ಬಹು ಕಾಯಿಲೆಗಳಿಂದ ಬಳಲುತ್ತಿರುವ ಅರ್ಜಿದಾರನ ಪತ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆ ಹೊಂದಿರುವ ಅವರ ಮಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದರು.

    ಇದಕ್ಕೆ ಮಧ್ಯಪ್ರವೇಶಿಸಿದ ನ್ಯಾ. ದತ್ತ ಅವರು, ಇಲ್ಲಿ ನೆಲೆಸಲು ನಿಮಗೆ ಏನು ಹಕ್ಕಿದೆ? ಎಂದು ಪ್ರಶ್ನಿಸಿದರು.. ಜೊತೆಗೆ ಅರ್ಜಿಯನ್ನು ವಜಾಗೊಳಿಸಿದ ನ್ಯಾ. ದತ್ತ ಅವರಿದ್ದ ಪೀಠ ಬಂಧನವು ಕಾನೂನಿಗೆ ಅನುಸಾರವಾಗಿರುವುದರಿಂದ ಆರ್ಟಿಕಲ್ 21 ಉಲ್ಲಂಘಿಸಲಾಗಿಲ್ಲ. ಆರ್ಟಿಕಲ್-19ರ ಪ್ರಕಾರ ಭಾರತದಲ್ಲಿ ನೆಲೆಸುವ ಮೂಲಭೂತ ಹಕ್ಕು ನಾಗರಿಕರಿಗೆ ಮಾತ್ರ ಇದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರದಿಂದ 4,195 ಕೋಟಿ ಅನುದಾನ ಬಾಕಿ; ಸಿಎಂ ಬೂಟಾಟಿಕೆ ಪ್ರದರ್ಶನ – ಜೋಶಿ ವಾಗ್ದಾಳಿ

  • ನಮ್ಮ ಭೂಮಿಯನ್ನು ಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ಬಳಸಲು ಬಿಡಲ್ಲ: ಶ್ರೀಲಂಕಾ ಭರವಸೆ

    ನಮ್ಮ ಭೂಮಿಯನ್ನು ಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ಬಳಸಲು ಬಿಡಲ್ಲ: ಶ್ರೀಲಂಕಾ ಭರವಸೆ

    – ಭಾರತ – ಶ್ರೀಲಂಕಾ ಮೊದಲ ರಕ್ಷಣಾ ಒಪ್ಪಂದಕ್ಕೆ ಸಹಿ

    ಕೊಲಂಬೊ: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ (Anura Kumara Dissanayake) ಅವರನ್ನ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ರಕ್ಷಣಾ ಒಪ್ಪಂದ ಸೇರಿದಂತೆ ಸುಮಾರು 7 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

    ಚರ್ಚೆಯ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ಭಾರತದ ಭದ್ರತೆಗೆ ಮತ್ತು ಪ್ರಾದೇಶಿಕ ಸ್ಥಿರತೆಗೆ ಅಡ್ಡಿಯುಂಟು ಮಾಡುವ ಯಾವುದೇ ಚಟುವಟಿಕೆ ನಡೆಸಲು ನಮ್ಮ ಭೂಮಿಯನ್ನು ಬಳಸುವುದಕ್ಕೆ ಬಿಡಲ್ಲ ಎಂದು ಭರವಸೆ ನೀಡಿದ್ದಾರೆ.

    ಶ್ರೀಲಂಕಾದ ವಿಶೇಷ ಆರ್ಥಿಕ ವಲಯವನ್ನು ಮೀರಿ ವರ್ತಿಸುವುದಕ್ಕೆ ಯಾವುದೇ ಕಾರಣಕ್ಕೂ ಲಂಕಾ ಸರ್ಕಾರ ಅವಕಾಶ ನೀಡುವುದಿಲ್ಲ. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆರ್ಥಿಕ ವಲಯಗಳ ಬಳಕೆಗೆ ಇತಿಮಿತಿ ಹೇರುವ ಅವಶ್ಯಕತೆ ಇದೆ. ಈ ಬಗ್ಗೆ ಗಮನಹರಿಸಬೇಕಾಗಿದೆ. ವಿಶ್ವಸಂಸ್ಥೆಯ ಆಯೋಗಕ್ಕೆ ಶ್ರೀಲಂಕಾ ಇತ್ತೀಚೆಗೆ ಸಲ್ಲಿಸಿದ ಮನವಿಯಲ್ಲೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆ ಬೇಕು ಎಂದು ಅವರು ಹೇಳಿದ್ದಾರೆ.

