ಸಿಂಗಾಪುರ: ಶ್ರೀಲಂಕಾವನ್ನು ಆರ್ಥಿಕವಾಗಿ ಮುಳುಗಿಸಿ ಜನರ ಆಕ್ರೋಶಕ್ಕೆ ಹೆದರಿ ದೇಶ ಬಿಟ್ಟು ಸಿಂಗಾಪುರಕ್ಕೆ ಓಡಿ ಹೋದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆಗೆ ಸಿಂಗಾಪುರ ಆಡಳಿತ ಬಿಗ್ ಶಾಕ್ ನೀಡಿದೆ.
ಸಿಂಗಾಪುರ ಬಿಟ್ಟು ತೆರಳುವಂತೆ ಗೊಟಬಯಗೆ ಸೂಚಿಸಿದೆ. `ನೀವು ಪ್ರವಾಸಿ ವೀಸಾ ಮೇಲೆ ಬಂದಿದ್ದೀರಿ. ಅದನ್ನು ವಿಸ್ತರಿಸಲು ನಾವು ಸಿದ್ಧರಿಲ್ಲ. ನೀವಿನ್ನು ನಮ್ಮ ದೇಶದಿಂದ ಹೊರಡಬಹುದು’ ಎಂದು ಗೊಟಬಯಗೆ ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಉಕ್ರೇನ್ ಉನ್ನತ ಅಧಿಕಾರಿಗಳನ್ನ ಅಮಾನತು ಮಾಡಿದ ಝೆಲೆನ್ಸ್ಕಿ
ಈ ಮಧ್ಯೆ ಶ್ರೀಲಂಕಾದಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಶಾಂತಿ-ಭದ್ರತೆಯ ಕಾರಣ ನೀಡಿ ವಿಕ್ರಮಸಿಂಘೆ ತುರ್ತು ಪರಿಸ್ಥಿತಿ ಹೇರಿದ್ದಾರೆ.
ನವದೆಹಲಿ: ಇಂದಿಗೆ 100 ದಿನಗಳನ್ನು ಪೂರೈಸಿರುವ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಮಂಗಳವಾರ (ಜುಲೈ 21ರಂದು) ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಕಳೆದ ಗುರುವಾರ ಸಂಸತ್ತಿನ ಸ್ಪೀಕರ್ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದರು.
ಇದಕ್ಕೂ ಮುನ್ನ ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: 18 ತಿಂಗಳಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ
ಆ ನಂತರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು. ಸದ್ಯ ಮುಂದಿನ ವಾರ ನಡೆಯುವ ಮತದಾನದಲ್ಲಿ ಅವರು ಶಾಶ್ವತವಾಗಿ ಉತ್ತರಾಧಿಕಾರಿಯಾಗುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Live Tv
[brid partner=56869869 player=32851 video=960834 autoplay=true]
ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ದೇಶ ತತ್ತರಿಸಿ ಹೋಗಿದೆ. ದೇಶದ ಜನರ ಬದುಕು ಬೀದಿಪಾಲಾಗಿದೆ. ಆಡಳಿತದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಮಿತ್ರ ರಾಷ್ಟ್ರಕ್ಕೆ ನೆರೆಯ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಶ್ರೀಲಂಕಾ ಅಷ್ಟೇ ಅಲ್ಲ ಇನ್ನೂ ಅನೇಕ ರಾಷ್ಟ್ರಗಳು ಇಂತಹ ಭೀಕರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ.
ಅಗತ್ಯ ವಸ್ತುಗಳ ಖರೀದಿ ಹಾಗೂ ವಹಿವಾಟಿಗೆ ಡಾಲರ್ ಕೊರತೆ, ಸಾಲ, ಹಣದುಬ್ಬರ, ಸೇರಿದಂತೆ ಹಲವಾರು ಸಮಸ್ಯೆಗಳಿಂದ 12 ಅಭಿವೃದ್ಧಿಶೀಲ ರಾಷ್ಟ್ರಗಳು ಆರ್ಥಿಕ ಬಿಕ್ಕಟ್ಟು ಎದುರಿಸಬೇಕಾದ ಪರಿಸ್ಥಿತಿಯಲ್ಲಿವೆ. ಆ ದೇಶಗಳಿಗೆ ಶ್ರೀಲಂಕಾದ ಪರಿಸ್ಥಿತಿಯೇ ಎದುರಾಗುವ ಸಾಧ್ಯತೆ ಇದೆ. ಆ ದೇಶಗಳು ಯಾವುವು? ಅಲ್ಲಿನ ಬಿಕ್ಕಟ್ಟುಗಳೇನು ಎಂಬ ಬಗ್ಗೆ ಇಲ್ಲಿದೆ ವಿವರ.
