Tag: Sri Lanka

  • ಕೊಹ್ಲಿಗೆ ಈ ಸಮಯ ಕಳೆದು ಹೋಗುತ್ತದೆ ಎಂದಿದ್ದ ಬಾಬರ್‌ಗೆ ಟಾಂಗ್ – ಈ ಸಮಯ ಕಳೆದು ಹೋಗಲ್ಲ ಎಂದ ಫ್ಯಾನ್ಸ್

    ಕೊಹ್ಲಿಗೆ ಈ ಸಮಯ ಕಳೆದು ಹೋಗುತ್ತದೆ ಎಂದಿದ್ದ ಬಾಬರ್‌ಗೆ ಟಾಂಗ್ – ಈ ಸಮಯ ಕಳೆದು ಹೋಗಲ್ಲ ಎಂದ ಫ್ಯಾನ್ಸ್

    ದುಬೈ: ಏಷ್ಯಾಕಪ್ ಫೈನಲ್ (Asia Cup Final) ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋತು ಮುಖಭಂಗ ಅನುಭವಿಸಿದ ಪಾಕಿಸ್ತಾನ (Pakistan) ತಂಡದ ನಾಯಕ ಬಾಬರ್ ಅಜಮ್ (Babar Azam) ಇದೀಗ ಟ್ರೋಲ್‌ಗೆ ಗುರಿಯಾಗಿದ್ದಾರೆ. ಈ ಹಿಂದೆ ರನ್ ಬರ ಅನುಭವಿಸುತ್ತಿದ್ದ ಟೀಂ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿಗೆ (Virat Kohli) ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದ ಬಾಬರ್ ಅಜಮ್‍ಗೆ ಕೊಹ್ಲಿ ಅಭಿಮಾನಿಗಳು ಇದೀಗ ಟಾಂಗ್ ನೀಡಿದ್ದಾರೆ.

    ಈ ಹಿಂದೆ ರನ್ ಬರ ಅನುಭವಿಸುತ್ತಿದ್ದ ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶದ ಮೂಲಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಬೆಂಬಲಕ್ಕೆ ನಿಂತಿದ್ದರು. ಟ್ವಿಟ್ಟರ್‌ನಲ್ಲಿ ಕೊಹ್ಲಿ ಜೊತೆಗಿರುವ ಫೋಟೋ ಹಂಚಿಕೊಂಡು ಬಾಬರ್ ಅಜಮ್, ಈ ಸಮಯ ಕಳೆದು ಹೋಗುತ್ತದೆ. ದೃಢವಾಗಿರಿ ಎಂದು ಟ್ವೀಟ್ ಮಾಡಿ ಕೊಹ್ಲಿಗೆ ಬೆಂಬಲ ನೀಡಿದ್ದರು. ಇದನ್ನೂ ಓದಿ: ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    https://twitter.com/ashrohitian2/status/1569004353402601475

    ಇದೀಗ ಬಾಬರ್ ಅಜಮ್ ಕೂಡ ರನ್ ಬರ ಅನುಭವಿಸುತ್ತಿದ್ದಾರೆ. ಏಷ್ಯಾಕಪ್‍ನಲ್ಲಿ ಆಡಿದ ಒಟ್ಟು 6 ಪಂದ್ಯಗಳಿಂದ 68 ರನ್ ಬಾರಿಸಿದ್ದಾರೆ. ಏಷ್ಯಾಕಪ್‍ನಲ್ಲಿ 30 ರನ್ (29 ಎಸೆತ) ಹೆಚ್ಚಿನ ಗಳಿಕೆಯಾಗಿದೆ. ಹಾಗಾಗಿ ಇದೀಗ ಟ್ರೋಲ್‌ಗೆ ಗುರಿಯಾಗಿದ್ದು, ಕೊಹ್ಲಿ ಅಭಿಮಾನಿಗಳು ಈ ಸಮಯ ಕಳೆದು ಹೋಗಲ್ಲ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸೋಲು – ಸ್ಟೇಡಿಯಂನಲ್ಲಿ ಕಣ್ಣೀರಿಟ್ಟ ಕೊಹ್ಲಿಯ ಪಾಕ್ ಅಭಿಮಾನಿ

    https://twitter.com/im_ShivP45/status/1568999539885088768

    ಏಷ್ಯಾಕಪ್‍ನ ಸೂಪರ್ ಫೋರ್ ಮತ್ತು ಫೈನಲ್ ಪಂದ್ಯದಲ್ಲಿ ಸತತವಾಗಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಸೋಲು ಕಾಣಲು ಬಾಬರ್ ಅಜಮ್ ಬ್ಯಾಟಿಂಗ್ ಕೂಡ ಪ್ರಮುಖ ಕಾರಣ. ಹಲವು ವರ್ಷಗಳಿಂದ ಪ್ರತಿ ಪಂದ್ಯದಲ್ಲೂ ಮಿಂಚುತ್ತಿದ್ದ ಬಾಬರ್ ಏಷ್ಯಾಕಪ್‍ನಲ್ಲಿ ರನ್ ಗಳಿಸಲು ಪರದಾಡಿದರು. ಇದು ಪಾಕಿಸ್ತಾನ ದಿಢೀರ್ ಕುಸಿತಕ್ಕೆ ಕಾರಣವಾಗಿದೆ. ಹಾಗಾಗಿ ಮುಂದಿನ ಟಿ20 ವಿಶ್ವಕಪ್‍ಗೂ ಮುನ್ನ ಬಾಬರ್ ಫಾರ್ಮ್ ಕಂಡುಕೊಳ್ಳಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್ ವಿರುದ್ಧ ಪಂದ್ಯದ ಗೆಲುವಿಗೆ ಧೋನಿ, ಸಿಎಸ್‌ಕೆ ಸ್ಫೂರ್ತಿ: ದಸುನ್ ಶನಕ

    ಪಾಕ್ ವಿರುದ್ಧ ಪಂದ್ಯದ ಗೆಲುವಿಗೆ ಧೋನಿ, ಸಿಎಸ್‌ಕೆ ಸ್ಫೂರ್ತಿ: ದಸುನ್ ಶನಕ

    ದುಬೈ: ಭಾನುವಾರ ದುಬೈನಲ್ಲಿ(Dubai) ನಡೆದ ಏಷ್ಯಾ ಕಪ್ 2022ರ(Asia Cup 2022) ಫೈನಲ್‌ನಲ್ಲಿ ಶ್ರೀಲಂಕಾ(Sri Lanka) ತಂಡ ಪಾಕಿಸ್ತಾನವನ್ನು ಸೋಲಿಸಿತು. ಈ ಗೆಲುವಿಗೆ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ(MS Dhoni) ಹಾಗೂ ಚೆನ್ನೈ ಸೂಪರ್ ಕಿಂಗ್ಸ್(CSK) ತಂಡದ 2021ರ ಐಪಿಎಲ್ ಗೆಲುವೇ ಸ್ಫೂರ್ತಿ ಎಂದು ಶ್ರೀಲಂಕಾ ತಂಡದ ನಾಯಕ ದಸುನ್ ಶನಕ(Dasun Shanaka) ತಿಳಿಸಿದ್ದಾರೆ.