    ರಕ್ಷಣಾ ಒಪ್ಪಂದಕ್ಕೆ ಸಹಿ:
    ಪ್ರಧಾನಿ ನರೇಂದ್ರ ಮೋದಿ ಅವರ ಈ ಲಂಕಾ ಭೇಟಿಯಲ್ಲಿ ಭಾರತ ಮತ್ತು ಶ್ರೀಲಂಕಾ ಮೊದಲ ಬಾರಿಗೆ ಮಹತ್ವಾಕಾಂಕ್ಷೆಯ ರಕ್ಷಣಾ ಒಪ್ಪಂದಕ್ಕೆ ಪರಸ್ಪರ ಸಹಿ ಹಾಕಿವೆ. ಇದು ವಿಸ್ತೃತ ದ್ವಿಪಕ್ಷೀಯ ಸಹಕಾರದ ಮಾರ್ಗಸೂಚಿಯಾಗಿ ಕೆಲಸ ಮಾಡಲಿದೆ. ಎರಡೂ ರಾಷ್ಟ್ರಗಳ ಸುರಕ್ಷತೆಯು ಪರಸ್ಪರ ಸಂಬಂಧ ಹೊಂದಿದೆ ಎಂದು ರಕ್ಷಣಾ ಪರಿಣಿತರು ಹೇಳಿದ್ದಾರೆ.

    ಇದೇ ವೇಳೆ ಚೀನಾದ ಬೆಲ್ಡ್‌ ಅಂಡ್‌ ರೊಡ್‌ ಜಾಗತಿಕ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಪಾಲುದಾರರಾಗುವಂತೆ ಚೀನಾ ದೇಶವು ಶ್ರೀಲಂಕಾದ ಮೇಲೆ ಸಹಕಾರದ ನೆಪದಲ್ಲಿ ಒತ್ತಡ ಹೇರುತ್ತಲೇ ಬಂದಿದೆ. 2022ರಲ್ಲಿ ಲಂಕಾದ ಅರ್ಥವ್ಯವಸ್ಥೆ ಪಾತಾಳಕ್ಕೆ ಕುಸಿದಿದ್ದಾಗ ಭಾರತಕ್ಕೆ ಹೊಸ ಅವಕಾಶ ಸಿಕ್ಕಿತು. ನವದೆಹಲಿ ಶ್ರೀಲಂಕಾಕ್ಕೆ ಹಣಕಾಸಿನ ನೆರವು, ಆಹಾರ, ಇಂಧ, ಔಷಧ ಸೇರಿ ಎಲ್ಲ ರೀತಿಯ ನೆರವನ್ನು ಪೂರೈಸಿತು. ಅಲ್ಲಿಂದ ಚಿತ್ರಣ ಬದಲಾಯಿತು ಎಂಬುದನ್ನು ತಜ್ಞರು ನೆನಪಿಸಿಕೊಂಡಿದ್ದಾರೆ.

  • ಭಾರತ ಮೂಲದ ತಮಿಳು ಸಮುದಾಯಕ್ಕೆ 10,000 ಮನೆ ನಿರ್ಮಾಣ ಭರವಸೆ ನೀಡಿದ ಮೋದಿ

    ಭಾರತ ಮೂಲದ ತಮಿಳು ಸಮುದಾಯಕ್ಕೆ 10,000 ಮನೆ ನಿರ್ಮಾಣ ಭರವಸೆ ನೀಡಿದ ಮೋದಿ

    ಕೊಲಂಬೊ: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರನ್ನ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಲಂಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ತಮಿಳು ಸಮುದಾಯಕ್ಕೆ (Indian-Origin Tamil community) ಸಿಹಿ ಸುದ್ದಿ ಕೊಟ್ಟಿದ್ದಾರೆ.