ಅರ್ಜೆಂಟೀನಾ
ಆರ್ಥಿಕ ಬಿಕ್ಕಟ್ಟು ಎದುರಿಸುವ ಸಾಧ್ಯತೆಯಿರುವ ದೇಶಗಳ ಪಟ್ಟಿಯಲ್ಲಿ ಅರ್ಜೆಂಟೀನಾ ಮೊದಲ ಸ್ಥಾನದಲ್ಲಿದೆ. ಪೆಸೊ (ಕರೆನ್ಸಿ) ಈಗ ಕಪ್ಪು ಮಾರುಕಟ್ಟೆಯಲ್ಲಿ ಸುಮಾರು ಶೇ.50 ರಿಯಾಯಿತಿಯಲ್ಲಿ ವಹಿವಾಟು ನಡೆಸುತ್ತಿದೆ. ಮೀಸಲುಗಳು ಕಡಿಮೆಯಾಗಿದೆ. ಡಾಲರ್ನಲ್ಲಿ ಕೇವಲ 20 ಸೆಂಟ್ಗಳಲ್ಲಿ ಬಾಂಡ್ ವ್ಯಾಪಾರ ನಡೆಯುತ್ತಿದೆ. 2024ರ ವರೆಗೆ ಸಾಲದ ಹೊರೆ ದೇಶವನ್ನು ಹೆಚ್ಚು ಬಾಧಿಸುವುದಿಲ್ಲ. ಆದರೆ ಆ ನಂತರ ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುವ ಸಾಧ್ಯತೆಯಿದೆ. ಮುಂದೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) ಸಿಗುವ ಸಾಲವೂ ನಿಲ್ಲಬಹುದು ಎಂದು ಅರ್ಜೆಂಟೀನಾ ಉಪಾಧ್ಯಕ್ಷೆ ಕ್ರಿಸ್ಟಿನಾ ಫೆರ್ನಾಂಡಿಸ್ ಡಿ ಕಿರ್ಚ್ನರ್ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಭಾರತ ಖರೀದಿಸುತ್ತಿರುವ S-400 ಕ್ಷಿಪಣಿಗೆ ಎದುರಾಗಿದ್ದ ಕಾಟ್ಸಾ ಭೀತಿ ದೂರ
ಉಕ್ರೇನ್
ರಷ್ಯಾದ ಆಕ್ರಮಣದಿಂದ ತತ್ತರಿಸಿ ಹೋಗಿರುವ ಉಕ್ರೇನ್ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಲಿದೆ. ರಷ್ಯಾ ಸೇನೆ ನಡೆಸುತ್ತಿರುವ ದಾಳಿಯನ್ನು ಹಿಮ್ಮೆಟ್ಟಿಸಲು ಉಕ್ರೇನ್ ಈಗಾಗಲೇ 20 ಬಿಲಿಯನ್ ಡಾಲರ್ನಷ್ಟು ಸಾಲ ಮಾಡಿದ್ದು, ಅದನ್ನು ತೀರಿಸುವುದು ದೇಶಕ್ಕೆ ತಲೆನೋವಾಗಿದೆ. ರಷ್ಯಾ ದಾಳಿಯಿಂದಾಗಿ ಉಕ್ರೇನ್ನಲ್ಲಿ ಅಪಾರ ನಷ್ಟ ಸಂಭವಿಸಿದೆ.
ಟುನೀಶಿಯಾ
ಐಎಂಎಫ್ನಿಂದ ನೆರವು ಪಡೆಯುತ್ತಿರುವ ದೇಶಗಳ ಸಮೂಹವನ್ನೇ ಆಫ್ರಿಕಾ ಹೊಂದಿದೆ. ಆದರೆ ಟುನೀಶಿಯಾ ಈ ಸಂಕಷ್ಟದ ಹಾದಿಯಲ್ಲಿದೆ. ಆರ್ಥಿಕ ಬಿಕ್ಕಟ್ಟು ನಿಭಾಯಿಸಲು ಅಂತರಾಷ್ಟ್ರೀಯ ಹಣಕಾಸು ನಿಧಿಯೊಂದಿಗಿನ ಒಪ್ಪಂದವು ಅನಿವಾರ್ಯವಾಗುತ್ತದೆ ಎಂದು ಟುನೀಶಿಯಾದ ಕೇಂದ್ರ ಬ್ಯಾಂಕ್ ಮುಖ್ಯಸ್ಥ ಮಾರೂವಾನ್ ಅಬಾಸ್ಸಿ ಅಭಿಪ್ರಾಯಪಟ್ಟಿದ್ದಾರೆ.