    ಎಂಎಸ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 2021ರ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದ್ದನ್ನು ನೋಡಿ ನಾನು ಸ್ಫೂರ್ತಿ ಪಡೆದಿದ್ದೇನೆ ಎಂದು ಶನಕ ಬಹಿರಂಗಪಡಿಸಿದ್ದಾರೆ. ಇದೀಗ ನಾವು ಏಷ್ಯಾಕಪ್ ಗೆದ್ದಿದ್ದೇವೆ. ನಮ್ಮ ಈ ಗೆಲುವನ್ನು ನಮ್ಮ ದೇಶಕ್ಕೆ ಅರ್ಪಿಸಲು ಬಯಸುತ್ತೇವೆ ಎಂದು ಶನಕ ಪಂದ್ಯದ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸೋಲು – ಸ್ಟೇಡಿಯಂನಲ್ಲಿ ಕಣ್ಣೀರಿಟ್ಟ ಕೊಹ್ಲಿಯ ಪಾಕ್ ಅಭಿಮಾನಿ

    ಭಾನುವಾರ ಪಾಕಿಸ್ತಾನ ಹಾಗೂ ಶ್ರೀಲಂಕಾದ ನಡುವಿನ 15ನೇ ಆವೃತ್ತಿಯ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾ 23 ರನ್‌ಗಳ ಭರ್ಜರಿ ಜಯದೊಂದಿಗೆ 6ನೇ ಬಾರಿ ಏಷ್ಯಾಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತು.

    ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಯಾರೂ ನಿರೀಕ್ಷೆ ಮಾಡಿರದಂತಹ ಆಟವನ್ನು ಆಡಿ ಕ್ರಿಕೆಟ್ ಪ್ರಿಯರ ಮನಗೆದ್ದಿತು. ಶ್ರೀಲಂಕಾ ನೀಡಿದ 172 ರನ್‌ಗಳ ಟಾರ್ಗೆಟ್ ಅನ್ನು ಹಿಂದಿಕ್ಕಲಾಗದೇ 147 ರನ್‌ಗಳ ಮೂಲಕ ಪಾಕಿಸ್ತಾನ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಏಷ್ಯಾಕಪ್ ಫೈನಲ್ ರಂಗೇರಿಸಿದ ಹಸರಂಗ – 6ನೇ ಬಾರಿ ಸಿಂಹಳೀಯರಿಗೆ ಕಿರೀಟ

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನಕ್ಕೆ ಸೋಲು – ಸ್ಟೇಡಿಯಂನಲ್ಲಿ ಕಣ್ಣೀರಿಟ್ಟ ಕೊಹ್ಲಿಯ ಪಾಕ್ ಅಭಿಮಾನಿ

    ಪಾಕಿಸ್ತಾನಕ್ಕೆ ಸೋಲು – ಸ್ಟೇಡಿಯಂನಲ್ಲಿ ಕಣ್ಣೀರಿಟ್ಟ ಕೊಹ್ಲಿಯ ಪಾಕ್ ಅಭಿಮಾನಿ

    ದುಬೈ: 15ನೇ ಆವೃತ್ತಿ ಏಷ್ಯಾಕಪ್ (Asia Cup 2022) ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ (Pakistan) ವಿರುದ್ಧ ಶ್ರೀಲಂಕಾ (Sri Lanka) ಗೆದ್ದು ಪ್ರಶಸ್ತಿಗೆ ಮುತ್ತಿಕ್ಕುತ್ತಿದ್ದಂತೆ, ಇತ್ತ ಪಾಕ್ ಅಭಿಮಾನಿಗಳು ಸ್ಟೇಡಿಯಂನಲ್ಲೇ ಕಣ್ಣೀರಿಟ್ಟಿದ್ದಾರೆ.

    ರೋಚಕ ಫೈನಲ್ ಪಂದ್ಯದಲ್ಲಿ ಯಾರೂ ನಿರೀಕ್ಷೆ ಮಾಡದಂತ ಆಟದ ಮೂಲಕ ಶ್ರೀಲಂಕಾ ಕ್ರಿಕೆಟ್ ಪ್ರಿಯರ ಮನಗೆದ್ದಿತು. ಶ್ರೀಲಂಕಾ ನೀಡಿದ 172 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಪಾಕಿಸ್ತಾನ ಹಸರಂಗ ಮತ್ತು ಲಂಕಾ ಬೌಲರ್‌ಗಳ ದಾಳಿಗೆ ನಲುಗಿ 147 ರನ್‍ಗಳಿಗೆ ಸರ್ವಪತನ ಕಂಡಿತು. ಇತ್ತ ಶ್ರೀಲಂಕಾ 23 ರನ್‍ಗಳ ಭರ್ಜರಿ ಜಯದೊಂದಿಗೆ 6ನೇ ಬಾರಿ ಪ್ರಶಸ್ತಿ ಗೆದ್ದಿತು. ಇದನ್ನೂ ಓದಿ: ಏಷ್ಯಾಕಪ್ ಫೈನಲ್ ರಂಗೇರಿಸಿದ ಹಸರಂಗ – 6ನೇ ಬಾರಿ ಸಿಂಹಳೀಯರಿಗೆ ಕಿರೀಟ

    ಪಾಕ್ ಸೋಲುತ್ತಿದ್ದಂತೆ ಮೈದಾನದಲ್ಲಿದ್ದ ಪಾಕ್ ಅಭಿಮಾನಿ ಒಬ್ಬಾಕೆ ಬಿಕ್ಕಿಬಿಕ್ಕಿ ಅತ್ತಿದ್ದಾಳೆ. ಈಕೆ ಕೆಲದಿನಗಳ ಹಿಂದೆ ನಾನು ಪಾಕಿಸ್ತಾನದವಳು ಆದರೆ ನನಗೆ ಭಾರತದ ವಿರಾಟ್ ಕೊಹ್ಲಿ (Virat Kohli)  ತುಂಬಾ ಇಷ್ಟ. ಅವರ ಆಟ ನೋಡಲು ಮೈದಾನಕ್ಕೆ ಬಂದಿದ್ದೇನೆ ಎಂದು ಹೇಳಿಕೆ ನೀಡಿ ವೈರಲ್ ಆಗಿದ್ದಳು. ಆ ಬಳಿಕ ಫೈನಲ್ ಪಂದ್ಯದಲ್ಲೂ ಈಕೆ ಕಾಣಿಸಿಕೊಂಡಿದ್ದು, ಶ್ರೀಲಂಕಾ ವಿರುದ್ಧ ಪಾಕ್ ಸೋಲುತ್ತಿದ್ದಂತೆ ಮೈದಾನದಲ್ಲಿ ಕಣ್ಣೀರಿಟ್ಟು ತನ್ನ ಜೊತೆ ಇದ್ದ ಶ್ರೀಲಂಕಾ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾಳೆ. ಇದನ್ನೂ ಓದಿ: ಶೀಘ್ರವೇ ಹಸೆಮಣೆ ಏರಲಿದ್ದಾರೆ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

     

    View this post on Instagram

     

    A post shared by Love Khaani (@lovekhaani)

    ಇದೀಗ ಈಕೆ ಶುಭಹಾರೈಸಿರುವ ವೀಡಿಯೋ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಇದರಲ್ಲಿ ಪಾಕಿಸ್ತಾನ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ಗೆಲ್ಲಬೇಕಿತ್ತು. ಅದು ತನಗೆ ಸಂತಸ ತರಿಸುತ್ತಿತ್ತು ಎಂದು ಹೇಳಿಕೊಂಡಿದ್ದಾಳೆ.

    ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ಕೆಚ್ಚೆದೆಯ ಹೋರಾಟ ಕ್ರಿಕೆಟ್ ಪ್ರಿಯರ ಮನಗೆದ್ದಿದೆ. ತನ್ನ ದೇಶದ ಆರ್ಥಿಕ ಪರಿಸ್ಥಿತಿ ಒಂದೆಡೆ ಹದಗೆಟ್ಟು ಜನ ದಂಗೆ ಎದ್ದು ಹೀನಾಯ ಪರಿಸ್ಥಿತಿಯಲ್ಲಿತ್ತು. ಇದೀಗ ಮತ್ತೆ ದೇಶ ಸಹಜ ಸ್ಥಿತಿಗೆ ಮರಳುತ್ತಿದ್ದಂತೆ ಶ್ರೀಲಂಕಾಗೆ ಏಷ್ಯಾಕಪ್ ಗೆಲುವು ಹೊಸ ಚೈತನ್ಯ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಏಷ್ಯಾಕಪ್ ಫೈನಲ್ ರಂಗೇರಿಸಿದ ಹಸರಂಗ – 6ನೇ ಬಾರಿ ಸಿಂಹಳೀಯರಿಗೆ ಕಿರೀಟ

    ಏಷ್ಯಾಕಪ್ ಫೈನಲ್ ರಂಗೇರಿಸಿದ ಹಸರಂಗ – 6ನೇ ಬಾರಿ ಸಿಂಹಳೀಯರಿಗೆ ಕಿರೀಟ

    ದುಬೈ: ಹಸರಂಗ (Wanindu Hasarang) ಆಲ್‍ರೌಂಡರ್ ಆಟಕ್ಕೆ ಪಾಕಿಸ್ತಾನ (Pakistan) ತಲೆಬಾಗಿದೆ. 15ನೇ ಆವೃತ್ತಿ ಏಷ್ಯಾಕಪ್ ಫೈನಲ್‍ನಲ್ಲಿ (Asia Cup 2022) ಶ್ರೀಲಂಕಾ (Sri Lanka)  23 ರನ್‍ಗಳ ಭರ್ಜರಿ ಜಯದೊಂದಿಗೆ 6ನೇ ಬಾರಿ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.

    ರೋಚಕ ಫೈನಲ್ ಪಂದ್ಯದಲ್ಲಿ ಯಾರೂ ನಿರೀಕ್ಷೆ ಮಾಡದಂತ ಆಟದ ಮೂಲಕ ಶ್ರೀಲಂಕಾ ಕ್ರಿಕೆಟ್ ಪ್ರಿಯರ ಮನಗೆದ್ದಿದೆ. ಶ್ರೀಲಂಕಾ ನೀಡಿದ 172 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಪಾಕಿಸ್ತಾನ ಹಸರಂಗ ಮತ್ತು ಲಂಕಾ ಬೌಲರ್‌ಗಳ ದಾಳಿಗೆ ನಲುಗಿ 147 ರನ್‍ಗಳಿಗೆ ಸರ್ವಪತನ ಕಂಡಿತು. ಇತ್ತ ಶ್ರೀಲಂಕಾ 23 ರನ್‍ಗಳ ಭರ್ಜರಿ ಜಯದ ನಗೆ ಬೀರಿತು.

    ಆರಂಭದಲ್ಲಿ ಪಾಕಿಸ್ತಾನ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಾಯಕ ಬಾಬರ್ ಅಜಾಮ್ ಮತ್ತೆ ವಿಫಲತೆ ಕಂಡರೆ, ಫಖರ್ ಝಮಾನ್ ಶೂನ್ಯ ಸುತ್ತಿದರು. ಆದರೆ ಇನ್ನೊಂದೆಡೆ ಮೊಹಮ್ಮದ್ ರಿಜ್ವಾನ್ ಮತ್ತೆ ತಂಡಕ್ಕೆ ಆಸರೆಯಾಗುವ ಸೂಚನೆ ನೀಡಿದರು. ಇವರಿಗೆ ಕೆಲ ಕಾಲ ಇಫ್ತಿಕರ್ ಅಹಮದ್ ಸಾಥ್ ನೀಡಿದರು. ಆದರೆ ಇಫ್ತಿಕರ್ ಆಟ 32 ರನ್ ( 31 ಎಸೆತ, 2 ಬೌಂಡರಿ, 1 ಸಿಕ್ಸ್) ಕೊನೆಗೊಂಡಿತು.

    ಹಸರಂಗ ಸೂಪರ್ ಸ್ಪೆಲ್:
    ಒಂದುಕಡೆ ರಿಜ್ವಾನ್ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ಹಳಿಗೆ ತರಲು ಯತ್ನಿಸಿದರೆ, ಇನ್ನೊಂದೆಡೆ ಹಸರಂಗ ವಿಕೆಟ್ ಬೇಟೆ ಆರಂಭಿಸಿದರು. ತನ್ನ ಕೋಟದ ಕೊನೆಯ ಓವರ್‌ನಲ್ಲಿ ಡೇಂಜರಸ್ ಬ್ಯಾಟ್ಸ್‌ಮ್ಯಾನ್‌ಗಳಾದ ಖುಷ್ದಿಲ್ ಶಾ ಮತ್ತು ಆಸಿಫ್ ಅಲಿ ವಿಕೆಟ್ ಕಿತ್ತು ಶ್ರೀಲಂಕಾವನ್ನು ಜಯದ ಹೊಸ್ತಿಗೆ ತಂದು ನಿಲ್ಲಿಸಿದರು. ಅಂತಿಮವಾಗಿ 20 ಓವರ್‌ಗಳಲ್ಲಿ 147 ರನ್‍ಗಳಿಗೆ ಆಲೌಟ್ ಆಯಿತು.

    ಪಾಕ್‍ಗೆ ಶಾಕ್ ನೀಡಿದ ಲಂಕನರು 6ನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದರೆ, ಪ್ರಶಸ್ತಿ ಗೆಲ್ಲುವ ಖುಷಿಯಲ್ಲಿದ್ದ ಪಾಕ್ ಅಭಿಮಾನಿಗಳಿಗೆ ನಿರಾಸೆ ಉಂಟಾಯಿತು.

    ಈ ಮೊದಲು ಟಾಸ್ ಗೆದ್ದ ಪಾಕಿಸ್ತಾನ ನಾಯಕ ಎದುರಾಳಿ ಶ್ರೀಲಂಕಾ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ಇತ್ತ ಆರಂಭದಲ್ಲೇ ನಸೀಮ್ ಶಾ, ಶ್ರೀಲಂಕಾ ಬ್ಯಾಟ್ಸ್‌ಮ್ಯಾನ್‌ಗಳಿಗೆ ತನ್ನ ಘಾತಕ ವೇಗದ ಮೂಲಕ ನಡುಕ ಹುಟ್ಟಿಸಿದರು. ಶ್ರೀಲಂಕಾದ ಟಾಪ್ ಆಡರ್ ಬ್ಯಾಟ್ಸ್‌ಮ್ಯಾನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಕೇವಲ 36 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾಗೆ ಧನಂಜಯ ಡಿ ಸಿಲ್ವ ಆಸರೆಯಾಗುವ ಸೂಚನೆ ನೀಡಿದರೂ ಅವರ ಆಟ 28 ರನ್‍ಗೆ (21 ಎಸೆತ, 4 ಬೌಂಡರಿ) ಅಂತ್ಯವಾಯಿತು.

    ಆ ಬಳಿಕ ಬಂದ ದನುಷ್ಕ ಗುಣತಿಲಕ ಮತ್ತು ನಾಯಕ ದಾಸುನ್ ಶನಕ ಕೂಡ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಈ ವೇಳೆ ಶ್ರೀಲಂಕಾ 8.5 ಓವರ್‌ಗಳಲ್ಲಿ 58 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡಿತು.