    ಹೌದು. ಶ್ರೀಲಂಕಾದಲ್ಲಿ (Sri Lanka) ನೆಲೆಸಿರುವ ಭಾರತೀಯ ಮೂಲದ ತಮಿಳು ಸಮುದಾಯಕ್ಕೆ 10,000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಹೇಳಿದ್ದಾರೆ. ಜೊತೆಗೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’‌ ಪ್ರಶಸ್ತಿ ಪ್ರದಾನ

    ಭಾರತ ಸರ್ಕಾರ ತಮಿಳುನಾಡು ಮತ್ತು ಶ್ರೀಲಂಕಾದಲ್ಲಿರುವ ಭಾರತದ ಜನರ ನಡುವೆ ಶಾಂತಿಯುತ ಸಂಬಂಧ ಕಾಪಾಡಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಮೊದಲ ಹೆಜ್ಜೆಯನ್ನಿಟ್ಟಿದೆ. ಶ್ರೀಲಂಕಾ ಸರ್ಕಾರವು ತಮಿಳರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಮತ್ತು ಸಂವಿಧಾನತ್ಮಕವಾಗಿ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

    ಪ್ರಧಾನಿ ಮೋದಿ ಹಾಗೂ ಲಂಕಾ ಅಧ್ಯಕ್ಷರ ಮಧ್ಯೆ ವಿಸ್ತೃತವಾದ ಮಾತುಕತೆಯ ಬಳಿಕ 7 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಇದನ್ನೂ ಓದಿ: ಏ.10ರಿಂದ ಅಮೆರಿಕದ ಸರಕುಗಳ ಮೇಲೆ 34% ಆಮದು ಸುಂಕ – ಚೀನಾ ಪ್ರತೀಕಾರದ ಸುಂಕಕ್ಕೆ ದೊಡ್ಡಣ್ಣ ಗರಂ

    ಮೀನುಗಾರರ ಬಿಡುಗಡೆ:
    ಉಭಯ ದೇಶಗಳ ರಕ್ಷಣಾ ಒಪ್ಪಂದದ ಮಾತುಕತೆಯ ನಡುವೆ ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ – ಉತ್ತರ ಭಾರತದಲ್ಲೂ ಎಫೆಕ್ಟ್‌

    ಈ ವಿಷಯದಲ್ಲಿ ಮಾನವೀಯ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವರ ದೋಣಿಗಳನ್ನು ಹಿಂದಿರುಗಿಸಲು ಒತ್ತಿ ಹೇಳಿದರು. ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧವು ಪರಸ್ಪರ ನಂಬಿಕೆ ಮತ್ತು ಸದ್ಭಾವನೆಯನ್ನು ಆಧರಿಸಿದೆ ಎಂದು ಅವರು ಹೇಳಿದರು.

  • ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’‌ ಪ್ರಶಸ್ತಿ ಪ್ರದಾನ

    ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’‌ ಪ್ರಶಸ್ತಿ ಪ್ರದಾನ

    – ಭಾರತದ 140 ಕೋಟಿ ದೇಶವಾಸಿಗಳಿಂದ ಬಂದ ಗೌರವ ಎಂದ ಮೋದಿ

    ಕೊಲೊಂಬೊ: ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ (Anura Kumara Dissanayake) ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Modi) ‘ಮಿತ್ರ ವಿಭೂಷಣ’‌ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

    ಥೈಲ್ಯಾಂಡ್‌ ಬಳಿಕ ಈಗ ಪ್ರಧಾನಿ ಮೋದಿ ಅವರು ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ದೇಶದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಇದನ್ನೂ ಓದಿ: ಬ್ಯಾಂಕಾಕ್‌ನ ಬುದ್ಧ ಟೆಂಪಲ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ

    ಬಳಿಕ ಮೋದಿಗೆ ‘ಮಿತ್ರ ವಿಭೂಷಣ’‌ (Mitra Vibhushana) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಲಂಕಾ ಸರ್ಕಾರವು ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧ ಹೊಂದಿರುವ ದೇಶಗಳ ಮುಖ್ಯಸ್ಥರಿಗೆ ಈ ಗೌರವವನ್ನು ನೀಡುತ್ತದೆ.

    ಭಾರತವು ಐತಿಹಾಸಿಕವಾಗಿ ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ. ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ, ಸಹಾಯಹಸ್ತ ಚಾಚಿದ ಮೊದಲ ದೇಶ ಭಾರತವಾಗಿತ್ತು. ಈಗ ಈ ಉತ್ತಮ ಸಂಬಂಧಗಳನ್ನು ಗುರುತಿಸಿ, ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿಯವರಿಗೆ ಈ ಗೌರವವನ್ನು ನೀಡಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾರತದ 140 ಕೋಟಿ ದೇಶವಾಸಿಗಳಿಂದ ಬಂದ ಗೌರವ ಎಂದು ಮೋದಿ ಬಣ್ಣಿಸಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ – ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಭಾಗಿ

  • ಶ್ರೀಲಂಕಾ ಪ್ರವಾಸಕ್ಕೆ ಹೋಗಿದ್ದ ಜೇವರ್ಗಿ ಮೂಲದ ಟೆಕ್ಕಿ ಸಾವು

    ಶ್ರೀಲಂಕಾ ಪ್ರವಾಸಕ್ಕೆ ಹೋಗಿದ್ದ ಜೇವರ್ಗಿ ಮೂಲದ ಟೆಕ್ಕಿ ಸಾವು

    ಕಲಬುರಗಿ: ಶ್ರೀಲಂಕಾ (Sri Lanka) ಪ್ರವಾಸಕ್ಕೆ ತೆರಳಿದ್ದ ಜೇವರ್ಗಿ ಮೂಲದ ಟೆಕ್ಕಿ (Techie) ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ (Swimming Pool) ಈಜಾಡುವಾಗ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾನೆ.

    ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರ್‌ಕೆ ಗ್ರಾಮದ ಸಂತೋಷ್ ಮಲ್ಲೆದ್ (34) ಮೃತ ಟೆಕ್ಕಿ. ಇದನ್ನೂ ಓದಿ: ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್ – ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

    ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಂತೋಷ್, ಫೆ.15 ರಂದು ಸ್ನೇಹಿತರೊಂದಿಗೆ ಶ್ರೀಲಂಕಾದ ಕ್ಯಾಂಡಿಗೆ ಪ್ರವಾಸ ಕೈಗೊಂಡಿದ್ದರು. ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುತ್ತಿದ್ದಾಗ ತಲೆಗೆ ಪೆಟ್ಟು ಬಿದ್ದು ಸಂತೋಷ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

    ಟೆಕ್ಕಿ ಸಂತೋಷ್ ಮೃತದೇಹ ಶುಕ್ರವಾರ ಹೈದರಾಬಾದ್ ಮೂಲಕ ಕಲಬುರಗಿಗೆ ಆಗಮಿಸಲಿದೆ. ಇದನ್ನೂ ಓದಿ: ತುಂಬಾ ಅನ್ಯಾಯ: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಟ್ರಂಪ್‌ ಅಪಸ್ವರ

  • ಚಿಕ್ಕಬಳ್ಳಾಪುರದಲ್ಲಿ ಫೆ.8 ರಂದು ಭಾರತ- ಶ್ರೀಲಂಕಾ ಕ್ರಿಕೆಟ್‌ ಮ್ಯಾಚ್‌

    ಚಿಕ್ಕಬಳ್ಳಾಪುರದಲ್ಲಿ ಫೆ.8 ರಂದು ಭಾರತ- ಶ್ರೀಲಂಕಾ ಕ್ರಿಕೆಟ್‌ ಮ್ಯಾಚ್‌

    ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ (Muddenahalli) ಶ್ರೀ ಸತ್ಯಸಾಯಿ ಗ್ರಾಮದಲ್ಲಿ (Sathya Sai Village) ಭಾರತ (India) ಮತ್ತು ಶ್ರೀಲಂಕಾ (Sri Lanka) ನಡುವೆ ಫೆ. 8 ರಂದು ಕ್ರಿಕೆಟ್ ಪಂದ್ಯಾವಳಿ (Cricket Tournament) ನಡೆಯಲಿದೆ.

    ಶ್ರೀ ಮಧುಸೂದನ ಸಾಯಿ ಅವರು ಆಯೋಜಿಸುತ್ತಿರುವ ʼಒನ್ ವರ್ಲ್ಡ್‌ ಒನ್ ಫ್ಯಾಮಿಲಿʼ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿದ್ದು,  ಭಾರತೀಯ ಕ್ರಿಕೆಟ್ ದಂತಕತೆ ಸುನಿಲ್ ಗವಾಸ್ಕರ್ (Sunil Gavaskar) ಅವರು ಮುಖ್ಯ ಪಾತ್ರವನ್ನು ವಹಿಸಿ ಸಂಘಟಿಸುತ್ತಿದ್ದಾರೆ.