ಘಾನಾ
ಘಾನಾ ದೇಶ ಹೆಚ್ಚಿನ ಸಾಲ ಮಾಡಿರುವುದರಿಂದ ಸಾಲ-ಜಿಡಿಪಿ ಅನುಪಾತವು ಸುಮಾರು ಶೇ.85ಕ್ಕೆ ಏರಿದೆ. ದೇಶದ ಕರೆನ್ಸಿ ಸೆಡಿ ಈ ಹಣಕಾಸು ವರ್ಷದಲ್ಲಿ ಕಾಲು ಭಾಗದಷ್ಟು ಮೌಲ್ಯ ಕಳೆದುಕೊಂಡಿದೆ. ತೆರಿಗೆಯಿಂದ ಬರುವ ಹಣದಲ್ಲಿ ಅರ್ಧಕ್ಕಿಂತ ಹೆಚ್ಚಿನ ಪಾಲನ್ನು ಸಾಲದ ಬಡ್ಡಿ ಪಾವತಿಗೆ ವ್ಯಯಿಸಲಾಗುತ್ತಿದೆ. ಹಣದುಬ್ಬರವೂ ಶೇ.30ರ ಸಮೀಪಕ್ಕೆ ಬರುತ್ತಿದೆ. ಇದನ್ನೂ ಓದಿ: ಅನುಮತಿಯಿಲ್ಲದೇ ದೇಶ ಬಿಟ್ಟು ಹೋಗಬೇಡಿ: ರಾಜಪಕ್ಸೆ ಕುಟುಂಬಕ್ಕೆ ಸುಪ್ರೀಂ ಕೋರ್ಟ್ ಆದೇಶ
ಈಜಿಪ್ಟ್
ಈಜಿಪ್ಟ್ ಸುಮಾರು ಶೇ.95 ಸಾಲ-ಜಿಡಿಪಿ ಅನುಪಾತವನ್ನು ಹೊಂದಿದೆ. ಮುಂದಿನ ಐದು ವರ್ಷಗಳಲ್ಲಿ ಪಾವತಿಸಲು ಈಜಿಪ್ಟ್ 100 ಬಿಲಿಯನ್ ಕರೆನ್ಸಿ ಸಾಲವನ್ನು ಹೊಂದಿದೆ.
ಕೀನ್ಯಾ
ಕೀನ್ಯಾ ತನ್ನ ಆದಾಯದಲ್ಲಿ ಸುಮಾರು ಶೇ.30 ಪಾಲನ್ನು ಬಡ್ಡಿ ಪಾವತಿಗೆ ಖರ್ಚು ಮಾಡುತ್ತದೆ. ಅದರ ಬಾಂಡ್ಗಳು ಅವುಗಳ ಅರ್ಧದಷ್ಟು ಮೌಲ್ಯವನ್ನು ಕಳೆದುಕೊಂಡಿವೆ.
ಇಥಿಯೋಪಿಯಾ
ಈ ದೇಶದಲ್ಲಿ ನಡೆಯುತ್ತಿರುವ ಅಂತರ್ಯುದ್ಧವು ಪ್ರಗತಿಯನ್ನು ತಡೆಹಿಡಿದಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುವ ರಾಷ್ಟ್ರಗಳ ಸಾಲಿನಲ್ಲಿ ಇದು ಕೂಡ ಇದೆ.
ಎಲ್ ಸಾಲ್ವಡಾರ್
ಬಿಟ್ಕಾಯಿನ್ ಅನ್ನು ಕಾನೂನುಬದ್ಧ ಟೆಂಡರ್ ಮಾಡುವುದು IMF ಭರವಸೆಗಳಿಗೆ ಬಾಗಿಲು ಮುಚ್ಚಿದಂತಾಗಿದೆ. 800 ಮಿಲಿಯನ್ ಡಾಲರ್ ಬಾಂಡ್ಗಳು 30% ರಿಯಾಯಿತಿಯಲ್ಲಿ ಮತ್ತು ದೀರ್ಘಾವಧಿಯವು 70% ರಿಯಾಯಿತಿಯಲ್ಲಿ ವಹಿವಾಟು ನಡೆಸುವ ಹಂತಕ್ಕೆ ಟ್ರಸ್ಟ್ ಕುಸಿದಿದೆ.