    ಅಸಲಿ ಆಟ ಆರಂಭಿಸಿದ ಹಸರಂಗ, ರಾಜಪಕ್ಸೆ:
    ಬಳಿಕ ಒಂದಾದ ಭಾನುಕಾ ರಾಜಪಕ್ಸೆ ಮತ್ತು ವಾನಿಂದು ಹಸರಂಗ ಪಾಕ್ ಬೌಲರ್‌ಗಳನ್ನು ದಂಡಿಸಲು ಮುಂದಾದರು. ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಳ ಮೂಲಕ ಬಾಲ್‍ಗೆ ಅಷ್ಟ ದಿಕ್ಕುಗಳನ್ನು ಪರಿಚಯಿಸಿದ ಈ ಜೋಡಿ ಪಾಕ್ ಬೌಲರ್‌ಗಳ ಬೆವರಿಳಿಸಿತು. ಈ ವೇಳೆ ದಾಳಿಗಿಳಿದ ಹ್ಯಾರಿಸ್ ರೌಫ್ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಹಸರಂಗ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಹಸರಂಗ 36 ರನ್ (21 ಎಸೆತ, 5 ಬೌಂಡರಿ, 1 ಸಿಕ್ಸ್) ಹೊಡೆದು ವಿಕೆಟ್ ಕಳೆದುಕೊಂಡರು. ಈ ಮೊದಲು ರಾಜಪಕ್ಸೆ ಜೊತೆ 6ನೇ ವಿಕೆಟ್ 58 ರನ್ (36 ಎಸೆತ) ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು.

    ಹಸರಂಗ ವಿಕೆಟ್ ಕಳೆದುಕೊಂಡ ಬಳಿಕ ಸ್ಲಾಗ್ ಓವರ್‌ಗಳಲ್ಲಿ ಮತ್ತಷ್ಟು ವೈಲೆಂಟ್ ಆದ ರಾಜಪಕ್ಸೆ ಸಿಡಿಲಬ್ಬರದ ಬ್ಯಾಟಿಂಗ್‍ಗೆ ಮುಂದಾದರು. ಇವರಿಗೆ ಕರುಣಾರತ್ನೆ ಉತ್ತಮ ಸಾಥ್ ನೀಡಿದರು. ಅಂತಿಮವಾಗಿ ರಾಜಪಕ್ಸೆ ಅಜೇಯ 71 ರನ್ (45 ಎಸೆತ, 6 ಬೌಂಡರಿ, 3 ಸಿಕ್ಸ್) ಮತ್ತು ಕರುಣಾರತ್ನೆ 14 ರನ್ (14 ಎಸೆತ, 1 ಸಿಕ್ಸ್) ಚಚ್ಚಿದ ಪರಿಣಾಮ 7ನೇ ವಿಕೆಟ್‍ಗೆ ಮುರಿಯದ 54 ರನ್ (31 ಎಸೆತ) ಜೊತೆಯಾಟ ಕಾಣಸಿಕ್ಕಿತು. ಜೊತೆಗೆ ತಂಡದ ಮೊತ್ತ 20 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 170 ಬಂತು.

    ಕೊನೆಯ 10 ಓವರ್‌ಗಳಲ್ಲಿ ಶ್ರೀಲಂಕಾ ನೂರಕ್ಕೂ ಹೆಚ್ಚು ರನ್ ಹೊಡೆದು ಮಿಂಚಿತು. ಕೊನೆಯ 5 ಓವರ್‌ಗಳಲ್ಲಿ ಶ್ರೀಲಂಕಾ 53 ಚಚ್ಚಿತು. ಮೊದಲ 10 ಓವರ್‌ಗಳಲ್ಲಿ ಪಾಕಿಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿದರು. ಪಾಕ್ ಬೌಲರ್‌ಗಳ ಪೈಕಿ ಹ್ಯಾರಿಸ್ ರೌಫ್ 3 ವಿಕೆಟ್ ಪಡೆದು ಮಿಂಚಿದರೆ, ನಸೀಮ್ ಶಾ, ಶಾದಾಬ್ ಖಾನ್ ಮತ್ತು ಇಫ್ತಿಕರ್ ಅಹಮದ್ ತಲಾ 1 ಪಡೆದರು.

    Live Tv
    [brid partner=56869869 player=32851 video=960834 autoplay=true]

  • ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

    ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

    ದುಬೈ: ಶ್ರೀಲಂಕಾ ರೋಚಕ 6 ವಿಕೆಟ್ ಗಳ ಜಯ ಸಾಧಿಸಿದ್ದು, ಏಷ್ಯಾ ಕಪ್ ನಿಂದ ಭಾರತ ಬಹುತೇಕ ಹೊರಬಿದ್ದಿದೆ‌. ಬಾಕಿ ಇರುವ ಇತರ ತಂಡಗಳ ಫಲಿತಾಂಶ ತನ್ನ ಪರವಾಗಿ ಬಂದರೆ ಮಾತ್ರ ಭಾರತ ಫೈನಲ್‌ಗೆ ಏರುವ ಸಾಧ್ಯತೆಯಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ, 174 ರನ್‌ಗಳ ಗುರಿ ನೀಡಿತು. ಸಾಧಾರಣ ಮೊತ್ತದ ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ174 ರನ್‌ಗಳಿಸಿ ರೋಚಕ ಜಯ ಸಾಧಿಸಿದೆ

    ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಲಂಕಾ ಮೊದಲ 4 ಓವರ್‌ಗಳಿಗೆ 22 ರನ್‌ಗಳನ್ನಷ್ಟೇ ಗಳಿಸಿತ್ತು. ನಂತರದಲ್ಲಿ ಬಿರುಸಿನ ಬ್ಯಾಟಿಂಗ್‌ನಿಂದ ಪವರ್‌ ಪ್ಲೇ ಮುಗಿಯುವ ವೇಳೆಗೆ 50 ರನ್‌ಗಳ ಗಡಿದಾಟಿತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ 67 ಎಸೆತೆಗಳಲ್ಲಿ 97 ರನ್‌ ಸಿಡಿಸಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ ಭಾರತದ ಬೌಲರ್‌ಗಳ ಬೆವರಿಳಿಸಿದರು. ಪಾತುಂ ನಿಸ್ಸಾಂಕ 37 ಎಸೆತಗಳಲ್ಲಿ 2 ಸಿಕ್ಸರ್‌ 4 ಬೌಂಡರಿಯೊಂದಿಗೆ 52 ರನ್‌ ಸಿಡಿಸಿದರೆ, ಕುಸಾಲ್ ಮೆಂಡಿಸ್ 37 ಎಸೆತಗಳಲ್ಲಿ 57 ರನ್‌ (4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಪೆವಿಲಿಯನ್‌ ಸೇರಿದರು.

    ಇದಾದ ಬಳಿಕ ಲಂಕಾ ಸತತ ನಾಲ್ಕು ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಸಿಲುಕಿತು. ಮೆಂಡಿಸ್‌ ನಂತರ ಕಣಕ್ಕಿಳಿದ ಚರಿತ್ ಅಸಲಂಕಾ ಡಕೌಟ್‌ ಆದರು. ಈ ಬೆನ್ನಲ್ಲೇ 7 ಎಸೆತಗಳನ್ನು ಎದುರಿಸಿದ ದನುಷ್ಕ ಗುಣತಿಲಕ 1 ರನ್‌ಗಳಿಸಿ ಔಟಾದರು.