    ಕ್ರಿಕೆಟ್ ದಿಗ್ಗಜರಾದ ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ವೆಂಕಟೇಶ್ ಪ್ರಸಾದ್ ಹಾಗೂ ಶ್ರೀಲಂಕಾದ ದಿಗ್ಗಜರಾದ ಅರವಿಂದ ಡಿ ಸಿಲ್ವಾ, ಮುತ್ತಯ್ಯ ಮುರಳೀಧರನ್, ಟಿ ಎಂ ದಿಲ್ಶಾನ್ ಭಾಗಿಯಾಗಲಿದ್ದಾರೆ.

    2025 ರ ಒಂದು ವಿಶ್ವ ಒಂದು ಕುಟುಂಬ ಕಪ್ ನಲ್ಲಿ ‘ಜಗತ್ತೇ ಒಂದು ಕುಟುಂಬ’ (ವಸುಧೈವ ಕುಟುಂಬಕಂ) ಎಂದು ಕೆತ್ತಲಾಗಿದೆ. ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಬಾಲಕರಿಗಾಗಿ ಗವಾಸ್ಕರ್ – ವಿಶ್ವನಾಥ್ ಕ್ರಿಕೆಟ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಈಗಾಗಲೇ ಘೋಷಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿ ವಿಶ್ವದಾಖಲೆ ನಿರ್ಮಾಣಕ್ಕೆ ಬೇಕಿದೆ ಕೇವಲ 94 ರನ್‌!

    ಕಳೆದ ವರ್ಷವೂ ಸಹ ಪಂದ್ಯ ನಡೆಸಲಾಗಿದ್ದು ಈ ವರ್ಷವೂ ಎರಡನೇ ಬಾರಿಗೆ ಪಂದ್ಯ ಆಯೋಜನೆ ಮಾಡಲಾಗಿದೆ. ಪಂದ್ಯ ವೀಕ್ಷಣೆಗೆ 6000 ಮಂದಿಗೆ ಅವಕಾಶಗಳಿದ್ದು, ಸಂಸ್ಥೆ ವತಿಯಿಂದ ಕೆಲವರಿಗೆ ಉಚಿತ ಪಾಸ್ ಸೌಲಭ್ಯವಿದೆ.

    ಪಂದ್ಯ ವೀಕ್ಷಣೆಗೆ ಮಾಡಬಯಸುವವರು ಅನ್ ಲೈನ್ ಮೂಲಕ 2000 ರೂಪಾಯಿ ದರ ನೀಡಿ ಟಿಕೆಟ್ ಬುಕ್ (www.owofcup.com)  ಮಾಡಿಕೊಳ್ಳಬಹುದಾಗಿದೆ. ಉಚಿತ ಮಾಡಿದ್ರೆ ಒಮ್ಮೆಲೆ ಸಾವಿರಾರು ಮಂದಿ ಆಗಮನವಾಗಿ ನೂಕುನುಗ್ಗಲು ಆಗಬಹುದು. ಹಾಗಾಗಿ ಮುಂಜಗ್ರತಾ ಕ್ರಮವಾಗಿ ಟಿಕೆಟ್ ಸೇಲ್ ಮಾಡಲಾಗುತ್ತಿದೆ ಅಂತ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ನರಸಿಂಹಮೂರ್ತಿ ತಿಳಿಸಿದರು. ಜನವರಿ 8 ರ ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾಟದ ಕಾರ್ಯಕ್ರಮಗಳು ಆರಂಭವಾಗಲಿದೆ.

    ಹೆಸರಾಂತ ಕ್ರಿಕೆಟ್ ಆಟಗಾರರು ಕ್ಯಾಂಪಸ್‌ಗೆ ಆಗಮಿಸಿ ತರಬೇತಿ ನೀಡಲಿದ್ದಾರೆ. ಬಾಲಕರನ್ನು ಅರ್ಹತೆಗೆ ಅನುಗುಣವಾಗಿ ಆರಿಸಿ ಯಾವುದೇ ಶುಲ್ಕವಿಲ್ಲದೆ ವಸತಿ ಸಹಿತ ಸಂಪೂರ್ಣ ಉಚಿತವಾಗಿ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿಯನ್ನು ನೀಡಲಾಗುತ್ತದೆ.

    ಅಕಾಡೆಮಿಯ ಹೆಸರಿನಲ್ಲಿ ಆಟಗಾರರನ್ನು ಗೌರವಿಸಲಾಗುವುದು. ಅರ್ಹತೆಯ ಆಧಾರದ ಮೇಲೆ ಮಾತ್ರ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ನರಸಿಂಹಮೂರ್ತಿ ತಿಳಿಸಿದರು.