ಪಾಕಿಸ್ತಾನ
ಪಾಕಿಸ್ತಾನವು ಈ ವಾರ ನಿರ್ಣಾಯಕ IMF ಒಪ್ಪಂದವನ್ನು ಮಾಡಿದೆ. ಅಗತ್ಯ ವಸ್ತು, ಸಂಪನ್ಮೂಲ ಆಮದಿಗೆ ಹೆಚ್ಚಿನ ವಿನಿಯೋಗ ಮಾಡುತ್ತಿರುವುದು ದೇಶವನ್ನು ಬಿಕ್ಕಟ್ಟಿಗೆ ತಳ್ಳಲಿದೆ. ವಿದೇಶಿ ಕರೆನ್ಸಿ ಮೀಸಲು 9.8 ಶತಕೋಟಿಯಷ್ಟು ಕಡಿಮೆಯಾಗಿದೆ. ಇದು ಐದು ವಾರಗಳ ಆಮದುಗಳಿಗೆ ಸಾಕಾಗುವುದಿಲ್ಲ. ಪಾಕಿಸ್ತಾನದ ರೂಪಾಯಿ ದಾಖಲೆಯ ಮಟ್ಟಕ್ಕೆ ಕುಸಿದಿದೆ. ಹೊಸ ಸರ್ಕಾರವು ತನ್ನ ಆದಾಯದ 40% ಅನ್ನು ಬಡ್ಡಿ ಪಾವತಿಗೆ ಖರ್ಚು ಮಾಡುತ್ತಿದೆ.
ಬೆಲಾರಸ್
ಪಾಶ್ಚಿಮಾತ್ಯ ನಿರ್ಬಂಧಗಳು ಕಳೆದ ತಿಂಗಳು ರಷ್ಯಾವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಉಕ್ರೇನ್ ಮೇಲಿನ ಯುದ್ಧದ ವಿಚಾರವಾಗಿ ರಷ್ಯಾ ಬೆಂಬಲಕ್ಕೆ ನಿಂತಿರುವ ಬೆಲಾರಸ್ ಕೂಡ ಈಗ ನಿರ್ಬಂಧಗಳೊಂದಿಗೆ ಆರ್ಥಿಕ ಬಿಕ್ಕಟ್ಟಿಗೆ ದೂಡಲ್ಪಟ್ಟಿದೆ. ಇದನ್ನೂ ಓದಿ: ಖಶೋಗಿ ಹತ್ಯೆಗೆ ಸೌದಿ ಕ್ರೌನ್ ಪ್ರಿನ್ಸ್ ಹೊಣೆಗಾರಿಕೆ: ಬೈಡನ್
ಈಕ್ವೆಡಾರ್
ಲ್ಯಾಟಿನ್ ಅಮೆರಿಕನ್ ದೇಶವು ಕಳೆದ ಎರಡು ವರ್ಷಗಳಿಂದ ಆರ್ಥಿಕ ಕುಸಿತ ಸಮಸ್ಯೆ ಎದುರಿಸುತ್ತಿದೆ. ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಅವರನ್ನು ಪದಚ್ಯುತಗೊಳಿಸುವ ಪ್ರಯತ್ನಗಳು ನಡೆಯುತ್ತಿದ್ದು, ಮತ್ತಷ್ಟು ಸಂಕಷ್ಟ ಎದುರಾಗಿದೆ.
ನೈಜೀರಿಯಾ
ಬಾಂಡ್ ಸ್ಪ್ರೆಡ್ಗಳು ಕೇವಲ 1,000 bps ಗಿಂತ ಹೆಚ್ಚಿವೆ. ನೈಜೀರಿಯಾ ತನ್ನ ಸಾಲದ ಮೇಲೆ ಬಡ್ಡಿಯನ್ನು ಪಾವತಿಸಲು ಸುಮಾರು 30% ಸರ್ಕಾರದ ಆದಾಯವನ್ನು ಖರ್ಚು ಮಾಡುತ್ತದೆ.
Live Tv
[brid partner=56869869 player=32851 video=960834 autoplay=true]
ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಜನಸಾಮಾನ್ಯರು ಮಾತ್ರವಲ್ಲದೇ ಕ್ರಿಕೆಟಿಗರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಪೆಟ್ರೋಲ್ಗಾಗಿ ಕಳೆದ ಎರಡು ದಿನಗಳಿಂದಲೂ ದೊಡ್ಡ ಸಾಲಿನಲ್ಲಿ ನಿಂತಿದ್ದ 2019ರಲ್ಲಿ ಲಂಕಾ ತಂಡಕ್ಕೆ ಪದಾರ್ಪಣೆ ಮಾಡಿದ ಕ್ರಿಕೆಟಿಗ ಚಮಿಕಾ ಕರುಣಾರತ್ನೆ ತಮ್ಮ ಬೇಸರವನ್ನು ಮಾಧ್ಯಮಗಳ ಮುಂದೆ ಹೊರಹಾಕಿದ್ದಾರೆ.