    ನಂತರ ಬಂದ ಭಾನುಕಾ ರಾಜಪಕ್ಸೆ ಹಾಗೂ ದಾಸುನ್ ಶನಕ ಉತ್ತಮ ಜೊತೆಯಾಟವಾಡಿದರು. 18 ಓವರ್‌ಗಳಲ್ಲಿ 153 ರನ್‌ಗಳಿಸಿದ ಲಂಕಾ ತಂಡಕ್ಕೆ ಕೊನೆಯ 2 ಓವರ್‌ಗಳಲ್ಲಿ 21 ರನ್‌ಗಳ ಅವಶ್ಯಕತೆಯಿತ್ತು. 19ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ಭುವನೇಶ್ವರ್‌ ಕುಮಾರ್‌ ಮೊದಲ 2 ಎಸೆತಗಳಲ್ಲಿ ಒಂದೊಂದೇ ರನ್‌ ನೀಡಿ, ಸತತ 2 ವೈಡ್‌ ಎಸೆದು, 3ನೇ ಎಸೆತದಲ್ಲಿ 4 ರನ್‌ ಚಚ್ಚಿಸಿಕೊಂಡರು. ತಮ್ಮ ಕೊನೆಯ ಓವರ್‌ನಲ್ಲಿ 14 ರನ್‌ ನೀಡಿದ್ದು, ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಾಯಿತು.

    ಕೊನೆಯ ಓವರ್‌ನಲ್ಲಿ ಅರ್ಶ್‌ದೀಪ್‌ ಸಿಂಗ್‌ಗೆ 6 ಎಸೆತಗಳಲ್ಲಿ 7 ರನ್‌ಗಳನ್ನು ಕಂಟ್ರೋಲ್‌ ಮಾಡುವ ಸವಾಲು ಎದುರಾಗಿತ್ತು. ಮೊದಲ 2 ಎಸೆತಗಳಲ್ಲಿ ಒಂದೊಂದು ರನ್‌ ನೀಡಿದ ಅರ್ಶ್‌ದೀಪ್‌, 3ನೇ ಎಸೆತದಲ್ಲಿ 2 ರನ್‌ ನೀಡಿ ಉತ್ತಮ ಹಿಡಿದ ಸಾಧಿಸಿದ್ದರು.  ಕೊನೆಯ 2 ಎಸೆತಗಳಲ್ಲಿ 2 ರನ್‌ ಬೇಕಿದ್ದ ಲಂಕಾಗೆ 5ನೇ ಎಸೆತವನ್ನು ಬೀಟ್ ಮಾಡಿದರೂ, ರನೌಟ್‌ ಮಾಡುವ ಪ್ರಯತ್ನದಲ್ಲಿ ರಿಷಣ್‌ ಪಂತ್‌ 2 ರನ್‌ ಉಚಿತವಾಗಿಯೇ ನೀಡಿದ್ದರಿಂದ ಜಯ ಭಾರತದ ಕೈಚೆಲ್ಲಿತು. ಉತ್ತಮ ಜೊತೆಯಾಟವಾಡಿದ ಭಾನುಕಾ ರಾಜಪಕ್ಸೆ 17 ಎಸೆತಗಳಲ್ಲಿ 25 ರನ್‌ ಗಳಿಸಿದರೆ ಹಾಗೂ ದಾಸುನ್ ಶನಕ  18 ಎಸೆತಗಳಲ್ಲಿ 33 ರನ್‌ ಪೇರಿಸಿ ಲಂಕಾ ತಂಡಕ್ಕೆ ಜಯ ತಂದುಕೊಟ್ಟರು.

    ಚಾಹಲ್‌ ಕಮಾಲ್‌: ಮೊದಲ 10 ಓವರ್‌ಗಳ ವರೆಗೂ ಟೀಂ ಇಂಡಿಯಾ ಯಾವುದೇ ವಿಕೆಟ್‌ ಪಡೆದಿರಲಿಲ್ಲ. ನಂತರ ತಮ್ಮ ಬೌಲಿಂಗ್‌ ಕಮಾಲ್‌ ಮಾಡಿದ ಯಜುವೇಂದ್ರ ಚಾಹಲ್‌ 4 ಓವರ್‌ಗಳಲ್ಲಿ 34 ರನ್‌ ನೀಡಿ 3 ವಿಕೆಟ್‌ ಕಬಳಿಸಿದರು. ಈ ಬೆನ್ನಲ್ಲೇ ರವಿಚಂದ್ರನ್‌ ಅಶ್ವಿನ್‌ 1 ವಿಕೆಟ್‌ ಪಡೆದರು. ಇದರಿಂದ ಟೀಂ ಇಂಡಿಯಾ ಮತ್ತೆ ಗೆಲುವಿನ ಭರವಸೆ ಕಂಡುಕೊಂಡಿತ್ತು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 2 ವಿಕೆಟ್‌ಗಳನ್ನು ಕಳೆದುಕೊಂಡಿತು. 3ನೇ ಓವರ್‌ನಲ್ಲಿ 11 ರನ್‌ಗಳಾಗಿದ್ದಾಗಲೇ 6 ರನ್ ಗಳಿಸಿ ಆಡುತ್ತಿದ್ದ ಕೆ.ಎಲ್.ರಾಹುಲ್ ಎಲ್‌ಬಿ ಬಲೆಗೆ ಬಿದ್ದರು. ನಂತರ ಬಂದ ಕಿಂಗ್‌ ಕೊಹ್ಲಿ ಯಾವುದೇ ರನ್‌ಗಳಿಸದೇ ಶೂನ್ಯಕ್ಕೆ ಔಟಾದರು.

    ಈ ವೇಳೆ ಭಾರತ 13 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ 70 ರನ್ ಕಲೆಹಾಕಿ ಉತ್ತಮ ಇನ್ನಿಗ್ಸ್‌ ಕಟ್ಟಿದ್ದರು. ಇದಕ್ಕೆ ಸೂರ್ಯಕುಮಾರ್ ಯಾದವ್ ಜೊತೆಯಾದರು. ಇಬ್ಬರ ಸಾಂಘಿಕ ಬ್ಯಾಟಿಂಗ್‌ ಪ್ರದರ್ಶನದಿಂದ 97 ರನ್‌ಗಳು ಟೀಂ ಇಂಡಿಯಾ ಬತ್ತಳಿಕೆ ಸೇರಿತು. ಈ ವೇಳೆ ರೋಹಿತ್‌ ಶರ್ಮಾ 41 ಎಸೆತಗಳಲ್ಲಿ 72 ರನ್‌ (5 ಬೌಂಡರಿ, 4 ಸಿಕ್ಸರ್‌) ಸಿಡಿಸಿದರೆ, ಸೂರ್ಯಕುಮಾರ್‌ ಯಾದವ್‌ 29 ಎಸೆತಗಳಲ್ಲಿ 34 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಮಧ್ಯಮ ಕ್ರಮಾಂಕದ ನಂತರ ಕ್ರೀಸ್‌ಗಿಳಿದ ಯಾರೊಬ್ಬರು ಸ್ಥಿರವಾಗಿ ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ 17 ರನ್, ರಿಷಭ್ ಪಂತ್ 17 ರನ್‌, ದೀಪಕ್‌ ಹೂಡಾ 3 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಅಶ್ವಿನ್‌ 7 ಎಸೆತಗಳಲ್ಲಿ 15 ರನ್‌ ಗಳಿಸಿದರು. ಇದು ಟೀಂ ಇಂಡಿಯಾ 170 ರನ್‌ಗಳ ಗಡಿ ದಾಟಲು ನೆರವಾಯಿತು.

    ಬೌಲಿಂಗ್‌ನಲ್ಲಿ ಶ್ರೀಲಂಕಾ ತಂಡದ ಪರ ದಿಲ್ಶನ್ ಮಧುಶಂಕ 4 ಓವರ್‌ಗಳಲ್ಲಿ 24 ರನ್ ನೀಡಿ 3 ವಿಕೆಟ್ ಗಳಿಸಿದರು. ಚಮಿಕಾ ಕರುಣಾರತ್ನೆ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರು. ನಾಯಕ ದಸುನ್ ಶನಕ 2 ಓವರ್‌ಗಳಲ್ಲಿ 26 ನೀಡಿ 2 ವಿಕೆಟ್ ಪಡೆದರು. ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದುಕೊಂಡರು.

    Live Tv
    [brid partner=56869869 player=32851 video=960834 autoplay=true]

  • ಭಾರೀ ಪ್ರತಿಭಟನೆ ವೇಳೆ ಪಲಾಯನಗೈದಿದ್ದ ಶ್ರೀಲಂಕಾ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

    ಭಾರೀ ಪ್ರತಿಭಟನೆ ವೇಳೆ ಪಲಾಯನಗೈದಿದ್ದ ಶ್ರೀಲಂಕಾ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

    ಕೊಲಂಬೋ: ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಗರಿಕರು ನಡೆಸಿದ ಭಾರೀ ಪ್ರತಿಭಟನೆ ಹಿನ್ನೆಲೆ ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶನಿವಾರ ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ.

    ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿ, ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಜುಲೈ 9 ರಂದು ಪ್ರತಿಭಟನಾಕಾರರು ರಾಜಪಕ್ಸೆ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

    ಶ್ರೀಲಂಕಾ ತೊರೆದಿದ್ದ ರಾಜಪಕ್ಸೆಗೆ ಸಿಂಗಾಪುರದಲ್ಲಿ 14 ದಿನಗಳ ಭೇಟಿಯ ಪಾಸ್ ನೀಡಲಾಗಿತ್ತು. ಅವರು ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಹೋಗಿ, ಬಳಿಕ ಥೈಲ್ಯಾಂಡ್‌ಗೆ ತೆರಳಿದ್ದರು. ಈ ಎಲ್ಲಾ ಘಟನೆಗಳು ನಡೆದು ಇದೀಗ 2 ತಿಂಗಳ ಬಳಿಕ ರಾಜಪಕ್ಸೆ ಶ್ರೀಲಂಕಾಗೆ ಮರಳಿದ್ದಾರೆ. ಇದನ್ನೂ ಓದಿ: ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR

    ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡಿದ ಬಳಿಕ ಜುಲೈ 21 ರಂದು ಸಂಸತ್ತಿನಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು. ಕೊಲಂಬೋದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದು ರಾಜಪಕ್ಸೆ ದೇಶ ತೊರೆಯುವ ವೇಳೆ ವಿಕ್ರಮಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

    1948ರಲ್ಲಿ ಶ್ರೀಲಂಕಾಗೆ ಸ್ವಾತಂತ್ರ್ಯ ಲಭಿಸಿದ ಬಳಿಕ ಇದೇ ಮೊದಲ ಬಾರಿಗೆ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರವಾಸೋದ್ಯಮವೇ ಉಸಿರಾಗಿರುವ ಶ್ರೀಲಂಕಾದಲ್ಲಿ ಕೋವಿಡ್ ಕಾರಣದಿಂದಾಗಿ ಆರ್ಥಿಕತೆಗೆ ಭಾರೀ ಹೊಡೆತ ಬಿತ್ತು. ಇದನ್ನೂ ಓದಿ: ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌ – ಮಕ್ಕಳ ಆಯೋಗದಿಂದ ಮಾಹಿತಿ

    Live Tv
    [brid partner=56869869 player=32851 video=960834 autoplay=true]

  • ನನಗೆ ತುರ್ತು ವೈದ್ಯಕೀಯ ನೆರವು ನೀಡಿ – ಲಂಕಾಗೆ ನಿತ್ಯಾನಂದ ಮನವಿ

    ನನಗೆ ತುರ್ತು ವೈದ್ಯಕೀಯ ನೆರವು ನೀಡಿ – ಲಂಕಾಗೆ ನಿತ್ಯಾನಂದ ಮನವಿ

    ಕೊಲಂಬೊ: ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಶ್ರೀಲಂಕಾದಿಂದ ವೈದ್ಯಕೀಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

    ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ತನಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಲಂಕಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯುಕೆ ಹಿಂದಿಕ್ಕಿ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯ ದೇಶವಾಗಿ ಹೊರಹೊಮ್ಮಿದ ಭಾರತ

    ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಗಲಾಟೆ – ಹಿಂದೂ ಯುವಕರಿಗೆ ಗಾಯ, ಮೂವರು ವಶಕ್ಕೆ

    ನಿತ್ಯಾನಂದ ಬರೆದ ಪತ್ರದಲ್ಲಿ ಏನಿತ್ತು?
    ಹಿಂದೂ ಧರ್ಮದ ಪರಮ ಪೀಠಾಧಿಪತಿ ಶ್ರೀ ನಿತ್ಯಾನಂದ ಪರಮಶಿವಂ ಅವರ ಆರೋಗ್ಯ ಸ್ಥಿತಿ ಏರುಪೇರಾಗಿದ್ದು, ತುರ್ತು ವೈದ್ಯಕೀಯ ಸೇವೆಗಳ ಅಗತ್ಯವಿದೆ. ಪ್ರಸ್ತುತ ಕೈಲಾಸದಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಖಾಲಿಯಾಗುತ್ತಿದ್ದು, ಆದ್ದರಿಂದ ಆರೋಗ್ಯ ಸ್ಥಿತಿಯನ್ನು ಸುಧಾರಿಸಲು ಇನ್ನಷ್ಟು ಮೂಲ ಸೌಕರ್ಯಗಳ ಅಗತ್ಯವಿದೆ. ನಿತ್ಯಾನಂದ ತೀವ್ರವಾಗಿ ಅಸ್ವಸ್ಥಗೊಂಡಿರುವುದರಿಂದ ವೈದ್ಯಕೀಯ ಚಿಕಿತ್ಸೆ ಅಗತ್ಯವಿದ್ದು, ಕೂಡಲೇ ಸಹಾಯ ಮಾಡುವಂತೆ ಪತ್ರ ಬರೆದಿದ್ದರು.

    ಹೂಡಿಕೆ ಮಾಡೋದಾಗಿ ಆಫರ್: ಅಲ್ಲದೇ ಈಕ್ವೆಡಾರ್ ದ್ವೀಪವೊಂದನ್ನು ಖರೀದಿಸಿ ಅಲ್ಲಿಯೇ ಕೈಲಾಸ ದೇಶ ನಿರ್ಮಿಸಿರುವ ನಿತ್ಯಾನಂದ ಇದೀಗ ಲಂಕಾ ಸರ್ಕಾರ ವೈದ್ಯಕೀಯ ನೆರವು ನೀಡಿವುದಾದರೇ ಅಲ್ಲಿಯೇ ಲಕ್ಷಾಂತರ ಮೌಲ್ಯದ ಡಾಲರ್ ಹೂಡಿಕೆ ಮಾಡುವುದಾಗಿ ಆಫರ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾಗೆ ಬೆಂಬಲ ಬೇಕು, ಅನಗತ್ಯ ಒತ್ತಡ ಅಲ್ಲ- ಚೀನಾವನ್ನು ತರಾಟೆಗೆ ತೆಗೆದುಕೊಂಡ ಭಾರತ

    ಶ್ರೀಲಂಕಾಗೆ ಬೆಂಬಲ ಬೇಕು, ಅನಗತ್ಯ ಒತ್ತಡ ಅಲ್ಲ- ಚೀನಾವನ್ನು ತರಾಟೆಗೆ ತೆಗೆದುಕೊಂಡ ಭಾರತ

    ಕೊಲಂಬೋ: ಶ್ರೀಲಂಕಾದ ಹಂಬಂಟೋಟಾ ಬಂದರಿನಲ್ಲಿ ಚೀನಾ ತನ್ನ ಹೈಟೆಕ್ ಹಡಗನ್ನು ನಿಲ್ಲಿಸಿದ್ದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು. ಈ ವಿಚಾರಕ್ಕೆ ಚೀನಾ ಭಾರತದ ಕುರಿತು ಟೀಕೆಗಳನ್ನು ಮಾಡಿದ್ದು, ಇದೀಗ ಭಾರತವೂ ಚೀನಾಗೆ ಟಾಂಗ್ ನೀಡಿದೆ.