#WATCH | Sri Lankan cricketer Chamika Karunaratne speaks to ANI; says, "We've to go for practices in Colombo&to different other places as club cricket season is on but I've been standing in queue for fuel for past 2 days. I got it filled for Rs 10,000 which will last 2-3 days…" pic.twitter.com/MkLyPQSNbZ
ಸದ್ಯದಲ್ಲೇ ಶ್ರೀಲಂಕಾ `ಏಷ್ಯಾಕಪ್-2022′ ಅಂತಾರಾಷ್ಟ್ರೀಯ ಟೂರ್ನಿ ಆಯೋಜಿಸುತ್ತಿದೆ. ಆದರೆ ಇಡೀ ದೇಶ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ತೈಲದ ಕೊರತೆ ಕ್ರಿಕೆಟಿಗರ ಮೇಲೂ ಗಾಢವಾದ ಪರಿಣಾಮ ಬೀರಿದೆ. ಏಷ್ಯಾಕಪ್ನೊಂದಿಗೆ ಲಂಕಾ ಪ್ರೀಮಿಯರ್ ಲೀಗ್(ಎಲ್ಪಿಎಲ್) ಸಹ ಹತ್ತಿರವಾಗುತ್ತಿದೆ. ಇದಕ್ಕಾಗಿ ವಿವಿಧ ಸ್ಥಳಗಳಲ್ಲಿ ಅಭ್ಯಾಸ ಮಾಡಬೇಕಿದೆ. ಕ್ರಿಕೆಟ್ ಕ್ಲಬ್ನಲ್ಲಿ ನಡೆಯುವ ಸೀಸನ್ಗಳಲ್ಲಿಯೂ ಆಡಬೇಕಿದೆ. ಪೆಟ್ರೋಲ್ ಲಭ್ಯವಿಲ್ಲದ ಕಾರಣ ಎಲ್ಲಿಗೂ ಹೋಗಿ ಅಭ್ಯಾಸ ಮಾಡಲು ಆಗುತ್ತಿಲ್ಲ. ಮುಂದೆ ಏನಾಗಲಿದೆ ಎಂಬುದು ನನಗೆ ಗೊತ್ತಿಲ್ಲ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ನಾನು ಎಲ್ಲಿಗೂ ತೆರಳಿಲ್ಲ. ಏಕೆಂದರೆ ಪೆಟ್ರೋಲ್ಗಾಗಿ ದೊಡ್ಡ ಸಾಲಿನಲ್ಲಿ ನಿಂತಿದ್ದೆ. ಅದೃಷ್ಟವಶಾತ್ ಇಂದು ನನಗೆ ಪೆಟ್ರೋಲ್ ಸಿಕ್ಕಿದೆ. 10 ಸಾವಿರ ರೂ. ಗಳಿಗೆ ಪೆಟ್ರೋಲ್ ತೆಗೆದುಕೊಂಡೆ. ಇದರಲ್ಲಿ ಎರಡು ಮೂರು ದಿನಗಳು ಮಾತ್ರ ನಾನು ಓಡಾಡಬಹುದು ಅಷ್ಟೇ ಎಂದು ಲಂಕಾ ಯುವ ಕ್ರಿಕೆಟಿಗ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮಾ ನಟನೆಯತ್ತ ಮತ್ತೆ ಮರಳಿದ ಮೇಘನಾ ರಾಜ್ : ಮೇಘನಾಗಾಗಿ ಪನ್ನಗಾಭರಣ ನಿರ್ಮಾಣ
ಏಷ್ಯಾ ಕಪ್ ಟೂರ್ನಿಗೆ ನಾವು ಸಿದ್ಧರಾಗಿದ್ದೇವೆ ಹಾಗೂ ಇದು ದೊಡ್ಡ ಟೂರ್ನಿಯಾಗಿದ್ದು, ಇದಕ್ಕೆ ಬೇಕಾಗುವ ಪೆಟ್ರೋಲ್ ಅನ್ನು ದೇಶ ನೀಡಲಿದೆ ಎಂದು ಭಾವಿಸುತ್ತೇನೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಸರಣಿಗಳನ್ನು ಮುಗಿಸಿದ್ದೇವೆ, ಇದು ಅತ್ಯುತ್ತಮವಾಗಿತ್ತು. ಇದೀಗ ಏಷ್ಯಾ ಕಪ್ ಟೂರ್ನಿಗೆ ತಯಾರಿ ನಡೆಸುತ್ತಿದ್ದೇವೆ, ಎಂದು ಚಮಿಕಾ ಕರುಣಾರತ್ನೆ ಹೇಳಿದ್ದಾರೆ.
ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜಪಕ್ಸೆ ಆಡಳಿತದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಅಂತೆಯೇ ಅವರ ಸಹೋದರರೂ ಪಲಾಯನಕ್ಕೆ ಮುಂದಾಗಿದ್ದಾರೆ. ಆದರೆ ಅದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಸಚಿವ ಬಸಿಲ್ ರಾಜಪಕ್ಸೆ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಜುಲೈ 28 ರವರೆಗೆ ದೇಶವನ್ನು ತೊರೆಯದಂತೆ ಶ್ರೀಲಂಕಾದ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಹೊರಡಿಸಿದೆ.
ದ್ವೀಪ ರಾಷ್ಟ್ರದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ರಾಜಪಕ್ಸೆ ಕುಟುಂಬ ಆಡಳಿತದಿಂದ ದೇಶ ದುಸ್ಥಿತಿಗೆ ತಲುಪಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಸಾವಿರಾರು ಮಂದಿ ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಇದರಿಂದ ಭಯಭೀತರಾದ ಗೊಟಬಯ ರಾಜಪಕ್ಸೆ ವಿದೇಶಕ್ಕೆ ಪಲಾಯನಗೈದರು. ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದನ್ನೂ ಓದಿ: ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ
ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿರುವ ರನಿಲ್ ವಿಕ್ರಮಸಿಂಘೆ ಅವರು ಪ್ರತಿಭಟನೆ ತಿಳಿಗೊಳಿಸಲು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಪ್ರತಿಭಟನೆ ನಡೆದ ಹಿನ್ನೆಲೆ ಗೊಟಬಯ ರಾಜಪಕ್ಸೆ ಗುರುವಾರ ಕೊನೆಗೂ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ರಾಜಪಕ್ಸೆ ಲಂಕಾ ತೊರೆದು ಪಲಾಯನಗೈದಿದ್ದರು. ಈ ಹಿನ್ನೆಲೆ ತಮ್ಮ ರಾಜೀನಾಮೆ ಪತ್ರವನ್ನು ಸಂಸತ್ತಿನ ಸ್ಪೀಕರ್ಗೆ ಇ-ಮೇಲ್ ಮೂಲಕ ಕಳುಹಿಸಿದ್ದರು. ಇದನ್ನೂ ಓದಿ: ಶೀಘ್ರವೇ ಗುಣಮುಖರಾಗಿ – ಸ್ಟಾಲಿನ್ಗೆ ಶುಭಹಾರೈಸಿದ ಬೊಮ್ಮಾಯಿ
ಗೊಟಬಯ ರಾಜಪಕ್ಸೆ ಗುರುವಾರ ರಾಜೀನಾಮೆ ನೀಡಿದ ಬಳಿಕ ಶ್ರೀಲಂಕಾದ ಸರ್ಕಾರಿ ಕಟ್ಟಡಗಳಿಂದ ಪ್ರತಿಭಟನಾಕಾರರು ಹಿಮ್ಮೆಟ್ಟಿದ್ದಾರೆ. ಲಂಕಾ ರಾಜಧಾನಿಯಾದ್ಯಂತ ಪರಿಸ್ಥಿತಿ ಶಾಂತರೀತಿಗೆ ಮರಳುತ್ತಿದೆ.
Live Tv
[brid partner=56869869 player=32851 video=960834 autoplay=true]
ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಶನಿವಾರ ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 1,068, ರಾಜ್ಯದಲ್ಲಿ 1,209 ಮಂದಿಗೆ ಕೊರೊನಾ – 1 ಸಾವು
ಈ ಹಿನ್ನೆಲೆ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್ಗೆ ತೆರಳಿದ್ದರು. ಬಳಿಕ ಸಿಂಗಾಪುರಕ್ಕೆ ತೆರಳಿರುವ ರಾಜಪಕ್ಸೆ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ.