    ಭಾರತದ ದೃಷ್ಟಿಕೋನ ಹೇಗಿದೆ ಎಂಬುದನ್ನು ಅದರ ವರ್ತನೆಯಿಂದಲೇ ಬಣ್ಣಿಸಬಹುದು ಎಂದು ಚೀನಾದ ರಾಯಭಾರಿ ಕ್ವಿ ಝೆನ್‌ಹಾಂಗ್ ಹೇಳಿಕೆ ನೀಡಿದ್ದರು. ಇದಕ್ಕೆ ಚೀನಾವನ್ನು ತರಾಟೆಗೆ ತೆಗೆದುಕೊಂಡ ಭಾರತ, ಇದೀಗ ಶ್ರೀಲಂಕಾಗೆ ಬೇಕಾಗಿರುವುದು ಬೆಂಬಲ. ಅನಗತ್ಯ ಒತ್ತಡ ಅಥವಾ ವಿವಾದವಲ್ಲ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈಕಮಿಷನ್ ಹೇಳಿದೆ.

    ಚೀನಾ ರಾಯಭಾರಿಯವರ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಅವರ ಮೂಲ ರಾಜತಾಂತ್ರಿಕ ಶಿಷ್ಟಾಚಾರದ ಉಲ್ಲಂಘನೆ ವೈಯಕ್ತಿಕ ಲಕ್ಷಣವಾಗಿರಬಹುದು ಅಥವಾ ದೊಡ್ಡ ರಾಷ್ಟ್ರೀಯ ಮನೋಭಾವವನ್ನು ಪ್ರತಿಬಿಂಬಿಸಬಹುದು ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈಕಮಿಷನ್ ಟ್ವೀಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಪಕ್ಷ ಬಿಡಲು ರಾಹುಲ್ ಕಾರಣ – ಕಾಂಗ್ರೆಸ್‍ಗೆ ಎಂಎ ಖಾನ್ ಗುಡ್ ಬೈ

    1948 ರ ಬಳಿಕ ದ್ವೀಪ ರಾಷ್ಟ್ರ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರಿಂದಾಗಿ ಶ್ರೀಲಂಕಾಗೆ ಇದೀಗ ಬೆಂಬಲದ ಅಗತ್ಯವಿದೆ, ಬದಲಿಗೆ ಅನಗತ್ಯ ಒತ್ತಡ, ಅನಗತ್ಯ ವಿವಾದಗಳು ಹಾಗೂ ಮತ್ತೊಂದು ದೇಶದ ಕಾರ್ಯಸೂಚಿಯ ಪೂರೈಕೆ ಅಲ್ಲ ಎಂದು ಟಾಂಗ್ ನೀಡಿದೆ. ಇದನ್ನೂ ಓದಿ: ಹಣದ ವಿಚಾರಕ್ಕೆ ಟಿಎಂಸಿ ಬೆಂಬಲಿಗನನ್ನು ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ಮುಖಂಡ

    Live Tv
    [brid partner=56869869 player=32851 video=960834 autoplay=true]

  • AsiaCup 2022: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಲಂಕಾ – ಆಫ್ಘನ್‌ಗೆ 8 ವಿಕೆಟ್‌ಗಳ ಸುಲಭ ಜಯ

    AsiaCup 2022: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಲಂಕಾ – ಆಫ್ಘನ್‌ಗೆ 8 ವಿಕೆಟ್‌ಗಳ ಸುಲಭ ಜಯ

    ದುಬೈ: ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸುವ ವಿಶ್ವಾಸದಲ್ಲಿದ್ದ ಶ್ರೀಲಂಕಾಗೆ ಆಘಾತವಾಗಿದೆ. ಏಷ್ಯಾಕಪ್ ಉದ್ಘಾಟನಾ ಪಂದ್ಯದಲ್ಲೇ ಶ್ರೀಲಂಕಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲವಾಗಿ ಅಫ್ಘಾನಿಸ್ತಾನದ ಎದುರು ಸೋಲನುಭವಿಸಿದೆ. ಉತ್ತಮ ಶುಭಾರಂಭ ನೀಡಿದ ಆಫ್ಘನ್‌ ತಂಡವು 8 ವಿಕೆಟ್‌ಗಳ ಸುಲಭ ಜಯ ಸಾಧಿಸಿ ಬೀಗಿದೆ.

    ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಅಫ್ಘಾನಿಸ್ತಾನ ಮೊದಲು ಲಂಕಾಗೆ ಬ್ಯಾಟಿಂಗ್‌ ಮಾಡುವ ಅವಕಾಶ ನೀಡಿತು. ಮೊದಲ ಪಂದ್ಯದಲ್ಲೇ ಅಬ್ಬರಿಸಲು ಮುಂದಾದ ಲಂಕಾ ಬ್ಯಾಟಿಂಗ್‌ ವೈಫಲ್ಯದಿಂದ 19.4 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 105 ರನ್‌ಗಳಿಸಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಆಫ್ಘನ್‌ 10.1 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ಗಳಿಸುವ ಮೂಲಕ ಸುಲಭ ಜಯ ಸಾಧಿಸಿತು.

    ಟಾಸ್‌ ಗೆದ್ದು ನಂತರ ಬ್ಯಾಟ್‌ಮಾಡಿದ ಆಫ್ಘನ್‌ ತಂಡ ಉತ್ತಮ ಶುಭಾರಂಭ ನೀಡಿತು. ಆರಂಭಿಕರಾಗಿ ಕ್ರೀಸ್‌ಗಿಳಿದ ಹಜರತುಲ್ಲಾ ಝಝೈ ಹಾಗೂ ರಹಮಾನುಲ್ಲಾ ಗುರ್ಬಾಜ್ ಆರಂಭದಿಂದಲೇ ಲಂಕಾ ವಿರುದ್ಧ ಅಬ್ಬರಿಸಲು ಶುರು ಮಾಡಿದರು. ಈ ವೇಳೆ ಹಜರತುಲ್ಲಾ ಝಝೈ 28 ಎಸೆತಗಳಲ್ಲಿ 37 ರನ್ (5 ಬೌಂಡರಿ, 1 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು. ಮತ್ತೊಬ್ಬ ಆರಂಭಿಕನಾಗಿದ್ದ ರಹಮಾನುಲ್ಲಾ ಗುರ್ಬಾಜ್ ಕೇವಲ 18 ಎಸೆತಗಳಲ್ಲಿ 40 ರನ್‌(3 ಬೌಂಡರಿ, 4 ಸಿಕ್ಸರ್‌) ಚಚ್ಚಿ ಆಫ್ಘನ್‌ ತಂಡ ಗೆಲುವಿಗೆ ಕಾರಣರಾದರು. ನಂತರದಲ್ಲಿ ಬಂದ ಇಬ್ರಾಹಿಂ ಜದ್ರಾನ್ 13 ಎಸೆತಗಳಲ್ಲಿ 15 ರನ್‌ ಗಳಿಸಿ ಪೆವಿಲಿಯನ್‌ ಸೇರಿದರೆ ನಜೀಬುಲ್ಲಾ ಜದ್ರಾನ್ 2 ರನ್‌ಗಳಿಸಿ ಅಜೇಯರಾಗುಳಿದರು.