Live Tv
[brid partner=56869869 player=32851 video=960834 autoplay=true]
ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ಕಂಗಲಾಗಿರುವ ಸಾವಿರಾರು ಮಂದಿ ಧಂಗೆ ಎದ್ದಿದ್ದು, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅಧಿಕೃತ ನಿವಾಸವನ್ನು ಆಕ್ರಮಿಸಿಕೊಂಡಿದ್ದರು. ಈ ಬಳಿಕ ಗೊಟಬಯ ರಾಜಪಕ್ಸೆ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ತಿಳಿಸಿದ್ದರು. ಆದರೆ ರಾಜೀನಾಮೆ ನೀಡುವುದಕ್ಕೂ ಮುನ್ನವೇ ರಾಜಪಕ್ಸೆ ಅವರು ಮಾಲ್ಡೀವ್ಸ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ನ ರಾಜಧಾನಿ ಮಾಲೆಗೆ ತೆರಳಿದ್ದಾರೆ.
ಇದರಿಂದ ರೊಚ್ಚಿಗೆದ್ದಿರುವ ಜನರು ಗೊಟಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಏಕಾಏಕಿ ಸಾವಿರಾರು ಮಂದಿ ಲಂಕಾ ಸಂಸತ್ತಿನ ಗೇಟ್ಗಳನ್ನು ತಳ್ಳಿ ಸಾವಿರಾರು ಜನರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಧಾಂದಲೇ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ
ಪ್ರತಿಭಟನಾಕಾರರು ಹೆಚ್ಚಾಗುತ್ತಿದ್ದು, ಅವರನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಕಚೇರಿ ಮೇಲೆ ದಾಳಿ ನಡೆಸುತ್ತಿರುವ ಹಲವಾರು ಗಲಭೆಕೋರರನ್ನು ಬಂಧಿಸುವಂತೆ ಪ್ರಧಾನಿ ಭದ್ರತಾ ಪಡೆಗಳಿಗೆ ಆದೇಶಿಸಿದ್ದಾರೆ.
ಈ ಮುನ್ನ ಜುಲೈ 7 ರಂದು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿತ್ತು. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು. ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ರಾಜೀನಾಮೆಗೂ ಮುನ್ನವೇ ಮಾಲ್ಡೀವ್ಸ್ಗೆ ಹಾರಿದ ಗೊಟಬಯ ರಾಜಪಕ್ಸೆ
ಇದಕ್ಕೂ ಮುನ್ನ ಕೂಡ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಈ ವೇಳೆ ಕೂಡ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಇದೀಗ ಮತ್ತೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಕೊಲಂಬೋ: ಶ್ರೀಲಂಕಾದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಜನರು ಒಂದು ತಿಂಗಳಿನಿಂದ ವ್ಯಾಪಕವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡುವ ಮುನ್ನವೇ ದೇಶದಿಂದ ಮಾಲ್ಡೀವ್ಸ್ಗೆ ಹಾರಿದ್ದಾರೆ.
ಶನಿವಾರ ರಾಜಪಕ್ಸೆಯವರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ನುಗ್ಗಿ ದಾಂಧಲೆ ನಡೆಸಿದ್ದರು. ದೇಶದ ಆರ್ಥಿಕತೆ ಉಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆ ರಾಜಪಕ್ಸೆ ತಮ್ಮ ನಿವಾಸ ತೊರೆದು ಬುಧವಾರ ರಾಜೀನಾಮೆ ನೀಡುವುದಾಗಿ ಶನಿವಾರ ಭರವಸೆ ನೀಡಿದ್ದರು. ಇದನ್ನೂ ಓದಿ: ರಾಜಪಕ್ಸೆ U-turn? ಕುಟುಂಬ ಸುರಕ್ಷಿತ ಸ್ಥಳ ತಲುಪುವವರೆಗೆ ರಾಜೀನಾಮೆ ನೀಡಲ್ಲ
Sri Lankan President Gotabaya Rajapaksa flies out of the country, reports AFP News Agency quoting officials
ಆದರೀಗ ಬಂಧನದ ಭೀತಿಯಿಂದ ರಾಜೀನಾಮೆ ನೀಡುವುದಕ್ಕೂ ಮುನ್ನವೇ ರಾಜಪಕ್ಸೆ ಗೊಟಬಯ ಅವರು ಮಾಲ್ಡೀವ್ಸ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎಂದು ಏಜೆನ್ಸಿಗಳು ವರದಿ ಮಾಡಿವೆ. ಇದನ್ನೂ ಓದಿ: ಶಾರ್ಟ್ಕಟ್ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ
ಈ ಕುರಿತಂತೆ ಪ್ರತಿಕ್ರಿಯಿಸಿರುವ ವಲಸೆ ಅಧಿಕಾರಿಯೊಬ್ಬರು, ಅವರ ಪಾಸ್ಪೋರ್ಟ್ಗಳನ್ನು ಸ್ಟ್ಯಾಂಪ್ ಮಾಡಲಾಗಿದ್ದು, ವಿಶೇಷ ವಾಯುಪಡೆಯ ವಿಮಾನ ಮೂಲಕ ತೆರಳಿದರು. ವಿಮಾನಕ್ಕಾಗಿ 24 ಗಂಟೆ ಕಾದು ರಾಜಪಕ್ಸೆ ಗೊಟಬಯ ಅವರು ವಾಣಿಜ್ಯ ವಿಮಾನದಲ್ಲಿ ದುಬೈಗೆ ಹೋಗಬೇಕೆಂದುಕೊಂಡರು. ಆದರೆ ವಿಮಾನ ನಿಲ್ದಾಣ ಸಿಬ್ಬಂದಿ ಗೊಟಬಯ ರಾಜಪಕ್ಸೆ ಅವರಿಗೆ ವಿಐಪಿ ಸೇವೆಗಳನ್ನು ನೀಡಲು ನಿರಾಕರಿಸಿದರು ಮತ್ತು ಎಲ್ಲಾ ಪ್ರಯಾಣಿಕರಂತೆ ಸಾರ್ವಜನಿಕ ಕೌಂಟರ್ ಮೂಲಕ ಹೋಗಬೇಕೆಂದು ಒತ್ತಾಯಿಸಿದರು ಎಂದು ಹೇಳಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಕೊಲಂಬೋ: ಶ್ರೀಲಂಕಾದಲ್ಲಿ ನಡೆಯುತ್ತಿರುವ ಅನಿರೀಕ್ಷಿತ ತಿರುವುಗಳ ನಡುವೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ತಮ್ಮ ಕುಟುಂಬ ದೇಶದಿಂದ ಸುರಕ್ಷಿತವಾಗಿ ನಿರ್ಗಮಿಸುವವರೆಗೂ ರಾಜೀನಾಮೆ ನೀಡುವುದಿಲ್ಲ ಎಂದು ಸುಳಿವು ನೀಡಿರುವುದಾಗಿ ವರದಿಯಾಗಿದೆ.
3 ದಿನಗಳ ಹಿಂದೆ ರಾಜಪಕ್ಸೆ ಅವರು ಸ್ಪೀಕರ್ ಜೊತೆ ಮಾತನಾಡಿ ಬುಧವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಆದರೆ ಅದರ ಬಳಿಕ ಅವರು ರಾಜೀನಾಮೆ ನೀಡುವ ಬಗ್ಗೆ ಯಾವುದೇ ಸುಳಿವನ್ನು ನೀಡಿಲ್ಲ.
ರಾಜಪಕ್ಸೆ ತಮ್ಮ ರಾಜೀನಾಮೆಯನ್ನು ನೀಡುವುದಕ್ಕೂ ಮೊದಲು ದೇಶವನ್ನು ತೊರೆಯಲು ಹಾಗೂ ತಮ್ಮ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಬಯಸುತ್ತಾರೆ ಎಂದು ವರದಿಯಾಗಿದೆ. ಆದರೆ ಅವರ ಸಹೋದರ ಬೆಸಿಲ್ ರಾಜಪಕ್ಸೆ ಅವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಇಲಾಖೆ ಹಾಗೂ ನಿಲ್ದಾಣದ ಸಿಬ್ಬಂದಿ ತಡೆದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್ಗಳ ಭರ್ಜರಿ ಜಯ
ಗೊಟಬಯ ರಾಜಪಕ್ಸೆ ಬುಧವಾರ ರಾಜೀನಾಮೆ ನೀಡದೇ ಹೋದಲ್ಲಿ ರಾಜಧಾನಿ ಕೊಲಂಬೋದಲ್ಲಿ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಶನಿವಾರ ರಾಜಪಕ್ಸೆಯವರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ನುಗ್ಗಿ ದಾಂಧಲೆ ನಡೆಸಿದ್ದರು. ದೇಶದ ಆರ್ಥಿಕತೆ ಉಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆ ರಾಜಪಕ್ಸೆ ತಮ್ಮ ನಿವಾಸ ತೊರೆದು ಪಲಾಯನಗೈದಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದು 891 ಕೊರೊನಾ ಕೇಸ್ – ಉತ್ತರ ಕನ್ನಡದಲ್ಲಿ 1 ಮರಣ ಪ್ರಕರಣ ದಾಖಲು
Live Tv
[brid partner=56869869 player=32851 video=960834 autoplay=true]