    ಮಿಂಚಿದ ಬೌಲರ್‌ಗಳು:
    ಆಫ್ಘಾನಿಸ್ತಾನ ಪರ ಫಾರೂಖಿ 3 ವಿಕೆಟ್ ಕಬಳಿಸಿ ಮಿಂಚಿದರು. ಮುಜೀಬ್ ಯಆರ್ ರೆಹಮಾನ್ 2 , ನಾಯಕ ಮೊಹಮ್ಮದ್ 2 ಹಾಗೂ ನವೀನ್ ಉಲ್ ಹಕ್ 1 ವಿಕೆಟ್ ಕಬಳಿಸಿದರು.

    ಟಾಸ್ ಸೋತು ಕ್ರೀಸ್‌ಗಿಳಿದ ಶ್ರೀಲಂಕಾ ತಂಡಕ್ಕೆ ಆರಂಭದಲ್ಲೇ ಆಫ್ಘಾನಿಸ್ತಾನ ಬೌಲರ್‌ಗಳು ಶಾಕ್ ನೀಡಿದರು. ಆಫ್ಘನ್ನಿನ ಫಜಲಾಖ್ ಫಾರೂಖಿ, ಮುಜೀಬ್ ಹಾಗೂ ನಬಿ ಬೌಲಿಂಗ್‌ ದಾಳಿಗೆ ರನ್‌ ಕಲೆಹಾಕುವಲ್ಲಿ ಲಂಕಾ ತಂಡ ಹೆಣಗಾಡಿತ್ತು. ಆದರೆ ಭಾನುಕಾ ರಾಜಪಕ್ಸೆ ಹಾಗೂ ಚಾಮಿಕ ಕರುಣಾರತ್ನೆ ಹೋರಾಟದಿಂದ ಶ್ರೀಲಂಕಾ 100 ರನ್ ಗಡಿ ದಾಟಿತು.

    ಕುಸಾಲ್ ಮೆಂಡಿಸ್ ಕೇವಲ 2 ರನ್ ಗಳಿಸಿ ಔಟಾದರು. ಇದರ ಬೆನ್ನಲ್ಲೇ ಚಾರಿತ್ ಅಸಲಂಕಾ ಡಕೌಟ್ ಆದರು. ಆರಂಭದಲ್ಲೇ ಫಾರೂಖಿ ಎರಡು ಪ್ರಮುಖ ವಿಕೆಟ್ ಕಬಳಿಸಿ ಆಫ್ಘಾನಿಸ್ತಾನಕ್ಕೆ ಭರ್ಜರಿ ಮೇಲುಗೈ ತಂದುಕೊಟ್ಟರು. ಪಥುಮ್ ನಿಸಾಂಕ 3 ರನ್ ಗೆ ಔಟಾದರು. ಶ್ರೀಲಂಕಾ 5 ರನ್ ಗಳಿಸುವಷ್ಟರಲ್ಲೇ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ನಂತರದಲ್ಲಿ ಬಂದ ದಸೂನ್ ಗುಣತಿಲಕ 17 ರನ್ ಗಳಿಸಿ ಪೆವಿಲಿಯನ್‌ ಸೇರಿದರು. ಭಾನುಕಾ ರಾಜಪಕ್ಸ ಹೋರಾಟ ನೀಡಿದರೆ, ಇತರ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ತಿಣುಕಾಡಿದರು. ವಾನಿಂದು ಹಸರಂಗ 2 ರನ್‌ಗೆ ಔಟಾದರು. ಇತ್ತ ನಾಯಕ ದಸೂನು ಶನಕಾ ಸಹ ಡಕೌಟ್ ಆದರು.

    ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಚಾಮಿಕ ಕರುಣಾರತ್ನೆ ಹಾಗೂ ಭಾನುಕಾ ರಾಜಪಕ್ಸ ಲಂಕಾ ತಂಡಕ್ಕೆ ಆಸರೆಯಾದರು. ಭಾನುಕ 38 ರನ್ ಸಿಡಿಸಿದರೆ ಚಾಮಿಕಾ 31ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ಇವರಿಬ್ಬರ ಆಸರೆಯಿಂದ ಲಂಕಾ 19.4 ಓವರ್‌ಗಳಲ್ಲಿ 105 ರನ್‌ಗಳಿಸಿತು. ನಂತರದ ಬ್ಯಾಟರ್‌ಗಳು ಸ್ಥಿರವಾಗಿ ನಿಲ್ಲದ ಕಾರಣ ಲಂಕಾ ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿತು.

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದಲ್ಲಿ ನೆಲೆಸಲು ಗ್ರೀನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಗೊತಬಯ ರಾಜಪಕ್ಸೆ

    ಅಮೆರಿಕದಲ್ಲಿ ನೆಲೆಸಲು ಗ್ರೀನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಗೊತಬಯ ರಾಜಪಕ್ಸೆ

    ಕೊಲಂಬೋ: ಕೆಲವು ದಿನಗಳ ಹಿಂದೆ ಶ್ರೀಲಂಕಾದಾದ್ಯಂತ ಭಾರೀ ಪ್ರತಿಭಟನೆ ನಡೆದ ಹಿನ್ನೆಲೆ ಶ್ರೀಲಂಕಾ ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಅಧ್ಯಕ್ಷ ಗೊತಬಯ ರಾಜಪಕ್ಸೆ ಅಮೆರಿಕದಲ್ಲಿ ನೆಲೆಸಲು ಗ್ರೀನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ.

    ರಾಜಪಕ್ಸೆ ಅವರ ಪತ್ನಿ ಹಾಗೂ ಮಗನೊಂದಿಗೆ ಅಮೆರಿಕ ತೆರಳಿ ಅಲ್ಲಿಯೇ ನೆಲೆಸಲು ತಮ್ಮ ವಕೀಲರ ಮೂಲಕ ಗ್ರೀನ್ ಕಾರ್ಡ್ ಪಡೆಯಲು ಕಳೆದ ತಿಂಗಳೇ ಅರ್ಜಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ರಾಜಪಕ್ಸೆ ಅವರು ಶ್ರೀಲಂಕಾ ಸೇನೆಯಿಂದ ಬೇಗನೆ ನಿವೃತ್ತಿ ಪಡೆದು 1998ರಲ್ಲಿ ಅಮೆರಿಕಗೆ ವಲಸೆ ಹೋಗಿದ್ದರು. ಬಳಿಕ 2005ರಲ್ಲಿ ಶ್ರೀಲಂಕಾಗೆ ಮರಳಿದ್ದರು. 2019ರ ಅಧ್ಯಕ್ಷೀಯ ಚುನಾವಣೆಗಾಗಿ ಅವರು ತಮ್ಮ ಅಮೆರಿಕದ ಪೌರತ್ವವನ್ನು ತ್ಯಜಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

    ಗೊತಬಯ ರಾಜಪಕ್ಸೆ ಪ್ರಸ್ತುತ ಬ್ಯಾಂಕಾಕ್‌ನ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದು, ತಮ್ಮ ಪತ್ನಿಯೊಂದಿಗೆ ಆಗಸ್ಟ್ 25ರಂದು ಶ್ರೀಲಂಕಾಗೆ ಮರಳುವ ಸಾಧ್ಯತೆಯಿದೆ. ಮೊದಲೇ ಯೋಜಿಸಿದಂತೆ ಥೈಲ್ಯಾಂಡ್‌ಗೆ ಹೋಗುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]